Updated News From Kaup

ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ 7 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯ : ಕೇಂದ್ರ ಸರಕಾರದ ಆದೇಶ, ಜನವರಿ 11ರಿಂದ ಅನ್ವಯ

Thumbnail
Posted On: 07 Jan 2022, 06:55 PM

ಬೆಂಗಳೂರು : ದೇಶದಲ್ಲಿ ಕೊರೋನಾ ಜೊತೆಗೆ ಒಮಿಕ್ರಾನ್ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಕೇಂದ್ರ ಸರ್ಕಾರ ಅನೇಕ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಕೇಂದ್ರ ಸರಕಾರ ವಿದೇಶದಿಂದ ಭಾರತಕ್ಕೆ ಆಗಮಿಸುವಎಲ್ಲಾ ವಿದೇಶಿ ಪ್ರಯಾಣಿಕರಿಗೆ 7 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿದೆ. ಈ ಕುರಿತುಪರಿಷ್ಕೃತ ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಸರ್ಕಾರ, ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರು ಆರ್ ಟಿ ಪಿಸಿಆರ್ ಪರೀಕ್ಷೆಗೆ ಒಳಪಟ್ಟು, ನೆಗೆಟಿವ್ ದೃಢಪಟ್ಟರೂ 7 ದಿನಗಳ ಕಡ್ಡಾಯ ಹೋಂ ಕ್ವಾರಂಟೈನ್ ಆಗುವಂತೆ ಆದೇಶಿಸಿದೆ. 7 ದಿನಗಳ ಹೋಂ ಕ್ವಾರಂಟೈನ್ ಮುಕ್ತಾಯಗೊಂಡ ಬಳಿಕ ಮತ್ತೆ ಆರ್ ಟಿ ಪಿಸಿಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಗೆ ಒಳಪಟ್ಟು, ಸಿಕ್ಕ ವರದಿಯನ್ನುಕಡ್ಡಾಯವಾಗಿ ಸುವಿಧ ಪೋರ್ಟಲ್ ನಲ್ಲಿ ಅಪ್ ಲೋಡ್ ಮಾಡುವಂತೆ ತಿಳಿಸಿದೆ. ಅದನ್ನು ಆಯಾ ರಾಜ್ಯ ಸರ್ಕಾರಗಳು ಮೇಲ್ವಿಚಾರಣೆ ಮಾಡುತ್ತವೆ. ಒಂದು ವೇಳೆ ಪಾಸಿಟಿವ್‌ ಬಂದರೆ ಅವರ ಮಾದರಿಗಳನ್ನು ಇಂಡಿಯನ್‌ ಸಾರ್ಸ್‌-ಕೋವಿ-2 ಜಿನೊಮಿಕ್ಸ್‌ ಕನ್ಸಾರಿಟಿಂ(INSACOG) ಪ್ರಯೋಗಾಲಯದ ಜೀನೋಮಿಕ್ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಬಳಿಕ ಪ್ರೋಟೋಕಾಲ್ ಪ್ರಕಾರ ಚಿಕಿತ್ಸೆ ನೀಡಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಹೊಸ ನಿಯಮಗಳ ಪ್ರಕಾರ, ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುನ್ನ ಆನ್‌ಲೈನ್‌ನಲ್ಲಿ ಏರ್ ಸುವಿಧಾ ಪೋರ್ಟಲ್‌ನಲ್ಲಿ ಸ್ವಯಂಘೋಷಣೆ ನಮೂನೆ ಮತ್ತು ನೆಗೆಟಿವ್‌ ಆರ್‌ಟಿ-ಪಿಸಿಆರ್‌ ವರದಿಯನ್ನು ಸಲ್ಲಿಸಬೇಕು. ವಿಮಾನ ನಿಲ್ದಾಣದಲ್ಲಿಆರೋಗ್ಯ ಅಧಿಕಾರಿಗಳು ಎಲ್ಲಾ ಪ್ರಯಾಣಿಕರಿಗೆ ಸಂಬಂಧಿಸಿದಂತೆ ಥರ್ಮಲ್ ಸ್ಕ್ರೀನಿಂಗ್ ನಡೆಸುತ್ತಾರೆ. ಈ ವೇಳೆ ರೋಗಲಕ್ಷಣ ಕಂಡುಬರುವ ತಕ್ಷಣವೇ ಪ್ರತ್ಯೇಕಿಸಿ ವೈದ್ಯಕೀಯ ಸೌಲಭ್ಯಕ್ಕೆ ಕರೆದೊಯ್ಯಲಾಗುತ್ತದೆ.ಈ ವೇಳೆ ಪಾಸಿಟಿವ್‌ ಬಂದರೆ ಅಂತಹವರ ಸಂಪರ್ಕಕ್ಕೆ ಬಂದಿದ್ದವರನ್ನು ಗುರುತಿಸಲಾಗುತ್ತದೆ. ಈ ನಿಯಮ 2022ರ ಜವನರಿ 11 ರಿಂದ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಅನ್ವಯವಾಗಲಿದೆ.

ನೊಂದ ಮಹಿಳೆಯರು ಉಚಿತ ಸಹಾಯವಾಣಿ ಸಂಖ್ಯೆ 181 ಸಂಪರ್ಕಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Thumbnail
Posted On: 07 Jan 2022, 06:37 PM

ಉಡುಪಿ : ವಿವಿಧ ಕಾರಣಗಳಿಂದ ನೊಂದ ಮಹಿಳೆಯರು ತಮ್ಮ ಸಮಸ್ಯೆಗಳ ಬಗ್ಗೆ 24x7 ಕಾರ್ಯನಿರ್ವಹಿಸುವ ಉಚಿತ ದೂರವಾಣಿ ಸಂಖ್ಯೆ 181 ನ್ನು ಸಂಪರ್ಕಿಸಿ ತಮ್ಮ ದೂರುಗಳು ಸಲ್ಲಿಸಿ, ಅಗತ್ಯ ನೆರವು ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನೊಂದ ಮಹಿಳೆಯರ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸಖಿ ಒನ್ ಸ್ಟಾಪ್ ಸೆಂಟರ್ ಮತ್ತು ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರು ತುರ್ತು ಸಂದರ್ಭಗಳಲ್ಲಿ 181 ಉಚಿತ ಸಹಾಯವಾಣಿಯನ್ನು ಸಂಪರ್ಕಿಸಬಹುದಾಗಿದೆ ಎಂದರು. ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿ ರಚಿಸುವುದು ಕಡ್ಡಾಯವಾಗಿದ್ದು, ಇದುವರೆಗೆ ಸಮಿತಿ ರಚಿಸದ ಇಲಾಖೆಗಳು ಮತ್ತು ಸಂಸ್ಥೆಗಳ ವರದಿ ಪಡೆದು, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಕೈಗಾರಿಕಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಸಮಿತಿ ರಚಿಸಿರುವ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ನಿಗಧಿತವಾಗಿ ಸಮಸ್ಯೆಗಳನ್ನು ಆಲಿಸಿರುವ ಕುರಿತ ವರದಿ ಪಡೆಯುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅವರನ್ನು ಪುನಃ ಶಾಲೆಗೆ ಸೇರಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಶಾಲೆ ಬಿಟ್ಟ ಮಕ್ಕಳು ಬಾಲ ಕಾರ್ಮಿಕರು ಮತ್ತು ಬಾಲ್ಯ ವಿವಾಹಗಳಿಗೆ ಒಳಪಡುವ ಸಾಧ್ಯತೆಗಳಿದ್ದು, ಇಂತಹ ಮಕ್ಕಳ ಕುರಿತು ಸ್ಥಳೀಯವಾಗಿ ಅಂಗನವಾಡಿ ಮೇಲ್ವಿಚಾರಕರು ಮತ್ತು ಶಿಕ್ಷಣ ಇಲಾಖೆಯ ಸಿ.ಆರ್.ಪಿ ಗಳು ತಮ್ಮ ವ್ಯಾಪ್ತಿಯಲ್ಲಿ ನಿರಂತರವಾಗಿ ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಸಂಖ್ಯೆಯ ಜಾಗೃತಿ ಕಾರ್ಯಕ್ರಮಗಳನ್ನು ಎಲ್ಲಾ ಶಾಲೆಗಳಲ್ಲಿ ಆಯೋಜಿಸಿ ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಕಾಣೆಯಾದ ಮಹಿಳೆ ಮತ್ತು ಮಕ್ಕಳ ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ವರದಿ ಪಡೆಯುವಂತೆ ಹಾಗೂ ಮಹಿಳೆ ಮತ್ತು ಮಕ್ಕಳ ಹಕ್ಕುಗಳು ಮತ್ತು ಸುರಕ್ಷತೆಯ ಬಗ್ಗೆ ಇರುವ ಕಾನೂನುಗಳು ಮತ್ತು ಅವರ ಹಕ್ಕುಗಳ ಕುರಿತಂತೆ ಜಿಲ್ಲೆಯಾದ್ಯಂತ ವಲಸೆ ಕಾರ್ಮಿಕರು ವಾಸಿಸುವ ಪ್ರದೇಶಗಳು, ಪ್ರವಾಸಿ ತಾಣಗಳು ಮತ್ತಿತರ ಕಡೆ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮಹಿಳಾ ಮತ್ತು ಮಕ್ಕಳ ಆಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳನ್ನು ಶೀಘ್ರದಲ್ಲಿ ದಾಖಲಿಸಿ, ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು. ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತಂತೆ ಜಿಲ್ಲೆಯ ಎಲ್ಲಾ ಕಾಲೇಜುಗಳಲ್ಲಿ ಪೊಲೀಸ್ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವ್ಯಾಪಕ ಅರಿವು ಕಾರ್ಯಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯಲ್ಲಿನ ಯುವಜನತೆ ಈ ಪಿಡುಗಿಗೆ ಒಳಗಾಗದಂತೆ ಎಚ್ಚವಹಿಸುವಂತೆ ತಿಳಿಸಿದರು. ಜಿಲ್ಲೆಯಲ್ಲಿನ ರಾಜ್ಯ ಮಹಿಳಾ ಕೇಂದ್ರದಲ್ಲಿನ ಮಹಿಳೆಯರಿಗೆ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಿ, ನಿಲಯದಲ್ಲಿ ಅವರಿಗೆ ಉದ್ಯೋಗ ನೀಡಿ ಅವರು ಆರ್ಥಿಕವಾಗಿ ಗಳಿಸುವಂತೆ ಹಾಗೂ ಇಲ್ಲಿಂದ ಹೊರ ಹೋದ ನಂತರ ಸ್ವತಂತ್ರವಾಗಿ ಉದ್ಯೋಗ ಚಟುವಟಿಕೆ ಕೈಗೊಳ್ಳುವಂತೆ ತರಬೇತಿ ನೀಡಿ, ನಿಲಯದಲ್ಲಿ ಮಹಿಳೆಯರ ತುರ್ತು ಚಿಕಿತ್ಸೆಗೆ ಅಗತ್ಯವಿರುವ ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳುವಂತೆ ಸೂಚಿಸಿದರು. ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶೇಷಪ್ಪ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಡಿಹೆಚ್ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪಿಯ ಬಂಧನ

Thumbnail
Posted On: 07 Jan 2022, 05:08 PM

ಮಂಗಳೂರು : ಯುವಕನೋರ್ವ ನೆರೆಮನೆಯ 4ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉರ್ವ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜನವರಿ 5ರಂದು ನಿತೇಶ್ ರಿತಿನ್ @ ನಿತಿನ್ (19) ಎಂಬಾತ ಮನೆಗೆ ನೆರೆಮನೆಯ ನಗರದ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿಯು ಟಿವಿ ನೋಡಲು ಹೋದಾಗ ಲೈಂಗಿಕ ಕಿರುಕುಳ ನೀಡಿದ್ದು, ಹೆದರಿದ ಮಗು ಅಲ್ಲಿಂದ ಓಡಿ ತನ್ನ ಮನೆಯೊಳಗಡೆಗೆ ಹೋಗಿದ್ದು, ಬಳಿಕ ಆರೋಪಿತನು ಬಾಲಕಿಯ ಮನೆಯೊಳಗೆ ಅಕ್ರಮ ಪ್ರವೇಶಿಸಿ ಮಗುವಿಗೆ ನಡೆದ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಸಾಯಿಸುತ್ತೆನೆ ಎಂಬುದಾಗಿ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನನ್ವಯ ಉರ್ವ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿತನನ್ನು ದಸ್ತಗಿರಿ ಮಾಡಲಾಗಿದೆ.

ಕಳತ್ತೂರು ಪುಂಚಲಕಾಡು ಆಟೋ ರಿಕ್ಷಾ ನಿಲ್ದಾಣಕ್ಕೆ ನಾಮಫಲಕ ಅಳವಡಿಕೆ

Thumbnail
Posted On: 04 Jan 2022, 02:02 PM

ಕಾಪು: ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಂಚಲಕಾಡು ಇಲ್ಲಿಯ ರಿಕ್ಷಾ ನಿಲ್ದಾಣಕ್ಕೆ ಹೊಸ ನಾಮ ಫಲಕ ಅಳವಡಿಸಲಾಯಿತು. ಈ ಸಂದರ್ಭ ರಿಕ್ಷಾ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ 4 ದಿನದಲ್ಲಿ 60,000 ಮಕ್ಕಳಿಗೆ ಕೋವಿಡ್ ಲಸಿಕೆ : ಶಾಸಕ ರಘುಪತಿ ಭಟ್

Thumbnail
Posted On: 03 Jan 2022, 06:16 PM

ಉಡುಪಿ : ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಸುಮಾರು 60,000 ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು 4 ದಿನಗಳಲ್ಲಿ ಸಂಪೂರ್ಣವಾಗಿ ನೀಡುವ ಗುರಿ ಹೊಂದಲಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು ನಗರದ ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ, 15 ರಿಂದ 18 ವರ್ಷಗೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ವರಿಗೆ ಮೊದಲನೇ ಡೋಸ್ ಕೋವಿಡ್ ಲಸಿಕೆಯನ್ನು 96.3% ಹಾಗೂ ಎರಡು ಡೋಸ್ಗಳನ್ನು 84.3% ನೀಡಿದ್ದು, 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ನಿಂದ ರಕ್ಷಣೆ ನೀಡಲು ಲಸಿಕೆ ನೀಡುವ ಕಾರ್ಯವನ್ನು ಪ್ರಸ್ತುತ ಆರಂಭಿಸಿದ್ದು, ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದ್ದು, ಇದು ಅತ್ಯಂತ ಸುರಕ್ಷಿತವಾಗಿದೆ. ಅರ್ಹ ಎಲ್ಲಾ ಮಕ್ಕಳು ಕೋವಿಡ್ ಲಸಿಕೆ ಪಡೆಯುವ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು. ಪೋಷಕರು ಸಹ ಈ ಕಾರ್ಯಕ್ರಮಕ್ಕೆ ಸಹಕರಿಸಬೇಕು. ಮುಂದಿನ ದಿನಗಳಲ್ಲಿ 15 ವರ್ಷದೊಳಗಿನ ಮಕ್ಕಳಿಗೆ ಕೂಡ ಲಸಿಕೆ ಬರಲಿದೆ ಎಂದು ಶಾಸಕರು ಹೇಳಿದರು. ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಕೋವಿಡ್ ಹರಡುವುದನ್ನು ನಿಯಂತ್ರಿಸಲು ಎಲ್ಲರೂ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯುವುದು, ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಪಾಲನೆ ಮಾಡಿದ್ದಲ್ಲಿ ಮಾತ್ರ ಇದರ ನಿಯಂತ್ರಣ ಸಾಧ್ಯವಾಗಲಿದೆ. ಪರ್ಯಾಯ ಮಹೋತ್ಸವ ಕಾರ್ಯಕ್ರಮದಲ್ಲಿ ಸಹ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದವರು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ರಘುಪತಿ ಭಟ್ ಹೇಳಿದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಮಕ್ಕಳು ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ನಿಂದ ಸಂಪೂರ್ಣ ಸುರಕ್ಷೆ ಪಡೆಯಲಿದ್ದು, ಭೌತಿಕವಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಲಿದೆ. ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಸೂಚಿಸುವ ಎಲ್ಲಾ ಮಾರ್ಗಸೂಚಿಗಳನ್ನು ಮತ್ತು ಕೋವಿಡ್ ಸಮುಚಿತ ವರ್ತನೆಗಳನ್ನು ಎಲ್ಲಡೆ ಪಾಲಿಸಬೇಕು. ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆಯಬೇಕು ಮತ್ತು ರೋಗ ಲಕ್ಷಣಗಳಿದ್ದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ನಗರಸಭಾ ಸದಸ್ಯ ಗಿರಿಧರ ಆಚಾರ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ನಿಟ್ಟೂರು ಪ್ರೌಢಶಾಲೆಯ ಪ್ರಾಂಶುಪಾಲೆ ಅನಸೂಯ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ, ನಾಗಭೂಷಣ ಉಡುಪ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಸ್ವಾಮಿ ವಂದಿಸಿದರು.

ಆಸಕ್ತಿಯುತ ಕ್ಷೇತ್ರದಲ್ಲಿ ಉದ್ಯೋಗ ಪಡೆಯಿರಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Thumbnail
Posted On: 03 Jan 2022, 06:12 PM

ಉಡುಪಿ : ಉದ್ಯೋಗಾಕಾಂಕ್ಷಿಗಳು ತಮಗೆ ಆಸಕ್ತಿಯಿರುವ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು. ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲಭಿವೃಧ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ಪ್ರಯುಕ್ತ ಆಯೋಜಿಸಿದ್ದ ಸಂಜೀವಿನಿ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಬ್ಬರೂ ತಮ್ಮದೇ ಆದ ವಿಶಿಷ್ಟ ಮತ್ತು ವೈಶಿಷ್ಠಪೂರ್ಣ ವ್ಯಕ್ತಿತ್ವ ಹಾಗೂ ಆಸಕ್ತಿಯನ್ನು ಹೊಂದಿದ್ದು, ತಮಗೆ ಸರಿ ಹೊಂದುವ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯುವುದರಿಂದ ಆ ಉದ್ಯೋಗದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾದ್ಯವಾಗಲಿದೆ. ಕೋವಿಡ್ನಿಂದ ಅನೇಕ ಮಂದಿ ಉದ್ಯೋಗ ವಂಚಿತರಾಗಿದ್ದು, ಉದ್ಯೋಗಾಕಾಂಕ್ಷಿಗಳು ಉದ್ಯೋಗಮೇಳದಲ್ಲಿ ಭಾಗವಹಿಸುವ ಕಂಪೆನಿಗಳಲ್ಲಿ ತಮ್ಮ ವಿದ್ಯಾರ್ಹತೆ ಮತ್ತು ಆಸಕ್ತಿಯಿರುವ ಕ್ಷೇತ್ರದ ಉದ್ಯೋಗಗಳನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಉದ್ಯೋಗ ಮೇಳದ ಕುರಿತ ಅತೀ ಕಡಿಮೆ ಅವಧಿಯಲ್ಲಿ 1558 ಮಂದಿ ಉದ್ಯೋಗಾಕಾಂಕ್ಷಿಗಳು ನೊಂದಾಯಿಸಿಕೊಂಡಿದ್ದು, ಇಂದಿನ ಉದ್ಯೋಗ ಮೇಳದಲ್ಲಿ ಭಾಗವಹಿಸಿರುವ ವಿವಿದ ಕಂಪನಿಗಳಲ್ಲಿ ಸುಮಾರು 2000 ದಷ್ಟು ಉದ್ಯೋಗ ಲಭ್ಯತೆಗಳಿದ್ದು, ಅಭ್ಯರ್ಥಿಗಳು ಉತ್ತಮ ರೀತಿಯಲ್ಲಿ ತಮ್ಮ ಪ್ರತಿಭೆ ತೋರುವಂತೆ ತಿಳಿಸಿದರು. ಜಿಲ್ಲಾ ಪಂಚಾಯತ್ನ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ವಿವಿಧ ತರಬೇತಿ ಕಾರ್ಯಕ್ರಮಗಳು, ಕೌಶಲ್ಯ ತರಬೇತಿಯನ್ನು ನೀಡುವ ಮೂಲಕ ಉದ್ಯೋಗ ಒದಗಿಸಲು ಪ್ರಯತ್ನಿಸಲಾಗುತ್ತಿದ್ದು, ಉದ್ಯಮಿಯಾಗು ಎಂಬ ಯೋಜನೆಯಡಿ, ಮೊಬೈಲ್ ಕ್ಯಾಂಟೀನ್, ಚಿಕ್ಕಿ ಘಟಕ ಸ್ಥಾಪನೆಗೆ ನೆರವು ನೀಡಲಾಗಿದ್ದು, ಉದ್ಯೋಗ ಪಡೆಯುವುದರಿಂದ ವ್ಯಕ್ತಿಯ ಆದಾಯ ಮತ್ತು ಜಿಲ್ಲೆಯ ತಲಾ ಆದಾಯ ಹೆಚ್ಚಳವಾಗಲಿದೆ ಎಂದರು. ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಜಗದೀಶ್ ಉಪಸ್ಥಿತರಿದ್ದರು. ಜಿಲ್ಲಾ ಪಂಚಾಯತ್ನ ಗ್ರಾಮೀಣ ಜೀವನೋಪಾಯ ಅಭಿಯಾನದ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಸ್ವಾಗತಿಸಿದರು, ನವ್ಯಾ ವಂದಿಸಿದರು. ಪ್ರಭಾಕರ ಆಚಾರ್ ನಿರೂಪಿಸಿದರು. ಉದ್ಯೋಗಮೇಳದಲ್ಲಿ ಜಿಲ್ಲೆಯ ಮತ್ತು ರಾಜ್ಯದ ವಿವಿಧ 20 ಕ್ಕೂ ಅಧಿಕ ಕಂಪನಿಗಳು ಭಾಗವಹಿಸಿದ್ದವು.

ಪರ್ಯಾಯೋತ್ಸವ ಸುವ್ಯವಸ್ಥಿತವಾಗಿ ನಡೆಸಲು ಎಲ್ಲಾ ಕ್ರಮ ಕೈಗೊಳ್ಳಿ : ಸಚಿವ ಸುನಿಲ್ ಕುಮಾರ್

Thumbnail
Posted On: 03 Jan 2022, 05:35 PM

ಉಡುಪಿ : ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಕಾರ್ಯಕ್ರಮವು ಅತ್ಯಂತ ಸುವ್ಯವಸ್ಥಿತವಾಗಿ ನಡೆಯಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದರು. ಅವರು ಇಂದು ,ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಶ್ರೀಕೃಷ್ಣ ಮಠದ ಪರ್ಯಾಯ ಕುರಿತಂತೆ ನಡೆದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀಕೃಷಮಠದ ಪರ್ಯಾಯ ಕಾರ್ಯಕ್ರಮಕ್ಕೆ ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವ ಹಿನ್ನಲೆ , ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆ, ವಾಹನಗಳ ಸುಗಮ ಸಂಚಾರ, ವಾಹನ ನಿಲುಗಡೆ, ಸೇರಿದಂತೆ ಮತ್ತಿತರ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಯಾವುದೇ ರೀತಿಯ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕ ಕಾರ್ಯಗಳನ್ನು ಕೈಗೊಳ್ಳುವಂತೆ ಸೂಚಿಸಿದರು. ಪರ್ಯಾಯ ಕಾರ್ಯಕ್ರಮದ ಹಿನ್ನಲೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯ ಮಂತ್ರ್ರಿಗಳೊಂದಿಗೆ ಚರ್ಚಿಸಿ , ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ನಗರಸಭೆ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿಗಳನ್ನು ಹಾಗೂ ತ್ಯಾಜ್ಯ ವಿಲೇವಾರಿ ವಾಹನಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಬೇಕು, ಸಾರ್ವಜನಿಕರ ಉಪಯೋಗಕ್ಕಾಗಿ ಹೆಚ್ಚುವರಿ ಶೌಚಾಲಯಗಳ ನಿರ್ಮಾಣ ಮಾಡುವುದರೊಂದಿಗೆ ಅವುಗಳಿಗೆ ನೀರಿನ ವ್ಯವಸ್ಥೆ ,ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದ ಅವರು, ನಗರದ ರಸ್ತೆ ನಿರ್ಮಾಣ ಸೇರಿದಂತೆ ದುರಸ್ತಿ ಕಾರ್ಯಗಳನ್ನು ಈ ತಿಂಗಳ 10 ರೊಳಗೆ ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು. ಪೊಲೀಸ್ ಇಲಾಖೆಯವರು ವಾಹನಗಳ ಸುಗಮ ಸಂಚಾರ ಸೇರಿದಂತೆ ಅವುಗಳ ನಿಲುಗಡೆಗೆ ಸೂಕ್ತ ಸ್ಥಳಗಳನ್ನು ಗುರುತಿಸುವುದರೊಂದಿಗೆ ವಾಹನ ದಟ್ಟಣೆಯಾಗದಂತೆ ನೋಡಿಕೊಳ್ಳಬೇಕು ಅಗತ್ಯವಿದ್ದಲ್ಲಿ ಹೊರ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸ ರನ್ನು ನಿಯೋಜನೆಗೊಳಿಸಬೇಕು ,ಆಯ್ದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಗಳನ್ನು ಅಳವಡಿಕೆ ಮಾಡಬೇಕು, ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚನೆ ನೀಡಿದರು. ಪರ್ಯಾಯ ಮೆರವಣಿಗೆ ಕಾರ್ಯಕ್ರಮದಲ್ಲಿ ಸರ್ಕಾರದ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರದರ್ಶಿಸುವ ಟ್ಯಾಬ್ಲೋ ಗಳನ್ನು ಇಲಾಖೆಗಳು ಸಿದ್ದಪಡಿಸುವುದರೊಂದಿಗೆ , ಮೆರವಣಿಗೆಯಲ್ಲಿ ಭಾಗವಹಿಸಬೇಕು ಎಂದ ಅವರು ರಾಜ್ಯ ಹಾಗೂ ಹೊರರಾಜ್ಯದ ಸಾಂಸ್ಕೃತಿಕ ಕಲಾತಂಡಗಳ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಿದರು. ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸುವ ಭಕ್ತಾದಿಗಳು ಕಡ್ಡಾಯವಾಗಿ 2 ಡೋಸ್ ಕೋವಿಡ್ 19 ಲಸಿಕೆಯನ್ನು ಪಡೆದಿರಬೇಕು, ಮಾಸ್ಕ್ ಧರಿಸುವುದರೊಂದಿಗೆ ಕೋವಿಡ್ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸುವಂತೆ ಎಚ್ಚರವಹಿಸಬೇಕು ಎಂದರು, ಭಕ್ತಾದಿಗಳ ಸಂಚಾರಕ್ಕೆ ಅನುಗುಣವಾಗಿ ಸಾರಿಗೆ ವಾಹನಗಳನ್ನು ವ್ಯವಸ್ಥೆ ಮಾಡಬೇಕೆಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಇಲಾಖೆವತಿಯಿಂದ ನಿಗದಿತ ಸ್ಥಳಗಳಲ್ಲಿ ಕೋವಿಡ್ ಲಸಿಕೆಗಳನ್ನು ನೀಡಲು ಲಸಿಕಾ ಕೇಂದ್ರಗಳನ್ನು ತೆರೆಯಬೇಕು, ಹೆಚ್ಚಿನ ಕೋವಿಡ್ ತಪಾಸಣೆ ಯನ್ನು ನಡೆಸಬೇಕು, ಆಂಬುಲೆನ್ಸ್ ಸೇರಿದಂತೆ ಅಗ್ನಿ ಅವಘಡಗಳು ನಡೆದಲ್ಲಿ ತಕ್ಷಣ ಸ್ಪಂದಿಸಲು ಸನ್ನದ್ಧರಾಗಿ ಇರಬೇಕೆಂದು ಸೂಚನೆ ನೀಡಿದರು. ಕೋವಿಡ್ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ವಿವಿದ ದಾನಿಗಳು ಮತ್ತು ಸಂಘ ಸಂಸ್ಥೆಗಳು ನೀಡಿರುವ 11 ಆಂಬುಲೆನ್ಸ್ ಗಳ ಪೂರ್ಣ ಪ್ರಮಾಣದ ನಿರ್ವಹಣೆಯ ಜವಾಬ್ದಾರಿಯನ್ನು ಜಿಲ್ಲೆಯ ವಿವಿಧ ಕೋ ಆಪರೇಟಿವ್ ಸೊಸೈಟಿಗಳು ನಿಭಾಯಿಸಬೇಕು ಎಂಬ ಸಚಿವರ ಮನವಿಗೆ , ಸಹಕಾರಿ ಸಂಘಗಳ ಮುಖ್ಯಸ್ಥರು ಸ್ಪಂದಿಸದ್ದು, ಈ ಕಾರ್ಯದ ಉಸ್ತುವಾರಿಯನ್ನು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂದಕರು ವಹಿಸಕೊಳ್ಳುವಂತೆ ಸಚಿವರು ಸೂಚಿಸಿದರು. ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಕೋವಿಡ್ ಸೋಂಕಿತರ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಹೆಚ್ಚಾತ್ತಿದ್ದು, ಈ ಸಂಖ್ಯೆಯು ಎಂ.ಐ.ಟಿ. ಪರಿಸರದಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ. ಈ ಭಾಗದಲ್ಲಿ ಹೆಚ್ಚು ಹೆಚ್ಚು ಪರೀಕ್ಷೆಯನ್ನು ಮಾಡುವುದರೊಂದಿಗೆ ಸೋಂಕಿತರನ್ನು ಗುರುತಿಸಿ ಚಿಕಿತ್ಸೆ ನೀಡುವುದರ ಜೊತೆಗೆ ಕಂಟೈನ್ಮೆಂಟ್ ಝೋನ್ ಗಳನ್ನಾಗಿ ಘೋಷಿಸಿ ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 15 ರಿಂದ 18 ವರ್ಷದೊಳಗಿನವರಿಗೆ ಶಾಲೆಗಳಲ್ಲಿ ಲಸಿಕೆ ನೀಡುವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ರೂಪಿಸಬೇಕು , ಲಸಿಕೆ ನೀಡಿದ ನಂತರ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು, ಲಸಿಕೆ ನೀಡುವ ಸಂದರ್ಭದಲ್ಲಿ ಪೋಷಕರು ಹಾಜರಿರುವಂತೆ ನೋಡಿಕೊಳ್ಳಬೇಕು, ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ವಾರ್ಡನ್ ಗಳು ನಿಗಾ ವಹಿಸಬೇಕು ಎಂದರು. ಸಭೆಯಲ್ಲಿ ಉಡುಪಿ ಶಾಸಕ ಹಾಗೂ ಪರ್ಯಾಯ ಸಮಿತಿ ಗೌರವಾಧ್ಯಕ್ಷ ರಘುಪತಿ ಭಟ್, ಕಾಪು ಶಾಸಕ ಲಾಲಾಜಿ ಮೆಂಡನ್, ಕರಾವಳಿ ಅಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಉಳ್ಳಾಲ : ಐಸಿಸ್ ಸಂಪರ್ಕದ ಹಿನ್ನೆಲೆ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಮಗನ ಸೊಸೆಯ ಬಂಧನ

Thumbnail
Posted On: 03 Jan 2022, 05:09 PM

ಮಂಗಳೂರು: ಐಸಿಸ್ ಉಗ್ರರೊಂದಿಗೆ ಸಂಬಂಧದ ಆರೋಪದಡಿ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಮಗ ಬಿ.ಎಂ ಬಾಷಾ ಅವರ ಸೊಸೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಅವರನ್ನು ರಾಷ್ಟ್ರೀಯ ತನಿಖಾದಳ (ಎನ್‌ಐಎ) ಇಂದು ಉಳ್ಳಾಲದ ಮನೆಯಿಂದ ಬಂಧಿಸಿದೆ. ಇಂದು ಬೆಳಗ್ಗೆ ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ, ಬಿ.ಎಂ. ಬಾಷಾ ಮನೆಗೆ ಎನ್‌ಐಎ ನ ಸಹ ತನಿಖಾಧಿಕಾರಿ ಕೃಷ್ಣ ಕುಮಾರ್ ನೇತೃತ್ವದಲ್ಲಿ ಇತರ ಅಧಿಕಾರಿಗಳಾದ ಅಜಯ್ ಸಿಂಗ್ ಮತ್ತು ಮೋನಿಕಾ ಧಿಕ್ವಾಲ್ ಅವರ ತಂಡ ತೀವ್ರ ವಿಚಾರಣೆ ನಡೆಸಿ ದೀಪ್ತಿ ಅಲಿಯಾಸ್ ಮರಿಯಂಳನ್ನು ಬಂಧಿಸಿದ್ದಾರೆ. ನಂತರ ಮಂಗಳೂರು ನಗರದ ಜಿಲ್ಲಾಸ್ಪತ್ರೆ ವೆನ್ಲಾಕ್‌ಗೆ ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ, ಮಂಗಳೂರಿನ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಬಳಿಕ ಹೆಚ್ಚಿನ ವಿಚಾರಣೆಗೆ ದೆಹಲಿಗೆ ಕರೆದುಕೊಂಡು ಹೋಗಲಿದ್ದಾರೆಂಬ ಮಾಹಿತಿ ವ್ಯಕ್ತವಾಗಿದೆ. ಇದೇ ಕಳೆದ ಅಗಸ್ಟ್ 4ರಂದು ದಾಳಿ ನಡೆಸಿದ್ದ ಎನ್ ಐಎ ಅಧಿಕಾರಿಗಳು, ಅಂದು ಎರಡು ದಿನಗಳ ದಾಳಿಯ ಬಳಿಕ ಮಾಜಿ ಶಾಸಕ ಇದಿನಬ್ಬ ಅವರ ಪುತ್ರ ಬಿ.ಎಂ ಬಾಷಾ ಅವರ ಕಿರಿಯ ಪುತ್ರ ಅಬ್ದುಲ್ ರೆಹಮಾನರನ್ನು ಬಂಧಿಸಿದ್ದರು. ಈ ವೇಳೆ ಬಂಧಿತ ರೆಹಮಾನ್‌ನ ಪತ್ನಿ ದೀಪ್ತಿ ಆಲಿಯಾಸ್ ಮರಿಯಂ ಮೇಲೂ ಅನುಮಾನ ಬಂದಿತ್ತು. ಆದರೆ ಸಣ್ಣ ಮಗುವಿದ್ದ ಕಾರಣ ಎನ್‌ಐಎ ಕೇವಲ ವಿಚಾರಣೆ ನಡೆಸಿ ಬಿಟ್ಟಿತ್ತು. ಇದೀಗ ಮತ್ತೆ ಉಳ್ಳಾಲ ಮನೆಗೆ ಎನ್ ಐಎ ದಾಳಿ ನಡೆಸಿ ದೀಪ್ತಿ ಆಲಿಯಾಸ್ ಮರಿಯಂ ಬಂಧಿಸಿದೆ. ಇದೀಗ ಉಗ್ರವಾದಿ ಗುಂಪು ಐಸಿಸ್ ಸಂಪರ್ಕ ಪಡೆದಿದ್ದು ಯುವಕರನ್ನು ಸೇರಿಸುವ ಜಾಲದಲ್ಲಿ ಇದ್ದಾಳೆ ಎನ್ನುವ ಶಂಕೆಯಲ್ಲಿ ಎನ್‌ಐಎ ಅಧಿಕಾರಿಗಳು ತನಿಖೆ ನಡೆಸಿ ಬಂಧಿಸಿದ್ದಾರೆ.

ಶಿರ್ವ : ಉಚಿತ ಹೃದಯ ತಪಾಸಣಾ ಶಿಬಿರ

Thumbnail
Posted On: 03 Jan 2022, 04:46 PM

ಶಿರ್ವ : ಶಿವ೯ದಲ್ಲಿ , ಪ್ರಸ್ತುತ ಆರೋಗ್ಯ ಸಂಬಂಧಿ ವಿಚಾರದಲ್ಲಿ ಸದಾ ಎಚ್ಚರಿಕೆಯಿಂದ ಇರುವ ಅನಿವಾಯ೯ತೆ ಮತ್ತು ಅಗತ್ಯತೆ ಇಂದುನಮ್ಮ ಮುಂದಿದೆ. ಇಂದಿನ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದ ಅಬಾಲ ವೃದ್ಧರಾದಿಯಾಗಿ ಸಾವು ಸಂಭವಿಸುತ್ತದೆ ಈ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ಆರೋಗ್ಯ ವಂತ ಜನರು ಕೂಡ ತಮ್ಮ ಆರೋಗ್ಯವನ್ನು ತಜ್ಞ ವೈದ್ಯರಿಂದ ಸಕಾಲದಲ್ಲಿ ಪರೀಕ್ಷಿಸಿ ಹೃದಯದ ರೋಗಗಳಿಂದ ತಮ್ಮನ್ನು ರಕ್ಷಣೆ ಮಾಡಿಸಿಕೊಳ್ಳುವುದು ಬಹಳ ಮಹತ್ವದ ವಿಚಾರವಾಗಿದೆ ಎಂದು ಲಯನ್ಸ್ ಕ್ಲಬ್ ಶಿವ೯, ಸಂತ ಮೇರಿ ಮಹಾವಿದ್ಯಾಲಯ ಶಿವ೯,ಸಂತ ಮೇರಿ ಪಿಯು ಕಾಲೇಜು ಹಳೆವಿದ್ಯಾಥಿ೯ ಸಂಘ,ಸ್ತೃೀ ಸಂಘಟನೆ ಶಿವ೯,ಕಸ್ತೂರಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ , ಮಣಿಪಾಲ್ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ ಹೃದಯ ತಪಾಸಣಾ ಕಾಯ೯ಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತೀ ವಂದನೀಯ ಧರ್ಮ ಗುರುಗಳು ಅಲೆಕ್ಸಾಂಡರ್ ಡೆನಿಸ್ ಡೇಸಾರವರು ಕಾರ್ಯಕ್ರಮ ಉದ್ಘಾಟನೆ ಮಾಡಿ ಆಶೀರ್ವಚನ ನೀಡಿದರು. ಕೆ ಎಂಸಿ ಮಣಿಪಾಲ ಇಲ್ಲಿಯ ವೈದ್ಯರಾದ ಡಾ. ಗೋಸಾವಿ ಸಿದ್ಧಾಥ್೯ ಹೃದಯ ತಪಾಸಣೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಮೆಲ್ವಿನ್ ನೊರೊನ್ನ, ಪಿಯು ಸಂತಮೇರಿ ಕಾಲೇಜು ಹಳೆವಿದ್ಯಾಥಿ೯ ಸಂಘ ಅಧ್ಯಕ್ಷ ರು, ಜಾಜ್೯ ಅನಿಲ್ ಡಿ'ಸೋಜ ಅಧ್ಯಕ್ಷರು ಲಯನ್ಸ್ ಕ್ಲಬ್ ಶಿವ೯, ಜ್ಯೋತಿ ಡಿ'ಸೋಜ ,ಅಧ್ಯಕ್ಷರು ಸ್ತ್ರಿಸಂಘಟನೆ ಶಿವ೯, ಮಥಾಯಸ್ ಲೋಬೊ ಕಾಯ೯ದಶಿ೯ ಪಿಯು ಕಾಲೇಜು ಹಳೆವಿದ್ಯಾಥಿ೯ ಸಂಘ,ಶಿವ೯ ಕಾಲೇಜಿನ ಕ್ಷೇಮಪಾಲನಾ ಅಧಿಕಾರಿ ಯಶೋಧ , ಎನ್ ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್, ಎನ್ಎಸ್ಎಸ್ ಅಧಿಕಾರಿಗಳಾದ ಪ್ರೇಮನಾಥ್ ಕೋಟ್ಯಾನ್,ರಕ್ಷಾ , ರೋವರ್ಸ್ ರೇಂಜರ್ಸ್ ಲೀಡರ್ ಗಳಾದ ಪ್ರಕಾಶ್, ಸಂಗೀತ ಪೂಜಾರಿ, ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜಕ ವಿಠ್ಠಲ್ ನಾಯಕ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಬೆಳಿಗ್ಗೆ 9 ರಿಂದ ಮಧ್ಯಾಹ್ನ ಒಂದರ ತನಕ ಸುಮಾರು 80 ಜನರು ಶಿಬಿರದ ಪ್ರಯೋಜವನ್ನು ತಮ್ಮ ಆರೋಗ್ಯತಪಾಸಣೆ ಮಾಡುವ ಮೂಲಕ ಪಡೆದುಕೊಂಡರು. ಕ್ಯಾಡೆಟ್ ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ, ಜೂನಿಯರ್ ಅಂಡರ್ ಆಫೀಸರ್ ಹರ್ಷಿತ , ಕಂಪನಿ ಸಾರ್ಜೆಂಟ್ ಕ್ವಾಟರ್ಮಸ್ಟರ್ ಮೋಹಿತ್ ಎನ್ ಸಾಲಿಯಾನ್, ಕಾರ್ಪೊರಲ್ ಧೀರಜ್ ಆಚಾರ್ಯ, ಎನ್‌ಎಸ್‌ಎಸ್ ಸ್ವಯಂಸೇವಕರಾದ ವೈಷ್ಣವಿ, ಮಿನಾಜ್, ಸಿಂಚನಾ, ಶ್ರೇಯಸ್, ಮೊಹಮ್ಮದ್ ಅಫ್ನಾನ್, ರೋವರ್ ಸ್ವಯಂಸೇವಕರಾದ ಡಾರಿಲ್ ಮತ್ತು ಕಾಲೇಜಿನ ಆಡಳಿತ ಸಿಬ್ಬಂದಿ ವರ್ಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ತಮ್ಮ ಸಂಪೂರ್ಣ ಸಹಕಾರವನ್ನು ನೀಡಿದರು. ಸಂತಮೇರಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಹೆರಾಲ್ಡ್ ಐವನ್ ಮೊನಿಸ್ ರವರು ಸವ೯ರನ್ನು ಸ್ವಾಗತಿಸಿ, ಚಾಲ್ಸ೯ ಮೋಹನ್ ನೊರೊನ್ಹ ಲಯನ್ಸ್ ಕ್ಲಬ್ ಶಿವ೯ ವಂದಿಸಿ, ನೋಬ೯ಟ್೯ ಮಚಾದೊ ಮಾಜಿ ಅಧ್ಯಕ್ಷರು ಲಯನ್ಸ್ ಕ್ಲಬ್ ಶಿವ೯ ಕಾರ್ಯಕ್ರಮ ನಿರೂಪಿಸಿದರು.

ಸಂತ ಮೇರಿ ಮಹಾವಿದ್ಯಾಲಯದಲ್ಲಿ ಲಸಿಕಾ ಅಭಿಯಾನ

Thumbnail
Posted On: 03 Jan 2022, 01:36 PM

ಶಿರ್ವ:ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್‍ಸಿಸಿ, ಎನ್‍ಎಸ್‍ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನವನ್ನು ಕಾಲೇಜಿನ ದೃಶ್ಯ ಶ್ರವ್ಯ ಕೊಠಡಿಯಲ್ಲಿ ಆಯೋಜಿಸಲಾಯಿತು. ಪದವಿ ಕಾಲೇಜುಗಳಲ್ಲಿ ಹೊಸತಾಗಿ ಸೇರ್ಪಡೆ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಕೋವಿಡ್ -19 ಲಸಿಕಾಕರಣ ನಡೆಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾಲೇಜಿನ 15 ರಿಂದ 18 ವರ್ಷದೊಳಗಿನ ಅರ್ಹ ಫಲಾನುಭವಿಗಳಿಗೆ ಲಸಿಕೆಗಳ ಲಭ್ಯತೆಗೆ ಅನುಸಾರವಾಗಿ ಕಾಲೇಜು ಆವರಣದಲ್ಲಿಯೇ ಲಸಿಕಾಕರಣ ಅಭಿಯಾನ ಆಯೋಜಿಸಲಾಯಿತು, ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಜಿಲ್ಲಾಡಳಿತದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದ್ದು ಕಾಲೇಜುಗಳ ಮೂಲಕ ಲಸಿಕೆ ನೀಡಲಾಗುತ್ತಿದೆ,ಲಸಿಕೆ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂಬ ಮಾಹಿತಿಯನ್ನು ನೀಡಿದರು.    ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ಅಧಿಕಾರಿ ಡಾ| ವೈಷ್ಣವಿ ರವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು. ಈ ಅಭಿಯಾನಕ್ಕೆ ಸಹಕಾರವನ್ನು ನೀಡಿದ ಕಾಲೇಜಿನ ವಿದ್ಯಾರ್ಥಿ ಅನುಪ್ ನಾಯಕ್, ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ಶಶಿ ಆಶಾ ಕಾರ್ಯಕರ್ತರಾದ ಸಂಗೀತ, ವಿಜಯ, ನಿರ್ಮಲರವರು ನೆರವೇರಿಸಿ ಕೊಟ್ಟರು.