Updated News From Kaup
ಮಣಿಪಾಲ : ಆರ್ ಸೆಟಿ ತರಬೇತಿ ಸಮಾರೋಪ
Posted On: 19-11-2021 04:33PM
ಮಣಿಪಾಲ : ಸ್ವ ಉದ್ಯೋಗದ ಸ್ಥಾಪನೆ ಮತ್ತು ಬೆಳವಣಿಗೆಗೆ ಆಧುನಿಕ ಸಮಾಜದಲ್ಲಿ ವಿಫುಲ ಅವಕಾಶಗಳಿದ್ದು ಯುವಕರು ಇದನ್ನು ಯೋಗ್ಯ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮಣಿಪಾಲ ಕೆನರಾ ಬ್ಯಾಂಕ್ ನ ಅಧಿಕಾರಿ ಹೆಚ್ ಆರ್ ವಿಭಾಗದ ಮುಖ್ಯಸ್ಥ ಜಯಪ್ರಕಾಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಮಣಿಪಾಲದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಡೆದ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.
ಬಂಟಕಲ್ಲು : ಶ್ರೀಗುರುರಾಯರ ಸನ್ನಿಧಿಯಲ್ಲಿ ಭಜನೆ, ದೀಪಾರಾಧನೆ, ಮಹಾಪೂಜೆ
Posted On: 19-11-2021 02:53PM
ಶಿರ್ವ : ಶ್ರೀ ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿ 92 ಹೇರೂರು ಬಂಟಕಲ್ಲು ಶ್ರೀ ಗುರುರಾಯರ ಸನ್ನಿಧಿಯಲ್ಲಿ ಭಜನೆ, ದೀಪಾರಾಧನೆ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.
ಕಟಪಾಡಿ : ಜೀರ್ಣೋದ್ಧಾರಗೊಳ್ಳಲಿರುವ ಏಣಗುಡ್ಡೆ ಶ್ರೀ ಬ್ರಹ್ಮ ಬೈದೇರುಗಳ ಗರಡಿ ಮುಂಬಯಿ ಉಪಸಮಿತಿಯ ರಚನೆ
Posted On: 18-11-2021 04:20PM
ಕಟಪಾಡಿ : ಸುಮಾರು 500 ವರ್ಷಗಳಿಗೂ ಹಿಂದಿನ ಇತಿಹಾಸವಿರುವ ಏಣಗುಡ್ಡೆ ಶ್ರೀ ಬ್ರಹ್ಮ ಬೈದೇರುಗಳ ಗರಡಿಯನ್ನು ಪುನರುತ್ಥಾನಗೊಳಿಸಲು ನಿರ್ಧರಿಸಲಾಗಿದ್ದು. ಸುಮಾರು ಅಂದಾಜು 3.5 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳಲಿರುವ ಏಣಗುಡ್ಡೆ ಶ್ರೀ ಬ್ರಹ್ಮ ಬೈದೇರುಗಳ ಗರಡಿಯ ಮುಂಬಯಿ ಉಪಸಮಿತಿಯನ್ನು ಅ.10ರಂದು ಬಿಲ್ಲವ ಭವನದಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ರಚಿಸಲಾಗಿದೆ.
ಕರ್ನಾಟಕ ರಾಜ್ಯಾದ್ಯಂತ ಸಂಚರಿಸಲಿರುವ ಶ್ರೀರಾಮ ಭಕ್ತ ಹನುಮಂತನ ಭಕ್ತಿ ವೈಭವ ವಿಜಯ ರಥಯಾತ್ರೆ ಕೋಟೇಶ್ವರದಲ್ಲಿ
Posted On: 18-11-2021 03:21PM
ಕುಂದಾಪುರ : ಜಗದ್ಗುರು ಆಚಾರ್ಯರ ಮಾರ್ಗದರ್ಶನದಲ್ಲಿ ಪಂಪಾ ಕ್ಷೇತ್ರದ ಗೋವಿಂದಾನಂದ ಸರಸ್ವತೀ ಸ್ವಾಮಿ ನೇತೃತ್ವದಲ್ಲಿ ಭಾರತಾದ್ಯಂತ 12 ವರ್ಷಗಳ ಕಾಲ ಸಂಚರಿಸುವ ಐತಿಹಾಸಿಕ ಶ್ರೀಹನುಮದ್ ಜನ್ಮಭೂಮಿ ಅಂಜನಾದ್ರಿ ಕಿಷ್ಕಿಂದ ಪಂಪಾ ಕ್ಷೇತ್ರದಿಂದ ಹೊರಟ ಶ್ರೀರಾಮ ಭಕ್ತ ಹನುಮಂತನ ಭಕ್ತಿ ವೈಭವ ವಿಜಯ ರಥಯಾತ್ರೆಯು ಕೋಟೇಶ್ವರ ತಲುಪಿದೆ.
ಸಂಘಟನೆ ವಿರುದ್ಧ ಆರೋಪ ; ನಾಳೆಯೊಳಗೆ ಕ್ಷಮೆಯಾಚಿಸದಿದ್ದರೆ ಬಹಿರಂಗ ಪ್ರತಿಭಟನೆ : ಬಿರುವೆರ್ ಕುಡ್ಲ ಸಂಘಟನೆ ಎಚ್ಚರಿಕೆ
Posted On: 17-11-2021 08:05PM
ಉಡುಪಿ: ನಾಳೆಯೊಳಗಾಗಿ ಸಂಘಟನೆ ವಿರುದ್ಧದ ಆರೋಪಕ್ಕೆ ಶರಣ್ ಪಂಪ್ವೆಲ್ ಕ್ಷಮೆಯಾಚಿಸದಿದ್ದರೆ ಬಳ್ಳಾಲ್ಬಾಗ್ನಲ್ಲಿ ಬಹಿರಂಗ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಬಿರುವೆರ್ ಕುಡ್ಲ ಸಂಘಟನೆ ಎಚ್ಚರಿಕೆ ನೀಡಿದೆ. ಬಿರುವೆರ್ ಕುಡ್ಲ ಉಡುಪಿ ಘಟಕದಿಂದ ಉಡುಪಿ ಪ್ರೆಸ್ ಕ್ಲಬ್ಬಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಸಹಕಾರಿ ರಂಗವು ಜನರ ಮತ್ತು ಸಂಸ್ಥೆಯ ನಂಬಿಕೆಯ ಮೇಲೆ ನಿಂತಿದೆ : ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ
Posted On: 17-11-2021 12:01PM
ಪಡುಬಿದ್ರಿ : ಸಹಕಾರಿ ರಂಗವು ಜನರ ಮತ್ತು ಸಂಸ್ಥೆಯ ನಂಬಿಕೆಯ ಮೇಲೆ ನಿಂತಿದೆ. ಹಣಕಾಸು ಸಂಸ್ಥೆಯು ನಿರ್ಧಿಷ್ಟ ಜವಾಬ್ದಾರಿಗಳಿಂದ ಜನರಿಗೆ ನೆರವಾಗುವ ಮೂಲಕ ಧರ್ಮ ಕರ್ಮ ಸಿದ್ದಾಂತದ ಮೇಲೆ ನಿಂತಿದೆ ಎಂದು ಧರ್ಮಸ್ಥಳದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು. ಅವರು ಪಡುಬಿದ್ರಿ ಕಣ್ಣಂಗಾರ್ ಬೈಪಾಸ್ನಲ್ಲಿ ಕರ್ಕೇರ ಟವರ್ ನಲ್ಲಿ ಇರುವ ಸ್ವರ್ಣ ಸೌಹಾರ್ದ ಕ್ರೆಡಿಟ್ ಕೋ ಒಪರೇಟಿವ್ ಲಿಮಿಟೆಡ್ ಇದರ ದಶಮ ಸಂಭ್ರಮದ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರಿಂದ ವಿವಿದೆಡೆ ಪರಿಶೀಲನೆ
Posted On: 16-11-2021 10:40PM
ಉಡುಪಿ : ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರು ಇಂದು ಜಿಲ್ಲೆಯ ಕೋವಿಡ್ ಲಸಿಕಾ ಕೇಂದ್ರಗಳು, ಶಾಲೆಗಳು ಮತ್ತು ಮಹಿಳಾ ರಾಜ್ಯ ನಿಲಯ, ಸಖಿ ಒನ್ ಸ್ಟಾಪ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಉಡುಪಿ ಕೆ.ಎಂ. ಮಾರ್ಗದಲ್ಲಿನ ಹಳೆ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ನ್ಯಾಯಮೂರ್ತಿಗಳು ,ಇದುವರೆಗೆ ಈ ಕೇಂದ್ರದಲ್ಲಿ ಪ್ರಥಮ ಡೋಸ್ ಲಸಿಕೆ ಪಡೆದಿರುವ ಸಂಖ್ಯೆ ಮತ್ತು ಎರಡನೇ ಡೋಸ್ ಪಡೆಯಲು ಬಾಕಿ ಇರುವವರ ಸಂಖ್ಯೆ ಕುರಿತು ಮಾಹಿತಿ ಪಡೆದು, 2 ನೇ ಡೋಸ್ ಪಡೆಯಲು ಬಾಕಿ ಇರುವ ಎಲ್ಲರಿಗೂ ತಪ್ಪದೇ ಲಸಿಕೆ ನೀಡಿ,ಅವರಿಗೆ ಎರಡನೇ ಡೋಸ್ ಪಡೆಯುವ ಬಗ್ಗೆ ಮಾಹಿತಿ ನೀಡಿ, ಕೇಂದ್ರಕ್ಕೆ ಬಂದು ಲಸಿಕೆ ಪಡೆಯಲು ಕ್ರಮ ಕೈಗೊಳ್ಳಿ , ಅರ್ಹ ಎಲ್ಲಾ ನಾಗರೀಕರು 2 ಡೋಸ್ ಲಸಿಕೆ ಪಡೆಯುವುದರಿಂದ ಕೋವಿಡ್ ನಿಂದ ಸಂಪೂರ್ಣ ಸುರಕ್ಷೆ ಪಡೆಯಲು ಸಾಧ್ಯವಾಗಲಿದೆ ಎಂದರು.
ಬಜಗೋಳಿ ಸರಕಾರಿ ಕಾಲೇಜಿನ ಶೌಚಾಲಯ ಸಮಸ್ಯೆ : ಸಚಿವ ವಿ.ಸುನಿಲ್ ಕುಮಾರ್ ರಿಂದ 5ಲಕ್ಷ ರೂಪಾಯಿಯ ಕಾಮಗಾರಿ ಆರಂಭಿಸುವ ಭರವಸೆ
Posted On: 16-11-2021 10:27PM
ಕಾರ್ಕಳ : ಬಜಗೋಳಿ ಸರಕಾರಿ ಪದವಿ ಪೂರ್ವ ಕಾಲೇಜಿನ ಬಾಲಕರ ಶೌಚಾಲಯದ ಸಮಸ್ಯೆಯ ಕುರಿತು ಅ.ಭಾ.ವಿ.ಪ ಕಾರ್ಕಳ ತಾಲೂಕು ತಂಡ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯಸರಕಾರದ ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ವಿ ಸುನೀಲ್ ಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ಶಾಸಕರು ಆದಷ್ಟು ಬೇಗ ಶೌಚಾಲಯ ನಿರ್ಮಿಸಿ ಕೊಡಲು ₹5 ಲಕ್ಷ ಶೀಘ್ರವಾಗಿ ಬಿಡುಗಡೆಗೊಳಿಸಿ ಕಾಮಗಾರಿ ಆರಂಭಿಸುವ ಭರವಸೆಯನ್ನು ನೀಡಿದರು.
ಪತ್ರಿಕೋದ್ಯಮಕ್ಕೆ ಆಲ್ರೌಂಡರ್ ಅಗತ್ಯ : ಕೃಷ್ಣ ಭಟ್ ಅಳದಂಗಡಿ
Posted On: 16-11-2021 10:15PM
ಮಂಗಳೂರು: ಪತ್ರಕರ್ತರಾಗಿ ಕಚೇರಿಯಲ್ಲಿ ಕೆಲಸ ಮಾಡುವ ಸಂದರ್ಭ ಸಮಯ, ಕೆಲಸದ ಒತ್ತಡವನ್ನು ನೋಡದೆ ಕಾರ್ಯ ನಿರ್ವಹಿಸಬೇಕಾಗಿದೆ. ಈ ಕಾರಣದಿಂದ 20 -20 ಕ್ರಿಕೆಟ್ ತಂಡದಂತೆ ಪತ್ರಿಕೋದ್ಯಮ ಕ್ಷೇತ್ರದಲ್ಲಿಯೂ ಈಗ ಆಲ್ರೌಂಡರ್ಗಳ ಅಗತ್ಯವಿದೆ ಎಂದು ಹಿರಿಯ ಪತ್ರಕರ್ತ, ವಿಜಯ ಕರ್ನಾಟಕ ಪತ್ರಿಕೆಯ ಸಹಾಯಕ ಸಂಪಾದಕ ಕೃಷ್ಣ ಭಟ್ ಅಳದಂಗಡಿ ಹೇಳಿದರು. ನಗರದ ಪ್ರೆಸ್ಕ್ಲಬ್ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ‘ಮಾಧ್ಯಮಗಳ ಮುಂದಿರುವ ಸವಾಲು’ ಎಂಬ ವಿಷಯದಲ್ಲಿ ಅವರು ಮಾತನಾಡಿದರು.
ಮಿಲಾಗ್ರಿಸ್ ಕನ್ನಡ ಮಾಧ್ಯಮ ಶಾಲೆ ಕಲ್ಯಾಣಪುರ : ಇಂಟರಾಕ್ಟ್ ಕ್ಲಬ್ ಪದಪ್ರದಾನ
Posted On: 16-11-2021 10:05PM
ಉಡುಪಿ, ನ.16 : ಇಂಟರಾಕ್ಟ್ ಕ್ಲಬ್ ಮಿಲಾಗ್ರಿಸ್ ಕನ್ನಡ ಮಾಧ್ಯಮ ಹೈಸ್ಕೂಲ್ ಕಲ್ಯಾಣಪುರ ಇದರ 3ನೇ ವರ್ಷದ ಪದಪ್ರದಾನ ಸಮಾರಂಭ ಶಾಲಾ ಸಭಾಂಗಣದಲ್ಲಿ ನೆರವೇರಿತು. ರೋಟರಿ ಕ್ಲಬ್ ಕಲ್ಯಾಣಪುರದ ಅಧ್ಯಕ್ಷ ಶಂಭು ಶಂಕರ್ ರವರು ಇಂಟರಾಕ್ಟ್ ನ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಪದಪ್ರದಾನ ಮಾಡಿ ಸಂದರ್ಭೋಚಿತವಾಗಿ ಮಾತನಾಡಿದರು.
