Updated News From Kaup

ಹಿಂದೂ ದೈವ ದೇವರುಗಳ ಅವಹೇಳನಗೈದವರ ವಿರುದ್ಧ ಸಾಮೂಹಿಕ ಪ್ರಾರ್ಥನೆ

Thumbnail
Posted On: 12 Jan 2022, 11:40 AM

ಉಡುಪಿ :ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ವತಿಯಿಂದ ಕಳೆದ ಹಲವಾರು ಸಮಯಗಳಿಂದ ಹಿಂದೂ ದೈವ ದೇವರುಗಳ ಬಗ್ಗೆ ಅಪಹಾಸ್ಯ ಮತ್ತು ವಿಕೃತಿಯಾಗಿ ಅಶ್ಲೀಲವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಮತ್ತು ಕೊರಗಜ್ಜ ದೈವ ದೇವರ ವೇಷ ಧರಿಸಿ ಅವಮಾನ ಮಾಡಿರುವವರ ವಿರುದ್ಧ ಉಡುಪಿಯ ಬೊಬ್ಬರ್ಯ ಕಾಂತೇರಿ ಜುಮಾದಿ ಕಲ್ಕುಡ ಕೊರಗಜ್ಜ ಪರಿವಾರ ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ ನಗರ ಸಭೆಯ ಮಾಜಿ ಸದಸ್ಯ ಶ್ಯಾಮ್ ಪ್ರಸಾದ್ ಕುಡ್ವ, ವಿಶ್ವ ಹಿಂದೂ ಪರಿಷದ್ ನಗರ ಕಾರ್ಯದರ್ಶಿ ಅವಿನಾಶ್ ಶೇರಿಗಾರ್, ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ.) ಉಡುಪಿ ಜಿಲ್ಲೆ ಇದರ ಪ್ರಧಾನ ಕಾರ್ಯದರ್ಶಿ ಹಾಗೂ ಬೊಬ್ಬರ್ಯ ಯುವ ಸೇವಾ ಸಮಿತಿ ಇದರ ಗೌರವ ಅಧ್ಯಕ್ಷರಾದ ವಿನೋದ್ ಶೆಟ್ಟಿ, ಪೇಜಾವರ ಮಠದ ಮಹೇಶ್ ಕುಲಕರ್ಣಿ, ಬೊಬ್ಬರ್ಯ ಯುವ ಸೇವಾ ಸಮಿತಿ ಅಧ್ಯಕ್ಷರಾದ ವರದಾಸ್ ಕಾಮತ್, ರಾಮಚಂದ್ರ ಭಟ್ ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.

ಲಾಕ್ ಡೌನ್ ಹಾಗೂ ನೈಟ್ ಕರ್ಫ್ಯೂ ಸಮಸ್ಯೆ : ದೈವಾರಾಧಕರ ಒಕ್ಕೂಟದಿಂದ ಸಚಿವ ಸುನಿಲ್ ಕುಮಾರ್ ಮತ್ತು ಶಾಸಕ ರಘುಪತಿ ಭಟ್ ರವರಿಗೆ ಮನವಿ

Thumbnail
Posted On: 11 Jan 2022, 02:24 PM

ಉಡುಪಿ : ದೈವಾರಾಧಕರ ಒಕ್ಕೂಟ ಉಡುಪಿ ಮಂಗಳೂರು ಹಾಗೂ ಹೋರಾಟ ಸಮಿತಿ ವತಿಯಿಂದ ಇಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ, ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಮತ್ತು ಉಡುಪಿ ಶಾಸಕರಾದ ರಘುಪತಿ ಭಟ್ ಅವರನ್ನು ಭೇಟಿಯಾಗಿ ಈ ವರ್ಷದ ಮೂರನೇ ಬಾರಿಯ ಲಾಕ್ ಡೌನ್ ಹಾಗೂ ನೈಟ್ ಕರ್ಫ್ಯೂನಿಂದ ಪ್ರಸ್ತುತ ದಿವಸಗಳಲ್ಲಿ ದೈವಾರಾಧಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ಅವರೊಂದಿಗೆ ತಿಳಿಸಿ ಮನವಿ ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿದ ಸಚಿವರು ಮತ್ತು ಶಾಸಕರು ನಿಮ್ಮ ಸಮಸ್ಯೆಗೆ ಸ್ಪಂದಿಸಲು ಪ್ರಯತ್ನ ಮಾಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸುಧಾಕರ ಅಮೀನ್, ವಿನೋದ್ ಶೆಟ್ಟಿ, ಸುಧಾಕರ್ ಶೆಟ್ಟಿ, ಸುಕುಮಾರ್ ಪೂಜಾರಿ, ಪ್ರವೀಣ್ ಶೆಟ್ಟಿ, ಅಶೋಕ್ ಶೆಟ್ಟಿ, ನವೀನ್ ಪಾತ್ರಿ ಕುಂಜಿಬೆಟ್ಟು, ನರಸಿಂಹ ಪರವ, ಉಗ್ಗಪ್ಪ ಪರವ, ಪಾಂಡುರಂಗ ಪಾನರ, ಸುಧಾಕರ್ ಪಾಣಾರ, ರಂಗ ಪಾಣಾರ, ಸಮಿತ ಶೆಟ್ಟಿ, ಯತಿನ್ ಶೆಟ್ಟಿ, ಸದಾನಂದ ಸಾಲಿಯಾನ್, ಸಚಿನ್ ಸಾಲಿಯಾನ್, ಯತಿನ್ ಶೆಟ್ಟಿ, ಸದಸ್ಯರು ಉಪಸ್ಥಿತಿಯಿದ್ದರು.

ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ

Thumbnail
Posted On: 10 Jan 2022, 08:11 PM

ಉಡುಪಿ : ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಸಹ ಕೋವಿಡ್ -19 ಮುನ್ನೆಚ್ಚರಿಕಾ ಡೋಸ್ ತಪ್ಪದೇ ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಸಹಯೋಗದಲ್ಲಿ, ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇತ್ತೀಚೆಗೆ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿದ್ದು, ಇದನ್ನು ನಿಭಾಯಿಸಲು ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರ ಸೇವೆಯು ಅತ್ಯಂತ ಅಗತ್ಯವಾಗಿದ್ದು, ಇವರಿಗೆ ಕೋವಿಡ್ನಿಂದ ರಕ್ಷಣೆ ನೀಡಲು ಮತ್ತು 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರಿಗೆ ಕೋವಿಡ್ನಿಂದ ಹೆಚ್ಚಿನ ಅಪಾಯವಾಗುವುದನ್ನು ತಪ್ಪಿಸಲು ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಜಿಲ್ಲೆಯಲ್ಲಿ ಈಗಾಗಲೇ ಪ್ರಥಮ ಮತ್ತು ದ್ವಿತೀಯ ಡೋಸ್ ಲಸಿಕೆ ನೀಡುವಲ್ಲಿ ಅತ್ಯಂತ ಹೆಚ್ಚಿನ ಪ್ರಗತಿ ಆಗಿದ್ದು, ಮುನ್ನೆಚ್ಚರಿಕಾ ಡೋಸ್ ನೀಡುವಲ್ಲಿ ಸಹ ಸಂಪೂರ್ಣ ಗುರಿ ಸಾಧಿಸಲು ಯೋಜನೆ ರೂಪಿಸಲಾಗಿದೆ ಎಂದರು. ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ಜಿಲ್ಲೆಯಲ್ಲಿ ಈ ಹಿಂದಿನ ಕೋವಿಡ್ ಮೊದಲನೇ ಮತ್ತು ಎರಡನೇ ಅಲೆಯನ್ನು ಸಮರ್ಥವಾಗಿ ಎದುರಿಸಲಾಗಿದೆ. ಪ್ರಸ್ತುತ 3 ನೇ ಅಲೆಯು ಹರಡಲಾರಂಭಿಸಿದ್ದು, ಪ್ರತಿಯೊಬ್ಬರೂ ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಸೂಚಿಸುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ, ಜಿಲ್ಲಾ ಕೋವಿಡ್ ಲಸಿಕಾ ಉಸ್ತುವಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಜಿಲ್ಲಾಸ್ಪತ್ರೆಯ ವೈದ್ಯರಾದ ಡಾ.ಚಂದ್ರಶೇಖರ ಅಡಿಗ, ಡಾ.ವೇಣುಗೋಪಾಲ, ಮತ್ತಿತರರು ಉಪಸ್ಥಿತರಿದ್ದರು.

ಬೋವಿ ಜನಾಂಗಕ್ಕೆ ಪ. ಜಾತಿ ಪ್ರಮಾಣಪತ್ರ ನೀಡುವ ಬಗ್ಗೆ ಪರಿಶೀಲನೆ : ಸಚಿವ ಕೋಟ

Thumbnail
Posted On: 10 Jan 2022, 08:05 PM

ಉಡುಪಿ: ಜಿಲ್ಲೆಯಲ್ಲಿನ ಬೋವಿ ಜನಾಂಗದವರಿಗೆ ಪ.ಜಾತಿ ಪ್ರಮಾಣ ಪತ್ರ ನೀಡಲು ಇರುವ ಸಮಸ್ಯೆಗಳ ಬಗ್ಗೆ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳ ಸಭೆಯು, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಬೋವಿ ಜನಾಂಗಕ್ಕೆ ಪ.ಜಾತಿ ಪ್ರಮಾಣ ಪತ್ರ ನೀಡಲು ಪ್ರಸ್ತುತ ಇರುವ ಸಮಸ್ಯೆಗಳು ಮತ್ತು ಗೊಂದಲಗಳು ಹಾಗೂ ಇವುಗಳ ನಿವಾರಣೆಗೆ ಅನುಸರಿಸಬಹುದಾದ ಮಾರ್ಗಗಳ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈ ಪ್ರಸ್ತಾವನೆಯನ್ನು ಪರಿಶೀಲಿಸಿ, ಈ ಜನಾಂಗಕ್ಕೆ ಪ.ವರ್ಗದ ಪ್ರಮಾಣಪತ್ರ ನೀಡುವ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ಪ್ರಮಾಣಪತ್ರ ನೀಡಲು ಪರಿಗಣಿಸಬಹುದಾದ ಅಂಶಗಳ ಕುರಿತು ಸರ್ಕಾರದಿಂದ ಸೂಕ್ತ ನಿರ್ದೇಶನ ನೀಡಲಾಗುವುದು ಎಂದರು. ಸಭೆಯಲ್ಲಿ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್, ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ರಾಜ್ಯ ಎಸ್.ಸಿ.ಪಿ -ಟಿ.ಎಸ್.ಪಿ ಕೋಶದ ನಿರ್ದೇಶಕಿ ಊರ್ಮಿಳಾ, ಹಿಂದುಳಿದ ವರ್ಗಗಳ ಇಲಾಖೆಯ ಅಪರ ನಿರ್ದೇಶಕ ಪ್ರದೀಪ್, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಅನಿತಾ ಮಡ್ಲೂರು ಹಾಗೂ ಜಿಲ್ಲೆಯ ಎಲ್ಲಾ ತಹಸೀಲ್ದಾರ್ಗಳು ಉಪಸ್ಥಿತರಿದ್ದರು.

ಸಾಲದ ಹೊರೆ : ಯುವಕ ಆತ್ಮಹತ್ಯೆ

Thumbnail
Posted On: 10 Jan 2022, 04:59 PM

ಮುಲ್ಕಿ : ಸಾಲದ ಹೊರೆಯಿಂದ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಯುವಕನೋರ್ವ ಕೆಲಸದ ಸಂದರ್ಭ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸನ್ ರೈಸ್ ಕಾರ್ಪೋರೇಷನ್ ಕುಳಾಯಿ ಇಲ್ಲಿ ಉದ್ಯೋಗಿಯಾಗಿದ್ದ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಸುಶಾಂತ್ (26) ಎಂಬಾತ ಆನ್ ಲೈನ್ ಸಾಲದ ಹೊರೆಯಿಂದ ಅದನ್ನು ಪಾವತಿಸಲಾಗದೆ ಕೆಲಸದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಯವಿಟ್ಟು ಕ್ಷಮಿಸಿ ನನಗೆ ಯಾರ ನಂಬಿಕೆಯನ್ನು ಉಳಿಸಲಾಗಲಿಲ್ಲ. ಹಣದ ವಿಷಯದಲ್ಲಿ ತೊಂದರೆಯಾಗಿದೆ. ಆನ್ ಲೈನ್ ಸಾಲದವರು ಕರೆ ಮಾಡಿದರೆ ನಿಧನನಾಗಿದ್ದಾನೆ ಎಂದು ತಿಳಿಸಿ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಶರಣಾಗಿದ್ದಾನೆ.

ದೊಡ್ಡನಗುಡ್ಡೆ : ಪಂಚ ಜುಮಾದಿ ದೈವಸ್ಥಾನದ ವಠಾರದ ಸ್ವಚ್ಛತಾ ಕಾರ್ಯಕ್ರಮ

Thumbnail
Posted On: 09 Jan 2022, 10:13 PM

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಉಡುಪಿ ಮಣಿಪಾಲ ವಲಯ, ಶಿವಳ್ಳಿ ಎ ಕಾರ್ಯಕ್ಷೇತ್ರ, ಪ್ರಜ್ಞಾ ಒಕ್ಕೂಟದ ವತಿಯಿಂದ ದೊಡ್ಡನಗುಡ್ಡೆ ಪಂಚ ಜುಮಾದಿ ದೈವಸ್ಥಾನದ ವಠಾರದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಪಂಚ ಜುಮಾದಿ ದೈವಸ್ಥಾನದ ಗುರಿಕಾರರು ನಿತಿನ್ ಪೂಜಾರಿ, ಹಾಗೂ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ.) ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಹಾಗೂ ಪಂಚ ಜುಮಾದಿ ದೈವಸ್ಥಾನದ ಪ್ರಧಾನ ಅರ್ಚಕರಾದ ವಿನೋದ್ ಶೆಟ್ಟಿ ಹಾಗೂ ದೈವಸ್ಥಾನದ ಟ್ರಸ್ಟಿ ಸದಸ್ಯರಾದ ನಿತ್ಯಾನಂದ ಜೋಗಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಜ್ಯೋತಿ ಹರಿಣಾಕ್ಷಿ, ಸೇವಪ್ರತಿನಿಧಿ ಪ್ರೀತಿ ಉಪಸ್ಥಿತರಿದ್ದರು.

ಇನ್ನಂಜೆ : ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Thumbnail
Posted On: 09 Jan 2022, 10:05 PM

ಕಾಪು : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್, ಸರಕಾರಿ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ, ಯುವತಿ ಮಂಡಲ (ರಿ.) ಇನ್ನಂಜೆ, ಬಿಲ್ಲವ ಸಂಘ (ರಿ.)ಇನ್ನಂಜೆ , ಜೆಸಿಐ ಶಂಕರಪುರ, ರಿಕ್ಷಾ ಚಾಲಕರು ಮತ್ತು ಮಾಲಕರು ಶಂಕರಪುರ, ಯುವ ಸೇನಾ ಮಡುಂಬು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಇನ್ನಂಜೆಯ ದಾಸ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ರಾಘವೇಂದ್ರ ರಾವ್ ಎರ್ಮಾಳ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ಗೆಸ್ಟ್ ರಿಲೇಷನ್ ಮ್ಯಾನೇಜರ್ ರಾಘವೇಂದ್ರ ನಾಯಕ್ ಅಜೆಕಾರ್ ರಕ್ತದಾನದ ಮಹತ್ವ ಮತ್ತು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಸರಕಾರಿ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ ಇದರ ಬ್ಲಡ್ ಬ್ಯಾಂಕ್ ಮೆಡಿಕಲ್ ಆಫೀಸರ್ ಡಾ.ವೀಣಾ ರಕ್ತದಾನದ ಬಗೆಗಿನ ತಪ್ಪು ಕಲ್ಪನೆಗಳ ಬಗ್ಗೆ ತಿಳಿಸಿದರು. ಯುವತಿ ಮಂಡಲದ ಗೌರವ ಸಲಹೆಗಾರರಾದ ಶ್ವೇತ ಎಲ್ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸತೀಶ್ ಎನ್. ಪೂಜಾರಿ, ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ಸೇಲ್ಸ್ ಮ್ಯಾನೇಜರ್ ಆಗಿರುವ ನಿತಿನ್ ಶೇಟ್, ಬಿಲ್ಲವ ಸಂಘ ಇನ್ನಂಜೆ ಅಧ್ಯಕ್ಷರಾದ ಸದಾಶಿವ ಪೂಜಾರಿ, ಶಂಕರಪುರ ರಿಕ್ಷಾ ಚಾಲಕರು ಮತ್ತು ಮಾಲಕರು ಸಂಘದ ಅಧ್ಯಕ್ಷರಾದ ಕರುಣಾಕರ ದೇವಾಡಿಗ, ಜೆಸಿಐ ಶಂಕರಪುರ ಜಾಸ್ಮಿನ್ ಅಧ್ಯಕ್ಷರಾದ ಜಗದೀಶ್ ಅಮೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವತಿ ಮಂಡಲದ ಅಧ್ಯಕ್ಷರಾದ ಆಶಾ ನಾಯಕ್ ಸ್ವಾಗತಿಸಿ, ಸ್ಥಾಪಕಾಧ್ಯಕ್ಷರಾದ ಸುಮಲತಾ ಕಾರ್ಯಕ್ರಮ ನಿರೂಪಿಸಿ, ಲಕ್ಷ್ಮೀ ನಾಯಕ್ ವಂದಿಸಿದರು.

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ

Thumbnail
Posted On: 08 Jan 2022, 07:35 PM

ಶಿರ್ವ: ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಜನವರಿ 13ರಂದು ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್)ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ನಡೆಸಲು ಉದ್ದೇಶಿಸಿದೆ. ಈಗಾಗಲೇ ಬಿಸಿಎ, ಬಿಎಸ್ಸಿ (ಸಿ. ಎಸ್),ಬಿಇ( ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ( ಸಿ ಎಸ್),ಎಂಎಸ್ಸಿ, ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪೂರ್ವಹ್ನ 9.00 ಗಂಟೆಗೆ ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಆಧಾರ್ ಕಾರ್ಡ್, ಮೂಲ ಅಂಕಪಟ್ಟಿ, ಪದವಿ ಪ್ರಮಾಣ ಪತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7975230201ಗೆ ಸಂಪರ್ಕಿಸಬಹುದು ಮತ್ತು ಈ ಲಿಂಕಿನ ಮೂಲಕ CLICK HERE.. ನೋಂದಾಯಿಸಿಕೊಳ್ಳಬಹುದು ಎಂದು ಪ್ರಾಂಶುಪಾಲರು ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ದ.ಕ ಮತ್ತು ಉಡುಪಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಯಲ್ಲಿ ಸಿಗಲಿದೆ ಕುಚ್ಚಲಕ್ಕಿ‌

Thumbnail
Posted On: 08 Jan 2022, 06:00 PM

ಮಂಗಳೂರು : ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರು ಪಡಿತರದ ಮೂಲಕ ಕುಚ್ಚಲ್ಲಕ್ಕಿಯನ್ನು ವಿತರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಬೇಡಿಕೆಯನ್ನು ಸಲ್ಲಿಸಿದ್ದರು. ಈ ಕುರಿತಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು, ಕೇಂದ್ರದ ಸದರಿ ಇಲಾಖಾ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು ಮೇಲ್ಕಂಡ ಬೇಡಿಕೆಯನ್ನು ಅನುಮೋದಿಸುವಂತೆ ಕೋರಿದ್ದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಮನವಿಯನ್ನು ಪರಿಗಣಿಸಿದ ಪಿಯೂಷ್ ಗೋಯಲ್ ಅವರು ಜನವರಿ 06ರಂದು ಕೇಂದ್ರ ಸಚಿವೆ, ಶೋಭಾ ಕರಂದ್ಲಾಜೆಯವರಿಗೆ ಪತ್ರ ಬರೆದು, ಮೇಲ್ಕಾಣಿಸಿದ ಕುಚ್ಚಲಕ್ಕಿ ಪ್ರಭೇಧಗಳನ್ನು MSP ಮೂಲಕ ಖರೀದಿ ಮಾಡಿ ಪಡಿತರದ ಮೂಲಕ ವಿತರಿಸಲು ರಾಜ್ಯ ಸರಕಾರಕ್ಕೆ ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ. ಕೇಂದ್ರದ ಈ ಅನುಮತಿಯೊಂದಿಗೆ ಉಡುಪಿ-ದಕ್ಷಿಣ ಕನ್ನಡದ ರೈತರ ಕೃಷಿ ಉತ್ಪಾದನೆಗೆ ಇನ್ನು ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಂತಾಗಿದೆ. ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯಾದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸುವ ಬೇಡಿಕೆಗೆ ಪುಷ್ಟಿ ಸಿಕ್ಕಿದೆ. ಸ್ಥಳೀಯ ರೈತರ ಹಾಗೂ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದಂತಾಗಿದೆ.

ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ, ಶಂಕರಪುರ : 36ನೇ ವರ್ಷದ ವಾರ್ಷಿಕ ಮಹಾಪೂಜೆ

Thumbnail
Posted On: 08 Jan 2022, 02:59 PM

ಕಾಪು : ಚಂದ್ರಹಾಸ ಗುರುಸ್ವಾಮಿಯವರ ಮಾರ್ಗದರ್ಶನದಲ್ಲಿ ಇಂದು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ, ಶಂಕರಪುರದಲ್ಲಿ 36ನೇ ವರ್ಷದ ವಾರ್ಷಿಕ ಮಹಾಪೂಜೆಯು ಜರಗಿತು. ‌ ಇದರ ಪ್ರಯುಕ್ತ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಅನ್ನಸಂತರ್ಪಣೆ ಹಾಗೂ ರಾತ್ರಿ ಗಂಟೆ 8.00ಕ್ಕೆ ಶಂಕರಪುರ ಅಯ್ಯಪ್ಪ ಶಿಬಿರದಲ್ಲಿ ನಡೆಯುವ ಪಡಿಪೂಜೆ ಮತ್ತು ಮಹಾಪೂಜೆ ಜರಗಲಿದೆ ಎಂದು ಶ್ರೀ ಅಯ್ಯಪ್ಪ ಭಕ್ತವೃಂದ ಶಂಕರಪುರ – ಮುಂಬಯಿ ಪ್ರಕಟನೆಯಲ್ಲಿ ತಿಳಿಸಿದರು.