Updated News From Kaup
ಮುದರಂಗಡಿ : ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ವತಿಯಿಂದ ಕೊರೊನ ವ್ಯಾಕ್ಸಿನೇಶನ್ ಅಭಿಯಾನದ ಕಾರ್ಯಕರ್ತರಿಗೆ ಗೌರವಾರ್ಪಣೆ
Posted On: 09-11-2021 09:07PM
ಕಾಪು : ಭಾರತೀಯ ಜನತಾ ಪಾರ್ಟಿ ಮುದರಂಗಡಿ ಶಕ್ತಿ ಕೇಂದ್ರ ವತಿಯಿಂದ ಕೊರೊನ ವ್ಯಾಕ್ಸಿನೇಶನ್ ಅಭಿಯಾನದ ಯಶಸ್ಸಿನ ಕಾರಣಕರ್ತರಾದ ಆಶಾ ಕಾರ್ಯಕರ್ತರು, ದಾದಿಯರು ಹಾಗೂ ವೈದ್ಯಾಧಿಕಾರಿಗಳಿಗೆ ಗೌರವಾರ್ಪಣೆ ಜರಗಿತು.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಯುವ ಮತದಾರರ ಸೇರ್ಪಡೆಗೆ ಅಭಿಯಾನ: ಕೂರ್ಮಾರಾವ್ ಎಂ.
Posted On: 09-11-2021 08:53PM
ಉಡುಪಿ : ಜನವರಿ 1, 2022 ನ್ನು ಅರ್ಹತಾ ದಿನವನ್ನಾಗಿಟ್ಟುಕೊಂಡು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು, ಈ ಅವಧಿಯಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಜಿಲ್ಲೆಯ ಎಲ್ಲಾ ಕಾಲೇಜುಗಳ ಮೂಲಕ ಅಭಿಯಾನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಹಿಂದು ಜಾಗರಣ ವೇದಿಕೆ ಬೆಳಪು ಪಯ್ಯಾರು ಘಟಕದಿಂದ ಪ್ರಥಮ ವರ್ಷದ ಗೋಪೂಜೆ, ವಾಹನ ಪೂಜೆ
Posted On: 09-11-2021 08:43PM
ಕಾಪು : ಹಿಂದು ಜಾಗರಣ ವೇದಿಕೆ ಕಾಪು ತಾಲ್ಲೂಕಿನ ಬೆಳಪು-ಪಯ್ಯಾರ್ ಘಟಕದ ವತಿಯಿಂದ ಇಂದು ಪಯ್ಯಾರು ಮೈದಾನದಲ್ಲಿ ಸಾರ್ವಜನಿಕ ಗೋಪೂಜೆ ಮತ್ತು ವಾಹನ ಪೂಜೆ ಕಾರ್ಯಕ್ರಮ ನಡೆಯಿತು.
ಪುಟಾಣಿ ಮಕ್ಕಳಿಗೆ ಚಾಕೋಲೇಟ್, ಬಲೂನು ನೀಡಿ ಸ್ವಾಗತಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
Posted On: 08-11-2021 06:38PM
ಉಡುಪಿ : ಸುಮಾರು ಒಂದೂವರೆ ವರ್ಷಗಳ ನಂತರ ಜಿಲ್ಲೆಯಾದ್ಯಂತ ಇಂದು ಆರಂಭವಾದ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ, ಪುಟಾಣಿ ಮಕ್ಕಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಚಾಕೋಲೇಟ್, ಬಲೂನ್, ಗುಲಾಬಿ ಹೂ ನೀಡಿ ಪ್ರೀತಿಯಿಂದ ಸ್ವಾಗತಿಸಿದರು. ಉಡುಪಿ ನಗರಸಭಾ ವ್ಯಾಪ್ತಿಯ ಕಡಿಯಾಳಿ ಅಂಗನವಾಡಿ ಕೇಂದ್ರದಲ್ಲಿ ಬಲೂನು, ತಳಿರು ತೋರಣಗಳಿಂದ ಸಿದ್ಧಪಡಿಸಿದ್ದ ಅಂಗನವಾಡಿ ಕೇಂದ್ರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಭಾಗವಹಿಸಿದರು.
ಮೂಡಬೆಟ್ಟು ಸರ್ಕಾರಿಗುಡ್ಡೆ ಅಂಗನವಾಡಿ ಕೇಂದ್ರ ಪುನರಾರಂಭ - ಪುಟಾಣಿಗಳಿಗೆ ಸ್ವಾಗತ ಕೋರಿದ ಪಂಚಾಯತ್ ಸದಸ್ಯರು
Posted On: 08-11-2021 06:15PM
ಕಟಪಾಡಿ : ಕೋವಿಡ್ ನಿಂದ ನಿಂತು ಹೋಗಿದ್ದ ಅಂಗನವಾಡಿ ಕೇಂದ್ರಗಳು ಮತ್ತೆ ಪುನರಾಂಭ ಗೊಂಡಿದ್ದು ವಿಶೇಷ ರೀತಿಯಲ್ಲಿ ಮೂಡಬೆಟ್ಟು ಸರ್ಕಾರಿಗುಡ್ಡೆಯ ಅಂಗನವಾಡಿ ಕೇಂದ್ರವನ್ನು ಸ್ಯಾನಿಟೈಸ್ ಮಾಡಿ ಶಾಲೆಯನ್ನು ವಿವಿಧ ರೀತಿಯಲ್ಲಿ ಅಲಂಕಾರ ಮಾಡಿ ಮಕ್ಕಳಿಗೆ ಆರತಿ ಬೆಳಗಿಸಿ ಗುಲಾಬಿ ಹೂವು ಕೊಟ್ಟು ಹೂಗಳಿಂದ ವಿಶೇಷ ರೀತಿಯಲ್ಲಿ ಕಟಪಾಡಿ ಗ್ರಾಮ ಪಂಚಾಯತ್ ನ ವಾರ್ಡಿನ ಸದಸ್ಯರು ಸ್ವಾಗತಿಸಿದರು.
ಕಾಶೀ ಸಂತಾನ ಟ್ರಸ್ಟ್ ನೂತನ ಕಚೇರಿ ಉದ್ಘಾಟನೆ, ವಿದ್ಯಾರ್ಥಿ ವೇತನ, ಸಹಾಯಧನ ವಿತರಣೆ
Posted On: 07-11-2021 08:19PM
ಅದಮಾರು: ಎಲ್ಲೂರು ಕಾಶೀ ಸಂತಾನ ಟ್ರಸ್ಟ್ ನ ನೂತನ ಕಚೇರಿ ಆರಂಭ ಹಾಗೂ ಒಂದೂವರೆ ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ - ಸಹಾಯ ಧನ ವಿತರಿಸುವ ಕಾರ್ಯಕ್ರಮವು ಅದಮಾರಿನ ಸರ್ವೋದಯ ಸಮುದಾಯ ಭವನದಲ್ಲಿ ನಡೆಯಿತು.
ಕಟಪಾಡಿಯ ಜಾದುಗಾರ ಬಾಲಪ್ರತಿಭೆ ಪ್ರಥಮ್ ಕಾಮತ್ ಗೆ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ - 2021
Posted On: 07-11-2021 05:48PM
ಕಟಪಾಡಿ : ಕಾರ್ಕಳ ತಾಲೂಕು ಅಜೆಕಾರು ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಕೊಡಮಾಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ 2021 ಪ್ರಶಸ್ತಿಗೆ ಕಟಪಾಡಿಯ ಜಾದುಗಾರ ಬಾಲಪ್ರತಿಭೆ ಕಾಮತ್ ಆಯ್ಕೆಯಾಗಿರುತ್ತಾರೆ.
ಸಾಧನಾಶ್ರೀ ಪ್ರಶಸ್ತಿ ಪುರಸ್ಕೃತರಾದ ರಾಘವೇಂದ್ರ ಪ್ರಭು ಕವಾ೯ಲು
Posted On: 07-11-2021 02:12PM
ಉಡುಪಿ, ನ.7 : ಜೇಸಿಐ ಭಾರತ ವಲಯ 15 ರ ವ್ಯವಹಾರ ಸಮ್ಮೇಳನ 'ಉನ್ನತಿ' ಕುಂದಾಪುರ ಸಹನಾ ಕನ್ವೆಕ್ಷನ್ ನಲ್ಲಿ ಜರಗಿತು.
ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ
Posted On: 07-11-2021 12:58PM
ಬೆಂಗಳೂರು : ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
