Updated News From Kaup

ರಾಜ್ಯದ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯ ಉದ್ಯೋಗ : ಸಚಿವ ವಿ ಸುನೀಲ್ ಕುಮಾರ್

Posted On: 01-11-2021 07:10PM

ಉಡುಪಿ : ಸರೋಜಿನಿ ಮಹಿಷಿ ವರದಿಯಂತೆ ರಾಜ್ಯದಲ್ಲಿನ ಐಟಿ ಬಿಟಿ ಸೇರಿದಂತೆ ಎಲ್ಲಾ ಖಾಸಗಿ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ನೀಡುವ ಕುರಿತಂತೆ ,ಕಾನೂನು ಚೌಕಟ್ಟಿನಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದು ರಾಜ್ಯದ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ವಿ ಸುನೀಲ್ ಕುಮಾರ್ ಹೇಳಿದರು. ಅವರು ಇಂದು ಅಜ್ಜರಕಾಡು ಮಹಾತ್ಮಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಸೈಬ್ರಕಟ್ಟೆ ರೋಟರಿ ಕ್ಲಬ್ : ಮಹಾತ್ಮಾ ಗಾಂಧಿ ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Posted On: 01-11-2021 07:03PM

ಉಡುಪಿ : ಸೈಬ್ರಕಟ್ಟೆ ರೋಟರಿ ಮತ್ತು ಇಂಟರ್ಯಾಕ್ಟ್ ಕ್ಲಬ್ MGHS ಸೈಬ್ರಕಟ್ಟೆ ವತಿಯಿಂದ ಜಂಟಿಯಾಗಿ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯಲ್ಲಿ ತಾಯಿ ಭುವನೇಶ್ವರಿ ದೇವಿಯ ಚಿತ್ರಕ್ಕೆ ಪುಷ್ಪ ಅರ್ಚನೆಯ ಮೂಲಕ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.

ಮುತ್ತೂಟ್ ಫೈನಾನ್ಸ್ ವತಿಯಿಂದ ಉಳ್ಳಾಲ ಬೀಚ್ ನಲ್ಲಿ ಪ್ಲಾಸ್ಟಿಕ್ ಕಲೆಕ್ಷನ್ ಡ್ರೈವ್

Posted On: 01-11-2021 06:49PM

ಮಂಗಳೂರು : ಮುತ್ತೂಟ್ ಫೈನಾನ್ಸ್ ತನ್ನ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದಡಿ ಕರ್ನಾಟಕ ರಾಜ್ಯೋತ್ಸವದ ಸಲುವಾಗಿ ಉಳ್ಳಾಲ ಬೀಚ್ ನಲ್ಲಿ ಪ್ಲಾಸ್ಟಿಕ್ ಕಲೆಕ್ಷನ್ ಡ್ರೈವ್ ಜರಗಿತು.

ಎಲ್ಲೂರು :ಕೆ.ಎಲ್.ಕುಂಡಂತಾಯರ ಸೊಡರ ಹಬ್ಬ ಪುಸ್ತಕ ಬಿಡುಗಡೆ

Posted On: 31-10-2021 11:01PM

ಕಾಪು : ಎಲ್ಲೂರು ಗ್ರಾಮದ ಕುಂಜೂರು ಶ್ರೀ ದುರ್ಗಾ ದೇವಸ್ಥಾನದಲ್ಲಿ ಕೆ.ಎಲ್.ಕುಂಡಂತಾಯರ ಪುಸ್ತಕ 'ಸೊಡರ ಹಬ್ಬ' ಬಿಡುಗಡೆಗೊಂಡಿತು.

ಕ್ರಿಮಿನಲ್ ಪ್ರಕರಣದ ಆರೋಪಿ ತಪ್ಪಿಸಿಕೊಳ್ಳಲು ಯತ್ನ ; ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ನ್ಯಾಯಾಂಗ ಬಂಧನ

Posted On: 31-10-2021 10:53PM

ಮೂಡಬಿದ್ರಿ : ಕ್ರಿಮಿನಲ್ ಪ್ರಕರಣ ಒಂದರಲ್ಲಿ ಬಾಂಬೆ ಪೊಲೀಸರಿಗೆ ಬೇಕಾಗಿದ್ದು, ತಲೆಮರೆಸಿಕೊಂಡಿದ್ದ ಮೂಡಬಿದ್ರೆ ಪೊಲೀಸ್ ಠಾಣೆ ಸರಹದ್ದಿನ ಕೊಟೆಬಾಗಿಲು ನಿವಾಸಿ ಪ್ರವೀಣ್ ಕುಮಾರ್ (46 ವರ್ಷ) ಎಂಬಾತನನ್ನು ಭೂಗತ ಪಾತಕಿಗಳೊಂದಿಗೆ ನಂಟು ಹೊಂದಿರುವ ಹಾಗೂ ತನ್ನೊಂದಿಗೆ ಮಾರಕಾಸ್ತ್ರಗಳನ್ನು ಇಟ್ಟುಕೊಂಡಿರುವ ಸಾಧ್ಯತೆಗಳು ಇರುವ ಬಗ್ಗೆ ಮಾಹಿತಿ ಇದ್ದ ಮೇರೆಗೆ ಆತನನ್ನು ವಿಚಾರಣೆಗಾಗಿ ಠಾಣೆಗೆ ಕರೆತರುವ ಸಲುವಾಗಿ ಇಬ್ಬರು ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನೇಮಿಸಿ ಕಳುಹಿಸಿ ಕೊಡಲಾಗಿತ್ತು.

ಕಾಪು : ಟೀಮ್ ಮೋದಿಯಿಂದ ಪುನೀತ್ ರಾಜಕುಮಾರ್ ರವರಿಗೆ ಭಾವಪೂರ್ಣ ಶ್ರದ್ದಾಂಜಲಿ

Posted On: 31-10-2021 10:43PM

ಕಾಪು : ಇಲ್ಲಿನ ಟೀಮ್ ಮೋದಿ ವತಿಯಿಂದ ನಟ ಪುನೀತ್ ರಾಜಕುಮಾರ್ ರವರಿಗೆ ಸಾರ್ವಜನಿಕವಾಗಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ನೂತನ ಆಡಳಿತ ಮೊಕ್ತೇಸರರಾಗಿ ವೇದಮೂರ್ತಿ ಕೇಂಜ ಶ್ರೀಧರ ತಂತ್ರಿ

Posted On: 31-10-2021 10:33PM

ಕಾಪು : ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ನ ಮಾಜಿ ಸದಸ್ಯರು, ಇತಿಹಾಸ ಪ್ರಸಿದ್ಧ ಎಲ್ಲೂರು ಸೀಮೆಯ ಆಗಮ ಪಂಡಿತರಾದ ವೇದಮೂರ್ತಿ ಕೇಂಜ ಶ್ರೀಧರ ತಂತ್ರಿಯವರು ಇತಿಹಾಸ ಪ್ರಸಿದ್ಧ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ನೂತನ ಆಡಳಿತ ಮೊಕ್ತೇಸರರಾಗಿದ್ದಾರೆ.

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಣೇಶ್ ಪಂಜಿಮಾರ್ : ಕಾಪು ಕುಲಾಲ ಸಂಘ ಹರ್ಷ

Posted On: 31-10-2021 06:46PM

ಕಾಪು : ಚಿತ್ರಕಲೆಯ ಮೂಲಕ ಸಾಧನೆಗೈದ ವಿಕಲಾಂಗ ಪ್ರತಿಭೆ ಗಣೇಶ್ ಪಂಜಿಮಾರ್ ಅವರಿಗೆ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಕಾಪು ಭಾಗದ ಸಮಸ್ತ ಕುಲಾಲರಿಗೆ ಖುಷಿ ತಂದು ಕೊಟ್ಟಿದೆ.

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ : ತಾಲೂಕು ಅಭ್ಯಾಸ ವರ್ಗ

Posted On: 31-10-2021 06:40PM

ಕಾರ್ಕಳ : ಇಲ್ಲಿನ ತಾಲೂಕು ಅಭ್ಯಾಸ ವರ್ಗವು ಭುವನೇಂದ್ರ ಪ್ರೌಢ ಶಾಲೆಯಲ್ಲಿ ಜರಗಿದ್ದು ಉದ್ಘಾಟನೆಯನ್ನು ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ ನೆರವೇರಿಸಿದರು.

ಕಾಪು ವಿಧಾನಸಭೆ ಕ್ಷೇತ್ರದಲ್ಲಿ ಮಹಿಳೆಯರಿಂದ ಜಾತ್ಯತೀತ ಜನತಾದಳ ಸೇರ್ಪಡೆ

Posted On: 31-10-2021 06:32PM

ಕಾಪು : ಉಡುಪಿ ಜಿಲ್ಲೆಯ ಕಾಪು ವಿಧಾನಸಭೆ ಕ್ಷೇತ್ರದ ಮಹಿಳಾ ಜನತಾದಳ ಜಿಲ್ಲಾ ಕಾರ್ಯಾಧ್ಯಕ್ಷರಾದ ತಬಸ್ಸುಮ್, ಕಾಪು ಜೆಡಿಎಸ್ ಮಹಿಳಾ ಕಾರ್ಯಾಧ್ಯಕ್ಷರಾದ ಸನಾ ಮಲ್ಲಾರು, ಉಪಾಧ್ಯಕ್ಷರಾದ ಅಕ್ಷತಾರವರ ಮುಂದಾಳತ್ವದಲ್ಲಿ ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅನೇಕ ಮಹಿಳೆಯರು ಪಕ್ಷಕ್ಕೆ ಸೇರ್ಪಡೆಗೊಂಡರು.