Updated News From Kaup
ಕಾಪು : ಸ್ವರ್ಣ ಬ್ಯೂಟಿ ಪಾರ್ಲರ್ ಮತ್ತು ಕೋಚಿಂಗ್ ಕ್ಲಾಸ್ ಶುಭಾರಂಭ
Posted On: 31-10-2021 03:18PM
ಕಾಪುವಿನ ಬಿಲ್ಲವರ ಸಹಾಯಕ ಸಂಘದ ನೂತನ ಕಟ್ಟಡದ ಒಂದನೇ ಮಹಡಿಯಲ್ಲಿ ಸರಿತಾ ವಿ ಸಾಲ್ಯಾನ್, ಪೊಲಿಪು ಮಾಲೀಕತ್ವದ ಸ್ವರ್ಣ ಬ್ಯೂಟಿ ಪಾರ್ಲರ್ ಮತ್ತು ಕೋಚಿಂಗ್ ಕ್ಲಾಸ್ ಇಂದು ಶುಭಾರಂಭಗೊಂಡಿತು.
ನ್ಯೂನತೆಯ ಮೆಟ್ಟಿ ನಿಂತ ಸಾಧಕ ಚಿತ್ರ ಕಲಾವಿದ ಗಣೇಶ್ ಪಂಜಿಮಾರುಗೆ ಒಲಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
Posted On: 30-10-2021 09:30PM
ಕಾಪು : ಮೂಳೆಗಳ ತೀವ್ರ ದುರ್ಬಲತೆಯ ರೋಗದಿಂದ ಬಳಲುತ್ತಿದ್ದರೂ ತನ್ನ ಹವ್ಯಾಸವಾದ ಚಿತ್ರಕಲೆಯಲ್ಲಿ ತಾನು ಸಾಧಿಸಬೇಕೆಂಬ ಅಚಲ ವಿಶ್ವಾಸದ ಮೂಲಕ ಸಾಧಿಸಿ ತೋರಿಸಿದ ವ್ಯಕ್ತಿ ಗಣೇಶ್ ಪಂಜಿಮಾರು.
ಸಾವಯವ, ಪರಿಸರಸ್ನೇಹಿ ಉತ್ಪನ್ನಗಳಿಗೆ ಮಾರುಕಟ್ಟೆ, ರೈತ ಸಬಲೀಕರಣ, ಉದ್ಯೋಗ ಸೃಷ್ಟಿ, ತ್ಯಾಜ್ಯದಿಂದ ಜೈವಿಕ ಇಂಧನ ಕ್ರಾಂತಿ : ಎಮ್ ಸಿ ಎಲ್ ಸಂಸ್ಥೆಯ ಗುರಿ
Posted On: 29-10-2021 09:19PM
ಕಾಪು : ಮೀರಾಕ್ಲೀನ್ ಫ್ಯುಯೆಲ್ ಲಿಮಿಟೆಡ್ ಸಂಸ್ಥೆಯು ದೇಶದ ಪ್ರತಿ ತಾಲೂಕಿನಲ್ಲಿ ನವೀಕರಿಸಬಹುದಾದ ಸಾವಯವ ಇಂಧನ ತಯಾರಿಕಾ ಘಟಕಗಳ ಸ್ಥಾಪನೆಗೆ ಒತ್ತು ನೀಡಿ ಖನಿಜ ಇಂಧನಕ್ಕೆ ಪರ್ಯಾಯ ವ್ಯವಸ್ಥೆಯಾಗಿ ಜೈವಿಕ ಇಂಧನದ ತಯಾರಿಯೊಂದಿಗೆ, ಆಹಾರೇತರ ಸಾಮಗ್ರಿಗಳಿಂದ ಇಂಧನ, ಗೊಬ್ಬರ ತಯಾರಿ ನಮ್ಮ ಸುತ್ತಮುತ್ತಲಿರುವ ಮನೆ ತ್ಯಾಜ್ಯಗಳನ್ನು ಇಂಧನ ಘಟಕದಲ್ಲಿ ಕಚ್ಚಾ ವಸ್ತುವಾಗಿ ಉಪಯೋಗಿಸಿ ಜನರಿಗೆ ಆದಾಯವನ್ನು ಕೊಡುವ ಸಂಪನ್ಮೂಲವಾಗಿ ಸುವುದು ನಮ್ಮ ಉದ್ದೇಶ ಎಂದು ಎಮ್ ಸಿ ಎಲ್ ಸಂಸ್ಥೆಯ ಅಧಿಕಾರಿ ವಸಂತ ಪೂಜಾರಿ ತಿಳಿಸಿದರು.
ಬಂಟ್ವಾಳ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
Posted On: 29-10-2021 05:45PM
ಮಂಗಳೂರು : ಬಂಟ್ವಾಳ ಸ್ಪರ್ಶ ಕಲಾಮಂದಿರದಲ್ಲಿ ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉದ್ಯೋಗಾವಕಾಶಗಳ ಕುರಿತ ಮಾಹಿತಿ ಕಾರ್ಯಾಗಾರ ನಡೆಯಿತು.
ಶಿರ್ವ : ನವೆಂಬರ್ ೧ರಂದು ಎಣ್ಣೆ ದೀಪದ ಬೀದಿ ದೀಪ ಉದ್ಘಾಟನಾ ಕಾರ್ಯಕ್ರಮ
Posted On: 29-10-2021 05:33PM
ಶಿರ್ವ : ವಿದ್ಯುತ್ ದೀಪಗಳು ಇಲ್ಲದ ಹಲವು ವರ್ಷಗಳ ಹಿಂದೆ ರಸ್ತೆಬದಿಗಳಲ್ಲಿ ಅಲ್ಲಲ್ಲಿ ಎಣ್ಣೆ ದೀಪದ ಬೀದಿ ದೀಪಗಳು ಕಂಡುಬರುತ್ತಿದ್ದವು ಕಲ್ಲಿನ ಕಂಬದಲ್ಲಿ ದೀಪವನ್ನು ಎಣ್ಣೆ ಹಾಕಿ ಇರಿಸಲಾಗುತ್ತಿತ್ತು ದಾರಿಯಲ್ಲಿ ಹೋಗುವವರಿಗೆ ಸ್ಥಳದ ಗುರುತುಹಿಡಿಯಲು ರಸ್ತೆಯಲ್ಲಿ ಹೋಗುವಾಗ ಬೆಳಕಿಗಾಗಿ ಹಾಗೂ ಬ್ಯಾಟರಿ ಗಳಿಲ್ಲದ ಆ ಕಾಲದಲ್ಲಿ ತೂಟ /thute / ಹಿಡಿದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಅದನ್ನು ಉರಿಸಲು ಈ ಎಣ್ಣೆ ದೀಪದ ಬೀದಿದೀಪದ ಉದ್ದೇಶವಾಗಿತ್ತು.
ಶಿರ್ವ : ಜಾಗೃತಿ ಅರಿವು ಸಪ್ತಾಹ - 2021
Posted On: 29-10-2021 04:36PM
ಶಿರ್ವ: ಇಂದು ದೇಶದಲ್ಲಿ ಕಾಡುತ್ತಿರುವ ದೊಡ್ಡ ಸಮಸ್ಯೆಯೆಂದರೆ ಭ್ರಷ್ಟಾಚಾರ. ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿ ಭ್ರಷ್ಟಾಚಾರವನ್ನು ತೊಲಗಿಸಿ, ಉತ್ತಮ ಆಡಳಿತಕ್ಕಾಗಿ ಪಾರದರ್ಶಕ ನೀತಿಗಳನ್ನು ರೂಪಿಸಿ ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಇಂದಿನ ವ್ಯವಸ್ಥೆಯನ್ನು ಸುಧಾರಿಸುವ ಸಲುವಾಗಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಮೂಡಿಸಲು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ 'ಜಾಗೃತಿ ಅರಿವು ಸಪ್ತಾಹ-2021' ಏರ್ಪಡಿಸಲಾಯಿತು.
ನವೆಂಬರ್ 2 : ಅಯೋಧ್ಯಾ ಬಲಿದಾನ್ ದಿವಸ್ ಪ್ರಯುಕ್ತ ರಕ್ತದಾನ ಶಿಬಿರ
Posted On: 29-10-2021 12:37AM
ಕಾಪು : ವಿಶ್ವ ಹಿಂದೂ ಪರಿಷದ್, ಬಜರಂಗದಳ ಮಾತೃ ಶಕ್ತಿ ದುರ್ಗಾವಾಹಿನಿ ಕಾಪು ತಾಲೂಕು ಹಾಗೂ ಜಿಲ್ಲಾಸ್ಪತ್ರೆ ಉಡುಪಿ ಜಿಲ್ಲೆ ಇವರ ಸಹಭಾಗಿತ್ವದಲ್ಲಿ ಅಯೋಧ್ಯಾ ಬಲಿದಾನ್ ದಿವಸ್ ಪ್ರಯುಕ್ತ ನವೆಂಬರ್ 2 ರಂದು ಬೆಳಗ್ಗೆ 8:30 ರಿಂದ ಮಧ್ಯಾಹ್ನ 1ಗಂಟೆಯವರೆಗೆ ಶಿರ್ವದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶಿಖರದಿಂದ ಸಾಗರ - ಯುವತಿಯರ ಐತಿಹಾಸಿಕ ಯಾನ
Posted On: 29-10-2021 12:27AM
ಉಡುಪಿ : ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ “ಶಿಖರದಿಂದ ಸಾಗರ" ಐತಿಹಾಸಿಕ ಯಾನದಲ್ಲಿ ಭಾಗಿಯಾಗಿರುವ ರಾಜ್ಯದ 5 ಯುವತಿಯರು ಕಾಶ್ಮೀರದಲ್ಲಿ ಕೊಲಹೊಯ್ (5425 ಮೀ) ಶಿಖರವನ್ನು ಯಸ್ವಿಯಾಗಿ ಏರಿ, ನಂರ ಲಡಾಖ್ ನಿಂದ 3,000 ಕಿ.ಮೀ ಸೈಕಲ್ ಯಾನ ಮಾಡುತ್ತಾ ಕಾರವಾರ ತಲುಪಿದ್ದು, ಕಾರವಾರದಿಂದ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ 300 ಕಿ.ಮೀ ಸಮುದ್ರದಲ್ಲಿ ಕಯಾಕಿಂಗ್ ಯಾನ ಮಾಡುತ್ತಿದ್ದು, ಈ ಯುವತಿಯರ ತಂಡ ಇಂದು ಮಲ್ಪೆ ಸಮುದ್ರ ತೀರಕ್ಕೆ ಆಗಮಿಸಿದರು. ಮಲ್ಪೆ ಸಮದ್ರ ತೀರದಲ್ಲಿ ಜಿಲ್ಲಾಡಳಿತದ ಪರವಾಗಿ ಇವರನ್ನು ಸ್ವಾಗತಿಸಿದ, ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ನಂತರ ಮಾತನಾಡಿ, ಯುವತಿಯರು ಸಾಹಸ ಕ್ರೀಡೆಗಳಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸುವುದರ ಜೊತೆಗೆ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತು ಓಲಂಪಿಕ್ನಲ್ಲಿ ಉತ್ತಮ ಸಾಧನೆಯನ್ನು ಮಾಡುವ ದಿಟ್ಟ ನಿರ್ಧಾರ ಮಾಡಬೇಕು. ಇದಕ್ಕಾಗಿ ಈ ಯುವತಿಯರಲ್ಲಿರುವ ಸಾಹಸ ಗುಣಗಳು, ಛಲ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಯುವತಿಯರು ಮತ್ತು ಮಹಿಳೆಯರಿಗೂ ಮಾದರಿಯಾಗಬೇಕು ಎಂದರು. ಈ ಸಾಹಸ ಯತ್ರೆಯಲ್ಲಿ ತಮಗೆ ಎದುರಾದ ಎಲ್ಲ ಸಂಕಷ್ಟಗಳನ್ನು ದಿಟ್ಟತನದಿಂದ ಎದುರಿಸಿರುವ, ಈ ಯುವತಿಯರ ಸಾಧನೆ , ಕೇವಲ ರಾಜ್ಯಕ್ಕೆ , ದೇಶಕ್ಕೆ ಮಾತ್ರ ಸೀಮಿತಗೊಳ್ಳದೆ ಮುಂದಿನ ವರ್ಷಗಳಲ್ಲಿ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುವ ಛಲವನ್ನು ಹೊಂದುವುದರ ಜೊತೆಗೆ , ಯುವ ಪೀಳಿಗೆಗೆ ಮಾದರಿಯಾಗಬೇಕು. ಸ್ತ್ರೀಯರಲ್ಲಿನ ಶಕ್ತಿ , ಸಾಹಸ, ಧೈರ್ಯ ವನ್ನು ಬಿಂಬಿಸುವಂತಹ ವಿಭಿನ್ನವಾದ ಕಾರ್ಯಕ್ರಮವಾಗಿದೆ ಎಂದರು.
ಉಡುಪಿ : ಲಕ್ಷ ಕಂಠದಿ ಮೊಳಗಿದ ಕನ್ನಡ ಗಾಯನ, ಅಭೂತಪೂರ್ವ ಸ್ಪಂದನೆ
Posted On: 29-10-2021 12:16AM
ಉಡುಪಿ : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಲಕ್ಷ ಕಂಠ ಗಾಯನ ಕಾರ್ಯಕ್ರಮದಡಿ ,ನಾಡಗೀತೆ ಜಯ ಭಾರತ ಜನನಿಯ ತನುಜಾತೆ ಸೇರಿದಂತೆ, ಕನ್ನಡದ ಶ್ರೇಷ್ಠತೆಯನ್ನು ಸಾರುವ , ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು , ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಆವರಣ ಸೇರಿದಂತೆ ಜಿಲ್ಲೆಯಾದ್ಯಂತ ಇಂದು ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ಹಾಡುವ ಮೂಲಕ ಜಿಲ್ಲೆಯಾದ್ಯಂತ ಕನ್ನಡದ ಕಂಪನ್ನು ಹರಡಲಾಯಿತು. ರಜತಾದ್ರಿಯ ಜಿಲ್ಲಾಡಳಿತ ಸಂಕೀರ್ಣದ ಆವರಣದಲ್ಲಿ ಸುಮಾರು 750 ಕ್ಕೂ ಅಧಿಕ ಮಂದಿಯಿಂದ ಕನ್ನಡ ಗೀತೆಗಳ ಗಾಯನ ನಡೆಯಿತು, ಪ್ರಬಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ,ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಮಣಿಪಾಲ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮಕ್ಕಾಗಿ ಬಹುತೇಕ ಪುರುಷ ಸಿಬ್ಬಂದಿಗಳು ಬಿಳಿ ಬಣ್ಣದ ಶರ್ಟ್ ಗಳು ಮತ್ತು ಮಹಿಳಾ ಸಿಬ್ಬಂದಿಗಳು ಹಳದಿ ಬಣ್ಣದ ಉಡುಪುಗಳನ್ನು ಧರಿಸಿದ್ದು ವಿಶೇಷವಾಗಿತ್ತು. ಇದೇ ಸಂದರ್ಭದಲ್ಲಿ ಕನ್ನಡವನ್ನು ಎಲ್ಲಾ ಸ್ಥಳದಲ್ಲಿ , ಎಲ್ಲಾ ಕಾರ್ಯದಲ್ಲೂ ಬಳಸುವುದಾಗಿ ಸಂಕಲ್ಪ ಕೈಗೊಳ್ಳಲಾಯಿತು. ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತ್ ಸೇರಿದಂತೆ ಜಿಲ್ಲೆಯ 20 ಕ್ಕೂ ಅಧಿಕ ಪ್ರೇಕ್ಷಣಿಯ ಸ್ಥಳಗಳಲ್ಲಿ ಏಕಕಾಲದಲ್ಲಿ ಈ ಗಾಯನ ಕಾರ್ಯಕ್ರಮ ನಡೆದಿದ್ದು, ಜಿಲ್ಲೆಯಾದ್ಯಂತ ಸುಮಾರು 60 ರಿಂದ 63 ಸಾವಿರ ಮಂದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು,ಎಲ್ಲರಿಗೂ ಕಾರ್ಯಕ್ರಮ ಅತ್ಯಂತ ಸಂತೋಷ ತಂದಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಹೇಳಿದರು.
ಉದ್ಯಾವರ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಗೀತ ಗಾಯನ
Posted On: 28-10-2021 10:55PM
ಕಟಪಾಡಿ :ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ಕನ್ನಡದ ಅಭಿಮಾವನ್ನು ವೃದ್ಧಿಸುವ ನಿಟ್ಟಿನಲ್ಲಿ ಕನ್ನಡ ಗೀತ ಗಾಯನವು ಉದ್ಯಾವರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
