Updated News From Kaup
ಇನ್ನಂಜೆ : ಯುವತಿ ಮಂಡಲದ ವತಿಯಿಂದ ಶ್ರೀ ಕ್ಷೇತ್ರ ಉಂಡಾರುವಿನಲ್ಲಿ ಹೂವಿನ ಪೂಜೆ
Posted On: 28-10-2021 10:45PM
ಕಾಪು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಉಂಡಾರುವಿನಲ್ಲಿ ಇನ್ನಂಜೆ ಯುವತಿ ಮಂಡಲದ ವತಿಯಿಂದ ಇಂದು ಸಂಜೆ ಹೂವಿನ ಪೂಜೆ ನಡೆಯಿತು.
ಮಹತೋಭಾರ ಇರ್ವತ್ತೂರು ಶ್ರೀ ಲಕ್ಷ್ಮೀಜನಾರ್ಧನ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ, ಕಾರ್ತಿಕ ದೀಪೋತ್ಸವ ಹಾಗೂ ಶ್ರೀ ದೇವರ ಬಲಿ ಉತ್ಸವ
Posted On: 28-10-2021 10:34PM
ಕಾರ್ಕಳ : ಕಾರ್ಕಳ ತಾಲೂಕಿನ ಎಳ್ಳಾರೆ ಮಹತೋಭಾರ ಇರ್ವತ್ತೂರು ಶ್ರೀ ಲಕ್ಷ್ಮೀಜನಾರ್ಧನ ದೇವಸ್ಥಾನದಲ್ಲಿ ನವೆಂಬರ್ 14ರ ಪೂರ್ವಾಹ್ನ ಗಂಟೆ 9.00ಕ್ಕೆ ಶ್ರೀ ದೇವರಿಗೆ ಲಕ್ಷ ತುಳಸಿ ಅರ್ಚನೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ ಹಾಗೂ ಮಧ್ಯಾಹ್ನ 1ಗಂಟೆಯಿಂದ ಅನ್ನಸಂತರ್ಪಣೆ ಜರಗಲಿದೆ.
ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳು ಅದಮಾರು - ಕನ್ನಡ ಗೀತ ಗಾಯನ
Posted On: 28-10-2021 07:51PM
ಪಡುಬಿದ್ರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದಾದ್ಯಾಂತ ಆಯೋಜಿಸಲಾದ ಮಾತಾಡ್ ಮಾತಾಡ್ ಕನ್ನಡ ಕನ್ನಡಕ್ಕಾಗಿ ನಾವು, ಕರ್ನಾಟಕ ರಾಜ್ಯೋತ್ಸವ ಅಭಿಯಾನದ ಪ್ರಯುಕ್ತ ಕನ್ನಡ ಗೀತ ಗಾಯನ ಕಾರ್ಯಕ್ರಮವು ಇಂದು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳು ಅದಮಾರು ಇಲ್ಲಿ ನಡೆಯಿತು.
ಇದೀಗ ಬ್ರಹ್ಮಾವರದಲ್ಲಿ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನವರ ಫ್ರೆಡ್ಡೀಸ್ ರೆಸ್ಟ್ರೋ ಕೆಫೆ ಶುಭಾರಂಭ
Posted On: 28-10-2021 02:55PM
ಉಡುಪಿ : ದುಬೈನಲ್ಲಿ ಜನಪ್ರಿಯತೆ ಪಡೆದಿರುವ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನವರ ನೂತನ ಶಾಖೆ ಮೊತ್ತ ಮೊದಲ ಬಾರಿಗೆ ಭಾರತದಲ್ಲಿ ಆರಂಭಗೊಳ್ಳುತ್ತಿದೆ. ಉಡುಪಿಯ ಬ್ರಹ್ಮಾವರದಲ್ಲಿ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್ಸ್ ನವರ ಫ್ರೆಡ್ಡೀಸ್ ರೆಸ್ಟ್ರೋ ಕೆಫೆ, ಸ್ಪೋಟ್ಸ್ ಬಾರ್ ಗ್ರಾಹಕರ ಅಭಿರುಚಿಯನ್ನು ಪೂರೈಸಲು ಅ.28, ಗುರುವಾರ ಆರಂಭಗೊಳ್ಳಲಿದೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಫಾರ್ಚೂನ್ ಪ್ಲಾಝಾ ಹೋಟೆಲ್ ನಲ್ಲಿ ಶುಭಾರಂಭಗೊಳ್ಳಲಿರುವ ನೂತನ ಶಾಖೆಗೆ ಕನ್ನಡದ ಜನಪ್ರಿಯ ನಟ, ನಿರ್ದೇಶಕ, ನಿರ್ಮಾಪಕ ರಿಷಭ್ ಶೆಟ್ಟಿ, ಬಿಗ್ ಬಾಸ್ ಸೀಸನ್ 7 ರ ವಿನ್ನರ್ ಹಾಗೂ ನಟ ಶೈನ್ ಶೆಟ್ಟಿ, ಮತ್ತು ಕೋಸ್ಟಲ್ ವುಡ್ ಹಾಗೂ ಸ್ಯಾಂಡಲ್ ವುಡ್ ನಲ್ಲಿ ಮಿಂಚುತ್ತಿರುವ ಪ್ರಮೋದ್ ಶೆಟ್ಟಿ ಶುಭಹಾರೈಸಿದ್ದಾರೆ.
ಪಡುಬೆಳ್ಳೆ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲಾ ಇಂಟರಾಕ್ಟ್ ಕ್ಲಬ್ ಪದಗ್ರಹಣ
Posted On: 28-10-2021 10:29AM
ಶಿರ್ವ : ಪಡುಬೆಳ್ಳೆ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲಾ ಇಂಟರಾಕ್ಟ್ ಕ್ಲಬ್ ಪದಗ್ರಹಣ ವನ್ನು ಶಿರ್ವ ರೋಟರಿ ಅಧ್ಯಕ್ಷ ಜೆ ಕೆ ಆಳ್ವ ನೇರವೇರಿಸಿದರು.
ಅ. 28 : ವಿಶ್ವ ಸಂವಹನಕಾರರ ದಿನಾಚರಣೆ, ಸಾಧಕರಿಗೆ ಪುರಸ್ಕಾರ
Posted On: 27-10-2021 07:48PM
ಉಡುಪಿ: ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (ಪಿ.ಆರ್.ಸಿ.ಐ.) ಉಡುಪಿ- ಮಣಿಪಾಲ ಘಟಕ ಆಶ್ರಯದಲ್ಲಿ ಅ. 28ರಂದು ವಿಶ್ವ ಸಂವಹನಕಾರರ ದಿನಾಚರಣೆ ನಡೆಯಲಿದೆ. ಸಂಜೆ 6ರಿಂದ ಕರಾವಳಿ ಜಂಕ್ಷನ್ ಬಳಿಯ ಹೋಟೆಲ್ ಮಣಿಪಾಲ ಇನ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸಲಾಗುವುದು.
ಅಕ್ಟೋಬರ್ 31 : ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪರ್ಕಳದ ವಿಂಶತಿ ಸಂಭ್ರಮದ ಪ್ರಯುಕ್ತ ಯಕ್ಷಗಾನ
Posted On: 26-10-2021 01:40PM
ಉಡುಪಿ : ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ(ಲಿ.), ಪರ್ಕಳ ಇದರ ವಿಂಶತಿ ಸಂಭ್ರಮದ ಪ್ರಯುಕ್ತ ಅಕ್ಟೋಬರ್ 31 ಅಪರಾಹ್ನ 1:30 ರಿಂದ ನರಸಿಂಹ ಸಭಾಭವನದಲ್ಲಿ ಯಕ್ಷಲೋಕ ವಿಜಯ ಎಂಬ ಯಕ್ಷಗಾನ ಬಯಲಾಟ ಜರಗಲಿದೆ.
ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ ಸಿಹಿ ಸುದ್ದಿ: ಅಡುಗೆ ಎಣ್ಣೆ, ಈರುಳ್ಳಿ ಸೇರಿ ಅಗತ್ಯ ವಸ್ತು ದರ ಇಳಿಕೆ
Posted On: 24-10-2021 08:17PM
ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಗ್ರಾಹಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ದೀಪಾವಳಿ ಹಬ್ಬದ ಹೊತ್ತಲ್ಲಿ ಈರುಳ್ಳಿ ಮತ್ತು ಅಡುಗೆ ಎಣ್ಣೆ ದರ ಇಳಿಕೆಯಾಗಲಿದೆ. ಖಾದ್ಯ ತೈಲ, ಈರುಳ್ಳಿ ಮೊದಲಾದ ಅಗತ್ಯ ವಸ್ತುಗಳ ದರ ಇಳಿಕೆಯಾಗಲಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಬರ್ಕೆ : ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಡಿಜೆ ಸೌಂಡ್ ನ ಅಬ್ಬರ, ಸಾರ್ವಜನಿಕರಿಗೆ ತೊಂದರೆ - ಬಾರ್ ಮಾಲಕರ ವಿರುದ್ಧ ದೂರು ದಾಖಲು
Posted On: 24-10-2021 05:53PM
ಮಂಗಳೂರು : ಇಲ್ಲಿನ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ M G ರಸ್ತೆಯಲ್ಲಿರುವ Onyx Air Lounge and Kitchen ಎಂಬ ಹೆಸರಿನ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಕಾನೂನುಬಾಹಿರವಾಗಿ ಕರ್ನಾಟಕ ಪೊಲೀಸ್ ಕಾಯ್ದೆ, ಅಬಕಾರಿ ಕಾಯ್ದೆ ಹಾಗೂ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಲೌಡ್ ಸ್ಪೀಕರ್ ಮೂಲಕ ಡಿಜೆ ಸೌಂಡ್ ನ ಅಬ್ಬರದ ಸಂಗೀತವನ್ನು ಹಾಕಿ ನೆರೆಕರೆಯ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿದ್ದೂ ಅಲ್ಲದೆ ನಿಗದಿತ ಅವಧಿಯನ್ನು ಮೀರಿ ಮದ್ಯ ಸರಬರಾಜು ಮಾಡುತ್ತಿದ್ದು ಅಲ್ಲಿ ಮದ್ಯ ಸೇವನೆಗೆ ಬಂದಿದ್ದ ಗ್ರಾಹಕರು ಅವರವರ ವಾಹನಗಳನ್ನು ಕಟ್ಟಡದ ಹೊರಗೆ ಅಡ್ಡಾದಿಡ್ಡಿಯಾಗಿ ನಿಲ್ಲಿಸಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟು ಮಾಡುತ್ತಿದ್ದು ಮಂಗಳೂರು ನಗರ ಸಿಸಿಬಿ ಹಾಗೂ ಬರ್ಕೆ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.
ಭತ್ತ ಖರೀದಿ ಕೇಂದ್ರ ತೆರೆಯಲು ಪ್ರಸ್ತಾವನೆ ಸಲ್ಲಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
Posted On: 23-10-2021 08:23PM
ಉಡುಪಿ : ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭಗೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ,ಉಡುಪಿ,ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಇತ್ತೀಚೆಗೆ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ ನಡೆದ, ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
