Updated News From Kaup
ಇನ್ನಾ ಗ್ರಾಮ ಪಂಚಾಯತ್ ಮತ್ತು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಆಂದೋಲನ

Posted On: 02-10-2021 10:24PM
ಕಾರ್ಕಳ : ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ಟೋಬರ್ 2 ರಂದು ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಆಯಾ ವಾರ್ಡ್ ಗಳಲ್ಲಿ ಇನ್ನಾ ಗ್ರಾಮ ಪಂಚಾಯತ್ ಮತ್ತು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯವು ಯಶಸ್ವಿಯಾಗಿ ನಡೆಯಿತು.

ವಾರ್ಡಿನ ಸದಸ್ಯರಿಗೆ ಶಾಲೆಯ ಶಿಕ್ಷಕರಿಗೆ ಅಂಗನವಾಡಿ, ಆಶಾ ಕಾರ್ಯಕರ್ತೆರಿಗೆ ಸಂಘ ಸಂಸ್ಥೆ , ಸಂಜೀವಿನಿ ಒಕ್ಕೂಟ , ಸ್ತ್ರೀ ಶಕ್ತಿ, ಸ್ವಸಹಾಯ ಸಂಘ, ಧರ್ಮಸ್ಥಳ ಸ್ವಸಹಾಯ ಯುವಕ-ಯುವತಿ ಮಂಡಲ, ಗ್ರಾಮಸ್ಥರಿಗೆ ಇನ್ನಾ ಗ್ರಾಮ ಪಂಚಾಯತ್ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭ ಇನ್ನಾ ಗ್ರಾಮ ಪಂಚಾಯತ್ ನ ಅಧ್ಯಕ್ಷರು, ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.
ಬಂಟಕಲ್ಲು : ಮುದ್ದುಕೃಷ್ಣ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Posted On: 02-10-2021 10:13PM
ಕಾಪು : ವಿಶ್ವ ಹಿಂದೂ ಪರಿಷತ್, ಬಜರಂಗದಳ ಬಂಟಕಲ್ಲು ಘಟಕದ ಆಯೋಜಿಸಿದ್ದ ಮುದ್ದುಕೃಷ್ಣ ಫೋಟೋ ಸ್ಪರ್ಧೆಯಲ್ಲಿ ವಿಜೇತರಾಗಿರುವ ಮಕ್ಕಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಜರಗಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಸುರೇಶ್ ಶೆಟ್ಟಿ ಗುರ್ಮೆ, ಸಂಘಟನೆಯ ಪ್ರಮುಖರು ಮೊದಲಾದವರು ಉಪಸ್ಥಿತರಿದ್ದರು.
ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನಾಚರಣೆಯ ಪ್ರಯುಕ್ತ ಪ್ರಸಾದ್ ನೇತ್ರಾಲಯದಿಂದ ಕಣ್ಣಿನ ತಪಾಸಣಾ ಶಿಬಿರ, ಉಚಿತ ಕನ್ನಡಕ ವಿತರಣೆ

Posted On: 02-10-2021 10:06PM
ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನಾಚರಣೆಯ ಪ್ರಯುಕ್ತ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಪ್ರಸಾದ್ ನೇತ್ರಾಲಯ ಉಡುಪಿ ಇದರ ನುರಿತ ತಜ್ಞ ವೈದ್ಯರಿಂದ ಕಣ್ಣಿನ ತಪಾಸಣಾ ಶಿಬಿರ, ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಸುರೇಶ್ ಶೆಟ್ಟಿ ಗುರ್ಮೆ ಭಾಗವಹಿಸಿದರು.
ಈ ಸಂದರ್ಭದಲ್ಲಿ ಪ್ರಸಾದ್ ನೇತ್ರಾಲಯ ಇದರ ಸಿಬಂದಿ ವರ್ಗ, ಬಿಜೆಪಿ ಪಕ್ಷದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಸೈಬ್ರಕಟ್ಟೆ ರೋಟರಿ ಕ್ಲಬ್ : ಜಾನುವಾರು ಕಟ್ಟೆ ಶಾಲೆಯಲ್ಲಿ ನೂತನ ಇಂಟ್ರಾಕ್ಟ್ ಕ್ಲಬ್ ಉದ್ಘಾಟನೆ, ಧನಸಹಾಯ, ಸ್ಟೇಷನರಿ ವಿತರಣೆ

Posted On: 02-10-2021 09:34PM
ಉಡುಪಿ : ಸೈಬ್ರಕಟ್ಟೆ ರೋಟರಿಯಿಂದ ಹೊಸ ಇಂಟ್ರಾಕ್ಟ್ ಕ್ಲಬ್ ಜಾನುವಾರು ಕಟ್ಟೆ ಹೈಸ್ಕೂಲ್ ನಲ್ಲಿ ಸ್ಥಾಪಿಸಿ ಅದರ ಉದ್ಘಾಟನೆಯನ್ನು ಸಹಾಯಕ ಗವರ್ನರ್ ಪದ್ಮನಾಭ್ ಕಾಂಚನ್ ನೆರವೇರಿಸಿದರು.
ಇಂಟ್ರಾಕ್ಟ್ ಕ್ಲಬ್ ನ ಅಧ್ಯಕ್ಷ ಪ್ರಜ್ವಲ್ ಅವರಿಗೆ ಕೊರಳ ಲಾಂಛನ ಹಾಕುವುದರ ಮೂಲಕ ಜಿಲ್ಲಾ ಇಂಟ್ರಾಕ್ಟ್ ಸಭಾಪತಿ ಕೆ ಎಸ್ ಜೈವಿಠಲ್ ಪದ ಪ್ರಧಾನ ಮಾಡಿದರು. ಕಾರ್ಯದರ್ಶಿಯಾಗಿ ಶ್ರೀಶ ಆಯ್ಕೆಗೊಂಡರು.
ಹೊಸ ಪದಾಧಿಕಾರಿಗಳ ನೇಮಕ ಮಾಡಲಾಯಿತು. ಈಸಂದರ್ಭ 10ನೇ ತರಗತಿಯ ಅತಿ ಹೆಚ್ಚು ಅಂಕ ಗಳಿಸಿದ 3 ವಿದ್ಯಾರ್ಥಿಗಳಿಗೆ ಪ್ರತಿಭಾ ಸಹಾಯಧನ, ಎಲ್ಲ 116 ವಿದ್ಯಾರ್ಥಿಗಳಿಗೆ N 95 ಮಾಸ್ಕ್ , ಸ್ಟೇಷನರಿ ಕೊಡಲಾಯಿತು. ಶಾಲೆಗೆ 15,000 ರೂ. ನ 6 ಕಂಪ್ಯೂಟರ್ ಟೇಬಲ್ಸ್ ಗಳನ್ನು ಹಸ್ತಾಂತರಿಸಲಾಯಿತು.
ವಿದ್ಯಾರ್ಥಿಗಳಿಗೆ ಕ್ವಿಜ್ ಏರ್ಪಡಿಸಿ ವಿಜೇತರಿಗೆ ಬಹುಮಾನ ಗಳನ್ನು ನೀಡ ಲಾಯಿತು. ವಲಯ ಸೇನಾನಿ ವಿಜಯಕುಮಾರ್ ಶೆಟ್ಟಿ ,ಜಿಲ್ಲಾ ಇಂಟ್ರಾಕ್ಟ್ ಉಪಸಭಾಪತಿ ಆನಂದ ಶೆಟ್ಟಿ ಕಾರ್ಯದರ್ಶಿ ಅಣ್ಣಯ್ಯ ದಾಸ್ ಇಂಟ್ರಾಕ್ಟ್ ಟೀಚೆರ್ಸ್ ಕೋ ಅರ್ಡಿನೇಟರ್ ಶಿವಪ್ಪ ಸರ್, ಇಂಟ್ರಾಕ್ಟ್ ಕೋ ಅರ್ಡಿನೇಟರ್ ಕಿರಣ್ ಕಾಜ್ರಲ್ಲಿ, ವಾಟರ್ ಅಂಡ್ ಸನಿಟೇಷನ್ ಮಿಷನ್ ಸಂಯೋಜಕ ವಿಜಯಕುಮಾರ್ ಶೆಟ್ಟಿ ಕೆ, ಮುಖ್ಯೋಪಾಧ್ಯಾಯ ರಾಮಕೃಷ್ಣ ನಾಯ್ಕ್ , ಕಾರ್ಯಕ್ರಮದ ಅಧ್ಯಕ್ಷ ಅಧ್ಯಕ್ಷ ಪ್ರಸಾದ್ ಭಟ್ ಉಪಸ್ಥಿತರಿದ್ದು. ಕಾರ್ಯಕ್ರಮವನ್ನು ಅಶೋಕ್ ನಿರೂಪಿಸಿದರು.
ಉಡುಪಿ ಓಡಿಎಫ್+ 1 ಜಿಲ್ಲೆಯಾಗಿ ಘೋಷಣೆ : ಡಾ.ನವೀನ್ ಭಟ್

Posted On: 02-10-2021 09:23PM
ಉಡುಪಿ : ಉಡುಪಿ ಜಿಲ್ಲೆಯ ಎಲ್ಲಾ 155 ಗ್ರಾಮ ಪಂಚಾಯತ್ ಗಳು ಕಸ ಸಂಗ್ರಹಣೆ ಮತ್ತು ವಿಲೇವಾರಿ ಹಾಗೂ ಕಸ ಸಂಗ್ರಹಣೆಗೆ ಪ್ರತ್ಯೇಕ ವಾಹನ ವ್ಯವಸ್ಥೆ ಹೊಂದುವ ಮೂಲಕ ಉಡುಪಿ ಜಿಲ್ಲೆಯನ್ನು ಓಡಿಎಫ್+1 ಜಿಲ್ಲೆಯನ್ನಾಗಿ ಘೋಷಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಹೇಳಿದರು. ಅವರು ಇಂದು , ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ,ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯನ್ನು ಓಡಿಎಫ್+1 ಜಿಲ್ಲೆಯನ್ನಾಗಿ ಘೋಷಿಸಲಾಗಿದ್ದು,ಎಲ್ಲಾ ಗ್ರಾಮ ಪಂಚಾಯತ್ ಗಳು ತಮ್ಮ ವ್ಯಾಪ್ತಿಯಲ್ಲಿನ ಕಸವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವಂತೆ ತಿಳಿಸಿದ ಸಿಇಓ, ಎಸ್ಎಲ್ಆರ್ಎಂ ಘಟಕಗಳು ಕಸದಿಂದ ಆದಾಯವನ್ನು ಸಂಗ್ರಹಿಸಿ ,ತಮ್ಮ ವೆಚ್ಚಗಳನ್ನು ನಿಭಾಯಿಸಿಕೊಂಡುವ ಲಾಭದಾಯಕವಾಗಿ ನಡೆಸುವಂತೆ ಹೇಳಿದರು. ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಮನೆಗಳಿಗೆ ನೀರಿನ ಸಂಪರ್ಕ ಒದಗಿಸಿ, ತಮಗೆ ಈಗಾಗಲೇ ನೀರಿನ ಸಂಪರ್ಕ ಇದೆ, ಈ ಯೋಜನೆಯಡಿ ಸಂಪರ್ಕ ಬೇಡ ಎನ್ನುವ ಕುಟುಂಬಗಳ ಬಗ್ಗೆ ಮತ್ತೊಮ್ಮೆ ಪರಿಶೀಲಿಸಿ, ಲಿಖಿತ ವರದಿ ಪಡೆದು ಅನಿವಾರ್ಯವಾದಲ್ಲಿ ಮಾತ್ರ ರದ್ದುಗೊಳಿಸಿ, ಯೋಜನೆಯನ್ನು ಅನುಷ್ಠಾನಗೊಳಿಸುವಾಗ ಸಂಬಂದಪಟ್ಟ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ, ಸಾರ್ವಜನಿಕರಿಗೆ ಜಲ ಜೀವನ್ ಮಿಷನ್ ಮಹತ್ವದ ಕುರಿತು ಸೂಕ್ತ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ , ಎಲ್ಲಾ ಗ್ರಾಮ ಪಂಚಾಯತ್ ಗಳು 15 ನೇ ಹಣಕಾಸಿನ ಯೋಜನೆಯಡಿ ತಮ್ಮ ಕ್ರಿಯಾ ಯೋಜನೆಯಲ್ಲಿ ಕಡ್ಡಾಯವಾಗಿ ಜಲ ಜೀವನ್ ಯೋಜನೆ ಅನುಷ್ಠಾನಕ್ಕೆ ಅನುದಾನ ಮೀಸಲಿಡಬೇಕು ಈ ಬಗ್ಗೆ ಗ್ರಾಮ ಪಂಚಾಯತ್ ಗಳಿಗೆ ಮತ್ತೊಮ್ಮೆ ಸೂಚನೆ ನೀಡುವಂತೆ ಎಲ್ಲಾ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ತಿಂಗಳಲ್ಲಿ 1 ದಿನ ಜಲಜೀವನ್ ಮಿಷನ್,ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ,ಇಂಗು ಗುಂಡಿಗಳ ಗಳ ಮಹತ್ಬಗಳ , ಪ್ಲಾಸ್ಟಿಕ್ ವಿಲೇವಾರಿ, ಬಗ್ಗೆ ಮಕ್ಕಳಿಗೆ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಿ, ಇದಕ್ಕೆ ಸ್ಥಳೀಯ ನಿವೃತ್ತ ಶಿಕ್ಷಕರು, ಮಾಜಿ ಜನಪ್ರತಿನಿಧಿಗಳು , ನಿವೃತ್ತ ಇಂಜನಿಯರಿಂಗ್ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಸಂಪನ್ಮೂಲ ವ್ಯಕ್ತಿಗಳನ್ನು ಗುರುತಿಸಿ ಅವರ ಮೂಲಕ ಅರಿವು ಮೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿನ ಶಾಲೆಗಳು ,ಹಾಸ್ಟೆಲ್ ಗಳು ಮತ್ತು ಆಸ್ಪತ್ರೆಗಳಲ್ಲಿ ಇಂಗು ಗುಂಡಿಗಳ ನಿರ್ಮಾಣ ಮಾಡುವ ಕುರಿತಂತೆ ಸಂಬಂದಪಟ್ಟ ಇಲಾಖೆಗಳು ಅಗತ್ಯ ಮಾಹಿತಿ ನೀಡುವಂತೆ ಮತ್ತು ಗ್ರಾಮ ಪಂಚಾಯತ್ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಘಟಕ ಅಳವಡಿಸುವ ಕುರಿತಂತೆ ಮಾಹಿತಿ ನೀಡುವಂತೆ ತಿಳಿಸಿದರು.
ನೀರು ಮತ್ತು ನೈರ್ಮಲ್ಯ ಸಮಸ್ಯೆಗಳ ಕುರಿತು ಸಹಾಯವಾಣಿಗೆ ಬರುವ ದೂರುಗಳನ್ನು ಶೀಘ್ರದಲ್ಲಿ ಇತ್ಯರ್ಥಪಡಿಸುವಂತೆ ಸಿಇಓ ಸೂಚಿಸಿದರು. ಜಿಲ್ಲಾ ಪಂಚಾಯತ್ ನಿಂದ ಹೊರತಂದ ತ್ಯಾಜ್ಯ ಮುಕ್ತ ಗ್ರಾಮದತ್ತ ನಮ್ಮ ಚಿತ್ತ ಎಂಬ ,ಸ್ವಚ್ಚತೆ , ಜಲಜೀವನ್ ಮಿಷನ್ ಕುರಿತು ಅರಿವು ಮೂಡಿಸುವ ಮಾಹಿತಿ ಪತ್ರವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಬಿಡುಗಡೆಗೊಳಿಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಇಂಜಿನಿಯರ್ ಕೃಷ್ಣಾನಂದ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು ಉಪಸ್ಥಿತರಿದ್ದರು.
ಗಾಂಧೀಜಿ ಆಶಯದ ಸ್ವಚ್ಛ ಭಾರತ ಕಲ್ಪನೆ ಸಾಕಾರಗೊಂಡಿದೆ : ರಘುಪತಿ ಭಟ್

Posted On: 02-10-2021 09:19PM
ಉಡುಪಿ : ಮಹಾತ್ಮಗಾಂಧೀಜಿ ಅವರ ತತ್ವ ಮತ್ತು ಚಿಂತನೆಗಳಲ್ಲಿ ಸ್ವಚ್ಛತೆಯೂ ಒಂದಾಗಿದ್ದು, ಅವರ ಆಶಯದಂತೆ ದೇಶದಾದ್ಯಂತ ಪ್ರತಿಯೊಬ್ಬ ಭಾರತೀಯನ ಚಿಂತನೆ ಸ್ವಚ್ಛ ಭಾರತ ಕಡೆಗೆ ತಿರುಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು ಅಜ್ಜರಕಾಡು ಭುಜಂಗಪಾರ್ಕ್ನಲ್ಲಿ ನಗರಸಭೆ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ , ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಗಾಂಧೀಜಿ ಅವರ ಚಿಂತನೆಯಂತೆ ಸ್ವಚ್ಛತೆ ಸುತ್ತಮುತ್ತಲಿನ ಪರಿಸರದಲ್ಲಿ ಮಾತ್ರವಲ್ಲದೇ ಪ್ರತಿಯೊಬ್ಬರ ಮನದಲ್ಲೂ ಮೂಡಬೇಕು ,ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಗಾಂಧೀಜಿ ಅವರ 150 ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ನೀಡಿದ ಕರೆಯಂತೆ ದೇಶದಾದ್ಯಂತ ಸ್ವಚ್ಛತಾ ಅಭಿಯಾನ ಆರಂಭಗೊಂಡಿದೆ. ಉಡುಪಿಯನ್ನು ಸ್ವಚ್ಛ ಉಡುಪಿ ಮಾಡಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕಿದೆ ಎಂದರು. ಸ್ವಚ್ಛ ಭಾರತ್ ಮಿಷನ್-ನಗರ ಮತ್ತು ಅಮೃತ್ 2 ನೇ ಹಂತದ ಯೋಜನೆಯಂತೆ, ರಾಷ್ಟ್ರಾದ್ಯಂತ ಇರುವ ಕಸದ ಗುಡ್ಡೆಗಳನ್ನು ಸಮರ್ಪಕ ರೀತಿಯಲ್ಲಿ ತೆರವುಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಲಿದ್ದು, ಈ ಯೋಜನೆಯಡಿ ಉಡುಪಿಯ ಕರ್ವಾಲ್ ನಲ್ಲಿರುವ ಕಸದ ಗುಡ್ಡೆಯನ್ನು ಸೂಕ್ತ ರೀತಿಯಲ್ಲಿ ತೆರವು ಮಾಡಬೇಕಿದೆ. ಮತ್ತು ತ್ಯಾಜ್ಯದಿಂದ ನದಿ ನೀರು ಕಲುಷಿತಗೊಳ್ಳುವುದನ್ನು ತಡೆಯಲೂ ಸಹ ಕೇಂದ್ರ ನೆರವು ನೀಡಲಿದ್ದು, ಇದರಡಿಯಲ್ಲಿ ಉಡುಪಿಯಲ್ಲಿ ಒಳಚರಂಡಿ ವ್ಯವಸ್ಥೆಯಿಂದ ಕಲುಷಿತಗೊಂಡಿರುವ ಇಂದ್ರಾಣಿ ನದಿಯನ್ನು ಸಂಪೂರ್ಣ ಸ್ವಚ್ಛಗೊಳಿಸಬೇಕಿದೆ. ಈಗಾಗಲೇ ಉಡುಪಿಯ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕಗೊಳಿಸಲು 320 ಕೋಟಿ ರೂ ಗಳ ಡಿಪಿಆರ್ ಸಲ್ಲಿಕೆಯಾಗಿದ್ದು, ಮಂಡಳಿಯಲ್ಲಿ ಮಂಜೂರಾತಿ ಕೂಡಾ ದೊರೆತಿದೆ. ನಗರಸಭೆ ವತಿಯಿಂದ ಒಳಚರಂಡಿ ವ್ಯವಸ್ಥೆಯನ್ನು ಸರಿಪಡಿಸಿ,ನಗರವನ್ನು ಇನ್ನಷ್ಟು ಸ್ವಚ್ಛತೆಯಿಂದ ಕೂಡಿರುವಂತೆ ಮಾಡಲಾಗುವುದು ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಮಾತನಾಡಿ, ಮಹಾತ್ಮ ಗಾಂಧೀ ಅವರ ಜಯಂತಿ ಜೊತೆಯಲ್ಲಿ ಇಂದು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕೂಡಾ ಆಚರಿಸಲಾಗುತ್ತಿದೆ. ಈ ಇಬ್ಬರೂ ಮಹಾನ್ ವ್ಯಕ್ತಿಗಳ ಸರಳ ಜೀವನ ಮಾದರಿಯಾದುದು, ಗಾಂಧೀಜಿ ಅವರು ನನ್ನ ಜೀವನವೇ ಸಂದೇಶ ಎಂದಿದ್ದರು, ಶಾಂತಿ ಮತ್ತು ಅಹಿಂಸೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮಾ ಗಾಂಧೀಜಿ ಅವರ ಜಯಂತಿಯನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು. ಗಾಂಧೀ ಜಯಂತಿಯ ಅಂಗವಾಗಿ ಅಕ್ಟೋಬರ್ 1 ರಿಂದ 31 ರ ವರೆಗೆ ಕ್ಲೀನ್ ಇಂಡಿಯಾ ಕಾರ್ಯಕ್ರಮ ನಡೆಯುತ್ತಿದ್ದು, ಜಿಲ್ಲೆಯ ಪ್ರತೀ ಮನೆಗಳಲ್ಲಿರುವ ಅನುಪಯುಕ್ತ ಪ್ಲಾಸ್ಟಿಕ್ ನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಮೂಲಕ ಪ್ಲಾಸ್ಟಿಕ್ ಮುಕ್ತ ಉಡುಪಿ ಜಿಲ್ಲೆಯನ್ನಾಗಿ ಮಾಡುವ ಆಭಿಯಾನ ನಡೆಯುತ್ತಿದ್ದು , ಸಾರ್ವಜನಿಕರು ಈ ಕಾರ್ಯಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದರ ಮೂಲಕ ಉಡುಪಿ ಜಿಲ್ಲೆಯನ್ನು ಸ್ವಚ್ಛ ಜಿಲ್ಲೆಯನ್ನಾಗಿ ಮಾಡುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ,ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್,ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ ಮತ್ತಿತರರು ಉಪಸ್ಥಿತರಿದ್ದರು. ಪೌರಾಯುಕ್ತ ಉದಯ ಶೆಟ್ಟಿ ಸ್ವಾಗತಿಸಿದರು. ನಗರಸಭೆ ಎಂಜಿನಿಯರ್ ಮೋಹನ್ ರಾಜ್ ವಂದಿಸಿದರು,ಧನಂಜಯ ನಿರೂಪಿಸಿದರು. ಕಾರ್ಯಕ್ರಮದ ನಂತರ , ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕ್ಲೀನ್ ಇಂಡಿಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ರಸ್ತೆ ಬದಿಯಲ್ಲಿ ಬಿದ್ದಿದ್ದ ಅನುಪಯುಕ್ತ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿ,ವಿಲೇವಾರಿ ಮಾಡಲಾಯಿತು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆಯಿಂದ ಗಾಂಧೀ ಜಯಂತಿಯ ಪ್ರಯುಕ್ತ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

Posted On: 02-10-2021 09:03PM
ಉಡುಪಿ : 40ನೇ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡ್ಕ, ಲಯನ್ಸ್ ಕ್ಲಬ್ ಹಿರಿಯಡ್ಕ, ರೋಟರಿ ಹಿಲ್ಸ್ ಮಣಿಪಾಲ, ಮತ್ತು ಸಾಹಸ ಎನ್.ಜಿ. ಓ ಸಂಸ್ಥೆ, ಸಂಜೀವಿನಿ ಒಕ್ಕೂಟ ಹಾಗೂ ವಿವಿಧ ಸಂಘ ಸಂಸ್ಥೆಗಳ ಜಂಟಿ ಸಹಯೋಗದೊಂದಿಗೆ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ನೇತೃತ್ವದಲ್ಲಿ ಗಾಂಧೀ ಜಯಂತಿಯ ಪ್ರಯುಕ್ತ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಸುರೇಶ್ ಶೆಟ್ಟಿ ಗುರ್ಮೆ ಚಾಲನೆ ನೀಡಿದರು.
ಇನ್ನಂಜೆ : ಹಾಲು ಉತ್ಪಾದಕರ ಸಹಕಾರ ಸಂಘದ ಮಹಾಸಭೆ , ಸನ್ಮಾನ

Posted On: 02-10-2021 08:54PM
ಕಾಪು : ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಲಕ್ಷಣ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇನ್ನಂಜೆ ದಾಸಭವನದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು ಸದಸ್ಯರು ಉತ್ತಮ ಗುಣಮಟ್ಟದ ಮತ್ತು ಹೆಚ್ಚು ಉತ್ತಮ ಗುಣಮಟ್ಟದ ಹಾಲು ಪೂರೈಸುವ ಮೂಲಕ ಸಂಘದ ಅಭಿವೃದ್ಧಿಗೆ ನಿರಂತರವಾಗಿ ಸಹಕರಿಸುತ್ತಾ ಬರುತ್ತಿದ್ದಾರೆ. ಈ ಕಾರಣದಿಂದಾಗಿ ನಮ್ಮ ಸಂಘವು ಅತ್ಯುತ್ತಮ ಸಂಘವಾಗಿ ಮೂಡಿ ಬರಲು ಸಾಧ್ಯವಾಗಿದೆ. ಮುಂದೆಯೂ ಇದೇ ರೀತಿಯ ಬೆಂಬಲದ ನಿರೀಕ್ಷೆಯಲ್ಲಿ ನಾವಿದ್ದೇವೆ ಎಂದರು. ಒಕ್ಕೂಟದ ವಿಸ್ತರಣಾಧಿಕಾರಿ ಯಶವಂತರವರು ಲಾಭದಾಯಕ ಹೈನುಗಾರಿಕೆ, ಉತ್ತಮ ಗುಣಮಟ್ಟದ ಹಾಲಿನ ಉತ್ಪಾದನೆ, ರಾಸುವಿನ ಆರೋಗ್ಯದ ದೃಷ್ಟಿಯಲ್ಲಿ ಪ್ರತಿದಿನ ಖನಿಜ ಲವಣ ಮಿಶ್ರಣದ ಬಳಕೆ ಕುರಿತಾಗಿ ಸದಸ್ಯರಿಗೆ ತಿಳಿಸಿದರು. ಅಲ್ಲದೆ ರಾಸುಗಳ ಸಾಮೂಹಿಕ ವಿಮೆಯ ಮಹತ್ವವನ್ನೂ ವಿವರಿಸಿದರು.
ಸಂಘದ ಸಕ್ರಿಯ ಹಿರಿಯ ಸದಸ್ಯರಾದ ಸುಂದರ ಆಚಾರ್ಯ, ಜಯ ಎಸ್. ಶೆಟ್ಟಿ, ರಾಮ ಕೆ. ಶೆಟ್ಟಿ , ಎಮ್. ಶಾಂತ ಪೂಜಾರ್ತಿ ಮತ್ತು ಶಾರದಾ ಶೆಟ್ಟಿಯವರನ್ನು ಸನ್ಮಾನಿಸಲಾಯಿತು. ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿಯಲ್ಲಿ ಶೇ 85 ಅಂಕ ಗಳಿಸಿದ ಸಂಘದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ ನೀಡಿ ಗೌರವಿಸಲಾಯಿತು.
ವರದಿ ಸಾಲಿನಲ್ಲಿ ಅಧಿಕ ಹಾಲು ಸರಬರಾಜು ಮಾಡಿದ ವಿಠಲ ಮೂಲ್ಯ ಪ್ರಥಮ , ಆಶಾ ದ್ವಿತೀಯ, ಮತ್ತು ರವಿವರ್ಮ ಶೆಟ್ಟಿ ತೃತೀಯ ಬಹುಮಾನವನ್ನು ಪಡೆದರು. ಸಂಘವು 2020-2021ನೇ ಸಾಲಿನಲ್ಲಿ ನಿವ್ವಳ ಲಾಭ ರೂಪಾಯಿ 4,47,408.67 ಗಳಿಸಿದ್ದು ಅದನ ವಿಂಗಡಣೆ ಮಾಡಲಾಯಿತು. ಶೇ.15 ಷೇರು ಡಿವಿಡೆಂಡ್ ಘೋಷಿಸಲಾಯಿತು. ಪ್ರಸಕ್ತ ಸಾಲಿನ ಹಾಲು ಸರಬರಾಜು ಮಾಡಿದ ಸದಸ್ಯರಿಗೆ ರೂ. 1,92,374 ಬೋನಸ್ಸು ಹಾಗೂ ಶೇ. 1 ರಂತೆ, ರೂ. 77,141 ಪ್ರೋತ್ಸಾಹ ಧನ ನೀಡಲಾಯಿತು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಎನ್.ಭಟ್ ರವರು ವರದಿ ವಾಚಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಂಘದ ನಿದೇಶಕರಾದ ರಾಘವೇಂದ್ರ ಉಪಾಧ್ಯಾಯ, ರಾಮ ಕೆ.ಶೆಟ್ಟಿ, ಜಯ ಪೂಜಾರಿ, ನಾಗರಾಜ ಮುಚ್ಚಿನ್ನಾಯ, ಉಮೇಶ್ ಆಚಾರ್ಯ, ಉದಯ ಜಿ.,ಶಿವರಾಮ ಶೆಟ್ಟಿ, ಬೇಬಿ ಎಂ. ಪೂಜಾರ್ತಿ, ಪದ್ಮಾ ಮುಖಾರ್ದಿ ಮತ್ತು ಸುಮತಿ ಪಿ. ಅಂಚನ್ ಉಪಸ್ಥಿತರಿದ್ದರು.
ಕಾಪು ತಾಲೂಕಿಗೆ ನೂತನ ತಹಶೀಲ್ದಾರ್

Posted On: 02-10-2021 08:47PM
ಕಾಪು : ಇಲ್ಲಿನ ತಾಲೂಕು ತಹಶೀಲ್ದಾರ್ ಆಗಿ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಕೊಪ್ಪಳ, ಗದಗದಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರದೀಪ್ ಎಸ್. ಕುರುಡೇಕರ್ ಅಧಿಕಾರ ಹಸ್ತಾಂತರ ಮಾಡಿದರು.
ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿಯಲ್ಲಿ ಗಾಂಧಿ ಜಯಂತಿ ಆಚರಣೆ

Posted On: 02-10-2021 08:35PM
ಉಡುಪಿ : ಮಹಾತ್ಮಾಗಾಂಧೀಜಿಯವರ 153ನೇ ಜಯಂತಿಯನ್ನು ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿಯಲ್ಲಿ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು. ಗಾಂಧೀಜಿ ಯವರು ಏನು ಹೇಳಿದ್ದಾರೆ ಅದನ್ನು ಜೀವನದಲ್ಲಿ ಮಾಡಿ ತೋರಿಸಿ ಕೊಟ್ಟಂತಹ ಮಹಾನ್ ವ್ಯಕ್ತಿ, ಅಹಿಂಸೆಯಿಂದ ದೇಶಕ್ಕೆ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟ ಮಹಾತ್ಮ. ಇಂದಿಗೂ ದೇಶ ವಿದೇಶಗಳಲ್ಲಿ ಅವರ ಗುಣಗಾನ ನಡೆಯುತ್ತಿದೆ.

ನಮ್ಮ ನಾಯಕರಾದ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿಯವರು ಗಾಂಧೀಜಿಯವರ ಆಶಯದಂತೆ ಗ್ರಾಮವಾಸ್ತವ್ಯ ಮಾಡಿ ಅವರ ಆಶಯವನ್ನು ಈಡೇರಿಸಿರುತ್ತಾರೆ. ಅವರ ಆದರ್ಶ ನಮಗೆ ದಾರಿದೀಪವಾಗಿರುತ್ತದೆ ಎಂದು ಜಿಲ್ಲಾಧ್ಯಕ್ಷರಾದ ಯೋಗೀಶ್.ವಿ. ಶೆಟ್ಟಿಯವರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಈ ಸಂದರ್ಭ ಜಿಲ್ಲಾ ಕಾರ್ಯಧ್ಯಕ್ಷ ವಾಸುದೇವ ರಾವ್, ಜಯಕುಮಾರ್ ಪರ್ಕಳ, ಜಯರಾಮ ಆಚಾರ್ಯ, ಗಂಗಾಧರ ಬಿರ್ತಿ, ಯಸ್.ಪಿ ಬರ್ಬೋಜ, ಬಾಲಕೃಷ್ಣ ಆಚಾರ್ಯ ಕಬ್ಬೆಟ್ಟು , ರಾಮ ರಾವ್,ಆರ್.ಆರ್.ಪುತ್ರನ್, ಜಯಕರ ಶೆಟ್ಟಿಗಾರ್, ಹರಿಣಿ ಬಿ ಕೋಟ್ಯಾನ್, ಹರೀಶ್ ಬಿ ಹೆಗಡೆ, ಹರಿಣಿ ಆರ್ ಕೋಟ್ಯಾನ್,ತಬಸ್ಸುಮ್, ಆರ್. ಎನ್ ಕೋಟ್ಯಾನ್ ಯು.ಎ.ರಶೀದ್ ಮತ್ತಿತರ ಪಕ್ಷ ಕಾರ್ಯಕರ್ತರು ಭಾಗವಹಿಸಿದ್ದರು.