Updated News From Kaup
ಸ್ವಚ್ಛ ಶಿರ್ವ ನಮ್ಮ ಶಿರ್ವ : ಸ್ವಚ್ಛತೆ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ನೊಂದಿಗೆ ಸಹಕರಿಸಲು ಮನವಿ
Posted On: 20-10-2021 09:04PM
ಕಾಪು : ಸ್ವಚ್ಛ ಶಿರ್ವ ನಮ್ಮ ಶಿರ್ವ ಕಾರ್ಯಕ್ರಮದಡಿ ಶಿರ್ವ ಪಂಚಾಯತ್ ವ್ಯಾಪ್ತಿಯಲ್ಲಿನ ಸ್ವಚ್ಛತೆಗಾಗಿ ಪಂಚಾಯತ್ ಸಿಬ್ಬಂದಿಯವರೊಂದಿಗೆ ದಿನಾ ಬೆಳಿಗ್ಗೆ 7.30 ರಿಂದ 9 ಗಂಟೆವರೆಗೆ ಶ್ರಮಿಸಲಾಗುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕಸ , ತ್ಯಾಜ್ಯ ಬಿಸಾಡುವವರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ.
ಮಹರ್ಷಿ ವಾಲ್ಮೀಕಿ ಅವರ ಸಾಧನೆ ಎಲ್ಲರಿಗೂ ಪ್ರೇರಣೆ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
Posted On: 20-10-2021 07:58PM
ಉಡುಪಿ : ಬೇಡನಾಗಿದ್ದ ವ್ಯಕ್ತಿ ತನ್ನ ಸತತ ಪರಿಶ್ರಮ ,ಅಚಲ ಸಾಧನೆಯಿಂದ ಮಹರ್ಷಿ ವಾಲ್ಮೀಕಿಯಾಗಿ ರೂಪುಗೊಂಡಿದ್ದು, ವಾಲ್ಮೀಕಿ ಅವರ ಈ ಸಾಧನೆ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಇಂದು ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ನಗರಸಭೆ ಉಡುಪಿ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆ ಸಹಯೋಗದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ವಾಟ್ಸಾಪ್ ಬ್ರಾಡ್ ಕಾಸ್ಟ್ ಮೆಸೇಜ್ ಗೆ ಚಾಲನೆ
Posted On: 20-10-2021 06:24PM
ಕಾಪು : ಇಲ್ಕಲ್ ಕೆಂಪು ಶಿಲೆಯಿಂದ ನವೀಕೃತ ವಾಗಿ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಯು ಭರದಿಂದ ಸಾಗುತ್ತಿದೆ. ಈ ನಿಟ್ಟಿನಲ್ಲಿ ದೇವಳದಲ್ಲಿ ನಡೆಯುವ ವಿಶೇಷ ಕಾರ್ಯಕ್ರಮಗಳ ಬಗ್ಗೆ ಭಕ್ತಾದಿಗಳಿಗೆ ತ್ವರಿತವಾಗಿ ತಿಳಿಯುವಂತೆ ಮಾಡಲು ಈವರೆಗೆ ದೇವಸ್ಥಾನದ ಅಭಿವೃದ್ಧಿ ಸಮಿತಿಯ ಉಪ ಸಮಿತಿಗಳಾದ ಪ್ರಚಾರ ಸಮಿತಿ ಮತ್ತು ಆರ್ಥಿಕ ಸಮಿತಿಯ ಮುಖಾಂತರ ಸಂಗ್ರಹಿಸಲಾದ 36,000 ಕ್ಕೂ ಅಧಿಕ ವಾಟ್ಸಾಪ್ ನಂಬರ್ ಗಳಿಗೆ ಏಕಕಾಲದಲ್ಲಿ ಬ್ರಾಡ್ ಕಾಸ್ಟ್ ಮೆಸೇಜ್ ಹಾಕಲಾಯಿತು.
ಸುಂದರವಾಯಿತು ತ್ಯಾಜ್ಯ ಎಸೆಯುವ ಜಾಗ (Black Spot) : ಹೆಚ್ಚಿದ ಜನಸ್ಪಂದನ
Posted On: 19-10-2021 06:45PM
ಉಡುಪಿ : ಉಡುಪಿ ಜಿಲ್ಲಾ ಪಂಚಾಯತ್ ನ ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯಡಿ ಜಿಲ್ಲೆಯಾದ್ಯಂತ ನಡೆಯುತ್ತಿರುವ ಸಾರ್ವಜನಿಕ ಸ್ಥಳಗಳಲ್ಲಿ ಅದರಲ್ಲೂ ಮುಖ್ಯವಾಗಿ ರಸ್ತೆ, ಬಸ್ ಸ್ಟ್ಯಾಂಡ್, ನದಿಯ ಪಕ್ಕದಲ್ಲಿ ತ್ಯಾಜ್ಯ ಎಸೆಯುವ ಜಾಗ ಗುರುತಿಸುವ (Garbage Black Spot Identification) ಕಾರ್ಯಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರಕಿದ್ದು, ಜಿಲ್ಲೆಯಲ್ಲಿ ಇದುವರೆಗೆ 150 ಕ್ಕೂ ಹೆಚ್ಚು ಕಡೆಗಳಲ್ಲಿ Black Spot ನಿರ್ಮೂಲನಾ ಮಾಡಲಾಗಿದೆ. ಈವರೆಗೆ ಒಟ್ಟು 55 ಕಡೆಗಳಲ್ಲಿ Black Spot ಇರುವ ಬಗ್ಗೆ WhatsApp number 9483330564 ಗೆ ಸಾರ್ವಜನಿಕರು ಮಾಹಿತಿ ನೀಡಿದ್ದು, ಇದರಲ್ಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಭಾಗಕ್ಕೆ ಸೇರಿದ 42 'Black Spot ಗಳಿದ್ದು - ಅವುಗಳಲ್ಲಿ 40 ಅನ್ನು ಸಂಪೂರ್ಣ ಸ್ವಚ್ಛಗೊಳಿಸಲಾಗಿದೆ. ಉಳಿದಂತೆ ನಗರ ವ್ಯಾಪ್ತಿಗೆ ಸೇರಿದ Garbage Black Spot ಗಳನ್ನು ಸ್ವಚ್ಛಗೊಳಿಸುವ ಬಗ್ಗೆ ನಗರಸಭೆಗೆ ಮಾಹಿತಿ ನೀಡಲಾಗಿದೆ.
ಇನ್ನಾದಲ್ಲಿ ಇರುವ ಬ್ರೈಟ್ ಕಂಪನಿಯ ಘನ ತ್ಯಾಜ್ಯ ಎಸೆದ ವ್ಯಕ್ತಿಗೆ ಎಲ್ಲೂರು ಪಂಚಾಯತಿಯಿಂದ ದಂಡ
Posted On: 19-10-2021 06:34PM
ಕಾಪು : ನಂದಿಕೂರು ಸಮೀಪದ ಇನ್ನಾದಲ್ಲಿ ಇರುವ ಬ್ರೈಟ್ ಕಂಪನಿಯ ಘನ ತ್ಯಾಜ್ಯವನ್ನು ಬೆಳಪುವಿನ ರಝಕ್ ಎಂಬ ವ್ಯಕ್ತಿ ಎಲ್ಲೂರು ವ್ಯಾಪ್ತಿಯಲ್ಲಿ ವಾಹನದ ಮೂಲಕ ತಂದು ಎಸೆದಿರುವುದನ್ನು ಸಾಕ್ಷಿ ಸಮೇತ ಎಲ್ಲೂರು ಪಂಚಾಯತ್ ಅಧ್ಯಕ್ಷರು ಪತ್ತೆ ಹಚ್ಚಿದ್ದಾರೆ.
ಭತ್ತ ಕಟಾವು ಯಂತ್ರ: ಗಂಟೆಗೆ 1800 ರೂ ದರ ನಿಗದಿ
Posted On: 18-10-2021 11:03PM
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಭತ್ತದ ಕಟಾವು ಸನ್ನಿಹಿತವಾಗಿದ್ದು, ಹೊರಜಿಲ್ಲೆ ಹಾಗೂ ರಾಜ್ಯಗಳಿಂದ ಕಂಬೈನ್ಡ್ ಹಾರ್ವೆಸ್ಟರ್ಗಳು ಜಿಲ್ಲೆಗೆ ಆಗಮಿಸುತ್ತಿವೆ. ಜಿಲ್ಲೆಯಲ್ಲಿ ಕೂಲಿಯಾಳುಗಳ ಸಮಸ್ಯೆಯಿದ್ದು, ಕಟಾವಿನ ಅವಧಿಯಲ್ಲಿ ಮಳೆ ಸಹ ಬರುವುದರಿಂದ ರೈತರು ಭತ್ತದ ಬೆಳೆ ಕಟಾವಿಗೆ ಅನಿವಾರ್ಯವಾಗಿ ಕಂಬೈನ್ಡ್ ಹಾರ್ವೆಸ್ಟರ್ಗಳನ್ನು ಅವಲಂಬಿಸಿರುತ್ತಾರೆ. ಸದ್ರಿ ಸನ್ನಿವೇಶದ ಪ್ರಯೋಜನ ಪಡೆದು ಕೆಲವೊಂದು ಖಾಸಗಿ ಕಂಬೈನ್ಡ್ ಹಾರ್ವೆಸ್ಟರ್ ಮಾಲಕರು ಸ್ಥಳೀಯ ಮಧ್ಯವರ್ತಿಗಳೊಂದಿಗೆ ಸೇರಿ ರೈತರಿಂದ ಭತ್ತ ಕಟಾವಿಗೆ ಹೆಚ್ಚಿನ ಬಾಡಿಗೆ ದರವನ್ನು ಪಡೆಯುತ್ತಿರುವ ಬಗ್ಗೆ ರೈತ ಸಂಘಟನೆಗಳು ಹಾಗೂ ರೈತರಿಂದ ನಿರಂತರವಾಗಿ ಜಿಲ್ಲಾಡಳಿತಕ್ಕೆ ದೂರುಗಳು ಸ್ವೀಕೃತವಾಗುತ್ತಿವೆ.
ಯುಪಿಎಸ್ಸಿ, ಕೆಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಶೀಘ್ರದಲ್ಲಿ ತರಬೇತಿ ; ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 21 ಕೊನೆಯ ದಿನ
Posted On: 18-10-2021 10:53PM
ಉಡುಪಿ : ಉಡುಪಿ ಜಿಲ್ಲಾಡಳಿತದ ವತಿಯಿಂದ, ಭಾರತೀಯ ನಾಗರೀಕ ಸೇವಾ ಪರೀಕ್ಷೆ ( ಯುಪಿಎಸ್ಸಿ) ಮತ್ತು ಕರ್ನಾಟಕ ನಾಗರೀಕ ಸೇವಾ ಪರೀಕ್ಷೆ (ಕೆಪಿಎಸ್ಸಿ) ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಛಿಸುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ, ಶೀಘ್ರದಲ್ಲಿ ತರಬೇತಿಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ.
ಎಬಿವಿಪಿ ಬಜಗೋಳಿ ಘಟಕದಿಂದ ಬಜಗೋಳಿ ಪದವಿಪೂರ್ವ ಕಾಲೇಜಿನ ಸಮಸ್ಯೆಯ ಕುರಿತು ಮನವಿ
Posted On: 18-10-2021 10:38PM
ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕಿನ ಬಜಗೋಳಿ ಘಟಕದಿಂದ ಕಾರ್ಕಳ ತಾಲೂಕಿನ ಬಜಗೋಳಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎದುರಿಸುತ್ತಿದ್ದ ಶೌಚಾಲಯದ ಸಮಸ್ಯೆಯ ಕುರಿತು ಕಾಲೇಜು ಪ್ರಾಂಶುಪಾಲರಿಗೆ ಮನವಿ ನೀಡಲಾಯಿತು.
ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಅನ್ನಸಂತರ್ಪಣೆ ಪುನರಾರಂಭ
Posted On: 18-10-2021 08:43PM
ಕಟಪಾಡಿ: ಇಲ್ಲಿನ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಪ್ರತಿ ಸೋಮವಾರ ಹಾಗೂ ಶುಕ್ರವಾರಗಳಂದು ನಡೆಯುತ್ತಿದ್ದ ಅನ್ನಸಂತರ್ಪಣೆಯನ್ನು ಅ.18ರಿಂದ ಪುನರಾರಂಭಿಸಲಾಗುತ್ತಿದೆ.
ಕಾಪು ಪೋಲಿಸ್ ಠಾಣೆಯ ಆಯುಧ ಪೂಜೆಯಲ್ಲೂ ಕೋಮುಭಾವನೆ ಕಂಡದ್ದು ಸಿದ್ಧರಾಮಯ್ಯಗೆ ಮಾತ್ರ : ಲಾಲಾಜಿ ಆರ್. ಮೆಂಡನ್
Posted On: 18-10-2021 08:24PM
ಕಾಪು : ಇಲ್ಲಿನ ಪೊಲೀಸ್ ಆಯುಧ ಪೂಜೆ ದಿನ ಒಂದೇ ರೀತಿಯ ವಸ್ತ್ರ ಧರಿಸಿದ್ದರಲ್ಲಿ ಕೋಮುಭಾವನೆ ಕಂಡದ್ದು ಸಿದ್ಧರಾಮಯ್ಯಗೆ ಮಾತ್ರ. ಸಮಾಜದಲ್ಲಿ ಎರಡು ಪಂಗಡಗಳನ್ನು ಎತ್ತಿಕಟ್ಟುವುದರಲ್ಲಿ ಒಡೆದು ಆಳುವುದರಲ್ಲಿ ಸಿದ್ದರಾಮಯ್ಯ ನಿಸ್ಸಿಮರು, ಈ ಕಾಂಗ್ರೆಸ್ ಸಂಸ್ಕೃತಿಯಿಂದಾಗಿ ದ್ವಂದ್ವ ನೀತಿಯಿಂದ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಅಧೋಗತಿಯಲ್ಲಿದೆ.
