Updated News From Kaup
ಶಿಕ್ಷಕರು ಬೇಕಾಗಿದ್ದಾರೆ : ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಕುತ್ಯಾರ್
Posted On: 18-10-2021 08:20PM
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕುತ್ಯಾರುವಿನ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸಂಸ್ಥೆಗೆ ಎಂ.ಎ(ಇಂಗ್ಲಿಷ್), ಬಿ.ಎಡ್ ಮತ್ತು ಎಂ.ಎ (ಹಿಂದಿ), ಬಿ.ಎಡ್ ಪದವಿ ಪಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಬೋಧಿಸಿ 2-3 ವರ್ಷಗಳ ಅನುಭವ ಹೊಂದಿದವರು ತಮ್ಮ ಪರಿಚಯ ಮತ್ತು ಇತ್ತೀಚಿನ ಛಾಯಾಚಿತ್ರದೊಂದಿಗೆ ಅರ್ಜಿ ಸಲ್ಲಿಸಲು (suryachaitanyaga@gmail.com) ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದ 18 ರಿಂದ 45 ರ ವಯೋಮಿತಿಯ ಯುವಕ ಯುವತಿಯರಿಗೆ ಉಚಿತ ಸ್ವ ಉದ್ಯೋಗ ತರಬೇತಿ ಶಿಬಿರ
Posted On: 18-10-2021 07:39PM
ಉಡುಪಿ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಮಣಿಪಾಲ- ಕೆನರಾ ಬ್ಯಾಂಕ್ ಆರ್ ಸೆಟಿ (ಸಿಂಡ್ಆರ್ ಸೆಟಿ) ಇವರ ವತಿಯಿಂದ ಉಚಿತ ಸ್ವ ಉದ್ಯೋಗ ತರಬೇತಿಯು ಅಕ್ಟೋಬರ್18ರಿಂದ ನವೆಂಬರ್ 17ರ ವರೆಗೆ 30 ದಿನಗಳ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ನಡೆಯಲಿದೆ.
ರೋಟರಿ ಸೈಬ್ರಕಟ್ಟೆಯ ವತಿಯಿಂದ ರೋಟರಿ ಮಾಜಿ ಸಹಾಯಕ ಗವರ್ನರ್ ಗಳ ಸಮಾಗಮ ಕಾರ್ಯಕ್ರಮ, ಸನ್ಮಾನ
Posted On: 18-10-2021 07:36PM
ಉಡುಪಿ : ರೋಟರಿ ಸೈಬ್ರಕಟ್ಟೆಯ ವತಿಯಿಂದ ರೋಟರಿ ಮಾಜಿ ಸಹಾಯಕ ಗವರ್ನರ್ ಗಳ ಸಮಾಗಮ ಕಾರ್ಯಕ್ರಮವು ರೋಟರಿ ಭವನದಲ್ಲಿ ಜರುಗಿತು.
ಗ್ರಾಮೀಣ ಪ್ರದೇಶದ 18 ರಿಂದ 45 ರ ವಯೋಮಿತಿಯ ಯುವಕ ಯುವತಿಯರಿಗೆ ಉಚಿತ ಸ್ವ ಉದ್ಯೋಗ ತರಬೇತಿ ಶಿಬಿರ
Posted On: 18-10-2021 07:25PM
ಉಡುಪಿ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಮಣಿಪಾಲ- ಕೆನರಾ ಬ್ಯಾಂಕ್ ಆರ್ ಸೆಟಿ (ಸಿಂಡ್ಆರ್ ಸೆಟಿ) ಇವರ ವತಿಯಿಂದ ಉಚಿತ ಸ್ವ ಉದ್ಯೋಗ ತರಬೇತಿಯು ದಿನಾಂಕ 18ರಿಂದ 17ರ ವರೆಗೆ 30 ದಿನಗಳ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ನಡೆಯಲಿದೆ.
ಕಾಪು ಯುವ ಕಾಂಗ್ರೆಸ್ ವತಿಯಿಂದ ಯುವ ಸ್ಪರ್ಶ ಕಾರ್ಯಕ್ರಮಕ್ಕೆ ಚಾಲನೆ, ಭಿತ್ತಿ ಪತ್ರ ಬಿಡುಗಡೆ
Posted On: 18-10-2021 09:49AM
ಕಾಪು : ಗ್ರಾಮೀಣ ಕಾಂಗ್ರೆಸ್ ಮತ್ತು ಗ್ರಾಮೀಣ ಯುವ ಕಾಂಗ್ರೆಸ್ ಸಹಕಾರದಿಂದ ಗ್ರಾಮೀಣ ಮಟ್ಟದಲ್ಲಿ ಯುವಕರನ್ನು ಒಗ್ಗೂಡಿಸಿ ಸರಕಾರದಿಂದ ಸವಲತ್ತುಗಳ ಬಗ್ಗೆ ಜನರಿಗೆ ಮಾಹಿತಿ ನೀಡುವುದು, ಸ್ವಚ್ಚತಾ ಕಾರ್ಯಕ್ರಮ, ರಕ್ತದಾನ ಶಿಬಿರ, ಯುವಜನತೆಗೆ ಕ್ರೀಡಾ ಕೂಟ ಹಾಗು ಸಾಂಸ್ಕೃತಿಕ ಸ್ಪರ್ಧೆ, ಅರೋಗ್ಯ ತಪಾಸಣಾ ಶಿಬಿರ , ಮತದಾರರ ಪಟ್ಟಿ ಗೆ ನೂತನ ಮತದಾರರ ಸೇರ್ಪಡೆ ಮತ್ತು ತಿದ್ದುಪಡಿ, ಹಾಗು ಗ್ರಾಮದ ಅಭಿವೃದ್ಧಿ ಯ ಬಗ್ಗೆ ಸಮಾಲೋಚನೆ ಸಭೆಗಳನ್ನು ನಡೆಸುವುದು ಮೂಲಕ ಇಂತಹ ವಿನೂತನ ಯೋಜನೆ ಯನ್ನು ಕಾರ್ಯರೂಪಕ್ಕೆ ತರುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತ ರು ಗ್ರಾಮದ ಮಟ್ಟದ ಪಕ್ಷದ ವರ್ಚಸ್ಸು ಇನ್ನೂ ಷ್ಟು ಬಲಪಡಿಸುವುದರ ಜೊತಗೆ ಸಂಘಟನಾತ್ಮಕ ಕೆಲಸ ಕಾರ್ಯ ಗಳನ್ನು ಮಾಡಬೇಕಾಗಿದೆ. ಜನರಿಗೆ ಅಗತ್ಯ ಸೇವೆಯನ್ನು ನೀಡುವ ಮೂಲಕ ಗ್ರಾಮದ ಅಭಿವೃದ್ಧಿ ಗೆ ಯುವ ಸ್ಪರ್ಶವನ್ನು ನೀಡುವುದರೊಂದಿಗೆ ಯುವಕರಿಗೆ ಸಮಾಜಿಕ ಕೆಲಸ ಕಾರ್ಯ ಮೂಲಕ ಪಕ್ಷ ಸಂಘಟನೆಯ ಮಾಡುವ ಕಾರ್ಯ ಯಶ್ವಸಿಯಾಗಲಿ ಎಂದು ಕೆಪಿಸಿಸಿ ಕೊ- ಅರ್ಡಿನೇಟರ್ ನವೀನ್ ಚಂದ್ರ ಜೆ. ಶೆಟ್ಟಿ ಹೇಳಿದರು.
ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ ತಂಡದಿಂದ ವಿಜಯ ಬಾಲನಿಕೇತನ ವಿದ್ಯಾರ್ಥಿ ನಿಲಯದಲ್ಲಿ ಉಚಿತ ಆರೋಗ್ಯ ತಪಾಸಣೆ
Posted On: 18-10-2021 08:54AM
ಉಡುಪಿ : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಆದಿತ್ಯವಾರ ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನ (ಆರ್ಥಿಕ ಅಶಕ್ತ ಬಾಲಕರ ಉಚಿತ ವಿದ್ಯಾರ್ಥಿ ನಿಲಯ) ಕ್ಕೆ ಭೇಟಿ ನೀಡಿ ಉಚಿತ ಆರೋಗ್ಯ ತಪಾಸಣೆ ನಡೆಸಿ ಅಲ್ಲಿನ ವಿದ್ಯಾರ್ಥಿಗಳಿಗೆ ರಾತ್ರಿ ಊಟದ ವ್ಯವಸ್ಥೆ ಮಾಡಲಾಯಿತು.
ಮೀನುಗಾರರ ಗ್ರಾಮಗಳ ಅಭಿವೃದ್ದಿಗೆ 7.5 ಕೋಟಿ ರೂ : ಕೇಂದ್ರ ಸಚಿವ ಡಾ .ಮುರುಗನ್
Posted On: 18-10-2021 08:45AM
ಉಡುಪಿ : ಮೀನುಗಾರರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಗ್ರಾಮಗಳನ್ನು ಗುರುತಿಸಿ, ಆ ಗ್ರಾಮಗಳಲ್ಲಿ ಮೀನುಗಾರರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಿ ಅಭಿವೃದ್ದಿಪಡಿಸಲು 7.5 ಕೋಟಿ ರೂ ಅನುದಾನ ನೀಡುವ ನೂತನ ಯೋಜನೆ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಮೀನುಗಾರಿಕೆ, ,ವಾರ್ತಾ ಮತ್ತು ಪ್ರಚಾರ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಖಾತೆಯ ರಾಜ್ಯ ಸಚಿವ ಡಾ. ಎಲ್. ಮುರುಗನ್ ಹೇಳಿದರು. ಅವರು ಇಂದು ಮಲ್ಪೆ ಬಂದರಿಗೆ ಭೇಟಿ ನೀಡಿ,ಮೀನುಗಾರರರೊಂದಿಗೆ ನಡೆದ ಸಂವಾದ ನಡೆಸಿ, ಮಾತನಾಡಿದರು. ಕೇಂದ್ರ ಸರ್ಕಾರದ ಮೂಲಕ ,ಮೀನುಗಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಗ್ರಾಮಗಳಲ್ಲಿ , ಮೀನುಗಾರರಿಗೆ ಅಗತ್ಯ ಮೂಲಭೂತ ಸೌಕರ್ಯ,ಮೀನುಗಾರಿಕಾ ಚಟುವಟಿಕೆ ಮತ್ತು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳ ಅಭಿವೃದ್ದಿಗೆ ಅನುಕೂಲವಾಗುವ ಕಾಮಗಾರಿಗಳನ್ನು ಕೈಗೊಳ್ಳಲು 7.5 ಕೋಟಿ ರೂ ಗಳನ್ನು ನೀಡಲಾಗುವುದು, ಮೀನುಗಾರರ ಗ್ರಾಮಗಳನ್ನು ಗುರುತಿಸುವ ಕಾರ್ಯ ಆರಂಭವಾಗಲಿದೆ ಎಂದು ಸಚಿವರು ತಿಳಿಸಿದರು.
ಇನ್ನಂಜೆ : ಮೂರು ದಿನಗಳಿಂದ ಬಾವಿಯಲ್ಲಿದ್ದ ನಾಯಿಯನ್ನು ರಕ್ಷಿಸಿದ ಯುವಕರು
Posted On: 17-10-2021 06:56PM
ಕಾಪು : ಸುಮಾರು ಮೂರು ದಿನಗಳಿಂದ ಶಾಂತ ಆಚಾರ್ಯರವರ ಬಾವಿಯಲ್ಲಿ ಬೀದಿನಾಯಿಯೊಂದು ಆಕಸ್ಮಿಕವಾಗಿ ಬಿದ್ದಿತ್ತು. ಶಾಂತ ಆಚಾರ್ಯರವರು ಗಮನಿಸಿ ಇನ್ನಂಜೆ ಗ್ರಾಮ ಪಂಚಾಯಿತಿಯ ಸದಸ್ಯರಾದ ಸುನೀತಾ ಸಂಜೀವ ಮೂಲ್ಯ ಇವರನ್ನು ಸಂಪರ್ಕಿಸಿ ನಾಯಿಯನ್ನು ರಕ್ಷಿಸುವಂತೆ ಕೇಳಿಕೊಂಡರು.
ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ : ಸಮಸ್ಯೆಗಳಿಗೆ ಪರಿಹಾರ ಸೂಚಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
Posted On: 17-10-2021 02:45PM
ಉಡುಪಿ : ಪ್ರತೀ ತಿಂಗಳ 3 ನೇ ಶನಿವಾರ ನಡೆಯುತ್ತಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ, ಕೋವಿಡ್19 ನಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು, ಸರ್ಕಾರದ ಸೂಚನೆಯಂತೆ ಅಕ್ಟೋಬರ್ 16 ರಿಂದ ಪ್ರಾರಂಭಗೊಂಡಿದ್ದು, ಬೈಂದೂರು ತಾಲೂಕಿನ ಜಡ್ಕಲ್ ನಲ್ಲಿ , ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂದಿಸಿದ 57 ಕ್ಕೂ ಅರ್ಜಿಗಳಿಗೆ ಸಂಬಂದಿಸಿದಂತೆ ಸೂಕ್ತ ಪರಿಹಾರ ಕೈಗೊಳ್ಳಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಜಡ್ಕಲ್ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು,ಅಲ್ಲಿನ ಗ್ರಂಥಾಲಯ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಪರಿಶೀಲಿಸಿದರು,ನಂತರ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದರು. ಕೊಲ್ಲೂರು ಮೂಕಾಂಬಿಕಾ ದೇವಳದ ಪ್ರೌಢಶಾಲೆಗೆ ಬೇಟಿ ನೀಡಿ,ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
DUBAI EXPO 2020 - ಜನ ಮೆಚ್ಚುಗೆ ಪಡೆದ ಪಿಲಿ ನಲಿಕೆ
Posted On: 17-10-2021 12:51PM
ಮಂಗಳೂರು : ದುಬಾಯಿಯಲ್ಲಿ ನಡೆಯುತ್ತಿರುವ "DUBAI EXPO 2020", ಇದರಲ್ಲಿ ಭಾರತದ ಪೆವಿಲಿಯನ್ ನ ಅಂತರರಾಷ್ಟ್ರೀಯ ವೇದಿಕೆಯಲ್ಲಿ ನಮ್ಮ ತುಳುನಾಡಿನ ಪ್ರಸಿದ್ಧ ಕಲೆ "ಪಿಲಿ ನಲಿಕೆ" ಜನ ಮೆಚ್ಚುಗೆ ಪಡೆಯಿತು.
