Updated News From Kaup
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’
Posted On: 17-10-2021 11:53AM
ಬೆಂಗಳೂರು : ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.17ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಲ್ ಇಂಡಿಯಾ ಫೆಡರೇಷನ್ ಆಫ್ ಮಾಸ್ಟರ್ ಪ್ರಿಂಟರ್ಸ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷ, ಬೆಂಗಳೂರು ಕ್ಲಸ್ಟರ್ ನ ಅಧ್ಯಕ್ಷ ಸಿ ಆರ್ ಜನಾರ್ಧನ್ ಉಡುಪಿ ಭೇಟಿ
Posted On: 17-10-2021 11:15AM
ಉಡುಪಿ : ಆಲ್ ಇಂಡಿಯಾ ಫೆಡರೇಷನ್ ಆಫ್ ಮಾಸ್ಟರ್ ಪ್ರಿಂಟರ್ಸ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷರು ಹಾಗೂ ಬೆಂಗಳೂರು ಕ್ಲಸ್ಟರ್ ನ ಅಧ್ಯಕ್ಷರು ಸಿ ಆರ್ ಜನಾರ್ಧನ್ ರವರು ಉಡುಪಿಗೆ ಆಗಮಿಸಿದಾಗ ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ದ ವತಿಯಿಂದ ಸ್ವಾಗತಿಸಿ, ಗೌರವಿಸಲಾಯಿತು.
ಕುತ್ಯಾರು : ಅಕ್ಟೋಬರ್ 19, ಉಚಿತ ರೇಬಿಸ್ ಲಸಿಕಾ ಶಿಬಿರ
Posted On: 17-10-2021 11:06AM
ಕಾಪು, ಅ.17 : ಜಿಲ್ಲಾ ಪಂಚಾಯತ್ ಉಡುಪಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಡುಪಿ ಜಿಲ್ಲೆ, ಕುತ್ಯಾರು ಗ್ರಾಮ ಪಂಚಾಯತ್, ಪಶು ಚಿಕಿತ್ಸಾಲಯ ಶಿರ್ವ ಇವರ ಸಂಯುಕ್ತ ಆಶ್ರಯದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ಅಕ್ಟೋಬರ್ 19, ಮಂಗಳವಾರ ಬೆಳಗ್ಗೆ 9.30 ರಿಂದ 11 ಗಂಟೆಯವರೆಗೆ ಕುತ್ಯಾರು ಗ್ರಾಮ ಪಂಚಾಯತ್ ಮತ್ತು ಯುವಕ ಮಂಡಲ ಕುತ್ಯಾರು ಇಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೋಟರಿ ಸೈಬ್ರಕಟ್ಟೆಯ ಸಹಭಾಗಿತ್ವದಲ್ಲಿ ಹೈ ಸ್ಟೆಪ್ಪರ್ಸ್ ಡಾನ್ಸ್ ತರಬೇತಿ ತರಗತಿ ಉದ್ಘಾಟನೆ
Posted On: 16-10-2021 07:52PM
ಉಡುಪಿ : ಸೈಬ್ರಕಟ್ಟೆಯ ರೋಟರಿ ಭವನದಲ್ಲಿ ರೋಟರಿ ಸೈಬ್ರಕಟ್ಟೆಯ ಸಹಭಾಗಿತ್ವದಲ್ಲಿ ಹೈ ಸ್ಟೆಪ್ಪರ್ಸ್ ಡಾನ್ಸ್ ತರಬೇತಿ ತರಗತಿಯ ಉದ್ಘಾಟನೆಯನ್ನು ರೋಟರಿ ಭವನದ ಮಾಲಕರಾದ ಕಾರ್ಯದರ್ಶಿ ಅಣ್ಣಯ್ಯದಾಸ್ ಅವರು ನೆರವೇರಿಸಿದರು.
ಬೈಂದೂರು : ವಿಜಯದಶಮಿ ದಿನದಂದೇ ನಾಡ ಕೊರಗ ಕಾಲೋನಿಯಲ್ಲಿ ಅಗ್ನಿ ದುರಂತ, ಸಂಪೂರ್ಣ ಮನೆ ಭಸ್ಮ
Posted On: 16-10-2021 07:44PM
ಉಡುಪಿ : ವಿಜಯದಶಮಿಯ ದಿನ ಊರೆಲ್ಲಾ ಸಂಭ್ರಮದಿಂದ ಹಬ್ಬ ಮಾಡುತ್ತಿರುವಾಗ ನಿನ್ನೆ ನಾಡ, ಪಡುಕೋಣೆ ಹೈಸ್ಕೂಲ್ ಎದುರುಗಡೆ ಇರುವ ಕೊರಗ ಕಾಲೋನಿಯ ನಿವಾಸಿ ಶ್ರೀಮತಿ ಸುನೀತಾ ರ ವರ ಮನೆ ಬೆಂಕಿಗೆ ಆಹುತಿಯಾಗಿ ತನ್ನ ಸೂರು ಕಳೆದುಕೊಂಡು ದಿಕ್ಕು ತೋಚದೆ ಮುಂದೇನು ಗತಿ ಎಂದು ಈ ಬಡ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ.
ಶ್ರೀ ದೇವಿ ಭಜನಾ ಮಂಡಳಿ ಮಂಡೇಡಿ : ದುರ್ಗಾ ನಮಸ್ಕಾರ, ಭಜನೆಯೊಂದಿಗೆ ನವರಾತ್ರಿ ಮಹೋತ್ಸವ ಸಂಪನ್ನ
Posted On: 16-10-2021 04:57PM
ಇನ್ನಂಜೆ : ಶ್ರೀ ದೇವಿ ಭಜನಾ ಮಂಡಳಿ (ರಿ.) ಮಂಡೇಡಿ ಇಲ್ಲಿನ ಭಜನಾ ಮಂದಿರದಲ್ಲಿ ನವರಾತ್ರಿ ಸಂದರ್ಭದಲ್ಲಿ ನಿತ್ಯ ಭಜನೆ ನಡೆದಿದ್ದು, ವಿಜಯ ದಶಮಿಯಂದು ಸಾಮೂಹಿಕ ದುರ್ಗಾ ನಮಸ್ಕಾರ ಪೂಜೆ, ಭಜನಾ ಕಾರ್ಯಕ್ರಮ ಹಾಗೂ ಇನ್ನಿತರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನವರಾತ್ರಿ ಮಹೋತ್ಸವ ಸಂಪನ್ನಗೊಂಡಿತು.
ರೋಟರಿ ಸೈಬ್ರಕಟ್ಟೆಯ ಅಣ್ಣಯ್ಯದಾಸ್ ದಂಪತಿಯಿಂದ ಸ.ಹಿ.ಪ್ರಾ.ಶಾಲೆ ಸೈಬ್ರಕಟ್ಟೆಗೆ ಅಗತ್ಯ ವಸ್ತು ಹಸ್ತಾಂತರ
Posted On: 15-10-2021 09:01PM
ಉಡುಪಿ : ರೋಟರಿ ಸೈಬ್ರಕಟ್ಟೆಯ ಕಾರ್ಯದರ್ಶಿ ಅಣ್ಣಯ್ಯದಾಸ್ ದಂಪತಿಗಳ ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಅವರ ಕೊಡುಗೆಯಾದ ನಲಿ ಕಲಿ ಪರಿಕರ ಗಳ ಜೋಡಣೆಗೆ ಅಗತ್ಯತೆ ಇರುವ ಕಪಾಟು ಸ.ಹಿ.ಪ್ರಾ.ಶಾಲೆ ಸೈಬ್ರಕಟ್ಟೆಗೆ ಹಸ್ತಾಂತರ ಕಾರ್ಯಕ್ರಮವನ್ನು ರೋಟರಿ ಕ್ಲಬ್ ಸೈಬ್ರಕಟ್ಟೆಯಿಂದ ಮಾಡಲಾಯಿತು.
ಶಿರ್ವ ಪೋಲಿಸ್ ಸ್ಟೇಷನ್ ಆಯುಧ ಪೂಜೆ - ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಭಾಗಿ
Posted On: 15-10-2021 08:52PM
ಕಾಪು : ಕಾಪು ಕ್ಷೇತ್ರದ ಮಾಜಿ ಶಾಸಕರು, ಸಚಿವರೂ ಆದ ಸನ್ಮಾನ್ಯ ವಿನಯ ಕುಮಾರ್ ಸೊರಕೆಯವರು ಶಿರ್ವ ಪೋಲಿಸ್ ಸ್ಟೇಷನ್ ನಲ್ಲಿ ನಡೆದ ಆಯುಧ ಪೂಜೆಯಲ್ಲಿ ಭಾಗವಹಿಸಿದರು.
ರೋಟರಿಯಲ್ಲಿ ಆರೋಗ್ಯ, ಶಿಕ್ಷಣ, ಮಾನವೀಯನೆಲೆಯ ಸಮಾಜಮುಖಿ ಸೇವಾಕಾರ್ಯಗಳು ನಿರಂತರ : ರೋಟರಿ ಗವನ೯ರ್ ಎಂ.ಜಿ.ರಾಮಚಂದ್ರಮೂರ್ತಿ
Posted On: 15-10-2021 08:42PM
ಶಿರ್ವ : ರೋಟರಿ ಅಂತರಾಷ್ಟ್ರೀಯ ಸೇವಾ ಸಂಸ್ಥೆ ಸಮಾನ ಮನಸ್ಕರ, ಸಮಾನಚಿಂತಕರ ಸೇವಾದರ್ಶ ತತ್ವಗಳನ್ನು ಮೈಗೂಡಿಸಿಕೊಂಡ ಆಸಕ್ತರ ಒಕ್ಕೂಟ. ರೋಟರಿಯಲ್ಲಿ ಆರೋಗ್ಯ, ಶಿಕ್ಷಣ, ಕೃಷಿ, ಪರಿಸರ ಮಾನವೀಯ ನೆಲೆಯ ಸಮಾಜಮುಖಿ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತವೆ. ಸರಕಾರ ಮಾಡುವ ಹಲವಾರು ಕಾರ್ಯಗಳನ್ನು ರೋಟರಿ ಸಂಸ್ಥೆಗಳು ನಿರಂತರವಾಗಿ ಮಾಡುತ್ತಿವೆ ಎಂದು ರೋಟರಿ ಅಂತರಾಷ್ಟ್ರೀಯ ಜಿಲ್ಲೆ ೩೧೮೨ ಇದರ ಜಿಲ್ಲಾ ಗವರ್ನರ್ ಎಂ.ಜಿ.ರಾಮಚಂದ್ರ ಮೂರ್ತಿ ಶಿವಮೊಗ್ಗ ನುಡಿದರು. ಅವರು ಶುಕ್ರವಾರ ೫೧ ವರ್ಷಗಳ ಸೇವಾ ಇತಿಹಾಸ ಹೊಂದಿರುವ ಪ್ರತಿಷ್ಠಿತ ಶಿರ್ವ ರೋಟರಿ ಸಂಸ್ಥೆಗೆ ಅಧಿಕೃತ ಸಂದರ್ಶನ ನೀಡಿ ದಿನಪೂರ್ತಿ ಹಲವಾರು ಸೇವಾಯೋಜನೆಗಳನ್ನು ಲೋಕಾರ್ಪಣೆಗೊಳಿಸಿ ಸಂಜೆ ಬಂಟಕಲ್ಲು ರೋಟರಿ ಸಭಾಭವನದಲ್ಲಿ ಜರುಗಿದ ಸಾರ್ವಜನಿಕ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು,ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.
ಆಧ್ಯಾತ್ಮಿಕ ನೆಲೆಯಲ್ಲಿ ನಾನು ಯಾರು ಎನ್ನುವ ಅರಿವಿನ ಪೂರ್ಣತೆಯಿಂದಷ್ಟೇ ಜಗತ್ತಿನ ಅರಿವು ಹೊಂದಲು ಸಾಧ್ಯ : ಸಿಎಂ ಬೊಮ್ಮಾಯಿ
Posted On: 13-10-2021 11:36PM
ಅದಮಾರು : ಧ್ಯಾನ, ಜ್ಞಾನದಿಂದ ಅರಿವಿನ ಪೂರ್ಣಪ್ರಜ್ಞರಾಗಿ ವಿದ್ಯಾರ್ಥಿಗಳು ಜಗತ್ತು ಗೆಲ್ಲುವ ಸಾಧಕರಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅವರು ಪಡುಬಿದ್ರಿ ಸಮೀಪದ ಅದಮಾರಿನಲ್ಲಿ ಪೂರ್ಣಪ್ರಜ್ಞ ಪದವಿ ಕಾಲೇಜು ಕಟ್ಟಡ ನಿರ್ಮಾಣದ7.40ಕೋಟಿ ರೂ.ವೆಚ್ಚದ ಯೋಜನೆಗೆ ಬುಧವಾರ ಶಿಲಾನ್ಯಾಸ ನೆರವೇರಿಸಿ ವಾಸುದೇವ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದರು. ಪ್ರಜ್ಞಾಶೀಲರಾಗಿರುವುದೇ ಬದುಕಿನ ಬಹುದೊಡ್ಡ ಸಾಧನೆ,ಯಾವುದೇ ಕೆಲಸ ಕಾರ್ಯಗಳಲ್ಲಿ ಪ್ರಜ್ಞಾಪೂರ್ವಕವಾಗಿ ತೊಡಗಿಸಿಕೊಳ್ಳಬೇಕು. ಆಧ್ಯಾತ್ಮಿಕ ನೆಲೆಯಲ್ಲಿ ನಾನು ಯಾರು ಎನ್ನುವ ಅರಿವಿನ ಪೂರ್ಣತೆಯಿಂದಷ್ಟೇ ಜಗತ್ತಿನ ಅರಿವು ಹೊಂದಲು ಸಾಧ್ಯ ಎಂದರು. ಈ ಜಗತ್ತಿನಲ್ಲಿ ನಾನು ಯಾರು, ಭೂಮಿಗೆ ಬಂದಿದ್ದೇಕೆ, ಕರ್ತವ್ಯ ಏನು? ಮಾನವನಾಗಿ ಹುಟ್ಟಿದ್ದೇಕೆ ಎನ್ನುವ ಪ್ರಶ್ನಗಳಿಗೆ ಅರಿವು, ಪೂರ್ಣಪ್ರಜ್ಞೆ ಹೊಂದಿದರೆ ಉತ್ತರ ಗಳಿಕೆ ಸಾಧ್ಯ ಎಂದರು.
