Updated News From Kaup
ಮುಖ್ಯಮಂತ್ರಿಯಿಂದ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 4.6 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ
Posted On: 13-10-2021 11:26PM
ಕಾಪು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉಡುಪಿ ಜಿಲ್ಲೆಯ ಕುಂತಲ ನಗರದಲ್ಲಿ ಮಾಧವ ನಗರದಿಂದ ಬಂಟಕಲ್ಲು ರಸ್ತೆ ಅಭಿವೃದ್ಧಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಮಕ್ಕಳಿಗೆ ಕೋವಿಡ್ ಲಸಿಕೆಗೆ ಕೇಂದ್ರ ಸರಕಾರದ ಸಕ್ಷಮ ಪ್ರಾಧಿಕಾರದ ಅನುಮತಿಯ ನಿರೀಕ್ಷೆಯಲ್ಲಿದ್ದೇವೆ : ಮುಖ್ಯಮಂತ್ರಿ ಬೊಮ್ಮಾಯಿ
Posted On: 13-10-2021 07:47PM
ಉಡುಪಿ: ರಾಜ್ಯದಲ್ಲಿ 2ರಿಂದ 18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಕೇಂದ್ರ ಸರಕಾರದ ಸಕ್ಷಮ ಪ್ರಾಧಿಕಾರ ಕೊನೆಯ ಸರ್ಟಿಫಿಕೇಶನ್ ನ ನಿರೀಕ್ಷೆಯಲ್ಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರೋಟರಿ ಕ್ಲಬ್ ಸೈಬ್ರಕಟ್ಟೆಯಿಂದ ಸ್ಪಂದನ ವಿಶೇಷ ಚೇತನ ಮಕ್ಕಳ ಆಶ್ರಮಕ್ಕೆ ಧನಸಹಾಯ
Posted On: 13-10-2021 06:35PM
ಉಡುಪಿ : ರೋಟರಿ ಕ್ಲಬ್ ಸೈಬ್ರಕಟ್ಟೆಯಿಂದ ಅಣ್ಣಯ್ಯ ದಾಸ್ ಅವರು ಕೊಡುಗೆ ನೀಡಿದ ಸುಮಾರು 5000 ರೂ. ಮೌಲ್ಯದ ಆಹಾರ ಸಾಮಗ್ರಿ ಗಳನ್ನು ಸ್ಪಂದನ ವಿಶೇಷ ಚೇತನ ಅನಾಥ ಮಕ್ಕಳ ಆಶ್ರಮಕ್ಕೆ ನೀಡಲಾಯಿತು.
ನವ ನವ ದುರ್ಗಾ ಕೃತಿ ಬಿಡುಗಡೆ
Posted On: 13-10-2021 09:48AM
ಕಟೀಲು : ಜಾನಪದ ವಿದ್ವಾಂಸ, ಸಂಶೋಧಕ ಕೆ. ಎಲ್. ಕುಂಡಂತಾಯ ಬರೆದ ಕುಂಜೂರು ಸರಸ್ವತೀ ಪ್ರಕಾಶನದಿಂದ ಪ್ರಕಟಿತ ಶಕ್ತಿ ಉಪಾಸನೆ, ದುರ್ಗೆಯರ ಕುರಿತಾದ ನವ ನವ ದುರ್ಗಾ ಕೃತಿಯನ್ನು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.
ನಾಳೆ : ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ
Posted On: 12-10-2021 09:09PM
ಉಡುಪಿ, ಅ.12 : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಬೆಳಗ್ಗೆ 11 ಗಂಟೆಗೆ ಅದಮಾರು ನಲ್ಲಿ ಪೂರ್ಣಪ್ರಜ್ಞ ಪದವಿ ಕಾಲೇಜು ಕಟ್ಟಡದ ಶಂಕುಸ್ಥಾಪನೆ, ಮಧ್ಯಾಹ್ನ 12.30 ಕ್ಕೆ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ, 1 ಗಂಟೆಗೆ ಉಡುಪಿ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ನ್ಯೂ ಸೈನ್ಸ್ ಬ್ಲಾಕ್ ಕಟ್ಟಡದ ಶಂಕುಸ್ಥಾಪನೆ ಮತ್ತ ಕಂಪ್ಯೂಟರ್ ಸೈನ್ಸ್ ಲ್ಯಾಬೋರೇಟರಿ ಉದ್ಘಾಟನೆ. 2.30 ಕ್ಕೆ ಕುಂತಲ ನಗರದಲ್ಲಿ ಸಮುದಾಯ ಭವನ ಮತ್ತು ಕೌಶಲ್ಯಾಭಿವೃದ್ದಿ ಕೇಂದ್ರ ಉದ್ಘಾಟನೆ ಹಾಗೂ ಲೋಕೋಪಯೋಗಿ ಇಲಾಖೆವತಿಯಿಂದ ನಡೆಯುವ ರಸ್ತೆ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಂಗಳೂರು ಮೂಲಕ ಬೆಂಗಳೂರಿಗೆ ತೆರಳುವರು.
ಅಕ್ಟೋಬರ್13 : ಮುಖ್ಯಮಂತ್ರಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಭೇಟಿ ;ಸಂಜೆ 3ರಿಂದ 7ಗಂಟೆಯವರೆಗೆ ಕ್ಷೇತ್ರಕ್ಕೆ ಭಕ್ತಾದಿಗಳ ಪ್ರವೇಶ ನಿರ್ಬಂಧ
Posted On: 12-10-2021 08:35PM
ಮಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ನಾಳೆ (ಅಕ್ಟೋಬರ್13) ಸಂಜೆ 5ಗಂಟೆಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಭದ್ರತೆಯ ದೃಷ್ಟಿಯಿಂದ ಸಂಜೆ 3ರಿಂದ 7ಗಂಟೆಯವರೆಗೆ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಅ.13 : ಕಾಪು ಮಾರಿಗುಡಿಗೆ ಸಿಎಂ ಭೇಟಿ ಹಿನ್ನಲೆಯಲ್ಲಿ ಭಕ್ತರ ಭೇಟಿಯ ಸಮಯ ಮಾರ್ಪಾಡು
Posted On: 11-10-2021 09:28PM
ಕಾಪು : ಸಮಗ್ರ ಜೀರ್ಣೋದ್ಧಾರದ ಸಡಗರದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಅ.13ರಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಲಿದ್ದು, ಆ ಹಿನ್ನೆಲೆಯಲ್ಲಿ ಬುಧವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ1 ಗಂಟೆಯವರೆಗೆ ಭಕ್ತಾಧಿಗಳ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ. ಭಕ್ತಾಧಿಗಳು ಸಹಕರಿಸುವಂತೆ ದೇಗುಲದ ಆಡಳಿತ ಮಂಡಳಿ ಮತ್ತು ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸತೀಶ್ ಆಚಾರ್ಯ ಇನ್ನಂಜೆ ನಿಧನ
Posted On: 11-10-2021 07:33PM
ಕಾಪು : ಇಲ್ಲಿನ ಉಂಡಾರು ಗ್ರಾಮದ ನಿವಾಸಿ ಸತೀಶ್ ಆಚಾರ್ಯ ಇನ್ನಂಜೆ ಹೃದಯಘಾತದಿಂದ ಮೃತರಾಗಿದ್ದಾರೆ.
ಸಹಾಯ ಹಸ್ತದ ನಿರೀಕ್ಷೆಯಲ್ಲಿ ಅನಿಲ್ ಪೂಜಾರಿ
Posted On: 11-10-2021 12:34PM
ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕುತ್ಯಾರು ನಿವಾಸಿ 32 ವರ್ಷದ ಅನಿಲ್ ಪೂಜಾರಿ ಸುಮಾರು 15ವರ್ಷಗಳ ಹಿಂದೆ ತೆಂಗಿನ ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾಗಿ ತನ್ನ ಎರಡೂ ಕಾಲಿನ ಸ್ವಾಧೀನವನ್ನು ಕಳೆದುಕೊಂಡು ಇದೀಗ ಗಾಲಿಕುರ್ಚಿಯ ಆಸರೆಯನ್ನು ಪಡೆದು ಬದುಕುತ್ತಿದ್ದಾರೆ.
ಬಂಟ್ವಾಳದಲ್ಲಿ ತುಲು ಲಿಪಿ ನಾಮಫಲಕ ಅನಾವರಣ
Posted On: 10-10-2021 07:50PM
ಮಂಗಳೂರು : ವಿಶ್ವ ತುಲು ಲಿಪಿ ದಿನವಾದ ಅಕ್ಟೋಬರ್ 10 ರಂದು ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ಯುವಜನ ವ್ಯಾಯಾಮ ಶಾಲೆಯ ನಾಮಫಲಕವನ್ನು ತುಲು ಲಿಪಿಯಲ್ಲಿ ಹಾಕಲಾಯಿತು. ತುಲು ಲಿಪಿ ಶಿಕ್ಷಕರು ಹಾಗೂ ಜೈ ತುಲುನಾಡ್ (ರಿ.) ಸಂಘಟನೆಯ ಉಪ ಸಂಘಟನಾ ಕಾರ್ಯದರ್ಶಿಯಾದ ಜಗದೀಶ ಗೌಡ ಕಲ್ಕಳ ಇವರು ತುಲು ಲಿಪಿ ನಾಮಫಲಕವನ್ನು ಅನಾವರಣಗೊಳಿಸಿದರು. ಹಾಗೆಯೇ ತುಲು ಲಿಪಿ ದಿನದ ವಿಶೇಷತೆ ಹಾಗೂ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟುಹಬ್ಬವನ್ನು ತುಲು ಲಿಪಿ ದಿನವಾಗಿ ಆಚರಿಸುವುದರ ಬಗ್ಗೆ ಮಾಹಿತಿ ನೀಡಿದರು.
