Updated News From Kaup
ಕಟಪಾಡಿ : ಮಕ್ಕಳ ತರಬೇತಿ ಶಿಬಿರ ಉದ್ಘಾಟನೆ
Posted On: 10-10-2021 12:03PM
ಕಟಪಾಡಿ : ಪ್ರಥಮ್ಸ್ ಮ್ಯಾಜಿಕ್ ವಲ್ಡ್೯ ಕಟಪಾಡಿ ಇದರ ವತಿಯಿಂದ ಡ್ರಾಯಿಂಗ್,ಕ್ರಾಫ್ಟ್, ಎಂಬ್ರಾಯ್ಡರಿ,ಮ್ಯಾಜಿಕ್ ಇತ್ಯಾದಿ ತರಗತಿಗಳು ಕಟಪಾಡಿಯಲ್ಲಿ ಇಂದು ಉದ್ಘಾಟಿಸಲಾಯಿತು.
ಕಾಪುದಪ್ಪೆ - ಮಾರಿಯಮ್ಮ
Posted On: 09-10-2021 11:17PM
ಆದಿಮ - ಶಿಷ್ಟ ಸಂಸ್ಕೃತಿಗಳ ಸಮನ್ವಯವಾದ ಭಾರತೀಯ ಸಂಸ್ಕೃತಿಯ ಉಸಿರು "ಜಾನಪದ ಮನೋಧರ್ಮ". ಸಾನ್ನಿಧ್ಯವಿದೆ ಎಂದು ಪೂಜೆಯಲ್ಲ, ಪೂಜೆ ನಡೆಯುತ್ತಿರುವಂತೆಯೇ ಸಾನ್ನಿಧ್ಯ ಸನ್ನಿಹಿತವಾಗುವ ನಂಬಿಕೆ ಹಾಗೂ ಸಾನ್ನಿಧ್ಯವನ್ನು ಪ್ರತಿಷ್ಠಾಪಿಸಿ ಸಾನ್ನಿಧ್ಯ ಇದೆ ಎಂಬ ನಂಬಿಕೆಯೊಂದಿಗೆ ಪೂಜೆ ಮಾಡುವುದು . ಕಟ್ಟಳೆಗಳೇ ಪ್ರಧಾನವಾಗುವ ಕಟ್ಟಡಗಳಿಗೆ ಮಹತ್ವ ಇಲ್ಲದ ಚಿಂತನೆಯಿಂದ ಕಟ್ಟಳೆ ಹಾಗೂ ಕಟ್ಟಡಗಳೆರಡೂ ಮುಖ್ಯ ಎಂಬ ಶ್ರದ್ಧೆಯಿಂದ ಆರಾಧನೆ ನೆರವೇರಿಸುವ ಹಂತ ತಲುಪಿದರೂ ಮೂಲವನ್ನು ಸುಪ್ತವಾಗಿ ಹೊಂದಿರುವುದು ನಮ್ಮ ಉಪಾಸನಾ ವಿಧಾನದಲ್ಲಿ ನಿಚ್ಚಳ . ಕರಾವಳಿ ಕರ್ನಾಟಕದ ಉಡುಪಿ ಜಿಲ್ಲೆಯ ಕಾಪುವಿನ ಮಾರಿ , ಮಾರಿಯಮ್ಮಳಾಗಿ, ಮಾರಿಯಮ್ಮ ದೇವರಾಗಿ ವಿವಿಧ ಸ್ವರೂಪದ ನಿಷ್ಠಾಂತರಗೊಂಡು ಗದ್ದುಗೆ - ಗುಡಿ - ದೇವಸ್ಥಾನ ಸಂಕಲ್ಪಗಳಲ್ಲಿ ವ್ಯಕ್ತಗೊಂಡುದುದನ್ನು ಗಮನಿಸ ಬಹುದು . ಸಮೂಹ ಪೂಜೆ ಹಾಗೂ ಬಹುದೇವತಾ ಆರಾಧನೆಗಳನ್ನು ಸ್ವೀಕರಿಸಿರುವ ನಮ್ಮ ತುಳುನಾಡಿನ ಉಪಾಸನಾ ಪ್ರಕಾರಗಳಲ್ಲಿ 'ಮಾರಿ'ಯಕಲ್ಪನೆ ಮತ್ತು ಅನುಸಂಧಾನ ಸಾಮೂಹಿಕವಾಗಿ ಮಾತ್ರ ರೂಢಿಯಲ್ಲಿವೆ .ಮಾರಿಗೆ ನೆರವೇರುವ ಪೂಜೆಯಲ್ಲಿ ಪಾಲ್ಗೊಂಡು ಮುಂದುವರಿದ ಆಚರಣೆಗಳು ಮನೆಗಳಲ್ಲಿ ನಡೆಯುವುದಿದೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕಲಿಕಾ ಸಾಮಾಗ್ರಿ ವಿತರಣೆ
Posted On: 09-10-2021 11:09PM
ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕು ಇದರ G.P.T ಕಾಲೇಜು ಘಟಕದ ವತಿಯಿಂದ ಕಾಂತಾವರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮದಕ ಇಲ್ಲಿನ ವಿದ್ಯಾರ್ಥಿಗಳಿಗೆ ಕಲಿಕೆಗೆ ಸಹಕಾರಿಯಾಗುವಂತೆ ಕಲಿಕಾ ಸಾಮಾಗ್ರಿಯಾದ ಪುಸ್ತಕ, ಪೆನ್ನು, ಪೆನ್ಸಿಲ್ ವಿತರಿಸಲಾಯಿತು.
ಉಡುಪಿ : ಡಿಜಿಟಲ್ ಮುದ್ರಣ ಯಂತ್ರಗಳ ಪ್ರಾತ್ಯಕ್ಷಿಕೆ
Posted On: 09-10-2021 10:15PM
ಉಡುಪಿ : ಗ್ಯಾಲಾಕ್ಸಿ ಇಮೇಜಿಂಗ್ ಟೆಕ್ನಾಲಜಿ ಬೆಂಗಳೂರು ಹಾಗೂ ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ (ರಿ.) ಉಡುಪಿ ಜಂಟಿ ಸಹಯೋಗದಲ್ಲಿ Konico Minolta Digital Mechine Print Expo 2021 ಡಿಜಿಟಲ್ ಮುದ್ರಣ ಯಂತ್ರಗಳ ಪ್ರಾತ್ಯಕ್ಷಿಕೆಯು ಆದಿಉಡುಪಿ ತಾರಾಸ್ ಪ್ರಿಂಟ್ ಕಾರ್ನರ್ ಬೈದಶ್ರೀ ಬಿಲ್ಡಿಂಗ್ ಪ್ರಥಮ ಮಹಡಿಯಲ್ಲಿ ಜರಗಿತು.
ಜಿಲ್ಲೆಯ ಬೀಚ್ ಗಳನ್ನು ವಿಶ್ವ ದರ್ಜೆಗೇರಿಸಬೇಕು: ಸಚಿವ ವಿ.ಸುನೀಲ್ ಕುಮಾರ್
Posted On: 09-10-2021 05:41PM
ಪಡುಬಿದ್ರಿ : ಕಡಲತೀರದಲ್ಲಿ ಜನಸ್ನೇಹಿ ಪರಿಸರ ನಿರ್ಮಾಣ ಮಾಡಿ ಪ್ರವಾಸಿಗರನ್ನು ಸೆಳೆಯುವುದರ ಜೊತೆಗೆ ಜಿಲ್ಲೆಯಲ್ಲಿರುವ ಬೀಚ್ಗಳನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿಶ್ವದರ್ಜೆಗೇರಿಸುವ ಕೆಲಸವಾಗಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನೀಲ್ಕುಮಾರ್ ಹೇಳಿದರು. ಅವರು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ,ಉಡುಪಿ ಜಿಲ್ಲೆ ಪರಿಸರ ಮಂತ್ರಾಲಯ ಅರಣ್ಯ ಮತ್ತು ಹವಾಮಾನ ಬದಲಾವಣೆ ಭಾರತ ಸರಕಾರ ಸೊಸೈಟಿ ಆಫ್ ಇಂಟರ್ನೆಟ್ ಕೋಸ್ಟಲ್ ಮ್ಯಾನೇಜ್ಮೆಂಟ್ ಹಾಗೂ ಮ್ಯಾನೇಜ್ಮೆಂಟ್ ಕಮಿಟಿ ಇವರ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾನ್ಯತೆ ಪಡೆದಿರುವ ಜಿಲ್ಲೆಯ ಪಡುಬಿದ್ರಿ ಕಡಲತೀರದಲ್ಲಿ ಭಾರತದ 75ನೇ ಆಜಾದಿ ಕಾ ಅಮೃತ ಮಹೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪ್ರಸ್ತುತ ರಾಜ್ಯದಲ್ಲಿ 2 ಬ್ಲೂ ಫ್ಲಾಗ್ ಬೀಚ್ಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದ್ದು, ಇನ್ನೂ 16 ಬೀಚ್ಗಳ ಪಟ್ಟಿಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ಡೆನ್ಮಾರ್ಕ್ನಲ್ಲಿ ಎಫ್ಇಇ ಸಂಸ್ಥೆಯು ನಿಗಧಿಪಡಿಸಿದ ಸರಾಸರಿ (33)ಅಂಕ ಪಡೆದಲ್ಲಿ ರಾಜ್ಯದಲ್ಲಿ ಇನ್ನೂ ಹೆಚ್ಚು ಪ್ರವಾಸಿ ಆಕರ್ಷಿತ ಬೀಚ್ಗಳು ನೀಲಿಧ್ವಜ ಸಂಕೇತವನ್ನು ಪಡೆಯಲಿವೆ. ಆ ನಿಟ್ಟಿನಲ್ಲಿ ನಾವು ನಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದರ ಜೊತೆಗೆ ಸಂರಕ್ಷಣೆಯನ್ನು ಸಹ ಮಾಡಬೇಕಿದೆ ಎಂದರು.
ಗೃಹ ಸಚಿವರಿಂದ ಪೊಲೀಸ್ ವಸತಿಗೃಹ ಉದ್ಘಾಟನೆ
Posted On: 09-10-2021 05:27PM
ಉಡುಪಿ : ಉಡುಪಿ ಮಿಷನ್ ಕಾಂಪೌಂಡ್ ಬಳಿ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ 56 ಮನೆಗಳನ್ನು ಒಳಗೊಂಡ ನೂತನ ಪೊಲೀಸ್ ವಸತಿ ಸಮುಚ್ಛಯವನ್ನು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಇಂದು ಉದ್ಘಾಟಿಸಿದರು. ರಾಜ್ಯದಲ್ಲಿ ಗೃಹ ಇಲಾಖೆ ವತಿಯಿಂದ 2025 ರೊಳಗೆ 10000 ಪೊಲೀಸ್ ವಸತಿ ಗೃಹಗಳ ನಿರ್ಮಾಣ ಕಾರ್ಯ ನಡೆಯುತ್ತಿದ್ದು, 200 ಕೋಟಿ ರೂ ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳ ನಿರ್ಮಾಣ ಹಾಗೂ 140 ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಪೊಲೀಸ್ ಇಲಾಖೆಯ ಬಲವರ್ಧನೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಕ್ರೈಂಸೀನ್ ಅಧಿಕಾರಿಗಳ ನೇಮಕಾತಿ ನಡೆಯುತ್ತಿದೆ. ಆಧುನಿಕ ತಂತ್ರಜ್ಞಾನಗಳನ್ನು ಇಲಾಖೆಯಲ್ಲಿ ಅಳವಡಿಸಿದ್ದು, ಸೈಬರ್ ಅಪರಾಧಗಳನ್ನು ಪತ್ತೆ ಮಾಡಲು ಬ್ಯಾಂಕ್ ಗಳೊಂದಿಗೆ ಒಪ್ಪಂದ ಆಗಿದ್ದು, ಹಣ ಕಳೆದುಕೊಂಡು ವ್ಯಕ್ತಿ 1-2 ಗಂಟೆಯೊಳಗೆ ದೂರು ನೀಡಬೇಕು , ತಕ್ಷಣದಲ್ಲಿ ಲಿಖಿತ ದೂರು ನೀಡಲು ಸಾಧ್ಯವಾಗದಿದ್ದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಿ ದೂರು ಸಲ್ಲಿಸಬಹುದು,ಸಾರ್ವಜನಿಕರು ಪೊಲೀಸ್ ಇಲಾಖೆಯ ನೆರವು ಅಗತ್ಯವಿದ್ದಲ್ಲಿ 112 ಗೆ ಕರೆ ಮಾಡುವಂತೆ ಸಚಿವರು ಹೇಳಿದರು.
ಶರನ್ನವರಾತ್ರಿ ರಮೋತ್ಸವ, ದಶಾಹರ್ = ದಸರ
Posted On: 09-10-2021 05:09PM
ಶರದೃತು ಆರಂಭ ಎಂದರೆ ಮಳೆಗಾಲದ ಅಂತ್ಯ. ಗದ್ದೆಗಳಲ್ಲಿ ಪೈರು ಬೆಳೆದು ತೆನೆಗಳು ತೊನೆದಾಡುವ ಸಂಭ್ರಮ . ಅನ್ನದಾತನ ದುಡಿಮೆಗೆ ಭೂಮಿ ತಾಯಿ ನೀಡಿದ ಸತ್ಫಲ , ಜೀವನಾಧಾರವಾದ 'ಅನ್ನಬ್ರಹ್ಮ' ಮನೆಯಂಗಳಕ್ಕೆ ಬರುವ ಸಮೃದ್ಧಿಯ ಸಮುಲ್ಲಾಸದ ಸಂದರ್ಭ. 'ನವರಾತ್ರಿ ರಮೋತ್ಸವ'ವೂ ಹೌದು. 'ರಮಾ' ಎಂದರೆ ಲಕ್ಷ್ಮೀ,ಶೋಭೆ,ಸಮೃದ್ಧಿ ಎಂಬುದು ಅರ್ಥ. ಪ್ರಕೃತಿಯು ಬೆಳೆದ ಬೆಳೆಯಿಂದ ತುಂಬಿ ಅತಿಶಯತೆಯನ್ನು ಸಾಂಕೇತೀಸುವ ಪರ್ವಕಾಲ.ಇದು ಲಕ್ಷ್ಮೀ ,ಸಂಪತ್ತಿಗೆ ಹೇತುವಾದ ಪರಿಸರವಲ್ಲವೇ ? ಈ ಒಂಬತ್ತು ದಿನಗಳ ಉತ್ಸವ ,ಹತ್ತನೇ ದಿನದ ಸಮಾರೋಪ ಅವಭೃತ .ಇದರಿಂದ ಈ ಕಾಲ ದಶಾಹರ್= ದಸರ( ಹತ್ತು ದಿವಸಗಳ ಉತ್ಸವ, ಹತ್ತು ಹಗಲುಗಳು)ಶಕ್ತಿ ಪೂಜೆಯ ಸುಸಂದರ್ಭ. ಶರತ್ಕಾಲವು ಭೂಮಿ ತಾಯಿ ಹಸಿರು ಹೊದ್ದು ,ಆ ಹಸಿರಲ್ಲಿ ಬಂಗಾರದ ಬಣ್ಣದ ತೆನೆಗಳನ್ನು ಪ್ರದರ್ಶಿಸುತ್ತಾ ತನ್ನ ಸಹಜ ಸೊಬಗಿನಿಂದ ಶೋಭಿಸುವ ಕಾಲ. ಹವಾಮಾನದಲ್ಲಿ ಬದಲಾವಣೆಯಾಗುವ ಈ ವೇಳೆ ಪ್ರಕೃತಿಮಾತೆಯ ಮೂಲಕ ಲೋಕಮಾತೆಯ ಆರಾಧನೆ. ಮಾನವ ನಿಸರ್ಗದೊಂದಿಗೆ ಕೈ ಜೋಡಿಸುತ್ತಾ ಬದುಕು ರೂಪಿಸಿಕೊಂಡ. ಈ ಮೂಲದ ಮಾನವ - ಪ್ರಕೃತಿ ಸಂಬಂಧವೇ ಈ ವರೆಗೂ ಸಾಗಿಬಂತು.ನಮ್ಮ ವಾರ್ಷಿಕ ಆಚರಣೆಗಳೆಲ್ಲ ಅದಕ್ಕೆ ಹೊಂದಿಕೊಂಡವು. ಹುಟ್ಟು - ಬೆಳವಣಿಗೆ - ಸಾವು ಈ ಮೂರರ ನೈರಂತರ್ಯದ ಪ್ರತ್ಯಕ್ಷ ದರ್ಶನವೇ ಮಹಾಕಾಳಿ - ಮಹಾಲಕ್ಷ್ಮೀ - ಮಹಾಸರಸ್ವತೀ ಕಲ್ಪನೆಗೆ ಆಧಾರವಾಗುತ್ತದೆ.ಹುಟ್ಟು ಎಂದೊಡನೆ ನಮಗೆ ಜನ್ಮ ನೀಡಿದ ತಾಯಿಯೇ ಸಾಕ್ಷಿ ತಾನೆ ? ಈಗ ತಾಯಿ ಎಂದ ಮೇಲೆ ತಂದೆ ಮುಂದಿನ ಎಲ್ಲ ಸಂಬಂಧಗಳು ಸಂಭವಿಸುವುದು ಸಹಜ ಪ್ರಕ್ರಿಯೆ.
ಬಂಟಕಲ್ಲು : ಗುರುವಂದನಾ ಕಾರ್ಯಕ್ರಮ
Posted On: 09-10-2021 04:59PM
ಕಾಪು : ವಿಕಾಸ ಸೇವಾ ಸಮಿತಿ ಮತ್ತು ಮಹಿಳಾ ಬಳಗ 92ನೇ ಹೇರೂರು ಇದರ ವತಿಯಿಂದ ಚಂಡೆ ತರಬೇತುಗೊಂಡ ಸದಸ್ಯರ ಗುರುವಂದನಾ ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷರಾದ ಮಾಧವ ಆಚಾರ್ಯರು ತಮ್ಮನ್ನು ಹೀಯಾಳಿಸುವವರನ್ನು ಬದಿಗಿಟ್ಟು ನಮ್ಮತನವನ್ನು ನಾವು ಬೆಳೆಸಿಕೊಂಡಲ್ಲಿ ಆತ್ಮಶಕ್ತಿ ಜಾಗ್ರತವಾಗುವುದರೊಂದಿಗೆ ನಾವು ನಿಶ್ಚಿತ ಗುರಿಯನ್ನು ಸಾಧಿಸಬಹುದು ಎಂದು ಬಂಟಕಲ್ಲು ಶ್ರೀ ವಿಶ್ವಕರ್ಮ ಸಂಘದ ಸಭಾಂಗಣದಲ್ಲಿ ನಡೆದ ಗುರುಗಳಾದ ಪಂಜಿಮಾರು ಶ್ರೀ ರಾಘವೇಂದ್ರ ಭಟ್ ರವರ ಗುರುವಂದನಾ ಕಾರ್ಯಕ್ರಮದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಇನ್ನಂಜೆ ಯುವಕ ಮಂಡಲದ ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ಸ್ವಂತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ
Posted On: 09-10-2021 04:51PM
ಕಾಪು : ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ಇದರ ಸುವರ್ಣ ಮಹೋತ್ಸವದ ಸವಿ ನೆನಪಿಗಾಗಿ ಇನ್ನಂಜೆ ಶಾಲಾ ದಾಸಭವನದ ಸಮೀಪ ಇನ್ನಂಜೆ ಯುವಕ ಮಂಡಲದ ಸ್ವಂತ ಕಟ್ಟಡದ ಶಿಲಾನ್ಯಾಸವು ಬಾಲವನದ ವಠಾರದಲ್ಲಿ ಶ್ರೀ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರ ದಿವ್ಯಹಸ್ತದಲ್ಲಿ ನೆರವೇರಿತು.
ಕಲ್ಯಾಣಪುರ ರೋಟರಿ ಕ್ಲಬ್ ಪ್ರಾಯೋಜಿತ ರೊಟರಾಕ್ಟ್ ಮತ್ತು ಇಂಟರಾಕ್ಟ್ ಕ್ಲಬ್ ಗಳ ಪದಗ್ರಹಣ ಸಮಾರಂಭ
Posted On: 09-10-2021 03:44PM
ಉಡುಪಿ : ಸರ್ಕಾರಿ ಪದವಿಪೂರ್ವ ಕಾಲೇಜು ಮತ್ತು ಸರ್ಕಾರಿ ಹೈಸ್ಕೂಲು ಕೆಮ್ಮಣ್ಣು ಇಲ್ಲಿ ನ ರೊಟರಾಕ್ಟ್ ಹಾಗೂ ಇಂಟರಾಕ್ಟ್ ಕ್ಲಬ್ ಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಇತ್ತೀಚೆಗೆ ನಡೆಯಿತು. ಈ ಎರಡು ಸಂಸ್ಥೆಗಳ ನೂತನ ಅಧ್ಯಕ್ಷರುಗಳಾದ ಆಕಾಶ್ ಕೋಟ್ಯಾನ್, ತಸ್ರೀನ್ ಹಾಗೂ ಕಾರ್ಯದರ್ಶಿಗಳಾದ ಶಾಂತ, ಪ್ರಜ್ಞಾ ರವರುಗಳಿಗೆ ರೋಟರಿ ಕ್ಲಬ್ಬಿನ ಅಧ್ಯಕರಾದ ಶಂಭು ಶಂಕರ್ ರವರು ಪದಪ್ರದಾನ ನೆರವೇರಿಸಿದರು.
