Updated News From Kaup

ಕಾಪುವಿನ ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ಗೆ ಕಾಶೀ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ

Thumbnail
Posted On: 24 Nov 2021, 08:30 PM

ಕಾಪು : ಇಂದು ಸಂಜೆ ಕಾಶೀ ಮಠಾಧಿಪತಿ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಕಾಪುವಿನ ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ಗೆ ಭೇಟಿ ನೀಡಿ ಆಶೀರ್ವದಿಸಿದರು. ಈ‌ ಸಂದರ್ಭ ಸ್ವಾಮೀಜಿಯವರ ಭಕ್ತರು, ಸಂಸ್ಥೆಯ ಪ್ರಮುಖರು ಉಪಸ್ಥಿತರಿದ್ದರು.

ಯುವವಾಹಿನಿ ಅಡ್ವೆ ಘಟಕದ ಪದಗ್ರಹಣ

Thumbnail
Posted On: 24 Nov 2021, 08:23 PM

ಪಡುಬಿದ್ರಿ : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಅಡ್ವೆ ಘಟಕದ 2021-22 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಇಲ್ಲಿ ಜರಗಿತು. ಸಮಾರಂಭವನ್ನು ನಿವೃತ್ತ ಶಿಕ್ಷಕರಾದ ಅಡ್ವೆ ರವೀಂದ್ರ ಪೂಜಾರಿ ಉದ್ಘಾಟಿಸಿದರು. ಘಟಕದ ನೂತನ ಪದಾಧಿಕಾರಿಗಳಿಗೆ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಪ್ರಥಮ ಉಪಾಧ್ಯಕ್ಷರಾದ ಉದಯ ಅಮೀನ್ ಮಟ್ಟು ಪ್ರತಿಜ್ಞಾ ವಿಧಿ ಬೋಧಿಸಿದರು. ಘಟಕದ ಅಧ್ಯಕ್ಷರಾದ ಶಶಿಧರ ಟಿ. ಪೂಜಾರಿಯವರು ನಿಯೋಜಿತ ಅಧ್ಯಕ್ಷರಾದ ಅರುಣಾನಂದ ಕಿಶೋರ್ ಅವರಿಗೆ ಮತ್ತು ಘಟಕದ ಕಾರ್ಯದರ್ಶಿ ಭಾರತಿ ನಿಯೋಜಿತ ಕಾರ್ಯದರ್ಶಿ ಶರತ್ ಅಡ್ವೆಯವರಿಗೆ ಅಧಿಕಾರ ಹಸ್ತಾಂತರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಅಡ್ವೆ ಘಟಕದ ಅಧ್ಯಕ್ಷರಾದ ಶಶಿಧರ್ ಟಿ. ಪೂಜಾರಿ ವಹಿಸಿದ್ದರು. ಶ್ರೀ ಬ್ರಹ್ಮ ಬೈದರ್ಕಳ ಅಡ್ವೆ ಗರಡಿಯ ಮಹಾಪೋಷಕರಾದ ಸೂರ್ಯಕಾಂತ್ ಜಯ ಸುವರ್ಣ, ಅಡ್ವೆ ಶ್ರೀ ಬ್ರಹ್ಮಬೈದರ್ಕಳ ಸೇವಾ ಸಮಿತಿಯ ಕಾರ್ಯದರ್ಶಿ ನವೀನ್ ಚಂದ್ರ ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಮಂಗಳೂರು ಸಂಘಟನಾ ಕಾರ್ಯದರ್ಶಿ ಯೋಗೀಶ್ ಪೂಜಾರಿ ಪಾದೆಬೆಟ್ಟು, ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಕಾಪು : ನಗರದ ಮೂರು ಮಾರಿಗುಡಿಗಳಲ್ಲೂ ಜಾರ್ದೆ ಮಾರಿಪೂಜಾ ಮಹೋತ್ಸವ ಸಂಪನ್ನ

Thumbnail
Posted On: 24 Nov 2021, 07:45 PM

ಕಾಪು: ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಾದ ಹಳೆ ಮಾರಿಯಮ್ಮ ದೇವಸ್ಥಾನ, ಹೊಸ ಮಾರಿಯಮ್ಮ ದೇವಸ್ಥಾನ ಹಾಗೂ ಮೂರನೇ ಮಾರಿಯಮ್ಮ ದೇವಸ್ಥಾನಗಳ್ಲಲಿ ಏಕಕಾಲದಲ್ಲಿ ತುಳುವರ ಜಾರ್ದೆ ತಿಂಗಳ ಮಾರಿ ಪೂಜಾ ಮಹೋತ್ಸವ ಮಂಗಳವಾರ ರಾತ್ರಿ ಹಾಗೂ ಬುಧವಾರ ವಿಜೃಂಭಣೆಯಿಂದ ಜರಗಿತು. ಸಿಡುಬು, ಸಂತಾನ ಫಲ, ಮುತೈದೆ ಭಾಗ್ಯಗಳಿಗಾಗಿ ಅತ್ಯಂತ ಪ್ರಸಿದ್ಧಿ ಪಡೆದ ಕಾಪುವಿನ ಮೂರೂ ಮಾರಿಗುಡಿಗಳಲ್ಲಿ ಮಾರ್ಚ್ ತಿಂಗಳ ಅಂತ್ಯಕ್ಕೆ ಸುಗ್ಗಿ ಮಾರಿಪೂಜೆ, ಜುಲೈ ತಿಂಗಳ ಅಂತ್ಯಕ್ಕೆ ಆಟಿ ಮಾರಿಪೂಜೆ ಹಾಗೂ ನವಂಬರ್ ತಿಂಗಳಾಂತ್ಯದಲ್ಲಿ ಜಾರ್ದೆ ತಿಂಗಳ ಮಾರಿ ಪೂಜೆ ನಡೆಯುತ್ತದೆ. ಆಟಿ ಹಾಗೂ ಸುಗ್ಗಿ ತಿಂಗಳ ಮಾರಿಪೂಜೆಯಲ್ಲಿ ಅತೀ ಹೆಚ್ಚಿನ ಭಕ್ತಾಧಿಗಳು ಕಾಪುವಿನ ಮಾರಿಗುಡಿಗಳಿಗೆ ಆಗಮಿಸುತ್ತಿದ್ದು, ಜಾರ್ದೆ ಮಾರಿಪೂಜೆಯಲ್ಲಿ ಭಕ್ತಾಧಿಗಳ ಸಂಖ್ಯೆ ಇಳಿಮುಖವಾಗುತ್ತದೆ. ಆದರೂ ಭಕ್ತಾಧಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಾ ಸಾಗುತ್ತದೆ. ಪ್ರತಿ ಮಾರಿಪೂಜೆಗಳಲ್ಲಿ ಕುರಿ/ಕೋಳಿ ಹರಕೆ ಅಂದರೆ ಲಕ್ಷಾಂತರ ಕೋಳಿಗಳ ಬಲಿ ನಡೆಯುವುದೂ ಇಲ್ಲಿಯ ವಿಶೇಷತೆಗಳಲ್ಲೊಂದು. ಈ ಬಾರಿಯೂ ಭಕ್ತಾದಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾದರು.

ಕುತ್ಯಾರು ವಿದ್ಯಾದಾಯಿನಿ ಹಿರಿಯಪ್ರಾಥಮಿಕ ಶಾಲೆಗೆ ಅವಕಾಶ್ ಫೌಂಡೇಶನ್ ವತಿಯಿಂದ ಕಂಪ್ಯೂಟರ್ ಕೊಡುಗೆ

Thumbnail
Posted On: 24 Nov 2021, 07:38 PM

ಕಾಪು : ಕುತ್ಯಾರು ಶ್ರೀಪಾದ್ ಹೆಗ್ಡೆಯವರು ಆಡಳಿತ ನಿರ್ದೇಶಕರಾಗಿರುವ ಸ್ವಯಂ ಸೇವಾ ಸಂಸ್ಥೆ ಅವಕಾಶ್ ಫೌಂಡೇಶನ್ ವತಿಯಿಂದ ಸ್ಥಳೀಯ ಕುತ್ಯಾರು ವಿದ್ಯಾದಾಯಿನಿ ಹಿರಿಯಪ್ರಾಥಮಿಕ ಶಾಲೆಗೆ ಕಲಿಕೆಗೆ ಪೂರಕವಾಗಿ ಒಂದು ವರ್ಷದ ಉಚಿತ ಇಂಟರ್ನೆಟ್ ಸೌಲಭ್ಯದ ಸಹಿತ ಎರಡು ಕಂಪ್ಯೂಟರ್ ಹಾಗೂ ಒಂದು ಲಾಪ್ ಟಾಪ್ ಗಳ ಕೊಡುಗೆಯನ್ನು ನೀಡಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ದಿನೇಶ್ ಕುಲಾಲ್ ಅವರು ವಹಿಸಿದ್ದರು. ಶ್ರೀಪಾದ್ ಹೆಗ್ಡೆ ಯವರ ತಂದೆ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರೂ ಆಗಿರುವ ಪಾಂಡುರಂಗ ಹೆಗ್ಡೆ, ಶೃಂಗಾರಿ ಹೆಗ್ಡೆ ದಂಪತಿಗಳು ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಉದ್ಯಮಿ ಅಂಜಾರುಮನೆ ಕಿಶೋರ್ ಶೆಟ್ಟಿ , ಸ್ಥಳೀಯ ಪಂಚಾಯತ್ ಸದಸ್ಯರಾದ ಸಂಪತ್ ಕುಮಾರ್ ಕೇಂಜ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಊರಿನ ಪ್ರಮುಖರಾದ ಕುತ್ಯಾರು ನವೀನ್ ಶೆಟ್ಟಿ, ಪಂಚಾಯತ್ ಮಾಜಿ ಅಧ್ಯಕ್ಷ ಧೀರಜ್ ಶೆಟ್ಟಿ, ಕಿಶೋರ್ ಕುಮಾರ್ ಶೆಟ್ಟಿ, ಆಶಾ ಚಂದ್ರಹಾಸ ಶೆಟ್ಟಿ, ಶ್ರೀನಾಥ್ ಹೆಗ್ಡೆ , ಉಲ್ಲಾಯ ಫ್ರೆ೦ಡ್ಸ್ ಅಧ್ಯಕ್ಷ ಅಜಿತ್ ಶೆಟ್ಟಿ, ಶಾಲಾ ಶಿಕ್ಷಕ ವೃಂದ, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಶರ್ಮಿಳಾ ಅವರು ಸ್ವಾಗತಿಸಿ, ಶಿರ್ವ ಸಿ.ಎ ಬ್ಯಾಂಕ್ ಅಧ್ಯಕ್ಷ ಕುತ್ಯಾರು ಪ್ರಸಾದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕಿ ಶ್ರೀಮತಿ ಸವಿತಾ ಅವರು ನಿರೂಪಿಸಿದ ಕಾರ್ಯಕ್ರಮದಲ್ಲಿ ಪ್ರಾರ್ಥನೆ ಹಾಗೂ ವಂದನಾರ್ಪಣೆಯನ್ನು ಶಿಕ್ಷಕಿಯರಾದ ಸುಪ್ರೀತ ಹಾಗೂ ಕುಸುಮ ಅವರು ನಿರ್ವಹಿಸಿದರು.

ಕುಲಶೇಖರ ವೀರನಾರಾಯಣ ದೇವಸ್ಥಾನದಲ್ಲಿ ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿಗೆ ಅಭಿನಂದನೆ

Thumbnail
Posted On: 24 Nov 2021, 07:00 PM

ಮಂಗಳೂರು: ನವಂಬರ್ 1ರಂದು ಬೆಂಗಳೂರಿನಲ್ಲಿ ಜರಗಿದ ರಾಜ್ಯೋತ್ಸವ ಸಮಾರಂಭದಲ್ಲಿ 2021 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಹೊರನಾಡ ಕನ್ನಡಿಗ, ಮುಂಬಯಿ 'ಕರ್ನಾಟಕ ಮಲ್ಲ' ಕನ್ನಡ ದೈನಿಕದ ಪ್ರದಾನ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ ಅವರನ್ನು ಮಂಗಳೂರಿನ ಕುಲಶೇಖರ ವೀರನಾರಾಯಣ ದೇವಸ್ಥಾನದಲ್ಲಿ ಅಭಿನಂದಿಸಲಾಯಿತು. ಅಭಿನಂದನೆಯನ್ನು ಸ್ವೀಕರಿಸಿದ ಪಾಲೆತ್ತಾಡಿ ಮಾತನಾಡುತ್ತಾ ಕುಲಾಲ ಸಮಾಜ ನನ್ನ ಮೇಲೆ ಇಟ್ಟಿರುವ ಪ್ರೀತಿಗೆ ನಾನು ಆಭಾರಿಯಾಗಿದ್ದೇನೆ. ಕ್ಷೇತ್ರದಲ್ಲಿ ಕುಲಾಲ ಸಮಾಜದ ಧಾರ್ಮಿಕ ಚಿಂತನೆಗಳು ಎದ್ದು ಕಾಣುತ್ತಿದೆ. ಶ್ರದ್ಧೆ. ಭಕ್ತಿಯಿಂದ ಯಿಂದ ಜೀರ್ಣೋದ್ಧಾರದ ಸೇವೆಯನ್ನು ಮಾಡಿದಾಗ ದಾನಿಗಳು, ಭಕ್ತರು ದೇವರ ರೂಪದಲ್ಲಿ ಬರುತ್ತಾರೆ ಆ ಮೂಲಕ ಸಹಕಾರ ನೀಡುತ್ತಾರೆ ಎಂದು ತಿಳಿಸಿದ ಪಾಲೆತ್ತಾಡಿ ಯವರು ನಾನು ಪ್ರಶಸ್ತಿಗಾಗಿ ಹಂಬಲಿಸಿ ಕೊಂಡವನಲ್ಲ ನನ್ನ ಸೇವಾಕಾರ್ಯವನ್ನು ಮಾಡುತ್ತಾ ಬಂದಿದ್ದೇನೆ ಅದನ್ನು ಸರಕಾರ ಗುರುತಿಸಿಕೊಂಡಿದೆ. ನಾವು ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಸೇವಾಕಾರ್ಯಗಳನ್ನು ಮಾಡಿದಾಗ ನಮ್ಮನ್ನು ಪ್ರಶಸ್ತಿಗಳು ಸನ್ಮಾನಗಳು ಹುಡುಕಿಕೊಂಡು ಬರುತ್ತದೆ. ಎಂದು ಹೇಳಿದರು. ಕ್ಷೇತ್ರದ ಮಾಜಿ ಆಡಳಿತ ಮೊಕ್ತೇಸರ ಬಿ ಸುರೇಶ್ ಕುಲಾಲ್ ಮಂಗಳಾದೇವಿಯವರು ಅಭಿನಂದನಾ ನುಡಿಗಳನ್ನಾಡಿದರು. ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿ ಎಂ.ಪಿ. ಬಂಗೇರ ಕ್ಷೇತ್ರದ ಸಮಗ್ರ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷ ಮಯೂರ ಉಳ್ಳಾಲ್, ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ್ ಕುಲಾಲ್ ಕಲ್ಬಾವಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಎ. ದಾಮೋದರ, ಶ್ರೀ ವೀರನಾರಾಯಣ ಸೇವಾ ಟ್ರಸ್ಟ್ ಕಾರ್ಯಧ್ಯಕ್ಷರು ಬಿ ಪ್ರೇಮಾನಂದ ಕುಲಾಲ್. ಸೇವಾ ಸಮಿತಿ ಅಧ್ಯಕ್ಷರು ಸುಂದರ ಕುಲಾಲ್ ಶಕ್ತಿನಗರ, ಟ್ರಸ್ಟಿ ಗಿರಿಧರ್ ಜೆ ಮೂಲ್ಯ. ದೇವಸ್ಥಾನದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಮನೋಜ, ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರಮೀಳಾ ಸಾಲ್ಯಾನ್, ಪುರುಷೋತ್ತಮ ಕುಲಾಲ ಬಿಜೈ, ದಯಾನಂದ ಅಡ್ಯಾರ್, ಕಿರನ್ ಅಟ್ಲೂರು, ಧನುಷ್ ಕುಲಾಲ್ ಮತ್ತು ಬೊಕ್ಕಪಟ್ನ ಬೋಳೂರಿನ ಶ್ರೀ ರಾಮಾಂಜನೇಯ ‌ವ್ಯಾಯಾಮಶಾಲೆ ಸಂಸ್ಥಾಪಕ ಶಿಕ್ಷಕ ಮಾಸ್ಟರ್ ಬಿ ಸೀತಾರಾಮ್ ಕುಲಾಲ್, ಕಾರ್ಯದರ್ಶಿ ಬಿ ನಾಗೇಶ್ ಕುಲಾಲ್ ಮತ್ತಿತರ ಕುಲಾಲ ಸಮಾಜದ ಮುಖಂಡರು ಕ್ಷೇತ್ರದ ಭಕ್ತರು ಪಾಲ್ಗೊಂಡಿದ್ದರು.

ಕುತ್ಯಾರುವಿನಲ್ಲಿ ನವೆಂಬರ್ 26ರಂದು ಸನ್ಮಾನ ಕಾರ್ಯಕ್ರಮ, ಗೀತಗಾಯನ

Thumbnail
Posted On: 22 Nov 2021, 09:05 PM

ಕಾಪು : ಕುತ್ಯಾರು ಸೂರ್ಯಚೈತನ್ಯ ಹೈಸ್ಕೂಲ್ ನ ಆಶ್ರಯದಲ್ಲಿ ನವೆಂಬರ್ 26 ರ ಶುಕ್ರವಾರ ಕನ್ನಡ ಜಾನಪದ ಪರಿಷತ್ ನ ಉಡುಪಿ ಜಿಲ್ಲಾ ಅಧ್ಯಕ್ಷರೂ , ಖ್ಯಾತ ಜಾನಪದ ಗಾಯಕರೂ ಆದ ಡಾ. ಗಣೇಶ್ ಗಂಗೊಳ್ಳಿ ಇವರಿಗೆ ಸನ್ಮಾನ ಕಾರ್ಯಕ್ರಮ ಜರುಗಲಿದೆ. ಕನ್ನಡ ಜಾನಪದ ಕೋಗಿಲೆ ಬಿರುದಾಂಕಿತ ಡಾ. ಗಂಗೊಳ್ಳಿಯವರು ಕನ್ನಡ ನಾಡಿನ ಜಾನಪದ ಸಂಸ್ಕೃತಿ, ಕಲೆ ಮತ್ತು ಸಾಹಿತ್ಯ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ವಿಶಿಷ್ಟ ಕೊಡುಗೆಯನ್ನು ನೀಡುತ್ತಿರುವ ಕಲಾಸಾಧಕ. ಕರ್ನಾಟಕ ಜಾನಪದ ಸಾಹಿತ್ಯ ಸೇವೆಗಾಗಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನವಾಗಿದೆ. ಈ ಸಮಾರಂಭದ ಅಧ್ಯಕ್ಷತೆಯನ್ನು ಸೂರ್ಯ ಚೈತನ್ಯ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ವಿದ್ವಾನ್ ಶಂಭುದಾಸ ಗುರೂಜಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾಪು ತಾಲೂಕು ಕಸಾಪ ಪೂರ್ವಾಧ್ಯಕ್ಷ ಪುಂಡಲೀಕ ಮರಾಠೆ, ಮುದರಂಗಡಿ ಸರಕಾರಿ ಪ.ಪೂ. ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಭಾಸ್ಕರ ವೈ.ಜಿ. ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ನಂತರ ಡಾ. ಗಣೇಶ್ ಗಂಗೊಳ್ಳಿಯವರಿಂದ 'ಗೀತಗಾಯನ' ಸಂಗೀತ ಕಾರ್ಯಕ್ರಮ ಜರುಗಲಿದೆ. ಪ್ರಾಂಶುಪಾಲ ಗುರುದತ್ತ ಸೋಮಯಾಜಿ , ಶಿಕ್ಷಕವೃಂದ ಮತ್ತು ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಆಯೋಜಿಸಲಿರುವರು.

ಕಾರಣಿಕ ತೋರಿದ ದೈವ - ಕಳವುಗೈದ ಚಿನ್ನಾಭರಣವನ್ನು ಕೊಂಡೊಯ್ಯಲಾಗದೆ ಗಂಟುಕಟ್ಟಿ ಇಟ್ಟ ದರೋಡೆಕೋರರು

Thumbnail
Posted On: 22 Nov 2021, 07:14 PM

ಉಡುಪಿ : ದೊಡ್ಡನಗುಡ್ಡೆ ಗುಂಡಿಬೈಲು ಪಂಚ ಧೂಮಾವತಿ ದೈವಸ್ಥಾನದ ಹಿಂಭಾಗದಲ್ಲಿ ಬಾಬುರಾವ್ ಆಚಾರ್ಯರವರ ಮನೆಯ ಚಿನ್ನಾಭರಣ ಕಳವಾದಾಗ ಪಂಚ ಧೂಮಾವತಿ ದೈವದ ಮೊರೆ ಹೋಗಿದ್ದರು. ಘಟನೆ ನಡೆದ ಎರಡು ದಿವಸದಲ್ಲಿ ದರೋಡೆಕೋರರು ಸಿಕ್ಕಿಬಿದ್ದಿದ್ದು ಚಿನ್ನಾಭರಣವು ಮತ್ತೆ ಅವರ ಕೈ ಸೇರುವಂತಾಗಿದೆ. ಪಂಚ ಧೂಮಾವತಿ ದೈವವು ತನ್ನ ಗಡುವಾಡು ಸ್ಥಳದಲ್ಲಿ ದರೋಡೆ ಮಾಡಿದ ಚಿನ್ನವನ್ನು ದರೋಡೆಕೋರರು ತೆಗೆದುಕೊಂಡು ಹೋಗದಂತೆ ಮಾಡಿತ್ತು. ಈ ಸಂದರ್ಭ ಮರದ ಅಡಿಯಲ್ಲಿ ಗಂಟುಕಟ್ಟಿ ಇಟ್ಟಿದ್ದರು ಎಂದು ಪೊಲೀಸರ ವಿಚಾರಣೆಯ ಸಂದರ್ಭ ಬಾಯ್ಬಿಟ್ಟಿದ್ದರು. ತುಳುನಾಡಿನ ದೈವ ದೇವರು ಯಾವುದೇ ಸಮಯದಲ್ಲಿ ಭಕ್ತರ ಕೈಬಿಡುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಈ ಬಗ್ಗೆ ಪಂಚ ಧೂಮಾವತಿ ದೈವಸ್ಥಾನದ ಗುರಿಕಾರರಾದ ನಿತಿನ್ ಕುಮಾರ್, ಪ್ರಧಾನ ಅರ್ಚಕರಾದ ವಿನೋದ್ ಶೆಟ್ಟಿ ಮಾಹಿತಿ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾಧ್ಯಕ್ಷರಾಗಿ ನೀಲಾವರ ಸುರೇಂದ್ರ ಅಡಿಗ ಆಯ್ಕೆ

Thumbnail
Posted On: 22 Nov 2021, 06:39 PM

ಉಡುಪಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಅಧ್ಯಕ್ಷರಾಗಿ ಸತತ ಮೂರನೇ ಬಾರಿಗೆ ನೀಲಾವರ ಸುರೇಂದ್ರ ಅಡಿಗ ಆಯ್ಕೆಯಾಗಿದ್ದಾರೆ. ಇವರು 437 ಮತಗಳಿಂದ ವಿಜಯ ಸಾಧಿಸಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಪಾಲೆತ್ತಾಡಿಯನ್ನು ಗೌರವಿಸಿದ ನಳಿನ್ ಕುಮಾರ್ ಕಟೀಲ್, ಕೋಟ ಶ್ರೀನಿವಾಸ ಪೂಜಾರಿ

Thumbnail
Posted On: 22 Nov 2021, 06:26 PM

ಮಂಗಳೂರು : ಕರ್ನಾಟಕ ಸರಕಾರದ 66ನೇ 'ಕನ್ನಡ ರಾಜ್ಯೋತ್ಸವ ಪ್ರಶಸ್ತಿ' - 2021 ಪುರಸ್ಕೃತರಾದ ಹೊರನಾಡ ಕನ್ನಡಿಗ, ಮುಂಬಯಿ 'ಕರ್ನಾಟಕ ಮಲ್ಲ' ದೈನಿಕದ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ ಅವರನ್ನು ನ. 21ರಂದು ಸಂಸದ, ಕರ್ನಾಟಕ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೌರವಿಸಿದರು. ಈ ಸಂದರ್ಭ ಮಾತನಾಡಿದ ಸಂಸದ ನಳಿನ್ ಕುಮಾರ್‌ ಕಟೀಲ್ ಹೊರ ರಾಜ್ಯದಲ್ಲಿ ಕನ್ನಡ ಸಾಹಿತ್ಯ ಮತ್ತು ಭಾಷೆ ಬೆಳೆಸುವಲ್ಲಿ ಪಾಲೆತ್ತಾಡಿಯವರ ಕಾರ್ಯ ಶ್ಲಾಘನೀಯ. ಅವರ ಸೇವಾ ಕಾರ್ಯಗಳು ಅವಿರತವಾಗಿ ಸಾಗಲಿ ಎಂದು ಹಾರೈಸಿದರು. ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರೂ ಪಾಲೆತ್ತಾಡಿಯವರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತ ನವೀನ್ ಕೆ. ಇನ್ನ, ಮುಂಬಯಿ ಮುಲುಂಡ್ ಫ್ರೆಂಡ್ಸ್‌ನ ಅಧ್ಯಕ್ಷ ಸುರೇಶ್ ಶೆಟ್ಟಿ ಯೆಯ್ಯಾಡಿ, ನಮನ ಫ್ರೆಂಡ್ಸ್‌ನ ಸ್ಥಾಪಕ ಪ್ರಭಾಕರ್ ಬೆಳುವಾಯಿ, ವಾಸ್ತುತಜ್ಞ ಪಂಡಿತ್ ನವೀನ್‌ಚಂದ್ರ ಸನಿಲ್ ಉಪಸ್ಥಿತರಿದ್ದರು.

ಪಡುಕುತ್ಯಾರು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ದ್ವಿತೀಯ ವಾರ್ಷಿಕ ಮಹಾಸಭೆ

Thumbnail
Posted On: 22 Nov 2021, 05:58 PM

ಕಾಪು : ಪಡುಕುತ್ಯಾರು ಶ್ರೀ ವಿಶ್ವಕರ್ಮ ಸಮಾಜ ಸಂಫದ ದ್ವಿತೀಯ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಹರೀಶ್ಚಂದ್ರ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 21 ರಂದು ಶ್ರೀ ದುರ್ಗಾ ಮಂದಿರದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಶಿವಾನಂದ ಆಚಾರ್ಯ ಮತ್ತು ಉಪಾಧ್ಯಕ್ಷರಾದ ದೇವರಾಜ್ ಬಿ ಶೆಟ್ಟಿಯವರು ಭಾಗವಹಿಸಿದರು. ಲತಾ ಆಚಾರ್ಯರವರು ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಸಂಘವು ಯುವಕರನ್ನು ಸೇರಿಸಿಕೊಂಡು ಸಮಾಜಮುಖಿ ಕೆಲಸಗಳಲ್ಲಿ ಭಾಗವಹಿಸಿ ಸರಕಾರದಿಂದ ಸಿಗುವ ಸವಲತ್ತುಗಳ ಪ್ರಯೋಜನ ಪಡೆಯುವರೇ, ಈ ಮೂಲಕ ಸಂಘದ ಅಭಿವೃದ್ಧಿಗೆ ಸಹಕಾರ ಆಗುತ್ತದೆ ಎಂದು ಸಭೆಗೆ ತಿಳಿಸಿದರು. ಇನ್ನೊರ್ವ ಅತಿಥಿ ದೇವರಾಜ್ ಶೆಟ್ಟಿಯವರು ಮಾತನಾಡಿ ಪಂಚಾಯತ್ ಮೂಲಕ ಮತ್ತು ಸರಕಾರದ ಮಟ್ಟದಲ್ಲಿ ಸಿಗುವ ಅನುದಾನ ಇತರೆ ಅಭಿವೃದ್ಧಿ ಕೆಲಸಗಳಿಗೆ ಸದಾ ನಿಮ್ಮೊಂದಿಗೆ ಇದ್ದು ಸಹಕರಿಸುವ ಭರವಸೆ ನೀಡಿದರು. ಪ್ರಾಸ್ತಾವಿಕವಾಗಿ ಸದಾಶಿವ ಆಚಾರ್ಯರವರು ಸಂಘದ ಮತ್ತು ಶ್ರೀ ದುರ್ಗಾಮಂದಿರದ ವಿವರಗಳನ್ನು ಮತ್ತು ಮುಂದಿನ ಕಾರ್ಯಕ್ರಮಗಳ ಬಗ್ಗೆ ಸಭೆಗೆ ತಿಳಿಸಿದರು. ಈ ಸಂದರ್ಭದಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು, ಮತ್ತು ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು. ಕಾಪು ಜಯರಾಮ ಆಚಾರ್ಯರು ವರದಿ ವಾಚಿಸಿದರು. ಗಂಗಾಧರ ಆಚಾರ್ಯ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಪ್ರಕಾಶ್ ಆಚಾರ್ಯ, ಮಾಧವ ಎಸ್ ಆಚಾರ್ಯ,ಚಂದ್ರಯ್ಯ ಪಿ ಆಚಾರ್ಯ, ಶ್ರೀಮತಿ ಆಚಾರ್ಯ,ಅಚ್ಚುತ್ತ ಆಚಾರ್ಯ,ಪ್ರವೀಣ್ ಆಚಾರ್ಯ,ದಿನೇಶ್,ರತ್ನಾಕರ ಆಚಾರ್ಯ,ಸರ್ವ ಸದ್ಯಸರು ಉಪಸ್ಥಿತರಿದ್ದರು. ಕಾರ್ಯದರ್ಶಿ ಸುರೇಶ್ ಆಚಾರ್ಯ ಸ್ವಾಗತಿಸಿ,ಗಂಗಾಧರ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಶಶಿರಾಜ್ ಆಚಾರ್ಯ ವಂದಿಸಿದರು.