Updated News From Kaup
ರೋಟರಿ ಕ್ಲಬ್ ಸೈಬ್ರಕಟ್ಟೆ ವತಿಯಿಂದ ಕಾವಡಿ ಸರಕಾರಿ ಪ್ರೌಢಶಾಲೆಗೆ ಶಾಲಾ ಪರಿಕರಗಳ ಕೊಡುಗೆ
Posted On: 09-10-2021 03:34PM
ಉಡುಪಿ : ರೋಟರಿ ಕ್ಲಬ್ ಸೈಬ್ರಕಟ್ಟೆ ಇವರಿಂದ ಸರಕಾರಿ ಪ್ರೌಢಶಾಲೆ ಕಾವಡಿ ಇಲ್ಲಿ ಸೀಲಿಂಗ್ ಫ್ಯಾನ್ ಗಳ ಹಸ್ತಾಂತರ ಕಾರ್ಯಕ್ರಮ ಜರುಗಿತು.
ಪ್ರಧಾನಿ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಬಿಜೆಪಿ ಯುವಮೋರ್ಚಾ ಕಾಪು ಮಂಡಲ ವತಿಯಿಂದ ಪೋಸ್ಟ್ ಕಾರ್ಡ್ ಅಭಿಯಾನ
Posted On: 08-10-2021 06:20PM
ಕಾಪು : ಬಿಜೆಪಿ ಯುವ ಮೋರ್ಚಾ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಗೆ ಹುಟ್ಟುಹಬ್ಬದ ಅಭಿನಂದನೆ ಸಲ್ಲಿಸುವ ನಿಟ್ಟಿನಲ್ಲಿ ಪೋಸ್ಟ್ ಕಾರ್ಡ್ ಅಭಿಯಾನ ಕಟಪಾಡಿ ಎಸ್ ವಿ ಎಸ್ ಕಾಲೇಜಿನ ಬಳಿ ನಡೆಯಿತು. ಈ ಸಂದರ್ಭ ನೂರಾರು ವಿದ್ಯಾರ್ಥಿಗಳು ಸಂತೋಷದಿಂದ ಪತ್ರ ಬರೆದರು.
ಬಿಜೆಪಿ ಯುವಮೋರ್ಚಾ ಕಾಪು ಮಂಡಲ ವತಿಯಿಂದ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಮತ್ತು ಬಟ್ಟೆ ಚೀಲಗಳ ವಿತರಣೆ
Posted On: 08-10-2021 05:15PM
ಕಾಪು: ಬಿಜೆಪಿ ಯುವಮೋರ್ಚಾ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜಿ ಯವರ 71ನೇ ಜನ್ಮದಿನದ ಪ್ರಯುಕ್ತ "ಸೇವೆ ಮತ್ತು ಸಮರ್ಪಣೆ" ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಮತ್ತು ಬಟ್ಟೆ ಚೀಲ ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.
ಉಪ್ಪುಂದ : ಕನಸಿನ ಮನೆಯ ನಿರ್ಮಾಣವನ್ನು ನನಸು ಮಾಡಿದ ಡಾ. ಗೋವಿಂದ ಬಾಬು ಪೂಜಾರಿ
Posted On: 08-10-2021 04:50PM
ಉಡುಪಿ : ಉಪ್ಪುಂದ ಕಾಳವರದ ನರಿ ಕೋಡ್ಲು ಮನೆ ಸತೀಶ್ ಪೂಜಾರಿಯವರು ನೂತನ ಮನೆ ನಿರ್ಮಾಣ ಮಾಡುವ ಕನಸು ಕಂಡಿದ್ದರು, ಆದರೆ ವಿಧಿ ಆಟವೇ ಬೇರೆಯಾಗಿತ್ತು, ಮನೆ ಪೂರ್ಣವಾಗುವ ಮೊದಲೇ ಅಕಾಲಿಕ ಮರಣಕ್ಕೆ ತುತ್ತಾದರೂ, ಇದರಿಂದ ಮನೆಯವರು ಮನೆ ನಿರ್ಮಾಣ ಮಾಡಲು ಸಾಧ್ಯವಾಗದೆ ತೀವ್ರ ಕಷ್ಟದಲ್ಲಿ ಇರುವುದು ಡಾ. ಗೋವಿಂದ ಬಾಬು ಇವರ ಗಮನಕ್ಕೆ ಬಂದು ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ (ರಿ.) ಮೂಲಕ ಮನೆಯನ್ನು ಪೂರ್ಣಗೊಳಿಸಿ ಕೊಡುವ ಭರವಸೆಯನ್ನು ನೀಡಿದ್ದರು.
ಅಕ್ಟೋಬರ್ 12 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಿಗೆ ಹರಕೆಯಾಗಿ ಬಂದ ಸೀರೆಗಳ ಬಹಿರಂಗ ಹರಾಜು ಪ್ರಕ್ರಿಯೆ
Posted On: 07-10-2021 10:43PM
ಕಾಪು : ನವರಾತ್ರಿ ಮಹೋತ್ಸವದ ಪರ್ವ ಕಾಲದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಿಗೆ ಹರಕೆಯಾಗಿ ಬಂದಿರುವ ಸೀರೆಗಳನ್ನು ಬಹಿರಂಗವಾಗಿ ಹರಾಜು ಹಾಕುವ ಪ್ರಕ್ರಿಯೆಯು ವರ್ಷಂಪ್ರತೀ ನಡೆಯುತ್ತದೆ.
ಗೌರವಯುತವಾಗಿ ಕೆಲಸ ಮಾಡುವುದು ಮಹಿಳೆಯ ಮೂಲಭೂತ ಹಕ್ಕು : ನ್ಯಾ.ಶರ್ಮಿಳಾ
Posted On: 07-10-2021 09:16PM
ಉಡುಪಿ : ಮಹಿಳೆಯರು ತಾವು ಕಾರ್ಯ ನಿರ್ವಹಿಸುವ ಸ್ಥಳದಲ್ಲಿ ಪುರುಷರ ಯಾವುದೇ ಕಿರುಕುಳಕ್ಕೆ ಒಳಗಾಗದೇ ಗೌರವಯುತವಾಗಿ ಕೆಲಸ ಮಾಡುವುದು ಮಹಿಳೆಯ ಮೂಲಭೂತ ಹಕ್ಕು ಎಂದು ವಿಶಾಖಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಸಂಯುಕ್ತಶ್ರಾಯದಲ್ಲಿ ಸ್ವಾತಂತ್ರ್ಯೋತ್ಸವದ 75 ನೇ ವಾರ್ಷಿಕೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ನಡೆದ, ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳದ ಕುರಿತ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಉಡುಪಿ : ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮ
Posted On: 07-10-2021 09:08PM
ಉಡುಪಿ : ರಕ್ತ ನೀಡಿ ಜಗತ್ತನ್ನು ಗೆಲ್ಲಿಸಿ ಎಂಬ ಧ್ಯೇಯವಾಕ್ಯದೊಂದಿಗೆ ಈ ವರ್ಷ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಡೆಯುತ್ತಿದ್ದು, ವರ್ಷದಲ್ಲಿ 1 ರಿಂದ 3 ಬಾರಿ ರಕ್ತದಾನವನ್ನು ಮಾಡುವುದರ ಮೂಲಕ ಪರೋಕ್ಷವಾಗಿ ಹಲವಾರು ಜೀವ ರಕ್ಷಿಸುವ ಕಾರ್ಯದಲ್ಲಿ ತೊಡಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ ಹೇಳಿದರು. ಅವರು ಇಂದು ಮಣಿಪಾಲದ ಅನಂತನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು, ಜಿಲ್ಲಾಏಡ್ಸ್ ನಿಯಂತ್ರಣಘಟಕ, ರಕ್ತನಿಧಿ ಕೇಂದ್ರ, ಜಿಲ್ಲಾಸ್ಪತ್ರೆ, 6ಕರ್ನಾಟಕ ನೌಕಾದಳ ಎನ್ಸಿಸಿ, ಕರ್ನಾಟಕ ರಾಜ್ಯ ನೌಕರರ ಸಂಘ, ಲಯನ್ಸ್ಕ್ಲಬ್, ಮಿಡ್ಟೌನ್ ಮತ್ತು ಯುವ ರೆಡ್ಕ್ರಾಸ್ ಘಟಕ ಹಾಗೂ ಎನ್ ಎಸ್ ಎಸ್ ಘಟಕ, ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬ್ಯಾಂಕ್ ಗಳು ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು : ಡಾ.ನವೀನ್ ಭಟ್
Posted On: 07-10-2021 08:59PM
ಉಡುಪಿ : ವಾಣಿಜ್ಯ ಬ್ಯಾಂಕ್ ಗಳಲ್ಲಿ ನಾಗರಿಕರು ವ್ಯವಹರಿಸಲು ಬಂದಾಗ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಿಗುವ ಸೌಲಭ್ಯಗಳ ನಿಖರ ಮಾಹಿತಿಯನ್ನು ಅವರುಗಳಿಗೆ ಒದಗಿಸುವುದರೊಂದಿಗೆ ಗರಿಷ್ಠ ಸೇವೆಯನ್ನು ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾರ್ವಜನಿಕರು ಬ್ಯಾಂಕ್ ಗಳಲ್ಲಿ ವ್ಯವಹರಿಸಲು ಬಂದಾಗ ಬ್ಯಾಂಕಿಂಗ್ ಕಾರ್ಯವ್ಯಾಪ್ತಿಯಲ್ಲಿ ಬರುವ ಸೌಲಭ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅವರಿಗೆ ಒದಗಿಸಿ, ಬ್ಯಾಂಕಿಂಗ್ ಕ್ಷೇತ್ರದ ಸೇವೆಗಳ ಬಗ್ಗೆ ಅವರು ವಿಶ್ವಾಸ ಹೊಂದುವಂತೆ ಮಾಡಿ, ಗರಿಷ್ಠ ಆರ್ಥಿಕ ಚಟುವಟಿಕೆಯನ್ನು ಬ್ಯಾಂಕ್ ಗಳ ಮೂಲಕ ನಿರ್ವಹಿಸುವಂತೆ ಮಾಡುವ ಮೂಲಕ ತಮ್ಮ ಕಾರ್ಯವ್ಯಾಪ್ತಿಯನ್ನು ಹೆಚ್ಚಿಸಬೇಕು ಎಂದರು.
ಸೈಬ್ರಕಟ್ಟೆ ರೋಟರಿ ವತಿಯಿಂದ 7500 ರೂ. ಮೌಲ್ಯದ 30 ಔಷಧೀಯ ಕಿಟ್ ಗಳ ಹಸ್ತಾಂತರ
Posted On: 07-10-2021 08:52PM
ಉಡುಪಿ : 75ನೇ ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ ಘನವೆತ್ತ ಭಾರತ ಸರಕಾರದಿಂದ ದೇಶದಾದ್ಯಂತ 750 ಜನ ಔಷಧಿ ಕೇಂದ್ರಗಳಲ್ಲಿ ಹಿರಿಯ ನಾಗರಿಕರಿಗೆ 100 ಔಷಧೀಯ ಕಿಟ್ ಗಳನ್ನು ಪ್ರತಿಯೊಂದು ಜನ ಔಷಧಿ ಕೇಂದ್ರಗಳಿಗೆ ಹಂಚಲು ನೀಡಲಿದ್ದು, ಇದೆ ತಿಂಗಳ 10ನೇ ತಾರೀಖಿನಂದು ಹಂಚಲಿದ್ದು ಬ್ರಹ್ಮಾವರ ಜನ ಔಷಧಿ ಕೇಂದ್ರಕ್ಕೂ ನೀಡಿದ್ದು , ಅದರ ಜೊತೆ ಸೈಬ್ರಕಟ್ಟೆ ರೋಟರಿ ವತಿಯಿಂದ ಅಣ್ಣಯ್ಯದಾಸ್ ಅವರ ಕೊಡುಗೆ ಸುಮಾರು 7500ರೂ. ಮೌಲ್ಯದ 30 ಔಷಧೀಯ(ವಿಟಮಿನ್ ಪೌಡರ್, ಟಾನಿಕ್, ಜ್ಯೂಸ್) ಕಿಟ್ ಗಳನ್ನು ಜನ ಔಷಧಿ ಕೇಂದ್ರದ ಆಡಳಿತ ಪಾಲುದಾರಾರದ ಸುಂದರ್ ಅವರಿಗೆ ಹಿರಿಯ ನಾಗರಿಕರಿಗೆ ವಿತರಿಸಲು, ವಲಯ ಸಹಾಯಕ ಗವರ್ನರ್ ಪದ್ಮನಾಭ ಕಾಂಚನ್ ಮೂಲಕ ಹಸ್ತಾಂತರಿಸಲಾಯಿತು.
ಇನ್ನಂಜೆ : ಆರ್ಥಿಕ ಸಂಕಷ್ಟದ ಕುಟುಂಬಕ್ಕೆ ಇನ್ನಂಜೆ ಯುವತಿ ಮಂಡಲದ ವತಿಯಿಂದ ಆಹಾರ ಸಾಮಾಗ್ರಿ ವಿತರಣೆ
Posted On: 06-10-2021 05:07PM
ಕಾಪು :ಇನ್ನಂಜೆ ಯುವತಿ ಮಂಡಲದ ವತಿಯಿಂದ ಇನ್ನಂಜೆ ಕಲ್ಯಾಲುವಿನಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬವೊಂದಕ್ಕೆ ಮುಂಬೈನ ವಿದ್ಯಾ ಶಶಿಕಾಂತ್ ಶೆಟ್ಟಿ ಕುರ್ಕಾಲು ಪ್ರಾಯೋಜಿತ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು.
