Updated News From Kaup

ತುಳುಕೂಟ ಉಡುಪಿ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫಾರೂಕ್ ಚಂದ್ರನಗರ ಇವರಿಗೆ ಸನ್ಮಾನ

Thumbnail
Posted On: 12 Dec 2021, 05:23 PM

ಉಡುಪಿ : ತುಳುಕೂಟ (ರಿ.) ಉಡುಪಿ ವತಿಯಿಂದ ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರರವನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸನ್ಮಾನಿಸಿ ಮಾತನಾಡಿದ ತುಳುಕೂಟ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿ ಫಾರೂಕ್ ರವರ ಸಮಾಜ ಸೇವೆ ಇನ್ನಷ್ಟು ಮುಂದುವರೆಯಲಿ. ಇನ್ನಷ್ಟು ಪ್ರಶಸ್ತಿಯ ಗರಿ ಸಿಗಲಿ ಎಂದು ಹಾರೈಸಿದರು. ಈ ಸಂದರ್ಭದಲ್ಲಿ ವರ್ತಕರ ಸಂಘ ಉಡುಪಿ ಇದರ ಅಧ್ಯಕ್ಷ ದಿವಾಕರ ಸನಿಲ್, ಸಮಾಜ ಸೇವಾ ವೇದಿಕೆ ಸಂಚಾಲಕರಾದ ದಿವಾಕರ ಡಿ ಶೆಟ್ಟಿ ಕಳತ್ತೂರು, ತುಳುಕೂಟದ ಸದಸ್ಯರು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

ಚಿತ್ರ ಕಲಾವಿದ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಗಣೇಶ್ ಪಂಜಿಮಾರ್ ಅವರಿಗೆ ನಾನಿಲ್ತಾರ್ ಕುಲಾಲ ಸಂಘದಿಂದ ಸನ್ಮಾನ

Thumbnail
Posted On: 12 Dec 2021, 04:50 PM

ಕಾಪು : ಚಿತ್ರಕಲೆಯಲ್ಲಿ ವಿಶಿಷ್ಟ ಸಾಧನೆಗೈದ ವಿಕಲ ಚೇತನ ಶಿರ್ವ ಭಾಗದ ಪ್ರತಿಭೆ ಗಣೇಶ್ ಪಂಜಿಮಾರ್ ಅವರನ್ನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದುದಕ್ಕಾಗಿ ಇಂದು ನಾನಿಲ್ತಾರ್ ಸಂಘದ ಸರ್ವ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು. ನಮ್ಮ ಕಾಪು ನ್ಯೂಸ್ ತಂಡ ಈ ಸನ್ಮಾನಕ್ಕೆ ಶುಭ ಹಾರೈಸುತ್ತದೆ.

ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠ ನೂತನ ಉಡುಪಿ ಶಾಖಾ ಮಠದ ಉದ್ಘಾಟನೆ, ಪ್ರವೇಶ ಮತ್ತು ಸ್ವಾಮೀಜಿಯವರ ಮೊಕ್ಕಾಂ ಕಾರ್ಯಕ್ರಮ

Thumbnail
Posted On: 12 Dec 2021, 01:37 PM

ಉಡುಪಿ : ಆತ್ರಾಡಿಯಲ್ಲಿ ಇಂದು ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠ ಕೈವಲ್ಯಪುರ, ಪೋಂಡಾ, ಗೋವಾ ಇದರ ನೂತನ ಉಡುಪಿ ಶಾಖಾ ಮಠದ ಉದ್ಘಾಟನೆ ಹಾಗೂ ಸ್ವಾಮೀಜಿಯವರ ಮೊಕ್ಕಾಂ ಕಾರ್ಯಕ್ರಮ ಜರಗಿತು. ಶ್ರೀ ಸಂಸ್ಥಾನ ಗೌಡಪಾದಾಚಾರ್ಯ ಮಠ, ಕೈವಲ್ಯಪುರ, ಪೋಂಡಾ, ಗೋವಾದ ಪರಮಪೂಜ್ಯ ಶ್ರೀ ಶ್ರೀ ಶಿವಾನಂದ ಸರಸ್ವತೀ ಸ್ವಾಮಿ ಮಹಾರಾಜ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು. ಈ ಸಂದರ್ಭದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಮಾಜಿ ಸಚಿವರುಗಳಾದ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಆತ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೂಪಾ ಶೆಟ್ಟಿ, ಆತ್ರಾಡಿ ನೂತನ ಶಾಖಾ ಮಠದ ಅಧ್ಯಕ್ಷರಾದ ಸಂತೋಷ್ ವಾಗ್ಳೆ, ಉಜ್ವಲ್ ಡೆವಲಪರ್ಸ್ ಉಡುಪಿಯ ಪುರುಶೋತ್ತಮ ಶೆಟ್ಟಿ, ಎಣ್ಣೆಹೊಳೆ ಶ್ರೀ ಆದಿಶಕ್ತಿ ಮಹಾಲಕ್ಷ್ಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅಶೋಕ್ ನಾಯಕ್, ನರಸಿಂಗೆ ಶ್ರೀ ನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರಮೇಶ್ ಸಾಲ್ವಂಕಾರ್, ಮೊಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಅಲ್ಚಾರು ರಾಮಚಂದ್ರ ನಾಯಕ್, ಬೆಂಗಳೂರು, ಟೆಕ್ಸಾಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಮಾನಂದ ನಾಯಕ್, ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶಶಿಧರ ವಾಗ್ಳೆ, ಪಳ್ಳಿ, ಅಡಪಾಡಿ, ಶ್ರೀ ಉಮಾಮಹೇಶ್ವರಿ ದುರ್ಗಾಪರಮೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಪುಂಡಲೀಕ ನಾಯಕ್, ಆತ್ರಾಡಿ, ಭೈರಂಜೆ ಶ್ರೀ ಭವಾನಿ ಶಂಕರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದೇವೇಂದ್ರ ವಾಗ್ಳೆ ಮತ್ತಿತರರು ಉಪಸ್ಥಿತರಿದ್ದರು. ಆರ್.ಎಸ್.ಬಿ ಸಂಘ, ಮಣಿಪಾಲದ ಅಧ್ಯಕ್ಷರಾದ ಗೋಕುಲ್ ದಾಸ್ ನಾಯಕ್ ಸ್ವಾಗತಿಸಿದರು. ಪರ್ಕಳ ಶ್ರೀ ದುರ್ಗಾಪರಮೇಶ್ವರಿ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನಿತ್ಯಾನಂದ ನಾಯಕ್ ನರಸಿಂಗೆ ಕಾರ್ಯಕ್ರಮವನ್ನು ನಿರೂಪಿಸಿದರು.

ಸೇನಾ ಹೆಲಿಕಾಪ್ಟರ್ ದುರಂತ : ಫೇಸ್ಬುಕ್ ನಲ್ಲಿ ಟೀಕೆಗೈದಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲು

Thumbnail
Posted On: 11 Dec 2021, 03:18 PM

ಮಂಗಳೂರು : ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಮೂರು ಸೇನೆಗಳ ಮುಖ್ಯಸ್ಥ ಬಿಪಿನ್ ರಾವತ್ ರ ಸಾವು ಮತ್ತು ಭದ್ರತಾ ಸಲಹೆಗಾರ ಅಜಿತ್ ದೋವಲ್ ರ ಬಗ್ಗೆ ನಿಂದನಾತ್ಮಕವಾಗಿ ಫೇಸ್ ಬುಕ್ ನಲ್ಲಿ ಟೀಕೆಗೈದಿದ್ದ ಶ್ರೀನಿವಾಸ ಕಾರ್ಕಳ ಮತ್ತು ವಸಂತ ಕುಮಾರ್ ಮೇಲೆ ಮಂಗಳೂರು ಪೋಲಿಸರು IPC sections 505(1a), 505(2) & 505(b) ಅನ್ವಯ ಪ್ರಕರಣ ದಾಖಲಿಸಿದ್ದಾರೆ.

ಜೀರ್ಣೋದ್ಧಾರಗೊಳ್ಳುತ್ತಿರುವ ಏಣಗುಡ್ಡೆ ಶ್ರೀ ಬ್ರಹ್ಮ ಬೈದೇರುಗಳ ಗರಡಿಯ ಪ್ರಧಾನ ಶಿಲಾ ದ್ವಾರದ ಸ್ಥಾಪನೆ

Thumbnail
Posted On: 11 Dec 2021, 10:31 AM

ಕಟಪಾಡಿ, ಡಿ.11 : ಜೀರ್ಣೋದ್ಧಾರಗೊಳ್ಳುತ್ತಿರುವ ಏಣಗುಡ್ಡೆ ಶ್ರೀ ಬ್ರಹ್ಮ ಬೈದೇರುಗಳ ಗರಡಿಯ ಪ್ರಧಾನ ಶಿಲಾ ದ್ವಾರದ ಸ್ಥಾಪನೆಯು ಶುಕ್ರವಾರ ನೆರವೇರಿತು . ಧಾರ್ಮಿಕ ವಿಧಿ ವಿಧಾನಗಳು ತಂತ್ರಿಗಳಾದ ಮಹೇಶ್ ಶಾಂತಿ ಹೆಜ್ಮಾಡಿ ಇವರ ಪೌರೋಹಿತ್ಯದಲ್ಲಿ ಜರಗಿತು. ಗರಡಿಯ ಪೂಜಾ ಪೂಜಾರಿ ಇಂಪು ಪೂಜಾರಿ , ವಾಸ್ತುಶಿಲ್ಪಿ ಪ್ರಮಲ್ ಕುಮಾರ್ ಹಾಗೂ ಶಿಲಾ ಶಿಲ್ಪಿ ಸುಧೀರ್ ಆಚಾರ್ಯ ಇವರ ಮಾರ್ಗದರ್ಶನದಲ್ಲಿ ಶಿಲಾ ದ್ವಾರ ಸ್ಥಾಪನೆ ಮಾಡಲಾಯಿತು. ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಗಂಗಾಧರ್ ಸುವರ್ಣ , ಗೌರವ ಸಲಹೆಗಾರ ಬಗ್ಗ ಪೂಜಾರಿ ಯಾನೆ ಉಮೇಶ್ ಕೋಟ್ಯಾನ್ ,ಅಧ್ಯಕ್ಷ ಅಶೋಕ್ ಎನ್ ಪೂಜಾರಿ ,ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್, ಮುಂಬಯಿ ಸಮಿತಿಯ ಉಪಾಧ್ಯಕ್ಷ ವೀರಮಣಿ , ಗುರಿಕಾರರಾದ ದಾಮೋದರ್ ಪೂಜಾರಿ, ರಂಗ ಪೂಜಾರಿ , ಸೀನ ಪೂಜಾರಿ ,ಕೃಷ್ಣಪೂಜಾರಿ ರಮೇಶ್‌ ಜತ್ತನ್ನ , ಭೋಜ ಪೂಜಾರಿ, ಮುದ್ದು ಪೂಜಾರಿ, ಜಯ ಪೂಜಾರಿ , ಸೂರಪ್ಪ ಪೂಜಾರಿ, ನಾರಾಯಣ ಅಂಚನ್, ಗರಡಿ ಜವನೆರ್ ತಂಡದ ಸುಧೀರ್ ರಾಜ್ ಪೂಜಾರಿ ಹಾಗೂ ಪ್ರಮುಖರಾದ ಶಿಲ್ಪಾ ಜಿ ಸುವರ್ಣ ,ಆರ್ ಜಿ ಕೋಟ್ಯಾನ್ , ಮಹೇಶ್ ಪೂಜಾರಿ , ನಿರಂಜನ್ ಪೂಜಾರಿ ,ಚಂದ್ರಹಾಸ ಕೋಟ್ಯಾನ್ , ರಮೇಶ್ ಕೋಟ್ಯಾನ್ , ಶಿವ ಪ್ರಸಾದ್ ಮಹೇಶ್ ಅಂಚನ್, ಪ್ರಸಾದ್ ಬಂಗೇರ,ಆನಂದ ಪೂಜಾರಿ ,ವಿಠಲ್ ಪೂಜಾರಿ ಹಾಗೂ ಜೀರ್ಣೋದ್ಧಾರ ಸಮಿತಿಯ ಸದಸ್ಯರು ಹಾಗೂ ಆರು ಮಾಗಣೆಯ ಹತ್ತು ಸಮಸ್ತರು ಉಪಸ್ಥಿತರಿದ್ದರು.

ಮಂಗಳೂರು : ರಿಯಾಝ್ ಎಂಬಾತನ ಮೇಲೆ ಬಿಯರ್ ಬಾಟಲ್ನಿಂದ ಹಲ್ಲೆ

Thumbnail
Posted On: 10 Dec 2021, 11:24 PM

ಮಂಗಳೂರು ನಗರದಿಂದ 15 ಕಿ.ಮೀ ದೂರದ ಅಡ್ಯಾರ್ ಪದವಿನ ನಿವಾಸಿಯಾದ 38 ವರ್ಷದ ರಿಯಾಝ್ ಅಹ್ಮದ್ ಎಂಬಾತನ ಮೇಲೆ ನೀರುಮಾರ್ಗ ಪಡು ಪ್ರದೇಶದಲ್ಲಿ ರಾತ್ರಿ ಸುಮಾರು 9 ಗಂಟೆ ವೇಳೆಗೆ 5 ರಿಂದ 6 ಮಂದಿ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಮತ್ತು ಅವರ ರಿಟ್ಸ್ ಕಾರಿನ ಮೇಲು ಹಾನಿಯುಂಟು ಮಾಡಿದ್ದಾರೆ. ತಲೆಗೆ ಸ್ವಲ್ಪ ಮಟ್ಟಿನಲ್ಲಿ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾದ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನಾ ಸ್ಥಳದಲ್ಲಿ ಸುಮಾರು 200 ಮಂದಿ ಜಮಾಯಿಸಿದ್ದು, ಆಸ್ಪತ್ರೆ ಬಳಿ ಸುಮಾರು 100ಕ್ಕೂ ಅಧಿಕ ಮಂದಿ ಜಮಯಿಸಿದ್ದಾರೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 307 ಐಪಿಸಿ ಪ್ರಕರಣ ದಾಖಲಾಗಿರುತ್ತದೆ.

ಕಾಪು : ಭಂಡಾರ ಮನೆಯ ಮಹೇಶ್ ರೈ ಯವರಿಗೆ ಗಡಿಪ್ರಧಾನ

Thumbnail
Posted On: 10 Dec 2021, 09:53 PM

ಕಾಪು ಪಡುಗ್ರಾಮದ ಹಿರಿಯರ, ಗ್ರಾಮಸ್ಥರ ಹಾಗೂ ಕಾಪು ಪಡು ಭಂಡಾರಮನೆ ಕುಟುಂಬಸ್ಥರ ಉಪಸ್ಥಿತಿಯಲ್ಲಿ ಕಾಪು ಪಡು ಧೂಮಾವತಿ ದೈವಸ್ಥಾನದ ಭಂಡಾರಮನೆಯ ಗಡಿಪ್ರಧಾನ ಪಟ್ಟವನ್ನು ಪ್ರಾಮಾಣಿಕ ಸರಳ ಸಜ್ಜನ ಮಹೇಶ್ ರೈ ಕಾಪು ಇವರು ಇಂದು ಸ್ವೀಕರಿಸಿದರು.

ಮಡಿದ ಯೋಧರಿಗೆ ಶ್ರದ್ಧಾಂಜಲಿ ಅರ್ಪಣೆ

Thumbnail
Posted On: 10 Dec 2021, 08:49 PM

ಕಾಪು : ತಮಿಳುನಾಡಿನಲ್ಲಿ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಭಾರತೀಯ ಸೇನೆಯ ಅತ್ಯುನ್ನತ ಹುದ್ದೆಯನ್ನು ನಿರ್ವಹಿಸುತ್ತಿದ್ದ ಸೇನಾ ಪಡೆಗಳ ಮುಖ್ಯಸ್ಥರಾದ "ಜನರಲ್ ಬಿಪಿನ್ ರಾವತ್" ಹಾಗೂ ಭಾರತೀಯ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೀರ ಯೋಧರಿಗೆ ಬಿಜೆಪಿ ಯುವಮೋರ್ಚಾ ಕಾಪು ಮಂಡಲದ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ವಿಧಾನ ಪರಿಷತ್ ಚುನಾವಣೆ : ಉಡುಪಿ ಜಿಲ್ಲೆಯಲ್ಲಿ 99.48 % ಮತದಾನ

Thumbnail
Posted On: 10 Dec 2021, 08:35 PM

ಉಡುಪಿ : ಜಿಲ್ಲೆಯಲ್ಲಿ ಇಂದು ನಡೆದ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನಪರಿಷತ್ನ ದ್ವೆöÊವಾರ್ಷಿಕ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಒಟ್ಟು 99.48% ಮತದಾನ ನಡೆದಿದ್ದು, ಜಿಲ್ಲೆಯ ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ 1203 ಪುರುಷ, 1289 ಮಹಿಳಾ ಸದಸ್ಯರು ಸೇರಿದಂತೆ ಒಟ್ಟು 2492 ಮಂದಿ ಮತದಾರರು ತಮ್ಮ ಮತ ಚಲಾಯಿಸಿದ್ದಾರೆ. ಬೆಳಗ್ಗೆ 8 ಗಂಟೆಗೆ ಆರಂಭಗೊಂಡ ಮತದಾನ ಪ್ರಕ್ರಿಯೆಯಲ್ಲಿ ಮತದಾರರು ಉತ್ಸಾಹದಿಂದ ಭಾಗವಹಿಸಿದ್ದು, 10 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಒಟ್ಟು 43.91 % ಮತದಾನ ನಡೆದಿದ್ದು, 2505 ಮಂದಿ ಮತದಾರರಲ್ಲಿ 1100 ಮಂದಿ ಮತದಾನ ಮಾಡಿದ್ದರು. ಕುಂದಾಪುರ ತಾಲೂಕಿನ ಆಲೂರು, ಚಿತ್ತೂರು, 74 ಉಳ್ಳೂರು, ಹಾರ್ದಳ್ಳಿ-ಮಂಡಳ್ಳಿ. ಬ್ರಹ್ಮಾವರ ತಾಲೂಕಿನ ಕೋಟತಟ್ಟು, ಬಾರ್ಕೂರು. ಹೆಬ್ರಿ ತಾಲೂಕಿನ ಮಡಾಮಕ್ಕಿ, ನಾಡ್ಪಾಲು. ಕಾರ್ಕಳ ತಾಲೂಕಿನ ಎರ್ಲಪಾಡಿ, ಹಿರ್ಗಾನ, ಕೆರ್ವಾಶೆ, ದುರ್ಗಾ, ಪಳ್ಳಿ, ನಿಟ್ಟೆ, ನಲ್ಲೂರು, ರೆಂಜಾಳ, ಬೋಳ, ನಂದಳಿಕೆ, ಮುಂಡ್ಕೂರು ಗ್ರಾಮ ಪಂಚಾಯತ್ಗಳಲ್ಲಿ ಎಲ್ಲಾ ಮತದಾರರು ಮತ ಚಲಾಯಿಸಿದ್ದು, 100% ಮತದಾನ ನಡೆದಿತ್ತು. ಬೆಳಗ್ಗೆ 10 ಗಂಟೆಯ ನಂತರ ಮತದಾನ ಪ್ರಕ್ರಿಯೆ ಮತ್ತಷ್ಟು ಚುರುಕುಗೊಂಡಿದ್ದು, ಪಂಚಾಯತ್ಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದರು. ಪೆರ್ಡೂರು ಗ್ರಾಮ ಪಂಚಾಯತ್ನಲ್ಲಿ ಸದಸ್ಯರುಗಳು ಸರತಿಯಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು. 12 ಗಂಟೆಯ ವೇಳೆಗೆ ಬೈಂದೂರಿನ 9, ಕುಂದಾಪುರದ 22, ಬ್ರಹ್ಮಾವರದ 20, ಉಡುಪಿಯ 10, ಕಾಪುವಿನ 12, ಹೆಬ್ರಿಯ 5, ಕಾರ್ಕಳದ 12 ಗ್ರಾಮ ಪಂಚಾಯತ್ಗಳಲ್ಲಿ 100% ಮತದಾನ ನಡೆದಿತ್ತು. ಮಧ್ಯಾಹ್ನ 2 ಗಂಟೆಯ ವೇಳೆಗೆ ಹೆಬ್ರಿ ತಾಲೂಕಿನಲ್ಲಿ 100% ಮತದಾನ ನಡೆದಿತ್ತು. ಅಂತಿಮವಾಗಿ ಬೈಂದೂರು ಮತ್ತು ಹೆಬ್ರಿ ತಾಲೂಕಿನ ಎಲ್ಲಾ ಮತಗಟ್ಟೆಗಳಲ್ಲಿ 100% ಮತದಾನ ನಡೆದಿದ್ದು, ಕುಂದಾಪುರದ 40, ಬ್ರಹ್ಮಾವರದ 26, ಉಡುಪಿಯ 16, ಕಾಪುವಿನ 13, ಕಾರ್ಕಳದ 26 ಗ್ರಾಮ ಪಂಚಾಯತ್ ಗಳಲ್ಲಿ 100% ಮತದಾನವಾಗಿದೆ. ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಚುನಾವಣಾ ಆಯೋಗ ಸೂಚಿಸಿರುವ ಎಲ್ಲಾ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳನ್ನು ಅನುಸರಿಸಿ, ಮತದಾನ ಪ್ರಕ್ರಿಯೆ ನಡೆದಿದ್ದು, ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ವ್ಯವಸ್ಥೆ ಮಾಡಲಾಗಿತ್ತು.

ಅಸಮಾನತೆ ನಿವಾರಣೆಯಿಂದ ಮಾನವ ಹಕ್ಕುಗಳ ರಕ್ಷಣೆ ಸಾಧ್ಯ: ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ

Thumbnail
Posted On: 10 Dec 2021, 08:30 PM

ಉಡುಪಿ : ಸಮಾಜದಲ್ಲಿನ ಅಸಮಾನತೆಯನ್ನು ತೊಡೆದು ಹಾಕಿ, ಪ್ರತಿಯೊಬ್ಬರಿಗೂ ಸಮಾನತೆಯನ್ನು ನೀಡಿದಾಗ, ಪ್ರತಿಯೊಬ್ಬ ನಾಗರೀಕರ ಹಕ್ಕುಗಳನ್ನು ಎತ್ತಿ ಹಿಡಿಯಲು ಸಾಧ್ಯವಾಗಲಿದ್ದು, ಇದರಿಂದ ಮಾನವ ಹಕ್ಕುಗಳ ರಕ್ಷಣೆ ಸಹ ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲಾಡಳಿತದ ವತಿಯಿಂದ ನಡೆದ, ಮಾನವ ಹಕ್ಕು ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಕೋವಿಡ್-19 ಲಸಿಕೆ ತಲುಪುವುದರೊಂದಿಗೆ, ಈ ಸಾಲಿನ ಮಾನವ ಹಕ್ಕುಗಳ ದಿನಾಚರಣೆ ಆಚರಣೆಯ ಧ್ಯೇಯ ವಾಕ್ಯವಾದ, ಸಮಾನತೆ : ಅಸಮಾನತೆಯನ್ನು ತಗ್ಗಿಸಿದರೆ, ಮಾನವ ಹಕ್ಕುಗಳನ್ನು ಸಂರಕ್ಷಿಸಿದಂತೆ. ಈ ನಿಟ್ಟಿನಲ್ಲಿ ರಜಾ ದಿನಗಳಲ್ಲಿಯೂ ಸಹ ಜಿಲ್ಲೆಯ ಪ್ರತಿಯೊಬ್ಬ ಅರ್ಹ ವ್ಯಕ್ತಿಗಳಿಗೂ ಸಹ ಕೋವಿಡ್-19 ಲಸಿಕೆ ತಲುಪಿಸುವ ಉದ್ಧೇಶದಿಂದಾಗಿ ಶ್ರಮಿಸುತ್ತಿರುವ ಎಲ್ಲಾ ಇಲಾಖೆಯ ಸಿಬ್ಬಂದಿಗಳ ಅವಿರತ ಸೇವೆಯನ್ನು ಶ್ಲಾಘಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನ, ಉಡುಪಿಯ ಅಧ್ಯಕ್ಷ ರವೀಂದ್ರನಾಥ್ ಶಾನುಭಾಗ್ ಮಾತನಾಡಿ, ಕೊರೋನೋತ್ತರದ ದಿನಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ವಿಷೇಷವಾಗಿ ಹಿರಿಯ ನಾಗರೀಕರಿಗೆ ಸಂಬಂಧಿಸಿ ಸಮಸ್ಯೆಗಳು ಮೂರು ಪಟ್ಟು ಹೆಚ್ಚಾಗಿದ್ದು, ಇಂತಹ ಸಂಧರ್ಭಗಳಲ್ಲಿ ವಯೋವೃದ್ದರ, ಅಶಕ್ತರ, ಅಂಗವಿಕಲರ, ಮಕ್ಕಳು ಮತ್ತು ಮಹಿಳೆಯರ ಘನತೆ - ಗೌರವಕ್ಕೆ ಯಾವುದೇ ರೀತಿಯಲ್ಲಿ ಚ್ಯುತಿ ಉಂಟಾಗದಂತೆ ಅವರ ಹಕ್ಕುಗಳನ್ನು ರಕ್ಷಣೆ ಮಾಡುವಲ್ಲಿ ಪ್ರತಿಯೊಬ್ಬರೂ ಶ್ರಮಿಸುವಂತೆ ತಿಳಿಸಿದರು. ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ ಮಾನವ ಹಕ್ಕು ಕುರಿತ ಪ್ರತಿಜ್ಞಾ ವಿಧಿ ಭೋಧಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ವೈ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾಧಿಕಾರಿ ಕಛೇರಿಯ ಸಿಬ್ಬಂದಿಗಳು ಹಾಗೂ ಕಾನೂನು ಕಾಲೇಜಿನ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.