Updated News From Kaup

ಕಾರ್ಯದರ್ಶಿಯಾಗಿ ರಮಾನಂದ ಪೂಜಾರಿ ಕಲ್ಲುಗುಡ್ಡೆ ಅವಿರೋಧವಾಗಿ ಆಯ್ಕೆ

Thumbnail
Posted On: 22 Nov 2021, 05:49 PM

ಕಾಪು : ಬಿಲ್ಲವ ಸೇವಾ ಸಂಘ (ರಿ.) ಇನ್ನಂಜೆ ಇದರ 2021- 23ರ ಅವಧಿಗೆ ನೂತನ ಅಧ್ಯಕ್ಷರಾಗಿ ಸದಾಶಿವ ಪೂಜಾರಿ ಮಜಲು, ಇನ್ನಂಜೆ ಮತ್ತು ಕಾರ್ಯದರ್ಶಿಯಾಗಿ ರಮಾನಂದ ಪೂಜಾರಿ ಕಲ್ಲುಗುಡ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಕೃಷ್ಣ ಅಮೀನ್ ನವೆಂಬರ್ 21ರಂದು ಜರಗಿದ ಮಹಾಸಭೆಯಲ್ಲಿ ಅಧಿಕಾರ ಹಸ್ತಾಂತರ ಮಾಡಿದರು.

ಕೇಂಜ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಕಾಲಾವಧಿ ಜಾತ್ರೆ

Thumbnail
Posted On: 22 Nov 2021, 04:09 PM

ಕುತ್ಯಾರು : ಕಾಪು ತಾಲೂಕಿನ ಎಲ್ಲೂರು ಸೀಮೆಯ ಇತಿಹಾಸ ಪ್ರಸಿದ್ಧ ಕುತ್ಯಾರು ಕೇಂಜ ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ವರ್ಷಂಪ್ರತಿ ಜರಗುವ ಕಾಲಾವಧಿ ಜಾತ್ರೆಯು ನವೆಂಬರ್ 21, ಆದಿತ್ಯವಾರ ಜರಗಿತು. ಈ ಸಂದರ್ಭ ಊರ- ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಕನಕದಾಸರ ಚಿಂತನೆಗಳು ಸಾರ್ವಕಾಲಿಕ ಸತ್ಯ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Thumbnail
Posted On: 22 Nov 2021, 02:38 PM

ಉಡುಪಿ : ಮನುಷ್ಯರಲ್ಲಿ ಜಾತಿ ,ಮತ, ಭೇದ ತೊರೆದು ಸಮಾನತೆ ಸಾರುವ ಕನಕದಾಸರ ಚಿಂತನೆ ಮತ್ತು ತತ್ವಗಳು ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದ್ದು,ಸಾರ್ವಕಾಲಿಕ ಸತ್ಯ ಆಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ನಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಡೆದ ಶ್ರೀ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ, ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಅಂದಿನ ಕಾಲದಲ್ಲಿದ್ದ ಜಾತಿ ಭೇದ ಭಾವಗಳ ಕುರಿತು ಕನಸದಾಸರು ತಮ್ಮ ಕೀರ್ತನೆಗಳಲ್ಲಿ ತಿಳಿಸಿದ್ದು, ಇಂದಿಗೂ ಸಮುದಾಯಗಳಲ್ಲಿ ಈ ಅಸಮಾನತೆ ಕಂಡು ಬರುತ್ತಿದ್ದು, ಕನಕದಾಸರ ಚಿಂತನೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಸಮಾಜದಲ್ಲಿ ಅಸಮಾನತೆ ತೊಡೆಯಲು ಸಾಧ್ಯವಿದೆ. ಯಾವುದೇ ವ್ಯಕ್ತಿ ಅಧಿಕಾರದಿಂದ ಶ್ರೇಷ್ಠನಾಗಲು ಸಾಧ್ಯವಿಲ್ಲ ಎಂಬುದನ್ನು ತಮ್ಮ ರಾಮ ಧಾನ್ಯ ಚರಿತ್ರೆ ಕೃತಿಯ ಮೂಲಕ ಮಾನವಕುಲಕ್ಕೆ ತಿಳಿಸಿದ್ದಾರೆ ಎಂದ ಜಿಲ್ಲಾಧಿಕಾರಿ ಕೂರ್ಮಾರಾವ್, ಉಡುಪಿಗೂ ಕನಕದಾಸರಿಗೂ ಅವಿನಾಭಾವ ಸಂಬoಧವಿದೆ ಎಂದರು. ಕನಕದಾಸರ ಜೀವನ ಮತ್ತು ವ್ಯಕ್ತಿತ್ವದ ಕುರಿತು ಉಪನ್ಯಾಸ ನೀಡಿದ ಸಾಹಿತಿ ಕಾತ್ಯಾಯನಿ ಕುಂಜಿಬೆಟ್ಟು ಮಾತನಾಡಿ, ಕನಕದಾಸರು ಭಕ್ತಿ ಕವಿ ಮಾತ್ರವಲ್ಲದೇ,ಸಂತ ಕವಿ,ತತ್ವಜ್ಞಾನಿ,ದಾರ್ಶನಿಕರೂ ಆಗಿದ್ದರು. ಮಾನವನಿಗೆ ಆತ್ಮ ಸಾಕ್ಷಾರ ಆಗದೇ ದೈವ ಸಾಕ್ಷಾರ ಆಗಲು ಸಾಧ್ಯವಿಲ್ಲ ಎಂಬುದನ್ನು ತಿಳಿಸಿದ್ದ ಅವರು, ಮನಸ್ಸಿನ ದಾಸರಾಗದೇ,ಮಾಯೆಯನ್ನು ದಾಟಿದವರಾಗಿದ್ದರು. ಸಮಾಜದಲ್ಲಿ ಮನುಷ್ಯರ ನಡುವಿನ ಜಾತಿ ಮತ ತಾರತಮ್ಮವನ್ನು ಎಲ್ಲರ ಮನಸ್ಸಿನಿಂದ ತೊಳೆಯುವ ಕಾರ್ಯ ಮಾಡಿದ್ದರು, ಮಾನವೀಯತೆಯೇ ಭಕ್ತಿ ಎಂಬುದನ್ನು ಸಾರಿದ್ದ ಅವರ ಎಲ್ಲಾ ಚಿಂತನೆಗಳು , ಐಷಾರಾಮಿ ಜೀವನದ ಈ ಕಾಲಘಟ್ದದಲ್ಲಿ ಅತ್ಯಂತ ಪ್ರಸ್ತುತವಾಗಿವೆ ಎಂದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ,ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಕರ್ನಾಟಕ ಪ್ರದೇಶ ಕುರುಬರ ಸಂಘ ಉಡುಪಿ ಜಿಲ್ಲೆಯ ನಿರ್ದೇಶಕ ಬಸವರಾಜ ಕುರುಬರ, ಮುಖಂಡರಾದ ಹನುಮಂತ ಆಡಿನ, ಹನುಮಂತ ಗೋಹಿ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ವಂದಿಸಿದರು.

ರೋಟರಿ ಕ್ಲಬ್ ಸೈಬ್ರಕಟ್ಟೆ : ವಿದ್ಯುತ್ ಬಳಕೆ, ಸುರಕ್ಷತೆ,ಗ್ರಾಹಕರ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಗಾರ

Thumbnail
Posted On: 22 Nov 2021, 02:31 PM

ಕುಂದಾಪುರ : ರೋಟರಿ ಕ್ಲಬ್ ಸೈಬ್ರಕಟ್ಟೆಯಿಂದ ಸ್ವಾಗತ್ ಮಿನಿ ಹಾಲ್ ನಲ್ಲಿ,ತಿಂಗಳ ರೋಟರಿ ಸ್ನೇಹ ಸೌಹಾರ್ದ ಭೋಜನ ಕೂಟದಲ್ಲಿ ಹೊಸ ಸದಸ್ಯ ಸೇರ್ಪಡೆ,ಸನ್ಮಾನ ಮತ್ತು ವಿದ್ಯುತ್ ಬಳಕೆ,ಸುರಕ್ಷತೆ,ಗ್ರಾಹಕರಿಗೆ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಗಾರ ಕಾರ್ಯಕ್ರಮ ಜರಗಿತು. ಮಾಹಿತಿ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾಗಿ ಮೆಸ್ಕಾಂ ಉಡುಪಿ ಇದರ ಎಇಇ ಪ್ರಾಣೇಶ್ ಮಾತನಾಡಿ ವಿದ್ಯುತ್ ಎಷ್ಟು ಉಪಯೋಗಕಾರಿ ಯಾಗಿದ್ದರು ಜಾಗೃತೆ ತಪ್ಪಿದರೆ ಅಪಾಯ ಖಚಿತ, ಅಲ್ಲದೆ ಮನೆ ಅಥವಾ ಇನ್ನಿತರ ಕಟ್ಟಡಗಳಲ್ಲಿ ಸುರಕ್ಷತೆಗಾಗಿ ಉತ್ತಮ ದರ್ಜೆಯ ವಯರ್ ಹಾಗೂ ಸ್ವಿಚ್ ಬಳಸಿ ವಯರಿಂಗ್ ಮಾಡಿಸಿ ಹಾಗೂ ಸರಿಯಾದ ಕ್ರಮದಲ್ಲಿ ಉತ್ತಮ ಗ್ರೌಂಡ್ ಅರ್ಥಿಂಗ್ ಕೊಡುವುದರಿಂದ ಮಾತ್ರ ಗೃಹಬಳಕೆಯ ವಿದ್ಯುತ್ ಉಪಕರಣಗಳ ಸುರಕ್ಷತೆ ಸಾಧ್ಯ ಅಂತ ಹೇಳಿದರು. ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಮೆಸ್ಕಾಂ ಶಿರಿಯಾರದ ಜೆಇ ವೈಭವ ಶೆಟ್ಟಿ ಮಾತನಾಡಿ ಯಾವುದೇ ವ್ಯಕ್ತಿಗೆ ವಿದ್ಯುತ್ ಅಪಘಾತವಾದಾಗ ತಕ್ಷಣಕ್ಕೆ ಹೋಗಿ ಆ ವ್ಯಕ್ತಿಯನ್ನು ಸ್ಪರ್ಶ ಮಾಡಬಾರದು ಮೈನ್ ಸ್ವಿಚ್ ಆಫ್ ಮಾಡಿ ಪ್ಲಾಸ್ಟಿಕ್ ಅಥವಾ ಒಣ ಮರದ ತುಂಡಿನಿಂದ ವ್ಯಕ್ತಿಯನ್ನು ವಿದ್ಯುತ್ ತಂತಿಯಿಂದ ಬೇರ್ಪಡಿಸಿ ತುರ್ತು ಚಿಕಿತ್ಸೆ ನೀಡಿ ಆಸ್ಪತ್ರೆಗೆ ಸಾಗಿಸಬೇಕು. ನೀರನ್ನು ಕುಡಿಸಬಾರದು ಅಂತ ಸಲಹೆ ನೀಡಿದರು. ಈ ಕಾರ್ಯಕ್ರಮದಲ್ಲಿ ಓರ್ವ ಹೊಸ ಸದಸ್ಯ ಮಂಜುನಾಥ್ ಎಮ್. ಅವರನ್ನು ಮಾಜಿ ಸಹಾಯಕ ಗವರ್ನರ್ ಮಹೇಶ್ ಕುಮಾರ್ ರೋಟರಿ ಪಿನ್ ತೋಡಿಸಿ ಸೇರ್ಪಡೆ ಗೊಳಿಸಿದರು.ತದನಂತರ ಮೆಸ್ಕಾಂ ಸೈಬ್ರಕಟ್ಟೆಯ ಮೇಲ್ವಿಚಾರಕರಾದ ಉಮೇಶ್ ಬಿ. ಅವರನ್ನು ವಲಯ 3 ರ ಸಹಾಯಕ ಗವರ್ನರ್ ಪದ್ಮನಾಭ್ ಕಾಂಚನ್ ಅತಿಥಿಗಳೊಡಗೂಡಿ ಸನ್ಮಾನಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯು.ಪ್ರಸಾದ್ ಭಟ್ ವಹಿಸಿದ್ದು, ವಲಯ ಸೇನಾನಿ ವಿಜಯ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ಅಣ್ಣಯ್ಯದಾಸ್, ವರದರಾಜ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನಟ ಪುನೀತ್ ರಾಜ್‌ಕುಮಾರ್‌ ಗೆ ನುಡಿನಮನ

Thumbnail
Posted On: 22 Nov 2021, 12:40 PM

ಕಟಪಾಡಿ : ಇಲ್ಲಿನ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕ್ಷೇತ್ರಾಡಳಿತ ಮಂಡಳಿಯ ವತಿಯಿಂದ ಇತ್ತೀಚೆಗೆ ಅಗಲಿರುವ ನಟ ಪುನೀತ್ ರಾಜ್‌ಕುಮಾರ್‌ ಅವರಿಗೆ ನುಡಿನಮನ ಕಾರ್ಯಕ್ರಮ ಜರಗಿತು. ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಸಹಿತ ಸಮಾಜದ ಗಣ್ಯರು ಅಗಲಿದ ನಟನಿಗೆ ನುಡಿನಮನ ಸಲ್ಲಿಸಿದರು. ಈ ಸಂದರ್ಭ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ಧೂಮಾವತಿ ದೈವಸ್ಥಾನ, ಅವರಾಲು ಮಟ್ಟು 4ನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವ

Thumbnail
Posted On: 21 Nov 2021, 06:43 PM

ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಧೂಮಾವತಿ ದೈವಸ್ಥಾನ, ಅವರಾಲು ಮಟ್ಟು ಇಲ್ಲಿನ 4ನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಅವರಾಲು ಕಂಕಣಗುತ್ತು ಗುತ್ತಿನಾರ್‌ ಕೃಷ್ಣ ಶೆಟ್ಟಿ ಜ್ಯೋತಿ ಬೆಳಗುವಿಕೆಯ ಮೂಲಕ ಚಾಲನೆ ನೀಡಿದರು. ಈ ಸಂದರ್ಭ ವಿವಿಧ ಭಜನಾ ತಂಡಗಳು ಮಂಗಲೋತ್ಸವದಲ್ಲಿ ಪಾಲ್ಗೊಂಡಿದ್ದವು.

ಲಸಿಕಾ ಮಿತ್ರರ ಮೂಲಕ ಜಿಲ್ಲೆಯಲ್ಲಿ ಶೇ.100 ಲಸಿಕೆ ನೀಡುವ ಗುರಿ

Thumbnail
Posted On: 21 Nov 2021, 06:29 PM

ಉಡುಪಿ : ಜಿಲ್ಲೆಯಲ್ಲಿ 18ರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು 9,99,000 ಗುರಿ ನಿಗಧಿಪಡಿಸಿದ್ದು, ಇದುವರೆಗೆ 1ನೇ ಡೋಸ್ ಲಸಿಕೆಯನ್ನು 9,24,639 (92.56%) ಜನರಿಗೆ ನೀಡಲಾಗಿದೆ ಹಾಗೂ ಇವರಲ್ಲಿ ಈಗಾಗಲೇ 6,11,569 (61.22%) ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಕೋವಿಡ್ ಸಂಭಾವ್ಯ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಪರಿಣಾಮ ಉಂಟಾಗುವ ಸಾಧ್ಯತೆ ಇದ್ದು, 18 ರ್ಷ ಮೇಲ್ಪಟ್ಟವರಲ್ಲಿ ಲಸಿಕೆ ಪಡೆಯದವರಿಗೆ ಕೋವಿಡ್ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿದ್ದು ಎರಡನ್ನೂ ತಡೆಗಟ್ಟಲು 18 ರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಉದ್ದೇಶದಿಂದ ಲಸಿಕಾ ಮಿತ್ರರು ನವೆಂಬರ್ 22 ರಿಂದ 30 ರವರಗೆ ಜಿಲ್ಲೆಯ ಪ್ರತೀ ಮನೆಗಳನ್ನು ಭೇಟಿ ನೀಡುವ ಮೂಲಕ ,ಲಸಿಕೆ ಪಡೆದಿರುವ ಮತ್ತು ಪಡೆಯದಿರುವವರ ಬಗ್ಗೆ ಪರಿಶೀಲನೆ ನಡೆಸಲಿದ್ದು,ಲಸಿಕೆ ಪಡೆಯದವರಿಗೆ ಲಸಿಕೆ ನೀಡುವುದರ ಮೂಲಕ ಶೇ.100 ಗುರಿ ಸಾಧಿಸಲು ಯೋಜನೆ ರೂಪಿಸಿದೆ. ಜಿಲ್ಲೆಯ ಮತದಾರರ ಪಟ್ಟಿಯನ್ನು ಬಳಸಿ ಪ್ರತಿ ಮನೆ ಸಮೀಕ್ಷೆ ಮಾಡಿ ಮನೆಯಲ್ಲಿರುವ 18 ರ್ಷ ಮೇಲ್ಪಟ್ಟವರಲ್ಲಿ 2 ಡೋಸ್ ಲಸಿಕೆ ಪಡೆದ ಬಗ್ಗೆ ಖಚಿತಪಡಿಸಿಕೊಳ್ಳುವುದು. ವೋಟರ್ ಲಿಸ್ಟ್ನಲ್ಲಿರುವ ಪ್ರತಿ ವ್ಯಕ್ತಿಯ ಹೆಸರಿನ ಪಕ್ಕದಲ್ಲಿ ಸೂಕ್ತ ಗುರುತು ಹಾಕಿಕೊಳ್ಳಲಾಗುವುದು. ಲಸಿಕೆ ಪಡೆಯಲು ನಿರಾಕರಣೆ ಇದ್ದಲ್ಲಿ ಅವರ ಹೆಸರಿನ ಮುಂದೆ ನಿರಾಕರಣೆ ನಮೂದಿಸಿ, ಮೊಬೈಲ್ ಸಂಖ್ಯೆ ದಾಖಲಿಸಲಾಗುವುದು. ಮತದಾರರ ಪಟ್ಟಿಯಲ್ಲಿರುವವರು ಮರಣ ಹೊಂದಿದ್ದಲ್ಲಿ ಹೆಸರಿನ ಮುಂದೆ ಮರಣ ಎಂದು ಹಾಗೂ ಮತದಾರ ಪಟ್ಟಿಯಲ್ಲಿರುವವರು ಹೊರ ಜಿಲ್ಲೆ/ರಾಜ್ಯದಲ್ಲಿ ನೆಲೆಸಿದ್ದರೆ ಅವರ ಹೆಸರಿನ ಮುಂದೆ ಹೊರಜಿಲ್ಲೆ ನಮೂದಿಸಿ ಮೊಬೈಲ್ ಸಂಖ್ಯೆ ದಾಖಲಿಸಲಾಗುವುದು. ಮನೆಯಲ್ಲಿರುವವರಲ್ಲಿ 18 ರ್ಷ ಮೇಲ್ಪಟ್ಟವರ ಹೆಸರು ವೋಟರ್ ಲಿಸ್ಟ್ನಲ್ಲಿ ಇಲ್ಲದಿದ್ದಲ್ಲಿ ಕುಟುಂಬದ ಸದಸ್ಯರ ಪಕ್ಕದಲ್ಲಿ ಹೊಸದಾಗಿ ಹೆಸರು ನಮೂದಿಸಿ ಲಸಿಕೆ ಪಡೆದ ಬಗ್ಗೆ ದಾಖಲಿಸಲಾಗುವುದು. ಪ್ರತಿ ಪಂಚಾಯತ್ನಲ್ಲಿ ವಾರದಲ್ಲಿ 1 ದಿನ ಬೆಳಿಗ್ಗೆ 7 ರಿಂದ 2 ಗಂಟೆಯವರೆಗೆ ಮತ್ತು ಇನ್ನೊಂದು ವಾರದಲ್ಲಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಲಸಿಕಾ ಶಿಬಿರ ಏರ್ಪಡಿಸಿ ಕೂಲಿ ಕಾರ್ಮಿಕರು ಲಸಿಕೆ ಪಡೆಯಲು ಯೋಜನೆ ರೂಪಿಸಲಾಗಿದೆ. ಈ ಕರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಬಿ.ಎಲ್.ಒ ರವರನ್ನು ಒಳಗೊಂಡ ತಂಡಗಳನ್ನು ರಚಿಸಿಕೊಂಡು ಪಂಚಾಯತ್ ವ್ಯಾಪ್ತಿಯಲ್ಲಿರುವ ಎಲ್ಲಾ ಮನೆಗಳಿಗೆ ಭೇಟಿ ನೀಡಿ ಪ್ರಥಮ ಡೋಸ್ ಕೋವಿಡ್ ಲಸಿಕೆ ಪಡೆಯದವರನ್ನು ಮತ್ತು ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆದು 84 ದಿನ ದಾಟಿದವರಲ್ಲಿ ಹಾಗೂ ಪ್ರಥಮ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 28 ದಿನ ದಾಟಿದವರಲ್ಲಿ 2ನೇ ಡೋಸ್ ಪಡೆಯದವರನ್ನು ಪತ್ತೆ ಹಚ್ಚಲಾಗುವುದು. ಪಂಚಾಯತ್ ವ್ಯಾಪ್ತಿಯಲ್ಲಿ ಲಸಿಕಾ ಶಿಬಿರ ರ್ಪಡಿಸಿ ಲಸಿಕೆ ಪಡೆಯದವರನ್ನು ಮೊಬಿಲೈಸ್ ಮಾಡಿ 100% ಲಸಿಕಾ ಸಾಧನೆ ಮಾಡಲು ಗ್ರಾಮ ಪಂಚಾಯತ್ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡಲು ತಾಲೂಕು ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಲಸಿಕೆ ಪಡೆಯಲು ನಿರಾಕರಣೆ ಜಾಸ್ತಿ ಇರುವ ಪ್ರದೇಶಗಳಿಗೆ ಭೇಟಿ ನೀಡಿ ಜನರನ್ನು ಮನವೊಲಿಸಿ ಲಸಿಕೆ ಪಡೆಯುವಂತೆ ಮಾಡಲಾಗುವುದು. 80 ರ್ಷ ಮೇಲ್ಪಟ್ಟವರಲ್ಲಿ ಲಸಿಕಾ ಕೇಂದ್ರಕ್ಕೆ ಬರಲು ಅಶಕ್ತರಾದವರಿಗೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲು ಹಾಗೂ ರ್ಭಿಣಿಯರು ಮತ್ತು ಬಾಣಂತಿಯರು ಕೋವಿಡ್ ಲಸಿಕೆ ಪಡೆಯುವಂತೆ ಪ್ರಸೂತಿ ತಜ್ಞರ ಮೂಲಕ ಅರಿವು ಮೂಡಿಸಲಾಗುವುದು. ಲಸಿಕಾ ಕೇಂದ್ರದಲ್ಲಿ ಲಸಿಕೆ ಪಡೆಯುವವರಿಗೆ ಕೋವಿಡ್ ಸ್ವಾಬ್ ಪರೀಕ್ಷೆ ಮಾಡದಂತೆ ಈಗಾಗಲೇ ಸೂಚಿಸಲಾಗಿದೆ ಜಿಲ್ಲೆಯಲ್ಲಿ ಲಸಿಕಾ ಮಿತ್ರರ ಮೂಲಕ ಪ್ರತೀ ಮನೆ ಭೇಟಿ ಕಾರ್ಯಕ್ರಮದ ಯಶಸ್ಸಿಗಾಗಿ ಕ್ರಿಯಾಯೋಜನೆ ರೂಪಿಸಲಾಗಿದ್ದು, ಪ್ರತೀ ದಿನ ಸಾಧಿಸಬೇಕಾದ ಪ್ರಗತಿಯ ಬಗ್ಗೆ ಗುರಿ ನಿಗಧಿಪಡಿಸಲಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರತೀ ದಿನ ಮೇಲ್ವಿಚಾರಣೆ ಮಾಡಲು ಪ್ರತೀ ತಾಲೂಕುವಾರು ಅಧಿಕಾರಿಗಳನ್ನು ನಿಯೋಜಿಸಲಾಗಿದೆ, ಸರ್ವಜನಿಕರು ಮನೆ ಭೇಟಿಗೆ ಆಗಮಿಸುವ ಲಸಿಕಾ ಮಿತ್ರರಿಗೆ ಸಂಪರ್ಣ ಸಹಕಾರ ನೀಡಬೇಕು. ಕೋವಿಡ್ ಲಸಿಕೆ ಪಡೆಯುವ ಕುರಿತು ಯಾವುದೇ ಸಂದೇಹಗಳಿದ್ದಲ್ಲಿ ಸಮೀಪದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳನ್ನು ಸಂರ್ಕಿಸಬಹುದಾಗಿದ್ದು, ಲಸಿಕೆ ಪಡೆಯುವುದರಿಂದ ಯಾವುದೇ ಸಮಸ್ಯೆಗಳಿರುವುದಿಲ್ಲ. ಜಿಲ್ಲೆಯ ಪ್ರತಿಯೊಬ್ಬರೂ 2 ಡೋಸ್ ಕೋವಿಡ್ ಲಸಿಕೆ ಪಡೆಯುವ ಮೂಲಕ ಜಿಲ್ಲೆಯಲ್ಲಿ 100% ಲಸಿಕಾಕರಣದ ಗುರಿ ಸಾಧಿಸಿ, ಜಿಲ್ಲೆಯನ್ನು ಕೋವಿಡ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಹಾಗೂ ಇಡೀ ರಾಜ್ಯಕ್ಕೆ ಮಾದರಿ ಜಿಲ್ಲೆಯನ್ನಾಗಿ ಮಾಡಲು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕರ್ಮಾರಾವ್ ಎಂ. ತಿಳಿಸಿದರು.

ಎಲ್ಲೂರು : ಚಿಣ್ಣರೇ ಉದ್ಘಾಟಿಸಿದ ಚಿಣ್ಣರ ಕಲರವ

Thumbnail
Posted On: 21 Nov 2021, 01:56 PM

ಕಾಪು : ಎಲ್ಲೂರು ಗ್ರಾಮದ ಕುಂಜೂರು ಶ್ರೀ ದುರ್ಗಾ ದೇವಸ್ಥಾದಲ್ಲಿ ಸ್ಥಳೀಯ ದುರ್ಗಾ ಮಿತ್ರ ಮಂಡಳಿ , ದುರ್ಗಾ ಸೇವಾ ಸಮಿತಿಯ ಆಶ್ರಯದಲ್ಲಿ ಚಿಣ್ಣರಿಗಾಗಿ ಸಂಯೋಜಿಸಲ್ಪಟ್ಟ 'ಚಿಣ್ಣರ ಕಲರವ' ಕಾರ್ಯಕ್ರಮವನ್ನು ಚಿಣ್ಣರೇ ಉದ್ಘಾಟಿಸಿದರು. ಮಕ್ಕಳ ದಿನಾಚರಣೆಯ ಪ್ರಯುಕ್ತ ಸಂಯೋಜಿಸಲ್ಪಟ್ಟ ಈ ಕಾರ್ಯಕ್ರಮದಲ್ಲಿ‌ ನಾಲ್ಕು‌ವಿಭಾಗಗಳಲ್ಲಿ‌ ವಿವಿಧ ಸ್ಪರ್ಧೆಗಳನ್ನು‌ ನಡೆಸಲಾಗುತ್ತದೆ. ಅಂಗನವಾಡಿ ,ಎಲ್ ಕೆ ಜಿ ಯಿಂದ ತೊಡಗಿ ಒಂಬತ್ತು - ಹತ್ತನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಸ್ಪರ್ಧಿಸುವ‌ ಅವಕಾಶವಿದೆ. ಪರಿಸರದ ಬೇರೆ ಬೇರೆ ಶಾಲೆಗಳ ಸುಮಾರು ಮುನ್ನೂರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಐದು ಚಿಣ್ಣರು ದೇವಳದಲ್ಲಿ ಬೆಳಗಿದ ದೀಪಗಳನ್ನು ವೇದಿಕೆಗೆ ತಂದು ಉದ್ಘಾಟನಾ ದೀಪವನ್ನು ಬೆಳಗಿದರು. ದೇವಳದ ಅರ್ಚಕ ವೇ.ಮೂ. ಚಕ್ರಪಾಣಿ ಉಡುಪ ಆಶೀರ್ವದಿಸಿದರು. ಗೋವಿಂದ ಉಡುಪ, ಕೆ.ಎಲ್ ಕುಂಡಂತಾಯ, ಶ್ರೀವತ್ಸರಾವ್, ಚಂದ್ರಹಾಸ ಆಚಾರ್ಯ,ಯಶವಂತ ಶೆಟ್ಟಿ ,ಲೋಕೇಶ ಶೆಟ್ಟಿ, ರಾಘವೇಂದ್ರ ಶೆಟ್ಟಿ , ಸತೀಶ ಶೆಟ್ಟಿ, ಮುಂತಾದವರು ಉಪಸ್ಥಿತರಿದ್ದರು. ರಾಕೇಶ್ ಕುಂಜೂರು ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ರೋಟರಿ ಶಂಕರಪುರಕ್ಕೆ ರೋಟರಿ ಜಿಲ್ಲೆ 3182 ರ ಜಿಲ್ಲಾ ಗವರ್ನರ್ ಭೇಟಿ

Thumbnail
Posted On: 21 Nov 2021, 12:40 PM

ಕಟಪಾಡಿ : ರೋಟರಿ ಶಂಕರಪುರಕ್ಕೆ ರೋಟರಿ ಜಿಲ್ಲೆ 3182 ರ ಜಿಲ್ಲಾ ಗವರ್ನರ್ ಎಮ್ ಜಿ ರಾಮಚಂದ್ರ ಮೂರ್ತಿ ಇವರು ಅಧಿಕೃತ ಭೇಟಿ ನೀಡಿ ಹಲವಾರು ಸಮಾಜ ಮುಖಿ ಕಾರ್ಯಕ್ರಮವನ್ನು ವೀಕ್ಷಿಸಿ ಉದ್ಘಾಟಿಸಿದರು. ಈ ಸಂದರ್ಭ ರೋಟರಿ ಶಂಕರಪುರದ ಉತ್ತಮ ಕಾರ್ಯಕ್ರಮಗಳ ಬಗ್ಗೆ ಶ್ಲಾಘನೆ ಮಾಡಿದರು. ಸಮಾಜ ಸೇವಕ ಕಿಶೋರ್ ಇವರನ್ನು ಸನ್ಮಾನ ಮಾಡಲಾಯಿತು. ಇನ್ನಂಜೆ ಪಾಂಗಾಳ ಮತ್ತು ಶಂಕರಪುರದ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿ ಯು ಸಿ ಯಲ್ಲಿ ಉತ್ತಮ ಅಂಕ ಪಡೆದುಕೊಂಡ 12 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಜಿಲ್ಲೆ 3182 ರ ಪ್ರಥಮ ಮಹಿಳೆ ಸುರೇಖಾ ಮೂರ್ತಿ, ವಲಯ 5 ರ ಅಸಿಸ್ಟೆಂಟ್ ಗವರ್ನರ್ ಡಾ ಅರುಣ್ ಹೆಗ್ಡೆ, ವಲಯ ಸೇನಾನಿ ಅನಿಲ್ ಡೇಸಾ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಶಂಕರಪುರ ಅಧ್ಯಕ್ಷರು ಆದ ಪ್ಲಾವಿಯಾ ಮೆನೆಜಸ್ ವಹಿಸಿಕೊಂಡು ಎಲ್ಲರನ್ನು ಸ್ವಾಗತಿಸಿ, ಕಾರ್ಯದರ್ಶಿ ಮಾಲಿನಿ ಶೆಟ್ಟಿ ಇನ್ನಂಜೆ ವಂದಿಸಿದರು. ಕಾರ್ಯಕ್ರಮವನ್ನು ನವೀನ್ ಅಮೀನ್ ನಿರೂಪಿಸಿ, ಕಾರ್ಯದರ್ಶಿ ಮಾಲಿನಿ ಶೆಟ್ಟಿ ಇನ್ನಂಜೆ ವಂದಿಸಿದರು.

ಉಡುಪಿ ಜಿಲ್ಲಾ ಯುವ ಜನತಾದಳದ ಅಧ್ಯಕ್ಷರಾಗಿ ಸಂಜಯ್ ಕುಮಾರ್ ಆಯ್ಕೆ.

Thumbnail
Posted On: 20 Nov 2021, 10:42 PM

ಉಡುಪಿ : ಜನತಾದಳ( ಜಾತ್ಯತೀತ) ಉಡುಪಿ ಜಿಲ್ಲಾ ಯುವ ಜನತಾದಳದ ಅಧ್ಯಕ್ಷರನ್ನಾಗಿ ಸಂಜಯ ಕುಮಾರ್ ರವರನ್ನು ಜಿಲ್ಲಾಧ್ಯಕ್ಷರಾದ ಯೋಗಿಶ್ ವಿ ಶೆಟ್ಟಿಯವರು ನೇಮಕ ಮಾಡಿರುತ್ತಾರೆ. ಸಂಜಯ್ ಕುಮಾರ್ ಯವರು ,ಯುವನಾಯಕ, ಸಮಾಜಸೇವಕರು, ಅನೇಕ ಸಂಘ ಸಂಸ್ಥೆಗಳಲ್ಲಿಗುರುತಿಸಿಕೊಂಡಿದ್ದು,ಯುವಕರ ತಂಡವನ್ನು ಕಟ್ಟಿಕೊಂಡು ಸಮಾಜ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಂಡವರಾಗಿದ್ದಾರೆ.