Updated News From Kaup

ಸ್ವರ್ಣಾ ನದಿಗೆ ಸಚಿವ ವಿ.ಸುನಿಲ್ ಕುಮಾರ್ ಬಾಗಿನ ಸಮರ್ಪಣೆ

Posted On: 06-10-2021 04:35PM

ಉಡುಪಿ : ಪೆರಂಪಳ್ಳಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬಳಿ, ಕೃಷ್ಣಾಂಗಾರಕ ಸ್ನಾನ ಘಟ್ಟ ಶೀಂಬ್ರ ಬಳಿ ಇಂಧನ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಅವರು ಸ್ವರ್ಣಾ ನದಿಗೆ ಇಂದು ಬಾಗಿನ ಸಮರ್ಪಿಸಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ತಮ್ಮದೇ ಸರ್ಕಾರ ಆಡಳಿತದಲ್ಲಿದ್ದರೂ, ತಮ್ಮ ಕ್ಷೇತ್ರವನ್ನು ಅಭಿವೃದ್ಧಿ ಮಾಡದವರಿಂದ ಹೆಚ್ಚೇನೂ ನಿರೀಕ್ಷಿಸಲು ಸಾಧ್ಯವಿಲ್ಲ - ರಮೀಜ್ ಹುಸೇನ್

Posted On: 05-10-2021 06:01PM

ಮಾಜಿ ಶಾಸಕರಾದ ವಿನಯಕುಮಾರ್ ಸೊರಕೆಯವರು ಕಾಪು ಕ್ಷೇತ್ರದ ಶಾಸಕರಾಗಿದ್ದ ಸಂದರ್ಭದಲ್ಲಿ ಕಾಪು ಕ್ಷೇತ್ರ ಅಭಿವೃದ್ಧಿಯಲ್ಲಿ ಉತ್ತುಂಗದ ಶಿಖರದಲ್ಲಿತ್ತು. ಈ ಸಂದರ್ಭದಲ್ಲಿ ಆದ ಅಭಿವೃದ್ಧಿ ಕಾರ್ಯಗಳನ್ನು ತಮ್ಮದೇ ಸಾಧನೆ ಎಂದು ಬಿಂಬಿಸುವುದರಲ್ಲಿ ಈಗಿನ ಶಾಸಕರು ಬ್ಯುಸಿಯಾಗಿದ್ದಾರೆ. ಯಾವುದೇ ಒಂದು ಆಡಳಿತ ಪಕ್ಷ ಅಭಿವೃದ್ಧಿ ವಿಷಯದಲ್ಲಿ ಸಂಪೂರ್ಣ ವಿಫಲವಾದಾಗ, ಅಥವಾ ಆ ಕ್ಷೇತ್ರ ಅಭಿವೃದ್ಧಿಯಲ್ಲಿ ತೀರ ಹಿಂದುಳಿಯುವಾಗ, ಅಂತಹಾ ಸಂಧರ್ಭದಲ್ಲಿ ವಿರೋಧಪಕ್ಷಗಳು ರಸ್ತೆಗಿಳಿದು ಪ್ರತಿಭಟಿಸುವುದು ಅನಿವಾರ್ಯ. ಇದೀಗ ಬಿಜೆಪಿ ಸರ್ಕಾರ ಸಂಪೂರ್ಣ ನಿಷ್ಕ್ರಿಯ ವಾಗಿದೆ, ಆಡಳಿತ ಯಂತ್ರ ತುಕ್ಕು ಹಿಡಿದಿದೆ. ಈ ಸಂಧರ್ಭದಲ್ಲಿ ರಾಜ್ಯದ ಬಹುತೇಕ ಕಡೆ ಕಾಂಗ್ರೆಸ್ ಪಕ್ಷ ಬಿಜೆಪಿಯ ಸುಳ್ಳಿನ ಸರಮಾಲೆ, ನಕಲಿ ಹಿಂದುತ್ವ, ಮೊಸಳೆ ಕಣ್ಣೀರಿನ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡುತ್ತಿದೆ.

ವಾಮದಪದವು : ತುಳುನಾಡ ರಕ್ಷಣಾ ವೇದಿಕೆಯಿಂದ "ತುಳುನಾಡ ಲೇಸ್" ಪ್ರಶಸ್ತಿ ಪ್ರಧಾನ ಕಾರ್ಯಕ್ರಮ

Posted On: 05-10-2021 05:20PM

ಮಂಗಳೂರು : ತುಳುನಾಡ ರಕ್ಷಣಾ ವೇದಿಕೆ ವಾಮದಪದವು ಘಟಕ ಆಯೋಜಿಸಿದ "ತುಳುನಾಡ ಲೇಸ್" ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ವಾಮದಪದವು ಗಣೇಶ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನಮ್ಮ ಕುಡ್ಲ ವಾಹಿನಿ ವಾರ್ತಾ ವಾಚಕಿ ಡಾ. ಪ್ರಿಯಾ ಹರೀಶ್ ನೆರವೇರಿಸಿದರು. ಯೋಗೀಶ್ ಶೆಟ್ಟಿ ಕಳಸಡ್ಕ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಚಿತ್ರಕಲಾ ಶಿಕ್ಷಕರಾದ ಮುರಳಿ ಕೃಷ್ಣ ರಾವ್ , ಗಾಯಕಿ ಕ್ಷಿತಿ. ಕೆ ರೈ ಇವರನ್ನು ಸನ್ಮಾನಿಸಲಾಯಿತು.

ಇನ್ನಂಜೆ : ಆರ್ಥಿಕ ಸಂಕಷ್ಟದ‌ ಕುಟುಂಬಕ್ಕೆ ಇನ್ನಂಜೆ ಯುವತಿ ಮಂಡಲದ ವತಿಯಿಂದ ಆಹಾರ ಸಾಮಾಗ್ರಿ ವಿತರಣೆ

Posted On: 04-10-2021 06:10PM

ಕಾಪು :ಇನ್ನಂಜೆ ಯುವತಿ ಮಂಡಲದ ವತಿಯಿಂದ ಇನ್ನಂಜೆ ಕಲ್ಯಾಲುವಿನಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬವೊಂದಕ್ಕೆ ಮುಂಬೈನ ವಿದ್ಯಾ ಶಶಿಕಾಂತ್ ಶೆಟ್ಟಿ ಕುರ್ಕಾಲು ಪ್ರಾಯೋಜಿತ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ ಮತ್ತು ಮಹಿಳಾ ಬಳಗದ ವತಿಯಿಂದ ಗೋ ಶಾಲೆಗೆ ಪಶು ಆಹಾರ ಸಲ್ಲಿಕೆ

Posted On: 04-10-2021 02:24PM

ಕಾಪು : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ (ರಿ) ಮತ್ತು ಮಹಿಳಾ ಬಳಗದ ವತಿಯಿಂದ ಕುತ್ಯಾರು ಶ್ರೀ ಆನೆಗೊಂದಿ ಸಂಸ್ಥಾನದ ಗುರುಪೀಠದ ಗೋ ಶಾಲೆಗೆ ಪಶು ಆಹಾರ(ಹುಲ್ಲು)ವನ್ನು ಶ್ರಮದಾನದ ಮೂಲಕ ಸಂಗ್ರಹ ಮಾಡಿ ನೀಡಲಾಯಿತು.

ಅಕ್ಟೋಬರ್ 9 : ವಿಶ್ವ ನ್ಯೂಸ್ 24 ಇದರ ನೂತನ ಕಚೇರಿ ಹಾಗೂ ಸ್ಟುಡಿಯೋ ಉದ್ಘಾಟನೆ

Posted On: 02-10-2021 11:05PM

ಕಾಪು : ಮಮಂತ್ರ ಮೀಡಿಯಾ ನೆಟ್ವಕ್೯ ಗ್ರೂಪ್ ಆಫ್ ಕಂಪನಿಯ ನಾಲ್ಕನೇ ವರ್ಷದ ಸಂಭ್ರಮದಲ್ಲಿರುವ ವಿಶ್ವ ನ್ಯೂಸ್ 24 ಇದರ ನೂತನ ಕಚೇರಿ ಹಾಗೂ ಸ್ಟುಡಿಯೋ ಉದ್ಘಾಟನೆಯು ಅಕ್ಟೋಬರ್ 9, ಶನಿವಾರ ಬೆಳಿಗ್ಗೆ 10:15 ಕ್ಕೆ ಸರಿಯಾಗಿ ಕಾಪುವಿನ ಜನಾರ್ಧನ ಕಾಂಪ್ಲೆಕ್ಸ್ ನ ನಾಲ್ಕನೇ ಮಹಡಿಯಲ್ಲಿ ಜರಗಲಿದೆ.

ಸಾರಿಗೆ ಉದ್ಯಮಿ, ಶತಾಯುಷಿ, ಪಾಂಗಾಳ ರಬೀಂದ್ರ ನಾಯಕ್ : ದೈವಾಧೀನ

Posted On: 02-10-2021 10:29PM

ಉಡುಪಿ : ಇಲ್ಲಿನ ಸುಪ್ರಸಿದ್ಧ ಸಾರಿಗೆ ಉದ್ಯಮಿ, ಶತಾಯುಷಿ, ಪಾಂಗಾಳ ರಬೀಂದ್ರ ನಾಯಕ್ ರವರು ಇಂದು ವಯೋ ಸಹಜ ಅನಾರೋಗ್ಯದಿಂದ ದೈವಾಧೀನರಾಗಿರುವರು ಎಂದು ತಿಳಿಸಲು ವಿಷಾದಿಸುತ್ತೇವೆ. ತನ್ನ ತಂದೆ ದಿವಂಗತ ಉಪೇಂದ್ರ ಶ್ರೀನಿವಾಸ ನಾಯಕ್ ರವರು ಹುಟ್ಟು ಹಾಕಿದ ಹನುಮಾನ್ ಹಾಗೂ ಗಜಾನನ ಟ್ರಾನ್ಸ್ ಪೋರ್ಟ್ ಕಂಪೆನಿಯನ್ನು ಉತ್ತುಂಗಕ್ಕೇರಿಸಿ, ಹಲವಾರು ಜನರಿಗೆ ಉದ್ಯೋಗದಾತರಾಗಿ, ಅನ್ನದಾತರಾಗಿ ಜನಾನುರಾಗಿದ್ದರು.

ಇನ್ನಾ ಗ್ರಾಮ ಪಂಚಾಯತ್ ಮತ್ತು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಆಂದೋಲನ

Posted On: 02-10-2021 10:24PM

ಕಾರ್ಕಳ : ಇನ್ನಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಕ್ಟೋಬರ್ 2 ರಂದು ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಆಯಾ ವಾರ್ಡ್ ಗಳಲ್ಲಿ ಇನ್ನಾ ಗ್ರಾಮ ಪಂಚಾಯತ್ ಮತ್ತು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಕಾರ್ಯವು ಯಶಸ್ವಿಯಾಗಿ ನಡೆಯಿತು.

ಬಂಟಕಲ್ಲು : ಮುದ್ದುಕೃಷ್ಣ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Posted On: 02-10-2021 10:13PM

ಕಾಪು : ವಿಶ್ವ ಹಿಂದೂ ಪರಿಷತ್, ಬಜರಂಗದಳ ಬಂಟಕಲ್ಲು ಘಟಕದ ಆಯೋಜಿಸಿದ್ದ ಮುದ್ದುಕೃಷ್ಣ ಫೋಟೋ ಸ್ಪರ್ಧೆಯಲ್ಲಿ ವಿಜೇತರಾಗಿರುವ ಮಕ್ಕಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಜರಗಿತು.

ಉಡುಪಿ : ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನಾಚರಣೆಯ ಪ್ರಯುಕ್ತ ಪ್ರಸಾದ್ ನೇತ್ರಾಲಯದಿಂದ ಕಣ್ಣಿನ ತಪಾಸಣಾ ಶಿಬಿರ, ಉಚಿತ ಕನ್ನಡಕ ವಿತರಣೆ

Posted On: 02-10-2021 10:06PM

ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮದಿನಾಚರಣೆಯ ಪ್ರಯುಕ್ತ ಸೇವೆ ಮತ್ತು ಸಮರ್ಪಣಾ ಅಭಿಯಾನದ ಅಂಗವಾಗಿ ಪ್ರಸಾದ್ ನೇತ್ರಾಲಯ ಉಡುಪಿ ಇದರ ನುರಿತ ತಜ್ಞ ವೈದ್ಯರಿಂದ ಕಣ್ಣಿನ ತಪಾಸಣಾ ಶಿಬಿರ, ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು ಸುರೇಶ್ ಶೆಟ್ಟಿ ಗುರ್ಮೆ ಭಾಗವಹಿಸಿದರು.