Updated News From Kaup
ಕುತ್ಯಾರು : ರೇಬಿಸ್ ಜಾಗೃತಿ ಶಿಬಿರ
Posted On: 02-10-2021 02:30PM
ಕಾಪು : ಕಾಯಿಲೆಗಳು ಕೇವಲ ನಾಯಿಗಳಿಗೆ ಮಾತ್ರವಲ್ಲದೆ ದನ, ಬೆಕ್ಕು ಇನ್ನಿತರ ಸಾಕು ಪ್ರಾಣಿಗಳಿಗೂ ಬರುವ ಲಕ್ಷಣಗಳು ಇರುವುದರಿಂದ ಅತಿಯಾಗಿ ಸಾಕುಪ್ರಾಣಿಗಳನ್ನು ಮುದ್ದಿಸುವುದರಿಂದ ಕಾಯಿಲೆಗಳು ಹರಡುವ ಭೀತಿ ಇರುತ್ತದೆ. ಪ್ರಾಣಿಗಳ ರೋಮ ಹಾಗೂ ಜೊಲ್ಲಿನಿಂದ ರೋಗ ಬರುವ ಲಕ್ಷಣ ಇರುವುದರಿಂದ ಹೆಚ್ಚಾಗಿ ಮಕ್ಕಳು ಜಾಗೃತರಾಗಬೇಕಾಗಿದೆ ಎಂದು ಶಿರ್ವ ಪಶು ಚಿಕಿತ್ಸಾಲಯದ ಡಾ| ಅರುಣ್ ಹೆಗ್ಡೆ ಹೇಳಿದರು. ಅವರು ಜಿ.ಪಂ.ಉಡುಪಿ, ಪಶುಪಾಲನಾ ಹಾಗು ಪಶು ವೈದ್ಯ ಸೇವಾ ಇಲಾಖೆ ಉಡುಪಿ, ಆಜಾದೀಕಾ ಅಮೃತ ಮಹೋತ್ಸವ ಅಂಗವಾಗಿ ಪಶು ಚಿಕಿತ್ಸಾಲಯ ಶಿರ್ವ, ಕುತ್ಯಾರು ಗ್ರಾ.ಪಂ, ರೋಟರಿ ಕ್ಲಬ್ ಶಿರ್ವ, ಸೂರ್ಯ ಚೈತನ್ಯ ಗ್ಲೋಬಲ್ ಸ್ಕೂಲ್ ಕುತ್ಯಾರು ಇವರ ಸಂಯುಕ್ತ ಆಶ್ರಯದಲ್ಲಿ ಸೂರ್ಯ ಚೈತನ್ಯ ಗ್ಲೋಬಲ್ ಸ್ಕೂಲ್ ಇಲ್ಲಿ ವಿಶ್ವ ರೇಬಿಸ್ ದಿನಾಚರಣೆಯ ಅಂಗವಾಗಿ ರೇಬಿಸ್ ಜಾಗೃತಿ ಶಿಬಿರದ ಅನುವುಗಾರರಾಗಿ ಮಾತನಾಡಿದರು.
ಹಿರಿಯ ನಾಗರಿಕರನ್ನು ಗೌರವದಿಂದ ನೋಡಿಕೊಳ್ಳಬೇಕು : ಶಾಸಕ ರಘುಪತಿ ಭಟ್
Posted On: 02-10-2021 12:43PM
ಉಡುಪಿ : ಕುಟುಂಬದಲ್ಲಿ ಹಾಗೂ ಸಮಾಜದಲ್ಲಿ ಹಿರಿಯ ನಾಗರಿಕರನ್ನು ನಿರ್ಲಕ್ಷಿಸದೇ, ಅವರನ್ನು ಗೌರವದಿಂದ ನೋಡಿಕೊಳ್ಳುವ ವಾತಾವರಣವನ್ನು ಸೃಷ್ಠಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು ಎಂ.ಜಿ.ಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಸ್ಪತ್ರೆ, ಆರೋಗ್ಯ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ ಜಿಲ್ಲೆ, ವಕೀಲರ ಸಂಘ (ರಿ) ಉಡುಪಿ ಹಿರಿಯ ನಾಗರಿಕರ ಸಂಸ್ಥೆಗಳು ಉಡುಪಿ, ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ(ರಿ) ವೃದ್ಧಾಶ್ರಮಗಳು ಉಡುಪಿ ಜಿಲ್ಲೆ, ಇವರ ಸಂಯುಕ್ತ ಆಶ್ರಯದೊಂದಿಗೆ ನಡೆದ ವಿಶ್ವ ಹಿರಿಯ ನಾಗರಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಹಿರಿಯ ನಾಗರಿಕರು ಜೀವನದಲ್ಲಿ ಹಲವು ಸಂಕಷ್ಠ ಮತ್ತು ಸಂಘರ್ಷಗಳನ್ನು ಎದುರಿಸಿ ಕುಟುಂಬಕ್ಕೆ ಹಾಗೂ ಸಮಾಜಕ್ಕೆ ಕೊಡುಗೆ ನೀಡಿರುತ್ತಾರೆ. ಅವರನ್ನು ಗೌರವದಿಂದ ಕಾಣುವುದು ಅತ್ಯಂತ ಅಗತ್ಯ, ಹಿರಿಯ ನಾಗರಿಕರಿಗೆ ಗೌರವ ನೀಡದವರಿಗೆ, ಸಮಾಜವೂ ಗೌರವ ನೀಡುವುದಿಲ್ಲ ಎಂಬ ವಾತಾವರಣವನ್ನು ನಿರ್ಮಿಸಬೇಕಿದೆ, ಅವರಿಗೆ ಸಹಾಯ, ಸಹಕಾರ ನೀಡುವುದಕ್ಕಿಂತ ಹೆಚ್ಚಾಗಿ ಪ್ರೀತಿ ನೀಡಬೇಕಿದೆ ಎಂದ ಶಾಸಕ ರಘುಪತಿ ಭಟ್, ಕಾನೂನು ಸಹ ಹಿರಿಯ ನಾಗರಿಕರಿಗೆ ರಕ್ಷಣೆ ನೀಡಿದೆ, ಸಮಾಜದಲ್ಲಿ ವೃದ್ದಾಶ್ರಮಗಳು ಕಡಿಮೆಯಾಗಿ ಮನೆಯಲ್ಲಿಯೇ ಹಿರಿಯರನ್ನು ಗೌರವ ಪ್ರೀತಿಯಿಂದ ನೋಡಿಕೊಳ್ಳುವಂತಾಗಬೇಕು ಎಂದರು.
ಮೆಗಾ ಲೋಕ್ ಅದಾಲತ್ : ಒಂದೇ ದಿನದಲ್ಲಿ ಒಟ್ಟು 2020 ಪ್ರಕರಣ ಇತ್ಯರ್ಥ
Posted On: 02-10-2021 12:35PM
ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೆಶನದ ಮೇರೆಗೆ ಸೆಪ್ಟಂಬರ್ 30 ರಂದು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ಮೇಘಾ ಲೋಕ್ ಅದಾಲತನ್ನು ಆಯೋಜಿಸಿ ಒಂದೇ ದಿನ ಒಟ್ಟು 2020 ಪ್ರಕರಣಗಳನ್ನು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ -13, ಚೆಕ್ಕು ಅಮಾನ್ಯ ಪ್ರಕರಣ-100, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ-8, ಎಂ.ವಿ.ಸಿ ಪ್ರಕರಣ-72, ಎಂ.ಎAಆರ್.ಡಿ ಆಕ್ಟ್ ಪ್ರಕರಣ-7, ವೈವಾಹಿಕ ಪ್ರಕರಣ-9, ಸಿವಿಲ್ ಪ್ರಕರಣ-74, ಇತರೇ ಕ್ರಿಮಿನಲ್ ಪ್ರಕರಣ-1505 ಹಾಗೂ ವ್ಯಾಜ್ಯ ಪೂರ್ವ ದಾವೆ-232) ರಾಜೀ ಮುಖಾಂತರ ಇತ್ಯರ್ಥಪಡಿಸಿ ರೂ.7,88,21,642/- ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.
ಬೊಬ್ಬರ್ಯ ಕಾಂತೇರಿ ಜುಮಾದಿ ಕಲ್ಕುಡ ಪರಿವಾರ ದೈವಗಳ ದೈವಸ್ಥಾನ ವಠಾರದಲ್ಲಿ ಸ್ವಚ್ಛತಾ ಆಂದೋಲನ
Posted On: 02-10-2021 12:28PM
ಉಡುಪಿ : ಬಬ್ಬರ್ಯ ಯುವ ಸೇವಾ ಸಮಿತಿ ಉಡುಪಿ ಜಿಲ್ಲೆ, ಭಜರಂಗಿ ಹಿಂದೂ ಪರಿಷತ್ ಉಡುಪಿ ಜಿಲ್ಲೆ ಮತ್ತು ಮಾಧವ ಪಂಬದ ಅಭಿಮಾನಿ ಬಳಗ ಉಡುಪಿ-ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಬೊಬ್ಬರ್ಯ ಕಾಂತೇರಿ ಜುಮಾದಿ ಕಲ್ಕುಡ ಪರಿವಾರ ದೈವಗಳ ದೈವಸ್ಥಾನ ವಠಾರವನ್ನು ಸ್ವಚ್ಛತಾ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ನಮ್ಮ ಉಡುಪಿ-ಸ್ವಚ್ಛ ಉಡುಪಿ ಸಂಕಲ್ಪ ಮಾಡಿ: ಯುವಜನರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಕರೆ
Posted On: 02-10-2021 12:17PM
ಉಡುಪಿ : ರಾಷ್ಟ್ರಪಿತ ಮಹಾತ್ಮ ಗಾಂಧಿಜಿಯವರ ಅತ್ಯಂತ ಪ್ರೀತಿ ಪಾತ್ರವಾಗಿರುವ ಕೆಲಸ ಸ್ವಚ್ಛತೆ ಮಾತ್ರವಲ್ಲದೇ ನಮ್ಮ ದೇಶದ ಪ್ರಧಾನ ಮಂತ್ರಿಯವರ ಕನಸು ಭಾರತದ ದೇಶದ ಶುಚಿತ್ವ. ಅದೇ ರೀತಿಯಲ್ಲಿ ಉಡುಪಿ ಜಿಲ್ಲೆಯನ್ನು ಅತ್ಯಂತ ಸ್ವಚ್ಚ ಜಿಲ್ಲೆಯನ್ನಾಗಿ ಮಾಡಲು ಸಂಕಲ್ಪ ಮಾಡುವಂತೆ ಯುವಜನರಿಗೆ , ಎನ್ಸಿಸಿ, ಎನ್ಎಸ್ಎಸ್ ವಿದ್ಯಾರ್ಥಿಗಳಿಗೆ ಹಾಗೂ ಎಲ್ಲಾ ವಿವಿಧ ಸಂಘಟನೆಗಳಿಗೆ ಜಿಲ್ಲಾಧಿಕಾರಿ ಕೂರ್ಮ ರಾವ್ ಕರೆ ನೀಡಿದರು. ಅವರು ಇಂದು ಎಮ್ಜಿಎಮ್ ಕಾಲೇಜಿನ ಆವರಣದಲ್ಲಿ ,ಕ್ಲೀನ್ ಇಂಡಿಯಾ ಕಾರ್ಯಕ್ರಮದ ಅಂಗವಾಗಿ, ಕಸ ಕೊಂಡೊಯ್ಯುವ ಸ್ವಚ್ಛ ವಾಹಿನಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿ, ವಿದ್ಯಾರ್ಥಿಗಳಿಗೆ ಹೆಕ್ಕಿದ ಪ್ಲಾಸ್ಟಿಕ್ ಕಸವನ್ನು ತುಂಬಿಸಲು ಚೀಲಗಳನ್ನು ವಿತರಿಸಿ ಮಾತನಾಡಿದರು.
ಉಡುಪಿ : ರಾಮ್ ಸೇನಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೀಪಕ್ ಮೂಡುಬೆಳ್ಳೆ ರಾಜೀನಾಮೆ
Posted On: 01-10-2021 10:40PM
ರಾಮ್ ಸೇನಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ದೀಪಕ್ ಮೂಡುಬೆಳ್ಳೆ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ಸ್ವ ಇಚ್ಛೆಯಿಂದ ರಾಮ್ ಸೇನಾ ಸಂಘಟನೆಗೆ ರಾಜೀನಾಮೆ ನೀಡಿರುತ್ತಾರೆ.
ಕಾಂತಾವರ ಶ್ರೀ ಕಾಂತೇಶ್ವರ ದೇವಳಕ್ಕೆ ಭೇಟಿ ನೀಡಿದ ರಾಜ್ಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ
Posted On: 01-10-2021 07:59PM
ಕಾಪು : ರಾಜ್ಯ ಯುವ ಕಾಂಗ್ರೆಸ್ ನಾಯಕರಾದ ಮಿಥುನ್ ರೈ ಇಂದು ಕಾಂತಾವರದ ಇತಿಹಾಸ ಪ್ರಸಿದ್ದ ಶ್ರೀ ಕಾಂತೇಶ್ವರ ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾಪು ಮಂಡಲದ ವತಿಯಿಂದ ಸ್ವಚ್ಛತಾ ಕಾರ್ಯ
Posted On: 01-10-2021 06:38PM
ಕಾಪು: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾಪು ಮಂಡಲದ ವತಿಯಿಂದ ಗಾಂಧಿಜಯಂತಿ ಹಾಗು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ದೇವಸ್ಥಾನ ಹಾಗೂ ಪ್ರಾರ್ಥನಾ ಕೇಂದ್ರಗಳ ಧ್ವಂಸವನ್ನು ವಿರೋಧಿಸಿ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ
Posted On: 29-09-2021 11:31PM
ಪಡುಬಿದ್ರಿ : ಕಾಪು ಬ್ಲಾಕ್ ಕಾಂಗ್ರೆಸ್ ಹಾಗೂ ಪಡುಬಿದ್ರಿ ಜಿಲ್ಲಾಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಬಿಜೆಪಿ ಸರಕಾರದಿಂದ ರಾಜ್ಯ ದೇವಸ್ಥಾನ ಹಾಗೂ ಪ್ರಾರ್ಥನಾ ಕೇಂದ್ರಗಳ ಧ್ವಂಸವನ್ನು ವಿರೋಧಿಸಿ ಪಡುಬಿದ್ರಿಯಲ್ಲಿ ಸಂಜೆ ಬ್ರಹ್ಮಬೈದರ್ಕಳ ಗರಡಿ ಕಣ್ಣಂಗಾರ್ ಬಳಿಯಿಂದ ಪಡುಬಿದ್ರಿ ಪೇಟೆ ಬಸ್ನಿಲ್ದಾಣದವರೆಗೆ ಪಂಜಿನ ಮೆರವಣಿಗೆಯು ನಡೆಯಿತು.
2020 ಮತ್ತು 2021 ಸಾಲಿಗೆ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ - ಕರ್ನಾಟಕ” ಪ್ರಕಟ
Posted On: 29-09-2021 08:49PM
ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ರಾಜ್ಯಾದ್ಯಂತ ಅರ್ಥಪೂರ್ಣವಾಗಿ ಆಚರಿಸಲು ಗಾಂಧೀ ತತ್ವಾದರ್ಶಗಳನ್ನು ಆಧರಿಸಿಕೊಂಡು ಸಮಾಜದಲ್ಲಿ ಗಣನೀಯ ಸೇವೆ ಮಾಡಿದ ಗಣ್ಯರನ್ನು ಗುರುತಿಸಿ ಗೌರವಿಸಲು ಕರ್ನಾಟಕ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನೀಡುವ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ-ಕರ್ನಾಟಕ” 2020 ಮತ್ತು 2021 ನೇ ಸಾಲಿಗೆ ಪ್ರಶಸ್ತಿಗಳನ್ನು ಪ್ರಕಟಿಸಿದೆ.
