Updated News From Kaup

ಸ.ಪ.ಪೂ.ಕಾಲೇಜು ಪಲಿಮಾರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Thumbnail
Posted On: 08 Apr 2025, 04:26 PM

ಪಲಿಮಾರು : ಮಾ.1 ರಿಂದ 20 ರವರೆಗೆ ನಡೆದ ಪಿಯುಸಿ ಪರೀಕ್ಷೆಯಲ್ಲಿ ಸ.ಪ.ಪೂ.ಕಾಲೇಜು ಪಲಿಮಾರು ಶೇ.100 ಫಲಿತಾಂಶ ದಾಖಲಿಸಿದೆ. ಕಲಾ ಮತ್ತು ವಾಣಿಜ್ಯ ವಿಭಾಗದಲ್ಲಿ ಹಾಜರಾದ ಒಟ್ಟು 17 ವಿದ್ಯಾರ್ಥಿಗಳಲ್ಲಿ 4 ಮಂದಿ ವಿಶಿಷ್ಟ ಶ್ರೇಣಿ, 10 ಮಂದಿ ಪ್ರಥಮ ಶ್ರೇಣಿ, 03 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 14 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅನನ್ಯ (570) ಶೇ.95 ಅಂಕ ಪಡೆದು ಪ್ರಥಮ, ಆಯಿಷತುಲ್ ಷಫಾ (567)ಶೇ.94.5 ಪಡೆದು ದ್ವಿತೀಯ, ಭವ್ಯ ಪೂಜಾರ್ತಿ (535) ಶೇ.89.17 ಪಡೆದು ತೃತೀಯ ಸ್ಥಾನಿಯಾಗಿದ್ದಾರೆ. ಕಲಾ ವಿಭಾಗದಲ್ಲಿ 3 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ರಕ್ಷಿತಾ (444) ಶೇ.74 ಪ್ರಥಮ, ರೇಷ್ಮಾ (405)ಶೇ. 67.5 ದ್ವಿತೀಯ, ಪ್ರಜ್ವಲ್ ಎಸ್ ಸುವರ್ಣ (359) ಶೇ.60 ಪಡೆದು ತೃತೀಯ ಸ್ಥಾನಿಯಾಗಿದ್ದಾರೆ. ಶೇ. 100 ಫಲಿತಾಂಶ ದಾಖಲಿಸಿದ ಕಾಲೇಜಿನ ವಿದ್ಯಾರ್ಥಿ ವೃಂದ, ಪ್ರಾಂಶುಪಾಲರನ್ನು ಮತ್ತು ಪ್ರಾಧ್ಯಾಪಕ ವೃಂದವನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಭಿನಂದಿಸಿದೆ.

ಶ್ರೀಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೆಶ್ವರೀ ದೇವಳದ 84ನೇ ಪ್ರತಿಷ್ಠಾ ವರ್ಧಂತೋತ್ಸವ ಸಂಪನ್ನ

Thumbnail
Posted On: 08 Apr 2025, 11:20 AM

ಶಿರ್ವ : ಶ್ರೀ ಕ್ಷೇತ್ರ ಬಂಟಕಲ್ಲು ಶ್ರೀದುರ್ಗಾಪರಮೆಶ್ವರೀ ದೇವಳದ 84ನೇ ಪ್ರತಿಷ್ಠಾ ವರ್ಧಂತ್ಯೋತ್ಸವ ಸೋಮವಾರ ಸಂಪನ್ನಗೊಂಡಿತು. ಕ್ಷೇತ್ರದ ಪ್ರಧಾನ ವೈದಿಕರಾದ ವೇ.ಮೂ.ಸಂದೇಶ್ ಭಟ್ ನೇತೃತ್ವದಲ್ಲಿ ಸಹವೈದಿಕರ ಸಹಭಾಗಿತ್ವದಲ್ಲಿ ಪೂರ್ವಾಹ್ನ ವಿವಿಧ ಧಾರ್ಮಿಕ ಅನುಷ್ಠಾನಗಳು,ಮಹಾಗಣಪತಿ ಹೋಮ, ಪ್ರಧಾನಹೋಮ, ನವಕ ಕಲಶಾಭಿಷೇಕ, ಪರಿವಾರ ಸಾನಿಧ್ಯಗಳ ಆರಾಧನೆ, ಮಹಾಪೂಜೆ, ಶ್ರೀದೇವಿಯ ಪಲ್ಲಕಿ ಉತ್ಸವ, ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ, ಅಪರಾಹ್ನ ಶ್ರೀದುರ್ಗಾ ಯಕ್ಷಬಳಗದ ಸದಸ್ಯರಿಂದ ಯಕ್ಷಗಾನ ಬಯಲಾಟ, ಸಂಜೆ ಭಜನೆ, ರಾತ್ರಿ ರಂಗಪೂಜೆ, ರಥೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮಧ್ಯಾಹ್ನ ಜರುಗಿದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ದೇವಳದ ನೂತನ ಸಭಾಭವವನ ನಿರ್ಮಾಣ ಸಮಿತಿಯ ಗೌರವ ಅಧ್ಯಕ್ಷ, ಖ್ಯಾತ ಜ್ಯೋತಿಷಿಗಳಾದ ಮಾಣ್ಯೂರು ವೈ.ಉಪೇಂದ್ರ ಪ್ರಭು ವಹಿಸಿದ್ದರು. ಕ್ಷೇತ್ರದ ನಿಕಟಪೂರ್ವ ಆಡಳಿತ ಮೊಕ್ತೇಸರ ಶಶಿಧರ ವಾಗ್ಲೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭಾಭವನ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಧರ್ಮೆಟ್ಟು ಗೋಪಿನಾಥ್ ನಾಯಕ್ ಸಭಾಭವನದ ವಿನ್ಯಾಸ, ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ನಿವೃತ್ತ ಶಿಕ್ಷಕ ಬಿ.ಪುಂಡಲೀಕ ಮರಾಠೆ ಮಾತನಾಡಿ, ಶ್ರೀದೇವಳದ ಸಂಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದ್ದ ಹಿರಿಯ ನಾಯಕರು ಹಾಗೂ ಕೊಡುಗೆಗಳು, ನಂತರದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಸಮಾಜದ ಪ್ರಮುಖರು, 83 ವರ್ಷಗಳಲ್ಲಿ ಕ್ಷೇತ್ರದಲ್ಲಿ ಆದ ಪರಿವರ್ತನೆ, ಸಾನಿಧ್ಯದ ಕಾರಣಿಕದ ಬಗ್ಗೆ ಬೆಳುಕು ಚೆಲ್ಲಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ಜಯರಾಮ ಪ್ರಭು ಗಂಪದಬೈಲು, ರಾಜಾಪುರ ಸಾರಸ್ವತ ಸೇವಾವೃಂದದ ಅಧ್ಯಕ್ಷ ಕೆ.ಆರ್. ಪಾಟ್ಕರ್, ಹಂಸಚೈತನ್ಯ ಸಹಕಾರಿ ಸಂಘದ ಅಧ್ಯಕ್ಷ ಸುಧೀಶ್ ಕುಕ್ಕೆಹಳ್ಳಿ ಮಾತನಾಡಿದರು. ವೇದಿಕೆಯಲ್ಲಿ ಶ್ರೀದೇವಳದ ಆಡಳಿತ ಮಂಡಳಿ ಅಧ್ಯಕ್ಷ ಉಮೇಶ ಪ್ರಭು ಪಾಲಮೆ, ವಾಮನ ಪಾಟ್ಕರ್ ಜೋಗೇಶ್ವರಿ ಉಪಸ್ಥಿತರಿದ್ದರು. ರಾಮದಾಸ್ ಪ್ರಭು ಸ್ವಾಗತಿಸಿದರು. ರಚಿತಾ ಪಾಟ್ಕರ್ ಪ್ರಾರ್ಥಿಸಿದರು. ಎಳ್ಳಾರೆ ಪಾಂಡುರಂಗ ಕಾಮತ್ ನಿರೂಪಿಸಿ, ಉಮೇಶ್ ನಾಯಕ್ ಪೆರ್ಣಂಕಿಲ ವಂದಿಸಿದರು.

ಶಿರ್ವ : ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗದ ವತಿಯಿಂದ ಸ್ವಚ್ಛತಾ ಕಾರ್ಯ

Thumbnail
Posted On: 07 Apr 2025, 01:56 PM

ಶಿರ್ವ : ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ ಮತ್ತು ಮಹಿಳಾ ಬಳಗ ಶಿರ್ವ ಇದರ ವತಿಯಿಂದ ಶ್ರೀ ಧರ್ಮ ಜಾರಂದಾಯ ದೈವಸ್ಥಾನದ ನೇಮೋತ್ಸವದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ಪ್ರತಿ ವರ್ಷವೂ ಈ ಕಾರ್ಯಕ್ರಮ ನಡೆಯುತ್ತಿದ್ದು ಸ್ಥಳೀಯರ ಮೆಚ್ಚುಗೆಗೆ ಪಾತ್ರವಾಗಿದ್ದು, ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು. ಈ ಸಂದರ್ಭ ಅಧ್ಯಕ್ಷ ಉಮೇಶ್ ಆಚಾರ್ಯ, ಮಹಿಳಾ ಬಳಗದ ಅಧ್ಯಕ್ಷೆ ಸಹನಾ ಗಣೇಶ್ ಆಚಾರ್ಯ, ಗೌರವಾಧ್ಯಕ್ಷ ಸುರೇಶ ಆಚಾರ್ಯ, ಕಾರ್ಯದರ್ಶಿ ಮಾಧವ ಆಚಾರ್ಯ ಕೋಶಾಧಿಕಾರಿ ಪ್ರಶಾಂತ ಆಚಾರ್ಯ, ಮಹಿಳಾ ಬಳಗದ ಕಾರ್ಯದರ್ಶಿ ಮಂಜುಳಾ ಉಮೇಶ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಹೆಜಮಾಡಿ ತೆನ್ನಯಜಾರು ತೋಟ ಪೂವಪ್ಪ ಕೋಟ್ಯಾನ್ ನಿಧನ

Thumbnail
Posted On: 04 Apr 2025, 02:24 PM

ಹೆಜಮಾಡಿ : ಹೆಜಮಾಡಿ ತೆನ್ನಯ್ಯ ಜಾರು ತೋಟ ನಿವಾಸಿ, ಪ್ರಗತಿಪರ ಕೃಷಿಕ ಪೂವಪ್ಪ ಕೋಟ್ಯಾನ್ (93) ಅಸೌಖ್ಯದಿಂದ ಏ.3ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಪತ್ನಿ , ಪುತ್ರ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಇದ್ದಾರೆ. ಎಂಆರ್ ಪಿಎಲ್ ಗುತ್ತಿಗೆದಾರರಾಗಿದ್ದು, ಸಾಮಾಜಿಕ ಹಾಗೂ ಧಾರ್ಮಿಕ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದರು .ಹೆಜಮಾಡಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಮಾಜಿ ಗೌರವಾಧ್ಯಕ್ಷರಾಗಿದ್ದರು. ಇವರು ಕುಟುಂಬಿಕರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಕಾಪು ಶ್ರೀ ಹೊಸ ಮಾರಿಗುಡಿಗೆ ವಾಟಾಳ್ ನಾಗರಾಜ್ ಭೇಟಿ

Thumbnail
Posted On: 04 Apr 2025, 10:21 AM

ಕಾಪು : ಕರ್ನಾಟಕ ವಿಧಾನಸಭೆಯ ಮಾಜಿ ಸದಸ್ಯ, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಗುರುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ದರುಶನ ಪಡೆದು ಅಮ್ಮನ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭ ಮಾತನಾಡಿದ ಅವರು, ನನಗೆ ಹಿಂತಿರುಗಲು ಫ್ಲೈಟ್ ಗೆ ಸಮಯ ಆಗುತ್ತಿದೆ ಆದರೂ ಇಲ್ಲೇ ಉಳಿಯೋಣ ಅನಿಸುತ್ತಿದೆ. ಮತ್ತೆ ಮತ್ತೆ ಇಲ್ಲಿಗೆ ಬರಬೇಕೆಂಬ ಹಂಬಲ ನನಗಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ರಾಧಾರಮಣ ಶಾಸ್ತ್ರೀ, ಪ್ರಬಂಧಕ ಗೋವರ್ಧನ್ ಶೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಎ. 8, 9 : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರಥಮ ಹರಕೆ ಮಾರಿಪೂಜೆ

Thumbnail
Posted On: 03 Apr 2025, 10:21 AM

ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ, ವ್ಯವಸ್ಥಾಪನಾ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ವಿವಿಧ ಉಪಸಮಿತಿ, ಸಿಬ್ಬಂದಿಗಳು ಮತ್ತು ನೌಕರವೃಂದ ಹಾಗೂ ಭಕ್ತವೃಂದದ ಸಹಕಾರದೊಂದಿಗೆ ಎ. 8 ಮತ್ತು 9 ರಂದು ಮಹಾಸೇವೆ ರೂಪದಲ್ಲಿ ಪ್ರಥಮ ಹರಕೆ ಮಾರಿಪೂಜೆ ನಡೆಯಲಿದ್ದು ಸಮಾಲೋಚನಾ ಸಭೆ ನಡೆಯಿತು. ಎಪ್ರಿಲ್ 8ರ ಸಂಜೆ 5ಕ್ಕೆ ಹೂ-ಹಿಂಗಾರ ಮೆರವಣಿಗೆ, ರಾತ್ರಿ 8:30ಕ್ಕೆ ಒಡೆಯನ ಸನ್ನಿದಾನದಿಂದ ರಜತ ರಥದಲ್ಲಿ ಅಲಂಕೃತಳಾಗಿ ಮಾರಿಯಮ್ಮನ ಆಗಮನ. ರಾತ್ರಿ 10:30ಕ್ಕೆ ದರ್ಶನ ಸೇವೆ. ಎಪ್ರಿಲ್ 9ರ ಬುಧವಾರ ಮದ್ಯಾಹ್ನ 3ಕ್ಕೆ ದರ್ಶನ ಸೇವೆ. ಸಂಜೆ 7ರಿಂದ 10ಗಂಟೆಯವರೆಗೆ ಮಾರಿಪೂಜೆಯ ಅನ್ನಪ್ರಸಾದ ವಿತರಣೆಯಾಗಲಿದೆ. ಭಕ್ತರು, ಹೂ ಹಿಂಗಾರ ಸಹಿತ ವಿವಿಧ ಸೇವೆಗಳನ್ನು ಹರಕೆ ರೂಪದಲ್ಲಿ ನೀಡಲು ಅವಕಾಶವಿದೆ, ಹೆಚ್ಚಿನ ಮಾಹಿತಿಯನ್ನು ಕಚೇರಿಯಲ್ಲಿ ಪಡೆದುಕೊಳ್ಳಬಹುದಾಗಿದೆ ಎಂದರು. ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಪು ಕ್ಷೇತ್ರದ ಶಾಸಕರು ಮತ್ತು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿ, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ನವದುರ್ಗಾ ಲೇಖನ‌ ಯಜ್ಞ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್, ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಬೆಳಪು ದೇವಿಪ್ರಸಾದ್ ಶೆಟ್ಟಿ, ಗಂಗಾಧರ ಸುವರ್ಣ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಭಗವಾನ್ ದಾಸ್ ಶೆಟ್ಟಿಗಾರ್, ಬ್ರಹ್ಮಕಲಶೋತ್ಸವ ಸಮಿತಿ ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಬೀನಾ ವಿ. ಶೆಟ್ಟಿ, ನವದುರ್ಗಾ ಲೇಖನ ಯಜ್ಞ ಸಮಿತಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸಾವಿತ್ರಿ ಗಣೇಶ್, ವ್ಯವಸ್ಥಾಪನಾ ಸಮಿತಿ ಸದಸ್ಯ ಶೇಖರ್‌ ಸಾಲ್ಯಾನ್, ರವೀಂದ್ರ‌ ಮಲ್ಲಾರು, ಮನೋಹರ ರಾವ್ ಕಲ್ಯ, ಚರಿತಾ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

ದೇಶದಲ್ಲಿ ಅಶಾಂತಿ ಉಂಟುಮಾಡಲು ಕೇಂದ್ರದ ಬಿಜೆಪಿ ಸರ್ಕಾರ ವಕ್ಫ್ ತಿದ್ದುಪಡಿ ಕಾಯ್ದೆ ಮಂಡನೆ : ಶರ್ಫುದ್ದೀನ್ ಶೇಖ್

Thumbnail
Posted On: 02 Apr 2025, 10:55 PM

ಕೇಂದ್ರ ಸರ್ಕಾರ ದೇಶದಲ್ಲಿ ಹಿಂದೂ ಮುಸ್ಲಿಂ ಸಮುದಾಯ ವಿಭಜನೆ ಮಾಡಲು ಮುಸ್ಲಿಂ ಸಮುದಾಯವನ್ನು ಎತ್ತಿಕಟ್ಟಿ ವಕ್ಪ್ ಬೋರ್ಡ್ ಹಸರಿನಲ್ಲಿ ದೇಶದ ಜನರಿಗೆ ಶುದ್ದ ಸುಳ್ಳುಗಳನ್ನು ಹೇಳಿ ಇವತ್ತು ಸಂಸತ್ತಿನಲ್ಲಿ ವಕ್ಫ್ ತಿದ್ದುಪಡಿ ಬಿಲ್ಲನ್ನು ಮಂಡಿಸಿದೆ. ವಕ್ಪ್ ವಿಚಾರದಲ್ಲಿ ಯಾವುದೇ ಗೊಂದಲ ಇರಲಿಲ್ಲ. ಯಾರಿಗೂ ಅನ್ಯಾಯವಾಗಿರಲಿಲ್ಲ. ಆದರೆ ವಖ್ಫ್ ವಿಚಾರದಲ್ಲಿ ಜನರಿಗೆ ವಾಸ್ತವ ವಿಚಾರವನ್ನು ಮರೆಮಾಚಿ ಸುಳ್ಳು ಹೇಳಿಕೆಗಳನ್ನು ನೀಡಿ ಕೇಂದ್ರ ಸರ್ಕಾರ ತನ್ನ ವೈಪಲ್ಯಗಳನ್ನು ಮರೆಮಾಚಲು ತಯಾರಿ ನಡೆಸಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ಖಂಡಿಸಿದ್ದಾರೆ. ಈ ದೇಶಕ್ಕೆ ಅಲ್ಪಸಂಖ್ಯಾತರ ಕೊಡುಗೆ ಅಪಾರವಾಗಿದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಯಾವುದೇ ಜಾತಿಮತ ಭೇದ ಇಲ್ಲದೆ ಎಲ್ಲರೂ ಸೇರಿ ಭಾರತ ದೇಶಕ್ಕೆ ತಮ್ಮ ಸೇವೆಗಳನ್ನು ಸಲ್ಲಿಸಿದ್ದಾರೆ ಮತ್ತು ಬಲಿದಾನಗೈದಿದ್ದಾರೆ. ಆದರೆ ಇಂದು ವಕ್ಫ್ ತಿದ್ದುಪಡಿ ಕಾಯಿದೆಯನ್ನು ಜಾರಿಗೆ ತಂದು ದೇಶದಲ್ಲಿ ಅಶಾಂತಿ ಉಂಟುಮಾಡಲು ತಯಾರಿ ಮಾಡಿದ ಬಿಜೆಪಿ ಮತ್ತು ಸಂಘಪರಿವಾರದ ತ್ಯಾಗ ಏನು ಎಂಬುದು ನಾಡಿನ ಜನರ ಪ್ರಶ್ನೆಯಾಗಿದೆ. ನಿಜವಾಗಿಯೂ ವಕ್ಫ್ ಭೂಮಿ ಇರುವ ಪ್ರಮಾಣಕ್ಕಿಂತ ಅದೆಷ್ಟೋ ಪ್ರಮಾಣ ಕಡಿಮೆ ಇದೆ. ಭಾಗಶ: ಭೂಮಿ ಕಬಳಿಕೆ ಮಾಡಲಾಗಿದೆ. ಭೂಸುಧಾರಣೆ ಕಾನೂನಿಂದಾಗಿ ಕಳೆದುಕೊಂಡದ್ದು ಮತ್ತು ಸರ್ಕಾರಿ ಕಚೇರಿಗಳಿಗೆ ಕೊಟ್ಟು ಇರುವ ಭೂಮಿಯನ್ನು ಕೂಡ ಕಬಳಿಕೆ ಮಾಡಿ ತಮ್ಮ ಪರವಿರುವ ಉದ್ಯಮಿಗಳಿಗೆ ಹಂಚುವ ಪ್ರಯತ್ನದಲ್ಲಿ ಕೇಂದ್ರ ಸರ್ಕಾರವಿದೆ. ಇದು ಖಂಡನೀಯ. ಧಾರ್ಮಿಕ ವಿಚಾರಗಳನ್ನೇ ಎತ್ತಿಕೊಂಡು ಸಮುದಾಯಗಳ ನಡುವೆ ಸಾಮರಸ್ಯ ಕದಡುವುದನ್ನು ಕಾಯಕವನ್ನಾಗಿ ಮಾಡಿಕೊಂಡಿರುವ ಕೇಂದ್ರ ಸರ್ಕಾರ ಇದೆಲ್ಲವನ್ನು ಬಿಟ್ಟು ಬೆಲೆ ಏರಿಕೆ, ಭ್ರಷ್ಟಾಚಾರ ಮತ್ತು ಕೋಮುವಾದ ನಿರ್ಮೂಲನೆ ಕುರಿತು ಕಾಳಜಿ ವಹಿಸಬೇಕು. ದೇಶದಲ್ಲಿ ಶಾಂತಿ ಕದಡುವುದೇ ದೊಡ್ಡ ದೇಶದ್ರೋಹ. ಈ ಜ್ಞಾನ ಕೇಂದ್ರ ಸರ್ಕಾರ ಬೆಳೆಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು ದಂಡತೀರ್ಥ ವಿದ್ಯಾಸಂಸ್ಥೆ : ಬೇಸಿಗೆ ಶಿಬಿರ ಉದ್ಘಾಟನೆ

Thumbnail
Posted On: 02 Apr 2025, 10:43 PM

ಕಾಪು : ಪ್ರಕೃತಿ ಸಮತೋಲನವನ್ನು ಕಾಪಾಡುವಲ್ಲಿ ವನ್ಯಜೀವಿಗಳು ಹಾಗೂ ಹಾವುಗಳು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಪರಿಸರ ವ್ಯವಸ್ಥೆಯಲ್ಲಿ ಅವು ಎಷ್ಟು ಮುಖ್ಯ ಎಂಬುದನ್ನು ಅರಿತುಕೊಂಡು ಅವುಗಳನ್ನು ಸಂರಕ್ಷಿಸಬೇಕಾದ ಹೊಣೆ ನಮ್ಮೆಲ್ಲರ ಮೇಲಿದೆ ಎಂದು ವನ್ಯಜೀವಿ ಹಾಗೂ ಉರಗ ರಕ್ಷಕ ಅಕ್ಷಯ್ ಎನ್. ಶೇಟ್ ಹೇಳಿದರು. ಅವರು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಜರಗಿದ ಸ್ಕೌಟ್ಸ್, ಗೈಡ್ಸ್ ,ಕಬ್, ಬುಲ್-ಬುಲ್ ಮತ್ತು ಸೇವಾದಳಗಳ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನೀಲಾನಂದ ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಗೇಬ್ರಿಯಲ್ ಮಸ್ಕರೇನ್ಹಸ್ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಕುಮಾರಿ ಅನುಷ್ಕಾ ಸ್ವಾಗತಿಸಿದರು. ವಿದ್ಯಾರ್ಥಿ ಮಾಸ್ಟರ್ ರಚಿತ್ ಕೆ. ದೇವಾಡಿಗ ವಂದಿಸಿದರು. ಕುಮಾರಿ ಕ್ಷಮ್ಯ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

ಸರ್ವಕಾಲೇಜು ವಿದ್ಯಾರ್ಥಿ ಶಕ್ತಿ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ

Thumbnail
Posted On: 02 Apr 2025, 08:03 PM

ಉಡುಪಿ : ಜಿಲ್ಲೆಯ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾರ್ವಜನಿಕರು ರಸ್ತೆದಾಟಲು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು ಬಹಳಷ್ಟು ಅಪಘಾತಗಳು ಸಂಭವಿಸುತ್ತಿದ್ದು ಈ ಬಗ್ಗೆ ಈಗಾಗಲೇ ಪೈಓವರ್ ನಿರ್ಮಿಸುವಂತೆ ಪ್ರತಿಭಟನೆ ಹಾಗೂ ಮನವಿಯನ್ನು ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ವತಿಯಿಂದ ಮವವಿ ಸಲ್ಲಿಸಿದ್ದು. ಈ ವಿಚಾರವಾಗಿ ಯಾರೂ ಕೂಡ ಗಮನ ಹರಿಸದೆ ಇರುವುದು ಬೇಸರದ ಸಂಗತಿಯಾಗಿದೆ. ಆಭಾಗದಲ್ಲಿ ದಿನೇ ದಿನೇ ಅಪಘಾತಗಳು ಜಾಸ್ತಿಯಾಗುತ್ತಿದ್ದು ಎ.1, ಮಂಗಳವಾರ ಬೆಳಿಗ್ಗೆ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶಾಲೆಗೆ ಹೋಗುವ ಸಂದರ್ಭದಲ್ಲಿ ರಸ್ತೆದಾಟುವಾಗ ಬ್ರಹ್ಮಾವರ ಎಸ್.ಎಂ.ಎಸ್ ಆಂಗ್ಲ ಮಾದ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ವಂಶಿ ಜಿ. ಶೆಟ್ಟಿ ಎಂಬ ಬಾಲಕನು ಅಪಘಾತದಲ್ಲಿ ಸಾವನಪ್ಪಿದ್ದು ಈ ಬಾಲಕನ ಕುಟುಂಬದವರಿಗೆ ಯಾವುದೇ ಪರಿಹಾರ ನೀಡದಿರುವುದರಿಂದ ಈ ಕೂಡಲೆ ಜಿಲ್ಲಾಡಳಿತ ಮತ್ತು ಸಂಬಂದ ಪಟ್ಟ ಇಲಾಖೆಯಿಂದ ಪರಿಹಾರ ಒದಗಿಸಿ ಕೊಡುವಂತೆ ಹಾಗೂ ಆ ಭಾಗದಲ್ಲಿ ಪೈಓವರ್ ನಿರ್ಮಿಸುವಂತೆ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಯವರಿಗೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಈ ವಿಚಾರದಲ್ಲಿ ತಕ್ಷಣವೇ ಕ್ರಮ ಕೃೆಗೂಳ್ಳುತೇನೆಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಸಂಸ್ಥಾಪಕ ಶಿವ ಕುಮಾರ್ ಕರ್ಜೆ, ಗೌರವ ಸಲಹೆಗಾರ ವಿಶ್ವಾಸ್ ಅಮೀನ್, ಸಂತೋಷ್ ಪಡುಬಿದ್ರಿ, ಉಡುಪಿ ತಾಲೂಕು ಅಧ್ಯಕ್ಷ ವಿದಿತ್ ನಾಗರಾಜ್, ಉಪಾಧ್ಯಕ್ಷ ಮನೀಷ್ ಪೂಜಾರಿ, ಕಾಲೇಜು ವಿದ್ಯಾರ್ಥಿಗಳಾದ ವಂಶಿತ್ ಶೆಟ್ಟಿ, ಕಿರಣ್ ಶೆಟ್ಟಿ, ಧನುಷ್ ಆಚಾರ್ಯ, ಸೌರಭ್ ಪೂಜಾರಿ ಉಪಸ್ಥಿತರಿದ್ದರು.

ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿ 92 ಹೇರೂರು, ಬಂಟಕಲ್ಲು : ನೂತನ‌ ಕಾರ್ಯಕಾರಿ‌ ಸಮಿತಿ ರಚನೆ

Thumbnail
Posted On: 31 Mar 2025, 09:59 PM

ಬಂಟಕಲ್ಲು : ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿ (ರಿ.) 92 ಹೇರೂರು, ಬಂಟಕಲ್ಲು ಇಲ್ಲಿನ ವಾರ್ಷಿಕ ಮಹಾಸಭೆಯಲ್ಲಿ 2025-27ನೇ ಸಾಲಿನ ಅವಧಿಗೆ ಕಳೆದ ಕಾರ್ಯಕಾರಿ ಸಮಿತಿಯು ಅವಿರೋಧವಾಗಿ ಪುನರಾಯ್ಕೆಗೊಂಡಿತು. ಅಧ್ಯಕ್ಷರಾಗಿ ರಾಘವೇಂದ್ರ ಸ್ವಾಮಿ, ಕಾರ್ಯದರ್ಶಿಯಾಗಿ ಚರಣ್ ದೇವಾಡಿಗ, ಉಪಾಧ್ಯಕ್ಷರಾಗಿ ಮಾಧವ ಆಚಾರ್ಯ, ಕೋಶಾಧಿಕಾರಿಯಾಗಿ ಸುಧೀರ್ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ಉದಯ ಕರ್ಕೇರ, ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ರಾಜೇಶ್ ಜೋಗಿ, ದೇವದಾಸ ಜೋಗಿ, ಶ್ರೀಧರ್ ಕಾಮತ್, ಶ್ರೀನಿವಾಸ ದೇವಾಡಿಗ, ದಿನೇಶ್ ದೇವಾಡಿಗ ರವರು ಆಯ್ಕೆಯಾದರು. ಇದರ ಜೊತೆಗೆ ಸಕ್ರಿಯ ಮತ್ತು ಹಿರಿಯ ಸದಸ್ಯರುಗಳ ಸಲಹಾ ಸಮಿತಿಯನ್ನು ಆಯ್ಕೆಗೊಳಿಸಲಾಯಿತು.