Updated News From Kaup

ಕಾಪು : ದಂಡತೀರ್ಥ ಕಾಲೇಜು ಸಂಸ್ಥಾಪಕ ದಿ. ಡಾll ಕೆ.ಪ್ರಭಾಕರ ಶೆಟ್ಟಿ ಪುಣ್ಯತಿಥಿ ಆಚರಣೆ

Posted On: 15-01-2025 08:56PM

ಕಾಪು : ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕರಾದ ದಿ. ಡಾll ಕೆ.ಪ್ರಭಾಕರ ಶೆಟ್ಟಿ ಇವರ ಪುಣ್ಯತಿಥಿಯನ್ನು ಬುಧವಾರದಂದು ಕಾಲೇಜಿನಲ್ಲಿ ಆಚರಿಸಲಾಯಿತು.

ಸಂಸ್ಥೆಯ ಸಂಚಾಲಕರಾದ ಡಾll ಕೆ.ಪ್ರಶಾಂತ್ ಶೆಟ್ಟಿಯವರು ಸಂಸ್ಥಾಪಕರ ಪುತ್ಥಳಿಗೆ ಮಾಲಾರ್ಪಣೆಗೈದರು.

ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ ಮಾತನಾಡಿ, ದಿ. ಡಾ|| ಕೆ. ಪ್ರಭಾಕರ ಶೆಟ್ಟಿಯವರು ಕಾಪುವಿನ ಹಿರಿಯ ವೈದ್ಯರಾಗಿದ್ದು, ಧಾರ್ಮಿಕ, ಸಾಮಾಜಿಕ ಸೇವೆಯಲ್ಲಿ ತೊಡಗಿಕೊಂಡಿದ್ದವರು. ಜೊತೆಗೆ ಶೈಕ್ಷಣಿಕವಾಗಿ ಪರಿಸರದ ಜನರಿಗೆ ವಿಜ್ಞಾನ ವಿಭಾಗದ ಪದವಿ ಪೂರ್ವ ಕಾಲೇಜನ್ನು ಸ್ಥಾಪಿಸಿ ಬಳಿಕ ಕಲಾ ಮತ್ತು ವಾಣಿಜ್ಯ ವಿಭಾಗವನ್ನಾಗಿ ಪರಿವರ್ತಿಸಿ, ಪ್ರತೀ ವರ್ಷ ಆರು ಲಕ್ಷದಷ್ಟು ವಿದ್ಯಾರ್ಥಿವೇತನವನ್ನು ಬಡ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡಿದ್ದಲ್ಲದೆ ಈ ವಿದ್ಯಾ ಸಂಸ್ಥೆಯನ್ನು ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗುವಂತೆ ಮಾಡಿದವರು. ಅವರ ಆದರ್ಶ ನಮಗೆಲ್ಲ ದಾರಿದೀಪವಾಗಬೇಕು ಹಾಗೂ ಅವರು ಕಟ್ಟಿ ಬೆಳೆಸಿದ ಈ ವಿದ್ಯಾಸಂಸ್ಥೆಯ ಪ್ರಗತಿಗೆ ನಾವೆಲ್ಲ ನಿರಂತರವಾಗಿ ತೊಡಗಿಸಿಕೊಳ್ಳಬೇಕೆಂದು ಹೇಳಿದರು.

ಸಮಾರಂಭದಲ್ಲಿ ಕಾಲೇಜು ಪ್ರಾಂಶುಪಾಲ ನೀಲಾನಂದ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್, ಪ್ರಾಥಮಿಕ ಶಾಲಾ ಮುಖ್ಯಸ್ಥರುಗಳಾದ ಗೇಬ್ರಿಯಲ್ ಫ್ರೇಂಕಿ ಮಸ್ಕರೇನ್ಹಸ್, ಕೃಪಾ ಅಮ್ಮನ್ನ, ಶಿಕ್ಷಕ-ಶಿಕ್ಷಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸಂಕ್ರಾಂತಿ ಜಾನಪದ ಸಂಭ್ರಮ ಮಹಿಳೆಯರಿಗಾಗಿ ಉಡುಪಿ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ

Posted On: 14-01-2025 07:21PM

ಉಡುಪಿ : ಕನ್ನಡ ಜಾನಪದ ಪರಿಷತ್ ಬೆಂಗಳೂರು, ಉಡುಪಿ ಜಿಲ್ಲಾ ಘಟಕ, ಕ.ಜಾ.ಪ. ಕುಂದಾಪುರ ತಾಲೂಕು ಹಾಗೂ ರೋಟರಿ ಸಮುದಾಯ ದಳ ಕೊರವಡಿ ಇದರ ಸಂಯುಕ್ತ ಆಶ್ರಯದಲ್ಲಿ ಸಂಕ್ರಾಂತಿ ಜಾನಪದ ಸಂಭ್ರಮ ಮಹಿಳೆಯರಿಗಾಗಿ ಉಡುಪಿ ಜಿಲ್ಲಾ ಮಟ್ಟದ ರಂಗೋಲಿ ಸ್ಪರ್ಧೆ ಮಂಗಳವಾರ ಶ್ರೀ ವಿಷ್ಣುಮೂತಿ೯ ದೇವಸ್ಥಾನದ ಸಂಭಾಗಣ ಕೊರವಾಡಿಯಲ್ಲಿ ನಡೆಯಿತು. ಕಾಯ೯ಕ್ರಮದ ಉದ್ಘಾಟನೆಯನ್ನು ಗ್ರಾ.ಪಂ ಅಧ್ಯಕ್ಷ ಆನಂದ ಪೂಜಾರಿ ನೆರವೇರಿಸಿ ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ ಮಾತನಾಡಿ, ಜಾನಪದವು ನಮ್ಮ ದೇಶದ ಅಪೂವ೯ ಸಂಪತ್ತಾಗಿದೆ ಇದನ್ನು ಉಳಿಸಿ ಬೆಳೆಸಬೇಕು. ಸಂಕ್ರಾಂತಿಯನ್ನು ರಂಗೋಲಿ ಹಾಕುವ ಮೂಲಕ ಮನೆಗೆ ಸ್ವಾಗತಿಸುತ್ತಾರೆ. ಇದಕ್ಕೆ ಧಾಮಿ೯ಕ ಹಿನ್ನಲೆಯೊಂದಿಗೆ ಸಾಂಸ್ಕೃತಿಕ ಪರಂಪರೆಯಿದೆ ಎಂದರು.

ಮುಖ್ಯ ಅತಿಥಿಗಳಾಗಿ ರೋಟರಿ ಕ್ಲಬ್ ಕೋಟೇಶ್ವರ ಅಧ್ಯಕ್ಷತೆ ವಹಿಸಿದ ಕನ್ನಡ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಡಾ.ಗಣೇಶ್ ಗಂಗೊಳ್ಳಿ ಮಾತನಾಡಿ, ಜಾನಪದವು ನಮ್ಮ ದೇಶದ ಅಪೂವ೯ ಸಂಪತ್ತಾಗಿದೆ ಇದನ್ನು ಉಳಿಸಿ ಬೆಳೆಸಬೇಕು. ಸಂಕ್ರಾಂತಿಯನ್ನು ರಂಗೋಲಿ ಹಾಕುವ ಮೂಲಕ ಮನೆಗೆ ಸ್ವಾಗತಿಸುತ್ತಾರೆ. ಇದಕ್ಕೆ ಧಾಮಿ೯ಕ ಹಿನ್ನಲೆಯೊಂದಿಗೆ ಸಾಂಸ್ಕೃತಿಕ ಪರಂಪರೆಯಿದೆ ಎಂದರು.ಅಧ್ಯಕ್ಷರಾದ ಸತೀಶ್ ಎಂ.ನಾಯ್ಕ್, ಸಮುದಾಯ ದಳ ಕೊರವಡಿ ಅಧ್ಯಕ್ಷ ಕೆ ಸುರೇಶ್ ವಿಠಲವಾಡಿ, ಸ್ಥಾಪಕ ಅಧ್ಯಕ್ಷ ರಾಮಚಂದ್ರ ಉಪಾಧ್ಯಾಯ , ಉಡುಪಿ ತಾಲೂಕು ಅಧ್ಯಕ್ಷೆ ಮಾಯಾ ಕಾಮತ್, ಜಿಲ್ಲಾ ಪದಾಧಿಕಾರಿಗಳಾದ ರಾಘವೇಂದ್ರ ಪ್ರಭು ಕವಾ೯ಲು, ನರಸಿಂಹ ನಾಯಕ್, ತೀಪು೯ಗಾರರಾದ ಸಿಂಧು ಐತಾಳ, ರವಿಕಟ್ಕರೆ ಮುಂತಾದವರು ಉಪಸ್ಥಿತರಿದ್ದು ಶುಭ ಹಾರೈಸಿದರು.

ಕುಂದಾಪುರ ತಾಲೂಕು ಅಧ್ಯಕ್ಷೆ ಸುಪ್ರಿತಾ ಪುರಾಣಿಕ್ ಪ್ರಸ್ತಾವನೆಗೈದು ಸ್ವಾಗತಿಸಿದರು. ಸಂಧ್ಯಾ ಹೆಗಡೆ ನಿರೂಪಿಸಿದರು. ವಿಜೇತರಿಗೆ ನಗದು ಬಹುಮಾನ ದೊಂದಿಗೆ ಗೌರವಿಸಲಾಯಿತು.

ಕಳತ್ತೂರು : ಶ್ರೀ ಅಯ್ಯಣ್ಣ ಶಾಲೆಯ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಸಂಪನ್ನ

Posted On: 14-01-2025 04:01PM

ಕಾಪು : ತಾಲೂಕಿನ ಕುತ್ಯಾರು ಕಳತ್ತೂರು ಶ್ರೀ ಅಯ್ಯಣ್ಣ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಯಶಸ್ವಿಯಾಗಿ ಇತ್ತೀಚೆಗೆ ನಡೆಯಿತು.

ಶಾಲೆಯ ಹಳೆವಿದ್ಯಾರ್ಥಿ, ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಶಾಲಾ ಸಂಚಾಲಕರು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು, ಶಾಲೆಯ ಶಿಕ್ಷಕರು, ಶಾಲೆಯ ಪ್ರೋತ್ಸಾಹಕರು, ಶಾಲೆಯ ವಿದ್ಯಾಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಐಸಿವೈಎಂ ಉದ್ಯಾವರ : ನೂತನ ಅಧ್ಯಕ್ಷರಾಗಿ ಪ್ರಿಲ್ಸನ್ ಮಾರ್ಟಿಸ್ ಆಯ್ಕೆ

Posted On: 14-01-2025 01:23PM

ಉದ್ಯಾವರ : ಉದ್ಯಾವರ ಗ್ರಾಮದ ಅತ್ಯಂತ ಹಿರಿಯ ಸಂಸ್ಥೆಗಳಲ್ಲಿ ಒಂದಾಗಿರುವ ಭಾರತೀಯ ಕಥೋಲಿಕ್ ಯುವ ಸಂಚಲನ (ಐಸಿವೈಎಂ) ಉದ್ಯಾವರ ಘಟಕದ 55ನೇ ವರ್ಷದ ಅಧ್ಯಕ್ಷರಾಗಿ ಪ್ರಿಲ್ಸನ್ ಮಾರ್ಟಿಸ್ ಆಯ್ಕೆಯಾಗಿದ್ದಾರೆ.

ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮ ಗುರುಗಳೂ, ಸಂಸ್ಥೆಯ ನಿರ್ದೇಶಕರು ಆಗಿರುವ ವo. ಫಾ. ಅನಿಲ್ ಡಿಸೋಜಾ ರವರ ಉಪಸ್ಥಿತಿಯಲ್ಲಿ 2025ನೇ ಸಾಲಿನ ಕಾರ್ಯಕಾರಿ ಸಮಿತಿಯ ಆಯ್ಕೆ ಪ್ರತಿಕ್ರಿಯೆಯು ನಡೆಯಿತು.

ಕಾರ್ಯದರ್ಶಿಯಾಗಿ ಸ್ಟೆನಲ್ ಡಿಸಿಲ್ವಾ, ಉಪಾಧ್ಯಕ್ಷರಾಗಿ ರೋಲ್ವಿನ್ ಅಲ್ಮೆಡ, ಸಹ ಕಾರ್ಯದರ್ಶಿ ಸ್ಮಿತಾ ಒಲಿವೇರಾ, ಕೋಶಾಧಿಕಾರಿ ಗ್ಲ್ಯಾನಿಶ್ ಪಿಂಟೊ, ಪಿ ಆರ್ ಓ ಫರ್ಡಿನಂಡ್ ಡಿಸೋಜಾ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮರ್ವಿನ್ ಅಲ್ಮೆಡ, ಪ್ರಾರ್ಥನಾ ಕಾರ್ಯದರ್ಶಿಯಾಗಿ ಶರನ್ ಕ್ರಾಸ್ಟೊ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ 2024 ಸಾಲಿನ ಅಧ್ಯಕ್ಷ ಗ್ಲ್ಯಾನಿಶ್ ಪಿಂಟೊ, ಕಾರ್ಯದರ್ಶಿ ಸಾಷಾ ಮೊoತೆರೊ, ಸಲಹೆಗಾರರಾದ ಜೂಲಿಯಾ ಡಿಸೋಜ ಉಪಸ್ಥಿತರಿದ್ದರು.

ಕೆ.ಕೆ ಫ್ರೆಂಡ್ಸ್ ಶಿರ್ವ ಇದರ ನೂತನ ಅಧ್ಯಕ್ಷರಾಗಿ ಮಂಜುನಾಥ್ ಆಚಾರ್ಯ ಮೂಡುಮಟ್ಟಾರು ಆಯ್ಕೆ

Posted On: 14-01-2025 08:11AM

ಶಿರ್ವ : ಕೆ.ಕೆ ಫ್ರೆಂಡ್ಸ್ ಶಿರ್ವ ಇದರ 2025 - 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಆಚಾರ್ಯ ಮೂಡುಮಟ್ಟಾರು ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರುಗಳಾಗಿ ಜೀವನ್ ಕೋಟ್ಯಾನ್ ಮತ್ತು ಶಿವಾನಂದ ಪೂಜಾರಿ, ಕಾರ್ಯದರ್ಶಿಯಾಗಿ ರಾಕೇಶ್ ಆಚಾರ್ಯ, ಸಹ ಕಾರ್ಯದರ್ಶಿಯಾಗಿ ಹರ್ಷಿತ್ ಪೂಜಾರಿ ಕಲ್ಲಟ್ಟ, ಕೋಶಾಧಿಕಾರಿಯಾಗಿ ಅಶ್ವಿನ್ ಜೋಯ್ ಡಿಸೋಜಾ, ಕ್ರೀಡಾ ಕಾರ್ಯದರ್ಶಿಯಾಗಿ ಸುಕೇಶ್ ಆಚಾರ್ಯ, ಸಹ ಕ್ರೀಡಾ ಕಾರ್ಯದರ್ಶಿಯಾಗಿ ಸುನಿಲ್, ಸಾಮಾಜಿಕ ಕಾರ್ಯದರ್ಶಿಯಾಗಿ ಮುಕೇಶ್ ಆಚಾರ್ಯ ಆಯ್ಕೆಯಾಗಿದ್ದಾರೆ.

ಸದಸ್ಯರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಶ್ರೀ ವಿಶ್ವೇಶ್ವರ ದೇವಸ್ಥಾನದ ಉಪ ಸಾನಿಧ್ಯವಾದ ವೀರಾಂಜನೇಯ ಗುಡಿಯ ಸಮೀಪದ 2 ಕೋಟಿ ಅನುದಾನದ ಕೆರೆ ಉದ್ಘಾಟನೆ

Posted On: 13-01-2025 07:02PM

ಕಾಪು : ತಾಲೂಕಿನ ಎಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ವಿಶ್ವೇಶ್ವರ ದೇವಸ್ಥಾನದ ಉಪ ಸಾನಿಧ್ಯವಾದ ವೀರಾಂಜನೇಯ ಗುಡಿಯ ಸಮೀಪದ ಕೆರೆ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ 2 ಕೋಟಿ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಸೋಮವಾರ ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಎಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿರಾಜ್ ರಾವ್, ಉಪಾಧ್ಯಕ್ಷರಾದ ಉಷಾ, ಶ್ರೀ ವಿಶ್ವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಅರುಣಾಕರ ಶೆಟ್ಟಿ, ಮಾಜಿ ಅಧ್ಯಕ್ಷರಾದ ಪ್ರಪುಲ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಶಿಲ್ಪಾ ಜಿ ಸುವರ್ಣ, ಸತೀಶ್ ಗುಡ್ಡೆಚ್ಚಿ ಹಾಗೂ ಎಲ್ಲೂರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

ಯುವ ವಿಚಾರ ವೇದಿಕೆ ಕೊಳಲಗಿರಿ ಉಪ್ಪೂರು : ಪರೀಕ್ಷಾ ಪೂರ್ವ ತಯಾರಿ ಕಾರ್ಯಗಾರ

Posted On: 13-01-2025 06:56PM

ಉಡುಪಿ : ಯುವ ವಿಚಾರ ವೇದಿಕೆ ಕೊಳಲಗಿರಿ ಉಪ್ಪೂರು ಇದರ ರಜತ ಸಂಭ್ರಮ ಪ್ರಯುಕ್ತ ಉಪ್ಪೂರು ಸರಕಾರಿ ಪ್ರೌಢ ಶಾಲೆಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ "ಪರೀಕ್ಷಾ ಪೂರ್ವ ತಯಾರಿ ಕಾರ್ಯಗಾರ" ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ಎ. ವಿ. ಬಾಳಿಗ ಆಸ್ಪತ್ರೆಯ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಮಾತನಾಡಿ, ಪರೀಕ್ಷೆ ಒಂದು ವ್ಯವಸ್ಥೆ, ಆತಂಕ ಬೇಡ. ಜೀವನ ಎನ್ನುವ ಪರೀಕ್ಷೆ ಅದಕ್ಕಿಂತ ದೊಡ್ಡದು. ಪರೀಕ್ಷೆ ಎನ್ನುವುದು ಒಂದು ಹಬ್ಬ. ಧೈರ್ಯದಿಂದ ಎದುರಿಸಿ ಜೀವನದ ಗುರಿ ಸಾಧಿಸಿ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಯುವ ವಿಚಾರ ವೇದಿಕೆಯ ಅಧ್ಯಕ್ಷರಾದ ಸಂದೀಪ್ ಶೆಟ್ಟಿ, ಉಪ್ಪೂರು ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಸಂಧ್ಯಾ ಸರಸ್ವತಿ ಭಟ್ ಶುಭ ಹಾರೈಸಿದರು.

ವೇದಿಕೆಯ ಸದಸ್ಯರಾದ ರವಿಂದ್ರ ಕುಮಾರ್ , ಶಕುಂತಲಾ, ಕೇಶವ್, ವಿದ್ಯಾರ್ಥಿಗಳ ಪೋಷಕರು, ಶಾಲಾ ಅಧ್ಯಾಪಕರುಗಳು ಉಪಸ್ಥಿತರಿದ್ದರು. ವೇದಿಕೆಯ ಅಧ್ಯಕ್ಷರಾದ ಸಂದೀಪ್ ಶೆಟ್ಟಿ ಸ್ವಾಗತಿಸಿ, ಸುಬ್ರಹ್ಮಣ್ಯ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವಿಶ್ವ ಬ್ರಾಹ್ಮಣ ಯುವ ಸಂಗಮ ಶಿರ್ವ ಇದರ ನೂತನ ಅಧ್ಯಕ್ಷರಾಗಿ ಉಮೇಶ ಆಚಾರ್ಯ ಆಯ್ಕೆ

Posted On: 13-01-2025 06:47PM

ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ (ರಿ.) ಶಿರ್ವ ಇದರ 2025-26ನೇ ನೂತನ ಅಧ್ಯಕ್ಷರಾಗಿ ಉಮೇಶ ಆಚಾರ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಸುರೇಶ ಆಚಾರ್ಯ, ಉಪಾಧ್ಯಕ್ಷರಾಗಿ ಪ್ರಸನ್ನ ಆಚಾರ್ಯ, ಸಂಜೀವ ಆಚಾರ್ಯ, ಸೀತಾರಾಮ ಆಚಾರ್ಯ, ಕಾರ್ಯದರ್ಶಿಯಾಗಿ ಮಾಧವಾಚಾರ್ಯ, ಜೊತೆ ಕಾರ್ಯದರ್ಶಿಯಾಗಿ ಸದಾಶಿವ ಆಚಾರ್ಯ, ಕೋಶಾಧಿಕಾರಿಯಾಗಿ ಪ್ರಶಾಂತ ಆಚಾರ್ಯ, ಸಂಘಟನಾ ಕಾರ್ಯದರ್ಶಿಯಾಗಿ ಗಣೇಶಾಚಾರ್ಯ, ಪ್ರಕಾಶ್ ಆಚಾರ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶಶಿರಾಜ್ ಆಚಾರ್ಯ, ವಿಠಲಾಚಾರ್ಯ, ಪ್ರವಾಸ ಜಗದೀಶ್ ಆಚಾರ್ಯ, ಕಾರ್ಯಕಾರಿ ಸಮಿತಿಗೆ ಚಂದ್ರಶೇಖರ್ ಆಚಾರ್ಯ, ರಾಮಣ್ಣ ಆಚಾರ್ಯ ಆಯ್ಕೆಯಾಗಿದ್ದಾರೆ.

ಪಡುಬಿದ್ರಿಯ ವಿಶ್ವ ಕಲ್ಲಟ್ಟೆಯವರಿಂದ ಮೋದಿಯ ಶ್ರೇಯೋಭಿವೃದ್ಧಿಗಾಗಿ ಶಬರಿಮಲೆಗೆ ಪಾದಯಾತ್ರೆ

Posted On: 12-01-2025 12:12PM

ಪಡುಬಿದ್ರಿ : ಪಡುಬಿದ್ರಿಯ ಕಲ್ಲಟ್ಟೆಯ ವಿಶ್ವ ಎಂಬುವವರು ಅಯ್ಯಪ್ಪ ಸ್ವಾಮಿ ಭಕ್ತರಾಗಿದ್ದು ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿ ಅವರು 3ನೇ ಬಾರಿ ಪ್ರಧಾನಿಯಾಗಬೇಕೆಂದು ಮತ್ತು ಅವರ ಶ್ರೇಯೋಭಿವೃದ್ಧಿಗಾಗಿ ಸಂಕಲ್ಪ ಮಾಡಿದ್ದರು. ಅದರಂತೆ ಪಡುಬಿದ್ರಿಯಿಂದ ಪಾದಯಾತ್ರೆಯ ಮೂಲಕವೇ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ.

ಪಡುಬಿದ್ರಿಯ ಭಗವತಿ ಗ್ರೂಪಿನ ಸದಸ್ಯರಾಗಿರುವ ವಿಶ್ವ ಕಲ್ಲಟ್ಟೆ ಅವರು ಚುನಾವಣೆಗೆ ಮುಂಚೆಯೇ ಈ ಹರಕೆಯ ಸಂಕಲ್ಪವನ್ನು ಮಾಡಿದ್ದರು. ಇದೀಗ 18ನೇ ವರ್ಷದ ಶಬರಿಮಲೆ ಯಾತ್ರೆ ಮಾಡುತ್ತಿರುವ ವಿಶ್ವ ಕಲ್ಲಟ್ಟೆ ಇವರು ಸತತ 8 ವರ್ಷಗಳಿಂದ ಪಡುಬಿದ್ರಿಯಿಂದ ಪಾದಯಾತ್ರೆಯ ಮೂಲಕವೇ ಶಬರಿಮಲೆ ಯಾತ್ರೆ ಮಾಡುತ್ತಿದ್ದು, ಇದೀಗ 9ನೇ ವರ್ಷದ ಪಾದಯಾತ್ರೆಯನ್ನು ಕೈಗೊಂಡಿದ್ದಾರೆ.

ಇನ್ನಂಜೆ ಯುವಕ ಮಂಡಲದಿಂದ ರಾಷ್ಟ್ರೀಯ ಯುವ ದಿನಾಚರಣೆ

Posted On: 12-01-2025 11:55AM

ಕಾಪು : ಇನ್ನಂಜೆ ಯುವಕ ಮಂಡಲ (ರಿ.) ಇನ್ನಂಜೆ ವತಿಯಿಂದ ಭಾನುವಾರ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಅಂಗವಾಗಿ ಸಂಸ್ಥೆಯ ನೂತನ ಸಭಾಭವನದಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು.

ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಹೂವನ್ನು ಅರ್ಪಿಸಿ ಗೌರಾವಾರ್ಪಣೆ ಸಲ್ಲಿಸಲಾಯಿತು.

ಈ ಸಂದರ್ಭ ಯುವಕ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ ಮತ್ತು ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.