Updated News From Kaup
ಸನ್ಮಾನ : ಛಾಯಾಗ್ರಾಹಕ ಸುರೇಂದ್ರ ಕುಲಾಲ್ ಪಣಿಯೂರ್
Posted On: 28-09-2021 12:11PM
ಕಾಪು : ಛಾಯಾಗ್ರಾಹಕ ಸುರೇಂದ್ರ ಕುಲಾಲ್ ಪಣಿಯೂರ್ ಅವರಿಗೆ ಶ್ರೀ ನೀಲಕಂಠ ಮಹಾ ಬಬ್ಬುಸ್ವಾಮಿ ದೈವಸ್ಥಾನ ಬೈಲೂರು ವತಿಯಿಂದ ಸನ್ಮಾನಿಸಲಾಯಿತು.
ಕಾಪು ರೋಟರಿ ಕ್ಲಬ್ : ಉಚಿತ ಮಧುಮೇಹ ತಪಾಸಣಾ ಶಿಬಿರ
Posted On: 28-09-2021 10:52AM
ಕಾಪು : ಕಾಪು ರೋಟರಿ ಕ್ಲಬ್ಬಿನ ವತಿಯಿಂದ ವಿಶ್ವ ಹೃದಯ ದಿನದ ಅಂಗವಾಗಿ ಬುಧವಾರ (29-9-2021) ಬೆಳಿಗ್ಗೆ 9ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಕಾಪು ಪೇಟೆಯ ಅನಂಥಮಹಲ್ ಕಟ್ಟಡದ ಮುಂಬಾಗದಲ್ಲಿ ಉಚಿತ ಮಧುಮೇಹ, ರಕ್ತ ಪರೀಕ್ಷೆ ನಡೆಸಲಾಗುವುದು.
ನ್ಯೂ ಫ್ರೆಂಡ್ಸ್ ಗಿರಿನಗರ ವತಿಯಿಂದ ಶ್ರಮದಾನ ಕಾರ್ಯಕ್ರಮ
Posted On: 28-09-2021 10:40AM
ಕಾಪು : ನ್ಯೂ ಫ್ರೆಂಡ್ಸ್ (ರಿ.) ಗಿರಿನಗರ ಇದರ ವತಿಯಿಂದ ಗಿರಿನಗರದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.
ಜಿಲ್ಲೆಯ ಕರಕುಶಲ, ವೈಶಿಷ್ಠ ಪೂರ್ಣ ವಸ್ತುಗಳ ರಫ್ತು ಕುರಿತು ನೀಲ ನಕಾಶೆ : ಜಿಲ್ಲಾಧಿಕಾರಿ ಕೂರ್ಮಾರಾವ್
Posted On: 27-09-2021 11:24PM
ಉಡುಪಿ : ಜಿಲ್ಲೆಯಲ್ಲಿ ದೊರೆಯುವ ಮತ್ತು ಉತ್ಪಾದಿಸುವ ಕರಕುಶಲ ವಸ್ತುಗಳು, ಆಹಾರ ಪದಾರ್ಥಗಳು ಸೇರಿದಂತೆ ವಿವಿಧ ವೈಶಿಷ್ಠ ಪೂರ್ಣ ವಸ್ತುಗಳನ್ನು ಬ್ರಾಂಡಿಂಗ್ ಮಾಡಿ, ರಫ್ತು ಮಾಡಲು ನೀಲ ನಕಾಶೆ ಸಿದ್ದಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ, ವಾಣಿಜ್ಯ ಸಪ್ತಾಹದ ಅಂಗವಾಗಿ ಮಣಿಪಾಲದ ಜಿಲ್ಲಾ ಸಣ್ಣ ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಆಯೋಜಿಸಿದ್ದ ರಫ್ತುದಾರರ ಸಮಾವೇಶ ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡಿದರು.
ಉಡುಪಿ ಪ್ರವಾಸಿಗರ ಆಕರ್ಷಣೀಯ ಜಿಲ್ಲೆಯಾಗಬೇಕು: ರಘುಪತಿ ಭಟ್
Posted On: 27-09-2021 11:18PM
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ವಿಫುಲವಾದ ಅವಕಾಶಗಳಿದ್ದು, ಇವುಗಳನ್ನು ಬಳಿಸಿಕೊಂಡು, ವಿವಿಧ ಪ್ರವಾಸಿ ಯೋಜನೆಗಳನ್ನು ಅಭಿವೃದಿಗೊಳಿಸಿ ಜಿಲ್ಲೆಯನ್ನು ಪ್ರವಾಸೀಗರ ಆಕರ್ಷಣೀಯ ತಾಣವನ್ನಾಗಿ ಮಾಡಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಅಭಿವೃದ್ದಿ ಸಮಿತಿ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಇವರ ಸಹಯೋಗದೊಂದಿಗೆ ‘ಸುಸ್ಥಿರ ಹಾಗೂ ಅಂತರ್ಗತ ಬೆಳವಣಿಗೆಗೆ ಪ್ರವಾಸೋದ್ಯಮ’ ಎಂಬ ಸಂದೇಶದೊಂದಿಗೆ ಆಯೋಜಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ ತಂಡದಿಂದ ಕಟಪಾಡಿಯ ಕಾರುಣ್ಯ ವೃದ್ಧಾಶ್ರಮ ಭೇಟಿ - ಉಚಿತ ಆರೋಗ್ಯ ತಪಾಸಣೆ, ಔಷಧಿ ವಿತರಣೆ
Posted On: 26-09-2021 10:50PM
ಕಾಪು : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಇಂದು ಕಟಪಾಡಿಯ ಕಾರುಣ್ಯ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಉಚಿತ ಆರೋಗ್ಯ ತಪಾಸಣೆ ನಡೆಸಿ ಔಷಧಿಯನ್ನು ನೀಡಲಾಯಿತು.
ಶಿರ್ವ ಸಂತ ಮೇರಿ ಮಹಾವಿದ್ಯಾಲಯ ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಹಾಗೂ ಬಹುಮಾನ ವಿತರಣೆ
Posted On: 26-09-2021 10:35PM
ಶಿರ್ವ: ಇದು ಸ್ಪರ್ಧಾತ್ಮಕ ಜಗತ್ತು ಎಂದು ನಮಗೆಲ್ಲರಿಗೂ ತಿಳಿದಿದೆ ಇಂದಿನ ಯುವಪೀಳಿಗೆ ಗಳು ಬದಲಾಗುತ್ತಿರುವ ಜೀವನಶೈಲಿಯನ್ನು ಅಳವಡಿಸಿಕೊಳ್ಳುತ್ತಾ ಗತಕಾಲದ ವೈಭವಗಳ ಮೌಲ್ಯಗಳನ್ನು, ಜೀವನದ ಪಾಠಗಳನ್ನು ತಿಳಿದು ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು. ವಿದ್ಯೆ ಕಲಿಸಿದ ಗುರುಗಳಿಗೆ ಮತ್ತು ಸಂಸ್ಥೆಗಳಿಗೆ ತಮ್ಮ ಅಮೂಲ್ಯವಾದ ಕೊಡುಗೆಗಳನ್ನು ನೀಡಬೇಕೆಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಬಹುಮಾನ ವಿತರಣೆ ಹಾಗೂ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಸಂತ ಮೇರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಹಾಗೂ ಸಂತ ಮೇರಿ ಪದವಿ ಕಾಲೇಜಿನ ಪ್ರಥಮ ಬ್ಯಾಚಿನ ಹಳೆ ವಿದ್ಯಾರ್ಥಿನಿ ಐರಿನ್ ಮೆಂಡೋನ್ಸಾ ಕಳೆದ ವರ್ಷ ಮಂಗಳೂರು ವಿಶ್ವವಿದ್ಯಾನಿಲಯದ ರ್ಯಾಂಕ್ ಪಡೆದ ಸತ್ಯ ಸುಬ್ರಹ್ಮಣ್ಯ ವಿ.ಎಸ್ (ಬಿ.ಸಿ.ಎ) 4ನೇ ರ್ಯಾಂಕ್, ಸ್ನಾತಕೋತ್ತರ ವಾಣಿಜ್ಯದಲ್ಲಿ 9ನೇ ರ್ಯಾಂಕ್ ಪಡೆದ ಲವಿಟಾ ಮೊರಾಸ್ ಹಾಗೂ ಸಾಧನೆ ಮಾಡಿದ ಅಧ್ಯಾಪಕ ವೃಂದದ ಅವರನ್ನು ಕಾಲೇಜಿನ ವತಿಯಿಂದ ಸಮ್ಮಾನಿಸಿ ಮಾತನಾಡಿದರು.
ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ, ಮಹಿಳಾ ವೇದಿಕೆ ಅಶೋಕನಗರ
Posted On: 26-09-2021 10:25PM
ಮಂಗಳೂರು : ರಾತ್ರಿ 10 ಗಂಟೆಗೆಯಿಂದ ಮಧ್ಯರಾತ್ರಿ 3.15 ರವರೆಗೂ ಉಬ್ಬು ( Humps ) ಗಳಿಗೆ ಪೈಂಟ್ ಕೊಡುವ ಕೆಲಸ ನಿನ್ನೆ ಬಿರುವೆರ್ ಕುಡ್ಲ ಮಹಿಳಾ ವೇದಿಕೆ ಅಶೋಕನಗರ ವತಿಯಿಂದ ಲೇಡಿಹಿಲ್ ನಿಂದ ಉರ್ವಸ್ಟೋರ್ ವರೆಗೆ ನಡೆಯಿತು.
ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಜೀರ್ಣೋದ್ಧಾರ ; ಪುರಸಭಾ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿ ರಚನೆಗೆ ಚಾಲನೆ
Posted On: 26-09-2021 09:22PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರದ ಪೂರ್ವ ತಯಾರಿಗಾಗಿ ಪುರಸಭಾ ವ್ಯಾಪ್ತಿಯ ೨೩ ವಾರ್ಡುಗಳ ವಾರ್ಡ್ ಸಮಿತಿ ರಚನೆಗೆ ಸೆ. ೨೬ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ಅಮ್ಮನ ಪ್ರೇರಣೆಯಂತೆ ಪ್ರತಿಯೊಬ್ಬ ಭಕ್ತರು ಜೀರ್ಣೋದ್ಧಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಹಾಗೂ ಪ್ರತೀ ಮನೆಗೆ ಜೀರ್ಣೋದ್ದಾರದ ಸುದ್ದಿ ತಲುಪಿಸಲು ಕಾಪು ಪುರಸಭಾ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಪ್ರತೀ ಗ್ರಾಮಗಳಲ್ಲಿಯೂ ಗ್ರಾಮ ಸಮಿತಿಯನ್ನು ರಚನೆ ಮಾಡಲಾಗುವುದು.
ಮೂಡುಬೆಳ್ಳೆ : ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃ ಶಕ್ತಿ ಹಾಗೂ ದುರ್ಗವಾಹಿನಿ ಘಟಕದ ವತಿಯಿಂದ ವನಮಹೋತ್ಸವ, ಭಗವಧ್ವಜ ಸ್ಥಾಪನೆ
Posted On: 26-09-2021 09:14PM
ಕಾಪು : ವಿಶ್ವ ಹಿಂದೂ ಪರಿಷದ್, ಬಜರಂಗದಳ ಮತ್ತು ಮಾತೃ ಶಕ್ತಿ ಹಾಗೂ ದುರ್ಗವಾಹಿನಿ ಮೂಡುಬೆಳ್ಳೆ ಘಟಕ ವತಿಯಿಂದ ಕುಂತಳ ನಗರದಲ್ಲಿ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಹಾಗೂ ಭಗವಧ್ವಜ ಸ್ಥಾಪಿಸಲಾಯಿತು.
