Updated News From Kaup
ವಿಕಲಚೇತನ ಕಲಾವಿದ ಗಣೇಶ್ ಕುಲಾಲ್ ಪಂಜಿಮಾರ್ ಕೈ ಚಲಕದಿ ಮೂಡಿದ ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಸಚಿವ ವಿ. ಸುನಿಲ್ ಕುಮಾರ್ ಚಿತ್ರ - ಹಸ್ತಾಂತರ
Posted On: 26-09-2021 12:28PM
ಕಾಪು : ಕಲೆಗೆ ಬೆಲೆ ಕಟ್ಟಲಾಗದು, ಚಿತ್ರಕಲೆಯಲ್ಲಿ ಸಾಧನೆಗೈದ ಮುಂದಿನ ಯುವ ಮನಸ್ಸುಗಳಿಗೆ ಮಾದರಿಯಾದ ವಿಕಲಚೇತನ ಕಲಾವಿದ ಗಣೇಶ್ ಕುಲಾಲ್ ಪಂಜಿಮಾರ್ ಇವರ ಕೈ ಚಲಕದಲ್ಲಿ ಮೂಡಿದ ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಕಾರ್ಕಳದ ಶಾಸಕರು ಹಾಗೂ ಸಚಿವರಾದ ವಿ ಸುನಿಲ್ ಕುಮಾರ್ ಅವರ ಚಿತ್ರವನ್ನ ಗಣೇಶ್ ಪಂಜಿಮಾರ್ ಅವರು ಅತಿಥಿ ಗಣ್ಯರ ಜೊತೆ ಅವರಿಗೆ ನೀಡಿದರು.
ತಂತ್ರಜ್ಞಾನದೊಂದಿಗೆ ಸಂಶೋಧನಾ ಮನಸ್ಥಿತಿ ಬೆಳೆಸಿ ಉತ್ತಮ ಉದ್ಯೋಗ ಪಡೆಯಿರಿ : ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್
Posted On: 26-09-2021 12:01PM
ಮೂಡಬಿದ್ರಿ : ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಸರಿಯಾದ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನವನ್ನುಪಡೆದು, ನಿರ್ದಿಷ್ಟ ಗುರಿ ಮತ್ತು ಧ್ಯೇಯವನ್ನು ತಲುಪಲು ಕಂಪ್ಯೂಟರ್ಗಳನ್ನು ಹೆಚ್ಚಾಗಿ ಬಳಸಿಕೊಂಡು ಸಮಾಜಕ್ಕೆ ಬೇಕಾಗುವ ತಂತ್ರಜ್ಞಾನವನ್ನು ರೂಪಿಸಿ, ಸಂಶೋಧನಾ ಮನಸ್ಥಿತಿ ಬೆಳೆಸಿಕೊಂಡು ಉತ್ತಮ ಉದ್ಯೋಗ ಪಡೆಯಬೇಕು. ಇದಕ್ಕೆ ವಿದ್ಯಾರ್ಥಿಗಳು ಪೂರ್ವ ತಯಾರಿಯನ್ನು ಮಾಡುವುದರ ಜೊತೆಗೆ, ಮೂಲಭೂತ ಸೌಕರ್ಯಗಳನ್ನು ಸದ್ಬಳಕೆ ಮಾಡಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ವಿದ್ಯಾರ್ಥಿದೆಸೆಯಿಂದಲೇ ರೂಡಿಸಿಕೊಳ್ಳಬೇಕೆಂದು ಮೂಡಬಿದ್ರೆ ಧವಳಾ ಕಾಲೇಜಿನ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗ ಏರ್ಪಡಿಸಿದ ವೃತ್ತಿ ಮಾರ್ಗದರ್ಶನ ವೆಬಿನರ್ ನಲ್ಲಿ ಬಿಕಾಂ ಕಂಪ್ಯೂಟರ್ ಅಪ್ಲಿಕೇಶನ್ ವಿದ್ಯಾರ್ಥಿಗಳಿಗೆ ದೊರಕಬಹುದಾದ ಉದ್ಯೋಗ-ಅವಕಾಶಗಳ ಕೌಶಲ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಅವರು ಮಾತನಾಡಿದರು.
ರಾಜ್ಯದ ಐ.ಟಿ.ಐ. ಕಾಲೇಜುಗಳು 5000 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮೇಲ್ದರ್ಜೆಗೆ : ಸಚಿವ ಡಾ.ಅಶ್ವಥ್ ನಾರಾಯಣ್
Posted On: 26-09-2021 11:50AM
ಉಡುಪಿ : ರಾಜ್ಯದಲ್ಲಿನ 150 ಐ.ಟಿ.ಐ ಕಾಲೇಜುಗಳನ್ನು 5000 ಕೋಟಿ ರೂ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮೆಲ್ದರ್ಜೆಗೆ ಏರಿಸಲಾಗುವುದು ಎಂದು ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ಐಟಿ&ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿದರು. ಅವರು ಉಪ್ಪೂರುನಲ್ಲಿ ಸರಕಾರಿ ಉಪಕರಣಾಗಾರ ಮತ್ತು ನೂತನ ತರಬೇತಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ಸೆ.27 : ವಿಶ್ವ ಪ್ರವಾಸೋದ್ಯಮ ದಿನ - ಪ್ರವಾಸಿಗೆ ಪ್ರದರ್ಶಿಸಬೇಕಿದೆ ಸಾಂಸ್ಕೃತಿಕ ಸಂಪತ್ತು
Posted On: 26-09-2021 11:38AM
ಕರಾವಳಿ ಜಿಲ್ಲೆಗಳಲ್ಲಿ ವಿಫುಲವಾದ ಅವಕಾಶಗಳಿದ್ದರೂ ಪ್ರವಾಸೋದ್ಯಮ ಎಷ್ಟು ಅಭಿವೃದ್ಧಿಯಾಗಿದೆ ? ಇಲ್ಲಿರುವ ಪ್ರವಾಸಿ ಆಕರ್ಷಣೆಯ ಎಷ್ಟು ವಿಷಯಗಳು ಈಗಾಗಲೇ ತೆರೆದುಕೊಂಡಿವೆ - ತೆರೆಯಲಾಗಿದೆ ಅಥವಾ ಪರಿಚಯಿಸಲಾಗಿದೆ, ಗೊತ್ತಿಲ್ಲ ! . ಆದರೆ ನಮ್ಮ ಪ್ರವಾಸೋದ್ಯಮ ಸಂಬಂಧಿ ಚಟುವಟಿಕೆಗಳು ಕಡಲ ದಡವನ್ನು ಬಿಟ್ಟು ಪೂರ್ವಾಭಿಮುಖವಾಗಿ ನೋಡಿದ ಹಾಗೆ ಅನಿಸುವುದೇ ಇಲ್ಲ . ಹಾಗಾದರೆ ಕಡಲು - ಘಟ್ಟದ ನಡುವೆ ಏನಿದೆ ? ನಮ್ಮ ಉಭಯ ಜಿಲ್ಲೆಗಳಲ್ಲಿ ಸಮೃದ್ಧವಾಗಿ ಬೆಳೆದಿರುವ ಸಂಸ್ಕೃತಿಯು ವೈಶಿಷ್ಟ್ಯ ಪೂರ್ಣವಾದುದು . ಇಲ್ಲಿ ಜಾನಪದ ಮೂಲದ ಆಚರಣೆ , ನಂಬಿಕೆಗಳಿವೆ . ಆರಾಧನಾ ಕಲೆಗಳು ,ಪ್ರದರ್ಶನ ರಂಗ ಕಲೆಗಳಿವೆ . ಪರ್ವತ , ಗುಡ್ಡ , ಬೆಟ್ಟ , ಜಲಪಾತ , ಝರಿ , ನದಿ , ಹೊಳೆ , ಸಮುದ್ರ ಎಲ್ಲವೂಇದೆ . ಆಹಾರ ಪದಾರ್ಥಗಳ ವೈವಿಧ್ಯತೆ ಇದೆ . ಆಕರ್ಷಕ ಉತ್ಪನ್ನಗಳಿವೆ .ಇತಿಹಾಸ ಹೇಳುವ ಪುರಾತನ ನಿರ್ಮಿತಿಗಳಿವೆ . ವೀರರ , ಪ್ರತಿಭಾವಂತರ , ಸಾಧಕರ , ದೈವೀಪುರುಷರ ಆಡುಂಬೊಲವಿದೆ . ಭವ್ಯವಾಗಿ ಬೆಳೆದ ದೇವಾಲಯ ಸಂಸ್ಕೃತಿಯಿದೆ . ಒಟ್ಟಿನಲ್ಲಿ ಮನಮೋಹಕ ಪರಿಸರದಲ್ಲಿ ಹಾಡು - ಕುಣಿತಗಳಿಗೆ ಪೂರಕವಾಗಿ ವಾದ್ಯಗಳ ಘೋಷ - ಇದಕ್ಕೆ ಬಣ್ಣದ ಮೆರಗಿನೊಂದಿಗೆ ಪ್ರತಿದಿನ ದೈವ - ದೇವಲೋಕಗಳು , ನಾಗ - ಬ್ರಹ್ಮ ಸನ್ನಿಧಾನಗಳು ಸನ್ನಿಹಿತವಾಗುತ್ತವೆ ,ಪುರಾಣ ಪ್ರಪಂಚ ತೆರೆದುಕೊಳ್ಳುತ್ತದೆ .ರಾತ್ರಿಗಳು ಬೆಳ್ಳಂಬೆಳಗಾಗುತ್ತವೆ .ಲೌಕಿಕದಲ್ಲಿ ಅಲೌಕಿಕ ಸಂಭವಿಸುತ್ತದೆ . ಇದನ್ನೆಲ್ಲ ನಮ್ಮ ಸಂಸ್ಕೃತಿ ಎಂಬ ಗೌರವದೊಂದಿಗೆ ಪ್ರವಾಸಿಗೆ ತೋರಿಸಬೇಕು . ವಿವಿಧ ಸೌಲಭ್ಯಗಳೊಂದಿಗೆ ಈ ಸಾಂಸ್ಕೃತಿಕ ಸಂಪತ್ತಿನ ಖಜಾನೆಯ ಬಾಗಿಲು ತೆರೆಯಬೇಕು . ಆಗ ನಮ್ಮ ಸಂಸ್ಕೃತಿ ಜಗಜ್ಜಾಹೀರಾಗುತ್ತದೆ . ಬಹುತ್ವದ , ಬಹು ಆಯಾಮಗಳುಳ್ಳ ಒಂದು ಸಂಸ್ಕೃತಿ ಗೌರವಯುತವಾಗಿ ಪ್ರಸ್ತುತಪಡುವುದು ಹೆಮ್ಮೆಯಲ್ಲವೆ . ಆದರೆ ಪ್ರಸ್ತುತಿ ಹೇಗಾಗುತ್ತಿದೆ ಗೊತ್ತಿಲ್ಲ . ಅಂತಹ ಯಾವುದೇ ಮಾಹಿತಿ ಇಲ್ಲ . ನದಿಯಲ್ಲಿ ಸಾಹಸದ , ರೋಚಕ ದೋಣಿಪ್ರವಾಸದ ಬಗ್ಗೆ ಕೇಳಿ ಬರುತ್ತದೆ , ಸಮುದ್ರದಲ್ಲಿ ಬೋಟಿಂಗ್ ನೋಡ ಸಿಗುತ್ತದೆ . ರೆಸಾರ್ಟ್ ಗಳೂ ಇವೆ. ಬೇಕಾದಷ್ಟು ಬೀಚ್ ಉತ್ಸವಗಳು ಕಡಲ ಕಿನಾರೆಯ ಉದ್ದಕ್ಕೂ ನಡೆಯುತ್ತವೆ .ಬೈಕ್ ರಾಲಿಗಳು ಸಂಘಟಿಸಲ್ಪಡುತ್ತವೆ . ಅಷ್ಟಕ್ಕೆ ಸೀಮಿತವೇ ?
ಸೈಬ್ರಕಟ್ಟೆ : ವಿಶ್ವ ಔಷಧಿಕಾರರ ದಿನಾಚರಣೆಯ ಅಂಗವಾಗಿ ಫಾರ್ಮಸಿಸ್ಟ್ ಸತೀಶ್ ಶೆಟ್ಟಿಗೆ ಸನ್ಮಾನ
Posted On: 26-09-2021 11:18AM
ಉಡುಪಿ : ವಿಶ್ವ ಔಷಧಿಕಾರರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಸೈಬ್ರಕಟ್ಟೆಯಿಂದ ಸರಕಾರಿ ಆಸ್ಪತ್ರೆ ಸೈಬ್ರಕಟ್ಟೆಯ ಫಾರ್ಮಸಿಸ್ಟ್ ಸತೀಶ್ ಶೆಟ್ಟಿ ಇವರನ್ನು ಗೌರವಪೂರ್ಣವಾಗಿ ಸನ್ಮಾನಿಸಲಾಯಿತು.
ಪಾಲಿಟೆಕ್ನಿಕ್ ಶಿಕ್ಷಣದಿಂದ ಖಚಿತ ಉದ್ಯೋಗ : ಸಚಿವ ಡಾ. ಅಶ್ವಥ್ ನಾರಾಯಣ್
Posted On: 26-09-2021 11:10AM
ಕಾಪು : ಪಾಲಿಟೆಕ್ನಿಕ್ ಶಿಕ್ಷಣ ಪಡೆಯುವುದರಿಂದ ವಿದ್ಯಾರ್ಥಿಗಳಿಗೆ ಖಚಿತವಾಗಿ ಉದ್ಯೋಗ ಪಡೆಯಬಹುದಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಸೇರ್ಪಡೆಗೊಂಡು ಅದರ ಪ್ರಯೋಜನ ಪಡೆಯುವಂತೆ , ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ಐಟಿ & ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿದರು. ಅವರು ಇಂದು ಬೆಳಪುನಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 21 ನೇ ಶತಮಾನದ ಅವಶ್ಯಕತೆಗಳಿಗೆ ಅನುಗುಣವಾಗಿ ಕೋರ್ಸ್ ಗಳನ್ನು ಅಳವಡಿಸಿಕೊಂಡಿದ್ದು ,ಈ ಕೋಸ್೯ಗಳನ್ನು ಅಳವಡಿಸಿಕೊಳ್ಳುವ ಮೊದಲು ವಿವಿಧ ಪ್ರಸಿದ್ದ ಕೈಗಾರಿಕೆಗಳ ಮುಖ್ಯಸ್ಥರು ಮತ್ತು ಕೈಗಾರಿಕಾ ತಂತ್ರಜ್ಞರೊಂದಿಗೆ ಚರ್ಚಿಸಿ , ಮುಂದಿನ ದಿನಗಳಲ್ಲಿ ತಂತ್ರಜ್ಞಾನದ ಬಳಕೆಗೆ ಅಗತ್ಯವಿರುವ ಕೋಸ್೯ಗಳನ್ನು ಮಾರ್ಪಡಿಸಿ, ಮರು ಸಿದ್ದಪಡಿಸಿದ್ದು, ದೇಶದಲ್ಲಿ ಈ ರೀತಿ ಇಡೀ ಪಠ್ಯವನ್ನು ಮಾರ್ಪಡಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ ಎಂದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನು ವೀಕ್ಷಿಸಿದ ತಹಸೀಲ್ದಾರ್
Posted On: 25-09-2021 10:53AM
ಕಾಪು : ಇಲ್ಲಿನ ತಹಸೀಲ್ದಾರ್ ಪ್ರದೀಪ್ ಎಸ್.ಕುರುಡೇಕರ್ ಅವರು ಇಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಭರದಿಂದ ಸಾಗುತ್ತಿರುವ ದೇವಳದ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.
ಸಂತ ಮೇರಿ ಮಹಾವಿದ್ಯಾಲಯದಲ್ಲಿ ಎರಡನೇ ಡೋಸ್ ಲಸಿಕಾ ಅಭಿಯಾನ
Posted On: 25-09-2021 10:47AM
ಶಿರ್ವ : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್ಸಿಸಿ, ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಎರಡನೇ ಡೋಸ್ ಲಸಿಕಾ ಅಭಿಯಾನವನ್ನು ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ, ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಸೆಪ್ಟೆಂಬರ್ 21ರಿಂದ ಆಯೋಜಿಸಲಾಯಿತು.
ಶಿರ್ವ ಸಂತ ಮೇರಿ ಮಹಾವಿದ್ಯಾಲಯ - ಬೀಳ್ಕೊಡುಗೆ ಸಮಾರಂಭ
Posted On: 25-09-2021 10:37AM
ಶಿರ್ವ: ವಿದ್ಯಾರ್ಥಿಗಳ ಜೀವನದಲ್ಲಿ ಅಮೂಲ್ಯವಾದ ಶಿಕ್ಷಣವೆಂದರೆ ಅದು ಪದವಿ ಶಿಕ್ಷಣ ವಾಗಿರುತ್ತದೆ. ಕಲಿಕೆಯ ಜೊತೆಗೆ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳಲು ಕಾಲೇಜು ಶಿಕ್ಷಣದಲ್ಲಿ ಅನೇಕ ಅವಕಾಶಗಳಿವೆ. ಆಟ-ಪಾಠದ ಜೊತೆಗೆ ಜೀವನದ ಪಾಠವನ್ನು ಕಲಿಯಬೇಕಾಗಿರುವುದು ಇಂದು ಅಗತ್ಯವಾಗಿದೆ. ವಿದ್ಯಾರ್ಥಿ ದೆಸೆಯಲ್ಲಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಗುರುಹಿರಿಯರ ಮಾರ್ಗದರ್ಶನವನ್ನು ಪಡೆದು ಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗಬೇಕು ಎಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ಅಂತಿಮ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಶಿರ್ವ ಪಂಜಿಮಾರು ಮಾಣಾಯಿ ದೊಡ್ಡಮನೆ ವತ್ಸಲಾ ಎಸ್.ಶೆಟ್ಟಿ ನಿಧನ
Posted On: 22-09-2021 09:54PM
ಕಾಪು : ಕಾಪು ಪೂವಣಿಗುತ್ತು, ಸುರೇಶ್ ಜಿ.ಶೆಟ್ಟಿಯವರ ಧರ್ಮಪತ್ನಿ, ಶಿರ್ವ ಪಂಜಿಮಾರು ಮಾಣಾಯಿ ದೊಡ್ಡಮನೆ ವತ್ಸಲಾ ಎಸ್.ಶೆಟ್ಟಿ ಇವರು ಇಂದು (22-9-21)ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.
