Updated News From Kaup

ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದಿಂದ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Posted On: 19-09-2021 02:17PM

ಉಡುಪಿ : ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಉಡುಪಿ ಜಿಲ್ಲೆ ವತಿಯಿಂದ ವೃತ್ತಿ ಭಾಂದವರ ಮಕ್ಕಳಿಗೆ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಶಿರ್ವ : ಹಿಂದೂ ಜೂನಿಯರ್ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ 2 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ, 50 ಸಾವಿರ ಆರ್ಥಿಕ ಸಹಾಯ, ಅಭಿನಂದನೆ, ಸನ್ಮಾನ

Posted On: 19-09-2021 02:02PM

ಕಾಪು : ಶಿರ್ವದ ಹಿಂದೂ ಜೂನಿಯರ್ ಕಾಲೇಜಿನ ಹಳೆವಿದ್ಯಾರ್ಥಿ ಸಂಘದಿಂದ ಸತತ ಏಳನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ 8ನೆ ತರಗತಿಯ ವಿದ್ಯಾರ್ಥಿಗಳಿಗೆ ಹೊಸ ಸಮವಸ್ತ್ರ ವಿತರಿಸುವ ಸಲುವಾಗಿ ರೂಪಾಯಿ 50 ಸಾವಿರ ವನ್ನು ಮುಖ್ಯೋಪಾಧ್ಯಾಯಿನಿ ವಸಂತಿ ಬಾಯಿಯವರಿಗೆ ಹಸ್ತಾ0ತರಿಸಲಾಯಿತು.

ಪ್ರಕಟನೆ : ನಮ್ಮ ಜವನೆರ್ ವಾಟ್ಸಾಪ್ ಗ್ರೂಪ್ ಮೂಡುಬೆಳ್ಳೆ ಮತ್ತು ರಾಮ್ ಸೇನಾ ತಂಡದ ಸಭೆ

Posted On: 18-09-2021 06:47PM

ಕಾಪು : ನಮ್ಮ ಜವನೆರ್ ವಾಟ್ಸಾಪ್ ಗ್ರೂಪ್ ಮೂಡುಬೆಳ್ಳೆ ಮತ್ತು ರಾಮ್ ಸೇನಾ ಕಾರ್ಯಕರ್ತರು ತಂಡದ ಸಭೆಯನ್ನು ಸೆಪ್ಟೆಂಬರ್ 19 (ಭಾನುವಾರ) ಸಂಜೆ 3 ಗಂಟೆಗೆ ನಿಗದಿಪಡಿಸಲಾಗಿದ್ದು ತಂಡದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸುತೀಶ್ ಕಾರ್ಕಳ ಇವರು ಕಾಪು ನ್ಯೂಸ್ ವೆಬ್ ಪೋರ್ಟಲ್ ಗೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣನ ಆರ್ಭಟ : ಹವಾಮಾನ ಇಲಾಖೆ ಮುನ್ಸೂಚನೆ

Posted On: 18-09-2021 01:17PM

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಶಿರ್ವ : ಸ್ಪರ್ಧೆಗಳ ಮೂಲಕ ವ್ಯಕ್ತಿತ್ವ ವಿಕಸನ ವೃದ್ಧಿ- ಡಾ| ಹೆರಾಲ್ಡ್ ಐವನ್ ಮೋನಿಸ್

Posted On: 18-09-2021 01:10PM

ಶಿರ್ವ: ಪ್ರತಿಯೊಂದು ಕ್ಷೇತ್ರದಲ್ಲಿ ಕಂಪ್ಯೂಟರ್ ಬಳಕೆಯ ಹೆಚ್ಚುತ್ತಿರುವ ಕಾರಣ ಕಂಪ್ಯೂಟರ್ ಕಲಿಕೆಯ ಅವಶ್ಯಕತೆ ಇಂದು ಅಗತ್ಯವಾಗಿದೆ ಜೊತೆಗೆ ಶೈಕ್ಷಣಿಕ ಪ್ರಗತಿಯನ್ನು ವಿದ್ಯಾರ್ಥಿಗಳು ಸಾಧಿಸಿ, ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು.ಇತ್ತೀಚೆಗೆ ಬದಲಾದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಉದ್ದೇಶಿಸಿ, ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಕಂಪ್ಯೂಟರ್ಗಳನ್ನು ಹೆಚ್ಚಾಗಿ ಬಳಸಿಕೊಂಡು ಸಮಾಜಕ್ಕೆ ಬೇಕಾಗುವ ತಂತ್ರಜ್ಞಾನವನ್ನು ರೂಪಿಸಿ, ಸಂಶೋಧನಾ ಮನಸ್ಥಿತಿ ಬೆಳೆಸಿಕೊಂಡು ಉತ್ತಮ ಉದ್ಯೋಗ ಪಡೆಯಬೇಕೆಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ ಮತ್ತು ಐಟಿ ಕ್ಲಬ್ ಸಂಯುಕ್ತವಾಗಿ ಏರ್ಪಡಿಸಿದ್ದ ಐಟಿ ಸ್ಪರ್ಧೆಗಳು-ಬಹುಮಾನ ವಿತರಣೆ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಇಂದು : ಶ್ರೀ ವೆಂಕಟರಮಣ ದೇವಸ್ಥಾನ ಕಾಪುವಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಭೇಟಿ

Posted On: 18-09-2021 12:59PM

ಕಾಪು : ಇಂದು (ಸೆಪ್ಟೆಂಬರ್18) ಶನಿವಾರ ಸಂಜೆ 6 ಗಂಟೆಗೆ ಶ್ರೀ ವೆಂಕಟರಮಣ ದೇವಳಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪೂಜ್ಯ ಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಲಿರುವರು.

ಕಾಪು : ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ, ಆರೋಗ್ಯ ಮಾಹಿತಿ ಶಿಬಿರ

Posted On: 18-09-2021 11:09AM

ಕಾಪು : ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ ಕೆ ಎಮ್ ಸಿ ಮಣಿಪಾಲ ಇದರಲ್ಲಿ ಅಂಗನವಾಡಿ ಕಾರ್ಯಕರ್ತೆ ಶಾರದಾ ಇವರಿಗೆ ಸನ್ಮಾನ ಹಾಗೂ ಆರೋಗ್ಯ ಮಾಹಿತಿ ಶಿಬಿರದಲ್ಲಿ ಕೆ ಎಮ್ ಸಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಾರ್ವಜನಿಕರಿಗೆ ಉಚಿತವಾಗಿ ಅತ್ಯುತ್ತಮವಾಗಿ ಸೇವೆ ಸಲ್ಲಿಸುತ್ತಿದ್ದು ಇವರ ಸೇವಾ ಕಾರ್ಯ ಶ್ಲಾಘನೀಯ.

ಪ್ರಧಾನಿ ಜನ್ಮದಿನದಂದು ತನ್ನ ರಿಕ್ಷಾದಲ್ಲಿ ಸಾರ್ವಜನಿಕರಿಗೆ ಉಚಿತ ಪ್ರಯಾಣ ಒದಗಿಸಿದ ಚಂದ್ರ ಮಲ್ಲಾರ್ : ಗಣ್ಯರಿಂದ ಶುಭಾಶಯ

Posted On: 18-09-2021 10:34AM

ಕಾಪು : ಕಾಪು ಮಂಡಲ ಬಿಜೆಪಿ ಕಾರ್ಯದರ್ಶಿ, ಪುರಸಭಾ ನಾಮನಿರ್ದೇಶಿತ ಸದಸ್ಯರಾದ ಚಂದ್ರ ಮಲ್ಲಾರ್ ಇವರು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದಂದು ಪ್ರತೀ ವರ್ಷ 5 ಕಿಮೀ ವ್ಯಾಪ್ತಿಯಲ್ಲಿ ತನ್ನ ರಿಕ್ಷಾದಲ್ಲಿ ಸಾರ್ವಜನಿಕರಿಗೆ ಉಚಿತ ಪ್ರಯಾಣ ಒದಗಿಸುತ್ತಿದ್ದು ನಿನ್ನೆಯ ದಿನ ಬೆಳಿಗ್ಗೆ ಅದರ ಚಾಲನಾ ಕಾರ್ಯಕ್ರಮ‌ ನಡೆಸಲಾಯಿತು.

ನೋಂಪು - ಅನಂತವ್ರತ

Posted On: 18-09-2021 10:21AM

| ಅನಂತಾನಂತ ದೇವೇಶ ......| ' ಕ್ಷೀರಸಾಗರದಲ್ಲಿ ಮಹಾಶೇಷನ ಮೇಲೆ ಮಲಗಿರುವ ಶ್ರೀಮನ್ನಾರಾಯಣ' ಈ ನೋಟ ಅಥವಾ ದೃಶ್ಯದ ಯಥಾವತ್ತಾದ ಪರಿಕಲ್ಪನೆ - ಅನುಸಂಧಾನದೊಂದಿಗೆ ನೆರವೇರುವ ಉಪಾಸನೆಯೇ 'ಶ್ರೀಮದನಂತವ್ರತ' , 'ಅನಂತವ್ರತ, ಅಥವಾ 'ನೋಂಪು'. ಭಾದ್ರಪದ ಶುದ್ಧ ಚತುರ್ದಶಿ ತಿಥಿಯಲ್ಲಿ 'ಅನಂತ ಚತುರ್ದಶಿ' ಆಚರಣೆ .ಇದು ವ್ರತವಾಗಿ ನೆರವೇರುತ್ತದೆ . ಕ್ಷೀರ ಸಾಗರವನ್ನು ಸಾಂಕೇತಿಸುವ ಜಲ ಪೂರಿತ ಕಲಶ . ಅದರ ಮೇಲೆ ದರ್ಭೆಯಿಂದ ನಿರ್ಮಿಸಿರುವ ಏಳು ಹೆಡೆಯುಳ್ಳ ಶೇಷಾಕೃತಿ . ಈ ಶೇಷಾಕೃತಿಯ ಮೇಲೆ ಶಾಲಗ್ರಾಮ .ಈ ಕಲ್ಪನೆಯಲ್ಲಿ ಅನಂತನಾಮಕನಾದ ಶೇಷನ ಮೇಲೆ ಶಯನ ಮಾಡಿದ ಅನಂತಪದ್ಮನಾಭನ ಚಿಂತನೆಯೊಂದಿಗೆ ಆರಾಧನೆ ನೆರವೇರುವುದು .ವೈಕುಂಠವನ್ನೆ ಸಾಕಾರ ಗೊಳಿಸುವ , ವಾಸ್ತವದ ಸ್ಥಾಪನೆಯಾಗಿ ವ್ರತ ನಡೆಯುವುದು . ಲೌಕಿಕದಲ್ಲಿ ಅಲೌಕಿಕವನ್ನು ನಿರ್ಮಿಸುವ ವೈದಿಕದ ಉಪಾಸನಾ ವಿಧಾನ ಅದ್ಭುತ.

ರೋಟರಿ ಕಲ್ಯಾಣಪುರ ವತಿಯಿಂದ ಭಾರತ ರತ್ನ ಸರ್.ಎಮ್ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ

Posted On: 18-09-2021 09:46AM

ಉಡುಪಿ : ರೋಟರಿ ಕ್ಲಬ್ ಕಲ್ಯಾಣಪುರ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಭಾರತ ರತ್ನ ಸರ್.ಎಮ್ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆಯನ್ನು ಆಚರಿಸಿ ಗೌರವ ಸಲ್ಲಿಸಲಾಯಿತು. ಕ್ಲಬ್ಬಿನ ಸಭಾ ಭವನದಲ್ಲಿ ಜರುಗಿದ ಈ ಸಮಾರಂಭದಲ್ಲಿ ಎಬಿಬಿ, ಅರೆವ, ಅಲ್ ಸ್ಪಾಮ್, ಜಿಇ ಕಂಪೆನಿ ಗಳಲ್ಲಿ ಯೋಜನಾ ಅಭಿಯಂತರರು ಆಗಿ ವಿಶೇಷ ಸೇವೆ ಸಲ್ಲಿಸಿರುವ ನಿವೃತ್ತ ಎಲೆಕ್ಟ್ರಿಕಲ್ ಇಂಜಿನಿಯರ್ ಮೂಡುತೋನ್ಸೆ ಯ ಸೊಲೊಮನ್ ವಿಜಯ್ ಲೂವಿಸ್ ಮತ್ತು ಉಡುಪಿ ಜಿಲ್ಲಾ ಇಂಜಿನಿಯರ್ಸ್ ಅಸೋಸಿಯೇಷನ್ ನ ಕಾರ್ಯದರ್ಶಿಗಳೂ, ಹೆಸರಾಂತ ಅರ್ಚನಾ ಪ್ರೊಜೆಕ್ಟ್ಸ್ ನ ಮುಖ್ಯಸ್ಥರುಗಳಾದ ಅಮಿತ್ ಅರವಿಂದ್ ಇವರುಗಳನ್ನು ಸನ್ಮಾನಿಸಲಾಯಿತು.