Updated News From Kaup
ಭಾರತ ವಿಶ್ವಕ್ಕೆ ಸಿರಿ ಧಾನ್ಯ ರಫ್ತು ಮಾಡುವ ಹಬ್ ಆಗಲಿದೆ -ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Posted On: 18-09-2021 09:37AM
ಉಡುಪಿ : ಮುಂದಿನ 2 ವರ್ಷದ ಅವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವುದರ ಜೊತೆಗೆ, ಉತ್ತಮ ಗುಣಮಟ್ಟದ, ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ, ಭಾರತವು ಇಡೀ ವಿಶ್ವಕ್ಕೆ ಸಿರಿಧಾನ್ಯಗಳನ್ನು ರಫ್ತು ಮಾಡುವ ಹಬ್ ಆಗಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಇಂದು ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಶಿವಮೊಗ್ಗ, ಭಾರತೀಯ ಕೃಷಿ ಅನುಸಂಧಾನ ಪರಿಷತ್ ನವದೆಹಲಿ, ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ, ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷ 2023 ಪೌಷ್ಠಿಕತೋಟ ಮತ್ತು ವೃಕ್ಷಾರೋಪಣ ಪ್ರಚಾರಾಂದೋಲನ ಕಾರ್ಯಕ್ರಮವನ್ನು, ಮಹಿಳೆಯರ ಮಡಿಲಿಗೆ ಸಿರಿಧಾನ್ಯಗಳನ್ನು ತುಂಬಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪಡುಬಿದ್ರಿ ಠಾಣಾ ಎಸೈ ಆಗಿ ಅಶೋಕ್ ಕುಮಾರ್ ಅಧಿಕಾರ ಸ್ವೀಕಾರ
Posted On: 18-09-2021 09:20AM
ಪಡುಬಿದ್ರಿ : ಇಲ್ಲಿನ ಪೊಲೀಸ್ ಠಾಣಾ ಎಸೈ ಆಗಿ ಉಡುಪಿ ನಗರದಲ್ಲಿ ಕರ್ತವ್ಯದಲ್ಲಿದ್ದ ಅಶೋಕ್ ಕುಮಾರ್ ನೇಮಕಗೊಂಡಿದ್ದಾರೆ. ಕಳೆದ ಹದಿನಾಲ್ಕು ತಿಂಗಳಿಂದ ಕರ್ತವ್ಯದಲ್ಲಿದ್ದ ದಿಲೀಪ್ ಅಧಿಕಾರ ಹಸ್ತಾಂತರ ಮಾಡಿದ್ದಾರೆ.
ಪೊಲಿಪು ಶಾಲೆಯ ಶಾಲಾಭಿವೃದ್ಧಿ ಸಮಿತಿಗೆ ತಡೆ: ಕಾಪುವಿನಲ್ಲಿ ಪತ್ರಿಕಾಗೋಷ್ಠಿ
Posted On: 17-09-2021 10:10PM
ಕಾಪು : ಪೊಲಿಪು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯು ಶಿಕ್ಷಣ ಇಲಾಖೆ ನಿಯಮಾನುಸಾರ ರಚನೆಯಾಗಿದ್ದು, ಯಾವುದೇ ಸ್ಪಷ್ಟ ಕಾರಣ ನೀಡದೆ ತಡೆಹಿಡಿಯಲಾಗಿದೆ ಎಂದು ಎಸ್ಡಿಎಂಸಿ ಅಧ್ಯಕ್ಷ ರಾಜೇಶ್ ಜಿ. ಮೆಂಡನ್ ಬುಧವಾರ ಕಾಪು ಪ್ರೆಸ್ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.
ಪ್ರಧಾನ ಮಂತ್ರಿಗಳ ಜನ್ಮದಿನದ ಅಂಗವಾಗಿ ಗಿಡಗಳನ್ನು ನೆಟ್ಟು, ಗೋಪೂಜೆ ನೆರವೇರಿಸಿದ ಸುರೇಶ್ ಶೆಟ್ಟಿ ಗುರ್ಮೆ
Posted On: 17-09-2021 09:51PM
ಕಾಪು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೇವಾ ಕಾರ್ಯ ನಡೆಸುವಂತೆ ಪಕ್ಷದ ವರಿಷ್ಟರು ನೀಡಿದ ಸೂಚನೆಯಂತೆ ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಫಲ ನೀಡುವ ಗಿಡಗಳನ್ನು ನೆಟ್ಟು, ಗೋಪೂಜೆಯನ್ನು ನೆರವೇರಿಸಿದರು.
ಪ್ರಧಾನಮಂತ್ರಿಯವರ 71ನೇ ಹುಟ್ಟು ಹಬ್ಬದ ಪ್ರಯುಕ್ತ ಅಂಧರಿಗೆ ನೆರವು, ಉಚಿತ ಕಣ್ಣಿನ ತಪಾಸಣೆ, ಉಚಿತ ಶಸ್ತ್ರ ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ
Posted On: 17-09-2021 09:06PM
ಉಡುಪಿ : ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ 71ನೇ ಹುಟ್ಟು ಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಮಹಿಳಾ ಮೋರ್ಚಾ, ಕುಂದಾಪುರ ಮಹಿಳಾ ಮೋರ್ಚಾ, ಪ್ರಶಾಂತ್ ನೇತ್ರಾಲಯ ಇವರ ಸಹಯೋಗದಲ್ಲಿ ಅಂಧರಿಗೆ ನೆರವು, ಉಚಿತ ಕಣ್ಣಿನ ತಪಾಸಣೆ, ಉಚಿತ ಶಸ್ತ್ರ ಚಿಕಿತ್ಸೆ, ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮದಲ್ಲಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಜಿಲ್ಲಾ ಪಕ್ಷದ ಹಿರಿಯ ನಾಯಕರೊಂದಿಗೆ ಕರ್ನಾಟಕ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಕಟನೆ : ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಕಾಪು ಮಂಡಲ ವಿಶೇಷ ಕಾರ್ಯಕಾರಿಣಿ ಸಭೆ
Posted On: 17-09-2021 08:56PM
ಕಾಪು : ಹಿಂದುಳಿದ ವರ್ಗಗಳ ಮೋರ್ಚಾ ಕಾಪು ಮಂಡಲ ಇದರ ವಿಶೇಷ ಕಾರ್ಯಕಾರಿಣಿ ಸಭೆಯು ನಾಳೆ (ಸೆಪ್ಟೆಂಬರ್ 18) ಬೆಳಿಗ್ಗೆ 9 ಗಂಟೆಗೆ ಕಟಪಾಡಿ ಪಳ್ಳಿ ಗುಡ್ಡೆಯ ಜೇಸಿ ಭವನದಲ್ಲಿ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಮೋರ್ಚಾ ಕಾಪು ಮಂಡಲದ ಪ್ರಧಾನ ಕಾರ್ಯದರ್ಶಿ ರವಿ ಕೋಟ್ಯಾನ್ ಉದ್ಯಾವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅಖಿಲ ಭಾರತ ಹಿಂದೂ ಮಹಾಸಭಾ-ಕರ್ನಾಟಕದಿಂದ ಫೇಸ್ಬುಕ್ ನಲ್ಲಿ ನಾರಾಯಣಗುರುಗಳ ಭಾವಚಿತ್ರದೊಂದಿಗೆ ಅಸಭ್ಯ ಭಾಷೆ ಬಳಸಿದ ಪತ್ರಕರ್ತನ ವಿರುದ್ಧ ದೂರು ದಾಖಲು
Posted On: 17-09-2021 08:57AM
ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ ಬಾವ ಚಿತ್ರ ದೊಂದಿಗೆ ಅಸಂವಿಧಾನಾತ್ಮಕ ಪದ ಬಳಸಿ ಫೇಸ್ ಬುಕ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಅಸಂಖ್ಯಾತ ಬಿಲ್ಲವ ಸಮಾಜದ ಅವರ ಅನುಯಾಯಿಗಳ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ವಿಷಯವಾಗಿ ಕುಂಭಾಶಿಯ ಪತ್ರಿಕಾ ಸಂಪಾದಕರೋರ್ವರ ವಿರುದ್ಧ ಅಖಿಲ ಭಾರತ ಹಿಂದೂ ಮಹಾಸಭಾ-ಕರ್ನಾಟಕದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ. ಮಹಾಲಕ್ಷ್ಮಿ ಲೇಔಟ್ ಬೆಂಗಳೂರು ಅಧ್ಯಕ್ಷರಾದ ಎಸ್. ಮುರಳಿ ಬೆಂಗಳೂರಿನ ಬಸವೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬೃಹತ್ ಜನ ಜಾಗೃತಿ ಸಭೆಗೆ ರಾಮ್ ಸೇನಾ ಕುಂಟಾಡಿ ಘಟಕ ಬೆಂಬಲ
Posted On: 17-09-2021 08:05AM
ಕಾರ್ಕಳ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಕಳ ಪ್ರಖಂಡದ ಆಶ್ರಯದಲ್ಲಿ ಮತಾಂಧತೆಯ ವಿರುದ್ಧ ನಡೆಯಲಿರುವ ಬೃಹತ್ ಜನ ಜಾಗೃತಿ ಸಭೆಗೆ ರಾಮ್ ಸೇನಾ ಕುಂಟಾಡಿ ಘಟಕ ಬೆಂಬಲ ನೀಡಿದೆ.
ಶಿರ್ವ : ಡೊರಿನ್ ಡಿ'ಸಿಲ್ವಗೆ ಪದೋನ್ನತಿ
Posted On: 16-09-2021 10:53PM
ಕಾಪು : ಸಂತ ಮೇರಿ ಕಾಲೇಜು ಶಿವ೯ ಇಲ್ಲಿಯ ಆಡಳಿತ ಕಛೇರಿಯ ಸಿಬ್ಬಂದಿಯಾದ ಶ್ರೀಮತಿ ಡೊರಿನ್ ಡಿ'ಸಿಲ್ವ ಇವರನ್ನು ಕಾಲೇಜು ಆಡಳಿತ ಮಂಡಳಿಯಾದ, ಕ್ಯಾಥೊಲಿಕ್ ಶಿಕ್ಷಣ ಸೊಸೈಟಿ ಉಡುಪಿ (CESU) ಇವರು ಪದೋನ್ನತಿಗೊಳಿಸಿ ಕಾಲೇಜು ಆಡಳಿತ ಕಛೇರಿಯ ಅಧೀಕ್ಷಕರನ್ನಾಗಿ ನೇಮಕಗೊಳಿಸಿದೆ.
ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರಕ್ಕೆ ಕಾಪು ಕ್ಷೇತ್ರದಲ್ಲಿ ಗ್ರಾಮ ಸಮಿತಿ ರಚನೆ ಮಾಡಲು ಪ್ರಮುಖರ ಸಭೆ
Posted On: 16-09-2021 10:39PM
ಕಾಪು : ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಕಾಪು ವಿಧಾನ ಸಭಾ ವ್ಯಾಪ್ತಿಯ ಪ್ರತಿ ಗ್ರಾಮದಲ್ಲಿ ಗ್ರಾಮ ಸಮಿತಿ ರಚನೆ ಮಾಡಲು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಸಭೆ ನಡೆಯಿತು.
