Updated News From Kaup

ಯುವ ಜಾದೂಗಾರ ಪ್ರಥಮ್ ಕಾಮತ್ ಕಟಪಾಡಿ ಹಸ್ತದಿ ಮೂಡಿದ ಅರಿಶಿಣ ಗಣಪ

Posted On: 09-09-2021 03:39PM

ಕಾಪು : ಅರಿಶಿಣ ಗಣಪತಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆ ಯಂತೆ 10ಲಕ್ಷ ಅರಿಶಿಣ ಗಣಪತಿ ಅಭಿಯಾನದಲ್ಲಿ ಕಟಪಾಡಿ ಪ್ರಥಮ್ ಕಾಮತ್ ಇವರಿಂದ ಅರಶಿನ ಗಣಪತಿ ರಚಿಸಲ್ಪಟ್ಟಿದೆ.

ಎಳತ್ತೂರು : ಕಾಲಗರ್ಭದಲ್ಲಿ ಕಳೆದುಹೋಗಿರುವ ದೈವಗಳ ಸೊತ್ತುಗಳು ಪತ್ತೆ!

Posted On: 09-09-2021 03:18PM

ಮೂಲ್ಕಿ : ಮೂಲ್ಕಿ ಒಂಬತ್ತು ಮಾಗಣೆಯ ಎಳತ್ತೂರು ಗ್ರಾಮದಲ್ಲಿ ಕಾಲಗರ್ಭದಲ್ಲಿ ಮರೆಮಾಚಿರುವ ಎಳತ್ತೂರು ಕಾಪೇಡಿ ಗುತ್ತುವಿನ ಕುಟುಂಬವು ಹಲವಾರು ವಿಭಾಗಗಳಾಗಿ, ತದನಂತರ ಒಬ್ಬರಿಗೊಬ್ಬರಿಗೆ ಪರಿಚಯವಾಗಿ, ಕಳೆದ ಡಿಸೆಂಬರ್ ತಿಂಗಳಿನಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆಯನ್ನು ಇಡಲಾಗಿತ್ತು.

ಉಡುಪಿ ಹೆಲ್ಪ್ ಲೈನ್ 4 ನೇ ವಷ೯ದ ಸಂಭ್ರಮದ ಅಂಗವಾಗಿ ಕೃಷ್ಣಾನುಗ್ರಹ ಅನಾಥಾಶ್ರಮದಲ್ಲಿ ಮಕ್ಕಳಿಗೆ ಊಟ, ಉಪಾಹಾರ ಮತ್ತು ಕಿಟ್ ವಿತರಣೆ

Posted On: 09-09-2021 01:42PM

ಉಡುಪಿ : ಹಸಿದವರ ಬಾಳಿನ ಆಶಾಕಿರಣವಾದ ಉಡುಪಿ ಹೆಲ್ಪ್ ಲೈನ್ (ರಿ.)ನ 4ನೇಯ ವಷ೯ದ ಸಂಭ್ರಮದ ಅಂಗವಾಗಿ ಅನಾಥ ಮಕ್ಕಳ ಬಾಳಿನ ಆಶಾಕಿರಣವಾದ ಉಡುಪಿ ಯ ಸಂತೆಕಟ್ಟೆಯ ಕೃಷ್ಣಾನುಗ್ರಹ ಅನಾಥಾಶ್ರಮದಲ್ಲಿ ಮಕ್ಕಳಿಗೆ ಊಟ, ಚಹಾ-ತಿಂಡಿ, ಸಿಹಿತಿಂಡಿ, ಬಿಸ್ಕತ್, ಹಣ್ಣುಹಂಪಲು ನೀಡಿ ಮಕ್ಕಳ ಜೊತೆ ಆಚರಿಸಲಾಯಿತು. ಇದೇ ಸಂದರ್ಭ ಕೆ.ಜಿ ರೋಡ್ ಸಮೀಪ ದಿ ಸುಬ್ರಮಣ್ಯ ಆಚಾರ್ಯ ಅವರ ತಾಯಿಗೆ ಆಹಾರ ಸಾಮಗ್ರಿಗಳ ಕಿಟ್ ನೀಡಲಾಯಿತು.

ಪಡುಬಿದ್ರಿ : ಯುವವಾಹಿನಿ ಘಟಕದ ಪದಗ್ರಹಣ

Posted On: 09-09-2021 12:52PM

ಪಡುಬಿದ್ರಿ : ನಮಗಿಂತ ದುರ್ಬಲರನ್ನು ಅಣಕಿಸುವುದಕ್ಕಿಂತ ಅವರನ್ನು ನಮ್ಮೊಂದಿಗೆ ಜೊತೆಯಾಗಿಸುವ ಪ್ರಯತ್ನ ಮಾಡಬೇಕಾಗಿದೆ. ಸ್ವಾಭಿಮಾನದ ಬದುಕಿಗೆ ಮೌಲ್ಯಾಧಾರಿತ ಶಿಕ್ಷಣವು ಭೂಷಣ. ಅದ್ಧೂರಿತನ, ಜನ ಸೇರಿಸುವಿಕೆಯ ಅವಶ್ಯಕತೆಗಿಂತ ಕಾರ್ಯಕ್ರಮದ ಅರಿವು ಜನರಲ್ಲಿ ಮೂಡಿಸಬೇಕಾಗಿದೆ ಎಂದು ಯುವವಾಹಿನಿ (ರಿ.)ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಡಾ|ರಾಜಾರಾಮ್ ಕೆ.ಬಿ. ಹೇಳಿದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮುದ್ದು ಕೃಷ್ಣ, ರಾಧೆ- ಕೃಷ್ಣ, ಮತ್ತು ಯಶೋಧ-ಕೃಷ್ಣ ಸ್ಪರ್ಧಾ ಕಾರ್ಯಕ್ರಮ

Posted On: 09-09-2021 10:51AM

ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ , ಇನ್ನರ್ ವೀಲ್ ಕ್ಲಬ್ ಹಾಗು ರೋಟರಿ ಸಮುದಾಯದಳ ಇದರ ಜಂಟಿ ಸಹಯೋಗದಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮುದ್ದು ಕೃಷ್ಣ, ರಾಧೆ- ಕೃಷ್ಣ, ಮತ್ತು ಯಶೋಧ- ಕೃಷ್ಣ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಿವಧೂತೆ ಗುಳಿಗೆ ನಾಟಕದಲ್ಲಿ ಗುಳಿಗನ ಪಾತ್ರ ನಿರ್ವಹಿಸಿದ ಕನ್ನಡ ಕಿರುತರೆ ಹಾಗು ಚಲನಚಿತ್ರ ನಟ ಸ್ವರಾಜ್ ಶೆಟ್ಟಿ ಹಾಗು ಚಲನಚಿತ್ರ ನಟಿ ನವ್ಯ ಪೂಜಾರಿರವರನ್ನು ಸಾನ್ಮನಿಸಲಾಯಿತು. ಒಟ್ಟು 80 ಸ್ಪರ್ಧಾಳುಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ರೋಟರಿ ವಲಯ. ನಿಕಟ ಪೂರ್ವ ಸಹಾಯಕ ಗವರ್ನರ್ ನವೀನ್ ಅಮೀನ್ ಶಂಕರ್ ಪುರ , ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಅಡ್ವೆ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ ದೀಪಕ್ ಕೋಟ್ಯಾನ್ ಇನ್ನಾ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಕೇಸರಿ ಯುವರಾಜ್, ರೋಟರಿ ವಲಯ ಸಂಯೋಜಕ ರಮೀಜ್ ಹುಸೇನ್ ಪಡುಬಿದ್ರಿ ಗ್ರಾ.ಪಂ ಸದಸ್ಯರಾದ ಜ್ಯೋತಿ ಮೆನನ್ , ಶಶಿಕಲಾ, ಸುನಂದಾ ಸಾಲ್ಯಾನ್ ಕಾರ್ಯಕ್ರಮ ನಿರ್ದೇಶಕರಾದ ಗೀತಾ ಅರುಣ್, ಸ್ನೇಹ ಪ್ರವೀಣ್, ಸುಶ್ಮಿತಾ ಪಾದೆಬೆಟ್ಟು ಉಪಸ್ಥಿತರಿದ್ದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಮೂವರು ಗೌರವಾನ್ವಿತ ಶಿಕ್ಷಕರಿಗೆ ಗೌರವ ಸಮರ್ಪಣೆ

Posted On: 09-09-2021 10:13AM

ಉಡುಪಿ : ಕಲ್ಯಾಣಪುರ ರೋಟರಿ ಕ್ಲಬ್ ವತಿಯಿಂದ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ದಿನಕರ ಶೆಟ್ಟಿ, ಮತ್ತು ನಿವೃತ್ತ ಶಿಕ್ಷಕಿ ದೇವಕಿ ಎನ್. ಸರ್ಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಇಲ್ಲಿ ಉಪನ್ಯಾಸಕ ರಾಗಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀಪತಿ ಜೋಗಿ ಇವರುಗಳಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.

ಚೌತಿದಾನಿ ಕಟಿ ಇಲ್ಲ್ ಬುಡಂದೆ ಸಾರ್ಪತ್ಯ ಆವೊಂದುಪ್ಪೊಡು

Posted On: 09-09-2021 09:11AM

ಜಾನಪದದ ಸರಳ - ಮುಗ್ಧ ಕಲ್ಪನೆಯಿಂದ ವೈದಿಕದ ವೈಭವೋಪೇತ ಚಿಂತನೆಯವರೆಗೆ . ಬೇಟೆ ಸಂಸ್ಕೃತಿಯಿಂದ ತೊಡಗಿ ಆಧುನಿಕ ಜೀವನ - ವಿಧಾನದ ಹರವಿನಲ್ಲಿ ಮಣ್ಣಿನ ಮಗ ಮಹಾಕಾಯ ಮಹಾಗಣಪತಿಯ ಸ್ವೀಕಾರ - ಪೂಜಾ ವಿಧಾನಗಳ ರೋಚಕ ಇತಿಹಾಸ ವಿದೆ. ಒಂದು ಸಂಸ್ಕೃತಿಯ ಸಂಕೇತವಾಗಿ, ಒಬ್ಬಗಣವಾಗಿ, ಬ್ರಹ್ಮಣಸ್ಪತಿಯಾಗಿ, ಗಣಾಧ್ಯಕ್ಷನಾಗಿ ಈ ವಿನಾಯಕ ಆಧ್ಯಾತ್ಮಿಕ ಪ್ರಪಂಚದಲ್ಲಿ ಏರಿದ ಎತ್ತರ ಊಹನಾತೀತ. ಆಸ್ತಿಕ-ನಾಸ್ತಿಕ ಭೇದವಿಲ್ಲದೆ ಬಹುಮಾನ್ಯನಾದ ದೇವರು ಗಣಪತಿ. ಜಾತಿ-ಮತ-ಪಂಥಗಳ ಕಟ್ಟುಪಾಡುಗಳನ್ನು ಮೀರಿ ವಿಶ್ವವ್ಯಾಪಿಯಾಗಿ ತನ್ನ ಆಕರ್ಷಕ ವರ್ಚಸ್ಸಿನ ಮೂಲಕ ವಿಶ್ವವಂದ್ಯನಾದ ದೇವರು ವಿಶ್ವಂಭರ ಮೂರ್ತಿಯಾಗಿ ಬೆಳೆದದ್ದು, ಜನಮಾನಸದಲ್ಲಿ ಸ್ಥಾಯೀ ಸ್ಥಾನವನ್ನು ಪಡೆದದ್ದು ಮಾತ್ರ ಸತ್ಯ. ಮಾನವ ಬಯಸಿದ್ದೆಲ್ಲ ನಿರಾಯಾಸವಾಗಿ ಪ್ರಾಪ್ತಿಯಾಗಬೇಕು. ಜೀವನ ಸುಂದರ ಹಾಗೂ ನಿರರ್ಗಳವಾಗಿರಬೇಕೆಂದು ನಿರೀಕ್ಷಿಸುವುದರಿಂದಲೇ ನಿರಂತರತೆಗೆ ಭಂಗವಾದಾಗ, ಅಡ್ಡಿ-ಆತಂಕಗಳು ಎದುರಾದಾಗ ಕಾರ್ಯಾರಂಭಗಳಿಗೆ ವಿಘ್ನ-ವಿಡ್ಡೂರಗಳು ಬಂದಾಗ ವಿಘ್ನದ ಕುರಿತು ಗಮನ ಹರಿದಿರಬೇಕು. ಈ‌ ಪರಿಣಾಮವಾಗಿ ‘ವಿಘ್ನ ನಿವಾರಕ' ದೇವರೊಬ್ಬನು ಸಾಕಾರಗೊಂಡಿರಬೇಕು. ಭಾರತೀಯರಾದ ನಮಗೆ ಕೋಟ್ಯಂತರ ದೇವತೆ-ದೇವರುಗಳು ಆದರೂ ಗೊಂದಲವಿಲ್ಲದ ಆಧ್ಯಾತ್ಮಿಕ ಬದುಕು. ಇದು ಈ ಸಂಸ್ಕೃತಿಯ ವಿಚಾರಿಕ ವೈಶಾಲ್ಯ. ಈ ವಿಸ್ತೃತ ವ್ಯಾಪ್ತಿಯಲ್ಲಿ ಗಜಮುಖನಾದರೂ ಸುಮುಖನಾಗಿ ಆದಿಪೂಜಿತನು ಪ್ರಥಮ ಪೂಜೆಗೊಳ್ಳುತ್ತಾನೆ.ಅಮೂರ್ತವಾದುದರ ಮೂರ್ತ ಚಿಂತನೆ, ಅಲೌಕಿಕದ ಲೌಕಿಕ ದರ್ಶನ, ಪ್ರತಿಕೃತಿ ಆರಾಧನೆಗಳೆಲ್ಲ ವಿವಿಧ ಹಂತದಲ್ಲಿ ಅಭಿವೃದ್ಧಿ ಹೊಂದಿದಾಗಲೂ ನಮ್ಮ ಗಣಪ ಹಲವು ಸ್ಥಿತ್ಯಂತರ-ರೂಪಾಂತರಗಳಿಗೆ ಒಳಗಾದರೂ ಬೆಳೆದದ್ದು ಭವ್ಯವಾಗಿ. ಸಂಸ್ಕೃತಿಯ ಮೂಲದಲ್ಲೇ ಇದ್ದ ಅಥವಾ ಆವಿರ್ಭವಿಸಿದ ಒಂದು ಚಿಂತನೆ ಇದಾದುದರಿಂದ ಇದರ ಪರಿಣಾಮ ಇಷ್ಟು ತೀವ್ರವಾಗಿದೆ. ಗಾಢವಾಗಿ ಬೇರೂರಿದೆ.

ಮಣಿಪುರ : ಮೋಕ್ಷಗಿರಿ ಧಾರ್ಮಿಕ ಕ್ಷೇತ್ರದಲ್ಲಿ ಸ್ಮಶಾನ ಮತ್ತು ಡಂಪಿಂಗ್ ಯಾರ್ಡ್ ನಿರ್ಮಾಣಕ್ಕೆ ವಿಎಚ್ ಪಿ ಮತ್ತು ಬಜರಂಗದಳ ವಿರೋಧ

Posted On: 08-09-2021 10:59PM

ಕಟಪಾಡಿ : ಮಣಿಪುರ ಪಂಚಾಯತ್ ಸಾರ್ವಜನಿಕರ ವಿರೋಧ ಇದ್ದರೂ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಕುಂತಳನಗರದ ಮೋಕ್ಷಗಿರಿಯಲ್ಲಿ ಸ್ಮಶಾನ ಮತ್ತು ಎಸ್ ಎಲ್ ಆರ್ ಎಮ್ ಘಟಕ ಮಾಡಲು ಹೊರಟಿದ್ದು ಅಲ್ಲಿದ್ದ ಧಾರ್ಮಿಕ ಕಾರ್ಯಕ್ರಮಗಳ ಕುರುಹು ಆಗಿದ್ದ ಸಭಾ ವೇದಿಕೆ ಧ್ವಂಸಗೊಳಿಸಿದ್ದು ಖಂಡನೀಯವೆಂದು ವಿಶ್ವಹಿಂದು‌ಪರಿಷತ್ ಬಜರಂಗಳ ಅಭಿಪ್ರಾಯ ವ್ಯಕ್ತಪಡಿಸಿದೆ.

ಕುಂದಾಪುರ : ಸಾಮಾಜಿಕ ಜಾಲತಾಣದಲ್ಲಿ ನಾರಾಯಣಗುರುಗಳ ಬಗ್ಗೆ ಅವಹೇಳನಗೈದ ವ್ಯಕ್ತಿಯ ವಿರುದ್ಧ ದೂರು ದಾಖಲು

Posted On: 07-09-2021 10:27PM

ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಬಗ್ಗೆ ವ್ಯಕ್ತಿಯೋರ್ವರ ಮೇಲೆ ಕಿರಣ್ ಪೂಜಾರಿ ಎಂಬುವವರು ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಾನ್ವಿ ಭಟ್ ಗಾಯನದ ಮಾದುಕೋಡಿದ ಉಳ್ಳಾಯ ಭಕ್ತಿ ಹಾಡು ಬಿಡುಗಡೆ

Posted On: 07-09-2021 04:53PM

ಮಂಗಳೂರು : ಸಾನ್ವಿ ಕ್ರಿಯೆಷನ್ ಅರ್ಪಿಸುವ "ಮಾದುಕೊಡಿದ ಉಳ್ಳಾಯೇ" ತುಳು ಭಕ್ತಿ ಹಾಡು ಮಾದುಕೋಡಿ ಕೊರಗಜ್ಜ ಸಾನಿಧ್ಯದಲ್ಲಿ ಶ್ರೀ ವಿಜಯ ಸುವರ್ಣ ಗುರುಗಳ ದಿವ್ಯ ಹಸ್ತದಲ್ಲಿ ಬಿಡುಗಡೆಗೊಂಡಿತು.