Updated News From Kaup

ಯುಪಿಎಸ್‌ಸಿ, ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಶೀಘ್ರದಲ್ಲಿ ತರಬೇತಿ ; ಅರ್ಜಿಗಳನ್ನು ಸಲ್ಲಿಸಲು ಅಕ್ಟೋಬರ್ 21 ಕೊನೆಯ ದಿನ

Thumbnail
Posted On: 18 Oct 2021, 10:53 PM

ಉಡುಪಿ : ಉಡುಪಿ ಜಿಲ್ಲಾಡಳಿತದ ವತಿಯಿಂದ, ಭಾರತೀಯ ನಾಗರೀಕ ಸೇವಾ ಪರೀಕ್ಷೆ ( ಯುಪಿಎಸ್‌ಸಿ) ಮತ್ತು ಕರ್ನಾಟಕ ನಾಗರೀಕ ಸೇವಾ ಪರೀಕ್ಷೆ (ಕೆಪಿಎಸ್‌ಸಿ) ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಛಿಸುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ, ಶೀಘ್ರದಲ್ಲಿ ತರಬೇತಿಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಕೊನೆಯ ವರ್ಷದ ಪದವಿಯನ್ನು (ಯಾವುದೇ ಪದವಿ) ವ್ಯಾಸಂಗ ಮಾಡುತ್ತಿರುವ ಅಥವಾ ಪದವೀಧರರಾಗಿದ್ದು, ಉದ್ಯೋಗದಲ್ಲಿರುವ / ನಿರುದ್ಯೋಗಿ ವಿದ್ಯಾರ್ಥಿಗಳು ತರಬೇತಿಗೆ ಅರ್ಹರಾಗಿರುತ್ತಾರೆ. ಉಡುಪಿ ನಗರದ ಸಾರ್ವಜನಿಕ ಗ್ರಂಥಾಲಯನ್ನು ತರಬೇತಿ ಕೇಂದ್ರವಾಗಿಸಿಕೊಂಡು, ನಿಗಧಿಯಾಗಿರುವ ಪಠ್ಯಾನುಸಾರ ತರಗತಿಗಳು, ಗ್ರಂಥಾಲಯ, ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಪತ್ರಿಕೆಗಳು, ನಿಯತಕಾಲಿಕೆಗಳು, ಅಂರ್ತಜಾಲದ ವ್ಯಾಪಕ ಬಳಕೆ, ಗುಂಪು ಚರ್ಚೆಗಳು, ಇತ್ಯಾದಿ ಮೂಲಸೌಕರ್ಯ ಮತ್ತು ಅವಕಾಶಗಳನ್ನು ಕಲ್ಪಿಸಿಕೊಡಲಾಗುವುದು. ಈ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಯುಪಿಎಸ್‌ಸಿ/ ಕೆಪಿಎಸ್‌ಸಿ ಸೇರಿದಂತೆ ಯಾವುದೇ ಸ್ಪರ್ಧಾತ್ಮಕ ವಿಷಯಗಳಲ್ಲಿ ಪರಿಣಿತಿ ಪಡೆಯಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳಿಗೆ ಆನ್‌ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು udupi.nic.in ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅಕ್ಟೋಬರ್ 21 ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಎಬಿವಿಪಿ ಬಜಗೋಳಿ ಘಟಕದಿಂದ ಬಜಗೋಳಿ ಪದವಿಪೂರ್ವ ಕಾಲೇಜಿನ ಸಮಸ್ಯೆಯ ಕುರಿತು ಮನವಿ

Thumbnail
Posted On: 18 Oct 2021, 10:38 PM

ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ತಾಲೂಕಿನ ಬಜಗೋಳಿ ಘಟಕದಿಂದ ಕಾರ್ಕಳ ತಾಲೂಕಿನ ಬಜಗೋಳಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಎದುರಿಸುತ್ತಿದ್ದ ಶೌಚಾಲಯದ ಸಮಸ್ಯೆಯ ಕುರಿತು ಕಾಲೇಜು ಪ್ರಾಂಶುಪಾಲರಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಇತರೆ ಶೈಕ್ಷಣಿಕ ಸಮಸ್ಯೆಗಳ ಕುರಿತು ಸಮಾಲೋಚನೆ‌ ನಡೆಸಲಾಯಿತು.

ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಅನ್ನಸಂತರ್ಪಣೆ ಪುನರಾರಂಭ

Thumbnail
Posted On: 18 Oct 2021, 08:43 PM

ಕಟಪಾಡಿ: ಇಲ್ಲಿನ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಪ್ರತಿ ಸೋಮವಾರ ಹಾಗೂ ಶುಕ್ರವಾರಗಳಂದು ನಡೆಯುತ್ತಿದ್ದ ಅನ್ನಸಂತರ್ಪಣೆಯನ್ನು ಅ.18ರಿಂದ ಪುನರಾರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರತಿ ಸೋಮವಾರ ಮತ್ತು ಶುಕ್ರವಾರ ಈ ಸೇವೆ ನಿರಂತರವಾಗಿ ನಡೆಯಲಿದೆ.

ಕಾಪು ಪೋಲಿಸ್ ಠಾಣೆಯ ಆಯುಧ ಪೂಜೆಯಲ್ಲೂ ಕೋಮುಭಾವನೆ ಕಂಡದ್ದು ಸಿದ್ಧರಾಮಯ್ಯಗೆ ಮಾತ್ರ : ಲಾಲಾಜಿ‌ ಆರ್. ಮೆಂಡನ್

Thumbnail
Posted On: 18 Oct 2021, 08:24 PM

ಕಾಪು : ಇಲ್ಲಿನ ಪೊಲೀಸ್ ಆಯುಧ ಪೂಜೆ ದಿನ ಒಂದೇ ರೀತಿಯ ವಸ್ತ್ರ ಧರಿಸಿದ್ದರಲ್ಲಿ ಕೋಮುಭಾವನೆ ಕಂಡದ್ದು ಸಿದ್ಧರಾಮಯ್ಯಗೆ ಮಾತ್ರ. ಸಮಾಜದಲ್ಲಿ ಎರಡು ಪಂಗಡಗಳನ್ನು ಎತ್ತಿಕಟ್ಟುವುದರಲ್ಲಿ ಒಡೆದು ಆಳುವುದರಲ್ಲಿ ಸಿದ್ದರಾಮಯ್ಯ ನಿಸ್ಸಿಮರು, ಈ ಕಾಂಗ್ರೆಸ್ ಸಂಸ್ಕೃತಿಯಿಂದಾಗಿ ದ್ವಂದ್ವ ನೀತಿಯಿಂದ ಇಂದು ರಾಜ್ಯದಲ್ಲಿ ಕಾಂಗ್ರೆಸ್ ಅಧೋಗತಿಯಲ್ಲಿದೆ. ಕರ್ನಾಟಕ ಜಂಗಲ್ ರಾಜ್ಯವಾಗಿದ್ದು ಸಿದ್ದರಾಮಯ್ಯ ಅವಧಿಯಲ್ಲಿಯೇ ಹಲವಾರು ಹಿಂದೂ ಕಾರ್ಯಕರ್ತರ ಕೊಲೆಗಳಿಗೆ ಪೂರಕವಾಗಿ ನಿಂತಿತ್ತು ಕಾಂಗ್ರೆಸ್, ಮತಾಂಧ ಟಿಪ್ಪುವಿನ ಜಯಂತಿ ಆಚರಿಸಿ ರಾಜ್ಯದಲ್ಲಿ ಕೋಮು ಗಲಭೆ ಸೃಷ್ಟಿಸಿದ ಅವಕಾಶವಾದಿ ಸಿದ್ದರಾಮಯ್ಯಯವರಲ್ಲಿ ಪೊಲೀಸ್ ಇಲಾಖೆ, ಕಾಪು ಪೊಲೀಸರು ಪಾಠ ಕಲಿಯಬೇಕಾದದ್ದು ಏನಿಲ್ಲ. ಕಾಪು ಪೊಲೀಸರು ಕಾಪುವಿನಲ್ಲಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಸ್ವತಃ ತಮ್ಮದೇ ಪಕ್ಷದ ಮಾಜಿ ಸಚಿವರಾದ ವಿನಯ ಕುಮಾರ್‌ ಸೊರಕೆ ಕೂಡ ಈ ಧಾರ್ಮಿಕ ಸಂಭ್ರಮದಲ್ಲಿ ಪಾಲ್ಗೊಂಡಿದ್ದು, ನಾಟಕವೇ ? ಇಂತಹ ಪಿತೂರಿಯು ಬುದ್ಧಿವಂತರ ಜಿಲ್ಲೆಯಲ್ಲಿ ನಡೆಯುವುದಿಲ್ಲ. ಕ್ಷೇತ್ರದ ಶಾಸಕನಾಗಿ ಪೊಲೀಸ್ ಇಲಾಖೆಗೆ ಗೌರವ ಮತ್ತು ಪೊಲೀಸರಲ್ಲಿ ಆತ್ಮಸ್ಥೆರ್ಯ ತುಂಬಲು ಕಟಿಬದ್ಧನಾಗಿದ್ದೇನೆ. ಸಾಮರಸ್ಯ ಶಾಂತಿಯುತ ಕಾಪು ಕ್ಷೇತ್ರದಲ್ಲಿ ಸಿದ್ಧರಾಮಯ್ಯರು ಪೊಲೀಸರ ವಿರುದ್ಧ ಧರ್ಮದ ಪಂಗಡಗಳಾಗಿ ಒಡೆದು ಜನರನ್ನು ಎತ್ತಿ ಕಟ್ಟುವ ಕೀಳು ಮನಸ್ಥಿತಿಯ ದುಸ್ಸಾಹಸಕ್ಕೆ ಛೀಮಾರಿ, ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್.ಮೆಂಡನ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಿಕ್ಷಕರು ಬೇಕಾಗಿದ್ದಾರೆ : ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಕುತ್ಯಾರ್

Thumbnail
Posted On: 18 Oct 2021, 08:20 PM

ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕುತ್ಯಾರುವಿನ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಸಂಸ್ಥೆಗೆ ಎಂ.ಎ(ಇಂಗ್ಲಿಷ್), ಬಿ.ಎಡ್ ಮತ್ತು ಎಂ.ಎ (ಹಿಂದಿ), ಬಿ.ಎಡ್ ಪದವಿ ಪಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಬೋಧಿಸಿ 2-3 ವರ್ಷಗಳ ಅನುಭವ ಹೊಂದಿದವರು ತಮ್ಮ ಪರಿಚಯ ಮತ್ತು ಇತ್ತೀಚಿನ ಛಾಯಾಚಿತ್ರದೊಂದಿಗೆ ಅರ್ಜಿ ಸಲ್ಲಿಸಲು (suryachaitanyaga@gmail.com) ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ವಾಟ್ಸಾಪ್ ಸಂಖ್ಯೆ : 9686811946 ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಕುತ್ಯಾರ್, ಉಡುಪಿ ಜಿಲ್ಲೆ -574116

ಗ್ರಾಮೀಣ ಪ್ರದೇಶದ 18 ರಿಂದ 45 ರ ವಯೋಮಿತಿಯ ಯುವಕ ಯುವತಿಯರಿಗೆ ಉಚಿತ ಸ್ವ ಉದ್ಯೋಗ ತರಬೇತಿ ಶಿಬಿರ

Thumbnail
Posted On: 18 Oct 2021, 07:39 PM

ಉಡುಪಿ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಮಣಿಪಾಲ- ಕೆನರಾ ಬ್ಯಾಂಕ್ ಆರ್ ಸೆಟಿ (ಸಿಂಡ್ಆರ್ ಸೆಟಿ) ಇವರ ವತಿಯಿಂದ ಉಚಿತ ಸ್ವ ಉದ್ಯೋಗ ತರಬೇತಿಯು ಅಕ್ಟೋಬರ್18ರಿಂದ ನವೆಂಬರ್ 17ರ ವರೆಗೆ 30 ದಿನಗಳ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ನಡೆಯಲಿದೆ. ತರಬೇತಿಯಲ್ಲಿ ಪ್ರಾಯೋಗಿಕ ಕೌಶಲ್ಯದ ಜೊತೆಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ನೀಡಲಾಗುವುದು. ತರಬೇತಿಯ ನಂತರ ಸ್ವ ಉದ್ಯೋಗ ಪ್ರಾರಂಭಿಸಲು ಮಾರ್ಗದರ್ಶನ, ಸಹಕಾರ ನೀಡಲಾಗುವುದು. ಸ್ವ ಉದ್ಯೋಗ ಪ್ರಾರಂಭಿಸಲು ಸಾಲ ಸೌಲಭ್ಯದ ಅವಶ್ಯಕತೆ ಇದ್ದಲ್ಲಿ ಬ್ಯಾಂಕ್ ಲಿಂಕೇಜ್ ಮಾಡಿ ಕೊಡಲಾಗುವುದು ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತ ತರಬೇತಿ ನೀಡಲಿದ್ದು, ಆಸಕ್ತರು ಕೂಡಲೇ ಕರೆ ಮಾಡಿ ಅಥವಾ ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸ ಬಹುದಾಗಿದೆ. ಗ್ರಾಮೀಣ ಪ್ರದೇಶದ 18 ರಿಂದ 45 ರ ವಯೋಮಿತಿಯ ಯುವಕ ಯುವತಿಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಬಿ.ಪಿ.ಎಲ್ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಒಬ್ಬರಿಗೆ ಯಾವುದಾದರು ಒಂದು ತರಬೇತಿಯನ್ನು ಪಡೆಯಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 0820- 2570455, 9449862665, 8197694156 ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ https://docs.google.com/forms/d/e/1FAIpQLSfdoGNiTcI4sZP2IbLJ1fsw_iTTmyj8nY4pcNTt5iYyrezhDQ/viewform

ರೋಟರಿ ಸೈಬ್ರಕಟ್ಟೆಯ ವತಿಯಿಂದ ರೋಟರಿ ಮಾಜಿ ಸಹಾಯಕ ಗವರ್ನರ್ ಗಳ ಸಮಾಗಮ ಕಾರ್ಯಕ್ರಮ, ಸನ್ಮಾನ

Thumbnail
Posted On: 18 Oct 2021, 07:36 PM

ಉಡುಪಿ : ರೋಟರಿ ಸೈಬ್ರಕಟ್ಟೆಯ ವತಿಯಿಂದ ರೋಟರಿ ಮಾಜಿ ಸಹಾಯಕ ಗವರ್ನರ್ ಗಳ ಸಮಾಗಮ ಕಾರ್ಯಕ್ರಮವು ರೋಟರಿ ಭವನದಲ್ಲಿ ಜರುಗಿತು. ಈ ಸಂದರ್ಭದಲ್ಲಿ 7 ಮಾಜಿ ಸಹಾಯಕ ಗವರ್ನರುಗಳಾದ ದೇವಿದಾಸ ಶೆಟ್ಟಿಗಾರ್, ಚೇರ್ಕಾಡಿ ಅಶೋಕ್ ಕುಮಾರ್ ಶೆಟ್ಟಿ, ಚಂದ್ರ ನಾ, ಮೋಹನ್ ದಾಸ್ ಪೈ, ಆತ್ರಾಡಿ ದಿನೇಶ್ ಹೆಗ್ಡೆ, ಮಹೇಶ್ ಕುಮಾರ್, ಅಶೋಕ್ ಕುಮಾರ್ ಶೆಟ್ಟಿ ಮಟ್ಪಾಡಿ ಇವರುಗಳನ್ನು ಒಂದೇ ವೇದಿಕೆಯಲ್ಲಿ ವಲಯ 3 ರ ಸಹಾಯಕ ಗವರ್ನರ್ ಪದ್ಮನಾಭ ಕಾಂಚನ್ ಅವರು ಈ ಸಾಲಿನ ವಲಯ ಸೇನಾನಿಗಳಾದ ವಿಜಯ ಕುಮಾರ್ ಶೆಟ್ಟಿ, ಬ್ರಾನ್ ಡಿ ಸೋಜ ಜೊತೆಗೂಡಿ ಅಥಿತಿಗಳನ್ನು ಸನ್ಮಾನಿಸಿದರು. ಎಲ್ಲ 7 ಮಾಜಿ ಸಹಾಯಕ ಗವರ್ನರ್ ಗಳು ಮಾತನಾಡಿ ಅಣ್ಣಯ್ಯ ದಾಸ್ ಅವರ ಕೊಡುಗೆ ರೋಟರಿಗೆ ಅಪಾರವಾಗಿದ್ದು ನಿರಂತರ ಸೇವೆ ಗಳ ಮೂಲಕ ಗುರುತಿಸಿಕೊಂಡಿದ್ದಾರೆ ಹಾಗೂ ಈ ವರ್ಷ ರೋಟರಿ ಸೈಬ್ರಕಟ್ಟೆ ಹಲವು ಸೇವಾ ಪ್ರಾಜೆಕ್ಟ್ ಗಳ ಮೂಲಕ ರೋಟರಿ ಜಿಲ್ಲೆಯಲ್ಲೇ ಅತ್ಯುತ್ತಮವಾಗಿ ಗುರುತಿಸಿ ಕೊಂಡಿದ್ದಲ್ಲದೆ ಇನ್ನೂ ಮುಂದೆಯೂ ಸೇವಾ ಕಾರ್ಯಕ್ರಮಗಳನ್ನು ಹೆಚ್ಚೆಚ್ಚು ಮಾಡಿ ಅಂತ ಶ್ಲಾಘನೀಯ ನುಡಿಗಳನ್ನಾಡಿದರು.ಅಲ್ಲದೆ ಸೇವಾ ಕಾರ್ಯದಲ್ಲಿ ತಮ್ಮ ಬೆಂಬಲ ಕೂಡ ನೀಡುವುದಾಗಿ ಹೇಳಿದರು. ಪದ್ಮನಾಭ್ ಕಾಂಚನ್ ಅವರು ಮಾತನಾಡಿ ಇದೊಂದು ಅಭೂತ ಪೂರ್ವ ಕಾರ್ಯಕ್ರಮ ವಾಗಿದ್ದು ರೋಟರಿ ಸೈಬ್ರಕಟ್ಟೆಯ ಕಾರ್ಯವೈಖರಿ ಹಾಗೂ ಸದಸ್ಯರ ಭಾಗವಹಿಸುವಿಕೆಯ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ರೋಟರಿ ಅಧ್ಯಕ್ಷ ಯು ಪ್ರಸಾದ್ ಭಟ್ ವಹಿಸಿದ್ದರು. ಈ‌ ಸಂದರ್ಭ ಮಾತನಾಡಿದ ಅವರು ಅತಿಥಿಗಳು ನಮ್ಮ ರೋಟರಿ ಕ್ಲಬ್ ಬಗ್ಗೆ ಆಡಿದ ಶ್ಲಾಘನೀಯ ಮಾತಿನಿಂದ ಕ್ಲಬ್ ಗೆ ಜವಾಬ್ದಾರಿ ಹೆಚ್ಚಾಗಿದ್ದು ಇನ್ನೂ ಮುಂದೆಯೂ ಕೂಡ ಹಲವು ಕಾರ್ಯಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ನುಡಿದರು. ವರದರಾಜ್ ಶೆಟ್ಟಿ ನಿರೂಪಿಸಿ, ಅಣ್ಣಯ್ಯದಾಸ್ ವಂದಿಸಿದರು.

ಗ್ರಾಮೀಣ ಪ್ರದೇಶದ 18 ರಿಂದ 45 ರ ವಯೋಮಿತಿಯ ಯುವಕ ಯುವತಿಯರಿಗೆ ಉಚಿತ ಸ್ವ ಉದ್ಯೋಗ ತರಬೇತಿ ಶಿಬಿರ

Thumbnail
Posted On: 18 Oct 2021, 07:25 PM

ಉಡುಪಿ : ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಮಣಿಪಾಲ- ಕೆನರಾ ಬ್ಯಾಂಕ್ ಆರ್ ಸೆಟಿ (ಸಿಂಡ್ಆರ್ ಸೆಟಿ) ಇವರ ವತಿಯಿಂದ ಉಚಿತ ಸ್ವ ಉದ್ಯೋಗ ತರಬೇತಿಯು ದಿನಾಂಕ 18ರಿಂದ 17ರ ವರೆಗೆ 30 ದಿನಗಳ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ನಡೆಯಲಿದೆ. ತರಬೇತಿಯಲ್ಲಿ ಪ್ರಾಯೋಗಿಕ ಕೌಶಲ್ಯದ ಜೊತೆಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ನೀಡಲಾಗುವುದು. ತರಬೇತಿಯ ನಂತರ ಸ್ವ ಉದ್ಯೋಗ ಪ್ರಾರಂಭಿಸಲು ಮಾರ್ಗದರ್ಶನ, ಸಹಕಾರ ನೀಡಲಾಗುವುದು. ಸ್ವ ಉದ್ಯೋಗ ಪ್ರಾರಂಭಿಸಲು ಸಾಲ ಸೌಲಭ್ಯದ ಅವಶ್ಯಕತೆ ಇದ್ದಲ್ಲಿ ಬ್ಯಾಂಕ್ ಲಿಂಕೇಜ್ ಮಾಡಿ ಕೊಡಲಾಗುವುದು ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತ ತರಬೇತಿ ನೀಡಲಿದ್ದು, ಆಸಕ್ತರು ಕೂಡಲೇ ಕರೆ ಮಾಡಿ ಅಥವಾ ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸ ಬಹುದಾಗಿದೆ. ಗ್ರಾಮೀಣ ಪ್ರದೇಶದ 18 ರಿಂದ 45 ರ ವಯೋಮಿತಿಯ ಯುವಕ ಯುವತಿಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಬಿ.ಪಿ.ಎಲ್ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಒಬ್ಬರಿಗೆ ಯಾವುದಾದರು ಒಂದು ತರಬೇತಿಯನ್ನು ಪಡೆಯಲು ಅವಕಾಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 0820- 2570455, 9449862665, 8197694156 ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ https://docs.google.com/forms/d/e/1FAIpQLSfdoGNiTcI4sZP2IbLJ1fsw_iTTmyj8nY4pcNTt5iYyrezhDQ/viewform

ಕಾಪು ಯುವ ಕಾಂಗ್ರೆಸ್ ವತಿಯಿಂದ ಯುವ ಸ್ಪರ್ಶ ಕಾರ್ಯಕ್ರಮಕ್ಕೆ ಚಾಲನೆ, ಭಿತ್ತಿ ಪತ್ರ ಬಿಡುಗಡೆ

Thumbnail
Posted On: 18 Oct 2021, 09:49 AM

ಕಾಪು : ಗ್ರಾಮೀಣ ಕಾಂಗ್ರೆಸ್ ಮತ್ತು ಗ್ರಾಮೀಣ ಯುವ ಕಾಂಗ್ರೆಸ್ ಸಹಕಾರದಿಂದ ಗ್ರಾಮೀಣ ಮಟ್ಟದಲ್ಲಿ ಯುವಕರನ್ನು ಒಗ್ಗೂಡಿಸಿ ಸರಕಾರದಿಂದ ಸವಲತ್ತುಗಳ ಬಗ್ಗೆ ಜನರಿಗೆ ಮಾಹಿತಿ ನೀಡುವುದು, ಸ್ವಚ್ಚತಾ ಕಾರ್ಯಕ್ರಮ, ರಕ್ತದಾನ ಶಿಬಿರ, ಯುವಜನತೆಗೆ ಕ್ರೀಡಾ ಕೂಟ ಹಾಗು ಸಾಂಸ್ಕೃತಿಕ ಸ್ಪರ್ಧೆ, ಅರೋಗ್ಯ ತಪಾಸಣಾ ಶಿಬಿರ , ಮತದಾರರ ಪಟ್ಟಿ ಗೆ ನೂತನ ಮತದಾರರ ಸೇರ್ಪಡೆ ಮತ್ತು ತಿದ್ದುಪಡಿ, ಹಾಗು ಗ್ರಾಮದ ಅಭಿವೃದ್ಧಿ ಯ ಬಗ್ಗೆ ಸಮಾಲೋಚನೆ ಸಭೆಗಳನ್ನು ನಡೆಸುವುದು ಮೂಲಕ ಇಂತಹ ವಿನೂತನ ಯೋಜನೆ ಯನ್ನು ಕಾರ್ಯರೂಪಕ್ಕೆ ತರುವ ಮೂಲಕ ಯುವ ಕಾಂಗ್ರೆಸ್ ಕಾರ್ಯಕರ್ತ ರು ಗ್ರಾಮದ ಮಟ್ಟದ ಪಕ್ಷದ ವರ್ಚಸ್ಸು ಇನ್ನೂ ಷ್ಟು ಬಲಪಡಿಸುವುದರ ಜೊತಗೆ ಸಂಘಟನಾತ್ಮಕ ಕೆಲಸ ಕಾರ್ಯ ಗಳನ್ನು ಮಾಡಬೇಕಾಗಿದೆ. ಜನರಿಗೆ ಅಗತ್ಯ ಸೇವೆಯನ್ನು ನೀಡುವ ಮೂಲಕ ಗ್ರಾಮದ ಅಭಿವೃದ್ಧಿ ಗೆ ಯುವ ಸ್ಪರ್ಶವನ್ನು ನೀಡುವುದರೊಂದಿಗೆ ಯುವಕರಿಗೆ ಸಮಾಜಿಕ ಕೆಲಸ ಕಾರ್ಯ ಮೂಲಕ ಪಕ್ಷ ಸಂಘಟನೆಯ ಮಾಡುವ ಕಾರ್ಯ ಯಶ್ವಸಿಯಾಗಲಿ ಎಂದು ಕೆಪಿಸಿಸಿ ಕೊ- ಅರ್ಡಿನೇಟರ್ ನವೀನ್ ಚಂದ್ರ ಜೆ. ಶೆಟ್ಟಿ ಹೇಳಿದರು. ಅವರು ಕಾಪು ಯುವ ಕಾಂಗ್ರೆಸ್ ವತಿಯಿಂದ ಕಾಪು ರಾಜೀವ್ ಭವನದಲ್ಲಿ ಯುವಕರ ನಡೆ ಗ್ರಾಮದ ಅಭಿವೃದ್ಧಿ ಕಡೆ ಎಂಬ ಧ್ಯೇಯ ವಾಕ್ಯದಂತೆ ಕಾಪು ಕ್ಷೇತ್ರದ ಗಾಮೀಣ ಮಟ್ಟದಲ್ಲಿ ನಡೆಸುವ ವಿನೂತನ ಯೋಜನೆ ಯುವ ಸ್ಪರ್ಶ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಿತ್ತಿ ಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಅಧ್ಯಕ್ಷತೆ ವಹಿಸಿದ್ದರು. ಗಾಮೀಣ ಯುವ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡವರಿಗೆ ಆದೇಶ ಪತ್ರವನ್ನು ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಅಡ್ವೆ ವಿತರಿಸಿದರು. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ಸಿಗೆ ವಿಜ್ಞೇಶ್ ಆಚಾರ್ಯ ನೂತನವಾಗಿ ಸೇರ್ಪಡೆಗೊಂಡರು ಅವರನ್ನು ಪಕ್ಷದ ಶಾಲು ಹಾಕಿ ಬರಮಾಡಿಕೊಳ್ಳಲಾಯಿತು. ಕೆಪಿಸಿಸಿ ಕೊ- ಅರ್ಡಿನೇಟರ್ ದೇವಿಪ್ರಸಾದ್ ಶೆಟ್ಟಿ ಯುವ ಕಾಂಗ್ರೆಸ್ ಸದಸ್ಯರಿಗೆ ಗುರುತು ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೆಲ್ವಿನ್ ಡಿಸೋಜ, ಕೆಪಿಸಿಸಿ ಕೊ- ಅರ್ಡಿನೇಟರ್ ಅಬ್ದುಲ್ ಅಜೀಜ್ ಹೆಜಮಾಡಿ, ಕಾಪು ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಪುದ್ದೀನ್ ಶೇಕ್ , ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕರ್ಕೇರ, ಕಾಪು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾದ ಸುಲಕ್ಷಣ್ ಪೂಜಾರಿ, ಇರ್ವಿನ್ ಸೋನ್ಸ್, ಜಗದೀಶ್ , ಅಶ್ವಿನಿ ಬಂಗೇರ , ಉಪಸ್ಥಿತರಿದ್ದರು. ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಕೀರ್ತಿ ಕುಮಾರ್ ನಿರೂಪಿಸಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಜ್ ಮುದರಂಗಡಿ ವಂದಿಸಿದರು.

ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ ತಂಡದಿಂದ ವಿಜಯ ಬಾಲನಿಕೇತನ ವಿದ್ಯಾರ್ಥಿ ನಿಲಯದಲ್ಲಿ ಉಚಿತ ಆರೋಗ್ಯ ತಪಾಸಣೆ

Thumbnail
Posted On: 18 Oct 2021, 08:54 AM

ಉಡುಪಿ : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಆದಿತ್ಯವಾರ ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನ (ಆರ್ಥಿಕ ಅಶಕ್ತ ಬಾಲಕರ ಉಚಿತ ವಿದ್ಯಾರ್ಥಿ ನಿಲಯ) ಕ್ಕೆ ಭೇಟಿ ನೀಡಿ ಉಚಿತ ಆರೋಗ್ಯ ತಪಾಸಣೆ ನಡೆಸಿ ಅಲ್ಲಿನ ವಿದ್ಯಾರ್ಥಿಗಳಿಗೆ ರಾತ್ರಿ ಊಟದ ವ್ಯವಸ್ಥೆ ಮಾಡಲಾಯಿತು. ತಂಡದ ಸದಸ್ಯರು ಅಲ್ಲಿನ ವಿದ್ಯಾರ್ಥಿಗಳೊಂದಿಗೆ ವಾಲಿಬಾಲ್ ಆಟವನ್ನಾಡಿದರು. ಈ ಕಾರ್ಯಕ್ರಮವನ್ನು ಆಸರೆ ತಂಡದ ಸಂಸ್ಥಾಪಕಧ್ಯಕ್ಷರು ಆದ ಡಾ. ಕೀರ್ತಿ ಪಾಲನ್ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಜೊತೆ ಕಾರ್ಯದರ್ಶಿ ಶ್ರೀಕಾಂತ್ ಅಮಿನ್, ಕೋಶಾಧಿಕಾರಿ ಜಗದೀಶ್ ಬಂಟಕಲ್, ಸದಸ್ಯರಾದ ಬೇಬಿ ಶೆಟ್ಟಿ, ಡಾ. ಸಂಗೀತ, ಸುಕೇತ್ ಕುಲಾಲ್, ಮೋಕ್ಷ ಪಾಲನ್, ಶ್ಲೋಕ ಪಾಲನ್, ಶ್ರೇಯಸ್ ಹಾಗೂ ಸೌಂದರ್ಯ ಟೀಚರ್ ಉಪಸ್ಥಿತರಿದ್ದರು.