Updated News From Kaup
ಪಡುಬಿದ್ರಿ : ರಾಷ್ಟ್ರಮಟ್ಟದ ಹೊನಲು ಬೆಳಕಿನ ಪಂದ್ಯಕೂಟ - ಇಝಾನ್ ಸ್ಪೋರ್ಟ್ಸ್ ಉಡುಪಿ ತಂಡಕ್ಕೆ ಕಡಲ್ ಫಿಶ್ ಟ್ರೋಫಿ -2024

Posted On: 19-11-2024 09:33PM
ಪಡುಬಿದ್ರಿ : ಕಡಲ್ ಫಿಶ್ ಕ್ರಿಕೆಟರ್ಸ್ ವತಿಯಿಂದ ಪಡುಬಿದ್ರಿ ಬೋರ್ಡ್ ಶಾಲಾ ಮೃೆದಾನದಲ್ಲಿ 3 ದಿನ ಕಾಲ ನಡೆದ ರಾಷ್ಟ್ರಮಟ್ಟದ ಹೊನಲು ಬೆಳಕಿನ ಪಂದ್ಯಕೂಟದಲ್ಲಿ ಇಝಾನ್ ಸ್ಪೋರ್ಟ್ಸ್ ಉಡುಪಿ ತಂಡವು ಪಂದ್ಯ ಗೆದ್ದು ರೂ. 5 ಲಕ್ಷದ ಜೊತೆಗೆ ಕಡಲ್ ಟ್ರೋಫಿ, ವಿಷ್ಣುಮೂರ್ತಿ ಕರ್ನಿರೆ ತಂಡ ರನ್ನಸ್೯ ಆಗಿ ರೂ. 3 ಲಕ್ಷದ ಜೊತೆಗೆ ಕಡಲ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.

ಕೊನೆಯ ದಿನ ನಡೆದ ಸಮಿಫೃೆನಲ್ ಪಂದ್ಯದಲ್ಲಿ ವಿಷ್ಣುಮೂರ್ತಿ ಕರ್ನಿರೆ ತಂಡ ಹೆಜಮಾಡಿ ದುರ್ಗ ಎಜಿಫ್ ತಂಡವನ್ನು ಸೋಲಿಸಿ ಫೃೆನಲ್ ಪ್ರವೇಶಿಸಿತು. ಬಹಳ ರೋಮಾಂಚಕಾರಿಯಾಗಿ ನಡೆದ ದ್ವಿತೀಯ ಸಮಿಫೃೆನಲ್ ನಲ್ಲಿ ಇಝಾನ್ ಸ್ಪೋರ್ಟ್ಸ್ ಉಡುಪಿ ತಂಡ ಮತ್ತು ಪಂಚ್ಯಜನ್ಯಾ ಕೋಟ ತಂಡದ ವಿರುದ್ಧ ನಡೆದ ಪಂದ್ಯ ಟೃೆ ಗೊಂಡು ನಂತರ ನಡೆದ ಸೂಪರ್ ಓವರ್ ನಲ್ಲಿ ಪಂದ್ಯದಲ್ಲಿ ಪಂಚ್ಯಾಜನ್ಯ ತಂಡ ವನ್ನು ಮಣಿಸಿ ಇಝಾನ್ ಸ್ಪೋರ್ಟ್ಸ್ ಉಡುಪಿ ಫೈನಲ್ ಪ್ರವೇಶಿಸಿತು. ನಂತರ ನಡೆದ ಫೃೆನಲ್ ಹಣಾಹಣಿಯಲ್ಲಿ ಇಝಾನ್ ಸ್ಪೋರ್ಟ್ಸ್ ಉಡುಪಿ ತಂಡ ವಿಷ್ಣುಮೂರ್ತಿ ಕರ್ನಿರೆ ತಂಡವನ್ನು ಮಣಿಸಿತು.
ಫೃೆನಲ್ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಇಝಾನ್ ಸ್ಪೋರ್ಟ್ಸ್ ಉಡುಪಿ ತಂಡದ ತರುಣ್ ಪಡುಬಿದ್ರಿ , ಉತ್ತಮ ದಾಂಡಿಗ ಪ್ರಶಸ್ತಿಯನ್ನು ದುರ್ಗ ಎಜಿಎಫ್ ತಂಡದ ಇರ್ಫಾನ್ ಹೆಜಮಾಡಿ , ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಇಝಾನ್ ಸ್ಪೋರ್ಟ್ಸ್ ತಂಡದ ಇರ್ಪಾನ್ ಪಟೇಲ್ ಮಧ್ಯಪ್ರದೇಶ, ಉತ್ತಮ ಎಸೆತಗಾರ ಪ್ರಶಸ್ತಿಯನ್ನು ವಿಷ್ಣುಮೂರ್ತಿ ಕರ್ನಿರೆ ತಂಡದ ಸುದರ್ಶನ್, ಬೆಸ್ಟ್ ಫಿಲ್ಡರ್ ಪ್ರಶಸ್ತಿಯನ್ನು ವಿಷ್ಣುಮೂರ್ತಿ ಕರ್ನಿರೆ ತಂಡದ ಪ್ರಸಿದ್ಧ್ ಅಚಾರ್ಯ, ಬೆಸ್ಟ್ ಕೀಪರ್ ಪ್ರಶಸ್ತಿಯನ್ನು ವಿಷ್ಣುಮೂರ್ತಿ ಕರ್ನಿರೆ ತಂಡದ ಜೀತು , ಶಿಸ್ತುಬದ್ಧ ತಂಡ ಪ್ರಶಸ್ತಿಯನ್ನು ಫ್ರೆಂಡ್ಸ್ ಕಂಚಿನಡ್ಕ ತಂಡ ಪಡೆದು ಕೊಂಡರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಅತ್ಲೆಟಿಕ್ ಕೀಡಾಪಟು ಅನುರಾಗ್ ಜಿ. ರವರನ್ನು ಸನ್ಮಾನಿಸಲಾಯಿತು. ಕಡಲ್ ಫಿಶ್ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಚೇತನ್ ಪಡುಬಿದ್ರಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಉದ್ಯಮಿ ಪ್ರಸಾದ್ ಕಾಂಚನ್, ಕಾಪು ಕ್ಷೇತ್ರದ ಮಾಜಿ ಶಾಸಕ ಲಾಲಾಜಿ ಮೆಂಡನ್ , ಸಂಸ್ಥೆಯ ಗೌರವ ಅಧ್ಯಕ್ಷ ನವೀನಚಂದ್ರ ಜೆ ಶೆಟ್ಟಿ , ಮುಂಬೃೆ ಉದ್ಯಮಿ ಜಿತೇಂದ್ರ ಜೆ. ಶೆಟ್ಚಿ , ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷ ಸುಧೀರ್ ಕುಮಾರ್, ಉದ್ಯಮಿಗಳಾದ ಸಂತೋಷ್ ಕುಮಾರ್ ಶೆಟ್ಟಿ , ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಗೌರವ ಅಧ್ಯಕ್ಷ ಶರತ್ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್, ಕಾಪು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ರಮೀಜ್ ಹುಸೇನ್, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ ಕರ್ನಾಟಕ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್, ನಂದಿಕೂರು ಎಮ್ ಇಲೆವನ್ ಇಂಡಸ್ಟೀಸ್ ಸೂಪರ್ವೃೆಸರ್ ಅಹಮದ್ ಕಭೀರ್, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಸಮಿತಿ ಕರುಣಾಕರ್ ಪೂಜಾರಿ, ಉದ್ಯಮಿಗಳಾದ ಬಾಲಚಂದ್ರ ಶೆಟ್ಟಿ ಪುಣೆ ಎರ್ಮಾಳ್ ಪುಚ್ಚೊಟ್ಟು , ಪ್ರಭಾಕರ್ ಶೆಟ್ಟಿ ಕರ್ನಿರೆ, ಸಂಪತ್ ಶೆಟ್ಟಿ ಕರ್ನಿರೆ, ರಕ್ಷಿತ್ ಶೆಟ್ಟಿ ಕರ್ನಿರೆ, ಮತ್ಸೋದ್ಯಮಿ ತಿಲಕ್ ರಾಜ್ ಮಲ್ಪೆ, ಮಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಪ್ರೇಮ ವಾಸುದೇವ್, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಕೃಷ್ಣ ಬಂಗೇರ, ಕಡಲ್ ಫಿಶ್ ಸಂಸ್ಥೆಯ ಅಧ್ಯಕ್ಷ ಪ್ರಶಾಂತ್ ಸಾಲ್ಯಾನ್, ಪಡುಬಿದ್ರಿ ಗ್ರಾ.ಪಂ ಮಾಜಿ ಉಪಾಧ್ಯಕ್ಷೆ ಯಶೋಧ ಪಡುಬಿದ್ರಿ, ಸದಸ್ಯರಾದ ಮುಬೀನಾ ಬೇಗಂ, ಸುನಂದಾ ದೇವಾಡಿಗ, ಮಹಮ್ಮದ್ ನಿಯಾಝ್ ಉಪಸ್ಥಿತರಿದ್ದರು. ಸಂತೋಷ್ ಪಡುಬಿದ್ರಿ ಸ್ವಾಗತಿಸಿ , ಸಂತೋಷ್ ನಂಬಿಯಾರ್ ನಿರೂಪಿಸಿ , ವಂದಿಸಿದರು.
ಕಾಪು ಹೊಸ ಮಾರಿಗುಡಿ ದೇವಸ್ಥಾನ : ಮಲ್ಪೆ ಪರ್ಸಿನ್ ಮೀನುಗಾರರ ಸಂಘದ ವತಿಯಿಂದ ಶಿಲಾಸೇವೆಯ ದೇಣಿಗೆ ಸಮರ್ಪಣೆ

Posted On: 19-11-2024 08:40PM
ಕಾಪು : ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಲ್ಪೆ ಪರ್ಸಿನ್ ಮೀನುಗಾರರ ಸಂಘದ ವತಿಯಿಂದ ಶಿಲಾಸೇವೆಯ ದೇಣಿಗೆಯನ್ನು ಸಮರ್ಪಿಸಲಾಯಿತು.

ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು.

ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿಯವರು ನವದುರ್ಗಾ ಲೇಖನ ಯಜ್ಞದ ಬಗ್ಗೆ ಮಾಹಿತಿ ನೀಡಿ, ಪ್ರತಿಯೊಬ್ಬ ಮೀನುಗಾರರ ಮನೆಯಲ್ಲೂ ನವದುರ್ಗಾ ಲೇಖನ ಬರೆಯುವ ಮೂಲಕ ಮನೆ ಮನದಲ್ಲೂ ಮಾರಿಯಮ್ಮ ನೆಲೆಯಾಗುವಂತೆ ಆಗಬೇಕು ಆದ್ದರಿಂದ ಪ್ರತಿಯೊಬ್ಬರೂ ತಮ್ಮ ಕುಟುಂಬ ಸಮೇತರಾಗಿ ನವದುರ್ಗಾ ಲೇಖನ ಬರೆಯಬೇಕೆಂದು ವಿನಂತಿಸಿದರು.
ಈ ಸಂದರ್ಭ ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಪರ್ಸಿನ್ ಮೀನುಗಾರರ ಸಂಘದ ಅಧ್ಯಕ್ಷರಾದ ನಾಗರಾಜ್ ಸುವರ್ಣ ಮತ್ತು ಪದಾಧಿಕಾರಿಗಳು ಹಾಗೂ ಪರ್ಸಿನ್ ಬೋಟ್ ಮಾಲಕರು ಮತ್ತು ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ನವದುರ್ಗಾ ಲೇಖನ ಯಜ್ಞ ಸಮಿತಿಯ ಕಾರ್ಯದರ್ಶಿ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಯೋಗೀಶ್ ವಿ.ಶೆಟ್ಟಿ ಬಾಲಾಜಿ , ನವದುರ್ಗಾ ಲೇಖನ ಯಜ್ಞ ಸಮಿತಿಯ ಉಪಾಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್, ಮೋಹನ್ ಬಂಗೇರ, ಮಧುಕರ್ ಎಸ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕುಲಾಲ ಸಂಘ ಹೆಬ್ರಿ ತಾಲೂಕು : ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ, ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ

Posted On: 19-11-2024 08:32PM
ಉಡುಪಿ : ಕುಲಾಲ ಸಂಘ (ರಿ.) ಹೆಬ್ರಿ ತಾಲೂಕು ಇದರ ವಾರ್ಷಿಕ ಮಹಾಸಭೆ, ಸತ್ಯನಾರಾಯಣ ಪೂಜೆ ಮತ್ತು ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮವು ಹೆಬ್ರಿ ಚೈತನ್ಯ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉದ್ಯಮಿ ಕೆ ಎ ಲಕ್ಷ್ಮಣ್ ಕುಲಾಲ್, ಯುವಕ ಯುವತಿಯರು ಸ್ವಂತ ಉದ್ಯೋಗದಿಂದ ಸ್ವಾವಲಂಬಿಯಾಗಿ ಸಮಾಜದ ಅಭಿವೃದ್ದಿಗೆ ಕೈ ಜೋಡಿಸಬೇಕೆಂದು ಹೇಳಿದರು.
ಸನ್ಮಾನ/ ಪ್ರೋತ್ಸಾಹ ಧನ ವಿತರಣೆ : ಕುಂಬಾರಿಕೆ ಕುಲ ಕಸುಬುದಾರರಿಗೆ, ಕೃಷಿಕರಿಗೆ ಮತ್ತು ಸಾಧಕರು, ಸಂಘದ ಮಹಾಪೋಷಕರನ್ನು ಗೌರವದಿಂದ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಗುತ್ತಿಗೆದಾರ ರಾಜೀವ ಕುಲಾಲ್, ಭೋಜ ಕುಲಾಲ್ ಬೆಳಂಜೆ, ಕಾಳು ಕುಲಾಲ್, ಪ್ರಭಾಕರ್ ಕುಲಾಲ್ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಸುರೇಂದ್ರ ಕುಲಾಲ್ ವರಂಗ ಮಾತನಾಡಿ ನಾವು ತಾಲೂಕಿನಾದ್ಯಂತ ಸಂಘಟನೆಯನ್ನು ವಿಸ್ತರಿಸಬೇಕು, ಕುಲಾಲ ಸಮಾಜದ ಸರ್ವರು ತಾಲೂಕು ಸಂಘದ ಒಟ್ಟಿಗೆ ಇದ್ದು, ಎಲ್ಲರೂ ಕಾರ್ಯಾಪ್ರವೃತ್ತರಾಗಬೇಕೆಂದು ಹೇಳಿದರು.
ಸಭೆಯಲ್ಲಿ ಕೆ ನಾರಾಯಣ್ ಕುಲಾಲ್, ವಿಠಲ್ ಕುಲಾಲ್, ಮಹಿಳಾ ಘಟಕದ ಅಧ್ಯಕ್ಷರಾದ ಸುಮಿತ್ರಾ ಕುಲಾಲ್ ಬೆಪ್ದೆ, ಪ್ರದಾನ ಕಾರ್ಯದರ್ಶಿ ಸುದರ್ಶನ್ ಕುಲಾಲ್ ದರ್ಬುಜೆ ಉಪಸ್ಥಿತರಿದ್ದರು. ಅಣ್ಣಪ್ಪ ಕುಲಾಲ್ ಚಾರ ಸ್ವಾಗತಿಸಿದರು. ವಂದನಾ ಕುಲಾಲ್ ಚಾರ ನಿರೂಪಿಸಿದರು. ಸುನಂದ ಕುಲಾಲ್ ಮುಳ್ಳಾಗುಡ್ಡೆ ವಂದಿಸಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ಭೇಟಿ

Posted On: 18-11-2024 06:31PM
ಕಾಪು : 2025ರ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜರಗಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶ ಜಸ್ಟೀಸ್ ಸವಣೂರು ವಿಶ್ವಜಿತ್ ಶೆಟ್ಟಿ ಭೇಟಿ ನೀಡಿ ಅಮ್ಮನ ದರುಶನ ಪಡೆದು ನೂತನ ದೇಗುಲದ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ಶ್ರೀನಿವಾಸ ತಂತ್ರಿ ಕಲ್ಯಾ ಇವರು ನ್ಯಾಯಾಧೀಶರಿಗೆ ಅಮ್ಮನ ಅನುಗ್ರಹ ಪ್ರಸಾದ ನೀಡಿ ಹರಸಿದರು. ಅಭಿವೃದ್ಧಿ ಸಮಿತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ನೂತನ ದೇಗುಲದ ಕಾಮಗಾರಿಯನ್ನು ವೀಕ್ಷಿಸಿದ ನ್ಯಾಯಾಧೀಶರಿಗೆ ಅಭಿವೃದ್ಧಿ ಸಮಿತಿಯ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡಿ ಬ್ರಹ್ಮಕಲಶೋತ್ಸವ ಸಮಾರಂಭದಲ್ಲಿ ಭಾಗವಹಿಸುವಂತೆ ಆಹ್ವಾನವಿತ್ತರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಉಪಾಧ್ಯಕ್ಷ ಮನೋಹರ್ ಎಸ್. ಶೆಟ್ಟಿ, ಸುಧಾಕರ ಶೆಟ್ಟಿ ಮಕರ, ಉಡುಪಿಯ ನ್ಯಾಯವಾದಿ ಉಮೇಶ್ ಶೆಟ್ಟಿ ಕಳತ್ತೂರು, ಪ್ರಮುಖರಾದ ಮೋಹನ್ ಬಂಗೇರ, ಸಂತೋಷ್ ಶೆಟ್ಟಿ ತೆಂಕರಗುತ್ತು, ಅರುಣ್ ಶೆಟ್ಟಿ ಪಾದೂರು, ಶೋಭಿತ್ ಶೆಟ್ಟಿ, ಮಧುಕರ್ ಎಸ್., ಉದಯ ಭಾರ್ಗವ, ಸಂತೋಷ್ ಶೆಟ್ಟಿ ಕಾಪು, ಜಯಕರ ಶೆಟ್ಟಿಗಾರ್, ಶಿವಣ್ಣ ಎಸ್.ಅಂಚನ್, ಸಂದೀಪ್ ಕುಮಾರ್, ಸೋಮನಾಥ್ ಸಾಲ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಾಧೀಶ ಭೇಟಿ

Posted On: 18-11-2024 06:25PM
ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶ ಜಸ್ಟೀಸ್ ಸವಣೂರು ವಿಶ್ವಜಿತ್ ಶೆಟ್ಟಿ ಸೋಮವಾರ ಭೇಟಿ ನೀಡಿದರು.
ದೇವಳದ ವತಿಯಿಂದ ಪೂರ್ಣ ಕುಂಭದೊಂದಿಗೆ ಬರಮಾಡಿಕೊಂಡು ನಾಡೋಜ ಡಾ. ಜಿ. ಶಂಕರ್ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀ ಗಿರಿಧರ್ ಸುವರ್ಣ, ಶ್ರೀ ಮನೋಹರ್ ಶೆಟ್ಟಿ, ಸಂತೋಷ್ ಶೆಟ್ಟಿ ತೆಂಕರಗುತ್ತು, ಯೋಗೀಶ್ ಶೆಟ್ಟಿ ಕಾಪು, ಶೋಭಿತ್ ಶೆಟ್ಟಿ, ಉಮೇಶ್ ಶೆಟ್ಟಿ, ಮೋಹನ್ ಬಂಗೇರ ಕಾಪು, ದಿನೇಶ್ ಎರ್ಮಾಳ್, ಪ್ರಧಾನ ಅರ್ಚಕ ಶ್ರೀ ರಾಘವೇಂದ್ರ ಉಪಾಧ್ಯಾಯ, ರಾಘವೇಂದ್ರ ಸುವರ್ಣ ಬೈಕಾಡಿ ಮೊದಲಾದವರು ಉಪಸ್ಥಿತರಿದ್ದರು.
ಮಹಾಬಲ ಮೂಲ್ಯರ ಮೇಲಿನ ಹಲ್ಲೆ ಖಂಡಿಸಿ ಕಾರ್ಕಳ ಕುಲಾಲ ಯುವ ವೇದಿಕೆಯಿಂದ ಮನವಿ

Posted On: 18-11-2024 06:16PM
ಕಾರ್ಕಳ : ಇಲ್ಲಿನ ಪುರಸಭಾ ಸದಸ್ಯನಿಂದ ಕೂಲಿ ಕಾರ್ಮಿಕ ಮಹಾಬಲ ಮೂಲ್ಯ ಎನ್ನುವವರಿಗೆ ಮಾಡಿದ ಹಲ್ಲೆ ಪ್ರಕರಣ ಖಂಡಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಕಳ ಕುಲಾಲ ಯುವ ವೇದಿಕೆ ವತಿಯಿಂದ ಸೋಮವಾರ ಕಾರ್ಕಳ ಡಿ ವೈ ಎಸ್ ಪಿ ಅರವಿಂದ ಕಲಗುಜ್ಜಿ, ನಗರ ಠಾಣಾ ಎಸ್ ಐ ಸಂದೀಪ್ ಶೆಟ್ಟಿಯವರಿಗೆ ಮನವಿ ನೀಡಲಾಯಿತು.
ಪುರಸಭಾ ಸದಸ್ಯ ಸೀತಾರಾಮರು ದೊಣ್ಣೆಯಲ್ಲಿ ಹೊಡೆದ ಹೊಡೆತಕ್ಕೆ ಮಹಾಬಲ ಮೂಲ್ಯರ ಮೊಣ ಕಾಲಿನ ಮೂಳೆ ಮುರಿತಗೊಂಡಿದೆ. ಈ ಕ್ರೂರ ಪ್ರವೃತ್ತಿಯ ಬಗ್ಗೆ ಸಾಮಾಜಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಈ ಘಟನೆಯನ್ನು ಕುಲಾಲ ಯುವ ವೇದಿಕೆ ಈ ಖಂಡಿಸಿ, ಘಟನೆ ಬಗ್ಗೆ ಆಕ್ರೋಶ ವ್ಯಕ್ತ ಪಡಿಸಿದೆ. ತಕ್ಷಣವೇ ಆರೋಪಿಯನ್ನು ಬಂಧನ ಮಾಡದಿದ್ದರೆ ತಾಲೂಕಿನಾದ್ಯoತ ತೀವ್ರ ಹೋರಾಟ ಮಾಡುವುದಾಗಿ ಯುವ ವೇದಿಕೆ ಎಚ್ಚರಿಸಿದೆ.
ಮನವಿ ನೀಡಿದ ಸಂದರ್ಭ ಕುಲಾಲ ಯುವ ವೇದಿಕೆಯ ಜಿಲ್ಲಾಧ್ಯಕ್ಷ ದಿವಾಕರ ಬಂಗೇರ, ಕಾರ್ಕಳ ಕುಲಾಲ ಸಂಘದ ಅಧ್ಯಕ್ಷ ಹರೀಶ್ಚಂದ್ರ ಕುಲಾಲ್, ಕಾರ್ಕಳ ಕುಲಾಲ ಯುವ ವೇದಿಕೆಯ ಅಧ್ಯಕ್ಷ ಉದಯ ಕುಲಾಲ, ಹೆರ್ಮುಂಡೆ ಕುಲಾಲ ಸಂಘದ ಕಾರ್ಯದರ್ಶಿ ಹೃದಯ ಕುಲಾಲ್, ಹೆಬ್ರಿ ಕುಲಾಲ ಸಂಘದ ಅಧ್ಯಕ್ಷ ಸುರೇಂದ್ರ ಕುಲಾಲ್ ವರಂಗ, ಕಾರ್ಕಳ ಕುಲಾಲ ಯುವ ವೇದಿಕೆಯ ಕಾರ್ಯದರ್ಶಿ ಸಂದೇಶ್, ಕಾಂತಾವರ ಕುಲಾಲ ಸಂಘಟನೆಯ ಅಧ್ಯಕ್ಷ ವಿಠಲ ಮೂಲ್ಯ ಬೇಲಾಡಿ, ಸರ್ವಜ್ಞ ಆಸರೆ ಕಿರಣ ಬಳಗದ ಪ್ರಭಾಕರ್ ಇನ್ನ ಮತ್ತು ಯುವ ವೇದಿಕೆ ಸದಸ್ಯರು ಉಪಸ್ಥಿತರಿದ್ದರು.
ಕುಲದ ನೆಲೆ ಕೇಳಿದ ಕನಕದಾಸರದ್ದು ವಿಶ್ವಮಾನವ ವ್ಯಕ್ತಿತ್ವ : ತಹಶಿಲ್ದಾರ್ ಡಾ.ಪ್ರತಿಭಾ ಆರ್.

Posted On: 18-11-2024 04:21PM
ಕಾಪು : ಕಾವ್ಯ ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬೇರೂರಿದ್ದ ಕಂದಾಚಾರಗಳನ್ನು ಹೋಗಲಾಡಿಸಲು ಶ್ರಮಿಸಿದ ಕನಕದಾಸರು ವಿಶ್ವಮಾನವರಾದರು ಎಂದು ಕಾಪು ತಾಲೂಕು ತಹಶಿಲ್ದಾರ್ ಪ್ರತಿಭಾ ಹೇಳಿದರು. ಅವರು ಸೋಮವಾರ ತಹಶಿಲ್ದಾರ್ ಕಚೇರಿಯಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದಾಸಶ್ರೇಷ್ಠರಾದ ಕನಕದಾಸರ ಬದುಕೇ ಮಾನವ ಕುಲಕ್ಕೆ ಒಂದು ಸಂದೇಶ. ಜಾತ್ಯಾತೀತ ಮೌಲ್ಯಗಳನ್ನು ಪ್ರತಿಪಾದಿಸಿದ ಕನಕದಾಸರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸಬಾರದು. ಸರಳ ಜೀವನ ನಡೆಸಿ ಭಕ್ತಿ ಪರಾಕಾಷ್ಠೆಯಿಂದ ಉಡುಪಿ ಶ್ರೀಕೃಷ್ಣನನ್ನೇ ತನ್ನೆಡೆಗೆ ತಿರುಗಿಸಿಕೊಂಡ ದಾಸ ಶ್ರೇಷ್ಟರ ಜೀವನವೇ ಸಂದೇಶವಾಗಿದೆ ಎಂದು ತಹಶಿಲ್ದಾರ್ ಹೇಳಿದರು.
ಈ ಸಂದರ್ಭ ತಹಶಿಲ್ದಾರ್ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ ; ಲೇಖನ ಸಂಕಲ್ಪ ಕಾರ್ಯಕ್ರಮ

Posted On: 17-11-2024 11:49PM
ಕಾಪು : ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ನಡೆಯಲಿರುವ ಪ್ರತಿಷ್ಠಾ- ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಎಂ ಆರ್ ಜಿ ಗ್ರೂಪ್ ಬೆಂಗಳೂರು ಇದರ ಆಡಳಿತ ನಿರ್ದೇಶಕರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಇವರ ನೇತೃತ್ವದಲ್ಲಿ ಹಾಗೂ ಮಾಣಿಲ ಮೋಹನ್ ದಾಸ್ ಪರಮಹಂಸ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ಬೆಂಗಳೂರಿನ ಗಾಯತ್ರಿ ವಿಹಾರ ಗೇಟ್ ನಂ 4, ಪ್ಯಾಲೇಸ್ ಗ್ರೌಂಡ್ ಬೆಂಗಳೂರು ಇಲ್ಲಿ ಭಾನುವಾರ ಜರಗಿತು.

ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪ ಕಾರ್ಯಕ್ರಮದಲ್ಲಿ ಉಡುಪಿಯ ನಿಕಟಪೂರ್ವ ಶಾಸಕರು, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭಾಗವಹಿಸಿ ನವದುರ್ಗಾ ಲೇಖನ ಯಜ್ಞದ ಕುರಿತು ಸಂಪೂರ್ಣ ವಿವರಣೆ ನೀಡಿ, ಈ ಯಜ್ಞದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕೆ ವಾಸುದೇವ ಶೆಟ್ಟಿ, ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ, ಉಪಾಧ್ಯಕ್ಷರಾದ ದಿವಾಕರ್ ಶೆಟ್ಟಿ, ಮನೋಹರ್ ಶೆಟ್ಟಿ, ಸ್ವರ್ಣ ಸಮರ್ಪಣಾ ಸಮಿತಿ ಅಧ್ಯಕ್ಷರಾದ ರವಿ ಸುಂದರ್ ಶೆಟ್ಟಿ, ಆರ್ಥಿಕ ಸಮಿತಿ ಮುಖ್ಯ ಸಂಚಾಲಕರಾದ ಉದಯ್ ಸುಂದರ್ ಶೆಟ್ಟಿ, ಕಾರ್ಕಳ ಶಾಸಕರಾದ ವಿ ಸುನಿಲ್ ಕುಮಾರ್, ಲೇಖನ ಯಜ್ಞ ಸಮಿತಿ ಪ್ರಧಾನ ಕಾರ್ಯದರ್ಶಿಗಳಾದ ಯೋಗಿಶ್ ವಿ ಶೆಟ್ಟಿ ಬಾಲಾಜಿ, ಬೆಂಗಳೂರು ಸಮಿತಿ ಅಧ್ಯಕ್ಷರಾದ ಉಪೇಂದ್ರ ಶೆಟ್ಟಿ, ಸುಗ್ಗಿ ಸುಧಾಕರ್ ಶೆಟ್ಟಿ, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ, ಬ್ರಹ್ಮಕಲಶೋತ್ಸವ ಸಮಿತಿ, ಸ್ವರ್ಣ ಸಮರ್ಪಣಾ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ : 3ನೇ ಬೃಹತ್ ಉದ್ಯೋಗ ಮೇಳ ಸಂಪನ್ನ

Posted On: 17-11-2024 10:15PM
ಕಟಪಾಡಿ : ಮಣಿಪುರ ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಇದರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ಆಯೋಜನೆಯ ಎಂಆರ್ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ನಡೆದ ಉಚಿತ 3ನೇ ಬೃಹತ್ ಉದ್ಯೋಗ ಮೇಳದ ಸಮಾರೋಪ ಕಾರ್ಯಕ್ರಮ ಭಾನುವಾರ ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನದಲ್ಲಿ ನೆರವೇರಿತು.
ಕಾರ್ಯಕ್ರಮವನ್ನು ಕಾಪು ಕ್ಷೇತ್ರದ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿ, ಮಾತನಾಡಿ ಉತ್ತಮ ಶಿಕ್ಷಣದೊಂದಿಗೆ ಉದ್ಯೋಗವೂ ಅನಿವಾರ್ಯ. ಉದ್ಯೋಗದ ಅವಕಾಶ ಒದಗಿಸುತ್ತಿರುವ ಉಡುಪಿ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ನ ಪ್ರಾಮಾಣಿಕ ಪ್ರಯತ್ನ ಶ್ಲಾಘನೀಯ ಎಂದರು. ಇದೇ ಸಂದರ್ಭ ಲಾಲಾಜಿ ಮೆಂಡನ್ರವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು. ನಿಟ್ಟೆ ಜಸ್ಟಿಸ್ ಕೆ.ಎಸ್. ಹೆಗ್ಡೆ ಇನ್ಸ್ಟಿಟ್ಯೂಟ್ ಆಫ್ ಮೆನೇಜ್ಮೆಂಟ್ನ ನಿರ್ದೇಶಕ ಡಾ. ಸುಧೀರ್ ಎಮ್, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್ ಮಾತನಾಡಿದರು.
ಗ್ರಾಮೀಣ ಬಂಟರ ಸಂಘದ ಚಾರಿಟೆಬಲ್ ಟ್ರಸ್ಟ್ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಬಾರಿಯ ಉದ್ಯೋಗ ಮೇಳದಲ್ಲಿ 30 ಕಂಪೆನಿಗಳು ಭಾಗವಹಿಸಿದೆ. ಕಳೆದ 2 ಬಾರಿಯ ಉದ್ಯೋಗ ಮೇಳದಲ್ಲಿ 1,300 ಜನರು ಉದ್ಯೋಗ ಪಡೆದಿದ್ದು, ಈ ಬಾರಿ 1,700ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದು, ಹೆಚ್ಚಿನ ಜನರಿಗೆ ಉದ್ಯೋಗ ಸಿಗಲಿದೆ ಎಂದರು.
ಮಣಿಪಾಲ ವೈಷ್ಣವಿ ದುರ್ಗಾ ದೇವಳದ ಆಡಳಿತ ಮೊಕ್ತೇಸರ ಬಿ. ಜಯರಾಜ್ ಹೆಗ್ಡೆ, ನಿಟ್ಟೆ ಎನ್ಎಮ್ಎಎಮ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಭ್ಯುದಯ ಮುಖ್ಯಸ್ಥ ಭರತ್ ಜಿ. ಕುಮಾರ್, ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ರೋಶನ್ ಶೆಟ್ಟಿ, ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ಚಂದ್ರ ಜೆ. ಶೆಟ್ಟಿ, ಬಿಜೆಪಿ ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಮನೋಹರ್ ಶೆಟ್ಟಿ ತೋನ್ಸೆ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ ಸುರತ್ಕಲ್, ಮುನಿಯಾಲು ಉದಯ ಕುಮಾರ್ ಶೆಟ್ಟಿ, ನ್ಯಾಯವಾದಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಅಭಿಮತ ಆಡಳಿತ ಪಾಲುದಾರೆ ಡಾ. ಮಮತಾ ಪಿ. ಶೆಟ್ಟಿ, ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ನ ಕಾರ್ಯಕ್ರಮ ನಿರ್ದೇಶಕಿ ಪ್ರೊ. ದಿವ್ಯಾ ರಾಣಿ ಪ್ರದೀಪ್, ಸಂದರ್ಶನ ಸಮಿತಿಯ ಛೇರ್ಮನ್ ಗುರುಪ್ರಶಾಂತ್ ಭಟ್ ಕೆ., ಉಡುಪಿ ಗ್ರಾಮೀಣ ಬಂಟರ ಸಂಘ ಅಧ್ಯಕ್ಷ ಡಾ. ಎಚ್. ಬಿ. ಶೆಟ್ಟಿ, ಟ್ರಸ್ಟಿಗಳಾದ ಜಗದೀಶ್ ಹೆಗ್ಡೆ ಪಳ್ಳಿ, ರಮೇಶ್ ಶೆಟ್ಟಿ ನಿಂಜೂರು, ದಯಾನಂದ ಶೆಟ್ಟಿ ಕಲ್ಮಂಜೆ, ಗೋಪಾಲ ಶೆಟ್ಟಿ ಬೆಳ್ಳೆ, ಹರೀಶ್ ಶೆಟ್ಟಿ ಬೆಳ್ಳೆ, ಟ್ರಸ್ಟಿ, ಕಾರ್ಯಕ್ರಮ ಸಂಚಾಲಕ ಪದ್ಮನಾಭ ಹೆಗ್ಡೆ, ವೇದಿಕೆಯಲ್ಲಿದ್ದರು. ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಕೋಶಾಧಿಕಾರಿ, ಕಾರ್ಯಕ್ರಮ ಸಂಚಾಲಕ ವಿಜಿತ್ ಶೆಟ್ಟಿ ವಂದಿಸಿದರು. ಪ್ರೊ. ಡಾ. ಸುಧೀರ್ ರಾಜ್ ನಿರೂಪಿಸಿದರು.
ಪಡುಬಿದ್ರಿ : ಕ್ರೀಡಾ ಮನೋಭಾವ ಬದುಕಿನಲ್ಲಿರಲಿ - ನವೀನಚಂದ್ರ ಜೆ ಶೆಟ್ಟಿ

Posted On: 17-11-2024 12:08PM
ಪಡುಬಿದ್ರಿ : ಕ್ರೀಡಾ ಸ್ಫೂರ್ತಿಯ ಗುಣಲಕ್ಷಣಗಳನ್ನು ದೃೆನಂದಿನ ಜೀವನಕ್ಕೆ ಅನ್ವಯಿಸಿದರೆ ಮೃೆದಾನ ಮತ್ತು ಬದುಕಿನಲ್ಲಿ ಯಶಸ್ವಿಗೆ ಕಾರಣವಾಗುತ್ತದೆ. ಉತ್ತಮ ಕ್ರೀಡಾ ಸ್ಪೂರ್ತಿಯನ್ನು ಹೊಂದಿರುವುದು ಒಬ್ಬ ನಾಯಕನ ಯಶಸ್ವಿನ ಗುಣಲಕ್ಷಣವಾಗಿದೆ. ಆಟಗಾರರು ತೀರ್ಪುಗಾರಿಕೆಗೆ ಗೌರವ ಸಲ್ಲಿಸುವುದರ ಮೂಲಕ ಪ್ರೀತಿ, ಸೌಹಾರ್ದತೆ ಪಂದ್ಯಕೂಟವಾಗಲಿ ಎಂದು ಮಾಜಿ ತಾಲೂಕು ಪಂಚಾಯತ್ ಸದಸ್ಯ ನವೀನಚಂದ್ರ ಜೆ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಕಡಲ್ ಫಿಶ್ ಕ್ರಿಕೆಟರ್ಸ ವತಿಯಿಂದ ಪಡುಬಿದ್ರಿ ಬೋರ್ಡ್ ಶಾಲಾ ನಡೆಯುವ "ಕಡಲ್ ಫಿಶ್ 2024" ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಪಂದ್ಯ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕಡಲ್ ಫಿಶ್ ಕ್ರಿಕೆಟರ್ಸ್ ಸ್ಥಾಪಕ ಅಧ್ಯಕ್ಷ ಚೇತನ್ ಕುಮಾರ್ ಅಧ್ಯಕ್ಷತೆ ವಹಿಸಿದರು. ಶ್ರೀಲಂಕಾ ಹಾಗು ಭಾರತ ಟೆನ್ನಿಸ್ ಬಾಲ್ ತಂಡದ ನಡುವೆ ಉದ್ಘಾಟನ ಪಂದ್ಯಾಟ ನಡೆಯಿತು.
ಪಡುಬಿದ್ರಿ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ವೈ. ಸುಕುಮಾರ್ , ಪಡುಬಿದ್ರಿ ಕಲ್ಲಟ್ಟೆ ಶ್ರೀ ಧರ್ಮ ಜಾರಂದಾಯ ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಜಿಲ್ಲಾ ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಗೌರವ ಅಧ್ಯಕ್ಷ ಶರತ್ ಶೆಟ್ಟಿ , ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್ , ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಜಿಲ್ಲಾ ಅಧ್ಯಕ್ಷ ವಿಶ್ವಾಸ್ ಅಮೀನ್, ಸುರತ್ಕಲ್ ತುಳುನಾಡ ಬಿರುವೆರ್ ಸಂಸ್ಥಾಪಕ ಲೊಕೇಶ್ ಕೊಡಿಕೆರೆ, ಪಡುಬಿದ್ರಿ ಬಂಟರ ಸಂಘ ಕಾರ್ಯದರ್ಶಿ ಪ್ರಕಾಶ್ ಶೆಟ್ಟಿ ಪಡುಹಿತ್ಲು, ಕಾಪು ರಕ್ಷಣಾಪುರ ಜವನೆರ್ ಅಧ್ಯಕ್ಷ ನವೀನ್ ಶೆಟ್ಟಿ, ರಾಷ್ಟ್ರೀಯ ಕ್ರೀಡಾಪಟು ಪುಂಡಲೀಕ ಹೊಸಬೆಟ್ಟು , ಖಾದಿ ಮತ್ತು ಗ್ರಾಮೋದ್ಯೋಗ ನಿಗಮ ಮಾಜಿ ನಿರ್ದೇಶಕ ಮಿಥುನ್ ಹೆಗ್ಡೆ, ಪಡುಬಿದ್ರಿ ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ ಪೂಜಾರಿ, ಕಾಪು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ರಮೀಜ್ ಹುಸೇನ್, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ್ ಪೂಜಾರಿ, ಉದ್ಯಮಿ ಅಶ್ವಿನ್ ಕೋಟ್ಯಾನ್, ಕಡಲ್ ಫಿಶ್ ಕ್ರಿಕೆಟರ್ಸ್ ಅಧ್ಯಕ್ಷ ಪ್ರಶಾಂತ್ ಸಾಲ್ಯಾನ್, ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ರಾಜ್ಯ ಅಧ್ಯಕ್ಷ ರಚನ್ ಸಾಲ್ಯಾನ್, ಬಾಡಿ ಬಿಲ್ಡರ್ ವಿರಾಜ್ ಸುರತ್ಕಲ್, ಮಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್ ಪ್ರೇಮ ವಾಸುದೇವ್ ಉಪಸ್ಥಿತರಿದ್ದರು.
ಸಂತೋಷ್ ಪಡುಬಿದ್ರಿ ಸ್ವಾಗತಿಸಿದರು. ಪ್ರಶಾಂತ್ ಸಾಲ್ಯಾನ್ ವಂದಿಸಿದರು. ಸಂತೋಷ್ ನಂಬಿಯಾರ್ ನಿರೂಪಿಸಿದರು.