Updated News From Kaup
ರತ್ನಾವತಿ ಪ್ರಭು ನಿಧನ
Posted On: 31-08-2021 10:40AM
ಕಾಪು : ರತ್ನಾವತಿ ಪ್ರಭು 92,ಹೇರೂರು ಕಾಪು, 92, ಹೇರೂರು ಗ್ರಾಮದ ಅಡ್ಡೆಗುತ್ತು ಮನೆತನದ ದಿ.ಮೇಣ್ಪ ನಾಯಕ್ ಯಾನೆ ದೇವಪ್ಪ ಪ್ರಭುರವರ ಧರ್ಮಪತ್ನಿ ರತ್ನಾವತಿ ಪ್ರಭು (87) ರವರು ಅಲ್ಪಕಾಲದ ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ದಿನಾಂಕ ಆ.30 ಸೋಮವಾರ ಮಧ್ಯ ರಾತ್ರಿ ನಿಧನ ಹೊಂದಿದರು.
ಬಂಟಕಲ್ : ಮಹಿಳೆಯ ಅನಾರೋಗ್ಯದ ಚಿಕಿತ್ಸೆಯ ವೆಚ್ಚಕ್ಕಾಗಿ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮನವಿ
Posted On: 31-08-2021 09:50AM
ಕಾಪು : ಸ್ತನದ ಕ್ಯಾನ್ಸರ್ ಹಾಗೂ ಗರ್ಭಕೋಶದ ಸಮಸ್ಯೆಯಿಂದ ಬಳಲುತ್ತಿರುವ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಬಂಟಕಲ್ ನ ಮಹಿಳೆಯು ಯಾವುದೇ ಆದಾಯವಿಲ್ಲದೆ ತನ್ನ ಕುಟುಂಬವನ್ನು ನಡೆಸುತ್ತಿದ್ದಾರೆ.ಇವರಿಗೆ ಎರಡು ಹೆಣ್ಣುಮಕ್ಕಳು. ಒಬ್ಬಳು ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದರೆ ಮತ್ತೊಬ್ಬಳು ಡಿಗ್ರಿ ಮಾಡಬೇಕೆನ್ನುವ ಆಸೆ ಹೊತ್ತು ಮನೆಯಲ್ಲಿ ಇದ್ದಾಳೆ. ಈಕೆಯ ಗಂಡ ಅನಾರೋಗ್ಯದಿಂದಾಗಿ ಹಲವು ವರ್ಷದ ಹಿಂದೆ ಸಾವನ್ನಪ್ಪಿದರು. ಅದಾದ ನಂತರ ಈ ಕುಟುಂಬವನ್ನು ಮುನ್ನಡೆಸುವ ಭಾರ ಈ ಮಹಿಳೆಯ ಮೇಲೆ ಇತ್ತು.
ರಾಘವೇಂದ್ರ ಪ್ರಭು ಕವಾ೯ಲುರವರಿಗೆ ಸಮಾಜ ಸೇವಾ ರತ್ನ ಪುರಸ್ಕಾರ
Posted On: 31-08-2021 09:39AM
ಉಡುಪಿ : ಜನ್ಮಭೂಮಿ ಫೌಂಡೇಶನ್ (ರಿ.) ಬೆಂಗಳೂರು ಇದರ ವತಿಯಿಂದ ಕರೋನಾ ವಾರಿಯಸ್೯ಗಳಿಗೆ ಆ.29ರಂದು ಸ್ಯಾಂಕಟನ್ ಹೋಟೆಲ್ ನಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಕರೋನಾ ಸಂದಭ೯ದಲ್ಲಿ ಉತ್ತಮ ಸೇವೆ ಸಲ್ಲಿಸಿದ ರಾಘವೇಂದ್ರ ಪ್ರಭು, ಕವಾ೯ಲುರವರನ್ನು ಸಮಾಜ ಸೇವಾ ರತ್ನ ಪುರಸ್ಕಾರ ನೀಡಿ ಗೌರವಿಸಲಾಯಿತು.
ಶಿಕ್ಷಾರತ್ನ ಪ್ರಶಸ್ತಿ ಪುರಸ್ಕೃತರಾದ ಉಪನ್ಯಾಸಕ ದೇವಿಪ್ರಸಾದ್ ಬೆಳ್ಳಿಬೆಟ್ಟು
Posted On: 30-08-2021 09:03PM
ಕಾಪು: ಉಡುಪಿ ಜಿಲ್ಲೆಯ ಅದಮಾರು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಹಾಗೂ ಸಮಾಜ ಸೇವೆ ಜೊತೆ ನಿರೂಪಣೆಯಲ್ಲಿ ಸಾಮಾಜಿಕವಾಗಿ ಗುರುತಿಸಿಕೊಂಡಿರುವ ದೇವಿಪ್ರಸಾದ್ ಬೆಳ್ಳಿಬೆಟ್ಟುರವರಿಗೆ ಪ್ರತಿಷ್ಠಿತ MAX LIFE ಸಂಸ್ಥೆ ಮಂಗಳೂರಿನಲ್ಲಿ ಶಿಕ್ಷಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ.
ಯುವತಿಗೆ ಚೂರಿಯಿಂದ ಇರಿದು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ
Posted On: 30-08-2021 06:50PM
ಉಡುಪಿ :ಉಡುಪಿಯ ಸಂತೆಕಟ್ಟೆ ಆಶೀರ್ವಾದ್ ಚಿತ್ರಮಂದಿರದ ಬಳಿ ಜೋಡಿಯೊಂದು ಪರಸ್ಪರ ವಾಗ್ವಾದಕ್ಕಿಳಿದು ಯುವಕನು ಯುವತಿಗೆ ಚೂರಿಯಿಂದ ಇರಿದು ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಬಂಟ್ವಾಳ : ಬಲೆ ತುಲು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನೆ
Posted On: 30-08-2021 04:17PM
ಮಂಗಳೂರು : ಬಂಟ್ವಾಳ ತಾಲೂಕಿನ ಅಂಬೇಡ್ಕರ್ ನಗರ ನಾವೂರ ಬಂಟ್ವಾಳದಲ್ಲಿ ಆದಿತ್ಯವಾರ (29/8/21)ದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ಅಂಬೇಡ್ಕರ್ ನಗರ ನಾವೂರ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ಬಲೆ ತುಲು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನಾ ಸಮಾರಂಭ ನಡೆಯಿತು.
ಕಲಾರತ್ನ ಪುರಸ್ಕೃತರಾದ ಆರ್. ಜೆ. ಎರೋಲ್
Posted On: 30-08-2021 12:09PM
ಕಾಪು : ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ರೇಡಿಯೋ ಜಾಕಿ ಎರೋಲ್ ಗೆ MAXLIFE ಸಂಸ್ಥೆಯು ಕಲಾರತ್ನ ಗೌರವವನ್ನು ನೀಡಿ ಪುರಸ್ಕರಿಸಿದೆ.
ಗ್ಯಾಂಗ್ ರೇಪ್, ಪುರುಷ ಪ್ರಧಾನ ಮಾನಸಿಕತೆ, ಸ್ವಾತಂತ್ರ್ಯ, ಸ್ವೇಚ್ಛೆ ಇತ್ಯಾದಿ.
Posted On: 30-08-2021 08:19AM
ಅತ್ಯಾಚಾರವನ್ನು ಯಾವ ನಾಗರಿಕ ಸಮಾಜ ಕೂಡ ಸಮರ್ಥನೆ ಮಾಡಬಾರದು. ಮೈಸೂರಿನ ಗ್ಯಾಂಗ್ ರೇಪ್ ಆರೋಪಿಗಳ ಬಂಧನವು ಆಗಿದೆ. ಅವರಿಗೆ ಅತ್ಯಂತ ಕಠಿಣವಾದ ಶಿಕ್ಷೆ ಆಗಲಿ ಎನ್ನುವುದು ನಮ್ಮ ಪ್ರಾರ್ಥನೆ. ಇಂಥಹಾ ಪ್ರಕರಣಗಳು ಆಗುವಾಗ ಒಮ್ಮೆ ಸಮಾಜ, ಸರಕಾರ, ಮಾಧ್ಯಮಗಳು ಬೆಚ್ಚಿ ಬೀಳುತ್ತವೆ. ಮತ್ತೆ ಕೆಲವೇ ದಿನಗಳಲ್ಲಿ ಮರೆತೇ ಬಿಡುತ್ತವೆ. ಇಲ್ಲಿ ಹಾಗಾಗದೇ ಇರಲಿ. ಅತ್ಯಾಚಾರಕ್ಕೆ ಒಳಗಾದ ಹುಡುಗಿ ತನ್ನ ಜೀವನ ಪೂರ್ತಿ ಮಾನಸಿಕವಾಗಿ ಜರ್ಜರಿತವಾಗಿ ಬದುಕುವಾಗ ಅದಕ್ಕೆ ಕಾರಣರಾದವರು 5-7 ವರ್ಷ ಮಾತ್ರ ಜೈಲುವಾಸ ಅನುಭವಿಸುವುದು, ಮತ್ತೆ ಹೊರಬಂದು ತಮ್ಮ ಹಳೆಯ ಚಾಳಿಗಳನ್ನು ಮುಂದುವರೆಸುವುದು ಖಂಡಿತವಾಗಿ ಸರಿಯಲ್ಲ. ಅತ್ಯಾಚಾರದ ಪ್ರಕರಣಗಳಲ್ಲಿ ಆಪರಾಧಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ಆಗಬೇಕು ಎನ್ನುವುದು ನಮ್ಮೆಲ್ಲರ ಆಶಯ ಆಗಬೇಕು.
ಈ ಬಾರಿ ಡಾಕ್೯ ಅಲೈಟ್ ವೇಷಧಾರಿಯಾಗಿ ಬರಲಿದ್ದಾರೆ ರವಿ ಕಟಪಾಡಿ - ನಮ್ಮ ಕೈಲಾದಷ್ಟು ಸಹಾಯ ಮಾಡಿ ಅನಾರೋಗ್ಯ ಪೀಡಿತ ಮಕ್ಕಳಿಗೆ ನೆರವಾಗೋಣ
Posted On: 29-08-2021 11:42PM
ಉಡುಪಿ : ಕೃಷ್ಣಜನ್ಮಾಷ್ಟಮಿಯೆಂದರೆ ಉಡುಪಿಯ ಜನತೆಗೆ ಎಲ್ಲಿಲ್ಲದ ಸಂತೋಷ. ಅಷ್ಟಮಿ ಎಂದಾಕ್ಷಣ ನಮಗೆ ನೆನಪು ಆಗುವುದು ವೇಷಧಾರಿಗಳು.
ಕುಂದಾಪುರ : ಬ್ರಹ್ಮಶ್ರೀ ನಾರಾಯಣಗುರುಗಳ 167 ನೇ ಜನ್ಮ ಜಯಂತಿಯ ಪ್ರಯುಕ್ತ ವಾಹನ ಜಾಥಾ
Posted On: 29-08-2021 10:06PM
ಕುಂದಾಪುರ : ಶ್ರೀ ನಾರಾಯಣಗುರು ಯುವಕ ಮಂಡಲ ಕುಂದಾಪುರ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮ ಜಯಂತಿಯ ಪ್ರಯುಕ್ತ ಬೃಹತ್ ವಾಹನ ಜಾಥಾ ಕಾರ್ಯಕ್ರಮವನ್ನು ಇಂದು ಹಿರಿಯರಾದ ಕಾಳಪ್ಪ ಪೂಜಾರಿ, ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಅಧ್ಯಕ್ಷರು ಅಶೋಕ್ ಪೂಜಾರಿ ಹಾಗೂ ಶ್ರೀ ನಾರಾಯಣ ಗುರು ಯುವಕ ಮಂಡಲ ಕುಂದಾಪುರ ಅಧ್ಯಕ್ಷರಾದ ಶ್ರೀನಾಥ ಕಡ್ಗಿಮನೆ ಚಾಲನೆ ನೀಡಿದರು.
