Updated News From Kaup
ಶಿರ್ವ : ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಸ್ವಚ್ಚತಾ ಕಾರ್ಯ
Posted On: 29-08-2021 09:42PM
ಕಾಪು : ರಾಷ್ಟ್ರೀಯ ಸ್ವಯಂಸೇವಕ ಸಂಘ ಶಿರ್ವ ಮಂಡಲದ ಸೇವಾ ಚಟುವಟಿಕೆಯ ಅಂಗವಾಗಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣ ವನ್ನು ಸ್ವಚ್ಛಗೊಳಿಸಲಾಯಿತು.
ರೋಟರಿ ಶಂಕರಪುರ : ವಿದ್ಯಾಸೇತು ವಿದ್ಯಾ ಅಭಿಯಾನದ ಉದ್ಘಾಟನೆ
Posted On: 26-08-2021 03:24PM
ಕಾಪು : ರೋಟರಿ ಶಂಕರಪುರ ವತಿಯಿಂದ ವಿದ್ಯಾ ಸೇತು ವಿದ್ಯಾ ಅಭಿಯಾನದ ಉದ್ಘಾಟನೆಯನ್ನು ವಲಯ ಐದರ ಎಜುಕೇಶನ್ ಮತ್ತು ಲಿಟರಸಿ ಕೋಆರ್ಡಿನೆಟರ್ ಆಗಿರುವ ಶ್ರೀನಿವಾಸ್ ರಾವ್ ಮಾಡಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ : ಪ್ರಶಾಂತ್ ಕುಲಾಲ್ ಗೆ 96.48% ಅಂಕ
Posted On: 26-08-2021 10:23AM
ಕಾಪು : 2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸೈಂಟ್ ಜಾನ್ ಶಾಲೆ ಶಂಕರಪುರ ಇಲ್ಲಿಯ ವಿದ್ಯಾರ್ಥಿ ಪ್ರಶಾಂತ್ ಕುಲಾಲ್ ಅವರು (603) 96.48% ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.
ಬಂಧಗಳಿಲ್ಲದ ಕರ್ಮ ನಿರತ ಶ್ರೀಕೃಷ್ಣ
Posted On: 26-08-2021 10:06AM
"ಕರ್ಮ"ವೇ ಪ್ರಧಾನವಾಗಿ ಅದೇ ಧರ್ಮವಾಗಿ ನಿರ್ವಹಿಸಲ್ಪಟ್ಟ ಅವತಾರ ಕೃಷ್ಣಾವತಾರ . ಸಾಮಾನ್ಯವಾಗಿ ಕರ್ಮವು 'ಬಂಧ'ವಾಗಿ ವ್ಯಕ್ತವಾಗುವುದಿದೆ . ಯಾವುದೋ ಬಂಧಕ್ಕೆ ಬದ್ಧವಾಗಿ ಕರ್ಮ ಕರ್ತವ್ಯವಾಗುವುದನ್ನೇ ಕಾಣುತ್ತಿರುವಂತೆಯೇ ಬಂಧ ರಹಿತವಾದ ಕರ್ಮವೇ ಲಕ್ಷ್ಯವಾಗಿರುವ ಒಂದು ವ್ಯಕ್ತಿತ್ವ ದ್ವಾಪರಯುಗದಲ್ಲಿ ಗಮನ ಸೆಳೆಯುತ್ತದೆ ಅದೇ 'ಕೃಷ್ಣ' . ಸಮಗ್ರ ಕೃಷ್ಣಾವತಾರದಲ್ಲಿ ತಾನು ಸ್ವೀಕರಿಸಿದ , ತನಗೆ ಕರ್ತವ್ಯವಾಗಿರುವ ಕರ್ಮದ ಅನುಷ್ಠಾನವೇ ನಿಚ್ಚಳವಾಗುತ್ತದೆ . ಕೃಷ್ಣ ಈ ಮನಃಸ್ಥಿತಿಯನ್ನು ಬಾಲ್ಯದಿಂದಲೇ ರೂಢಿಸಿಕೊಂಡು ಬಂದ . ದ್ವಾಪರಾಯುಗದಲ್ಲಿ ಸನ್ನಿಹಿತವಾದ ಕುರುಕ್ಷೇತ್ರ ಸಂಗ್ರಾಮದಲ್ಲಿ ಪ್ರತಿಪಾದಿಸಿದ . 'ಬಂಧ' ಎಂಬ ಕಟ್ಟನ್ನು ಕಿತ್ತೊಗೆಯಬಹುದು , 'ಕರ್ಮದ' ಮುಂದೆ 'ನಿಯಮವನ್ನು' ತಿರಸ್ಕರಿಸಿದರೆ ಪ್ರಮಾದವಲ್ಲವೇ ಅಲ್ಲ ಎಂಬುದು ಕೃಷ್ಣನ ನಿಲುವು ಆಗಿದ್ದಿರಬೇಕು. ಬಂಧ ರಹಿತವಾದ ಕರ್ಮವೇ ಧರ್ಮ .ಇದು ಕೃಷ್ಣ ಸಾಧಿಸಿದ ಪರಮ ಧರ್ಮ ,ಇದು ವಿಚಲಿತವಾಗದ ಮಾನವಧರ್ಮ . ಬಾಲ್ಯಕ್ಕೆ ಪ್ರೀತಿಯ , ಬಾಂಧವ್ಯದ ಮಾಧುರ್ಯವನ್ನು ಒದಗಿಸಿದ ನಂದಗೋಕುಲ , ಗೋಪಾಲಕರು , ಗೋಪಿಯರು , ಗೋವುಗಳನ್ನು ಬಿಟ್ಟು ಮಧುರೆಗೆ ಹೊರಟ ಕೃಷ್ಣ ಮತ್ತೆ ಗೋಕುಲಕ್ಕೆ ಬರಲೇ ಇಲ್ಲ .ಕೊಳಲನ್ನು ನುಡಿಸಲೇ ಇಲ್ಲ . ಆದರೆ ಕಿರೀಟದಲ್ಲಿ ಒಂದು ನವಿಲುಗರಿ ಮಾತ್ರ ಉಳಿಯುತ್ತದೆ . ಗೋಕುಲದಲ್ಲಿ ಏರ್ಪಟ್ಟ ಬಾಂಧವ್ಯದ ಬಂಧ ತಾತ್ಕಾಲಿಕವಾಗಿ ಮಾತ್ರ ಇರುತ್ತದೆ . ಲಕ್ಷ್ಯ ಪ್ರಧಾನವಾದಾಗ ಬಂಧದಿಂದ ಕಳಚಿಕೊಳ್ಳುವ ಕೃಷ್ಣನನ್ನು ಬಂಧವಿಮೋಚಕನೆಂದು ಹೊಗಳಲಾಯಿತೇ ಹೊರತು ನಿಷ್ಕರುಣಿ ಎಂದು ಗೋಪರು - ಗೋಪಾಲಕರು ಆಕ್ಷೇಪಿಸಲೇ ಇಲ್ಲ . ಬಂಧ ಮತ್ತ ಕರ್ಮಗಳ ನಡುವೆ ಅಂತರವೇ ಇಲ್ಲ ಎನ್ನುತ್ತಾ ಕೊನೆಗೆ ಈ ಅಂತರ ಸುದೀರ್ಘವಾಗಿದೆ ಎನ್ನುವುದನ್ನೂ ಪ್ರತಿಪಾದಿಸುತ್ತಾನೆ ಕೃಷ್ಣ . ಕರ್ತವ್ಯದ ಮುಂದೆ "ಬಂಧ" ಗೌಣ ಎಂದು ಮುಂದೆ ಬದುಕಿನ ದೀರ್ಘ ಅವಧಿಯಲ್ಲಿ ಸಾಧಿಸುವುದನ್ನು ಗಮನಿಸ ಬಹುದು . ಮಾವ ಕಂಸನ ವಧೆ ಬಂಧ ರಹಿತವಾದ ಕರ್ಮವಲ್ಲದೆ ಮತ್ತೇನು . ಮಾವ ಎಂಬ ಬಾಂಧವ್ಯದ ಬಂಧಕ್ಕೆ ಒಳಗಾಗದೆ ಎಸಗಿದ ಕರ್ತವ್ಯ . ಕುಬ್ಜೆಯ ವಕ್ರತೆಯನ್ನು ತಿದ್ದಿದ್ದು ಕೇವಲ 'ಕರ್ಮ' ಮಾತ್ರ ,ಇಲ್ಲಿ ಯಾವುದೇ ಬಂಧುತ್ವದ ಬಂಧವಿಲ್ಲ . ಕೃಷ್ಣನ ಮದುವೆಗಳೆಲ್ಲ ಸಂದರ್ಭದ ಅನಿವಾರ್ಯತೆಯೇ ಆಗಿದ್ದುವು . ನರಕಾಸುರನ ಬಂಧನದಲ್ಲಿದ್ದ ಸ್ತ್ರೀಯರನ್ನು ಬಿಡಿಸಿದ ಕೃಷ್ಣ ಅವರಿಗೆ ಬದುಕು ಕೊಡುತ್ತಾನೆ ,ಎಂದರೆ ಕೃಷ್ಣ ರಕ್ಷೆ ಕೊಡುತ್ತಾನೆ , ಜೀವನಕ್ಕೆ ಭದ್ರತೆಯನ್ನು ಕೊಡುತ್ತಾನೆ .ಇದು ಆತನ ಕರ್ತವ್ಯವಾಗಿತ್ತು . ದ್ವಾರಕೆಯ ನಿರ್ಮಾಣ ಕಾರ್ಯವು ಯದುಗಳಿಗೆ ರಾಜತ್ವ ಇಲ್ಲ ಎಂಬ ಶಾಪ ವಾಕ್ಯದ ಮುಂದುವರಿಕೆಗೆ ಒಡ್ಡಿದ ತಡೆ .ಐವತ್ತೇಳನೇಯ ರಾಜ್ಯವಾಗಿ ಮೂಡಿದ ರಾಜ್ಯದಲ್ಲಿ ಅಣ್ಣ ಬಲರಾಮನಿಗೆ ಪಟ್ಟಕಟ್ಟುತ್ತಾನೆ ,ತಾನು ಹೆಸರಿಗೆ ಯುವರಾಜನಾಗಿ ಜವಾಬ್ದಾರಿಯೇ ಇಲ್ಲದವನಂತೆ ವರ್ತಿಸುತ್ತಾ ನಿರ್ಲಿಪ್ತತೆ ಮೆರೆಯುತ್ತಾನೆ. ಅಸಾಧ್ಯವನ್ನು ಸಾಧ್ಯವೆಂದು ಮಾಡಿ ತೋರಿಸುವ ಕೃಷ್ಣ ಅಘಟಿತ ಘಟನಾ ಪಟುವಾಗಿ ತೋರುತ್ತಾನೆ . ಈ ಸಂದರ್ಭದಲ್ಲಿ ಬಂಧವನ್ನು ಉಳಿಸಿಕೊಳ್ಳುವುದೇ ಇಲ್ಲ .ತನ್ನ ಪಾಲಿನ ಕರ್ಮ ಎಂದು ನಿರ್ವಹಿಸುತ್ತಾನೆ . ಹಾಗೆಯೇ ಬದುಕುತ್ತಾನೆ .ತನ್ನನ್ನು ಬಂಧುವೆಂದು ಭಾವಿಸಿದವರಿಗೂ ದಂಡನೆಯನ್ನು ಕೊಟ್ಟೇಕೊಟ್ಟ .ದ್ರೌಪದಿಗೆ ಅಕ್ಷಯಾಂಬರ ಕೊಡುವುದು ಕೃಷ್ಣನಿಗೆ ಧರ್ಮವಾಗುತ್ತದೆ, ಆದರೆ ಎಂತಹ ಪರೀಕ್ಷೆಯನ್ನು ಒಡ್ಡಿದ (ಬಾಲ್ಯದಲ್ಲಿ ಗೋಪಿಕೆಯರ ಸೀರೆ ಕದ್ದ ದೋಷಕ್ಕೆ ಅಕ್ಷಯಾಂಬರ ಪ್ರಧಾನ ಪ್ರಾಯಶ್ಚಿತ್ತ ಎಂಬ ವಿಶ್ಲೇಷಣೆಯೂ ಇದೆ). ಪಾಂಡವ ಪಕ್ಷಪಾತಿಯೇ ಹೊರತು ಪಾಂಡವರೊಂದಿಗೆ ಬಾಂಧವ್ಯದ ನಂಟು ಬೆಳೆಸಿಕೊಳ್ಳುವುದಿಲ್ಲ .ಲೌಕಿಕ ಬಾಂಧವ್ಯದ ಹೊರತಾದ ಸ್ನೇಹ ಮಾತ್ರ ಸ್ಪಷ್ಟ . ಧರ್ಮಾತ್ಮರಾದ ಪಾಂಡವರಿಗೂ ಬೇಕಾದುದು ಧರ್ಮಸಮ್ಮತವಾದ ರಾಜ್ಯ ಮಾತ್ರ .ಹಾಗಾಗಿ ಕೃಷ್ಣ , ಧರ್ಮದ ಪಕ್ಷವಹಿಸಿದ . ಯಾಕೆಂದರೆ ಕೃಷ್ಣನದ್ದು ಧರ್ಮ ಸಂಸ್ಥಾಪನೆಗಾಗಿ ಎತ್ತಿದ ಅವತಾರ ತಾನೆ.
ಕಲ್ಯಾಣಪುರ ರೋಟರಿ ವತಿಯಿಂದ ಪುಸ್ತಕ ವಿತರಣೆ
Posted On: 25-08-2021 09:52AM
ಉಡುಪಿ : ರೋಟರಿ ಜಿಲ್ಲಾ ಯೋಜನೆ ವಿದ್ಯಾಸೇತು ಕಾರ್ಯಕ್ರಮದಡಿ ಕಲ್ಯಾಣಪುರ ರೋಟರಿ ವತಿಯಿಂದ ಟಿ.ಎಂ.ಎ. ಪೈ ಪ್ರೌಢ ಶಾಲೆ ಕಲ್ಯಾಣಪುರದ 41 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಈ ದಿನ ಟಿ.ಎಂ.ಎ. ಪೈ ಪ್ರೌಢ ಶಾಲೆ ಕಲ್ಯಾಣಪುರದಲ್ಲಿ ಶಾಲಾ ಇಂಟರಾಕ್ಟ್ ಕ್ಲಬ್ ನ ಸಹಯೋಗದಲ್ಲಿ ನಡೆಯಿತು.
ಬಂಟಕಲ್ ನ ಶ್ರಾವ್ಯ ಕುಲಾಲ್ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಚತುರ್ಥ ಸ್ಥಾನ
Posted On: 24-08-2021 09:40PM
ಕಾಪು : ಶಿರ್ವದ ಹಿಂದು ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗದ ಶ್ರಾವ್ಯ ಕುಲಾಲ್ ಇತ್ತೀಚೆಗೆ ಜರುಗಿದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ರಲ್ಲಿ 621 (99.36%) ಅಂಕ ಪಡೆದು ರಾಜ್ಯದಲ್ಲಿ ಚತುರ್ಥ ಸ್ಥಾನಿಯಾಗಿದ್ದು, ಕಲಿತ ಶಾಲೆಯಲ್ಲಿ ಪ್ರಥಮ ಸ್ಥಾನಿಯಾಗಿ ಕೀರ್ತಿಯನ್ನು ತಂದಿದ್ದಾರೆ.
ಪಡುಬಿದ್ರಿ : ಕಾರು ಢಿಕ್ಕಿಯಾಗಿ ಮೃತಪಟ್ಟ ಅಪರಿಚಿತ ವ್ಯಕ್ತಿ
Posted On: 24-08-2021 08:10PM
ಪಡುಬಿದ್ರಿ : ಅಪರಿಚಿತ ಭಿಕ್ಷುಕರೋರ್ವರಿಗೆ ಕಾರು ಢಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಬೀಡು ಬಳಿ ಸೋಮವಾರ ರಾತ್ರಿ ಘಟಿಸಿದೆ.
ಪೆರ್ಡೂರು : ವಿಜ್ಞಾನ ವಿಭಾಗದಲ್ಲಿ 600 ರಲ್ಲಿ 599 ಅಂಕ ಪಡೆದು ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಸ್ಥಾನಿಯಾದ ಶ್ರೀನಿಧಿ ಕೆ.ಕುಲಾಲ್
Posted On: 23-08-2021 10:21PM
ಉಡುಪಿ : ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಉಡುಪಿಯ ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೀನಿಧಿ ಕೆ. ವಿಜ್ಞಾನ ವಿಭಾಗದಲ್ಲಿ 600 ರಲ್ಲಿ 599 ಅಂಕ ಗಳಿಸುವ ಮೂಲಕ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.
ಸಾಮಾಜಿಕ ಜಾಲತಾಣಗಳ ಸ್ಪರ್ಧೆಗಳಿಂದ ಸಾಹಿತ್ಯದ ಗುಣಮಟ್ಟ ಕುಸಿದಿದೆ : ಹಾ. ಮ. ಸತೀಶ
Posted On: 23-08-2021 04:52PM
ಕಾಪು : ಪ್ರತೀ ದಿನ, ಪ್ರತಿ ವಾರ ನಿರಂತರವಾಗಿ ಸಾಹಿತ್ಯ ಸ್ಪರ್ಧೆಗಳನ್ನು ನಡೆಸುವ ಉದ್ಧೇಶದಿಂದಲೇ ವಾಟ್ಸಾಪ್ ಸಾಹಿತ್ಯ ಬಳಗಗಳನ್ನು ರೂಪಿಸುವುದು ಎಷ್ಟು ಮಾತ್ರಕ್ಕೂ ಸಲ್ಲದು. ಇದರಿಂದಾಗಿ ಉದಯೋನ್ಮುಖ ಬರಹಗಾರರಲ್ಲಿ ಪ್ರಶಸ್ತಿ, ಬಹುಮಾನಗಳ ಹಂಬಲ ಹೆಚ್ಚಿ ಅವರು ಕೃತಿಚೌರ್ಯ ಮಾಡಲು ಮುಂದಾಗುತ್ತಾರೆ. ಇಂಥ ಬೆಳವಣಿಗೆ ಸಾಹಿತ್ಯಕ್ಕೆ ಮಾರಕ ಎಂದು ಖ್ಯಾತ ಕವಿ, ಬರಹಗಾರ, ಶಿಕ್ಷಕ ಬೆಂಗಳೂರಿನ ಹಾ. ಮ. ಸತೀಶ ಅವರು ಹೇಳಿದರು. ಅಖಿಲ ಕರ್ನಾಟಕ ಬರಹಗಾರರ ವೇದಿಕೆಯು ಗೂಗಲ್ ಮೀಟ್ ಮೂಲಕ ನಡೆಸಿದ "ವಾಟ್ಸಾಪ್ ಸಾಹಿತ್ಯ ಬಳಗಗಳು ಮತ್ತು ಉದಯೋನ್ಮುಖ ಬರಹಗಾರರು" ಎಂಬ ವಿಷಯದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು.
ಖ್ಯಾತ ಖಗೋಳಶಾಸ್ತ್ರಜ್ಞ ಡಾ.ಎ.ಪಿ ಭಟ್ - ಅದಮಾರು ಪಿಪಿಸಿ ಕಾಲೇಜಿನ ಗೌರವ ಭೌತಶಾಸ್ತ್ರ ಉಪನ್ಯಾಸಕರಾಗಿ ನೇಮಕ
Posted On: 23-08-2021 11:24AM
ಕಾಪು : ಅದಮಾರು ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿಗೆ ಭೌತಶಾಸ್ತ್ರ ವಿಶೇಷ ಗೌರವ ಉಪನ್ಯಾಸಕರಾಗಿ ಪೂರ್ಣಪ್ರಜ್ಞ ಪದವಿ ಕಾಲೇಜು ಉಡುಪಿಯ ನಿವೃತ್ತ ಪ್ರಾಂಶುಪಾಲರೂ, ನಿವೃತ್ತ ಭೌತಶಾಸ್ತ್ರ ಪ್ರಾಧ್ಯಾಪಕರೂ ಹಾಗೂ ಖ್ಯಾತ ಖಗೋಳಶಾಸ್ತ್ರಜ್ಞರಾದ ಡಾ.ಎ.ಪಿ.ಭಟ್ ರವರನ್ನು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರೂ ಹಾಗೂ ಅದಮಾರು ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ನೇಮಕ ಮಾಡಿದ್ದಾರೆ.
