Updated News From Kaup
ಭಂಡಾರಿಬೆಟ್ಟು : ಬಲೆ ತುಲು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನೆ
Posted On: 23-08-2021 09:53AM
ಮಂಗಳೂರು : ಬಂಟ್ವಾಳ ತಾಲೂಕಿನ ಯುವಜನ ವ್ಯಾಯಾಮಶಾಲೆ ಭಂಡಾರಿಬೆಟ್ಟುವಿನಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ಬಲೆ ತುಲು ಲಿಪಿ ಕಲ್ಪುಗ ಕಾರ್ಯಗಾರ ಉದ್ಘಾಟನಾ ಸಮಾರಂಭ ನಡೆಯಿತು. ಜೈ ತುಲುನಾಡ್ (ರಿ.) ಅಧ್ಯಕ್ಷರಾದ ಸುದರ್ಶನ್ ಸುರತ್ಕಲ್ ಇವರ ಅಧ್ಯಕ್ಷತೆಯಲ್ಲಿ ನಡೆದ ತುಲು ಲಿಪಿ ಕಲಿಯುವ ಕಾರ್ಯಗಾರವನ್ನು ಚೇತನ್ ಮುಂಡಾಜೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ ರವರು ತುಲು ಲಿಪಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.
92 ಹೇರೂರು : ಶ್ರೀ ಗುರು ರಾಘವೇಂದ್ರ ಚೆಂಡೆ ಬಳಗ ಉದ್ಘಾಟನೆ, ಗುರುವಂದನ ಕಾರ್ಯಕ್ರಮ
Posted On: 22-08-2021 10:30PM
ಕಾಪು : 92 ಹೇರೂರಿನ ಶ್ರೀ ಗುರು ರಾಘವೇಂದ್ರ ಚೆಂಡೆ ಬಳಗವನ್ನು ಶ್ರೀ ಗುರು ರಾಘವೇಂದ್ರ ಸಮಾಜ ಸೇವಾ ಮಂಡಳಿಯ ಸ್ಥಾಪಕ ಕಾರ್ಯದರ್ಶಿ ಶ್ರೀನಿವಾಸ ಪ್ರಭು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಹೇರೂರು ಗ್ರಾಮದಲ್ಲಿ ಉಚಿತವಾಗಿ ಚೆಂಡೆ ತರಬೇತಿಯನ್ನು ಪ್ರಾರಂಭಿಸಿ ಇಂದು ಗುರುವಂದನ ಕಾರ್ಯಕ್ರಮವನ್ನು ಮಾಡುತ್ತಿರುವುದಕ್ಕೆ ಶುಭ ಹಾರೈಸಿದರು.
ಅದಮಾರು : ಸರ್ವೋದಯ ಸಮುದಾಯ ಭವನದಲ್ಲಿ ಕೋವಿಡ್ 19 ಲಸಿಕೆ - 472 ಫಲಾನುಭವಿಗಳು
Posted On: 22-08-2021 11:48AM
ಕಾಪು : ಪ್ರಾಥಮಿಕ ಆರೋಗ್ಯ ಕೇಂದ್ರ ಮುದರಂಗಡಿ , ಇವರ ವತಿಯಿಂದ ಎಲ್ಲೂರು ಪಂಚಾಯತ್ ಆಯೋಜಿಸಿರುವ 'ಕೊವಿಡ್ 19' ಲಸಿಕೆ ಹಾಕುವ ಅಭಿಯಾನವು ಅದಮಾರು ಆದರ್ಶ ಯುವಕ ಸಂಘದ ಸರ್ವೋದಯ ಸಮುದಾಯ ಭವನದಲ್ಲಿ ನಡೆಯಿತು. ಎಲ್ಲೂರು ಗ್ರಾಮದಲ್ಲೆ ದಾಖಲೆಯ ಪ್ತಮಾಣದಲ್ಲಿ 472 ಮಂದಿ ವ್ಯಾಕ್ಸಿನ್ ಪಡೆದರು.
ಮುದರಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮದಿನಾಚರಣೆ
Posted On: 22-08-2021 11:04AM
ಕಾಪು : ಬಿಲ್ಲವ ಸಮಾಜ ಸೇವಾ ಸಂಘ (ರಿ.) ಮುದರಂಗಡಿ ಇಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 167ನೇ ಜನ್ಮದಿನಾಚರಣೆಯ ಪ್ರಯುಕ್ತ ನಾಳೆ (ಸೋಮವಾರ) ಕ್ಷೇತ್ರದ ಅರ್ಚಕರಾದ ದಿನೇಶ್ ಶಾಂತಿ ಮತ್ತು ಶಂಕರ ಶಾಂತಿ ಅವರ ಧಾರ್ಮಿಕ ವಿಧಿ ವಿಧಾನದೊಂದಿಗೆ ನೆರವೇರಲಿದೆ.
ಭ್ರಾತೃ - ಭಗಿನಿ ಭಾಂದವ್ಯ ಬೆಸೆಯುವ
Posted On: 21-08-2021 06:55PM
‘ರಕ್ಷಾಬಂಧನ’ ಹಾಗೂ ‘ಉಪಾಕರ್ಮ’ ಈ ಎರಡು ವಿಧದ ಆಚರಣೆಗಳಲ್ಲಿ ಒಂದು ‘ಭಾವ’ ಸಂಬಂಧಿಯಾದರೆ ಮತ್ತೊಂದು ‘ಜ್ಞಾನ’ ಶುದ್ಧಿಯನ್ನು ಎಚ್ಚರಿಸುವ ಆಚರಣೆಗಳು. ರಾಖೀ ಕಟ್ಟುವುದು, ಯಜ್ಞೋಪವೀತ ಧರಿಸುವುದು ಇವೆರಡೂ ದಾರ ಅಥವಾ ನೂಲಿನ ನಂಟನ್ನು ಹೊಂದಿರುವಂತಹದ್ದು. ನೂಲು ಅಥವಾ ದಾರ ಕಟ್ಟುವುದು ಎಂಬ ಕ್ರಿಯೆ ಜೋಡಿಸುವ ಸಾಧನವಾಗಿ, ಬಂಧನದ ಬದ್ಧತೆಯ ಸಂಕೇತವಾಗಿ ಇವೆ ,ಎಂದರೆ ತಪ್ಪಾಗಲಾರದು. ರಕ್ಷಾಬಂಧನ : ನಮ್ಮ ದೇಶದ ಸಂಸ್ಕೃತಿ ನಿರ್ದೇಶಿಸಿದ ಸಹಜೀವನ ವಿಧಾನದ ಹಲವು ಅಂಶಗಳಲ್ಲಿ ಪರಸ್ಪರ ಬಾಂಧವ್ಯವೂ ಒಂದು. ಇದರಿಂದಲೇ ಸೌಹಾರ್ದ, ಸುಖೀ ಸಮಾಜದ ಪರಿಕಲ್ಪನೆಯ ಸಾಕಾರ ಸಾಧ್ಯ. ಅದಕ್ಕೆ ಪೂರಕವಾಗಿ ನಮ್ಮಆಚರಣೆಗಳು, ಮತಾಚಾರಗಳು ರೂಪುಗೊಂಡವು. ಇದರಲ್ಲಿ ಸಮಷ್ಟಿ ಚಿಂತನೆಯ,ನಾವೆಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಭಾವ ಉದ್ದೀಪಿಸುವ ಭ್ರಾತೃ - ಭಗಿನಿ ಸಂಬಂಧ ಬೆಸೆಯುವ ರಕ್ಷಾಬಂಧನ, ಭಾವನೆ, ಶುದ್ಧ ಮನಸ್ಥಿತಿಯ ಪ್ರತೀಕವಾಗಿ ರೂಢಿಯಲ್ಲಿದೆ. ವ್ರತ, ಪೂಜೆ, ಮಹೋತ್ಸವ, ಮಹಾಯಾಗ, ಮದುವೆ, ಉಪನಯನ ಮುಂತಾದ ಉತ್ಸವಗಳು ನಿರ್ವಿಘ್ನವಾಗಿ ನೆರವೇರಲೆಂದು ದೇವರಲ್ಲಿ ಪ್ರಾರ್ಥಿಸಿ ಕಂಕಣಬಂಧದಿಂದ ದೀಕ್ಷೆ ಸ್ವೀಕರಿಸುವ ವಿಧಿಯೊಂದು ನಮ್ಮ ದೇಶದಲ್ಲಿ ರೂಢಿಯಲ್ಲಿದೆ. ದುಷ್ಟ ಶಕ್ತಿಗಳು ಸತ್ಕರ್ಮಗಳಿಗೆ ಆತಂಕ ಒಡ್ಡದಿರಲಿ ಎಂಬುದು ಇಲ್ಲಿಯ ಆಶಯ.ಇದೇ ಪರಿಕಲ್ಪನೆಯು ಸ್ರ್ತೀ-ಪುರುಷರ ನಡುವೆ ಸಾಹೋದರ್ಯದ ಪವಿತ್ರ ಸಂಬಂಧವನ್ನು ಗಾಢವಾಗಿಸುವ ಸಂದರ್ಭವಾಗಿ ರಕ್ಷಾಬಂಧನ ಅಥವಾ ರಾಖೀ ಹಬ್ಬವೆಂದು ವಿಸ್ತೃತ ಅರ್ಥವ್ಯಾಪ್ತಿಯನ್ನು ಪಡೆಯುತ್ತಾ ಹಬ್ಬವಾಗಿ ಸ್ವೀಕರಿಸಲ್ಪಟ್ಟಿರಬಹುದು.
ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ಮತ್ತು ವಿದ್ಯಾರ್ಥಿವೇತನ ವಿತರಣೆ
Posted On: 21-08-2021 06:36PM
ಕಾಪು : ಮಂಡೇಡಿ ಶ್ರೀ ದೇವಿ ಭಜನಾ ಮಂಡಳಿಯಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ಮತ್ತು ದ್ವಿತೀಯ ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ತೇರ್ಗಡೆಯಾದ ಸುಮಾರು 25 ಮಕ್ಕಳಿಗೆ ಮಕ್ಕಳನ್ನು ಗುರುತಿಸಿ ಗೌರವಿಸಲಾಯಿತು.
ತೆಂಗು ಮತ್ತು ಅಡಿಕೆ ಮರ ಹತ್ತುವವರನ್ನು ಅಸಂಘಟಿತ ಕಾರ್ಮಿಕರ ವಲಯಕ್ಕೆ ಸೇರ್ಪಡೆಗೊಳಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮನವಿ
Posted On: 20-08-2021 03:03PM
ಕಾಪು : ತೆಂಗು ಮತ್ತು ಅಡಿಕೆ ಮರ ಹತ್ತುವವರನ್ನು ಅಸಂಘಟಿತ ಕಾರ್ಮಿಕರ ವಲಯಕ್ಕೆ ಸೇರ್ಪಡೆಗೊಳಿಸುವ ಬಗ್ಗೆ ಕೇಂದ್ರ ಕೃಷಿ ಮತ್ತು ರೈತ ಸಬಲೀಕರಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಗೆ ಉಡುಪಿ ಜಿಲ್ಲೆಯ ತೆಂಗು ಮತ್ತು ಅಡಿಕೆ ಬೆಳೆಗಾರರ ಪ್ರಕೋಷ್ಟದ ಪರವಾಗಿ ಸಂಚಾಲಕರಾದ ಪ್ರಾಣೇಶ್ ಹೆಜಮಾಡಿ ಮನವಿ ಸಲ್ಲಿಸಿದರು.
ವರಮಹಾಲಕ್ಷ್ಮಿ ವ್ರತ -ಸಂಪತ್ತಿನ ರಾಣಿಯ ಆರಾಧನೆ
Posted On: 20-08-2021 09:11AM
"ಲಕ್ಷಯತಿ ಪಶ್ಯತಿ ಭಕ್ತಜನಾನ್ ಇತಿ ಲಕ್ಷ್ಮೀ" ಇದು ಲಕ್ಷ್ಮೀ ಶಬ್ದದ ವ್ಯುತ್ಪತ್ತಿ. ಉಪಾಸಕರನ್ನು ಕೃಪಾಕಟಾಕ್ಷದಿಂದ ವೀಕ್ಷಿಸುವವಳೇ ಲಕ್ಷ್ಮೀ. 'ಶ್ರೀ' ಎಂಬುದು ಲಕ್ಷ್ಮೀಯ ನಾಮಾಂತರ. ಪ್ರಭೆ, ಶೋಭೆ, ಕೀರ್ತಿ, ಕಾಂತಿ, ವಿಭೂತಿ, ಮತಿ, ವರ್ಚಸ್, ತೇಜಸ್, ಸೌಂದರ್ಯ, ವೃದ್ಧಿ, ಸಿದ್ಧಿ, ಸೌಭಾಗ್ಯ, ಕಮಲ, ಬಿಲ್ವವೃಕ್ಷ ಮುಂತಾದುವು ಶ್ರೀ ಶಬ್ದಕ್ಕಿರುವ ಹಲವು ಅರ್ಥಗಳು. ಸಂಪತ್ತು ಎಂಬುದು ಸಾಮಾನ್ಯ ಅರ್ಥವಾದರೂ ಐಶ್ವರ್ಯವೆಂಬುದು ಪ್ರಧಾನವಾದ ಅರ್ಥ ಅಥವಾ ಸಾಮಾನ್ಯ ಒಪ್ಪಿಗೆ - ತಿಳಿವಳಿಕೆ. 'ಈಶ್ಚರಸ್ಯ ಭಾವಃ ಐಶ್ವರ್ಯಂ''. ಪರಮಾತ್ಮನ ಅನುಗ್ರಹಕಾರಕವಾದ ಗುಣ ವಿಶೇಷವೇ ಶ್ರೀ. ಲಕ್ಷ್ಮೀ ಸಮುದ್ರ ಮಥನದಲ್ಲಿ ಹುಟ್ಟಿದಳು. ನಾರಾಯಣನನ್ನು ವರಿಸಿ ತಾನು ಮಹಾಲಕ್ಷ್ಮೀ ಯಾದಳು. ನಾರಾಯಣನು ಲಕ್ಷ್ಮೀನಾರಾಯಣನಾದ, ಶ್ರೀಮನ್ನಾರಾಯಣನಾದ. ಸ್ಥಿತಿಕರ್ತನಾದ-ಪಾಲನಾಧಿಕಾರಿಯಾಗಿದ್ದ ನಾರಾಯಣನು ಸಂಪತ್ತಿನ ಅಧಿದೇವತೆಯಾದ ಲಕ್ಷ್ಮೀಗೆ ವಲ್ಲಭನಾಗಿ ಸೌಭಾಗ್ಯವಂತನಾದ, ಭಕ್ತರ ಇಷ್ಟಾರ್ಥ ಅನುಗ್ರಹಿಸಲು ಸರ್ವಶಕ್ತನಾದ. ಶ್ರೀಮನ್ನಾರಾಯಣನಿಂದ ಲಕ್ಷ್ಮೀ ಬಹುಮಾನ್ಯಳಾದಳು. ಶ್ರೀಮನ್ನಾರಾಯಣ ಆಕೆಯನ್ನು ಹೃದಯದಲ್ಲೆ ಧರಿಸಿಕೊಂಡ. ಹೀಗೆ ಭಾಗ್ಯವತಿಯಾದ ಲಕ್ಷ್ಮೀಯಿಂದ ಸಮೃದ್ಧವಾದ ಸ್ಥಿರಸಂಪತ್ತನ್ನು ಪಡೆಯಲು, ಸರ್ವ ಭೋಗಭಾಗ್ಯದ ಸುಖವನ್ನು ಪಡೆಯಲು ಆಕೆಯನ್ನು ಆರಾಧಿಸುವ ಪರ್ವದಿನವು ಶ್ರಾವಣಮಾಸದ ಶುದ್ಧ ಪಕ್ಷದ ಎರಡನೇ ಶುಕ್ರವಾರ ಒದಗಿಬರುತ್ತದೆ .ಆ ದಿನದಂದು ಲಕ್ಷ್ಮೀಯನ್ನು ವರಗಳನ್ನು ಅನುಗ್ರಹಿಸುವವಳು ಎಂಬ ಅನುಸಂಧಾನದೊಂದಿಗೆ "ವರಮಹಾಲಕ್ಷ್ಮೀ"; ಎಂದು ಪರಿಕಲ್ಪಸಿಕೊಂಡು ಆರಾಧಿಸುವುದು.
ಬಿಸಿಎ ಮತ್ತು ಉದ್ಯೋಗ ಅವಕಾಶಗಳು - ವೆಬಿನಾರ್
Posted On: 19-08-2021 10:41PM
ಕಾಪು : ವಿವೇಕಾನಂದ ಕಾಲೇಜಿನ ಗಣಕವಿಜ್ಞಾನ ಮತ್ತು ಐಟಿ ಕ್ಲಬ್ನ ಜಂಟಿ ಸಹಯೋಗದಲ್ಲಿ ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ, ಬಿಸಿಎ ವಿದ್ಯಾರ್ಥಿಗಳಿಗೆ ದೊರಕಬಹುದಾದ ಉದ್ಯೋಗಗಳು ಮತ್ತು ಅವಕಾಶಗಳ ಬಗ್ಗೆ ಒಂದು ದಿನದ ಕಾರ್ಯಗಾರವನ್ನು ಏರ್ಪಡಿಸಲಾಯಿತು.
ತುಲು ಭಾಷೆಗೆ ಅಧಿಕೃತ ಸ್ಥಾನಮಾನಕ್ಕಾಗಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆಗೆ ಜೈ ತುಲುನಾಡ್ ಸಂಘಟನೆಯಿಂದ ಮನವಿ
Posted On: 19-08-2021 08:10PM
ಉಡುಪಿ : ಅಂಬಲಪಾಡಿ ಕಾರ್ತಿಕ್ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಜೈ ತುಲುನಾಡ್ (ರಿ.) ಸಂಘಟನೆಯ ಪರವಾಗಿ ಸದಸ್ಯರಾದ ಅಕ್ಷತಾ ಕುಲಾಲ್ ಇವರಿಂದ ಕೇಂದ್ರ ಕೃಷಿ ಸಚಿವೆಯಾದ ಶೋಭಾ ಕರಂದ್ಲಾಜೆ ಇವರಿಗೆ ತುಲು ಭಾಷೆಗೆ ಕರ್ನಾಟಕ ರಾಜ್ಯದಲ್ಲಿ ಅಧಿಕೃತ ಸ್ಥಾನಮಾನ ನೀಡುವಂತೆ ಹಾಗೂ ಈ ವಿಷಯವನ್ನು ಆರ್ಟಿಕಲ್ 347 ಪ್ರಕಾರ ಸನ್ಮಾನ್ಯ ರಾಷ್ಟ್ರಪತಿಗಳ ಗಮನಕ್ಕೆ ತರುವಂತೆ ಮನವಿ ಸಲ್ಲಿಸಲಾಯಿತು.
