Updated News From Kaup

ಪೆರ್ಡೂರು ಕುಲಾಲ ಸಂಘದ ಸೇವಾದಳ ಘಟಕದ ನೂತನ ದಳಪತಿಯಾಗಿ ಮಂಜುನಾಥ್ ಕುಲಾಲ್ ಕುಬ್ರಿ ಮುಳ್ಳುಗುಡ್ಡೆ ಆಯ್ಕೆ

Posted On: 03-08-2021 09:44PM

ಉಡುಪಿ : ಕುಲಾಲ ಸಂಘ (ರಿ.) ಪೆರ್ಡೂರು ಇದರ ಸೇವಾದಳ ಘಟಕದ ನೂತನ ದಳಪತಿಯಾಗಿ ಮಂಜುನಾಥ್ ಕುಲಾಲ್ ಕುಬ್ರಿ ಮುಳ್ಳುಗುಡ್ಡೆ ಆಯ್ಕೆಯಾಗಿದ್ದಾರೆ.

ಪೆರ್ಡೂರು : ಕುಲಾಲ ಸಂಘದ ಮಹಿಳಾ ಘಟಕದ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ

Posted On: 03-08-2021 09:37PM

ಉಡುಪಿ : ಪೆರ್ಡೂರು ಕುಲಾಲ ಸಂಘದ ಆವರಣದಲ್ಲಿ ಮಹಿಳಾ ಘಟಕದ ಸದಸ್ಯರುಗಳು ಸಿದ್ದಪಡಿಸಿದ ತುಳುನಾಡಿನ ಆಟಿ ತಿಂಗಳಿನ ವಿವಿಧ ಬಗೆಯ ಸುಮಾರು 18 ಬಗೆಯ ಖಾದ್ಯ, ತಿನಿಸುಗಳ ಸವಿಯನ್ನು ವಿಶೇಷವಾಗಿತ್ತು.

ಶಿರ್ವ : ಕಸ ಬಿಸಾಡುವವರ ವಿವರ ನೀಡಿದವರಿಗೆ ಗ್ರಾ.ಪಂ ನಿಂದ ಬಹುಮಾನ

Posted On: 02-08-2021 10:12PM

ಕಾಪು : ಪ್ರತಿ ಗ್ರಾಮ ಪಂಚಾಯತ್ ಗಳಲ್ಲಿ ಕಸ ಸಂಗ್ರಹಣೆಗೆ ಸೂಕ್ತ ವ್ಯವಸ್ಥೆ ಇದ್ದರೂ ಅದನ್ನು ಜನರು ಬಳಸದಿರುವುದು ಒಂದು ದೊಡ್ಡ ಸಮಸ್ಯೆಯಾಗುತ್ತಿದೆ. ಕೆಲವರು ತಮಗೆ ಬೇಕಾದಲ್ಲಿ ಕಸ ಬಿಸಾಡುವ ಮೂಲಕ ವಾತಾವರಣವನ್ನು ಕಲುಷಿತಗೊಳಿಸುತ್ತಿದ್ದಾರೆ. ಇಂತವರಿಗೆ ಸೂಕ್ತ ದಂಡ ಹಾಗೆಯೇ ಕಸ ಬಿಸಾಡುವವರ ಮಾಹಿತಿ ನೀಡಿದವರಿಗೆ ಬಹುಮಾನವನ್ನು ನೀಡುವುದಾಗಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಗ್ರಾಮ ಪಂಚಾಯತ್ ಘೋಷಿಸಿದೆ.

ಹಾಡುಹಗಲೇ ಮಹಿಳೆ ಹಾಗೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ

Posted On: 02-08-2021 03:59PM

ಕುಂದಾಪುರ : ದಿನಾಂಕ ಜುಲೈ 30ರಂದು ಸರಿಸುಮಾರು ಮಧ್ಯಾಹ್ನ 4 ಘಂಟೆ ಹೊತ್ತಿಗೆ ದತ್ತಾತ್ರೇಯ ಫ್ಲಾಟ್ ನ ಸಮೀಪ ಆಕ್ಟಿವ್ ಹೋಂಡಾ ಬೈಕ್ ನಲ್ಲಿ ಬಂದು ಓರ್ವ ಮಹಿಳೆಯೊಂದಿಗೆ ಅಸಭ್ಯ ರೀತಿಯಿಂದ ವರ್ತಿಸಿ ಅಲ್ಲಿಂದ ಪರಾರಿಯಾಗಿ ಮುಂದೆ ನಾರಾಯಣ ಗುರು ಕಲ್ಯಾಣ ಮಂಟಪದ ಸಮೀಪದಲ್ಲಿ ತಾಯಿ ಮಗಳು ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಮಗಳ ಜೊತೆಗೆ ಅಸಭ್ಯ ರೀತಿಯಲ್ಲಿ ವರ್ತಿಸಿ ಬೈಕ್ ನಲ್ಲಿ ಪರಾರಿಯಾಗಿದ್ದಾನೆ.

ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ ಮತ್ತು ಮಹಿಳಾ ಬಳಗದಿಂದ ಆಷಾಢ ಸಂಭ್ರಮ

Posted On: 02-08-2021 02:41PM

ಕಾಪು : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ (ರಿ.) ಮತ್ತು ಮಹಿಳಾ ಬಳಗದ ವತಿಯಿಂದ ಶಿರ್ವದಲ್ಲಿ ಆಷಾಢ ಸಂಭ್ರಮ ಎಂಬ ವಿನೂತನ ಕಾರ್ಯಕ್ರಮವನ್ನು ಶಿರ್ವ ರಾಘವೇಂದ್ರ ಆಚಾರ್ಯ ದಂಪತಿಗಳು ಉದ್ಘಾಟಿಸಿದರು.

ಕೊರೋನಾ ವಾರಿಯರ್ಸ್ ನೆಲೆಯಲ್ಲಿ ಕಾಪು ಅಂಚೆ ಕಚೇರಿಯ ಅಂಚೆ ಪಾಲಕರು ಹಾಗೂ ಸಿಬ್ಬಂದಿಗಳಿಗೆ ಸಮ್ಮಾನ

Posted On: 02-08-2021 02:30PM

ಕಾಪು : ಜನಸಂಪರ್ಕ ಜನ ಸೇವಾ ವೇದಿಕೆ ಕಳತ್ತೂರು-ಕಾಪು ಇವರ ಆಶ್ರಯದಲ್ಲಿ ಕೊರೋನಾ ವಾರಿಯರ್ಸ್ಗಳ ನೆಲೆಯಲ್ಲಿ ಕಾಪು ಅಂಚೆ ಕಚೇರಿಯ ಅಂಚೆ ಪಾಲಕರು ಹಾಗೂ ಎಲ್ಲಾ ಸಿಬ್ಬಂದಿಗಳನ್ನು ಶನಿವಾರ ಕಾಪು ಪ್ರಧಾನ ಅಂಚೆ ಕಛೇರಿಯಲ್ಲಿ ಸಮ್ಮಾನಿಸಿ, ಅಭಿನಂದಿಸಲಾಯಿತು.

ಕಲ್ಯಾಣಪುರ ರೋಟರಿ ಕ್ಲಬ್ ಸದಸ್ಯರ ಕುಟುಂಬ ಸಮ್ಮಿಲನ ಆಟಿದ ಗಮ್ಜಾಲ್ ವಿಶೇಷ ಕಾರ್ಯಕ್ರಮ

Posted On: 02-08-2021 02:23PM

ಉಡುಪಿ : ಕಲ್ಯಾಣಪುರ ರೋಟರಿ ಕ್ಲಬ್ ಸದಸ್ಯರ ಕುಟುಂಬ ಸಮ್ಮಿಲನ ಆಟಿದ ಗಮ್ಜಾಲ್ ವಿಶೇಷ ಕಾರ್ಯಕ್ರಮ ಉಡುಪಿಯ ಮೂಡುಬೆಟ್ಟು ಗ್ರೀನ್ ಡೇಲ್ ನಿವೇಶನದಲ್ಲಿ ನಡೆಯಿತು. ಅಧ್ಯಕ್ಷ ಶಂಭು ಶಂಕರ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಗೋವಿಗಾಗಿ ಮೇವು 2021-22 ಅಭಿಯಾನಕ್ಕೆ ಚಾಲನೆ

Posted On: 01-08-2021 05:47PM

ಉಡುಪಿ : ಪೇಜಾವರ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಕಳೆದ ವರ್ಷ ಆರಂಭಗೊಂಡ ಗೋವಿಗಾಗಿ ಮೇವು ಅಭಿಯಾನಕ್ಕೆ ಮಾರ್ಚ್‌ ತನಕ 300 ಕ್ಕೂ ಹೆಚ್ಚು ಸಂಘಟನೆ ಗಳು ಭಾಗಿಯಾಗಿ ಅಭಿಯಾನ ಚಿಕ್ಕಮಂಗಳೂರು ಜಿಲ್ಲೆಗೂ ಹಬ್ಬಿ ಯಶಸ್ವಿಯಾಯಿತು. ಈ ವರ್ಷದ ಗೋವಿಗಾಗಿ ಮೇವು ಕಾರ್ಯಕ್ರಮಕ್ಕೆ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಗೋವಿಗೆ ಮೇವನ್ನು ನೀಡುವುದರ ಮೂಲಕ ಅಧಿಕೃತ ಚಾಲನೆ ನೀಡಿದರು.

ಸಹಾಯದ ನಿರೀಕ್ಷೆಯಲ್ಲಿ ಸರಸ್ವತಿ

Posted On: 01-08-2021 10:02AM

ಕಾಪು : ಕುರ್ಕಾಲು ಗ್ರಾಮದ ಕುಂಜಾರುಗಿರಿ ನಿವಾಸಿ ಶಂಕರ್ ಅವರ ಧರ್ಮಪತ್ನಿ ಶ್ರೀಮತಿ ಸರಸ್ವತಿ ಅವರು ಮನೆ ಕೆಲಸ ಮಾಡುತ್ತಿದ್ದು ಅವರಿಗೆ ಸುಮಾರು 25 ವರ್ಷವಾಗಿರುತ್ತದೆ. ಒಂದು ಹೆಣ್ಣು ಮಗುವಿದ್ದು ಸರಸ್ವತಿ ಅವರಿಗೆ 2 ವರ್ಷದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರಿಗೆ ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಬೇಕಾಗಿದೆ.

ಶಿರ್ವ : ನಿವೃತ್ತರಿಗೆ ಶುಭವಿದಾಯ

Posted On: 31-07-2021 05:18PM

ಕಾಪು : ಒಂದು ಸಂಸ್ಥೆಯ ಸವ೯ತೋಮುಖ ಬೆಳವಣಿಗೆಯಲ್ಲಿ ಪ್ರತಿಯೊಬ್ಬರ ಸೇವೆಯು ಅತ್ಯಂತ ಅಮೂಲ್ಯ ಹಾಗೂ ಉಪಯುಕ್ತವಾದುದು ವಗ೯ವಾರು ಕತ೯ವ್ಯ ಅನ್ನುವುದು ಜವಾಬ್ದಾರಿಯ ಹಿನ್ನೆಲೆಯಲ್ಲಿ ಇದ್ದರೂ ಕೂಡ ಪ್ರತಿಯೊಬ್ಬರ ಸೇವೆಯೂ ಪರಿಗಣಿತ ಹಾಗೂ ಶ್ರೇಷ್ಠ ವಾದುದು ಎಂದು ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಧರ್ಮಗುರುಗಳಾದ ಡೆನಿಸ್ ಡೇಸಾ ಸಂತ ಮೇರಿ ಮಹಾವಿದ್ಯಾಲಯದ ಆಡಳಿತ ಸಿಬ್ಬಂದಿಯಾದ ಅಲ್ವಿರಾ ಕ್ಲೇರೆನ್ಸ್ ಫೆನಾ೯ಂಡಿಸ್ ರವರ ಬೀಳ್ಕೊಡುಗೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.