Updated News From Kaup

ಬ್ರಹ್ಮಾವರ : ಜಯಂಟ್ಸ್ ಕೇರ್ ಫೌಂಡೇಶನ್ ಮತ್ತು ಜಯಂಟ್ಸ್ ಗ್ರೇಟ್ ಡೇ ಸಮಾರಂಭ

Posted On: 12-10-2025 12:50PM

ಉಡುಪಿ : ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಇದರ ವತಿಯಿಂದ ಜಯಂಟ್ಸ್ ಕೇರ್ ಫೌಂಡೇಶನ್ ನ ಉದ್ಘಾಟನೆ ಮತ್ತು ಗ್ರೇಟ್ ಡೇ ಸೆಲೆಬ್ರೇಶನ್ ಕಾರ್ಯಕ್ರಮ ಬ್ರಹ್ಮಾವರ ಸಿಟಿ ಸೆಂಟರ್ ನಲ್ಲಿ ನಡೆಯಿತು.

ಕಾಪು ಶ್ರೀ ಹೊಸ ಮಾರಿಗುಡಿಗೆ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ, ಲೆಕ್ಕಪತ್ರ ಇಲಾಖೆ ಪ್ರಧಾನ ನಿರ್ದೇಶಕರಾದ ಎಸ್ ಎಮ್ ರಾಮ್ ಪ್ರಸಾದ್ ಭೇಟಿ

Posted On: 12-10-2025 12:34PM

ಕಾಪು : ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಇದರ ಪ್ರಧಾನ ನಿರ್ದೇಶಕರಾದ ಎಸ್ ಎಮ್ ರಾಮ್ ಪ್ರಸಾದ್ ಅವರು ಭಾನುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.

ಅ.14 : ಕಾಪುವಿನಲ್ಲಿ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಸಂಸ್ಮರಣೆ

Posted On: 12-10-2025 12:27PM

ಕಾಪು : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ನೇತೃತ್ವ ಮತ್ತು ಸಾಹಿತ್ಯ ಸಂಘ, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕಾಪು ಇದರ ಸಹಭಾಗಿತ್ವದಲ್ಲಿ ಕನ್ನಡ ಸಾರಸ್ವತ ಲೋಕದ ದಿಗ್ಗಜ, ಸರಸ್ವತಿ ಸಮ್ಮಾನ್ ಪುರಸ್ಕೃತ, ಪದ್ಮಭೂಷಣ ಡಾ.ಎಸ್.ಎಲ್.ಭೈರಪ್ಪರವರ ಸಂಸ್ಮರಣಾ ಕಾರ್ಯಕ್ರಮ ಅ.14 ಮಂಗಳವಾರ ಅಪರಾಹ್ನ 1:15ಕ್ಕೆ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಜರುಗಲಿದೆ.

ಫ್ರೆಂಡ್ಸ್ ಬೆಳಪು ವತಿಯಿಂದ ನಾಯ್ಕ್ ಟ್ರೋಫಿ ಪಯ್ಯಾರು -2025 : ಕ್ರಿಕೆಟ್ ಪಂದ್ಯಾವಳಿ ಉದ್ಘಾಟನೆ

Posted On: 12-10-2025 08:44AM

ಕಾಪು : ತಾಲೂಕಿನ ಬೆಳಪು ಗ್ರಾಮ ಪಂಚಾಯತ್ ಮೈದಾನದಲ್ಲಿ ಎರಡು ದಿನದ ನಾಯ್ಕ್ ಟ್ರೋಫಿ - 2025 ಬೆಳಪು ಫ್ರೆಂಡ್ಸ್ ವತಿಯಿಂದ ಆಯೋಜನೆಗೊಂಡಿದ್ದು ಇದರ ಉದ್ಘಾಟನೆ ಶನಿವಾರ ನಡೆಯಿತು.

ನವೆಂಬರ್ 7,8,9 : 90 ಗಜಗಳ ಹೊನಲು ಬೆಳಕಿನ ಪಂದ್ಯಾಕೂಟ ಎ.ಪಿ.ಟ್ರೋಫಿ 2025

Posted On: 10-10-2025 03:04PM

ಕಾಪು : ಕಾಪು ಫ್ರೆಂಡ್ಸ್ ಕಾಪು ಇವರ ವತಿಯಿಂದ ಪ್ರಜ್ವಲ್ ಡಿ. ಶೆಟ್ಟಿ ಇವರ ನೇತೃತ್ವದಲ್ಲಿ ನವೆಂಬರ್ 7,8,9 ರಂದು ಬೆಳಪು ಪಂಚಾಯತ್ ಮೈದಾನದಲ್ಲಿ ಜರಗಲಿರುವ 90 ಗಜಗಳ ಹೊನಲು ಬೆಳಕಿನ ಪಂದ್ಯಾಕೂಟದ ಪೋಸ್ಟರನ್ನು ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಆವರಣದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ ಬಿಡುಗಡೆಗೊಳಿಸಿದರು.

ಕಾಪು ಶ್ರೀ ಹೊಸ ಮಾರಿಗುಡಿಗೆ ಡೆಮಾಕ್ರೆಟಿಕ್ ಡೆವಲಪ್ಮೆಂಟ್ ಟ್ರಸ್ಟ್ ಪ್ರಮುಖರ ಭೇಟಿ

Posted On: 10-10-2025 01:34PM

ಕಾಪು : ಡೆಮಾಕ್ರೆಟಿಕ್ ಡೆವಲಪ್ಮೆಂಟ್ ಟ್ರಸ್ಟ್ ಇದರ ಪ್ರಮುಖರಾದ ವಿನಾಯಕ ಸಿ. ಕುಲಕರ್ಣಿಯವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.

ಅ.11 : ಕೆಪಿಸಿಸಿ ಪ್ರಚಾರ ಸಮಿತಿ ಉಡುಪಿ ಜಿಲ್ಲೆ ವತಿಯಿಂದ ಕಾಪುವಿನಲ್ಲಿ ಉಚಿತ ಬೃಹತ್ ಉದ್ಯೋಗ ಮೇಳ

Posted On: 07-10-2025 11:59AM

ಕಾಪು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ ಅ.11, ಶನಿವಾರ "ಉಚಿತ ಬೃಹತ್ ಉದ್ಯೋಗ ಮೇಳವು ಕಾಪು ದಂಡತೀರ್ಥ ಪಿ.ಯು.ಕಾಲೇಜು ಮತ್ತು ದಂಡತೀರ್ಥ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಉಳಿಯಾರಗೋಳಿ ಕಾಪುವಿನಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 3 ರ ವರೆಗೆ ನಡೆಯಲಿದೆ ಎಂದು ಉದ್ಯೋಗ ಮೇಳದ ರೂವಾರಿ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ತಿಳಿಸಿದರು. ಅವರು ಕಾಪು ಪತ್ರಿಕಾ ಭವನದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಾಪು : ನಟಿ ರಾಗಿಣಿ ದ್ವಿವೇದಿ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಭೇಟಿ

Posted On: 04-10-2025 06:55PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ನಟಿ ರಾಗಿಣಿ ದ್ವಿವೇದಿ ಶನಿವಾರ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದರುಶನ ಪಡೆದು ಅಮ್ಮನ ಅನುಗ್ರಹ ಪ್ರಸಾದ ಸ್ವೀಕರಿಸಿದರು.

ಮಲ್ಪೆ ಬೀಚ್ ದುರಂತ : ನುರಿತ ಲೈಫ್ ಗಾರ್ಡ್ ನೇಮಿಸಲು ಜಿಲ್ಲಾಧಿಕಾರಿಯವರಿಗೆ ಮೀನುಗಾರ ಮುಖಂಡ ವಿಶ್ವಾಸ್ ವಿ ಅಮೀನ್ ಮನವಿ

Posted On: 04-10-2025 06:50PM

ಕಾಪು : ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರು ಸಮುದ್ರದಲ್ಲಿ ಈಜಲು ಹೋಗಿ ನಿನ್ನೆ ಸಮುದ್ರ ಪಾಲಾಗಿದ್ದು ಇಬ್ಬರು ಮೃತ ಪಟ್ಟಿದ್ದು ಒಬ್ಬ ಪ್ರವಾಸಿಗ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಈ ಬಗ್ಗೆ ಮಾದ್ಯಮದಲ್ಲಿ ಹಾಗೂ ಸಾರ್ವಜನಿಕವಾಗಿ ಜಿಲ್ಲಾಡಳಿತದ ನಿರ್ಲಕ್ಷ್ಯ ಎಂಬ ಮಾತು ಕೇಳಿಬರುತ್ತಿದ್ದು ಇದಕ್ಕೆ ಪ್ರಮುಖ ಕಾರಣ ಕನಿಷ್ಠ ಈಜಲು ಬಾರದ ಮೂರು ಲೈಫ್ ಗಾರ್ಡ್ ಗಳು ಸ್ಥಳದಲ್ಲಿ ಇದ್ದು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಪ್ರವಾಸಿಗರನ್ನು ನಿಯಂತ್ರಿಸಲು ಅಥವಾ ಯಾವುದೇ ಅವಗಡ ಸಂಭವಿಸಿದಾಗ ರಕ್ಷಿಸಲು ಅಸಾಧ್ಯವಾದ ಕಾರಣ ತಕ್ಷಣ ಜಿಲ್ಲಾಡಳಿತದ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ವಿಶ್ವ ಪ್ರಸಿದ್ಧ ಮಲ್ಪೆ ಬೀಚ್ ನಲ್ಲಿ ಈಜು ಬಾರದ ಲೈಫ್ ಗಾರ್ಡ್ ಗಳನ್ನು ನೇಮಿಸಿರುವುದರ ಕಾರಣ ಏನು ಎಂಬ ಯಕ್ಷ ಪ್ರಶ್ನೆಯು ಮೂಡಿದ್ದು ಇದರ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕೆಂದು ಮೀನುಗಾರ ಮುಖಂಡ ವಿಶ್ವಾಸ್ ವಿ ಅಮೀನ್ ಆಗ್ರಹಿಸಿರುತ್ತಾರೆ.

ಉಡುಪಿ-ಉಚ್ಚಿಲ ದಸರಾ 2025 ; ವೈಭವದ ದಸರಾ ಸಂಪನ್ನ

Posted On: 03-10-2025 06:56PM

ಪಡುಬಿದ್ರಿ : ದ. ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನಡೆಯುತ್ತಿರುವ 'ಉಡುಪಿ-ಉಚ್ಚಿಲ ದಸರಾ 2025' ಇದರ 4ನೇ ವರ್ಷದ 'ಉಡುಪಿ ಉಚ್ಚಿಲ ದಸರಾ' ವೈಭವ ಸಂಪನ್ನವಾಗಿದೆ. ವಿಸರ್ಜನೆಗೆ ಮೊದಲು ನಡೆದ ವರ್ಣರಂಜಿತ ಶೋಭಾಯಾತ್ರೆ ಮೆರವಣಿಯು ಜರಗಿತು.