Updated News From Kaup
ಫೆಬ್ರವರಿ 2 : ಕಾಂತಾವರ ಕುಲಾಲ ಸಂಘದ ಉದ್ಘಾಟನೆ
Posted On: 29-01-2025 07:04PM
ಕಾರ್ಕಳ : ತಾಲೂಕಿನ ಕಾಂತಾವರದಲ್ಲಿ ಕುಲಾಲ ಸಂಘ ಕಾಂತಾವರ ಇದರ ಉದ್ಘಾಟನೆಯು ಸಮುದಾಯದ ಹಿರಿಯರ ಕಿರಿಯರ ಜೊತೆಗೆ ಬೇಲಾಡಿ ಶ್ರೀ ಪುಂಡರೀಕ ವಿಷ್ಣುಮೂರ್ತಿ ದೇವಸ್ಥಾನದ ಅಂಗಳದಲ್ಲಿ ಫೆಬ್ರವರಿ 2 ರ ಭಾನುವಾರ ನಡೆಯಲಿದೆ.
ಕಾಪು : ಎಸ್ಕೆಪಿಎ ಫೋಟೋಗ್ರಾಫಿ ಕಾರ್ಯಾಗಾರ
Posted On: 29-01-2025 09:42AM
ಕಾಪು : ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ., ಉಡುಪಿ ಜಿಲ್ಲೆ ವತಿಯಿಂದ ಕಾಪುವಿನ ಪ್ಯಾಲೆಸ್ ಗಾರ್ಡನ್ನಲ್ಲಿ ಮಂಗಳವಾರ ನಡೆದ ಗಿಂಬಲ್ಸ್ ಹಾಗೂ ರೀಲ್ಸ್ ಕಾರ್ಯಾಗಾರವನ್ನು ಎಸ್ಕೆಪಿಎ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್ ಉದ್ಘಾಟಿಸಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ನವಚಂಡೀಯಾಗಕ್ಕೆ ಪ್ರಸಾದ ಮೂಹೂರ್ತ
Posted On: 28-01-2025 08:03PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ನವದುರ್ಗಾ ಲೇಖನ ಯಜ್ಞದ ನವಚಂಡೀಯಾಗವು ಫೆಬ್ರವರಿ 4 ರಂದು ನಡೆಯಲಿದೆ, ಆ ಪ್ರಯುಕ್ತ ಮಂಗಳವಾರ ದೇವಳದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ ಮತ್ತು ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಇವರ ಉಪಸ್ಥಿತಿಯಲ್ಲಿ, ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರ ಮುಂದಾಳತ್ವದಲ್ಲಿ ಕುಂಕುಮ ಪ್ರಸಾದ ಮುಹೂರ್ತ ನೆರವೇರಿತು.
ಉಡುಪಿ: ವಳಕಾಡು ಶಾಲಾ ಆವರಣದಲ್ಲಿ ಜೇನುನೊಣ ದಾಳಿ ವಿದ್ಯಾರ್ಥಿಗಳಿಗೆ ಗಾಯ
Posted On: 28-01-2025 07:59PM
ಉಡುಪಿ: ನಗರದ ವಳಕಾಡು ಶಾಲಾ ಆವರಣದಲ್ಲಿ ಜೇನುನೊಣ ದಾಳಿ ಮಾಡಿದ ಪರಿಣಾಮ 40 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಇಂದು ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ.
ಪಡುಬಿದ್ರಿ ಸಿ.ಎ.ಸೊಸೈಟಿ ಚುನಾವಣೆ : ವೈ. ಸುಧೀರ್ ಕುಮಾರ್ ನೇತೃತ್ವದ ತಂಡ ಜಯ
Posted On: 28-01-2025 07:58PM
ಪಡುಬಿದ್ರಿ : ಎರಡು ದಶಕಗಳ ಕಾಲ ಅವಿರೋಧ ಆಯ್ಕೆಯ ಮೂಲಕ ನಡೆಯುತ್ತಿದ್ದ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಆಡಳಿತ ಮಂಡಳಿಗೆ ಮಂಗಳವಾರ ಪಡುಬಿದ್ರಿ ಬಂಟರ ಸಂಘದ ಸಭಾಂಗಣದಲ್ಲಿ ಜರಗಿದ ಚುನಾವಣೆಯಲ್ಲಿ ವೈ. ಸುಧೀರ್ ಕುಮಾರ್ ನೇತೃತ್ವದ ಬಣ ಜಯ ಗಳಿಸಿದೆ.
ಪಡುಬಿದ್ರಿ ಸಿ.ಎ.ಸೊಸೈಟಿ ಚುನಾವಣೆ : ಹಲವು ವರ್ಷಗಳ ಅವಿರೋಧ ಆಯ್ಕೆಯ ಕಸರತ್ತಿಗೆ ಬ್ರೇಕ್ ಹಾಕಿದ ಪಡುಬಿದ್ರಿ ಸಹಕಾರಿ ಜನಪರ ಒಕ್ಕೂಟ
Posted On: 28-01-2025 02:23PM
ಪಡುಬಿದ್ರಿ : ನಾಲ್ಕು ಶಾಖೆ ಹಾಗೂ ಒಂದು ಕೇಂದ್ರ ಕಚೇರಿಯನ್ನು ಹೊಂದಿರುವ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಸುಮಾರು ಎರಡು ದಶಕಗಳ ಕಾಲ ನಿರ್ದೇಶಕರ ಚುನಾವಣೆ ನಡೆಯದೆ ಕೆಲವು ಬಾರಿ ನಾಮಪತ್ರ ಸಲ್ಲಿಕೆಯಾದರೂ ಕೊನೆ ಕ್ಷಣದಲ್ಲಿ ಹಿಂತೆಗುವ ಪ್ರಕ್ರಿಯೆ ಮೂಲಕ ಅವಿರೋಧ ಆಯ್ಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲಾಗುತ್ತಿತ್ತು. ಆದರೆ ಈ ಬಾರಿ ಮುಂದೆಯೂ ಅಧಿಕಾರದ ಹಪಾಹಪಿಯಲ್ಲಿರುವ ತಂಡಕ್ಕೆ ಟಕ್ಕರ್ ನೀಡಲು ಪಡುಬಿದ್ರಿ ಸಹಕಾರಿ ಜನಪರ ಒಕ್ಕೂಟದ ನೇತೃತ್ವದಲ್ಲಿ ಜ.28ರಂದು ನಡೆಯಲಿರುವ ಚುನಾವಣೆಗೆ ಈಗಾಗಲೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 13 ನಿರ್ದೇಶಕರ ಚುನಾವಣೆಯಲ್ಲಿ ಆಡಳಿತದಲ್ಲಿದ್ದ ತಂಡ 13, ಹೊಸ ತಂಡ ಕೊನೆ ಕ್ಷಣದಲ್ಲಿ ಕೇವಲ 7 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಆ ಮೂಲಕ ಸಂಪೂರ್ಣ ಹಿಡಿತವಲ್ಲದಿದ್ದರೂ ಆಡಳಿತದಲ್ಲಿ ಸ್ವಲ್ಪ ಮಟ್ಟಿನ ಹಿಡಿತದ ಸಾಧನೆಗೆ ಮುಂದಾಗಿದೆ. ಪ್ರಸ್ತುತ ಆಡಳಿತದ ತಂಡದಲ್ಲಿ ಕಾಂಗ್ರೆಸ್, ಬಿಜೆಪಿ ಬೆಂಬಲಿತರಿದ್ದು ಕೆಲವು ಸದಸ್ಯರ ಬದಲಾವಣೆ ಮಾಡಿದ್ದು, ಚುನಾವಣೆಗಿಳಿದ ಹೊಸ ತಂಡದಲ್ಲಿ ಕಾಂಗ್ರೆಸ್ ನ ಬೆಂಬಲಿತರ ಜೊತೆಗೆ ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.
ಮಹಾಕುಂಭಮೇಳದ ಮಹಾ ಸಂವಾದದಲ್ಲಿ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ
Posted On: 27-01-2025 05:30PM
ಶಿರ್ವ : ಶ್ರೀ ಕೃಷ್ಣನ ಜನ್ಮ ಭೂಮಿಯನ್ನು ಮುಕ್ತಗೊಳಿಸುವ ಬಗ್ಗೆ ಫೆ.1ರಂದು ಮಹಾಕುಂಭಮೇಳದಲ್ಲಿ ಜರಗಲಿರುವ ಮಹಾ ಸಂವಾದದಲ್ಲಿ ಶ್ರೀ ಕೃಷ್ಣ ಜನ್ಮ ಭೂಮಿ ನ್ಯಾಸ್(ರಿ.) ಕರ್ನಾಟಕದ ರಾಜ್ಯಾಧ್ಯಕ್ಷರಾದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭಾಗವಹಿಸಲಿದ್ದಾರೆ ಎಂದು ಮಠದ ಪ್ರಕಟನೆ ತಿಳಿಸಿದೆ.
ಕಸಾಪ ಉಡುಪಿ ತಾಲೂಕು : ಡಿಸಿ ಕಚೇರಿಯ ಗ್ರಂಥಾಲಯಕ್ಕೆ ಪುಸ್ತಕ ಹಸ್ತಾಂತರ
Posted On: 26-01-2025 07:23PM
ಉಡುಪಿ : ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು ಘಟಕ ಇದರ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾದ ರಾಜ್ಯದ ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಕಸಾಪ ಉಡುಪಿ ತಾಲೂಕಿನಿಂದ ಮತ್ತಷ್ಟು ಪುಸ್ತಕಗಳನ್ನು ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿಯವರಿಗೆ ಹಸ್ತಾಂತರಿಸಲಾಯಿತು.
ಕಾಪು ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ
Posted On: 26-01-2025 07:18PM
ಕಾಪು : ತಾಲೂಕು ಆಡಳಿತ ಸೌಧದಲ್ಲಿ ರವಿವಾರ ತಾಲೂಕು ಮಟ್ಟದ 76ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು.
ಜ.27 : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಚಪ್ಪರ ಮೂಹೂರ್ತ
Posted On: 25-01-2025 09:32PM
ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಜನವರಿ 27, ಸೋಮವಾರ ಬೆಳಿಗ್ಗೆ ಗಂಟೆ 9:09ಕ್ಕೆ ಸರಿಯಾಗಿ ಚಪ್ಪರ ಮೂಹೂರ್ತ ನಡೆಯಲಿದೆ.
