Updated News From Kaup
ಸೈಬ್ರಕಟ್ಟೆ : ರೋಟರಿ ಸಮುದಾಯ ದಳಗಳ ಪದಪ್ರದಾನ ಕಾರ್ಯಕ್ರಮ
Posted On: 19 Sep 2021, 08:11 PM
ಉಡುಪಿ : ಸೈಬ್ರಕಟ್ಟೆ ರೋಟರಿಯ ಅಂಗಸಂಸ್ಥೆ ರೋಟರಿ ಸಮುದಾಯ ದಳಗಳ ಪದಪ್ರದಾನ ಕಾರ್ಯಕ್ರಮ ರೋಟರಿ ಭವನದಲ್ಲಿ ನಡೆಯಿತು. ಸೈಬ್ರಕಟ್ಟೆ ಯಡ್ತಾಡಿ ಭಾಗದ ರೋಟರಿ ಸಮುದಾಯ ದಳದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅವರಿಗೆ ಕೊರಳ ಲಾಂಛನ ತೊಡಿಸಿ ರೋಟರಿ 3182 ಜಿಲ್ಲಾ ಉಪಸಭಾಪತಿ ಜಗನ್ನಾಥ್ ಕೋಟೆ ಪದಪ್ರದಾನ ಗೈದರು. ಕಾರ್ಯದರ್ಶಿಯಾಗಿ ರಾಘವೇಂದ್ರ ಶೆಟ್ಟಿ ಕಲ್ಬೆಟ್ಟು ಆಯ್ಕೆಯಾದರು. ಈ ಸಂದರ್ಭ ಮಾತನಾಡಿದ ರೋಟರಿ 3182 ಜಿಲ್ಲಾ ಉಪಸಭಾಪತಿ ಜಗನ್ನಾಥ್ ಕೋಟೆ ಯವರು ರೋಟರಿ ಸಮುದಾಯ ದಳ ಅನ್ನೋದು 18 ವರ್ಷ ಮೇಲ್ಪಟ್ಟ ವರು ಸದಸ್ಯರಾಗಬಹುದು, ಸಮುದಾಯದಲ್ಲಿ ರೋಟರಿ ಜೊತೆ ಗೂಡಿ ಹಲವು ಸೇವಾ ಕಾರ್ಯಕ್ರಮ ಹಮ್ಮಿಕೊಂಡು ಸಮಾಜಮುಖಿ ಕಾರ್ಯಕ್ರಮದಲ್ಲಿ ತೊಡಗಿ ಅಂತ ಸಂದೇಶ ನೀಡಿದರು. ಹಾಗೆಯೇ ಸೈಬ್ರಕಟ್ಟೆ ಶಿರಿಯಾರ ಭಾಗದ ರೋಟರಿ ಸಮುದಾಯ ದಳವನ್ನು ವಲಯ ಸಂಯೋಜಕರಾದ ಶಂಕರ್ ಸುವರ್ಣ ಅವರು ಅಧ್ಯಕ್ಷ ಶರತ್ ಕೆ ಅವರಿಗೆ ಕೊರಳ ಲಾಂಛನ ತೊಡಿಸಿ ಪದಪ್ರದಾನ ನೆರವೇರಿಸಿದರು ಕಾರ್ಯದರ್ಶಿಯಾಗಿ ಶರತ್ ಡಿ ಆಯ್ಕೆ ಗೊಂಡರು, ಅಲ್ಲದೆ ಸಮುದಾಯ ದಳಗಳ ಕಾರ್ಯ ಹೇಗೆ ಮಾಡಬೇಕು ಎಂದು ಮಾಹಿತಿ ನೀಡಿದರು. ವೇದಿಕೆಯಲ್ಲಿ ಸೈಬ್ರಕಟ್ಟೆ ರೋಟರಿ ಕ್ಲಬ್ ನ ಇಂಜಿನಿಯರ್ ಸದಸ್ಯರು ಗಳಾದ ಸಂದೀಪ್ ಶೆಟ್ಟಿ ಥೋಮಸ್ ವಾಝ್ ,ರತ್ನಾಕರ್ ಹೆಗ್ಡೆ ವಿಜಯ್ ಕುಮಾರ್ ಶೆಟ್ಟಿ ಕೆ.ಯು ಪ್ರಸಾದ್ ಭಟ್ ಇವರನ್ನು ಇಂಜಿನಿಯರ್ ಡೇ ಆಚರಣೆಯನ್ನು RCC ಮತ್ತು ರೋಟರಿ ಜಂಟಿಯಾಗಿ ಆಯೋಜಿಸಿ ಮುಖ್ಯ ಅತಿಥಿ ರೋಟರಿ ವಲಯ 3 ರ ಸಹಾಯಕ ಗವರ್ನರ್ ಕೆ ಪದ್ಮನಾಭ್ ಕಾಂಚನ್ ಸನ್ಮಾನಿಸಿದರು. ಈ ಸಂದರ್ಭ ಮಾತನಾಡಿ ಎಂಜಿನಿಯರ್ಗಳು ಉತ್ತಮ ಟೆಕ್ನಾಲಜಿ ಮೂಲಕ ದೇಶದ ಅಭಿವೃದ್ಧಿಗೆ ಪ್ರಮುಖ ಪಾತ್ರವಹಿಸಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ ನವರ ಮಹಾನ್ ಸಾಧನೆಯ ನೆನಪಿಗಾಗಿ ಅವರು ಹುಟ್ಟಿದ ದಿನವನ್ನು ಇಂಜಿನಿಯರ್ಸ್ ಡೇ ಆಚರಿಸಲಾಗುತ್ತದೆ. ಕಾರ್ಯಕ್ರಮದಲ್ಲಿರೋಟರಿ ಅಧ್ಯಕ್ಷ ಯು ಪ್ರಸಾದ್ ಭಟ್ ವಲಯ ಸೇನಾನಿ ವಿಜಯ ಕುಮಾರ್ ಶೆಟ್ಟಿ ಯಡ್ತಾಡಿ ಪಂಚಾಯತ್ ಸದಸ್ಯ ಅಮೃತ ಪೂಜಾರಿ ,ರೋಟರಿ ಕಾರ್ಯದರ್ಶಿ ಅಣ್ಣಯ್ಯದಾಸ್, ವರದರಾಜ್ ಶೆಟ್ಟಿ, ರೋಟರಿ ಸದಸ್ಯರು ಭಾಗಿಯಾಗಿದ್ದರು.
ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರ ಹಾಕಿ ಅಸಂಬದ್ಧ ಪದ ಪ್ರಯೋಗಿಸಿದ ಪ್ರಕರಣ ಮುಚ್ಚಳಿಕೆ, ತಪ್ಪೊಪ್ಪಿಗೆಯೊಂದಿಗೆ ಅಂತ್ಯ
Posted On: 19 Sep 2021, 07:09 PM
ಉಡುಪಿ : ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಭಾವಚಿತ್ರ ಹಾಕಿ ಅಸಂಬದ್ಧ ಪದ ಪ್ರಯೋಗಿಸಿದ ಬಗ್ಗೆ ಕುಂದಾಪುರ ಠಾಣೆಯಲ್ಲಿ ಕಿರಣ್ ಪೂಜಾರಿ ನೀಡಿದ ದೂರಿನನ್ವಯ ಅವಹೇಳನಗೈದ ಕುಂಭಾಶಿಯ ಸಂಪಾದಕರೋರ್ವರನ್ನು ಕುಂದಾಪುರ ಠಾಣೆಗೆ ಕರೆಯಿಸಿ ಇನ್ನು ಮುಂದೆ ಇಂತಹ ಯಾವುದೇ ಕೃತ್ಯ ಮಾಡುವುದಿಲ್ಲವೆಂದು ಮುಚ್ಚಳಿಕೆ ಬರೆಸಿ ಕೊಳ್ಳಲಾಗಿದೆ. ದೂರುದಾರರ ದೂರಿನಲ್ಲಿ ಉಲ್ಲೇಖಿಸಿದಂತೆ ಬ್ರಹ್ಮಶ್ರೀ ನಾರಾಯಣಗುರುಗಳ ಪ್ರತಿಮೆಯ ಮುಂದೆ ತಪ್ಪು ಒಪ್ಪಿಕೊಂಡಿದ್ದಾರೆ.
ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ಉಡುಪಿ ತಂಡದಿಂದ ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನ ಬಾಲಕರ ವಸತಿ ನಿಲಯ ಭೇಟಿ
Posted On: 19 Sep 2021, 04:56 PM
ಉಡುಪಿ : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಇಂದು ಬ್ರಹ್ಮಾವರ ಮಟಪಾಡಿಯ ವಿಜಯ ಬಾಲನಿಕೇತನ ಆರ್ಥಿಕ ಅಶಕ್ತ ಬಾಲಕರ ಉಚಿತ ವಸತಿ ನಿಲಯಕ್ಕೆ ಭೇಟಿ ನೀಡಿ ಉಚಿತ ಆರೋಗ್ಯ ತಪಾಸಣೆ ನಡೆಸಿ ಅಲ್ಲಿನ ಮಕ್ಕಳಿಗೆ ಉಚಿತ ಬರವಣಿಗೆ ಸಾಮಗ್ರಿಗಳನ್ನು ನೀಡಲಾಯಿತು. ಈ ಕಾರ್ಯಕ್ರಮವನ್ನು ಆಸರೆ ಸಂಸ್ಥೆಯ ಸ್ಥಾಪಕಧ್ಯಕ್ಷರಾದ ಡಾ. ಕೀರ್ತಿ ಪಾಲನ್ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಆಸರೆ ತಂಡದ ಕೋಷಧಿಕಾರಿ ಜಗದೀಶ್ ಬಂಟಕಲ್, ವಿಜಯ ಬಾಲನಿಕೇತನ ದ ಉಸ್ತುವಾರಿ ಜಯರಾಮ್ ನೈರಿ ಹಾಗೂ ಸೌಂದರ್ಯ ಟೀಚರ್ ಉಪಸ್ಥಿತರಿದ್ದರು.
ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ, ಪೋಸ್ಟ್ ಕಾರ್ಡ್ ಅಭಿಯಾನ
Posted On: 19 Sep 2021, 04:43 PM
ಕಾಪು : ಬಿಜೆಪಿ ಯುವಮೋರ್ಚಾ ಕಾಪು ಮಂಡಲ ಹಾಗೂ ಬಿಜೆಪಿ ಯುವಮೋರ್ಚಾ ಪಡುಬಿದ್ರಿ ಮಹಾಶಕ್ತಿ ಕೇಂದ್ರದ ವತಿಯಿಂದ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ನಡೆಯುತ್ತಿರುವ ಸೇವೆ ಹಾಗೂ ಸಮರ್ಪಣಾ ಅಭಿಯಾನದ ಪ್ರಯುಕ್ತ "ರಕ್ತದಾನ ಶಿಬಿರ" ಹಾಗೂ ಪ್ರಧಾನಿ ನರೇಂದ್ರ ಮೋದಿಜಿಯವರಿಗೆ ಹುಟ್ಟು ಹಬ್ಬದ ಶುಭಹಾರೈಕೆಯನ್ನು ಸಲ್ಲಿಸಲು "ಪೋಸ್ಟ್ ಕಾರ್ಡ್ " ಅಭಿಯಾನವನ್ನು ಹೆಜಮಾಡಿಯ ಬಿಲ್ಲವ ಸಭಾಭವನ ದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಸಭಾ ಅಧ್ಯಕ್ಷತೆಯನ್ನು ಪಡುಬಿದ್ರೆ ಯುವಮೋರ್ಚಾ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಕೀರ್ತನ್ ಪೂಜಾರಿ ವಹಿಸಿದ್ದರು ಸಭಾ ಕಾರ್ಯಕ್ರಮದಲ್ಲಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿಗಳಾದ ಶ್ವೇತ ಪೂಜಾರಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್ ಪೆರ್ಣಂಕಿಲ, ಬಿಜೆಪಿ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ,ಬಿಜೆಪಿ ಯುವ ಮೋರ್ಚಾದ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಪ್ರಜ್ವಲ್ ಹೆಗಡೆ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶರತ್ ಶೆಟ್ಟಿ ಉಪ್ಪುಂದ, ಪಡುಬಿದ್ರಿ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಪಡುಬಿದ್ರಿ ,ಕಾಪು ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣರಾವ್ ಹಾಗೂ ಅನಿಲ್ ಶೆಟ್ಟಿ ,ಮಂಡಲ ಉಪಾಧ್ಯಕ್ಷರಾದ ಚಂದ್ರಶೇಖರ್ ಕೋಟ್ಯಾನ್, ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್ ಪಲಿಮಾರ್ ಹಾಗೂ ರವಿ ಕೋಟ್ಯಾನ್ ,ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಹೆಜಮಾಡಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪ್ರಾಣೇಶ್ ಹೆಜಮಾಡಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ನೀತಾ ಗುರುರಾಜ್, ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯರಾದ ಡಾ ವೀಣಾಕುಮಾರಿ, ಉದ್ಯಮಿಗಳಾದ ಸಂದೇಶ್ ಶೆಟ್ಟಿ ಹೆಜಮಾಡಿ, ಜಿಲ್ಲಾ ಹಾಗು ಕಾಪು ಮಂಡಲದ ಯುವ ಮೋರ್ಚಾ ಪದಾಧಿಕಾರಿಗಳು ಪಂಚಾಯತ್ ಸದಸ್ಯರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ರಕ್ತದಾನ ಶಿಬಿರದಲ್ಲಿ ಪ್ರಧಾನಿ ನರೇಂದ್ರ ಮೋದಿಜಿಯವರ 71 ವರುಷದ ಜನ್ಮದಿನಕ್ಕೆ ಸರಿಸಾಟಿಯಾಗಿ 71 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ಕಾರ್ಯಕ್ರಮವನ್ನು ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರವೀಣ್ ಕುಮಾರ್ ಅಡ್ವೆ ಅವರು ನಿರೂಪಿಸಿ ವಂದಿಸಿದರು.
ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದಿಂದ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Posted On: 19 Sep 2021, 02:17 PM
ಉಡುಪಿ : ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಉಡುಪಿ ಜಿಲ್ಲೆ ವತಿಯಿಂದ ವೃತ್ತಿ ಭಾಂದವರ ಮಕ್ಕಳಿಗೆ ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷದಂತೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಸಭಾಧ್ಯಕ್ಷತೆಯನ್ನು ಅಧ್ಯಕ್ಷರಾದ ಎಮ್. ಮಹೇಶ್ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯು. ಮೋಹನ್ ಉಪಾಧ್ಯ ಹಾಗೂ ಅತಿಥಿಯಾಗಿ ಬಿ. ಜಿ. ಸುಬ್ಬರಾವ್, ಗೌರವ ಸಲಹೆಗಾರ ಅಶೋಕ್ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಮಂತ್ ಕಾರಂತ್, ಸುಹಾಸ್ ಸಿ ನೈರಿ, ಯಶ್ಮಿತಾ ಎಮ್ ಬಂಗೇರ. ತ್ರಿಷಾ ಎಸ್ ಶೆಟ್ಟಿ ಇವರುಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಅತಿಥಿ ಬಿ ಜಿ ಸುಬ್ಬರಾವ್ ಅದೃಷ್ಟ ವ್ಯಕ್ತಿ ಸುಮಂತ್ ರವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಪ್ರಾರ್ಥನೆಯನ್ನು ಸುಮಂತ್ ಕಾರಂತ್ ನೆರವೇರಿಸಿದರು. ಎಮ್. ಮಹೇಶ್ ಕುಮಾರ್ ರವರು ಎಲ್ಲರನ್ನು ಸ್ವಾಗತಿಸಿ, ಅಶೋಕ್ ಶೆಟ್ಟಿ ಯವರು ಪ್ರಸ್ತಾವಿಸಿ, ರಮೇಶ್ ಕುಂದರ್ ಕಾರ್ಯಕ್ರಮ ನಿರ್ವಹಿಸಿ , ಕೋಶಾಧಿಕಾರಿ ಸುಧೀರ್ ಡಿ. ಬಂಗೇರ ವಂದಿಸಿದರು.
ಶಿರ್ವ : ಹಿಂದೂ ಜೂನಿಯರ್ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ 2 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ, 50 ಸಾವಿರ ಆರ್ಥಿಕ ಸಹಾಯ, ಅಭಿನಂದನೆ, ಸನ್ಮಾನ
Posted On: 19 Sep 2021, 02:02 PM
ಕಾಪು : ಶಿರ್ವದ ಹಿಂದೂ ಜೂನಿಯರ್ ಕಾಲೇಜಿನ ಹಳೆವಿದ್ಯಾರ್ಥಿ ಸಂಘದಿಂದ ಸತತ ಏಳನೇ ವರ್ಷದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ 8ನೆ ತರಗತಿಯ ವಿದ್ಯಾರ್ಥಿಗಳಿಗೆ ಹೊಸ ಸಮವಸ್ತ್ರ ವಿತರಿಸುವ ಸಲುವಾಗಿ ರೂಪಾಯಿ 50 ಸಾವಿರ ವನ್ನು ಮುಖ್ಯೋಪಾಧ್ಯಾಯಿನಿ ವಸಂತಿ ಬಾಯಿಯವರಿಗೆ ಹಸ್ತಾ0ತರಿಸಲಾಯಿತು. ಪಿಯುಸಿಯಲ್ಲಿ ಕಲಿಯುತ್ತಿರುವ ಆಯ್ದ ವಿದ್ಯಾರ್ಥಿ ಗಳಿಗೆ ಸುಮಾರು 2.00 ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಕಳೆದ ಸಾಲಿನ ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದಿರುವ ನಮ್ಮ ಶಾಲಾ ವಿದ್ಯಾರ್ಥಿನಿ ಕು.ಶ್ರಾವ್ಯ ಸಹಿತ 90℅ ಕ್ಕಿಂತ ಹೆಚ್ಚು ಗರಿಷ್ಠ ಅಂಕ ಗಳಿಸಿದ 10ನೇ ತರಗತಿ ಹಾಗೂ ಪಿ.ಯು.ಸಿ ಯ ಎಲ್ಲಾ ಮೂರು ವಿಭಾಗಗಳ ತಲಾ 3 ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಪ್ರೌಢಶಾಲೆಯಲ್ಲಿ ಸುಧೀರ್ಘ 35 ವರ್ಷಗಳ ಸೇವೆಯನ್ನು ಸಲ್ಲಿಸಿ ಈ ವರ್ಷ ನಿವೃತ್ತರಾಗಿರುವ ಶಕಿಲ ಟೀಚರ್ ಅವರಿಗೆ ಸನ್ಮಾನದ ಗೌರವವನ್ನು ಸಲ್ಲಿಸಲಾಯಿತು. ನಿತ್ಯಾನಂದ ಹೆಗ್ಡೆ, ಪ್ರೊ. ವೈ.ಭಾಸ್ಕರ್ ಶೆಟ್ಟಿ ಅಂಬರೀಷ್ ರಾವ್ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕ ನಡಿಬೆಟ್ಟು ನಿತ್ಯಾನಂದ ಹೆಗ್ಡೆ ,ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ, ಪ್ರಸ್ತುತ ಬ್ಯಾ0ಕ್ ಅಧಿಕಾರಿಯಾಗಿರುವ ಹಳೆವಿದ್ಯಾರ್ಥಿ ಅಂಬರೀಷ್ ರಾವ್, ನಿವೃತ್ತ ಪ್ರಾಂಶುಪಾಲರೂ ಸಂಘದ ಮಾರ್ಗದರ್ಶಕರಾದ ರಾಜಗೋಪಾಲ್, ಪ.ಪೂ ಕಾಲೇಜಿನ ಪ್ರಾಂಶುಪಾಲರಾದ ಭಾಸ್ಕರ್, ಪೌಢಶಾಲಾ ಮುಖ್ಯೋಪಾಧ್ಯಾ ಯಿನಿ ವಸಂತಿ ಭಾಯಿ, ಸಂಘದ ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಮತ್ತು ಅಧ್ಯಕ್ಷನಾಗಿ ಕುತ್ಯಾರು ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ಈ ಸಂದರ್ಭ ನಿವೃತ್ತ ಅಧ್ಯಾಪಕರಾದ ಪ್ರಭಾಕರ್, ಸಂಘದ ಗೌರವಾಧ್ಯಕ್ಷ ಸಚ್ಚಿದಾನಂದ ಹೆಗ್ಡೆ, ಗಂಗಾಧರ್ ಶೆಟ್ಟಿ ಪಿಲಾರು, ಸದಾನಂದ ಶೆಟ್ಟಿ ಕಳತ್ತೂರು, ಹಳೆವಿದ್ಯಾರ್ಥಿಗಳಾದ ವೀರೇಂದ್ರ ಶೆಟ್ಟಿ, ಸದಾನಂದ ಎಸ್, ನವೀನ್ ಶೆಟ್ಟಿ, ಉಮೇಶ್ ಆಚಾರ್ಯ, ಹರಿಣಾಕ್ಷ ಶೆಟ್ಟಿ, ಜಿನೇಶ್ ಬಲ್ಲಾಳ್, ರಾಜೇಶ್ ಶೆಟ್ಟಿ ಮತ್ತು ದೀಪಿಕಾ ಹೆಗ್ಡೆ ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿ, ಸಂಘದ ಅಧ್ಯಕ್ಷ ಕುತ್ಯಾರು ಪ್ರಸಾದ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಸಿ, ಕಾರ್ಯದರ್ಶಿ ಪ್ರಶಾಂತ್ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿ, ರಾಜಗೋಪಾಲ್ ಶುಭ ಹಾರೈಸಿ, ಲಕ್ಷ್ಮೀದೇವಿ ಮತ್ತು ಸುಪ್ರೀತ ಶೆಟ್ಟಿ ನಿರೂಪಿಸಿ, ಸದಾನಂದ ಎಸ್ ವಂದಿಸಿದರು.
ಪ್ರಕಟನೆ : ನಮ್ಮ ಜವನೆರ್ ವಾಟ್ಸಾಪ್ ಗ್ರೂಪ್ ಮೂಡುಬೆಳ್ಳೆ ಮತ್ತು ರಾಮ್ ಸೇನಾ ತಂಡದ ಸಭೆ
Posted On: 18 Sep 2021, 06:47 PM
ಕಾಪು : ನಮ್ಮ ಜವನೆರ್ ವಾಟ್ಸಾಪ್ ಗ್ರೂಪ್ ಮೂಡುಬೆಳ್ಳೆ ಮತ್ತು ರಾಮ್ ಸೇನಾ ಕಾರ್ಯಕರ್ತರು ತಂಡದ ಸಭೆಯನ್ನು ಸೆಪ್ಟೆಂಬರ್ 19 (ಭಾನುವಾರ) ಸಂಜೆ 3 ಗಂಟೆಗೆ ನಿಗದಿಪಡಿಸಲಾಗಿದ್ದು ತಂಡದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸುತೀಶ್ ಕಾರ್ಕಳ ಇವರು ಕಾಪು ನ್ಯೂಸ್ ವೆಬ್ ಪೋರ್ಟಲ್ ಗೆ ತಿಳಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ ಮೂರು ದಿನ ವರುಣನ ಆರ್ಭಟ : ಹವಾಮಾನ ಇಲಾಖೆ ಮುನ್ಸೂಚನೆ
Posted On: 18 Sep 2021, 01:17 PM
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ 21ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲದೇ, ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.
ಶಿರ್ವ : ಸ್ಪರ್ಧೆಗಳ ಮೂಲಕ ವ್ಯಕ್ತಿತ್ವ ವಿಕಸನ ವೃದ್ಧಿ- ಡಾ| ಹೆರಾಲ್ಡ್ ಐವನ್ ಮೋನಿಸ್
Posted On: 18 Sep 2021, 01:10 PM
ಶಿರ್ವ: ಪ್ರತಿಯೊಂದು ಕ್ಷೇತ್ರದಲ್ಲಿ ಕಂಪ್ಯೂಟರ್ ಬಳಕೆಯ ಹೆಚ್ಚುತ್ತಿರುವ ಕಾರಣ ಕಂಪ್ಯೂಟರ್ ಕಲಿಕೆಯ ಅವಶ್ಯಕತೆ ಇಂದು ಅಗತ್ಯವಾಗಿದೆ ಜೊತೆಗೆ ಶೈಕ್ಷಣಿಕ ಪ್ರಗತಿಯನ್ನು ವಿದ್ಯಾರ್ಥಿಗಳು ಸಾಧಿಸಿ, ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು.ಇತ್ತೀಚೆಗೆ ಬದಲಾದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಉದ್ದೇಶಿಸಿ, ತಂತ್ರಜ್ಞಾನ ಯುಗದಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕೌಶಲ್ಯಗಳನ್ನು ವೃದ್ಧಿಸಿಕೊಳ್ಳಲು ಕಂಪ್ಯೂಟರ್ಗಳನ್ನು ಹೆಚ್ಚಾಗಿ ಬಳಸಿಕೊಂಡು ಸಮಾಜಕ್ಕೆ ಬೇಕಾಗುವ ತಂತ್ರಜ್ಞಾನವನ್ನು ರೂಪಿಸಿ, ಸಂಶೋಧನಾ ಮನಸ್ಥಿತಿ ಬೆಳೆಸಿಕೊಂಡು ಉತ್ತಮ ಉದ್ಯೋಗ ಪಡೆಯಬೇಕೆಂದು ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ ಮತ್ತು ಐಟಿ ಕ್ಲಬ್ ಸಂಯುಕ್ತವಾಗಿ ಏರ್ಪಡಿಸಿದ್ದ ಐಟಿ ಸ್ಪರ್ಧೆಗಳು-ಬಹುಮಾನ ವಿತರಣೆ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. ಪ್ರತಿಯೊಬ್ಬ ವಿದ್ಯಾರ್ಥಿ ಸ್ಪರ್ಧೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿ ಅಡಗಿರುವ ಕೌಶಲ, ಸೃಜನಶೀಲತೆ, ಕ್ರಿಯಾಶೀಲತೆ, ತಮ್ಮ ವ್ಯಕ್ತಿತ್ವ ವಿಕಸನವನ್ನು ವೃದ್ಧಿಸಿಕೊಳ್ಳುವುದು ಮಾತ್ರವಲ್ಲದೆ ಸ್ಪರ್ಧಾ ಜಗತ್ತಿನ ಸವಾಲುಗಳನ್ನು ಸುಲಭವಾಗಿ ನಿಭಾಯಿಸಲು ಹಾಗೂ ಉತ್ತಮ ಪ್ರಜೆಯಾಗಲು ಪ್ರತಿಯೊಂದು ಸ್ಪರ್ಧೆಯು ಸಹಾಯಕಾರಿ ಎಂದು ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ಡೈರೆಕ್ಟರ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಗಣಕ ವಿಜ್ಞಾನ ವಿಭಾಗದ ಐಟಿಕ್ಲಬ್ ವತಿಯಿಂದ ಬಿಸಿಎ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್ 14ರಿಂದ 18 ರವರೆಗೆ ವಿವಿಧ ಐಟಿ ಕಾಂಪಿಟೇಶನ್ಗಳನ್ನು ಆಯೋಜಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತ ವಿದ್ಯಾರ್ಥಿಗಳಾದ ಪ್ರಿಯಾಂಕಾ,ಸುರೇಖಾ, ಲಿಖಿತಾ ಶೆಟ್ಟಿ, ಕ್ರಿಪಾ, ಶ್ರುತಿ, ಪ್ರಜ್ವಲ್, ಸನತ್ ಕುಮಾರ್ ಶೆಟ್ಟಿ, ಪ್ರೀತಿಕಾ, ದೀಕ್ಷಾ, ಸಾತ್ವಿಕ್ , ತರುಣ್ ರಮೇಶ್ ಶೆಟ್ಟಿ, ದೀಕ್ಷಿತ್, ಅಪೇಕ್ಷ, ಚಾಯ ಕರ್ಕೆರ, ಹಾರ್ದಿಕ ಸಾಲಿಯಾನ್, ಡೆನ್ಸನ್ ಬ್ರೈನ್ ನಜರೆತ್, ರಿಯಾನ್ ರಿಷಿ ಅಲ್ಫೋನ್ಸೋ, ನಿವೇದಿತಾ ನಿಖಿಲ್ ಪೂಜಾರಿ, ಬಂಗೇರ ತುಷಾರ್ ರಾಜೇಶ್, ಸುಕೇಶ್ ಪೂಜಾರಿ, ಡೊನಾಲ್ಡ್ ಅಶ್ವಿನ್ ಡಿಸೋಜ, ಶೆಟ್ಟಿ ಸಾಯಿರಾಮ್ ಜಯರಾಮ್ ಇವರಿಗೆ ಪ್ರಮಾಣ ಪತ್ರದ ಜೊತೆಗೆ ಬಹುಮಾನಗಳನ್ನು ನೀಡಲಾಯಿತು. ಇದೇ ಸಂದರ್ಭದಲ್ಲಿ ವಿವಿಧ ಕ್ಯಾಂಪಸ್ ಪ್ಲೇಸ್ಮೆಂಟ್ ನಲ್ಲಿ ಭಾಗವಹಿಸಿ ಆಯ್ಕೆಯಾದ ಮೇಘ ಕುಲಾಲ್, ಮಹಿಮಾ ಭಟ್, ಲಿಖಿತಾ ಶೆಟ್ಟಿ,ಡಿಲ್ಸನ್ ನಿಜಾರ್,ರಿಯಾನ್ ರಿಷಿ ಅಲ್ಫೋನ್ಸೋ,ಭಟ್ ರಾಮದಾಸ ಸತೀಶ್, ಪ್ರಜ್ವಲ್ ಬಿಸಿಎ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ದಿವ್ಯ ಶ್ರೀ, ಸುಷ್ಮಾ,ಪ್ರಕಾಶ್, ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಶ್ರೀ ಚೆನ್ನ ಬಸವಯ್ಯ ಬಹುಮಾನ ಪಟ್ಟಿಯನ್ನು ವಾಚಿಸಿದರು. ವಿದ್ಯಾರ್ಥಿ ನಾಯಕರಾದ ದಾಕ್ಷಾಯಿಣಿ,ಭಟ್ ರಾಮದಾಸ ಸತೀಶ್, ಡಿಲ್ಸನ್ ನಿಜಾರ್, ಪ್ರತೀಕ್ ಪೂಜಾರಿ, ವಿಜ್ಞೇಶ್, ಅಭಿಷೇಕ್, ಮಹಿಮಾ, ರಿಯಾನ್ ರಿಷಿ ಅಲ್ಫೋನ್ಸೋ ಸ್ಪರ್ಧೆಯನ್ನು ನಡೆಸಲು ಸಹಕರಿಸಿದ್ದರು. ಶೃತಿ ಸಿ ಪುಜಾರಿ ಸ್ವಾಗತಿಸಿ, ಕ್ರಿಪಾ ಬಿ. ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಸಿಯಾನಾ ಬಾನು ವಂದಿಸಿದರು.
ಇಂದು : ಶ್ರೀ ವೆಂಕಟರಮಣ ದೇವಸ್ಥಾನ ಕಾಪುವಿಗೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಭೇಟಿ
Posted On: 18 Sep 2021, 12:59 PM
ಕಾಪು : ಇಂದು (ಸೆಪ್ಟೆಂಬರ್18) ಶನಿವಾರ ಸಂಜೆ 6 ಗಂಟೆಗೆ ಶ್ರೀ ವೆಂಕಟರಮಣ ದೇವಳಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪೂಜ್ಯ ಶ್ರೀ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಲಿರುವರು. ಶ್ರೀ ದೇವರ ಭೇಟಿ ನಂತರ, ಸಭಾಕಾರ್ಯಕ್ರಮ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
