Updated News From Kaup
ಕುಂದಾಪುರ : ಯುವ ಬಂಟರ ಸಂಘದ ವತಿಯಿಂದ ನಟ ರಕ್ಷಿತ್ ಶೆಟ್ಟಿ ಬಗ್ಗೆ ಅವಹೇಳನಗೈದ ಖಾಸಗಿ ಚಾನೆಲ್ ವಿರುದ್ಧ ದೂರು
Posted On: 02-07-2021 07:19PM
ಉಡುಪಿ : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಇಂದು ಕುಂದಾಪುರದಲ್ಲಿ ನಟ ರಕ್ಷಿತ್ ಶೆಟ್ಟಿ ಅವರ ಬಗ್ಗೆ ಕನ್ನಡದ ರಾಜ್ಯ ಮಟ್ಟದ ಖಾಸಗಿ ಟಿವಿಯಲ್ಲಿ ಸಿನಿಮಾ ಸಂಬಂಧಿತ ಕಾರ್ಯ ಕ್ರಮದಲ್ಲಿ ನಟ ರಕ್ಷಿತ್ ಶೆಟ್ಟಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಲ್ಲದೆ ನಿಂದಿಸಿದ್ದಾರೆ. ಇದರಿಂದ ರಕ್ಷಿತ್ ಶೆಟ್ಟಿ ಅವರ ಅಭಿಮಾನಿಗಳಲ್ಲಿ ಬಹಳ ಬೇಸರ ಉಂಟಾಗಿದೆ ಎಂದು ಕುಂದಾಪುರದಲ್ಲಿ ಯುವ ಬಂಟರ ಸಂಘದ ವತಿಯಿಂದ ಅಧ್ಯಕ್ಷರಾದ ಸುನಿಲ್ ಶೆಟ್ಟಿ ಹೇರಿಕುದ್ರು ಇವರ ನೇತತ್ವದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿದವರ ವಿರುದ್ಧ ಕುಂದಾಪುರ ಪೋಲಿಸ್ ಉಪಾಧೀಕ್ಷಕರ ಕಚೇರಿಯಲ್ಲಿ ದೂರನ್ನು ನೀಡಲಾಗಿದೆ.
ಶಿರ್ವ : ಹತ್ತು ಸಾವಿರ ಮಾಸ್ಕ್ ವಿತರಣೆ ಅಭಿಯಾನ
Posted On: 02-07-2021 07:02PM
ಶಿರ್ವ : ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಸ್ನಾತಕೋತ್ತರ ಅಧ್ಯಯನ ಕೇಂದ್ರ ಎಂ ಎಸ್ ಡಬ್ಲ್ಯೂ ,ಎಂಕಾಂ,ಎನ್ ಸಿಸಿ,ಎನ್ ಎಸ್ ಎಸ್ ,ರೋವರ್ಸ-ರೇಂಜರ್ಸ್ ಹಾಗೂ ರಿಲಯನ್ಸ್ ಫೌಂಡೇಶನ್ ಜಂಟಿಯಾಗಿ 10000 ಮಾಸ್ಕಗಳ ವಿತರಣೆ ಅಭಿಯಾನವನ್ನು ಆರೋಗ್ಯ ಸಮುದಾಯ ಕೇಂದ್ರ ,ಶಿರ್ವ, ಪೋಸ್ಟ್ ಆಫೀಸ್, ಆರಕ್ಷಕರ ಠಾಣೆ, ಆಶಾ ಓಲ್ಡ್ ಏಜ್ ಹೋಂ, ಮಸೀದಿ, ದೇವಾಲಯ, ಚರ್ಚ್, ಶಿರ್ವ ಗ್ರಾಮ ಪೇಟೆ , ಕಾಲೇಜಿನ ಸಂತ ಮೇರಿ ಸಮೂಹ ಸಂಸ್ಥೆಗಳ ಪ್ರದೇಶಗಳಲ್ಲಿ ಆಯೋಜಿಸಲಾಯಿತು. ಈ ಅಭಿಯಾನಕ್ಕೆ ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ ಆರ್ ಪಾಟ್ಕರ್ ಮಾತನಾಡಿ ಕೋವಿಡ್ ಅಂತಹ ಸಾಂಕ್ರಮಿಕ ಕಾಯಿಲೆಗಳನ್ನು ಎದುರಿಸಬೇಕಾಗಿದ್ದರೆ ಸಾರ್ವಜನಿಕರು ತಪ್ಪದೇ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮನೆಯಿಂದ ಹೊರಗೆ ಬರುವಾಗ ಮುಖಕ್ಕೆ ಮಾಸ್ಕನ್ನು ಧರಿಸಬೇಕು. ಪ್ರಸ್ತುತ ಲಾಕ್ಡೌನ್ ನಂತರ ಈ ನಿಯಮ ಉಲ್ಲಂಘನೆಯನ್ನು ಮಾಡುವ ನಾಗರಿಕರ ಮೇಲೆ ಸೂಕ್ತ ಕ್ರಮವನ್ನು ತಗೆದುಕೊಳ್ಳುವುದು ಎಂದು ಮಾಸ್ಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಶಿರ್ವ : 10000 ಮಾಸ್ಕ ವಿತರಣೆ ಅಭಿಯಾನ
Posted On: 02-07-2021 06:59PM
ಶಿರ್ವ : ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಸ್ನಾತಕೋತ್ತರ ಅಧ್ಯಯನ ಕೇಂದ್ರ ಎಂ ಎಸ್ ಡಬ್ಲ್ಯೂ ,ಎಂಕಾಂ,ಎನ್ ಸಿಸಿ,ಎನ್ ಎಸ್ ಎಸ್ ,ರೋವರ್ಸ-ರೇಂಜರ್ಸ್ ಹಾಗೂ ರಿಲಯನ್ಸ್ ಫೌಂಡೇಶನ್ ಜಂಟಿಯಾಗಿ 10000 ಮಾಸ್ಕಗಳ ವಿತರಣೆ ಅಭಿಯಾನವನ್ನು ಆರೋಗ್ಯ ಸಮುದಾಯ ಕೇಂದ್ರ ,ಶಿರ್ವ, ಪೋಸ್ಟ್ ಆಫೀಸ್, ಆರಕ್ಷಕರ ಠಾಣೆ, ಆಶಾ ಓಲ್ಡ್ ಏಜ್ ಹೋಂ, ಮಸೀದಿ, ದೇವಾಲಯ, ಚರ್ಚ್, ಶಿರ್ವ ಗ್ರಾಮ ಪೇಟೆ , ಕಾಲೇಜಿನ ಸಂತ ಮೇರಿ ಸಮೂಹ ಸಂಸ್ಥೆಗಳ ಪ್ರದೇಶಗಳಲ್ಲಿ ಆಯೋಜಿಸಲಾಯಿತು. ಈ ಅಭಿಯಾನಕ್ಕೆ ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ ಆರ್ ಪಾಟ್ಕರ್ ಮಾತನಾಡಿ ಕೋವಿಡ್ ಅಂತಹ ಸಾಂಕ್ರಮಿಕ ಕಾಯಿಲೆಗಳನ್ನು ಎದುರಿಸಬೇಕಾಗಿದ್ದರೆ ಸಾರ್ವಜನಿಕರು ತಪ್ಪದೇ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮನೆಯಿಂದ ಹೊರಗೆ ಬರುವಾಗ ಮುಖಕ್ಕೆ ಮಾಸ್ಕನ್ನು ಧರಿಸಬೇಕು. ಪ್ರಸ್ತುತ ಲಾಕ್ಡೌನ್ ನಂತರ ಈ ನಿಯಮ ಉಲ್ಲಂಘನೆಯನ್ನು ಮಾಡುವ ನಾಗರಿಕರ ಮೇಲೆ ಸೂಕ್ತ ಕ್ರಮವನ್ನು ತಗೆದುಕೊಳ್ಳುವುದು ಎಂದು ಮಾಸ್ಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕುತ್ಯಾರು : ಜಲಜೀವನ್ ಮಿಷನ್ ವತಿಯಿಂದ ವಿಶೇಷ ಗ್ರಾಮಸಭೆ, ಕಿರುಚಿತ್ರ ಪ್ರದರ್ಶನ, ಜಲಮೂಲ ಸಂರಕ್ಷಣಾ ಕಾರ್ಯಕ್ರಮ
Posted On: 02-07-2021 11:19AM
ಕಾಪು : ನೀರು ಜನರ ಜೀವನದ ಮೂಲ. ನೀರಿದ್ದರೇ ಜೀವನ. ನೀರಿಲ್ಲದ ಭವಣೆ ತೀರಿಸಲೆಂದೇ ಬಂದಿದೆ ಜಲಜೀವನ ಮಿಷನ್ ಎಂದು ಜೆಜೆಎಮ್ ನ ಐಇಸಿ ಎಕ್ಸ್ ಪರ್ಟ್ ನೇತ್ರಾವತಿ ಅವರು ತಿಳಿಸಿದರು. ಕುತ್ಯಾರು ಗ್ರಾಮಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ವತಿಯಿಂದ ವಿಶೇಷ ಗ್ರಾಮಸಭೆ, ಕಿರುಚಿತ್ರ ಪ್ರದರ್ಶನ ಹಾಗೂ ಜಲಮೂಲ ಸಂರಕ್ಷಣಾ ಕಾರ್ಯಕ್ರಮ ನಡೆಯಿತು.
ಸಕಾಲ ಯೋಜನೆಯಲ್ಲಿ ಉಡುಪಿ ಜಿಲ್ಲೆಗೆ ರಾಜ್ಯದಲ್ಲಿಯೇ ಮೊದಲ ಸ್ಥಾನ
Posted On: 01-07-2021 10:25PM
ಉಡುಪಿ : ಕರ್ನಾಟಕ ರಾಜ್ಯ ಸರ್ಕಾರವು 2011-12ನೇ ಸಾಲಿನಲ್ಲಿ ಜಾರಿಗೆ ತಂದಿರುವ ಸಕಾಲ ಕಾಯ್ದೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾ ಗಿದ್ದು, ಸಕಾಲ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ಜಿಲ್ಲೆಯು ಒಟ್ಟಾರೆ ಉತ್ತಮ ಸಾಧನೆ ಮಾಡಿದೆ.
ಬಂಟಕಲ್ಲು ಅಂಚೆ ಕಛೇರಿ ಸ್ಥಳಾಂತರ
Posted On: 01-07-2021 10:19PM
ಕಾಪು : ಸ್ಥಳಾವಕಾಶದ ಕೊರತೆಯಿಂದ ಅಂಚೆ ಕಛೇರಿ ಗ್ರಾಹಕರಿಗೆ ಸಮಸ್ಯೆ ಆಗುತ್ತಿದ್ದ ಹಿನ್ನಲೆಯಲ್ಲಿ ಬಂಟಕಲ್ಲು ಅಂಚೆ ಕಛೇರಿಯನ್ನು ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಸಹಕಾರದಿಂದ ವ್ಯವಸ್ಥಿತವಾದ, ಸ್ಥಳಾವಕಾಶವಿರುವ ಬಂಟಕಲ್ಲು ಮೈತ್ರಿ 2 ಕಟ್ಟಡಕ್ಕೆ ಇಂದು ಸ್ಥಳಾಂತರಗೊಂಡಿತು.
ಮಕ್ಕಳಿಗಾಗಿ ಮಹಿಳಾ ಸಾಧಕಿ ಸುಮತ ನಾಯಕ್ ಅಮ್ಮುಂಜೆಯವರ ನೇತೃತ್ವದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ
Posted On: 30-06-2021 04:44PM
ಕಾಪು : Itsoksupport .com ನ ಮೂಲಕ ಮಕ್ಕಳಿಗಾಗಿ ವೈಯಕ್ತಿಕ ಅಭಿವೃದ್ಧಿ (Personal Devlopment) ಶಿಬಿರ. ಈ ಶಿಬಿರವು ಮನಶಾಸ್ತ್ರಜ್ಞರು , ಮಾನಸಿಕ ಆರೋಗ್ಯ ತಜ್ಞರು , ಆಹಾರ ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ತಜ್ಞರ ಉಪಸ್ಥಿತಿಯಲ್ಲಿ ನಡೆಯಲಿರುವುದು.
ಕುಂದಾಪುರ : ಅಂಬೇಡ್ಕರ್ ಭವನದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ
Posted On: 30-06-2021 03:30PM
ಉಡುಪಿ : ಕುಂದಾಪುರದ ಅಂಬೇಡ್ಕರ್ ಕಾಲೋನಿ ನಿವಾಸಿಗಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ಉಡುಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮತ್ತು ಪುರಸಭಾ ಸದಸ್ಯ ಪ್ರಭಾಕರ ವಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಲಸಿಕಾ ಕಾರ್ಯಕ್ರಮದಲ್ಲಿ ಒಟ್ಟು 40ಜನರಿಗೆ ಲಸಿಕೆ ನೀಡಲಾಯಿತು.
ಕುಂಜೂರು : ಸೌಹಾರ್ದತೆಗೆ ಸಾಕ್ಷಿಯಾದ ವನಮಹೋತ್ಸವ ಕಾರ್ಯಕ್ರಮ
Posted On: 30-06-2021 02:29PM
ಕಾಪು : ಶ್ರೀ ದುರ್ಗಾ ಸೇವಾ ಸಮಿತಿ ಕುಂಜೂರು ಮತ್ತು ಶ್ರೀ ದುರ್ಗಾ ಮಿತ್ರವೃಂದ ಕುಂಜೂರು ಇವರ ಜಂಟಿ ಆಶ್ರಯದಲ್ಲಿ ಈಸ್ಟ್ ವೆಸ್ಟ್ ನರ್ಸರಿ ಪಣಿಯೂರು ಮತ್ತು ವೆಸ್ಟ್ ಕೋಸ್ಟ್ ನರ್ಸರಿ ಮೂಳೂರು ಇವರ ಸಹಯೋಗದೊಂದಿಗೆ ಕುಂಜೂರಿನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಪರಿಸರದಲ್ಲಿ ದೇಗುಲದ ಉಪಯೋಗಕ್ಕೆ ಬೇಕಾಗುವ ವಿವಿಧ ಹೂವಿನ ಗಿಡಗಳನ್ನು ಹಾಗೂ ಇತರ ಹಣ್ಣುಗಳ ಗಿಡವನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇನ್ನಂಜೆ : ಮಹಾತ್ಮ ಗಾಂಧಿ ನರೇಗಾ ಯೋಜನೆ ಮೂಲಕ ಸ್ಥಳೀಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ಕೆ ಚಾಲನೆ
Posted On: 28-06-2021 07:46PM
ಕಾಪು : ಇನ್ನಂಜೆ ಗ್ರಾಮದ ಮಜಲು ದಡ್ಡು ಪ್ರದೇಶದ ಶೀಲಾಪುರ ಕೆರೆಯಿಂದ ನೀರು ಹರಿವ ತೋಡಿನ ಹೂಳು ಎತ್ತುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
