Updated News From Kaup
ಅಖಿಲ ಭಾರತ ಹಿಂದೂ ಮಹಾಸಭಾ-ಕರ್ನಾಟಕದಿಂದ ಫೇಸ್ಬುಕ್ ನಲ್ಲಿ ನಾರಾಯಣಗುರುಗಳ ಭಾವಚಿತ್ರದೊಂದಿಗೆ ಅಸಭ್ಯ ಭಾಷೆ ಬಳಸಿದ ಪತ್ರಕರ್ತನ ವಿರುದ್ಧ ದೂರು ದಾಖಲು
Posted On: 17 Sep 2021, 08:57 AM
ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರುಗಳ ಬಾವ ಚಿತ್ರ ದೊಂದಿಗೆ ಅಸಂವಿಧಾನಾತ್ಮಕ ಪದ ಬಳಸಿ ಫೇಸ್ ಬುಕ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಅಸಂಖ್ಯಾತ ಬಿಲ್ಲವ ಸಮಾಜದ ಅವರ ಅನುಯಾಯಿಗಳ ಧಾರ್ಮಿಕ ಭಾವನೆಗೆ ದಕ್ಕೆ ತಂದಿರುವ ವಿಷಯವಾಗಿ ಕುಂಭಾಶಿಯ ಪತ್ರಿಕಾ ಸಂಪಾದಕರೋರ್ವರ ವಿರುದ್ಧ ಅಖಿಲ ಭಾರತ ಹಿಂದೂ ಮಹಾಸಭಾ-ಕರ್ನಾಟಕದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ. ಮಹಾಲಕ್ಷ್ಮಿ ಲೇಔಟ್ ಬೆಂಗಳೂರು ಅಧ್ಯಕ್ಷರಾದ ಎಸ್. ಮುರಳಿ ಬೆಂಗಳೂರಿನ ಬಸವೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾರಾಯಣಗುರುಗಳು ಒಂದೇ ಜಾತಿ, ಒಂದೇ ಮತ, ದೇವರೊಬ್ಬನೇ ಅನ್ನೋ ತತ್ವ ಸಿದ್ಧಾಂತ ಪ್ರತಿಪಾದಕರಾಗಿ ಸ್ವಾತಂತ್ರ್ಯ ಪೂರ್ವದಲ್ಲಿ ಅವರ ಜೀವಿತಾವಧಿಯಲ್ಲಿ ಸಮಾಜದಲ್ಲಿದ್ದ ಮೇಲು ಕೀಳೆಂಬ ಜಾತಿ ಪದ್ಧತಿ ವಿರುದ್ಧ ಹೋರಾಡಿ,ಜನಜಾಗ್ರತಿ ಮೂಡಿಸಿ ಧಾರ್ಮಿಕ, ಸಾಮಾಜಿಕ, ಆಧ್ಯಾತ್ಮಿಕ, ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸುಧಾರಣೆ ತಂದ ಮಹಾನ್ ಚೇತನರಾಗಿದ್ದಾರೆ. ಅವರ ಗೌರವಾರ್ಥವಾಗಿ ಕೇರಳ ರಾಜ್ಯ ಸರಕಾರ ಅಗೋಸ್ಟ್ 23ರಂದು ನಾರಾಯಣ ಗುರುಗಳ ಜಯಂತಿಯನ್ನು ಸಾರ್ವಜನಿಕ ರಜಾದಿನವೆಂದು ಘೋಷಿಸಿ ಸರಕಾರಿ ಮಟ್ಟದಲ್ಲಿ ಗೌರವ ಸೂಚಿಸಿದೆ. ಅಲ್ಲದೇ ಕರ್ನಾಟಕ ಸರಕಾರ ಸಹ ಸೆಪ್ಟೆಂಬರ್ 16ರಂದು ನಾರಾಯಣಗುರು ಜಯಂತಿಯನ್ನು ಸರಕಾರಿ ಮಟ್ಟದಲ್ಲಿ ಆಚರಣೆಯನ್ನು ಮಾಡುವುದರ ಮೂಲಕ ಅವರ ಸಮಾಜ ಸೇವೆಯನ್ನು ಗುರುತಿಸಿ ಗೌರವಿಸಿದೆ. ಭಾರತ ದೇಶದಾದ್ಯಂತ ಅವರ ತತ್ವ ಆದರ್ಶವನ್ನು ಒಪ್ಪಿ ಬಿಲ್ಲವ ಸಮುದಾಯ ಅವರಿಗೆ ದೇವಸ್ಥಾನ ನಿರ್ಮಿಸಿ ದಿನನಿತ್ಯ ಪೂಜೆ ಸಲ್ಲಿಸುವ ಮೂಲಕ ಅವರನ್ನು ಗೌರವಿಸಲಾಗುತ್ತಿದೆ ಅಂತಹ ಮಹಾನ್ ಸುಧಾರಕರ ಭಾವಚಿತ್ರದೊಂದಿಗೆ ಓರ್ವ ಪ್ರಜ್ಞಾವಂತ ಪತ್ರ ಕರ್ತ ಅಸಭ್ಯ ಭಾಷೆ ಬಳಸಿ ಗುರು ಜಯಂತಿಗೆ ಫೇಸ್ ಬುಕ್ ಸಾಮಾಜಿಕ ಜಾಲ ತಾಣದಲ್ಲಿ ಸಾರ್ವಜನಿಕವಾಗಿ ಪೋಸ್ಟ್ ಹಾಕಿದ್ದು ಖಂಡಿಸುತ್ತೇವೆ ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
ಬೃಹತ್ ಜನ ಜಾಗೃತಿ ಸಭೆಗೆ ರಾಮ್ ಸೇನಾ ಕುಂಟಾಡಿ ಘಟಕ ಬೆಂಬಲ
Posted On: 17 Sep 2021, 08:05 AM
ಕಾರ್ಕಳ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಕಳ ಪ್ರಖಂಡದ ಆಶ್ರಯದಲ್ಲಿ ಮತಾಂಧತೆಯ ವಿರುದ್ಧ ನಡೆಯಲಿರುವ ಬೃಹತ್ ಜನ ಜಾಗೃತಿ ಸಭೆಗೆ ರಾಮ್ ಸೇನಾ ಕುಂಟಾಡಿ ಘಟಕ ಬೆಂಬಲ ನೀಡಿದೆ. ಈ ಬೃಹತ್ ಜನ ಜಾಗೃತಿ ಸಭೆ ಸೆಪ್ಟೆಂಬರ್ 19, ಭಾನುವಾರ ಬೆಳಿಗ್ಗೆ 9 ಗಂಟೆಗೆ ನಿಟ್ಟೆಯ ಲೆಮಿನಾ ಕ್ರಾಸ್ ಬಳಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶಿರ್ವ : ಡೊರಿನ್ ಡಿ'ಸಿಲ್ವಗೆ ಪದೋನ್ನತಿ
Posted On: 16 Sep 2021, 10:53 PM
ಕಾಪು : ಸಂತ ಮೇರಿ ಕಾಲೇಜು ಶಿವ೯ ಇಲ್ಲಿಯ ಆಡಳಿತ ಕಛೇರಿಯ ಸಿಬ್ಬಂದಿಯಾದ ಶ್ರೀಮತಿ ಡೊರಿನ್ ಡಿ'ಸಿಲ್ವ ಇವರನ್ನು ಕಾಲೇಜು ಆಡಳಿತ ಮಂಡಳಿಯಾದ, ಕ್ಯಾಥೊಲಿಕ್ ಶಿಕ್ಷಣ ಸೊಸೈಟಿ ಉಡುಪಿ (CESU) ಇವರು ಪದೋನ್ನತಿಗೊಳಿಸಿ ಕಾಲೇಜು ಆಡಳಿತ ಕಛೇರಿಯ ಅಧೀಕ್ಷಕರನ್ನಾಗಿ ನೇಮಕಗೊಳಿಸಿದೆ.
ಕಾಪು ಹೊಸ ಮಾರಿಗುಡಿ ಜೀರ್ಣೋದ್ಧಾರಕ್ಕೆ ಕಾಪು ಕ್ಷೇತ್ರದಲ್ಲಿ ಗ್ರಾಮ ಸಮಿತಿ ರಚನೆ ಮಾಡಲು ಪ್ರಮುಖರ ಸಭೆ
Posted On: 16 Sep 2021, 10:39 PM
ಕಾಪು : ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಪ್ರಯುಕ್ತ ಕಾಪು ವಿಧಾನ ಸಭಾ ವ್ಯಾಪ್ತಿಯ ಪ್ರತಿ ಗ್ರಾಮದಲ್ಲಿ ಗ್ರಾಮ ಸಮಿತಿ ರಚನೆ ಮಾಡಲು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ಸಭೆ ನಡೆಯಿತು. ಅಭಿವೃದ್ಧಿ ಸಮಿತಿಯ ಕಾರ್ಯದರ್ಶಿಗಳಾದ ರಮೇಶ್ ಹೆಗ್ಡೆ ಕಲ್ಯಾ ಸ್ವಾಗತಿಸಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್. ವಿ. ಶೆಟ್ಟಿ ಬಾಲಾಜಿ ದೇವಳದ ಇವರೆಗಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ದೇವಳದ ಅಭಿವೃದ್ಧಿ ಕಾರ್ಯಕ್ಕೆ ಕಾಪು ಕ್ಷೇತ್ರದ ಜನರ ಸಹಬಾಗಿತ್ವ ಮುಖ್ಯ ಎಂದರು. ಸಭಾಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆಯವರು ಮಾತನಾಡಿ ಈಗಾಗಲೇ ದೇವಳದ 20% ಕಾಮಗಾರಿ ನಡೆದಿದ್ದು ಇನ್ನುಳಿದ 80% ಕಾಮಗಾರಿ ಆಗಬೇಕಿದೆ, ತಾಯಿಯ ಸೇವೆ ಮಾಡಲು ತಾಯಿ ನಮಗೆ ಅವಕಾಶ ಕೊಟ್ಟಿದ್ದಾರೆ ಆದ್ದರಿಂದ ಗ್ರಾಮ ಸಮಿತಿ ರಚನೆ ಮಾಡಿ ಪಕ್ಷಾತೀತ, ಜಾತ್ಯತೀತವಾಗಿ ಪಾಲ್ಗೊಂಡು ನಾವೆಲ್ಲರೂ ಸೇರಿ ಒಂದೇ ತಾಯಿಯ ಮಕ್ಕಳಂತೆ ಅಮ್ಮನ ಸೇವೆ ಮಾಡೋಣ ಎಂದರು. ನಂತರ ಪ್ರತೀ ಗ್ರಾಮದ ಮುಖಂಡರಿಂದ ಗ್ರಾಮ ಸಮಿತಿ ರಚನೆ ಮಾಡಲು ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಈ ಸಂದರ್ಭದಲ್ಲಿ ಉಪಾಧ್ಯಕ್ಷರುಗಳಾದ ಮನೋಹರ್ ಶೆಟ್ಟಿ, ಗಂಗಾಧರ ಸುವರ್ಣ, ಮಾಧವ್ ಪಾಲನ್, ಸಾಂಸ್ಕೃತಿಕ ಸಮಿತಿಯ ಪ್ರಧಾನ ಸಂಚಾಲಕರಾದ ಲೀಲಾಧರ.ಕೆ. ಶೆಟ್ಟಿ, ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡೀಕೆರೆ, ಪುರಸಭಾ ವ್ಯಾಪ್ತಿಯ ಗ್ರಾಮ ಸಮಿತಿಯ ಮುಖ್ಯ ಸಂಚಾಲಕರಾದ ಶ್ರೀಕರ ಶೆಟ್ಟಿ ಕಲ್ಯಾ, ಗ್ರಾಮ ಸಮಿತಿಯ ಮುಖ್ಯ ಸಂಚಾಲಕರಾದ ಅರುಣ್ ಶೆಟ್ಟಿ ಪಾದೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು.
ಕಾಣೆಯಾಗಿದ್ದ ನಿಟ್ಟೆ ನಿವಾಸಿ ಶವವಾಗಿ ಪತ್ತೆ
Posted On: 16 Sep 2021, 10:32 PM
ಕಾಪು : ಕಾಣೆಯಾಗಿರುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಮಜಾಲು ದರ್ಕಾಸ್ ಮನೆಯ ಶ್ಯಾಮ ಕೋಟ್ಯಾನ್ (65) ಇವರ ಮೃತ ದೇಹ ಇಂದು ಎಣ್ಣೆಹೊಳೆ ನದಿಯಲ್ಲಿ ಪತ್ತೆಯಾಗಿದೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಶಾಲಾ ಕಾಲೇಜುಗಳಲ್ಲಿ ಕೋವಿಡ್-19 ಮಾರ್ಗಸೂಚಿ ಪಾಲನೆ ಪರಿಶೀಲನೆ
Posted On: 16 Sep 2021, 10:26 PM
ಉಡುಪಿ : ಕೋವಿಡ್-19 ಹರಡುವುದನ್ನು ತಡೆಗಟ್ಟಲು ಸರ್ಕಾರದ ಮಾರ್ಗಸೂಚಿಗಳನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಪಾಲನೆ ಮಾಡುತ್ತಿರುವ ಕುರಿತಂತೆ, ಕರ್ನಾಟಕ ಲೋಕಾಯುಕ್ತರು, ಬೆಂಗಳೂರು ಇವರ ಸೂಚನೆಯಂತೆ, ಮಂಗಳೂರಿನ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ, ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜಗದೀಶ್ ಎಂ, ಪೊಲೀಸ್ ನಿರೀಕ್ಷಕ ಜಯರಾಮ ಡಿ ಗೌಡ, ರಾಜಶೇಖರ ಎಲ್ ಹಾಗೂ ಸಿಬ್ಬಂದಿಗಳು ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಕುಂಜಿಬೆಟ್ಟುವಿನ ಮಹಾತ್ಮಗಾಂಧೀ ಮೆಮೋರಿಯಲ್ ಕಾಲೇಜು, ಇಂದ್ರಾಳಿ ಪ್ರೈಮರಿ ಮತ್ತು ಹೈಯರ್ ಪ್ರೈಮರಿ ಸ್ಕೂಲ್, ಉಡುಪಿಯ ಸರಕಾರಿ ಬೋರ್ಡ್ ಹೈಸ್ಕೂಲ್ ಗಳಿಗೆ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಶಾಲಾ ಭೇಟಿ ವೇಳೆ, ಕೋವಿಡ್ ಮಾರ್ಗಸೂಚಿಯಂತೆ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸೇಶನ್ ಮಾಡುವುದು ಮತ್ತು ಮನೆಯಿಂದಲೇ ಬಿಸಿ ನೀರು ಮತ್ತು ಆಹಾರ ಪದಾರ್ಥಗಳನ್ನು ತರುವ ಬಗ್ಗೆ ಮತ್ತು ಶಾಲೆಯಲ್ಲಿ ಶುಚಿತ್ವವನ್ನು ಕಾಪಾಡಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಜಾಗೃತಿ ಮೂಡಿಸಿ, ಸರ್ಕಾರದ ಮಾರ್ಗಸೂಚಿಯಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಾಲಾ ಮುಖ್ಯಸ್ಥರಿಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎ.ಕುಮಾರಸ್ವಾಮಿ ಸೂಚಿಸಿದರು. ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ಅವರು ಉಡುಪಿ ಜಿಲ್ಲೆಯ ಭೇಟಿ ವೇಳೆ, ಶಾಲಾ ಕಾಲೇಜುಗಳಿಗೆ ಭೇಟಿ ನೀಡಲಿದ್ದು, ಎಲ್ಲಾ ಶಾಲಾ ಕಾಲೇಜುಗಳ ಮುಖ್ಯಸ್ಥರು ಸರ್ಕಾರದ ಸುತ್ತೋಲೆಯಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಕೋವಿಡ್ ನಿಯಮ ಪಾಲಿಸುವಂತೆ ಸೂಚಿಸಿದರು.
ನಾಳೆ - ಆರ್ ಎಸ್ ಬಿ ಕೊಂಕಣಿ ಚಲನಚಿತ್ರ ಅಮ್ಚೆ ಸಂಸಾರ್ ಟ್ರೇಲರ್, ಧ್ವನಿಸುರುಳಿ ಹಾಡುಗಳು, ಪೋಸ್ಟರ್ ಬಿಡುಗಡೆ ಸಮಾರಂಭ
Posted On: 16 Sep 2021, 06:38 PM
ಉಡುಪಿ : ಬಹು ನಿರೀಕ್ಷಿತ ಆರ್ ಎಸ್ ಬಿ ಕೊಂಕಣಿ ಚಲನಚಿತ್ರ ಅಮ್ಚೆ ಸಂಸಾರ್ ಟ್ರೇಲರ್, ಧ್ವನಿಸುರುಳಿ ಹಾಡುಗಳು, ಪೋಸ್ಟರ್ ಬಿಡುಗಡೆ ಸಮಾರಂಭವು ನಾಳೆ (ಸೆಪ್ಟೆಂಬರ್ 17) ಶುಕ್ರವಾರ ಸಂಜೆ 6 ಗಂಟೆಗೆ ಆರ್ ಎಸ್ ಬಿ ಸಭಾಭವನ ಮಣಿಪಾಲದಲ್ಲಿ ಜರಗಲಿದೆ. ಸಾಂಸಾರಿಕತೆಯ ಒಳನೋಟದ, ನಮ್ಮ ಪದ್ಧತಿಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಪ್ರಯತ್ನ ಈ ಚಿತ್ರದ ಉದ್ದೇಶವಾಗಿದೆ. ಸಂದೀಪ್ ಕಾಮತ್ ನಿರ್ದೇಶನ, ಭುವನೇಶ್ ಪ್ರಭು ಹಿರೇಬೆಟ್ಟು ಛಾಯಾಗ್ರಹಣ, ಪ್ರಜ್ವಲ್ ಸುವರ್ಣ ಛಾಯಾಗ್ರಹಣ/ಸಂಕಲನ, ಕಾರ್ತಿಕ್ ಮುಲ್ಕಿ ಸಂಗೀತವಿದೆ.
ಸೈಬರಕಟ್ಟೆ : ಇಂಜಿನಿಯರ್ಸ್ ಡೇ ಪ್ರಯುಕ್ತ ಹಿರಿಯ ನಿವೃತ್ತ ಇಂಜಿನಿಯರ್ ಕೆ. ವಿಜಯ ಹೆಗ್ಡೆ ಸಣ್ಗಲ್ ರಿಗೆ ಸನ್ಮಾನ
Posted On: 15 Sep 2021, 10:57 PM
ಉಡುಪಿ : ರೋಟರಿ ಕ್ಲಬ್ ಸೈಬರಕಟ್ಟೆಯಿಂದ ಇಂಜಿನಿಯರ್ಸ್ ಡೇ ಪ್ರಯುಕ್ತ ಹಿರಿಯ ನಿವೃತ್ತ ಇಂಜಿನಿಯರ್ ಕೆ. ವಿಜಯ ಹೆಗ್ಡೆ ಸಣ್ಗಲ್ ಅವರನ್ನು ಆದರಣೀಯ ಗೌರವಗಳೊಂದಿಗೆ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ರೋಟರಿ ಸಂಸ್ಥೆ ಹಾಗೂ ಸೈಬರಕಟ್ಟೆ ರೋಟರಿ ಮಾಡುತ್ತಿರುವ ಸೇವಾ ಯೋಜನೆಗಳ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಲ್ಲದೆ ಮುಂದೆ ಕೂಡ ಇನ್ನೂ ಹೆಚ್ಚಿನ ರೀತಿಯಲ್ಲಿ ಸೇವಾ ಕಾರ್ಯದಲ್ಲಿ ತೊಡಗಿಕೊಳ್ಳಿ ಅಂತ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಲಯ 3 ರ ಸೇನಾನಿ ವಿಜಯಕುಮಾರ್ ಶೆಟ್ಟಿ, ರೋಟರಿ ಅಧ್ಯಕ್ಷ ಯು ಪ್ರಸಾದ್ ಭಟ್ ,ನಿಕಟ ಪೂರ್ವ ಅಧ್ಯಕ್ಷ ಹರೀಶ್ ಕಂದಾವರ ಕಾರ್ಯದರ್ಶಿ ಅಣ್ಣಯ್ಯ ದಾಸ್, ಸಂಕಯ್ಯ ಶೆಟ್ಟಿ, ಗಣೇಶ್ ನಾಯಕ್, ಕಿರಣ್, ರಾಜು, ರಾಮಪ್ರಕಾಶ್ ಉಪಸ್ಥಿತರಿದ್ದರು.
ಗೋ ಕಳ್ಳತನ, ಮತಾಂತರ ವಿರುದ್ಧ ನಡೆಯುವ ಬ್ರಹತ್ ಜನಜಾಗೃತಿ ಸಭೆಗೆ ಉಡುಪಿ ಜಿಲ್ಲಾ ರಾಮ್ ಸೇನಾ ಬೆಂಬಲ : ದೀಪಕ್ ಮೂಡುಬೆಳ್ಳೆ
Posted On: 15 Sep 2021, 07:03 PM
ಉಡುಪಿ : ವಿಶ್ವಹಿಂದೂ ಪರಿಷದ್ ಮತ್ತು ಬಜರಂಗದಳದ ನೇತೃತ್ವದಲ್ಲಿ ನಡೆಯುವ ಗೋ ಕಳ್ಳತನ ಹಾಗೂ ಮತಾಂತರ ವಿರುದ್ಧ ನಡೆಯುವ ಬ್ರಹತ್ ಜನಜಾಗೃತಿ ಸಭೆಗೆ ರಾಮ್ ಸೇನಾ ಉಡುಪಿ ಜಿಲ್ಲಾ ವತಿಯಿಂದ ಸಂಪೂರ್ಣ ಬೆಂಬಲ ಇದ್ದು ಇದು ಪ್ರತಿಯೊಬ್ಬ ಹಿಂದುವಿನ ಕರ್ತವ್ಯವಾಗಿದ್ದು ಈ ಜನಜಾಗೃತಿ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ರಾಮ್ ಸೇನಾ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೀಪಕ್ ಮೂಡುಬೆಳ್ಳೆ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನಾರಾಯಣಗುರುಗಳ ಭಾವಚಿತ್ರದೊಂದಿಗೆ ಅಸಂವಿಧಾನಾತ್ಮಕ ಪದ ಬಳಸಿದ ವ್ಯಕ್ತಿಯ ವಿರುದ್ಧ ಜಿಲ್ಲಾಧಿಕಾರಿ, ಪೋಲಿಸ್ ವರಿಷ್ಠಾಧಿಕಾರಿಗೆ ದೂರು
Posted On: 15 Sep 2021, 01:17 PM
ಉಡುಪಿ : ಬ್ರಹ್ಮ ಶ್ರೀ ನಾರಾಯಣ ಗುರುಗಳ ಭಾವ ಚಿತ್ರದೊಂದಿಗೆ ಪತ್ರಿಕೆಯೊಂದರ ಸಂಪಾದಕ ಅಸಂವಿಧಾನಾತ್ಮಕ ಪದ ಬಳಸಿ ಫೇಸ್ಬುಕ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಅಸಂಖ್ಯಾತ ಬಿಲ್ಲವ ಸಮಾಜದ ಗುರುಗಳ ಅನುಯಾಯಿಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಬಗ್ಗೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಹೋರಾಟಗಾರರಾದ ಪ್ರಮೋದ್ ಉಚ್ಚಿಲ್ ಮತ್ತು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾಧ್ಯಕ್ಷರಾದ ಅನ್ಸಾರ್ ಅಹಮ್ಮದ್ ಉಡುಪಿ ಜಿಲ್ಲಾಧಿಕಾರಿಗಳಿಗೆ ಮತ್ತು ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು. ಜಗತ್ತಿನಲ್ಲಿ ಹುಟ್ಟಿದ ಪ್ರತಿಯೊಬ್ಬರೂ ದೇವರ ಮಕ್ಕಳು ದೇವರ ಸೃಷ್ಠಿಯಲ್ಲಿ ಮೇಲು-ಕೀಲುಗಳೆಂಬುದಿಲ್ಲ, ಸರ್ವ ಜನಾಂಗಕ್ಕೂ ದೇವರನ್ನು ಪೂಜಿಸುವ ಹಕ್ಕಿದೆ. "ಎಲ್ಲರಿಗೂ ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು. ಜಾತಿಯನ್ನು ಕೇಳಬೇಡ, ಹೇಳಬೇಡ, ಮನಸ್ಸಿನಲ್ಲೂ ಯೋಚಿಸಬೇಡ" ಎಂದು ಸಾರಿ ಅದ್ವೈತಾಶ್ರಮ ಎಂಬ ಹೆಸರಿನ ಸಂಸ್ಕೃತ ಶಾಲೆಯನ್ನು ಆರಂಭಿಸಿ ಅಲ್ಲಿನ ತುಳಿತಕ್ಕೊಳಗಾಗಿದ್ದ ಪರಿಶಿಷ್ಟ ಜಾತಿ-ಪಂಗಡದ ಹುಡುಗರಿಗೂ ಆಧ್ಯಾತ್ಮಿಕೋನ್ನತಿ ಕೊಟ್ಟು ಸಮಾನತೆಯನ್ನು ಉಸಿರಾಗಿಸಿ, "ವಿದ್ಯೆಯನ್ನು ಪಡೆದು ಜ್ಞಾನ ಸಂಪಾದಿಸಿ ಸ್ವತಂತ್ರರಾಗಿರಿ, ಸಂಘಟಿತರಾಗಿ ಶಕ್ತಿಯನ್ನು ಪಡೆದು ಉನ್ನತಿಯೆಡೆಗೆ ಸಾಗಿರಿ" ಎಂಬ ದಿವ್ಯ ಸಂದೇಶದ ಮೂಲಕ ಗುರುಗಳು ಅಸ್ಪೃಶ್ಯ ಸಮಾಜದ ಶಾಪ ವಿಮೋಚನೆ ಮಾಡಿದವರು. ಅವಹೇಳನಗೈದವ ಸಮುದಾಯದ ಗುರುಗಳಿಗೆ ಅವಹೇಳನ ಮಾಡಿ ಬಿಲ್ಲವ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ನೆಲೆಯಲ್ಲಿ ಸೆಕ್ಷನ್ 153 (ಎ) ಮತ್ತು ಸೆಕ್ಷನ್ 295 (ಎ) ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
