Updated News From Kaup

ಇನ್ನಂಜೆ : ಕಾಪು, ಶಂಕರಪುರ ಸಂಪರ್ಕ ರಸ್ತೆಯ ಸುಗಮ ಸಂಚಾರಕ್ಕೆ ಪೀನ ದರ್ಪಣ ಅಳವಡಿಕೆ

Thumbnail
Posted On: 10 Sep 2021, 07:46 PM

ಶ್ರೀ ವಿಷ್ಣು ಫ್ರೆಂಡ್ಸ್ ಮಡುಂಬು ಅಜಿಲಕಾಡು ಇವರ ವತಿಯಿಂದ ಮಡುಂಬು ಜಂಕ್ಷನ್ ನಲ್ಲಿ ಕಾಪು - ಶಂಕರಪುರ - ಬಂಟಕಲ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ತಿರುವಿನಲ್ಲಿ ಸುಗಮ ಸಂಚಾರಕ್ಕೆ ಪೀನ ದರ್ಪಣ ಅಳವಡಿಕೆ ಮಾಡಿ ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಗ್ರಾ. ಪಂ. ಅಧ್ಯಕ್ಷರಾದ ಮಲ್ಲಿಕಾ ಆಚಾರ್ಯ, ಸದಸ್ಯರುಗಳಾದ ದಿವೇಶ್ ಶೆಟ್ಟಿ ಕಲ್ಯಾಲು, ನಿತೇಶ್ ಸಾಲ್ಯಾನ್ ಕಲ್ಯಾಲು, ಸವಿತಾ ಸುರೇಶ್ ಶೆಟ್ಟಿ, ಸ್ಥಳೀಯರಾದ ಡಾ. ಗಣೇಶ್ ಶೆಟ್ಟಿ, ವಿಜಯ್.ಜಿ. ಉಂಡಾರು, ನಿರಂಜನ್ ಶೆಟ್ಟಿ ಮಡುಂಬು, ದೀಕ್ಷಾ ತಂತ್ರಿ ಮಡುಂಬು ಹಾಗೂ ಶ್ರೀ ವಿಷ್ಣು ಫ್ರೆಂಡ್ಸ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು. ಶ್ರೀ ವಿಷ್ಣು ಫ್ರೆಂಡ್ಸ್ ನ ಅಧ್ಯಕ್ಷರಾದ ಸುಧಾಕರ್ ಪೂಜಾರಿ ಶಾಂತಿಕೆರೆ ಅತಿಥಿಗಳಿಗೆ ಪುಷ್ಪ ನೀಡಿ ಸ್ವಾಗತಿಸಿದರು, ಮನೋಹರ್ ಕಲ್ಲುಗುಡ್ಡೆ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಸಿಹಿ ಹಂಚಲಾಯಿತು.

ಅದಮಾರು : ಪ್ರಾಂಶುಪಾಲ ಎ.ಎಸ್. ಭಟ್ ನೆನಪಿನಲ್ಲಿ ಗಿಡ ವಿತರಣೆ

Thumbnail
Posted On: 10 Sep 2021, 04:52 PM

ಕಾಪು, ಸೆ.10 : ಇಲ್ಲಿಯ ಆದರ್ಶ ಸಂಘಗಳ ಒಕ್ಕೂಟವು ಆದರ್ಶ ಯುವಕ ಸಂಘದ ಸ್ಥಾಪಕ, ನಿವೃತ್ತ ಪ್ರಾಂಶುಪಾಲ ,ಶಿಕ್ಷಣ - ಶಿಷ್ಯ ಪ್ರೀತಿಯ ಕೀರ್ತಿಶೇಷ ಎ.ಎಸ್ .ಭಟ್ ಅವರ 101 ನೇ ಜನ್ಮದಿನಾಚರಣೆಯ ಪ್ರಯುಕ್ತ 101 ಸಂಖ್ಯೆಯ ವಿವಿಧ ಹೂ,ಹಣ್ಣು,ಕಂಗು ,ತೆಂಗು,ಬಾಳೆ ಗಿಡಗಳನ್ನು ವಿತರಿಸಲಾಯಿತು. ಎ.ಎಸ್.ಭಟ್ ಅವರು ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ,ಪ್ರಾಂಶುಪಾಲರಾಗಿ, ಶಿಕ್ಷಣದೊಂದಿಗೆ , ಶಿಸ್ತಿನ ಮಹತ್ವವನ್ನು ಬೋಧಿಸಿದ ಆದರ್ಶ ಶಿಕ್ಷಕ. ತೋಟಗಾರಿಕಾ ಅಭಿಯಾನವನ್ನು ಅಭೂತಪೂರ್ವವಾಗಿ ಸಾಧಿಸಿದ್ದರು ಎಂದು ನೆನಪಿಸಿಕೊಳ್ಳುತ್ತಾ ಗಿಡಗಳನ್ನು ವಿತರಿಸಲಾಯಿತು. ಎರಡು ಸಂಪಿಗೆಯ ಗಿಡಗಳನ್ನು ಹಾಗೂ ಎರಡು ತೆಂಗಿನ ಸಸಿಗಳನ್ನು ಯುವಕ ಸಂಘ ಹಾಗೂ ಸಮುದಾಯ ಭವನದ ವಠಾರದಲ್ಲಿ ನೆಡಲಾಯಿತು. ಆದರ್ಶ ಸಂಘಗಳ ಒಕ್ಕೂಟದ ಅಧ್ಯಕ್ಷ ಎರ್ಮಾಳು ಉದಯ ಕೆ .ಶೆಟ್ಟಿ‌, ಪೋಷಕ ನಾರಾಯಣ ಕೆ.ಶೆಟ್ಟಿ ನೈಮಾಡಿ , ಸಮುದಾಯ ಭವನದ ಅಧ್ಯಕ್ಷ ಕೆ.ಎಲ್ ಕುಂಡಂತಾಯ, ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸುದರ್ಶನ ವೈ .ಎಸ್. ಯುವಕ ಸಂಘದ ಅಧ್ಯಕ್ಷ ಸಂತೋಷ ಜೆ.ಶೆಟ್ಟಿ , ಕಾರ್ಯದರ್ಶಿ ಗಣೇಶ ಸಾಲಿಯಾನ್, ಅದರ್ಶ ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ಲತಾ ಆರ್. ಆಚಾರ್ಯ, ಯುವಕ ಸಂಘ ಹಾಗೂ ಮಹಿಳಾ ಮಂಡಲಗಳ ಸದಸ್ಯರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಅದಮಾರಿನ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ ಪುಸ್ತಕಗಳನ್ನು ನಾರಾಯಣ ಕೆ.ಶೆಟ್ಟಿ ನೈಮಾಡಿ ಅವರ ವತಿಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ದೇವಿಕಾ ಹಾಗೂ ಶಿಕ್ಷಕಿ ಶ್ರೀಮತಿ ಸುಜಾತಾ ಅವರಿಗೆ ಹಸ್ತಾಂತರಿಸಲಾಯಿತು. ಶಾಲೆಯ ಅಧ್ಯಕ್ಷರಾದ ಎ. ನಾರಾಯಣ ಶೆಟ್ಟಿ ಉಪಸ್ಥಿತರಿದ್ದರು‌. ಯುವಕ ಸಂಘದ ಆರನೇ ವರ್ಷದ ಗಣೇಶೋತ್ಸವ ನಡೆಯಿತು .

ಕಾಪುವಿನ ಹೂವಿನ ಅಂಗಡಿಯ ಹಿಂಗಾರದಲ್ಲಿ ಪ್ರಕೃತಿದತ್ತವಾಗಿ ಮೂಡಿದ ಗಣೇಶ

Thumbnail
Posted On: 09 Sep 2021, 11:55 PM

ಕಾಪು : ಚೌತಿ ಹಬ್ಬಕ್ಕೂ ಸ್ವಲ್ಪ ದಿನ ಮುಂಚಿತವಾಗಿಯೇ ಅನೇಕ ಕಲಾವಿದರು ತಮ್ಮ ಕೈಚಳಕದಿಂದ ಗಣೇಶನ ಮೂರ್ತಿ ತಯಾರಿಸುವುದು ರೂಢಿಯಾಗಿದೆ, ಬೇಳೆ ಕಾಳು, ದವಸ ಧಾನ್ಯಗಳಲ್ಲಿ ಹಾಗೂ ತರಕಾರಿ, ಹಣ್ಣು ಹಂಪಲು ಸೇರಿದಂತೆ ಇತರೇ ಫಲವಸ್ತುಗಳಲ್ಲಿಯೂ ಗಣೇಶನ ಆಕೃತಿಗೆ ರೂಪು ಕೊಡುವ ಕೆಲಸವನ್ನು ಮಾಡುತ್ತಾರೆ. ಆದರೆ ಕಾಪುವಿನ ಶ್ರೀ ಲಕ್ಷ್ಮೀ ಜನಾರ್ದನ ಫ್ಲವರ್ ಸ್ಟಾಲ್ ನಲ್ಲಿ ಹಿಂಗಾರದಲ್ಲಿ ಪ್ರಕೃತಿದತ್ತವಾಗಿಯೇ ಗಣೇಶನ ಮೂರ್ತಿ ಮೂಡಿ ಬಂದಿದೆ. ಕಾಪುವಿನ ಕಲ್ಯಾಲು ನಿವಾಸಿ ರಾಜ್ ಸಾಲ್ಯಾನ್ ಗಣೇಶ ಹಬ್ಬದ ಪ್ರಯುಕ್ತ ಹೂ ಖರೀದಿಸಲು ಕಾಪುವಿನ ತೃಪ್ತಿ ಹೋಟೆಲ್ ಮುಂಭಾಗದಲ್ಲಿರುವ ಶ್ರೀ ಲಕ್ಷ್ಮೀ ಜನಾರ್ದನ ಪ್ಲವರ್ ಸ್ಟಾಲ್ಗೆ ಬಂದಾಗ ಹಿಂಗಾರದಲ್ಲಿ ಗಣೇಶ ಪ್ರತ್ಯಕ್ಷವಾಗಿದ್ದ. ಈ ಬಗ್ಗೆ ಮಾತನಾಡಿದ ಫ್ಲವರ್ ಸ್ಟಾಲ್ ಮಾಲಕ ಪ್ರಕಾಶ್ ಗಾಣಿಗ ಇವರು, ಕಳೆದ 35 ವರ್ಷಗಳಿಂದ ಹೂವಿನ ವ್ಯಾಪಾರ ಮಾಡುವ ನನಗೆ ಇದೆ ಮೊದಲ ಬಾರಿಗೆ ಹಿಂಗಾರದಲ್ಲಿ ಗಣೇಶ ಕಾಣಿಸಿಕೊಂಡದ್ದು, ಬಹಳ ಸಂತೋಷವಾಗಿದೆ ಎಂದರು, ಆ ಹಿಂಗಾರವನ್ನು ಯಾರಿಗೂ ಕೊಡದೆ ಸ್ಟಾಲ್ ನಲ್ಲಿಯೇ ಇಟ್ಟುಕೊಂಡಿದ್ದಾರೆ. ಸುದ್ದಿ ತಿಳಿದಾಗ ಒಂದಷ್ಟು ಜನ ಇಲ್ಲಿಗೆ ಆಗಮಿಸಿ ಹಿಂಗಾರದ ಗಣೇಶನ ದರ್ಶನ ಪಡೆದರು.

ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಒಂದನೇ ಮೂಲ್ಯಣ್ಣ ಅನುವಂಶೀಯ ಅರ್ಚಕರಿಗೆ ಸ್ವರ್ಣ ಬಳೆ ಸಮರ್ಪಣೆ

Thumbnail
Posted On: 09 Sep 2021, 05:51 PM

ಮಂಗಳೂರು : ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ಒಂದನೇ ಮೂಲ್ಯಣ್ಣ ಅನುವಂಶೀಯ ಅರ್ಚಕರಿಗೆ ಸ್ವರ್ಣ ಬಳೆ ಸಮರ್ಪಣೆಯು ಸಂಪ್ರದಾಯದಂತೆ ಪಣೋಲಿಬೈಲ್ ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅನುವಂಶಿಕ ಪ್ರಧಾನ ಅರ್ಚಕರಾಗಿದ್ದ ದಿ. ಗುಡ್ಡ ಮೂಲ್ಯ ಯಾನೆ ಬಾಬು ಮೂಲ್ಯರ ಉತ್ತರಾಧಿಕಾರಿಯಾದ ದೈವಸ್ಥಾನದ ಸಂಪ್ರದಾಯದಂತೆ ಒಂದನೇ ಅರ್ಚಕ ಗುಡ್ಡ ಮೂಲ್ಯ ಯಾನೆ ವಾಸುದೇವ ಮೂಲ್ಯರಿಗೆ, ಶ್ರೀ ಧಾಮ‌ ಮಾಣಿಲದ ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಪೂಜ್ಯ ಸ್ವಾಮೀಜಿಯವರ ಆಶೀರ್ವಾದದೊಂದಿಗೆ ಎರಡನೆ ಅರ್ಚಕರಾದ ಶ್ರೀ ನಾರಾಯಣ ಮೂಲ್ಯ, ಮೂರನೆ ಅರ್ಚಕ ಮೋನಪ್ಪ ಮೂಲ್ಯ, ಹಾಗೂ ಕುಟುಂಬದ ಹಿರಿಯ ಸದಸ್ಯರಾದ ಪೂವಪ್ಪ ಮೂಲ್ಯ ಕುಂಡಡ್ಕ, ಬೂಬ ಸಾಲ್ಯಾನ್ ಮತ್ತು ಕುಟುಂಬದ ಸದಸ್ಯರು ಹಾಗೂ ಭಂಡಾರದ ಮನೆಯ ನವೀನ್ ಕುಮಾರ್, ಉಮೇಶ್ ಕುಲಾಲ್ ಮಂಚಿ, ಮತ್ತು ಗ್ರಾಮಸ್ಥರು, ಭಕ್ತಾಧಿಗಳ ಸಮ್ಮುಖದಲ್ಲಿ ದೈವ ಕಲ್ಲುರ್ಟಿಯ ಮುಂಭಾಗದಲ್ಲಿ, ಕಟ್ಟು ಕಟ್ಟಳೆಯಂತೆ ದೈವದ ಪ್ರಧಾನ ಅರ್ಚಕರ ಸ್ವರ್ಣ ಬಳೆ ತೊಡಿಸಿ ದೈವ ಚಾಕರಿಗೆ ಜವಾಬ್ದಾರಿ ನೀಡಲಾಯಿತು. ಕುಟುಂಬದ ಕಟ್ಟು ಪಾಡಿನ ಬಗ್ಗೆ ದೈವಸ್ಥಾನದ ಸಂಬಂಧಪಟ್ಟವರಿಗೆ ಹಾಗೂ ಕಾರ್ಯ ನಿರ್ವಹಣಾ ಅಧಿಕಾರಿಯವರಿಗೆ ಮೌಖಿಕವಾಗಿ ತಿಳಿಸಿ, ಸಂಪ್ರದಾಯದೊಂದಿಗೆ ನಡೆಸಲಾಯಿತು. ಈ ಸಂಧರಮೇಶ್ ಕುಲಾಲ್ ಪಣೋಲಿಬೈಲ್, ರಾಜು ಕುಲಾಲ್, ಲೋಹಿತ್ ಕುಮಾರ್ S, ಪಣೋಲಿಬೈಲ್, ಕುಕ್ಕುಟ ಸಮಿತಿಯ ಅಧ್ಯಕ್ಷ ದಯಾನಂದ ಅಡ್ಯಾರ್, ಯುವ ವೇದಿಕೆ ಪಣೋಲಿಬೈಲಿನ ರಮೇಶ್ ಎಂ, ಭಂಡಾರದ ಮನೆ, ಲಿಂಗಪ್ಪ ಬಂಗೇರ ಕಾರಜೆ, ಕುಲಾಲ ಯುವ ವೇದಿಕೆಯ ಜಿಲ್ಲಾಧ್ಯಕ್ಷ ಸುಕುಮಾರ್ ಬಂಟ್ವಾಳ್, ಕಾರ್ತಿಕ್ ಬಂಟ್ವಾಳ್, ಪುನೀತ್ ಕಾಮಾಜೆ, ಜಯರಾಮ ಶೆಟ್ಟಿ ನಗ್ರಿಗುತ್ತು, ನಾಗೇಶ್ ಬಂಗೇರ, ಮನೋಜ್ ಕುಮಾರ್, ಬಾಲಕ್ರಷ್ಣ ಕುಲಾಲ್, ಗೋಪಾಲ ಕುಲಾಲ್, ಹಾಗೂ ಹೆಚ್ಚಿನ ಭಕ್ತಾದಿಗಳು ಭಾಗವಹಿಸಿದ್ದರು.

ಯುವ ಜಾದೂಗಾರ ಪ್ರಥಮ್ ಕಾಮತ್ ಕಟಪಾಡಿ ಹಸ್ತದಿ ಮೂಡಿದ ಅರಿಶಿಣ ಗಣಪ

Thumbnail
Posted On: 09 Sep 2021, 03:39 PM

ಕಾಪು : ಅರಿಶಿಣ ಗಣಪತಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆ ಯಂತೆ 10ಲಕ್ಷ ಅರಿಶಿಣ ಗಣಪತಿ ಅಭಿಯಾನದಲ್ಲಿ ಕಟಪಾಡಿ ಪ್ರಥಮ್ ಕಾಮತ್ ಇವರಿಂದ ಅರಶಿನ ಗಣಪತಿ ರಚಿಸಲ್ಪಟ್ಟಿದೆ. ಕಟಪಾಡಿಯ ಎಸ್ ವಿ ಎಸ್ ಆಂಗ್ಲ ಮಾದ್ಯಮ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಪ್ರಥಮ್ ಕಾಮತ್ 250ಗ್ರಾಂ ಅರಿಶಿಣ ಹಾಗೂ 250 ಗ್ರಾಂ ಮೈದಾ ಹಾಗೂ ನೀರು ಬೆರೆಸಿ 6 ಇಂಚಿನ ಪರಿಸರ ಸ್ನೇಹಿ ಗಣೇಶನನ್ನು ರಚಿಸಿದ್ದಾನೆ. ಇದು ಕರ್ನಾಟಕ ಸರಕಾರದ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಸೂಚನೆಯನ್ನು ಪಾಲಿಸಿ ರಚಿಸಲಾಗಿದೆ. ಅಲ್ಲದೇ 10ಲಕ್ಷ ಅರಿಶಿಣ ಗಣಪತಿ ಅಭಿಯಾನದಲ್ಲಿ ಪ್ರಥಮ್ ಕಾಮತ್ ನ ಒಂದು ಕೊಡುಗೆಯಾಗಿದೆ.

ಎಳತ್ತೂರು : ಕಾಲಗರ್ಭದಲ್ಲಿ ಕಳೆದುಹೋಗಿರುವ ದೈವಗಳ ಸೊತ್ತುಗಳು ಪತ್ತೆ!

Thumbnail
Posted On: 09 Sep 2021, 03:18 PM

ಮೂಲ್ಕಿ : ಮೂಲ್ಕಿ ಒಂಬತ್ತು ಮಾಗಣೆಯ ಎಳತ್ತೂರು ಗ್ರಾಮದಲ್ಲಿ ಕಾಲಗರ್ಭದಲ್ಲಿ ಮರೆಮಾಚಿರುವ ಎಳತ್ತೂರು ಕಾಪೇಡಿ ಗುತ್ತುವಿನ ಕುಟುಂಬವು ಹಲವಾರು ವಿಭಾಗಗಳಾಗಿ, ತದನಂತರ ಒಬ್ಬರಿಗೊಬ್ಬರಿಗೆ ಪರಿಚಯವಾಗಿ, ಕಳೆದ ಡಿಸೆಂಬರ್ ತಿಂಗಳಿನಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆಯನ್ನು ಇಡಲಾಗಿತ್ತು. ಅದರಲ್ಲಿ ಗೋಚರವಾದಂತೆ ಪ್ರಧಾನವಾಗಿ ಉಳ್ಳಾಯ, ಕಾಂತೇರಿ ಜುಮಾದಿ ಹಾಗೂ ಪರಿವಾರ ದೈವಗಳು ಇರುವುದು ಕಂಡುಬದಿತ್ತು. ಅಲ್ಲದೆ ಕಾಂತೇರಿ ಜುಮಾದಿ ದೈವಕ್ಕೆ ಮೈಲೆಡ್ ಮಾನೆಚ್ಚಿಲ್ ಸೇವೆಯನ್ನು ನೀಡಲಾಗಿತ್ತು. ದೈವದ ನುಡಿ ಬಂದಂತೆ ಪುರಾತನದ ಗುತ್ತಿನ ಮನೆ ಇದ್ದ ಸ್ಥಳದಲ್ಲಿ ದೈವಕ್ಕೆ ಸಂಬಂದಿಸಿದ ಸೊತ್ತುಗಳು ಸಿಗುವುದೆಂದು ನುಡಿಯಾಗಿತ್ತು.ಅಂತೆಯೇ ಹುಡುಕಲು ಪ್ರಾರಂಭಿಸಿದ ದೈವಗಳ ಅವಶೇಷ ಇರುವುದು ಪತ್ತೆಯಾಗಿತ್ತು. ಎಳತ್ತೂರು ಕಾಪೇಡಿ ಗುತ್ತು ಕಾಂತೇರಿ ಜುಮಾದಿ ದೈವವು ತನ್ನ ಕಾರ್ಣಿಕವನ್ನು ತೋರಿಸಿ ಕುಟುಂಬದವರನ್ನು ಮತ್ತು ಇಡೀ ತುಳುನಾಡಿನ ಜನರಲ್ಲಿ ಅಚ್ಚರಿ ಮೂಡಿಸಿದೆ. ಅಂತೆಯೇ ದೈವದ ಪ್ರೇರಣೆಯಂತೆ, ಕುಟುಂಬಸ್ಥರ ಸಂಕಲ್ಪದಂತೆ ಸೆಪ್ಟೆಂಬರ್ 11 ಕ್ಕೆ ಕಾಪೇಡಿ ಗುತ್ತು ಧರ್ಮ ಚಾವಡಿಯ ನೂತನ ಮನೆಗೆ ಶಿಲಾನ್ಯಾಸ ಮಾಡುವುದಾಗಿ ನಿಶ್ಚಯಿಸಲಾಗಿದೆ.

ಉಡುಪಿ ಹೆಲ್ಪ್ ಲೈನ್ 4 ನೇ ವಷ೯ದ ಸಂಭ್ರಮದ ಅಂಗವಾಗಿ ಕೃಷ್ಣಾನುಗ್ರಹ ಅನಾಥಾಶ್ರಮದಲ್ಲಿ ಮಕ್ಕಳಿಗೆ ಊಟ, ಉಪಾಹಾರ ಮತ್ತು ಕಿಟ್ ವಿತರಣೆ

Thumbnail
Posted On: 09 Sep 2021, 01:42 PM

ಉಡುಪಿ : ಹಸಿದವರ ಬಾಳಿನ ಆಶಾಕಿರಣವಾದ ಉಡುಪಿ ಹೆಲ್ಪ್ ಲೈನ್ (ರಿ.)ನ 4ನೇಯ ವಷ೯ದ ಸಂಭ್ರಮದ ಅಂಗವಾಗಿ ಅನಾಥ ಮಕ್ಕಳ ಬಾಳಿನ ಆಶಾಕಿರಣವಾದ ಉಡುಪಿ ಯ ಸಂತೆಕಟ್ಟೆಯ ಕೃಷ್ಣಾನುಗ್ರಹ ಅನಾಥಾಶ್ರಮದಲ್ಲಿ ಮಕ್ಕಳಿಗೆ ಊಟ, ಚಹಾ-ತಿಂಡಿ, ಸಿಹಿತಿಂಡಿ, ಬಿಸ್ಕತ್, ಹಣ್ಣುಹಂಪಲು ನೀಡಿ ಮಕ್ಕಳ ಜೊತೆ ಆಚರಿಸಲಾಯಿತು. ಇದೇ ಸಂದರ್ಭ ಕೆ.ಜಿ ರೋಡ್ ಸಮೀಪ ದಿ ಸುಬ್ರಮಣ್ಯ ಆಚಾರ್ಯ ಅವರ ತಾಯಿಗೆ ಆಹಾರ ಸಾಮಗ್ರಿಗಳ ಕಿಟ್ ನೀಡಲಾಯಿತು. ಈ ಸಂಧಭ೯ದಲ್ಲಿ ಸಮಾಜ ಸೇವಕ ಮಂಜುನಾಥ್ ಶೆಟ್ಟಿ ಮಣಿಪಾಲ್, ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿಯ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಅಡ್ಯಾರ್,ಆಕಾಶವಾಣಿ ಕಲಾವಿದೆ ಭಾರತಿ ಟಿ. ಕೆ, ಸಾಮಾಜಿಕ ಕಾಯ೯ಕತೆ೯ ಪ್ರೀತಿ ಕಲ್ಯಾಣಪುರ, ಸಮಾಜ ಸೇವಕಿ ಉಷಾ ಹೂಡೆ, ತೋನ್ಸೆ ಗ್ರಾಮ ಪಂಚಾಯತ್ ಸದಸ್ಯರಾದ ಕುಸುಮ ಗುಜ್ಜರುಬೆಟ್ಟು, ಯಶೋಧ ಕೆಮ್ಮಣ್ಣು, ವತ್ಸಲಾ ವಿನೋದ್ ಗುಜ್ಜರುಬೆಟ್ಟು, ಆಶಾ ಕೆಮ್ಮಣ್ಣು, ಉಡುಪಿ ಹೆಲ್ಪ್ ಲೈನ್ (ರಿ.) ಸಂಸ್ಥೆಯ ಪದಾಧಿಕಾರಿಗಳಾದ ಸುಧಾಕರ್ ಕಾಡೂರು,ನಿತಿನ್ ಆಚಾಯ೯ ಕಾಡೂರು, ರಪೀಕ್ ಕಲ್ಯಾಣಪುರ, ಮಹೇಶ್ ಪೂಜಾರಿ ಹೂಡೆ ಉಪಸ್ಥಿತರಿದರು.

ಪಡುಬಿದ್ರಿ : ಯುವವಾಹಿನಿ ಘಟಕದ ಪದಗ್ರಹಣ

Thumbnail
Posted On: 09 Sep 2021, 12:52 PM

ಪಡುಬಿದ್ರಿ : ನಮಗಿಂತ ದುರ್ಬಲರನ್ನು ಅಣಕಿಸುವುದಕ್ಕಿಂತ ಅವರನ್ನು ನಮ್ಮೊಂದಿಗೆ ಜೊತೆಯಾಗಿಸುವ ಪ್ರಯತ್ನ ಮಾಡಬೇಕಾಗಿದೆ. ಸ್ವಾಭಿಮಾನದ ಬದುಕಿಗೆ ಮೌಲ್ಯಾಧಾರಿತ ಶಿಕ್ಷಣವು ಭೂಷಣ. ಅದ್ಧೂರಿತನ, ಜನ ಸೇರಿಸುವಿಕೆಯ ಅವಶ್ಯಕತೆಗಿಂತ ಕಾರ್ಯಕ್ರಮದ ಅರಿವು ಜನರಲ್ಲಿ ಮೂಡಿಸಬೇಕಾಗಿದೆ ಎಂದು ಯುವವಾಹಿನಿ (ರಿ.)ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಡಾ|ರಾಜಾರಾಮ್ ಕೆ.ಬಿ. ಹೇಳಿದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿದ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಭವಿಷ್ಯದ ,ರೂವಾರಿ ನಾವೇ, ಯಾವುದೇ ಕರ್ತವ್ಯವನ್ನು ಕೀಳಾಗಿ ಕಾಣದೆ, ಆರೋಗ್ಯಕ್ಕೆ ಮಹತ್ವ ನೀಡಿ ಜಾಗೃತರಾಗೋಣ ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಪಡುಬಿದ್ರಿ ಬಿಲ್ಲವ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಘಟಕದ‌ ಮುಂದಿನ ಕಾರ್ಯಯೋಜನೆಗಳಿಗೆ ಶುಭ ಹಾರೈಸಿದರು. ಸನ್ಮಾನ : ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಘಟಕದ ಸುದೀಪ್ ಎಸ್. ಕೋಟ್ಯಾನ್, ಸ್ವಾತಿ, ಕ್ಷಮ್ಯ ಅಮೀನ್ ರನ್ನು ಸನ್ಮಾನಿಸಲಾಯಿತು. ಪದ ಪ್ರದಾನ, ಅಧಿಕಾರ ಹಸ್ತಾಂತರ : ಯುವವಾಹಿನಿ( ರಿ.)ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಡಾ|ರಾಜಾರಾಮ್ ಕೆ.ಬಿ. ಪಡುಬಿದ್ರಿ ಯುವವಾಹಿನಿ ಘಟಕದ ನೂತನ ಪದಾಧಿಕಾರಿಗಳಿಗೆ ಪದ ಪ್ರದಾನ ನೆರವೇರಿಸಿದರು. ಘಟಕದ ಅಧ್ಯಕ್ಷರಾದ ಚಿತ್ರಾಕ್ಷಿ ಕೆ. ಕೋಟ್ಯಾನ್ ನೂತನ ಅಧ್ಯಕ್ಷರಾದ ಯಶೋದರಿಗೆ ಹಾಗೂ ಕಾರ್ಯದರ್ಶಿ ಶಾಶ್ವತ್ ಎಸ್. ಪೂಜಾರಿ ನೂತನ ಕಾರ್ಯದರ್ಶಿ ವಿಧಿತ್ ರವರಿಗೆ ಅಧಿಕಾರ ಹಸ್ತಾಂತರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಚಿತ್ರಾಕ್ಷಿ ಕೆ.ಕೋಟ್ಯಾನ್ ವಹಿಸಿದ್ದರು. ಈ ಸಂದರ್ಭ ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯದರ್ಶಿ ಅಶೋಕ್ ಕುಮಾರ್ ಪಡ್ಪು, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಯೋಗೀಶ್ ಪೂಜಾರಿ ಮಾದುಮನೆ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಜಯರಾಮ್ ಕಾರಂದೂರು, ಪಡುಬಿದ್ರಿ ಬಿಲ್ಲವ ಸಂಘದ ಕೋಶಾಧಿಕಾರಿ ಅಶೋಕ್ ಪೂಜಾರಿ ಪಾದೆಬೆಟ್ಟು ಉಪಸ್ಥಿತರಿದ್ದರು. ಸುಜಾತ ಹರೀಶ್, ಡಾ| ಐಶ್ವರ್ಯ ಸಿ. ಅಂಚನ್ ಪ್ರಾರ್ಥಿಸಿ, ಘಟಕದ ಅಧ್ಯಕ್ಷರಾದ ಚಿತ್ರಾಕ್ಷಿ ಕೆ.ಕೋಟ್ಯಾನ್ ಸ್ವಾಗತಿಸಿ, ಶಾಶ್ವತ್ ಎಸ್. ಪೂಜಾರಿ ವರದಿ ವಾಚಿಸಿ, ಯೋಗೀಶ್ ಪೂಜಾರಿ ಮಾದುಮನೆ ನೂತನ ಪದಾಧಿಕಾರಿಗಳ ಪಟ್ಟಿ ವಾಚಿಸಿ, ನಿಶ್ಮಿತ ಪಿ. ಆರ್, ಸುಜಾತ ಪ್ರಸಾದ್, ಶಯನ ಕಾರ್ಯಕ್ರಮ ನಿರ್ವಹಿಸಿ, ನೂತನ ಕಾರ್ಯದರ್ಶಿ ವಿಧಿತ್ ವಂದಿಸಿದರು.

ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮುದ್ದು ಕೃಷ್ಣ, ರಾಧೆ- ಕೃಷ್ಣ, ಮತ್ತು ಯಶೋಧ-ಕೃಷ್ಣ ಸ್ಪರ್ಧಾ ಕಾರ್ಯಕ್ರಮ

Thumbnail
Posted On: 09 Sep 2021, 10:51 AM

ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ , ಇನ್ನರ್ ವೀಲ್ ಕ್ಲಬ್ ಹಾಗು ರೋಟರಿ ಸಮುದಾಯದಳ ಇದರ ಜಂಟಿ ಸಹಯೋಗದಲ್ಲಿ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಮುದ್ದು ಕೃಷ್ಣ, ರಾಧೆ- ಕೃಷ್ಣ, ಮತ್ತು ಯಶೋಧ- ಕೃಷ್ಣ ಸ್ಪರ್ಧಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಶಿವಧೂತೆ ಗುಳಿಗೆ ನಾಟಕದಲ್ಲಿ ಗುಳಿಗನ ಪಾತ್ರ ನಿರ್ವಹಿಸಿದ ಕನ್ನಡ ಕಿರುತರೆ ಹಾಗು ಚಲನಚಿತ್ರ ನಟ ಸ್ವರಾಜ್ ಶೆಟ್ಟಿ ಹಾಗು ಚಲನಚಿತ್ರ ನಟಿ ನವ್ಯ ಪೂಜಾರಿರವರನ್ನು ಸಾನ್ಮನಿಸಲಾಯಿತು. ಒಟ್ಟು 80 ಸ್ಪರ್ಧಾಳುಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ರೋಟರಿ ವಲಯ. ನಿಕಟ ಪೂರ್ವ ಸಹಾಯಕ ಗವರ್ನರ್ ನವೀನ್ ಅಮೀನ್ ಶಂಕರ್ ಪುರ , ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಅಡ್ವೆ, ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ ದೀಪಕ್ ಕೋಟ್ಯಾನ್ ಇನ್ನಾ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಕೇಸರಿ ಯುವರಾಜ್, ರೋಟರಿ ವಲಯ ಸಂಯೋಜಕ ರಮೀಜ್ ಹುಸೇನ್ ಪಡುಬಿದ್ರಿ ಗ್ರಾ.ಪಂ ಸದಸ್ಯರಾದ ಜ್ಯೋತಿ ಮೆನನ್ , ಶಶಿಕಲಾ, ಸುನಂದಾ ಸಾಲ್ಯಾನ್ ಕಾರ್ಯಕ್ರಮ ನಿರ್ದೇಶಕರಾದ ಗೀತಾ ಅರುಣ್, ಸ್ನೇಹ ಪ್ರವೀಣ್, ಸುಶ್ಮಿತಾ ಪಾದೆಬೆಟ್ಟು ಉಪಸ್ಥಿತರಿದ್ದರು. ಮುದ್ದು ಕೃಷ್ಣ ಸ್ಪರ್ಧೆ ಯ ವಿಜೇತರು ವಿಭಾಗದಲ್ಲಿ ನಡೆದ ಸ್ಪರ್ಧೆ ಯಲ್ಲಿ ಮೂರು ವರ್ಷ ಕೆಳಗಿನವರ ವಿಭಾಗ, ( 0-3 ) ಪ್ರಥಮ ಪೂರ್ವಿ, ದ್ವಿತೀಯ ಸಮರ್ಥ ಮೂರರಿಂದ ಅರು ವರ್ಷ ದೊಳಗಿನ ವಿಭಾಗ ( 3- 6 ) ಪ್ರಥಮ-ಎಚ್. ಪ್ರರ್ಣಿಕಾ ಆಚಾರ್ಯ, ದ್ವಿತೀಯ- ಸಮನ್ವಿ ಎಸ್ ಕರ್ಕೇರ. ಆರು ವರ್ಷದಿಂದ ಹತ್ತು ವಿಭಾಗ ( 6- 10 ) ಪ್ರಥಮ-ಅನಿಕಾ ಭರತ್ ರಾಜ್, ದ್ವಿತೀಯ -ಪ್ರತೀಕ್ಷಾ ರಾಧೆ -ಕೃಷ್ಣ ಸ್ಪರ್ಧೆಯ ಮೂರು ವರ್ಷ ದಿಂದ ಅರು ವರ್ಷ ದೂಳಗಿನ ವಿಜೇತರು ( 3-6 ) ಪ್ರಥಮ - ವರ್ಷ ಮತ್ತು ಆರಾಧ್ಯ, ದ್ವಿತೀಯ- ಸ್ವರ ಮತ್ತು ಅವರ್ಥ್ ಆರು ವರ್ಷದಿಂದ ಹತ್ತು ವರ್ಷದೊಳಗಿನ ರಾಧೆ -ಕೃಷ್ಣ ಸ್ಪರ್ಧೆಯ ವಿಜೇತರು (6-10 ) ಪ್ರಥಮ- ಅನಿಕಾ ಮತ್ತು ಎಚ್. ಪ್ರರ್ಣಿಕಾ ಅಚಾರ್ಯ, ದ್ವಿತೀಯ -ಸುರಕ್ಷಿತಾ ಮತ್ತು ವೈಷ್ಣವಿ ಯಶೋಧ ಕೃಷ್ಣ ಸ್ಪರ್ಧೆಯ ವಿಜೇತರು ಪ್ರಥಮ-ದಿವ್ಯ ಮತ್ತು ಪ್ರಣಮ್ಯ, ದ್ವಿತೀಯ -ಸೌಂದರ್ಯ ತೀರ್ಪುಗಾರರಾಗಿ ಚಿತ್ರನಟ ಸ್ವರಾಜ್ ಶೆಟ್ಟಿ, ಚಿತ್ರನಟಿ ನವ್ಯ ಪೂಜಾರಿ, ಭರತನಾಟ್ಯ ಕಲಾವಿದೆ ಮಂಗಳ ‌ಕಿಶೋರ್ ಸಹಕರಿಸಿದರು. ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕೋರ್ಡಿನೇಟರ್ ನವೀನ್ ಚಂದ್ರ ಶೆಟ್ಟಿ, ಪಡುಬಿದ್ರಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ವೈ.ಸುಕುಮಾರ್ , ಕಟಪಾಡಿ ರೋಟರಿ ಸದಸ್ಯ ಸಂತೋಷ್ ಶೆಟ್ಟಿ, ಪಡುಬಿದ್ರಿ ಗ್ರಾ.ಪಂ.ಉಪಾಧ್ಯಕ್ಷೆ ಯಶೋಧ ಪಡುಬಿದ್ರಿ, ಎರ್ಮಾಳು ಗ್ರಾ.ಪಂ. ಅಧ್ಯಕ್ಷೆ ಕಸ್ತೂರಿ ಪ್ರವೀಣ್, ಇನ್ನರ್ ವೀಲ್ ಅಧ್ಯಕ್ಷೆ ಅನಿತಾ ಬಿ.ವಿ ,ಕಾರ್ಯದರ್ಶಿ ಶುಭ ದಿನೇಶ್, ರೋಟರಿ ಸಮುದಾಯದಳ ಅಧ್ಯಕ್ಷೆ ಲಾವಣ್ಯ , ಕಾರ್ಯದರ್ಶಿ ಅದ್ವತ್ ಕುಮಾರ್ ಉಪಸ್ಥಿತರಿದ್ದರು. ರೋಟರಿ ಅಧ್ಯಕ್ಷ ಮಹಮ್ಮದ್ ನಿಯಾಜ್ ಸ್ವಾಗತಿಸಿ, ಕಾರ್ಯದರ್ಶಿ ಬಿ.ಯಸ್ ಆಚಾರ್ಯ ವಂದಿಸಿ‌, ಸುಧಾಕರ್ ಕೆ , ಹಾಗು ಕಾರ್ತಿಕ್ ಮುಲ್ಕಿ, ಕಾರ್ಯಕ್ರಮ ನಿರೂಪಿಸಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಮೂವರು ಗೌರವಾನ್ವಿತ ಶಿಕ್ಷಕರಿಗೆ ಗೌರವ ಸಮರ್ಪಣೆ

Thumbnail
Posted On: 09 Sep 2021, 10:13 AM

ಉಡುಪಿ : ಕಲ್ಯಾಣಪುರ ರೋಟರಿ ಕ್ಲಬ್ ವತಿಯಿಂದ ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಸ್ವೀಕರಿಸಿದ ದಿನಕರ ಶೆಟ್ಟಿ, ಮತ್ತು ನಿವೃತ್ತ ಶಿಕ್ಷಕಿ ದೇವಕಿ ಎನ್. ಸರ್ಕಾರಿ ಪದವಿಪೂರ್ವ ಕಾಲೇಜು ಕೆಮ್ಮಣ್ಣು ಇಲ್ಲಿ ಉಪನ್ಯಾಸಕ ರಾಗಿ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶ್ರೀಪತಿ ಜೋಗಿ ಇವರುಗಳಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ನಿಕಟಪೂರ್ವ ಜಿಲ್ಲಾ ಗವರ್ನರ್ ರಾಜಾರಾಂ ಭಟ್, ಸಹಾಯಕ ಗವರ್ನರ್ ಪದ್ಮನಾಭ ಕಾಂಚನ್ ಆಗಮಿಸಿದ್ದರು. ಅಧ್ಯಾಪನ ವೃತ್ತಿಯು ಅತ್ಯಂತ ಹೆಮ್ಮೆಯ ಹಾಗೂ ಗೌರವದ ವೃತ್ತಿಯಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ರೋಟರಿ ಸಂಸ್ಥೆಯ ಸೇವೆ ಅಪಾರವಾದದ್ದು. ಪುಸ್ತಕ ವಿತರಣೆ, ಲ್ಯಾಪ್ ಟಾಪ್, ಡೆಸ್ಕ್ ಟಾಪ್ ಕಂಪ್ಯೂಟರ್ ವಿತರಣೆ, ಶಾಲಾ ಕಟ್ಟಡದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಅಗತ್ಯ ಪರಿಕರಗಳ ವಿತರಣೆ ಮತ್ತು ಅಧ್ಯಾಪಕರುಗಳಿಗೆ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಗಳಂತಹ ಕಾರ್ಯಕ್ರಮಗಳ ಅನುಷ್ಠಾನ ಮಾಡುತ್ತಿದೆ ಎಂದರು. ಕಲ್ಯಾಣಪುರ ರೋಟರಿ ಕ್ಲಬ್ ಅಧ್ಯಕ್ಷ ರಾದ ಶಂಭುಶಂಕರ್, ಶಂಕರ್ ಸುವರ್ಣ, ವೃತ್ತಿ ಸೇವಾ ನಿರ್ದೇಶಕರು, ಕಾರ್ಯದರ್ಶಿಗಳಾದ ಪ್ರಕಾಶ್, ನಿಕಟಪೂರ್ವ ಅಧ್ಯಕ್ಷ ಡೆಸ್ಮಂಡ್ ವಾಸ್ ರವರು ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.