Updated News From Kaup
ಚೌತಿದಾನಿ ಕಟಿ ಇಲ್ಲ್ ಬುಡಂದೆ ಸಾರ್ಪತ್ಯ ಆವೊಂದುಪ್ಪೊಡು
Posted On: 09 Sep 2021, 09:11 AM
ಜಾನಪದದ ಸರಳ - ಮುಗ್ಧ ಕಲ್ಪನೆಯಿಂದ ವೈದಿಕದ ವೈಭವೋಪೇತ ಚಿಂತನೆಯವರೆಗೆ . ಬೇಟೆ ಸಂಸ್ಕೃತಿಯಿಂದ ತೊಡಗಿ ಆಧುನಿಕ ಜೀವನ - ವಿಧಾನದ ಹರವಿನಲ್ಲಿ ಮಣ್ಣಿನ ಮಗ ಮಹಾಕಾಯ ಮಹಾಗಣಪತಿಯ ಸ್ವೀಕಾರ - ಪೂಜಾ ವಿಧಾನಗಳ ರೋಚಕ ಇತಿಹಾಸ ವಿದೆ. ಒಂದು ಸಂಸ್ಕೃತಿಯ ಸಂಕೇತವಾಗಿ, ಒಬ್ಬಗಣವಾಗಿ, ಬ್ರಹ್ಮಣಸ್ಪತಿಯಾಗಿ, ಗಣಾಧ್ಯಕ್ಷನಾಗಿ ಈ ವಿನಾಯಕ ಆಧ್ಯಾತ್ಮಿಕ ಪ್ರಪಂಚದಲ್ಲಿ ಏರಿದ ಎತ್ತರ ಊಹನಾತೀತ. ಆಸ್ತಿಕ-ನಾಸ್ತಿಕ ಭೇದವಿಲ್ಲದೆ ಬಹುಮಾನ್ಯನಾದ ದೇವರು ಗಣಪತಿ. ಜಾತಿ-ಮತ-ಪಂಥಗಳ ಕಟ್ಟುಪಾಡುಗಳನ್ನು ಮೀರಿ ವಿಶ್ವವ್ಯಾಪಿಯಾಗಿ ತನ್ನ ಆಕರ್ಷಕ ವರ್ಚಸ್ಸಿನ ಮೂಲಕ ವಿಶ್ವವಂದ್ಯನಾದ ದೇವರು ವಿಶ್ವಂಭರ ಮೂರ್ತಿಯಾಗಿ ಬೆಳೆದದ್ದು, ಜನಮಾನಸದಲ್ಲಿ ಸ್ಥಾಯೀ ಸ್ಥಾನವನ್ನು ಪಡೆದದ್ದು ಮಾತ್ರ ಸತ್ಯ. ಮಾನವ ಬಯಸಿದ್ದೆಲ್ಲ ನಿರಾಯಾಸವಾಗಿ ಪ್ರಾಪ್ತಿಯಾಗಬೇಕು. ಜೀವನ ಸುಂದರ ಹಾಗೂ ನಿರರ್ಗಳವಾಗಿರಬೇಕೆಂದು ನಿರೀಕ್ಷಿಸುವುದರಿಂದಲೇ ನಿರಂತರತೆಗೆ ಭಂಗವಾದಾಗ, ಅಡ್ಡಿ-ಆತಂಕಗಳು ಎದುರಾದಾಗ ಕಾರ್ಯಾರಂಭಗಳಿಗೆ ವಿಘ್ನ-ವಿಡ್ಡೂರಗಳು ಬಂದಾಗ ವಿಘ್ನದ ಕುರಿತು ಗಮನ ಹರಿದಿರಬೇಕು. ಈ ಪರಿಣಾಮವಾಗಿ ‘ವಿಘ್ನ ನಿವಾರಕ' ದೇವರೊಬ್ಬನು ಸಾಕಾರಗೊಂಡಿರಬೇಕು. ಭಾರತೀಯರಾದ ನಮಗೆ ಕೋಟ್ಯಂತರ ದೇವತೆ-ದೇವರುಗಳು ಆದರೂ ಗೊಂದಲವಿಲ್ಲದ ಆಧ್ಯಾತ್ಮಿಕ ಬದುಕು. ಇದು ಈ ಸಂಸ್ಕೃತಿಯ ವಿಚಾರಿಕ ವೈಶಾಲ್ಯ. ಈ ವಿಸ್ತೃತ ವ್ಯಾಪ್ತಿಯಲ್ಲಿ ಗಜಮುಖನಾದರೂ ಸುಮುಖನಾಗಿ ಆದಿಪೂಜಿತನು ಪ್ರಥಮ ಪೂಜೆಗೊಳ್ಳುತ್ತಾನೆ.ಅಮೂರ್ತವಾದುದರ ಮೂರ್ತ ಚಿಂತನೆ, ಅಲೌಕಿಕದ ಲೌಕಿಕ ದರ್ಶನ, ಪ್ರತಿಕೃತಿ ಆರಾಧನೆಗಳೆಲ್ಲ ವಿವಿಧ ಹಂತದಲ್ಲಿ ಅಭಿವೃದ್ಧಿ ಹೊಂದಿದಾಗಲೂ ನಮ್ಮ ಗಣಪ ಹಲವು ಸ್ಥಿತ್ಯಂತರ-ರೂಪಾಂತರಗಳಿಗೆ ಒಳಗಾದರೂ ಬೆಳೆದದ್ದು ಭವ್ಯವಾಗಿ. ಸಂಸ್ಕೃತಿಯ ಮೂಲದಲ್ಲೇ ಇದ್ದ ಅಥವಾ ಆವಿರ್ಭವಿಸಿದ ಒಂದು ಚಿಂತನೆ ಇದಾದುದರಿಂದ ಇದರ ಪರಿಣಾಮ ಇಷ್ಟು ತೀವ್ರವಾಗಿದೆ. ಗಾಢವಾಗಿ ಬೇರೂರಿದೆ. ಬೇಟೆಗಾರರ ಒಡೆಯ : ಗಣಪತಿಯ ಮೂರ್ತಿ ಶಿಲ್ಪದಲ್ಲೆ ಪ್ರಾಚೀನತೆಯನ್ನು ನಿಖರವಾಗಿ ಗುರುತಿಸುವ ವಿದ್ವಾಂಸರು ಈತನ ಅಸ್ತಿತ್ವಕ್ಕೆ ಬೇಟೆ ಸಂಸ್ಕೃತಿಯಷ್ಟು ಪುರಾತನ ಇತಿಹಾಸವನ್ನು ಅಥವಾ ಅದಕ್ಕಿಂತಲೂ ಪೂರ್ವದ ಜನಜೀವನದ ಕಾಲದವರೆಗೆ ಒಯ್ಯುತ್ತಾರೆ. ಮಾನವ ವಿಕಾಸದ ಒಂದು ಹಂತ ಅಥವಾ ಆರಂಭವನ್ನು ಬೇಟೆ ಸಂಸ್ಕೃತಿಯಿಂದ ಆರಂಭಿಸಿದರೆ ಬೇಟೆಗಾರರ ಒಡೆಯನೆಂದು ಗುರುತಿಸಬಹುದು. ಕಲ್ಲಿನ ವಿವಿಧ ಆಕೃತಿಗಳನ್ನು ಆಯುಧದ ತೀಕ್ಷ್ಣತೆಗೆ ಬೇಕಾಗಿ ಬಳಸಿಕೊಳ್ಳಲಾರಂಭಿಸಿದ ಮನುಷ್ಯನಿಗೆ ಪ್ರಕೃತಿಯಲ್ಲಿ ಕಂಡದ್ದು ‘ಬೆಣಚುಕಲ್ಲು' . ಬೇಟೆಯೇ ಪ್ರಧಾನ ಜೀವನಾಧಾರ, ಬೇಟೆಗೆ ಬೆಣಚುಕಲ್ಲೇ ಪ್ರಧಾನ ಆಯುಧ.ಇಲ್ಲಿಂದಲೇ ಬೆಣಚುಕಲ್ಲಿನಿಂದ ಬೆನಕನೆಂದು ಪೂಜಿಸುವ ವಿಧಾನ ರೂಢಿಗೆ ಬಂದಿರಬಹುದು. ಇಂದಿಗೂ ಈ ಶೈಲಿಯ ಪೂಜೆ ರೂಢಿಯಲ್ಲಿದೆ. ವೈಭವದ ಮೂರ್ತಿಗಳ ಭವ್ಯತೆಯ ನೇಪಥ್ಯದಲ್ಲಿ ಈ ಬೆನಕನಿದ್ದಾನೆ.ಬೇಟೆಯಿಂದ ಮುಂದುವರಿದ ಮಾನವ ವಿಕಾಸ ದೃಢವಾಗಿ ಬೇರೂರಿದ್ದು ನದಿ ದಡಗಳಲ್ಲಿ ಕೃಷಿಯನ್ನು ಸಂಶೋಧಿಸಿ, ಜೀವನಾಧಾರವೆಂದು ನಂಬಿ.ಪರಿಶ್ರಮವಿಲ್ಲದ ಕೃಷಿ ಇಲ್ಲ. ತಾಯಿ ಪಾರ್ವತಿ ಕೃಷಿ ಕ್ಷೇತ್ರವಾಗಿ, ಮಗ ಗಣಪ ಕೃಷಿ ಸಮೃದ್ಧಿಯಾಗಿ ಪರಿಗ್ರಹಿಸಲ್ಪಡುತ್ತಾರೆ. ಪಾರ್ವತಿಯ ಮೈಯ ಮಣ್ಣಿನಿಂದ ರೂಪುಗೊಳ್ಳುವವನು ಗಣಪನೆಂಬ ಚಿಂತನೆಗೆ ಇಲ್ಲಿ ಆಧಾರ ಸಿಗುತ್ತದೆ. ಬೆವರು,ಮೈಯಮಣ್ಣು ಇವೆಲ್ಲ ಶ್ರಮದ ಬದುಕಿನ ಸಂಕೇತಗಳಾಗುತ್ತವೆ. ಇದು ಮಣ್ಣಿನ ಮಗನ ಮೂಲ. ಕಪಿಲವರ್ಣ - ಕಾವಿ - ಮಣ್ಣಿನ ಬಣ್ಣ. ಧೂಮ್ರ ವರ್ಣ - ಕಪ್ಪು ಕೆಂಪು ವರ್ಣಗಳ ಸಂಯುಕ್ತ ಇದೂ ಮಣ್ಣಿನ ಬಣ್ಣವೇ. ಇದು ವಿಘ್ನೇಶನಮೈ ಬಣ್ಣ. ಪಶುಪಾಲನೆ : ಭೂ ಫಲವತ್ತತೆಗಾಗಿ ಸೆಗಣಿ (ಕೃಷಿ ಸಂಸ್ಕೃತಿಗೆ ಪೂರಕವಾಗಿ ಬೆಳೆದ ಪಶುಪಾಲನೆಯ ಫಲವಾಗಿ ಪಡೆದದ್ದು). ಈ ಸೆಗಣಿಗೆ ಹಸಿರು ಗರಿಕೆಯನ್ನು ಇಟ್ಟು ಪೂಜಿಸುವ ಕ್ರಮವೊಂದು ರೂಢಿಯಲ್ಲಿದೆ ಎಂಬುದನ್ನು ನೆನಪಿಸಿಕೊಳ್ಳೋಣ. ಶಿವ-ಪಾರ್ವತಿಯರು ಸೂರ್ಯ-ಪೃಥ್ವಿಯ ಸ್ವರೂಪ. ಮಳೆಗಾಲದಲ್ಲಿ ಸೂರ್ಯನು ಮೋಡಗಳ ಹಿಂದೆ ಮರೆಯಾಗುತ್ತಾನೆ. ಭೂ ದೇವಿಗೆ (ಪೃಥ್ವಿಗೆ) ಮಳೆ ನೀರಿನ ಸ್ನಾನವಾಗುತ್ತದೆ. ಆಗ ಬೆಳೆದು ನಿಲ್ಲುವ ಬೆಳೆಯೇ ಮಣ್ಣಿನ ಮಗ ಗಣಪ. ತಿಂಗಳು ಉರುಳಿದಂತೆ ಮಳೆ-ಮೋಡ ಕಡಿಮೆಯಾಗುತ್ತಾ ಸೂರ್ಯ ಪ್ರಜ್ವಲಿಸಲಾರಂಭಿಸುತ್ತಾನೆ. ಪೃಥ್ವಿಯನ್ನು ಅಥವಾ ಭೂಮಿಯನ್ನು ಸ್ಪರ್ಶಿಸಲು ಬೆಳೆದ ಬೆಳೆ ಅಡ್ಡ ಬರುತ್ತದೆ. ಆಗ ಬೆಳೆಯ ತಲೆಯನ್ನು ಕತ್ತರಿಸಲಾಗುತ್ತದೆ. ಭೂಮಿ ಶೋಕತಪ್ತ ತಾಯಿಯಂತೆ ಕಾಣುತ್ತಾಳೆ. ಕೊಯ್ದ ಬೆಳೆ ಆನೆಯಂತೆ ರಾಶಿ ಬಿದ್ದಿರುತ್ತದೆ. ಪಾರ್ವತಿಯ ಮೈಯ ಮಣ್ಣಿನಿಂದ ಹುಟ್ಟಿದ ಗಣಪನೆಂದರೆ ಈ ಬೆಳೆ. ಪ್ರಾಚೀನಕಥೆಗೆ ಪೂರಕವಾದ ಈ ಕಥೆಯೂ ಜಾನಪದ ಕಥಾನಕವಾಗಿದೆ ಎನ್ನುತ್ತಾರೆ ಸಂಶೋಧಕರು. ಈ ಕಥೆ ಪ್ರಚಲಿತವಿರುವ ಕಥೆಯಂತೆಯೇ. ಆದರೆ ಕೃಷಿ ಸಂಸ್ಕೃತಿಯ ಕಾಲವನ್ನು ಪ್ರತಿಪಾದಿಸುತ್ತದೆ. ಗಣಪನ ಕಲ್ಪನೆಯ ಮೂಲವನ್ನು ದೃಢೀಕರಿಸುವುದಿಲ್ಲವೆ? |ಸಾರ್ಪತ್ಯ ಆವೊಂದುಪ್ಪೊಡು| • ಜನಪದದ ಹೆಣ್ಣು ಮೈಸಗೆಯನ್ನು ಶಿವ ಪ್ರೀತಿಸುವುದು. ತಾವರೆ ಹೂವಾಗುವುದು, ಗುಟ್ಟಿನಲ್ಲಿ ಜೊತೆಯಾಗುವುದು ಹೀಗೆ ಮುಂದುವರಿಯುವ ಕಥೆಯಲ್ಲಿ ಬಾಮಕುಮಾರನ ಜನನ. ಈತ ಗಜಮುಖನಾಗುವುದು. ಪಾರ್ವತಿ ಮಗುವನ್ನು ಸಾಕುವುದು. ಒಂದು ರೀತಿಯ ಸುಗಮವಾದ ರೀತಿಯಲ್ಲಿ ಮೈಸಗೆಯನ್ನು ಪಾರ್ವತಿ ಸ್ವೀಕರಿಸುವುದು. ಪ್ರತಿ ಮನೆಯಲ್ಲೂ ಗಣಪತಿ ಪೂಜೆ ನಡೆಯಬೇಕು. ಅಲ್ಲೆಲ್ಲ ಗಣಪತಿ ‘ಸಾರ್ಪತ್ಯ ಆವೊಂದುಪ್ಪೊಡು' ಎಂಬುದು. ಶಿವನ ವರ, ಇದು ಬಾಮಕುಮಾರ ಸಂಧಿಯಲ್ಲಿ ಬರುತ್ತದೆ. • ಮನೆಯಲ್ಲಿ ಪೂಜೆ, ದೈವಗಳಿಗೆ, ನಾಗನಿಗೆ ವಿಶೇಷ ಚೌತಿ ಪೂಜೆ ನಡೆಯುತ್ತದೆ. ಗರೋಡಿ, ಸ್ಥಾನಗಳಲ್ಲೂ ಚೌತಿ ಪೂಜೆ ನಡೆಯುತ್ತವೆ. • ಪ್ರಾಚೀನವಾದರೂ ಬಲಗುಂದದ ಆರಾಧನಾ ಕ್ರಮವಾಗಿ ಗಣಪತಿ ಆರಾಧನೆಯನ್ನು ಸ್ವೀಕರಿಸಬಹುದು. •ಕಣಜ, ಕಣಜಕ್ಕೆ ಸುತ್ತುವ ಹಗ್ಗ (ಪೆರ್ಮರಿ) ಇವು ಗಣಪನ ಹೊಟ್ಟೆ ಮತ್ತು ಸರ್ಪವನ್ನು ಸಾಂಕೇತಿಸುತ್ತವೆ. ಭತ್ತಕ್ಕೆ ಇಲಿಕಾಟ ಸಹಜ. ರಕ್ಷಣೆಗೆ ಸರ್ಪ(ಹಗ್ಗ). ಗಣಪನ ಹೊಟ್ಟೆ ಕೃಷಿ ಸಮೃದ್ಧಿಯ ದಾಸ್ತಾನು. ಹೇಗಿದೆ ಜನಪದರ ಕಲ್ಪನೆ? (ಸಂಗ್ರಹ) ಬರಹ : ಕೆ.ಎಲ್.ಕುಂಡಂತಾಯ
ಮಣಿಪುರ : ಮೋಕ್ಷಗಿರಿ ಧಾರ್ಮಿಕ ಕ್ಷೇತ್ರದಲ್ಲಿ ಸ್ಮಶಾನ ಮತ್ತು ಡಂಪಿಂಗ್ ಯಾರ್ಡ್ ನಿರ್ಮಾಣಕ್ಕೆ ವಿಎಚ್ ಪಿ ಮತ್ತು ಬಜರಂಗದಳ ವಿರೋಧ
Posted On: 08 Sep 2021, 10:59 PM
ಕಟಪಾಡಿ : ಮಣಿಪುರ ಪಂಚಾಯತ್ ಸಾರ್ವಜನಿಕರ ವಿರೋಧ ಇದ್ದರೂ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಕುಂತಳನಗರದ ಮೋಕ್ಷಗಿರಿಯಲ್ಲಿ ಸ್ಮಶಾನ ಮತ್ತು ಎಸ್ ಎಲ್ ಆರ್ ಎಮ್ ಘಟಕ ಮಾಡಲು ಹೊರಟಿದ್ದು ಅಲ್ಲಿದ್ದ ಧಾರ್ಮಿಕ ಕಾರ್ಯಕ್ರಮಗಳ ಕುರುಹು ಆಗಿದ್ದ ಸಭಾ ವೇದಿಕೆ ಧ್ವಂಸಗೊಳಿಸಿದ್ದು ಖಂಡನೀಯವೆಂದು ವಿಶ್ವಹಿಂದುಪರಿಷತ್ ಬಜರಂಗಳ ಅಭಿಪ್ರಾಯ ವ್ಯಕ್ತಪಡಿಸಿದೆ. ಇಂದು ಸ್ಥಳಕ್ಕೆ ಭೇಟಿ ನೀಡಿದ ಬಜರಂಗದಳ ರಾಜ್ಯ ಸಂಚಾಲಕರಾದ ಸುನಿಲ್ ಕೆ ಆರ್, ಜಿಲ್ಲಾ ಸಂಚಾಲಕರಾದ ದಿನೇಶ್ ಮೆಂಡನ್, ಜಿಲ್ಲಾ ವಿಶ್ವಹಿಂದು ಪರಿಷತ್ ಅಧ್ಯಕ್ಷರಾದ ವಿಷ್ಣುಮೂರ್ತಿ ಆಚಾರ್ಯ, ಸುಧೀರ್ ನಿಟ್ಟೆ ಪಂಚಾಯತ್ ಅಧ್ಯಕ್ಷರು ಕೂಡಲೇ ತಪ್ಪನ್ನು ತಿದ್ದಿಕೊಂಡು ಹಿಂದುಗಳ ಭಾವನೆಗೆ ಧಕ್ಕೆ ಬರದಂತೆ ಕಾರ್ಯನಿರ್ವಹಿಸಿ ಈ ಯೋಜನೆ ರದ್ದುಪಡಿಸಿ ಹಾಳು ಮಾಡಿದ ವೇದಿಕೆ ಸರಿಪಡಿಸಿ ನೀಡಬೇಕು ಎಂದರು. ಪ್ರಮುಖರಾದ ಶ್ರೀಕಾಂತ ನಾಯಕ್ ಅಲೆವೂರು, ಸಂತೋಷ್ ಮೂಡುಬೆಳ್ಳೆ, ಸತೀಶ್ ಶೆಟ್ಟಿ, ಪ್ರಭಾಕರ ದೇವಾಡಿಗ, ವಿಠ್ಠಲ ಪೂಜಾರಿ, ಕಾರ್ತಿಕ್ ಶೆಟ್ಟಿ, ಮಣಿಪುರ ಪಂಚಾಯತ್ ಸದಸ್ಯರಾದ ಪ್ರಜ್ವಲ್ ಹೆಗ್ಡೆ, ಸಂತೋಷ್ ಶೆಟ್ಟಿ, ಜೀವನ್, ನಾಗೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಪುಲಿಂದ ಮಹರ್ಷಿಗಳ ತಪೋಭೂಮಿಯನ್ನು ಹಿಂದೂ ಸಮಾಜ ಉಳಿಸಿಕೊಳ್ಳುವ ನಿರ್ಧಾರ ಕೈಗೊಳ್ಳಲಾಯಿತು. ಇಲ್ಲಿರುವ ಗುಹೆಗಳು, ಹಿಂದೆ ಅಷ್ಟಮಠದ ಸ್ವಾಮೀಜಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದರು. ಕಾಮಗಾರಿ ನಿಲ್ಲಿಸಿ ಧ್ವಂಸಗೊಳಿಸಿದ ಸಭಾವೇದಿಕೆ ನಿರ್ಮಿಸಿ ಕೊಡದಿದ್ದರೆ ಹೋರಾಟ ನಡೆಸವ ಬಗ್ಗೆ ಚರ್ಚಿಸಲಾಯಿತು.
ಕುಂದಾಪುರ : ಸಾಮಾಜಿಕ ಜಾಲತಾಣದಲ್ಲಿ ನಾರಾಯಣಗುರುಗಳ ಬಗ್ಗೆ ಅವಹೇಳನಗೈದ ವ್ಯಕ್ತಿಯ ವಿರುದ್ಧ ದೂರು ದಾಖಲು
Posted On: 07 Sep 2021, 10:27 PM
ಉಡುಪಿ : ಸಾಮಾಜಿಕ ಜಾಲತಾಣದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ಬಗ್ಗೆ ವ್ಯಕ್ತಿಯೋರ್ವರ ಮೇಲೆ ಕಿರಣ್ ಪೂಜಾರಿ ಎಂಬುವವರು ಕುಂದಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಕುಂಭಾಶಿ ಮೂಲದ ಪತ್ರಿಕೆಯ ಸಂಪಾದಕರೋರ್ವರು ಸರ್ವರೂ ಸಮಾನರು ಎಂದು ಜಗತ್ತಿಗೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ಬಗ್ಗೆ ಅವಹೇಳನಕಾರಿಯಾಗಿ ಬರೆದಿದ್ದರು. ಇದರ ಬಗ್ಗೆ ಸಾರ್ವಜನಿಕವಾಗಿ ಆಕ್ರೋಶವು ವ್ಯಕ್ತವಾಗಿತ್ತು. ಆದರೆ ಇದೀಗ ಅಂತಹ ಪೋಸ್ಟ್ ಹಾಕಿದ ವ್ಯಕ್ತಿಯ ಮೇಲೆ ಕಾನೂನು ಕ್ರಮಕ್ಕಾಗಿ ದೂರುದಾಖಲಾಗಿದೆ ಮತ್ತು ಆ ವ್ಯಕ್ತಿ ನಾರಾಯಣಗುರುಗಳ ಪ್ರತಿಮೆಯ ಮುಂದೆ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.
ಸಾನ್ವಿ ಭಟ್ ಗಾಯನದ ಮಾದುಕೋಡಿದ ಉಳ್ಳಾಯ ಭಕ್ತಿ ಹಾಡು ಬಿಡುಗಡೆ
Posted On: 07 Sep 2021, 04:53 PM
ಮಂಗಳೂರು : ಸಾನ್ವಿ ಕ್ರಿಯೆಷನ್ ಅರ್ಪಿಸುವ "ಮಾದುಕೊಡಿದ ಉಳ್ಳಾಯೇ" ತುಳು ಭಕ್ತಿ ಹಾಡು ಮಾದುಕೋಡಿ ಕೊರಗಜ್ಜ ಸಾನಿಧ್ಯದಲ್ಲಿ ಶ್ರೀ ವಿಜಯ ಸುವರ್ಣ ಗುರುಗಳ ದಿವ್ಯ ಹಸ್ತದಲ್ಲಿ ಬಿಡುಗಡೆಗೊಂಡಿತು. ಈ ಸಂದರ್ಭದಲ್ಲಿ ತುಳುನಾಡಿನ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವ ಪುಟ್ಟ ಬಾಲ ಗಾಯಕಿ ಮಾದುಕೋಡಿ ಕ್ಷೇತ್ರದ ಹಾಡನ್ನು ಹಾಡಿ ಅಭಿನಯಿಸಿರುವ ಸಾನ್ವಿ ಭಟ್ ಚಿತ್ರಾಪುರ ಇವರನ್ನು ಸನ್ಮಾನಿಸಲಾಯಿತು. ಜೊತೆಗೆ ಇಡೀ ತಂಡವನ್ನು ಕ್ಷೇತ್ರದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗಾಯಕಿ ಸಾನ್ವಿ ಭಟ್ ಚಿತ್ರಾಪುರ, ಕ್ಷೇತ್ರದ ಗುರುಗಳಾದ ವಿಜಯ ಸುವರ್ಣ, ನೋವೆಲ್ ಡಿಸೋಜಾ, ಪ್ರದೀಪ್ ಕುಕ್ಕಿಪಾಡಿ, ಕಲಾಂಜಲಿ ಕ್ರಿಯೆಷನ್ ರಾಜೇಶ್ ಭಂಡಾರಿ, ಸಾಹಿತಿ ಜಿ. ಎಸ್ ಗುರುಪುರ, ರಾಜೇಶ್ ಭಟ್ ಚಿತ್ರಾಪುರ, ತ್ರಿಷಾಲ್ ಶೆಟ್ಟಿ, ಜಿತೇಶ್ ಸಿದ್ದಕಟ್ಟೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಈ ಹಾಡು ಈಗಾಗಲೇ ಸಾನ್ವಿ ಕ್ರಿಯೆಷನ್ ಯು ಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಗೊಂಡಿರುತ್ತದೆ.
ತಾಯಿ, ಅಜ್ಜಿ, ಮುತ್ತಜ್ಜಿಯ ನೆನಪಿಗಾಗಿ ಮೂರ್ತಿಯನ್ನು ಕೆತ್ತಿಸಿ, ಗುಡಿಯೊಳಗೆ ಪ್ರತಿಷ್ಠಾಪಿಸಿ ಮಾತೃ ಪ್ರೇಮ ಮೆರೆದ ಮಕ್ಕಳು
Posted On: 07 Sep 2021, 10:10 AM
ಕಾಪು : ಕರಾವಳಿಯಲ್ಲಿ ಹುಟ್ಟಿ, ಬೆಳೆದು ಮುಂಬಯಿಯಲ್ಲಿ ಸಾಧನೆಗೈದ ತಮ್ಮ ತಾಯಿಯ ಜೊತೆಗೆ, ಕುಟುಂಬದ ಹಿರಿಯರ ನೆನಪಿನಲ್ಲಿ ಮಂದಿರವೊಂದನ್ನು ನಿರ್ಮಿಸಿ, ಅದರಲ್ಲಿ ತಾಯಿಯ ಜೊತೆಗೆ, ಅಜ್ಜಿ ಮತ್ತು ಮುತ್ತಜ್ಜಿಯ ಶಿಲಾ ಮೂರ್ತಿಯನ್ನೂ ಪ್ರತಿಷ್ಠಾಪಿಸುವ ಮೂಲಕ ಮುಂಬಯಿಯಲ್ಲೇ ಹುಟ್ಟಿ ಬೆಳೆದ ಮಕ್ಕಳು ಕರಾವಳಿಯಲ್ಲೇ ಅಪರೂಪವೆಂಬತಂಹ ಸೇವಾ ಕಾರ್ಯವನ್ನು ನಡೆಸಿ, ಮಾದರಿಯಾಗಿದ್ದಾರೆ. ಕಾಪು ಗರಡಿಮನೆ ಕುಟುಂಬದ ಅಗಲಿದ ಮೂರು ತಲೆಮಾರಿನ ಹಿರಿಯ ಸದಸ್ಯರಿಗೆ ಗೌರವ ಸಲ್ಲಿಸಲಾಗಿದೆ. ತಾಯಿಯೇ ಸರ್ವಸ್ವ, ಹಿರಿಯರ ಆಶೀರ್ವಾದವೇ ತಮ್ಮ ಜೀವನಕ್ಕೆ ಆಧಾರ ಎಂದು ತಿಳಿದಿರುವ ಮಕ್ಕಳು ಕಾಪು ಗರಡಿ ರಸ್ತೆಯ ಬದಿಯಲ್ಲಿರುವ ನವದುರ್ಗಾ ಲಕ್ಷ್ಮೀ ನಿವಾಸ್ ಮನೆಯ ಆವರಣದಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಪೊಯ್ಯ ಪೊಡಿಕಲ್ಲ ಗರೊಡಿಯ ಗರಡಿ ಮನೆಯ ಸದಸ್ಯರಾದ ಗೀತಾ ಯಾದವ್ ಪೂಜಾರಿ (೫೩), ಅವರ ತಾಯಿ ಕಲ್ಯಾಣಿ ಬಾಯಿ ಪೂಜಾರಿ (೫೨), ಮುತ್ತಜ್ಜಿ ಮುತ್ತಕ್ಕ ಬೈದಿ ಪೂಜಾರ್ತಿ (೮೦) ಅವರ ಮೂರ್ತಿಯನ್ನು ಕೆತ್ತಿಸಿ, ಗುಡಿಯೊಳಗೆ ಪ್ರತಿಷ್ಠಾಪನೆ ಮಾಡಿಸಿದ್ದಾರೆ. ಅಪ್ರತಿಮ ಸಮಾಜ ಸೇವಕಿ : ಮುಂಬೈ ಮಹಾನಗರದಲ್ಲಿ ಕಾಂಗ್ರೆಸ್ ಪಕ್ಷದ ಕಟ್ಟಾಳುವಾಗಿದ್ದ ಗೀತಾ ಯಾದವ್ ಪೂಜಾರಿ ಅವರು, ಮುಂಬಯಿ ಮಹಾನಗರ ಪಾಲಿಕೆಯ ಕಾರ್ಪೋರೇಟರ್ ಆಗಿ, ರಾಜಕೀಯದ ಜೊತೆಗೆ ವಿವಿಧ ಧಾರ್ಮಿಕ, ಶೈಕ್ಷಣಿಕ ಮತ್ತು ಸಮಾಜ ಸೇವಾ ಕಾರ್ಯಗಳಲ್ಲೂ ಮುಂಚೂಣಿಯಲ್ಲಿ ನಿಂತು ವಿವಿಧ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಮುಂಬೈ ಜೋಸೆಫ್ ಪಠೇಲ್ ಎಸ್ಟೇಟ್ ನವರಾತ್ರಿ ದುರ್ಗಾ ಪೂಜಾ ಮಂಡಲ್ನ ಸಂಸ್ಥಾಪಕರಾಗಿದ್ದ ಅವರು, ಮುಂಬೈ ತುಳುನಾಡ ಕನ್ನಡಿಗರ ಜೊತೆಗೂ ಉತ್ತಮ ಭಾಂದವ್ಯವನ್ನು ಹೊಂದಿದ್ದು ಕಾಪು ಪರಿಸರದಲ್ಲಿಯೂ ಸಮಾಜ ಸೇವಾ ಕಾರ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಕೊರೊನಾ ಸಂದರ್ಭದಲ್ಲಿ ಜನತೆಯ ಪರವಾಗಿ ಅಪಾರ ಸೇವೆ ಸಲ್ಲಿಸಿದ್ದು, ಜನರಿಗೆ ಉಚಿತ ಆಂಬುಲೆನ್ಸ್, ಊಟ, ಮಾಸ್ಕ್, ಸ್ಯಾನಿಟೈಸರ್ ಸಹಿತವಾದ ವಿವಿಧ ಸೊತ್ತುಗಳನ್ನು ವಿತರಿಸಿದ್ದ ಅವರು ಕಳೆದ ವರ್ಷ ಸೆ. ೩ರಂದು ಹೃದಯಾಘಾತದಿಂದಾಗಿ ನಿಧನ ಹೊಂದಿದ್ದರು. 27 ಲಕ್ಷ ರೂ. ವೆಚ್ಚ : ಗೀತಾ ಯಾದವ್, ಕಲ್ಯಾಣಿ ಪೂಜಾರ್ತಿ ಮತ್ತು ಮುತ್ತಕ್ಕ ಬೈದಿ ಪೂಜಾರ್ತಿ ಅವರ ನೆನಪಿನಲ್ಲಿ ನಿರ್ಮಿಸಲಾದ ಮಂದಿರವನ್ನು ಗೀತಾ ಯಾದವ್ ಅವರ ವರ್ಷಾಂತಿಕದ ದಿನವಾದ ಸೆ. ೩ರಂದು ಉದ್ಘಾಟಿಸಲಾಗಿದೆ. ಮಂದಿರ ನಿರ್ಮಾಣಕ್ಕೆ ಪಿಂಕ್ ಸ್ಟೋನ್ ವಿಯೆಟ್ನಾಂ ಮಾರ್ಬಲ್ನ್ನು ಬಳಸಲಾಗಿದ್ದು, ಪುತ್ಥಳಿ (ಮೂರ್ತಿ) ಕೆತ್ತನೆಗೆ ವೈಟ್ ಸ್ಟೋನ್ ವಿಯೆಟ್ನಾಂ ಮಾರ್ಬಲ್ನ್ನು ಬಳಸಲಾಗಿದೆ. ಗುಡಿ ನಿರ್ಮಾಣ, ಪುತ್ಥಳಿ ರಚನೆ, ಮಂದಿರದ ಅಽಷ್ಟಾನದೊಳಗೆ ಮೂರ್ತಿ ಪ್ರತಿಷ್ಟಾಪನೆ ಸಹಿತವಾದ ಜೋಡಣಾ ಕಾರ್ಯಗಳಿಗೆ ೨೭ ಲಕ್ಷ ರೂ. ಖರ್ಚಾಗಿದೆ. ರಾಜಸ್ಥಾನದ ಜೈಪುರದ ಕಾರ್ಮಿಕರ ತಂಡವು ಗುಡಿ ನಿರ್ಮಾಣ ಮತ್ತು ಮೂರ್ತಿ ಕೆತ್ತನಾ ಕಾರ್ಯಗಳ ಕಾಮಗಾರಿಗಳ ಉಸ್ತುವಾರಿ ವಹಿಸಿದ್ದು, ಕಾಮಗಾರಿ ಪೂರ್ಣಗೊಳಿಸಲು ೩ ತಿಂಗಳು ೨೨ ದಿನಗಳ ಕಾಲ ಹಿಡಿದಿದೆ. ಮಾಜಿ ಕಾರ್ಪೋರೇಟರ್ ಗೀತಾ ಯಾದವ್ ಪೂಜಾರಿ ಅವರ ನೆನಪಿನಲ್ಲಿ ಪತಿ ವಸಂತ್ ಯಾದವ್, ಮಕ್ಕಳಾದ ಮನೋಜ್ ವಿ. ಯಾದವ್, ಸಂತೋಷ್ ವಿ. ಯಾದವ್, ವಿನಯ್ ವಿ. ಯಾದವ್ ಮತ್ತು ನವದುರ್ಗಾ ಲಕ್ಷೀ ಅವರು ತಾಯಿ, ಅಜ್ಜಿ ಮತ್ತು ಮುತ್ತಜ್ಜಿಯ ಪುತ್ಥಳಿಯನ್ನು ನಿರ್ಮಿಸಿ, ಮಂದಿರದೊಳಗೆ ಪ್ರತಿಷ್ಠಾಪಿಸಿ, ಕುಟುಂಬದ ಮೂರು ತಲೆಮಾರಿನ ಹಿರಿಯರ ನೆನಪನ್ನು ಶಾಶ್ವತವಾಗಿಸುವ ಪ್ರಯತ್ನ ಮಾಡಿದ್ದಾರೆ.
ಸರಕಾರಿ ಪ್ರೌಢ ಶಾಲೆ ಫಿಶರೀಸ್ ಮಲ್ಪೆಯ ನಿವೃತ್ತ ಶಿಕ್ಷಕರಿಗೆ ಗುರುವಂದನೆ
Posted On: 05 Sep 2021, 08:15 PM
ಉಡುಪಿ : ಶ್ರೀ ವಿಘ್ನೇಶ್ವರ ಪ್ರಿಂಟರ್ಸ್ ಮಲ್ಪೆ ಹಾಗೂ 1986-87 ನೇ ವರ್ಷದ ಹತ್ತನೇ ತರಗತಿಯ ಹಳೆ ವಿದ್ಯಾರ್ಥಿ ಗಳಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ತಮಗೆ ವಿದ್ಯೆ ನೀಡಿದ ಗುರುಗಳಿಗೆ ಗೌರವ ಅರ್ಪಣೆಯು ಶ್ರೀಮತಿ ಶಾಂತಿ ಟಿ. ಹೆಗಡೆ ನಿವೃತ್ತ ವೃತ್ತಿ ಶಿಕ್ಷಕರು ಮತ್ತು ಶ್ರೀಮತಿ ಧೋರತಿ ಕೋಟ್ಯಾನ್ ನಿವೃತ್ತ ದೈಹಿಕ ಶಿಕ್ಷಕರು ಸರಕಾರಿ ಪ್ರೌಢ ಶಾಲೆ ಫಿಶರೀಸ್ ಮಲ್ಪೆ ಇವರಿಗೆ ಅವರ ಸ್ವಗೃಹದಲ್ಲಿ ಗುರುವಂದನೆಯನ್ನು ಅರ್ಪಿಸಲಾಯಿತು. ಈ ಕಾರ್ಯಕ್ರಮವು ಸತತ 13 ವರ್ಷ ಗಳಿಂದ ನಡೆದು ಬರುತ್ತಾ ಇರುವುದು ವಿಶೇಷವಾಗಿದೆ. ಈ ಅಭೂತಪೂರ್ವ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಹಾಗೂ ವಿಘ್ನೇಶ್ವರ ಪ್ರಿಂಟರ್ಸ್ ಮಾಲಕ ಎಮ್. ಮಹೇಶ್ ಕುಮಾರ್, ಹಳೆ ವಿದ್ಯಾರ್ಥಿಗಳು ಹಾಗೂ ಉದ್ಯಮಿಗಳಾದ ಚಿತ್ರ ಕುಮಾರ್, ಲಕ್ಷ್ಮೀಶ ಬಂಗೇರ, ವಿನಯ ಪಡುಕರೆ, ಶಿವರಾಮ್ ಟಿ. ಸುವರ್ಣ, ರೋಹಿಣಿ, ಇಂದಿರಾ, ವಾಣಿ, ಮೀನಾ ನಾಯರ್, ಸರೋಜಿನಿ ಉಪಸ್ಥಿತರಿದ್ದರು.
ಕೊರಗಜ್ಜ ದೈವವನ್ನು ಅವಹೇಳನಗೈಯುತ್ತಿರುವ ವಾಟ್ಸಾಪ್ ಗ್ರೂಪ್ - ಸಾರ್ವಜನಿಕರ ಆಕ್ರೋಶ
Posted On: 05 Sep 2021, 05:00 PM
ಕಾಪು : ಸಾಮಾಜಿಕ ಜಾಲತಾಣಗಳ ಮೂಲಕ ದೈವ, ದೇವರ ನಿಂದನೆಯಾಗುತ್ತಿರುವುದು ತದನಂತರ ಒಂದಷ್ಟು ವಿರೋಧದ ಬಳಿಕ ಕ್ಷಮೆಯಾಚನೆಯ ಘಟನೆಗಳು ನಮ್ಮ ಸುತ್ತ ನಡೆಯುತ್ತಿರುವುದು ನಮ್ಮೆಲ್ಲರಿಗೂ ಗೊತ್ತು. ಇದೀಗ ಅಂತಹುದೇ ಘಟನೆ ಮತ್ತೊಮ್ಮೆ ನಡೆದಿದೆ. ವಾಟ್ಸಾಪ್ ಮೂಲಕ ಕೊರಗಜ್ಜ ದೈವವನ್ನು ಅವಹೇಳನ ಮಾಡುವ ಗುಂಪೊಂದನ್ನು ರಚಿಸಿ ಅದರ ಮೂಲಕ ತುಲುವರ ಧಾರ್ಮಿಕ ಭಾವನೆಯನ್ನು ಕೆರಳಿಸುವ ಷಡ್ಯಂತರ ಈ ಗುಂಪಿನಲ್ಲಿ ನಡೆಯುತ್ತಿದೆ. ಈ ವಾಟ್ಸಾಪ್ ಗುಂಪಿನ ಸ್ಕ್ರೀನ್ ಶಾಟ್ಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಬಂಟ್ವಾಳ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಚಿತ್ರಕಲಾ ಶಿಕ್ಷಕ ಮುರಳಿಕೃಷ್ಣ ರಾವ್ ಆಯ್ಕೆ
Posted On: 04 Sep 2021, 11:34 PM
ಮಂಗಳೂರು : ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಇಲ್ಲಿ ನಡೆದ ಕ್ಷೇತ್ರ ಶಿಕ್ಷಣಾಧಿಕಾರಿ ನೇತೃತ್ವದಲ್ಲಿ, ಸಮನ್ವಯಾಧಿಕಾರಿಗಳು ಹಾಗೂ ವಿವಿಧ ಸಂಘಗಳ ಪದಾಧಿಕಾರಿಗಳು ಹಾಜರಿದ್ದ ಶಿಕ್ಷಕರ ದಿನಾಚರಣೆ ಸಮಿತಿಯ ಪೂರ್ವಭಾವಿ ಸಭೆಯಲ್ಲಿ ಬಂಟ್ವಾಳ ತಾಲೂಕಿನ ಪ್ರೌಢಶಾಲಾ ವಿಭಾಗದಲ್ಲಿ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಮುರಳಿಕೃಷ್ಣ ರಾವ್ ಇವರಿಗೆ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡಲು ತೀರ್ಮಾನಿಸಲಾಯಿತು. ಸರಳ ಸಜ್ಜನಿಕೆಯ ಚಿತ್ರಕಲಾ ಶಿಕ್ಷಕರಾಗಿ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುದಕ್ಕೆ ಶಿಷ್ಯವೃಂದ ಹಾಗೂ ಹಿತೈಷಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಬೈಕ್, ಟಿವಿ, ಫ್ರಿಡ್ಜ್ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದುಪಡಿಸುವುದಿಲ್ಲ: ಆಹಾರ ಇಲಾಖೆ ಸ್ಪಷ್ಟನೆ
Posted On: 04 Sep 2021, 11:25 PM
ಬೆಂಗಳೂರು : ರಾಜ್ಯದಲ್ಲಿ ಬೈಕ್, ಟಿವಿ, ಫ್ರಿಡ್ಜ್ ಹೊಂದಿದವರ ಬಿಪಿಎಲ್ ಕಾರ್ಡ್ ರದ್ದುಪಡಿಸಲಾಗುವುದು ಎಂಬ ವದಂತಿಗಳ ಬಗ್ಗೆ ಆಹಾರ ಇಲಾಖೆಯಿಂದ ಸ್ಪಷ್ಟನೆ ನೀಡಲಾಗಿದ್ದು, ಬೈಕ್, ಟಿವಿ, ಫ್ರಿಡ್ಜ್ ಇದ್ದವರ ಬಿಪಿಎಲ್ ಕಾರ್ಡ್ ರದ್ದು ಪಡಿಸುವುದಿಲ್ಲ ಎಂದು ಹೇಳಲಾಗಿದೆ. ಕೆಲವು ಮಾಧ್ಯಮಗಳಲ್ಲಿ ಟಿವಿ, ಫ್ರಿಜ್, ಬೈಕ್ ಇರುವ ಬಿಪಿಎಲ್ ಕುಟುಂಬದವರ ಕಾರ್ಡ್ ಗಳನ್ನು ರದ್ದುಪಡಿಸಲಾಗುವುದು ಎಂದು ಹೇಳಲಾಗಿತ್ತು. ಈ ಬಗ್ಗೆ ಸ್ಪಷ್ಟೀಕರಣ ನೀಡಿ, ಆಹಾರ ಇಲಾಖೆ, ಬೈಕ್, ಟಿವಿ, ಫ್ರಿಜ್ ಹೊಂದಿದ ಕುಟುಂಬಗಳು ಆದ್ಯತಾ ಪಡಿತರ ಚೀಟಿಯನ್ನು ಪಡೆದುಕೊಳ್ಳಲು ಸರ್ಕಾರದಿಂದ ನಿಗದಿ ಮಾಡಲಾದ ಮಾನದಂಡಗಳಲ್ಲಿ ಅವಕಾಶವಿದೆ ಎಂದು ತಿಳಿಸಿದೆ. ಬೈಕ್, ಟಿವಿ ಫ್ರಿಡ್ಜ್ ಇರುವ ಕಾರಣಕ್ಕೆ ರಾಜ್ಯದಲ್ಲಿ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿಗಳನ್ನು ರದ್ದು ಪಡಿಸಲಾಗಿದೆ ಎನ್ನುವ ಮಾಹಿತಿ ಆಧಾರ ರಹಿತವಾಗಿದೆ. ಅಂತಹ ಯಾವುದೇ ಆದೇಶವನ್ನು ಸರ್ಕಾರ ನೀಡಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಸರ್ಕಾರ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಪಡೆದುಕೊಂಡಿದ್ದರೆ ಅಂತಹ ಅನರ್ಹ ಕುಟುಂಬಗಳ ಪರಿಶೀಲನೆ ನಡೆಸಿ ಕಾರ್ಡ್ ಹಿಂತಿರುಗಿಸುವಂತೆ ಸೂಚಿಸಲಾಗಿದೆ. ಅನರ್ಹರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದರೆ, ಎಪಿಎಲ್ ಗೆ ಬದಲಾವಣೆ ಮಾಡಲಾಗುತ್ತದೆ. ತೆರಿಗೆ ಪಾವತಿದಾರರು ಕಾರ್ಡ್ ಹೊಂದುವಂತಿಲ್ಲ. ಒಂದು ವೇಳೆ ಅರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದಲ್ಲಿ ಆಹಾರ ಇಲಾಖೆ ಅಧಿಕಾರಿ, ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿ ಸಂಪರ್ಕಿಸಬಹುದಾಗಿದೆ.
ಲಯನ್ಸ್ ಕ್ಲಬ್ ಉಡುಪಿ ಕರಾವಳಿಯಿಂದ ಪತ್ರಿಕಾ ವಿತರಕರ ದಿನಾಚರಣೆ
Posted On: 04 Sep 2021, 11:11 PM
ಉಡುಪಿ : ಲಯನ್ಸ್ ಕ್ಲಬ್ ಉಡುಪಿ ಕರಾವಳಿ ವತಿಯಿಂದ ಪತ್ರಿಕಾ ವಿತರಕರ ದಿನಾಚರಣೆಯನ್ನು ಆಚರಿಸಲಾಯಿತು. ಬಂಟಕಲ್ಲು ಪರಿಸರದಲ್ಲಿ ಸುಮಾರು 20 ವರ್ಷಗಳಿಂದ ಪತ್ರಿಕೆ ವಿತರಕರಾಗಿರುವ ಕೆ. ಆರ್. ಪಾಟ್ಕರ್ ರವರನ್ನು ಅವರ ಮನೆಯಲ್ಲಿ ಲಯನ್ಸ್ ಉಡುಪಿ ಕರಾವಳಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ರಮಾನಂದ ಶೆಟ್ಟಿಗಾರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಪತ್ರಿಕಾ ದಿನಾಚರಣೆಯ ಮಹತ್ವ ಬಗ್ಗೆ ತಿಳಿಸಿ ಕೆ.ಆರ್. ಪಾಟ್ಕರ್ ರವರನ್ನು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ. ಆರ್. ಪಾಟ್ಕರ್ ರವರು ಸನ್ಮಾನಕ್ಕೆ ಕೃತಜ್ಞತೆ ತಿಳಿಸಿ ಪತ್ರಿಕಾ ವಿತರಣೆ ವೃತ್ತಿಯನ್ನು ತಾನು ಗೌರವಿಸಿ, ಈ ವೃತ್ತಿಯನ್ನು ತುಂಬಾ ಪ್ರೀತಿಸುವುದು ಮಾತ್ರವಲ್ಲದೆ ಈ ಬಗ್ಗೆ ಹೆಮ್ಮೆ ಪಡುವುದಾಗಿ ತಿಳಿಸಿದರು. ತನಗಿಂದು ದೊರೆತಿರುವ ಸ್ಥಾನ ಮಾನಗಳಿಗೆ ಈ ವೃತ್ತಿಯೇ ಕಾರಣ ಎಂದರು. ನಿಕಟಪೂರ್ವ ಅಧ್ಯಕ್ಷ ಅನಂತರಾಮ ವಾಗ್ಲೆ, ರತ್ನಾಕರ ಕಾಮತ್, ಗ್ರಾ.ಪಂ ಸದಸ್ಯೆ ವೈಲೇಟ್ ಕಸ್ತಲಿನೋ, ಅನಿತಾ ಮೆಂಡೋನ್ಸಾ, ಸಂಗೀತಾ ಪಾಟ್ಕರ್, ರಚಿತಾ ಪಾಟ್ಕರ್ ಉಪಸ್ಥಿತರಿದ್ದರು. ಅಧ್ಯಕ್ಷ ರವೀಂದ್ರ ಆಚಾರ್ಯರವರು ಸ್ವಾಗತಿಸಿ, ಕಾರ್ಯದರ್ಶಿ ರಾಘವೇಂದ್ರ ನಾಯಕ್ ವಂದಿಸಿದರು.
