Updated News From Kaup
ಕಾಪು : ಶ್ರೀ ದೇವಿ ಸ್ಪೋರ್ಟ್ಸ್ ಅಂಡ್ ಕಲ್ಚರ್ ಕ್ಲಬ್ ಮತ್ತು ಅರಣ್ಯ ಇಲಾಖೆಯ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮ
Posted On: 05-06-2021 09:22PM
ಕಾಪು : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಇಂದು ಕಾಪು ಶ್ರೀ ಕಲ್ಕುಡ ದೈವಸ್ಥಾನ ವಠಾರದಲ್ಲಿ ಶ್ರೀ ದೇವಿ ಸ್ಪೋರ್ಟ್ಸ್ ಅಂಡ್ ಕಲ್ಚರ್ ಕ್ಲಬ್ ಕಾಪು ಮತ್ತು ಕಾಪು ಅರಣ್ಯ ಇಲಾಖೆಯ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮ ನಡೆಸಲಾಯಿತು .
ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಲಾಕ್ಡೌನ್ ಸಂದರ್ಭದಲ್ಲಿ ವಿವಿಧೆಡೆ ರೇಷನ್ ಕಿಟ್ ವಿತರಣೆ
Posted On: 05-06-2021 09:16PM
ಕಾಪು : ಹನೆಹಳ್ಳಿ, ಲಕ್ಷ್ಮೀ ನಗರ, ಮಿಷನ್ ಚರ್ಚ್, ಕಾಪು ಪುರಸಭೆ, ಟೀಮ್ ಸಮಗ್ರ ಉಡುಪಿ, ಚಿತ್ಪಾಡಿ ಅರ್ಹ ಫಲಾನುಭವಿ 162 ಕುಟುಂಬಕ್ಕೆ ಉಡುಪಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಸಂಸ್ಥೆಯ ವತಿಯಿಂದ ಪರಿಸರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಲಾಕ್ಡೌನ್ ಸಂದರ್ಭದಲ್ಲಿ ರೇಷನ್ ಕಿಟ್ ವಿತರಿಸಲಾಯಿತು. ಜಿಲ್ಲಾದ್ಯಂತ 3600 ವರೆಗೆ ಕಿಟ್ ಗಳನ್ನು ನೀಡಲಾಗಿದೆ.
ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಾರ್ಜ್ ಫೆರ್ನಾಂಡಿಸ್ ರ 91 ನೇ ಹುಟ್ಟು ಹಬ್ಬದ ಸಂಸ್ಮರಣೆ
Posted On: 05-06-2021 03:27PM
ಮುಂಬಯಿ : ಮುಂಬಯಿ ಮಹಾನಗರದಲ್ಲಿ ನಾಡಿನ ಅವಿಭಜಿತ ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಯ ವಿವಿಧ ಜಾತಿ ಬಾಂಧವರು ಶತಮಾನದ ಹಿಂದೆಯೇ ತಮ್ಮ ತಮ್ಮ ಜಾತೀಯ ಸಂಘಟನೆಯನ್ನು ಕಟ್ಟಿ ಮುಂಬಯಿಯಲ್ಲಿ ಮಾತ್ರವಲ್ಲ ನಾಡಿನಲ್ಲಿಯೂ ಸಮಾಜ ಸೇವೆ ಮಾಡುತ್ತಾ ಬರುವುದರೊಂದಿಗೆ ನಾಡಿನ ಹಾಗೂ ಅವರವರ ಜಾತೀಯ ಸಂಸ್ಕೃತಿಯನ್ನು ಹೊರನಾಡಿನಲ್ಲಿಯೂ ಉಳಿಸಿ ಬೆಳೆಸುತ್ತಾ ಬಂದಿರುವರು. ಮಹಾನಗರದ ವಿವಿಧ ಜಾತೀಯ ಸಂಘಟನೆಗಳ ಮುಖಂಡರು, ರಾಜಕಾರಣಿಗಳು, ಧಾರ್ಮಿಕ ನೇತಾರರು ಹಾಗೂ ವಿವಿಧ ಗಣ್ಯರ ಬೆಂಬಲದೊಂದಿಗೆ, ಕರಾವಳಿಯ ಜಿಲ್ಲೆಗಳ ಪ್ರಗತಿಗಾಗಿ ಕಳೆದ ಇಪ್ಪತ್ತು ವರ್ಷಗಳಿಂದ ಯಶಸ್ವಿ ಹೋರಾಟ ನಡೆಸುತ್ತಾ ಬಂದಿರುವ, ಏಕೈಕ ಸರಕಾರೇತರ ಸಂಘಟನೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಗೆ ಆರಂಭದಿಂದ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದ, ಕೊಂಕಣ ರೈಲ್ವೆಯ ಶಿಲ್ಪಿ ಎಂದೇ ಗುರುತಿಸಿಕೊಂಡಿರುವ , ಮಾಜಿ ಕೇಂದ್ರ ಸಚಿವ ದಿ. ಜಾರ್ಜ್ ಫೆರ್ನಾಂಡೀಸ್ ಅವರ ಜನ್ಮ ದಿನವನ್ನು ಪ್ರತೀ ವರ್ಷ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಸಾರ್ವಜನಿಕ ಜೀವನದಲ್ಲಿನ ಸಾಧಕರೊಬ್ಬರನ್ನು ಗುರುತಿಸಿ ಪ್ರಶಸ್ತಿ ನೀಡಿ ಆಚರಿಸುತ್ತಾ ಬಂದಿದ್ದು ಇದೀಗ ಜಗತ್ತಿಗೇ ಆತಂಕವನ್ನುಂಟುಮಾಡಿದ ಮಹಾಮಾರಿ ಕೊರೋನಾದ ಬಗೆಗಿನ ಸರಕಾರದ ಲಾಕ್ ಡೌನ್ ನಿರ್ಬಂಧಗಳಿಂದಾಗಿ ಈ ವರ್ಷವೂ ದಿ. ಶ್ರೀ ಜಾರ್ಜ್ ಫೆರ್ನಾಂಡಿಸ್ ರ 91 ನೇ ಹುಟ್ಟುಹಬ್ಬದ ಸಂಸ್ಮರಣೆ ಸಮಾರಂಭವನ್ನು ವೆಬಿನಾರ್ ಮೂಲಕ ಆಚರಿಸಲಾಯಿತು.
ಬ್ರಹ್ಮಾವರ : ಜಯಂಟ್ಸ್ ಗ್ರೂಪ್ ಮತ್ತು ಭಾರತೀಯ ಜನೌಷಧಿ ಕೇಂದ್ರದಿಂದ ವನಮಹೋತ್ಸವ ಮತ್ತು ಸಸಿ ವಿತರಣೆ
Posted On: 05-06-2021 03:09PM
ಉಡುಪಿ : ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ಭಾರತೀಯ ಜನೌಷಧಿ ಕೇಂದ್ರದ ವತಿಯಿoದ ವಿಶ್ವ ಪರಿಸರ ದಿನದ ಅಂಗವಾಗಿ ವನ ಮಹೋತ್ಸವ ಮತ್ತು ಸಸಿ ವಿತರಣಾ ಕಾಯ೯ಕ್ರಮ ಜನೌಷಧಿ ಕೇಂದ್ರ ಪರಿಸರದಲ್ಲಿ ನಡೆಯಿತು.
ಶಿರ್ವ: ವಿಶ್ವ ಪರಿಸರ ದಿನಾಚರಣೆ
Posted On: 05-06-2021 03:03PM
ಶಿರ್ವ : ಸಂತ ಮೇರಿ ಮಹಾವಿದ್ಯಾಲಯ ಶಿರ್ವದ ಎನ್ಸಿಸಿ ಘಟಕವು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿಗಳನ್ನು ಅವರವರ ಮನೆಯ ಅಂಗಳಗಳಲ್ಲಿ ನೆಡುವ ಮೂಲಕ ಆಚರಿಸಲಾಯಿತು.
ಪಾದೆಬೆಟ್ಟು : 50 ಕುಟುಂಬಗಳಿಗೆ ದಿನಸಿ ಸಾಮಾಗ್ರಿ, ಹಾಲು ವಿತರಣೆ
Posted On: 04-06-2021 09:33PM
ಪಡುಬಿದ್ರಿ : ಶ್ರೀ ಸುಬ್ರಹ್ಮಣ್ಯ ಯುವಕ-ಯುವತಿ ವೃಂದ ಪಾದೆಬೆಟ್ಟು, ಪಡುಬಿದ್ರಿ ಇದರ ಆಶ್ರಯದಲ್ಲಿ ಕೊರೊನ ಪೀಡಿತರು ಮತ್ತು ತೀರ ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ನ್ನು ಮಲಬಾರ್ ಗೋಲ್ಡ್ & ಡೈಮಂಡ್ ಮತ್ತು ಸುಬ್ರಹ್ಮಣ್ಯ ಆಚಾರ್ಯ ದಂಪತಿಗಳ ಸಹಾಯದಿಂದ ಸುಮಾರು 50 ಕುಟುಂಬಗಳಿಗೆ ದಿನಸಿ ಸಾಮಾಗ್ರಿ ಮತ್ತು ದೀಪಕ್ ಎಲ್ಲೂರ್ ಕೊಡ ಮಾಡಿದ 80 ಲೀಟರ್ ಹಾಲನ್ನು ವಿತರಿಸಲಾಯಿತು.
ಸರಕಾರವು ಗರೋಡಿಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ವಿವಿಧ ವರ್ಗದವರಿಗೆ ಸಹಾಯಧನವನ್ನು ನೀಡಬೇಕು : ದಾಮೋದರ ಕಲ್ಮಾಡಿ
Posted On: 04-06-2021 06:26PM
ಉಡುಪಿ : ತುಳುನಾಡಿನಲ್ಲಿ ಸಾಮಾಜಿಕ ನ್ಯಾಯ, ಸತ್ಯ , ಪ್ರಮಾಣಿಕತೆ ಹಾಗೂ ಸ್ವಾಭಿಮಾನದ ಸಂಕೇತವಾದ ಅವಳಿ ವೀರರಾದ ಶ್ರೀ ಕೋಟಿ ಚೆನ್ನಯ್ಯರ ಆರಾಧನಾ ಕೇಂದ್ರಗಳಾದ ಗರೋಡಿಗಳಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಿಕೊಂಡು ಬರುತ್ತಿರುವ ಪೂ-ಪೂಜನೆಯ ಪೂಜಾರಿಗಳು, ದರ್ಶನ ಪೂಜಾರಿಗಳು, ವಾದ್ಯ ವರ್ಗದವರು, ನೃತ್ಯ ವಿಶಾರದ ಪಂಬಂದ ಪರವರು, ಮಡಿವಾಳರುಗಳು ಸೇವೆಯನ್ನು ಸಲ್ಲಿಸಿಕೊಂಡು ಬರುತ್ತಿದ್ದಾರೆ.
ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಮುದ್ರಣಕಾರರ ಕೂಗು ಸರಕಾರಕ್ಕೆ ಕೇಳಲಿಲ್ಲವೇ? - ಎಮ್. ಮಹೇಶ್ ಕುಮಾರ್
Posted On: 04-06-2021 02:27PM
ಉಡುಪಿ : ಚುನಾವಣೆ ಗಳು ಬಂದಾಗ ಮಾತ್ರ ಮುದ್ರಕರು ಜನ ಪ್ರತಿನಿಧಿಗಳ ಕಣ್ಣಿಗೆ ಕಾಣುವುದೇ? ಚುನಾವಣಾ ಸಂದರ್ಭದಲ್ಲಿ ಹಗಲು ರಾತ್ರಿ ಊಟ ತಿಂಡಿ ಎನ್ನದೆ ಮುದ್ರಣ ಮಾಡಿ ಕೊಡುವ ಕಾಯಕ ನಮ್ಮದು. ಒಬ್ಬ ಮುದ್ರಣ ಮಾಲಕನನ್ನು ಅವನ ಕುಟುಂಬ. ಕೆಲಸಗಾರರು ಅವಲಂಬಿತಾರಾಗಿರುತ್ತಾರೆ ಸುಮಾರು ಒಂದೂವರೆ ವರ್ಷ ದಿಂದ ನಿರಂತರ ವಾಗಿ ಕಷ್ಟ ದಿಂದ ಸಾಗುವ ಉದ್ಯಮ ಪ್ರಿಂಟಿಂಗ್ ಪ್ರೆಸ್ ಸಮಾಜ ದಲ್ಲಿ ಶುಭಕಾರ್ಯ. ಧಾರ್ಮಿಕ ಕಾರ್ಯಕ್ರಮ. ಸಭೆ ಸಮಾರಂಭ ಹಾಗೂ ಅರೋಗ್ಯ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದು. ಮುದ್ರಣ ಬೆಳಿಗ್ಗೆ ಎದ್ದ ಕೂಡಲೇ ನ್ಯೂಸ್ ಪೇಪರ್ ಸಿಗದೇ ಹೋದಾಗ ಎಷ್ಟು ಕಿರಿ ಕಿರಿ ಅಲ್ವಾ. ಈಗ ಡಿಜಿಟಲ್ ಮಾಧ್ಯಮ ಇರಬಹುದು ಆದರೆ ಜನರ ಮನಸಿಗೆ ಮುಟ್ಟುವ ಕೆಲಸ ಮುದ್ರಿತ ವಸ್ತುವಿನಿಂದ ಮಾತ್ರ ಸಾಧ್ಯ. ಯಾರು ಕೂಡ ನಮ್ಮ ಕಷ್ಟ ವನ್ನು ಕೇಳುವವರಿಲ್ಲದೆ ಹೋಯಿತೇ ಎನ್ನುವ ಸ್ಥಿತಿ ಮುದ್ರಕರಿಗೆ ಬಂದೊದಗಿದೆ.
ಬೆಳ್ಮಣ್ : ಕಾರ್ಕಳ ಬಿಳಿಬೆಂಡೆಯ ಬೀಜ ವಿತರಣೆ
Posted On: 03-06-2021 10:14PM
ಕಾಪು : ರೋಟರಿ ಕ್ಲಬ್ ಬೆಳ್ಮಣ್ ಇದರ ನೇತೃತ್ವದಲ್ಲಿ ಹಾಗೂ ಬೆಳ್ಮಣ್ ಹಾಗೂ ನಂದಳಿಕೆ ಪರಿಸರದ ವಿವಿಧ ಸಂಘ- ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂದು ನಂದಳಿಕೆ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಕಾರ್ಕಳ ಬಿಳಿಬೆಂಡೆಯ ಬೀಜ ವಿತರಣೆಯ ಕಾರ್ಯಕ್ರಮವನ್ನು ಕಾರ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಹಾಗೂ ಕರ್ನಾಟಕ ಸರಕಾರದ ಆಡಳಿತ ಪಕ್ಷದ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್ ಇವರು ಬಿಳಿಬೆಂಡೆಯ ಬೀಜ ವಿತರಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಲಾಕ್ಡೌನ್: ಉಡುಪಿಯಲ್ಲಿ ಹಸಿದ ಬೀದಿನಾಯಿಗಳಿಗೆ ನಿತ್ಯ ಅನ್ನದಾಸೋಹ!
Posted On: 03-06-2021 05:08PM
ದಿನನಿತ್ಯದ ಆತಂಕರಹಿತ ಜೀವನ ಶೈಲಿಯಲ್ಲಿ ತೊಡಗಿಸಿಕೊಂಡಿದ್ದ ಮನುಷ್ಯನಿಗೆ 2019 ರಲ್ಲಿ ದುತ್ತೆಂದು ವಕ್ಕರಿಸಿದ ಚೀನಾ ಮೂಲದ ಎಂದು ಹೇಳಲಾಗುವ ಕೊರೋನಾ ವೈರಸ್ ದೊಡ್ಡ ಶಾಕ್ ನೀಡಿದೆ. ಕೊರೋನಾ ಎಂಬ ಮಹಾಮಾರಿ ನಾವೆಂದೂ ಊಹಿಸಿರದ ನಮ್ಮ ಜೀವನದ ಸಂಪೂರ್ಣ ಶೈಲಿಯನ್ನೇ ಬದಲಾಯಿಸಿದೆ. ಸದಾ ಚಟುವಟಿಕೆಯಿಂದ, ಆಸಕ್ತಿಯಿಂದ, ಹೊಸ ವಿಚಾರಗಳ ಕಡೆ ಹೊಸ - ಹೊಸ ಅನ್ವೇಷಣೆಗಳ ಕಡೆಗೆ ಹೊರಟ ನಮ್ಮ ಪಯಣಕ್ಕೆ ಈಗ ಬ್ರೇಕ್ ಬಿದ್ದಿದೆ, ಕಣ್ಣಿಗೆ ಕಾಣದ ಈ ಸೂಕ್ಷ್ಮಾಣು ವೈರಸ್ ಮನುಷ್ಯನ ದೇಹವನ್ನು ಹೊಕ್ಕು ಆತನ ಹೃದಯ ಬಡಿತವನ್ನು ನಿಲ್ಲಿಸಿ ಸಾವಿನೆಡೆಗೆ ಕರೆದೊಯ್ಯುತ್ತಿದೆ. ಈ ರೋಗದಿಂದ ಜನರನ್ನು ಮುಕ್ತರನ್ನಾಗಿ ಮಾಡಲು ಸರ್ಕಾರ ಮತ್ತು ಜನಪ್ರತಿನಿಧಿಗಳು ಹರಸಾಹಸ ಪಡುತ್ತಿದ್ದಾರೆ, ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿ, ಜನರಿಗೆ ಮನೆಯಲ್ಲಿಯೇ ಸುರಕ್ಷಿತವಾಗಿರುವಂತೆ ತಿಳಿಸಿ, ಅವರ ಆರೋಗ್ಯ ಕಾಪಾಡಲು ಪ್ರಯತ್ನಿಸುತ್ತಿದೆ.
