Updated News From Kaup
ಶ್ರೀ ಗುರು ರಾಘವೇಂದ್ರ ಮಹಿಳಾ ಭಜನಾ ಮಂಡಳಿ 92 ಹೇರೂರು : ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ

Posted On: 26-03-2021 04:59PM
ಕಾಪು : ಶ್ರೀ ಗುರು ರಾಘವೇಂದ್ರ ಮಹಿಳಾ ಭಜನಾ ಮಂಡಳಿ 92 ಹೇರೂರು ಇದರ ಮಹಾಸಭೆಯು ಶ್ರೀ ಗುರುರಾಘವೇಂದ್ರ ಸಮಾಜ ಸೇವಾ ಮಂಡಳಿಯ ಸಭಾಂಗಣದಲ್ಲಿ ನಡೆಯಿತು.

2019 - 20ನೆಯ ವರ್ಷದ ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಸುಕನ್ಯಾ ಜೋಗಿಯವರು ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದರು. ಅಧ್ಯಕ್ಷರಾದ ಶ್ರೀಮತಿ ವಸಂತಿ ಆಚಾರ್ಯರವರು ಸರ್ವರನ್ನು ಸ್ವಾಗತಿಸಿದರು. ವೇದಿಕೆಯಲ್ಲಿ ಸಮಾಜ ಸೇವಾ ಮಂಡಳಿಯ ಅಧ್ಯಕ್ಷರಾದ ಸುಜಿತ್ ಕುಮಾರ್, ಕಾರ್ಯದರ್ಶಿ ದಿನೇಶ್ ದೇವಾಡಿಗ, ನಿಯೋಜಿತ ಅಧ್ಯಕ್ಷರಾದ ಶ್ರೀನಿವಾಸ ದೇವಾಡಿಗ, ಕಾರ್ಯದರ್ಶಿ ನಿತ್ಯಾನಂದ ಆಚಾರ್ಯ, ಶಂಕರ್ ದೇವಾಡಿಗ ಉಪಸ್ಥಿತರಿದ್ದರು.

2021- 22ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶ್ರೀಮತಿ ಶಶಿಕಲಾ ದಿನೇಶ್ ದೇವಾಡಿಗ, ಉಪಾಧ್ಯಕ್ಷರಾಗಿ ಶ್ರೀಮತಿ ಸರಸ್ವತಿ ಶ್ರೀಧರ ಕಾಮತ್, ಕಾರ್ಯದರ್ಶಿಯಾಗಿ ಪವಿತ್ರ ಪ್ರಕಾಶ್ ರಾವ್, ಕೋಶಾಧಿಕಾರಿಯಾಗಿ ಆಶಾ ವಿಶ್ವನಾಥರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಶ್ರೀಮತಿ ಸುಕನ್ಯಾ ಜೋಗಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕಾಪು ಬೀಚ್ : ಮಾಸ್ಕ್ ಹಾಕದವರಿಗೆ ದಂಡ

Posted On: 26-03-2021 04:47PM
ಕಾಪು ಬೀಚ್ ನ ಲೈಟ್ ಹೌಸ್ ಬಳಿ ಪ್ರವಾಸಿಗರು ಮಾಸ್ಕ್ ಹಾಕದ ಹಿನ್ನೆಲೆಯಲ್ಲಿ ಸ್ಥಳದಲ್ಲಿಯೇ ಅಧಿಕಾರಿಗಳು ದಂಡ ವಿಧಿಸಿದರು.

ಮಾಸ್ಕ್ ಹಾಕದವರಿಗೆ ಕೊರೊನದ ಬಗ್ಗೆ ಜಾಗೃತಿಯನ್ನು ಮಾಡಿದರು. ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಉಪಸ್ಥಿತರಿದ್ದರು.
ಜಲ್ಲಿಕಲ್ಲು ಹಾಗೂ ಶಿಲೆಗಳ ಸಾಗಾಟಕ್ಕೆ ಅವಕಾಶ ಕಲ್ಪಿಸುವಂತೆ ಮುಖ್ಯಮಂತ್ರಿಯಿಂದ ಅಧಿಕಾರಿಗಳಿಗೆ ಸೂಚನೆ

Posted On: 25-03-2021 04:03PM
ಇಂದು ಉಡುಪಿ ಶಾಸಕರಾದ ರಘುಪತಿ ಭಟ್ ಹಾಗೂ ದಕ್ಷಿಣ ಕನ್ನಡ ಶಾಸಕರಾದ ವೇದವ್ಯಾಸ ಕಾಮತ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಲಾರಿ ಮಾಲಕರು, ಕ್ರಷರ್ ಮಾಲಕರು, ಕಟ್ಟಡ ಸಾಮಾಗ್ರಿ ಲಾರಿ ಟೆಂಪೋ ಮಾಲಕರ ಸಂಘದ ಪದಾಧಿಕಾರಿಗಳ ನಿಯೋಗ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಜಲ್ಲಿಕಲ್ಲು ಹಾಗೂ ಶಿಲೆಕಲ್ಲುಗಳ ಸಾಗಾಟಕ್ಕೆ ನಿರ್ಬಂಧ ಹೇರಿರುವ ಕಾರಣ ಅಭಿವೃದ್ಧಿ ಕಾಮಗಾರಿಗಳು ಸ್ಥಗಿತವಾಗಿರುವ ಕುರಿತು ಚರ್ಚೆ ನಡೆಯಿತು.
ಜಲ್ಲಿಕಲ್ಲು ಸಿಗದೆ ಅನೇಕ ಕಾಮಗಾರಿಗಳು ಸ್ಥಗಿತವಾಗಿದೆ. ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಇದರಿಂದ ವಿಪರೀತ ಸಮಸ್ಯೆಯಾಗುತ್ತಿದೆ. ಹಾಗಾಗಿ ನಿರ್ಬಂಧ ತೆರವುಗೊಳಿಸುವಂತೆ ನಿಯೋಗವು ಗಣಿ ಹಾಗೂ ಭೂ ವಿಜ್ಞಾನ ಸಚಿವರಿಗೆ ಮನವಿ ಸಲ್ಲಿಸಲಾಯಿತು. ಸಮಸ್ಯೆ ಆಲಿಸಿದ ಸಚಿವರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿ ಶ್ರೀ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿಸಿ ಸಮಸ್ಯೆಯ ಕುರಿತು ಗಮನ ಸೆಳೆದರು.
ಸಮಸ್ಯೆಯ ಗಂಭೀರತೆಯನ್ನು ಅರಿತ ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜಲ್ಲಿಕಲ್ಲು ಹಾಗೂ ಶಿಲೆಕಲ್ಲು ಸಾಗಾಟಕ್ಕೆ ಅವಕಾಶ ನೀಡುವ ಕುರಿತು ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಶಿರ್ವ ಸಂತ ಮೇರಿ ಕಾಲೇಜಿನ ಸತ್ಯಸುಬ್ರಹ್ಮಣ್ಯ ವಿ.ಎಸ್ ಗೆ ಗಣಕ ವಿಜ್ಞಾನ ವಿಭಾಗದಲ್ಲಿ ನಾಲ್ಕನೇ ರ್ಯಾಂಕ್

Posted On: 25-03-2021 03:57PM
ಶಿರ್ವ: ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆ, ಶಿರ್ವ ಸಂತ ಮೇರಿ ಕಾಲೇಜಿನ ವಿದ್ಯಾರ್ಥಿ ಸತ್ಯಸುಬ್ರಹ್ಮಣ್ಯ ವಿ.ಎಸ್. ರವರು ಮಂಗಳೂರು ವಿಶ್ವವಿದ್ಯಾನಿಲಯ 2020 ರ ಸಪ್ಟೆಂಬರ್ನಲ್ಲಿ ನಡೆಸಿದ ಪದವಿ ಪರೀಕ್ಷೆಯಲ್ಲಿ ಗಣಕ ವಿಜ್ಞಾನ ವಿಭಾಗ ಬಿ.ಸಿ.ಎ. ದಲ್ಲಿ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ.
ಕಾಸರಗೋಡಿನ ಶ್ರೀ ವೆಂಕಟೇಶ್ವರ ಭಟ್ ಮತ್ತು ಶ್ರೀಮತಿ ಗೌರಿ ಅವರ ಪುತ್ರರಾದ ಅವರು ಶೇಕಡಾ 95.72% ಅಂಕಗಳೊಂದಿಗೆ ನಾಲ್ಕನೇ ರ್ಯಾಂಕ್ ಗಳಿಸಿದ್ದಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ಆಡಳಿತ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ರಾಘವೇಂದ್ರ ಶೆಟ್ಟಿ ಮಂಡೇಡಿ ನಿಧನ

Posted On: 24-03-2021 10:46PM
ಕಾಪು : ಮಂಡೇಡಿ ದಿವಂಗತ ಮೋನಪ್ಪ ಶೆಟ್ಟಿಯವರ ಪುತ್ರ ರಾಘವೇಂದ್ರ ಶೆಟ್ಟಿ ಮಂಡೇಡಿ ಇವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಸಂಜೆ 5 ಗಂಟೆಗೆ ನಿಧನರಾಗಿದ್ದಾರೆ.
ಸೌಹಾರ್ದತೆಗೆ ಸಾಕ್ಷಿಯಾದ ಕಾಪು ಮಾರಿಪೂಜೆ

Posted On: 24-03-2021 04:00PM
ಏಳು ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ಕಾಲಾವಧಿ ಸುಗ್ಗಿ ಮಾರಿಪೂಜೆ. ಕಾಪುವಿನ ಮೂರು ಮಾರಿ ಗುಡಿಗಳು ಜನಾಕರ್ಷಣೆಯ, ವಿದ್ಯುದೀಪಾಲಂಕೃತದಿಂದ, ಪುಷ್ಪಾಲಂಕಾರದಿಂದ ಎಲ್ಲರ ಕಣ್ಮನ ಸೆಳೆಯುತ್ತಿದ್ದು, ಕಾಪು ಶ್ರೀ ಹಳೆ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಮೂರನೆಯ ಮಾರಿಗುಡಿ (ಕಲ್ಯ) ದೇವಸ್ಥಾನಗಳು ಮಂಗಳವಾರ ಸಂಜೆಯಿಂದ ಬುಧವಾರ ಸಂಜೆಯವರೆಗೆ ಲಕ್ಷಾಂತರ ಭಕ್ತರು ಜಿಲ್ಲೆ, ಹೊರಜಿಲ್ಲೆಗಳಿಂದ ಆಗಮಿಸಿ ಗದ್ದುಗೆಯಿಂದ ಅಲಂಕೃತಳಾದ ದೇವಿಯ ಕಂಡು ವಿವಿಧ ಸೇವೆಗಳನ್ನು ಸಮರ್ಪಿಸಿ ಪುನೀತರಾಗಿದ್ದಾರೆ.

ಕೋಮು ಸೌಹಾರ್ದತೆ ಎಂಬಂತೆ ಮತ್ತು ಎಲ್ಲಾ ಜಾತಿ, ಧರ್ಮದವರು ನನ್ನ ಮಕ್ಕಳು ಎಂಬಂತೆ ದೇವಿಗೆ ಸಮರ್ಪಿಸುವ ದೇವಿಗೆ ಅತಿಪ್ರಿಯವಾದ ಶಂಕರಪುರ ಮಲ್ಲಿಗೆ ಹಾಗೂ ರಕ್ತಾಹಾರ ಬೇಕೆಂಬ ದೇವಿಯ ಪ್ರೇರಣೆಯ ಕುರಿ, ಆಡು,ಕೋಳಿಗಳ ಮಾರಾಟದಲ್ಲಿಯೂ ಮುಸ್ಲಿಮ್ ಬಾಂಧವರೇ ಹೆಚ್ಚಾಗಿ ಕಂಡು ಬಂದಿದ್ದು ಒಟ್ಟಿನಲ್ಲಿ ನಮ್ಮ ಕಾಪು ಸುಗ್ಗಿ ಮಾರಿಪೂಜೆಯು ಸೌಹಾರ್ದತೆಗೆ ಸಾಕ್ಷಿಯಾಗಿದೆ ಎಂಬುವುದರಲ್ಲಿ ಎರಡು ಮಾತಿಲ್ಲ.
ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು ದೇವಳದ ನೂತನ ವೆಬ್ ಸೈಟ್ ಲೋಕಾರ್ಪಣೆ

Posted On: 24-03-2021 09:15AM
ತುಳುನಾಡ ಸೀಮೆಯ ಇತಿಹಾಸ ಪ್ರಸಿದ್ದ ಕಾರಣಿಕ ಶಕ್ತಿ ಕೇಂದ್ರ - ಶ್ರೀ ಕ್ಷೇತ್ರ ರಕ್ಷಣಾಪುರ ಕಾಪು ಶ್ರೀ ಹಳೇ ಮಾರಿಯಮ್ಮ ದೇವಳದ ಅಧಿಕೃತ ನೂತನ ವೆಬ್ ಸೈಟ್ (http://hmtkapu.in) ಮಾಚ್೯ 23, ಮಂಗಳವಾರ ಶ್ರೀದೇವಿಯ ಕಾಲಾವಧಿ ಸುಗ್ಗಿಮಾರಿಪೂಜೆ ಶುಭ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.

ದೇಶ ವಿದೇಶದಲ್ಲಿರುವ ಭಜಕರಿಗೆ ದೇವಳದಲ್ಲಿ ಜರಗುವ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಹಾಗೂ ಆನ್ ಲೈನ್ ಸೇವಾ ವಿವರಗಳು, ದೇವಳದ ಇತಿಹಾಸ, ದೇವಿಯ ವಿವಿಧ ಅಲಂಕಾರ, ಧಾರ್ಮಿಕ ಕಾರ್ಯಕ್ರಮ ಚಿತ್ರಣಗಳು ಹಾಗೂ ಇನ್ನಿತರ ಯಾವುದೇ ಮಾಹಿತಿಗಳಿಗೆ ಸಂಪರ್ಕಿಸಲು ಸಾಮಾಜಿಕ ಜಾಲತಾಣಗಳಲ್ಲಿ ಈಗಿನ ತಂತ್ರಜ್ಞಾನ ಬಳಸಿ ನೂತನ ವೆಬ್ಸೈಟ್ ತಯಾರಿಸಿದ್ದು ನಾಡಿನ ಸಮಸ್ತ ಭಕ್ತ ಭಾಂದವರು ಇದರ ಸದುಪಯೋಗ ಪಡಕೊಳ್ಳಬೇಕೆಂದು ವಿನಂತಿಸಿದ್ದಾರೆ.
ಆರ್ರ್ಯಾಡಿ ದಿ| ಅಂಚನ್ ಅವರ 5ನೇ ವರ್ಷದ ಸಂಸ್ಮರಣಾರ್ಥ ಪುತ್ರರಿಂದ 14 ಅಶಕ್ತ ಕುಟುಂಬಗಳಿಗೆ ಸುಮಾರು 1.50 ಲಕ್ಷ ರೂ. ವೈದ್ಯಕೀಯ ನೆರವಿನ ಹಸ್ತ

Posted On: 23-03-2021 05:19PM
ಕಟಪಾಡಿ : ಆರ್ರ್ಯಾಡಿ ದಿ| ಅಂಚನ್ ಅವರ 5ನೇ ವರ್ಷದ ಸಂಸ್ಮರಣಾರ್ಥ ಪುತ್ರರಾದ ಸುರೇಂದ್ರ ಅಂಚನ್, ಸುಜಿತ್ ಅಂಚನ್, ಸುಕುಮಾರ್ ಅಂಚನ್ ಅವರು ವೈದ್ಯಕೀಯ ಚಿಕಿತ್ಸೆ ವೆಚ್ಚಕ್ಕಾಗಿ ಅಶಕ್ತ 14 ಬಡ ಕುಟುಂಬಗಳಿಗೆ ಸುಮಾರು 1.50 ಲಕ್ಷ ರೂ. ಸಹಾಯ ಧನವನ್ನು ಮಾ.21ರಂದು ವಿತರಿಸಿದರು.
ದಿ| ಸುಂದರ ಅಂಚನ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ನೀಡಲಾದ ಈ ಸಹಾಯಧನವನ್ನು ಪಾಂಗಾಳ ಆರ್ರ್ಯಾಡಿಯ ಅಂಚನ್ಸ್ ನಲ್ಲಿ ಪತ್ನಿ ಜಾನಕಿ ಸುಂದರ ಅಂಚನ್ ಅವರು, ಅನಾರೋಗ್ಯ ಪೀಡಿತ ಅಶಕ್ತ ಕುಟುಂಬಗಳಾದ ಸಂಗೀತಾ ಉಪ್ಪೂರು, ಜೂಲಿಯನ ಪಿರೇರಾ ಶಿರ್ವ, ಲೀಲಾ ಪೂಜಾರ್ತಿ ಗಾಂಧಿನಗರ ಪಾಂಗಾಳ, ಗಂಗಿ ಪೂಜಾರ್ತಿ ಪಾಂಗಾಳ, ವಾಸುದೇವ ಆಚಾರ್ಯ ಪಾಂಗಾಳ, ಅಚ್ಯುತ ಆಚಾರ್ಯ ಇನ್ನಂಜೆ, ವಿಜಯಾ ಕುರ್ಕಾಲು, ಸೂರು ಮೂಲ್ಯ ಇನ್ನಂಜೆ, ಪ್ರೇಮ ಶಂಕರಪುರ, ರಕ್ಷಿತ್ ಸಾಲ್ಯಾನ್ ಹೆಜಮಾಡಿ ಸಹಿತ 14 ಕುಟುಂಬಗಳಿಗೆ ವೈದ್ಯಕೀಯ ಚಿಕಿತ್ಸೆಯ ಸಹಾಯ ಧನದ ಚೆಕ್ ನ್ನು ವಿತರಿಸಿದರು.
ಈ ಸಂದರ್ಭ ದಿವ್ಯಾ ಸುರೇಂದ್ರ, ಕೃಪಾ ಸುಜಿತ್, ಮಹೇಶ ಎಂ. ಸುವರ್ಣ, ತಾ.ಪಂ. ಸದಸ್ಯ ರಾಜೇಶ್ ಶೆಟ್ಟಿ, ಗ್ರಾ.ಪಂ. ಸದಸ್ಯರಾದ ಸುರೇಖಾ ಶೆಟ್ಟಿ, ಪ್ರವೀಣ್ ಪೂಜಾರಿ ಕುರ್ಕಾಲು, ರಾಜೇಶ್ ಆಚಾರ್ಯ, ಸತ್ಯದ ತುಳುವೆರ್ ಸಂಘಟನೆಯ ಅಧ್ಯಕ್ಷ ಪ್ರವೀಣ್ ಬಂಗೇರ ಮಲ್ಪೆ ಉಪಸ್ಥಿತರಿದ್ದರು. ಜಿ.ಪಂ. ಸದಸ್ಯೆ ಗೀತಾಂಜಲಿ ಎಂ.ಸುವರ್ಣ ಸ್ವಾಗತಿಸಿದರು.ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರಾಡಳಿತ ಮಂಡಳಿಯ ಸದಸ್ಯ ಕಾಮ್ ರಾಜ್ ಸುವರ್ಣ ವಂದಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಹಲ್ಲೆಯ ಸತ್ಯಾಂಶ ಬಿಚ್ಚಿಟ್ಟು, ಘಟನೆಯ ಹಿಂದಿನ ವ್ಯಕ್ತಿಗಳನ್ನು ಸತ್ಯ ಪ್ರಮಾಣಕ್ಕಾಗಿ ಆಹ್ವಾನಿಸಿದ ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ

Posted On: 23-03-2021 04:54PM
ಉಡುಪಿ : ಯಾವ ತಪ್ಪು ಮಾಡದೆ ಸುಳ್ಳು ಆರೋಪ ಮಾಡಲಾಗುತ್ತಿದೆ. ನನಗೆ ಹಲ್ಲೆ ಮಾಡಿದವರನ್ನು ಬಾರಕೂರು ಕಾಳಿಕಾಂಬೆ ಮತ್ತು ಅಲ್ಲಿನ ಕಲ್ಲುಕುಟ್ಟಿಗ ಸಾನಿಧ್ಯಕ್ಕೆ, ಕಟಪಾಡಿ ವಿಶ್ವನಾಥ ಕ್ಷೇತ್ರ ಹಾಗೂ ಧರ್ಮಸ್ಥಳದ ಅಣ್ಣಪ್ಪ ಕ್ಷೇತ್ರಕ್ಕೆ ಸತ್ಯ ಪ್ರಮಾಣಕ್ಕೆ ಆಹ್ವಾನಿಸುತ್ತಿದ್ದೇನೆ ಎಂದು ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿ ಹೇಳಿದರು.
ಅವರು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಚ್ಚೂರು ಕಾಳಿಕಾಂಬ ದೇವಸ್ಥಾನ ಬಾರ್ಕೂರು ಇದರ ಆಡಳಿತ ಮೊಕ್ತೇಸರ ಶ್ರೀಧರ ಆಚಾರಿ ವಡೇರಹೋಬಳಿ, ರವಿ ಆಚಾರಿ ಕೆರಾರ್ಕಳಬೆಟ್ಟು, ಚಂದ್ರಯ್ಯ ಆಚಾರಿ, ಸೌನ್ಯ ಸುರೇಶ್ ಆಚಾರಿ, ಪ್ರವೀಣ್ ಆಚಾರಿ ಮತ್ತು ಇತರರ ಮೇಲೆ ನಾನೇ ಕಬ್ಬಿಣದ ರಾಡಿನಿಂದ ಹಲ್ಲೆ ಮಾಡಿ, ಸಭಾಭವನದ ಗಾಜು ಒಡೆದಿದ್ದು, ಹಾಗೆಯೇ ಬ್ರಹ್ಮಕಲಶದ ಸಂದರ್ಭದಲ್ಲಿ ವಿದ್ಯುತ್ ಟ್ಯೂಬ್ಲೈಟ್ ಒಡೆದಿದ್ದು ಇದೆಲ್ಲವೂ ಸಭಾಭವನದ ಎದುರಿನ ಕಚ್ಚೂರು ರಸ್ತೆಯಲ್ಲಿ ನಡೆದಿದ್ದು, ದೇವಸ್ಥಾನಕ್ಕೆ ಸಂಬಂಧಪಟ್ಟ ಅಡುಗೆ ಕೋಣೆಯಲ್ಲಿ ನಡದದ್ದೇ ಅಲ್ಲವೆಂದು ತಾವು ಕಣ್ಣಾರೆ ಕಂಡಂತೆ ಸುಳ್ಳನ್ನು ಬಂಡವಾಳವಾಗಿಟ್ಟುಕೊಂಡು ಅಪರಾಧಿಗಳನ್ನು ಬಚಾವ್ ಮಾಡುವ ಉದ್ದೇಶದಿಂದ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹಿಂದುಗಳಿಗೆ ದೇವಿ ಪೂಜಾನೀಯ ಮತ್ತು ಶ್ರೇಷ್ಟ ಶಕ್ತಿ ಅಂತಹ ದೇವಿಯ ಮುಂದೆ ನಿಂತು ಪ್ರಸಾದ ಸ್ವೀಕಾರ ಮಾಡುವ ಇವರುಗಳು ತಮ್ಮ ಇನ್ನೊಬ್ಬ ಆಡಳಿತ ಮೊಕ್ತೇಸರ ಪ್ರವೀಣ್ ಆಚಾರಿ ಮತ್ತು ಅವನ ಸಹೋದರ ಪ್ರಸಾದ್ ಆಚಾರಿ ಮತ್ತಿತರ ಕುಕೃತ್ಯಕ್ಕೆ ಧರ್ಮ ಬಿಟ್ಟು ಬೆಂಬಲ ನಿಂತಿರುವುದು ದೇವಿಯ ಸಾನಿಧ್ಯದ ಅಪವಿತ್ರಕ್ಕೆ ಇವರುಗಳೂ ಕೂಡಾ ನೇರ ಹೊಣೆಯಾಗಿರುತ್ತಾರೆ. ಅಲ್ಲದೇ ನಾನೇ ದೇವಾಲಯದ ಕಿಟಕಿ ಗಾಜುಗಳನ್ನು ಒಡೆದು, ಕೋಳಿ ರಕ್ತವನ್ನು ಮೈಗೆ ಹಚ್ಚಿಕೊಂಡು ಪೊಲೀಸ್ ಕಂಪ್ಲೈಟ್ ದಾಖಲಿಸಿದ್ದೇನೆ ಎಂದು ದಿನೇಶ್ ಆಚಾರ್ಯ ಪಡುಬಿದ್ರೆಯವರು ವಿಶ್ವಕರ್ಮ ಸಮುದಾಯದ ವಾಟ್ಸಪ್ ಗ್ರೂಪ್ನಲ್ಲಿ ಅಪಪ್ರಚಾರ ಮಾಡಿರುತ್ತಾರೆ. ನಾನು ಮೇಲಿನ ಎಲ್ಲಾ ಆಚಾರಿ ಆಡಳಿತ ಮಂಡಳಿಯ ಪ್ರತಿನಿಧಿಗಳನ್ನು ಕಾಳಿಕಾಂಬೆ ಮತ್ತು ಅಲ್ಲಿರುವ ಕಲ್ಲುಕುಟ್ಟಿಗ ಸಾನಿಧ್ಯಕ್ಕೆ ಸತ್ಯ ಪ್ರಮಾಣಕ್ಕೆ ಆಹ್ವಾನಿಸುತ್ತಿದ್ದೇನೆ. ಮತ್ತೋರ್ವ ದೊಡ್ಡ ನಾಯಕ ಶ್ರೀ ಬಿ.ಎನ್ ಶಂಕರ ಪೂಜಾರಿ ಫೋನ್ ಸಂಭಾಷಣೆಯಲ್ಲಿ ಮತ್ತು ಸಾರ್ವಜನಿಕವಾಗಿ ನನ್ನ ಬಗ್ಗೆ ಅಪಪ್ರಚಾರ ಮಾಡಿದ್ದು ನಾನು ಖುದ್ದಾಗಿ ಬ್ಲೇಡಿನಿಂದ ಕುಯ್ದುಕೊಂಡಿದ್ದೇನೆ. ಕಲ್ಲಿನಿಂದ ಒಡೆದುಕೊಂಡಿದ್ದೇನೆ. ಹಣ ವಸೂಲಿಗಾರನಾಗಿದ್ದೇನೆ. ನಾನು 420 ಎಂದು ಈ ವ್ಯಕ್ತಿ ಮಾತನಾಡಿದ್ದು ಇವತ್ತು ತಮ್ಮ ಮೂಲಕ ಮೂರು ವಿಷಯಗಳನ್ನು ಸಮಾಜದ ಮುಂದೆ ಇಡುತ್ತೇನೆ. ಯಾರು 420 ಎಂದು ಸಮಾಜ ನಿರ್ಧಾರ ಮಾಡಲಿ. ಎರಡು ವರ್ಷ (03/02/2019 ಬ್ರಹ್ಮಾವರ) ಹಿಂದೆ ಬಿಲ್ಲವ ಸಮಾವೇಶಕ್ಕಾಗಿ ಒಂದು ಕೋಟಿಗೂ ಹೆಚ್ಚು ಧನ ಸಂಗ್ರಹಿಸಿದ್ದು ಎಲ್ಲರಿಗೂ ಎಲ್ಲರಿಗೂ ಗೊತ್ತಿರುವ ವಿಚಾರ, ಸರ್ಕಾರದಿಂದ ಮತ್ತು ಸಮಾಜ ಬಾಂಧವರಿಂದ ಸಂಗ್ರಹವಾದ ಹಣದ ಲೆಕ್ಕಾಚಾರ ಈ ವರೆಗೆ ಯಾಕೆ ನೀಡಲಿಲ್ಲ ? ಸಾರಥಿಯು ಹಣ ನುಂಗಿ ಕುದುರೆಯ ಒರೆಸುವ ಕೆಲಸ ಮಾಡುತ್ತಿರುವುದು ಯಾಕೆ ? ವಿಖ್ಯಾತಾನಂದ ಸ್ವಾಮಿ..! ಧರ್ಮಕಾರ್ಯ ಬಿಟ್ಟು ನನ್ನ ಪರ ಹೋರಾಟಕ್ಕೆ ಬಂದ ಸಮಾನ ಮನಸ್ಕರಿಗೆ ಕರೆ ಮಾಡಿ ದಾರಿ ತಪ್ಪಿಸುವ ಕಾರ್ಯ ಮಾಡಿ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎಂದರು.
ಮತ್ತೊಂದು ವಿಚಾರವನ್ನು ನಿಮ್ಮ ಗಮನಕ್ಕೆ ತರುತ್ತಿದ್ದು, ಬಾರ್ಕೂರು ಜೈನ ಬಸದಿಗೆ ಸಂಬಂಧಪಟ್ಟ ಸ್ಥಳವನ್ನು ಮಂಜಪ್ಪ ಪೂಜಾರಿ ಮತ್ತು ಕುಟುಂಬ ಅಕ್ರಮವಾಗಿ ಉಪಯೋಗಿಸುತ್ತಿದ್ದು ಜಿಲ್ಲಾ ಆಡಳಿತ ಆದಷ್ಟು ಬೇಗ ಆ ಸ್ಥಳವನ್ನು ಜೈನ ಸಮುದಾಯಕ್ಕೆ ನೀಡುವ ಕೆಲಸ ಮಾಡದಿದ್ದರೆ ಜಿಲ್ಲಾಧಿಕಾರಿಗಳ ಕಛೇರಿಯ ಎದುರು ಅಮರಾಣಂತ ಉಪವಾಸ ಕೈಗೊಳ್ಳುತ್ತೇನೆ. ಅಪರಾಧಿಗಳಿಗೆ ನ್ಯಾಯಾಲಯ ಜಾಮೀನು ನೀಡಿರಬಹುದು. ಆದರೆ ನ್ಯಾಯದೇವತೆ ನನ್ನ ಪರವಾಗಿ ಇದ್ದಾಳೆ ಎಂಬುದು ನನ್ನ ನಂಬಿಕೆ. ನಾನು ಸಸ್ಯಹಾರಿ ಆಗಿದ್ದು, ದೇವಿಯ ನಿತ್ಯ ಪೂಜಾ ಅರ್ಚಕನಾಗಿರುವ ಕಾರಣ ನನ್ನ ಸತ್ಯಕ್ಕೆ ದೇವಿಯ ಆಶಿರ್ವಾದ ಖಂಡಿತ ನನ್ನ ಮೇಲೆ ಇದೆ ಎನ್ನುವ ನಂಬಿಕೆ ನನಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುಧೀರ್ ಸೂಡಾ ರವರ ವಿರುದ್ಧ ನನ್ನ ಕಾನೂನು ಹೋರಾಟ ಮುಂದುವರೆಸುತ್ತೇನೆ. ನನಗೆ ಬೆಂಬಲವಾಗಿ ನಿಂತ ಸಂಘಟನೆಯ ಪ್ರತಿನಿಧಿಗಳು, ಸಮಾಜ ಬಂಧುಗಳು, ಸ್ನೇಹಿತರು ಸಾರ್ವಜನಿಕರು, ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳು, ವಿಶೇಷವಾಗಿ ಜೈನ ಸಮುದಾಯಕ್ಕೆ ಕೂಡಾ ನನ್ನ ಹೃದಯ ಪೂರ್ವಕ ಧನ್ಯವಾದಗಳು ಎಂದರು.
ಈ ಸಂದರ್ಭ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಶೇಖರ ಹಾವಂಜೆ, ಉಡುಪಿ ಜಿಲ್ಲೆ ಆರ್ ಟಿ ಐ ಕಾರ್ಯಕರ್ತರ ಸಮಿತಿ ಅಧ್ಯಕ್ಷರಾದ ಸದಾಶಿವ ಶೆಟ್ಟಿ ಹೇರೂರು, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸುಜಯ ಪೂಜಾರಿ, ಪ್ರಮೋದ್ ಉಚ್ಚಿಲ ಉಪಸ್ಥಿತರಿದ್ದರು.
ಕಾಗದ ಮತ್ತು ಸಾಮಗ್ರಿಗಳ ಬೆಲೆ ಏರಿಕೆ : ಜಿಲ್ಲಾಧಿಕಾರಿಗೆ ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಮನವಿ

Posted On: 23-03-2021 07:56AM
ಉಡುಪಿ : ನವದೆಹಲಿಯ ಅಖಿಲ ಭಾರತ ಮುದ್ರಕರ ಒಕ್ಕೂಟವು ಏರುತ್ತಿರುವ ಕಾಗದ ಮತ್ತು ಸಾಮಗ್ರಿಗಳ ಬೆಲೆ ಏರಿಕೆಯ ವಿಷಯವಾಗಿ ಕೇಂದ್ರ ಸರಕಾರವು ಕಾಗದ ಮತ್ತು ಕಚ್ಚಾ ಸಾಮಗ್ರಿಗಳ ತಯಾರಿಕಾ ಕೈಗಾರಿಕೆಗಳ ದರ ನಿಯಂತ್ರಣದಲ್ಲಿ ಮಧ್ಯಸ್ಥಿಕೆ ವಹಿಸಲೇಬೇಕೆಂದು ಸೋಮವಾರದಂದು ಜಿಲ್ಲಾಧಿಕಾರಿಗಳಿಗೆ ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಮನವಿ ಸಲ್ಲಿಸಿದರು.
ಮುದ್ರಣಕಾರರು ತೀವ್ರವಾದ ಸಂಕಷ್ಟ ಅನುಭವಿಸುತ್ತಿದ್ದು ಉಡುಪಿ ಜಿಲ್ಲೆಯಲ್ಲಿ ಸುಮಾರು 180ಕ್ಕೂ ಹೆಚ್ಚು ಮುದ್ರಣ ಮತ್ತು ಮುದ್ರಣಕ್ಕೆ ಸಂಬಂಧಪಟ್ಟ ಚಟುವಟಿಕೆಗಳನ್ನು ಹೊಂದಿಕೊಂಡುಜೀವನ ಸಾಗಿಸುತ್ತಿದ್ದಾರೆ. ಮುದ್ರಣಾಲಯಕ್ಕೆ ಬೇಕಾದ ಕಚ್ಚಾವಸ್ತುಗಳನ್ನು ಪೂರೈಸುವ ಡೀಲರ್ ಗಳು ಏಕೆ ಏಕೆ ಹೆಚ್ಚಿಸುವುದರಿಂದ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ಹೇಳಿಕೊಂಡಿದ್ದಾರೆ
ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕ ಸಂಘದ ಅಧ್ಯಕ್ಷರಾದ ಮಹೇಶ್ ಕುಮಾರ್, ಕಾರ್ಯದರ್ಶಿ ಮನೋಜ್ ಕಡಬ, ಕೋಶಾಧಿಕಾರಿ ಸುಧೀರ್ ಡಿ. ಬಂಗೇರ, ಗೌರವ ಸಲಹೆಗಾರರಾದ ಅಶೋಕ್ ಶೆಟ್ಟಿ, ಜತೆ ಕಾರ್ಯದರ್ಶಿ ಮುರಳಿ ಕೃಷ್ಣ, ಮಾಜಿ ಅಧ್ಯಕ್ಷರಾದ ರಮೇಶ್ ತಿಂಗಳಾಯ, ಸದಸ್ಯರಾದ ರಿಜಿನಲ್ಡ್ ಡಿ. ಸಿಲ್ವ ಉಪಸ್ಥಿತರಿದ್ದರು.