Updated News From Kaup
ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ತಂಡದಿಂದ ಕಾರುಣ್ಯ ವೃದ್ಧಾಶ್ರಮದಲ್ಲಿ ಉಚಿತ ಮಧುಮೇಹ ತಪಾಸಣೆ
Posted On: 22-05-2021 11:59AM
ಉಡುಪಿ : ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ನಿರತವಾಗಿರುವ ಉಡುಪಿಯ ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ತಂಡವು ಕಟಪಾಡಿಯ ಕಾರುಣ್ಯ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಆಶ್ರಮವಾಸಿಗಳಿಗೆ ಉಚಿತ ಮಧುಮೇಹ ತಪಾಸಣೆ ನಡೆಸಿತು.
ಪಡುಬಿದ್ರಿ ಠಾಣಾ 10 ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಠಾಣೆ ಸೀಲ್ಡೌನ್
Posted On: 22-05-2021 11:18AM
ಪಡುಬಿದ್ರಿ : ಪಡುಬಿದ್ರಿ ಠಾಣೆಯ ಠಾಣಾಧಿಕಾರಿ ಸಹಿತ ೧೦ ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಡಪಟ್ಟಿದ್ದು, ಠಾಣೆಯನ್ನು ಪಕ್ಕದ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ.
ಸರ್ಕಾರದ ವಿಶೇಷ ಸಹಕಾರ ಪ್ಯಾಕೇಜ್ ಗರೋಡಿ ಅರ್ಚಕರು ಹಾಗೂ ದರ್ಶನ ಪೂಜಾರಿಯವರಿಗೂ ನೀಡಬೇಕು : ಪ್ರವೀಣ್ ಎಂ ಪೂಜಾರಿ
Posted On: 21-05-2021 09:32PM
ಕರ್ನಾಟಕ ಸರಕಾರ ದೇವಾಲಯದ ಅರ್ಚಕರಿಗೆ ಹಾಗೂ ಇತರ ಕೆಲವು ವಿಶೇಷ ಪ್ಯಾಕೇಜ್ ಘೋಷಿಸಿದೆ.ಇದು ಅಭಿನಂದನಾರ್ಹ ನಿರ್ಧಾರ. ಅವಿಭಜಿತ ದಕ್ಷಿಣ ಕನ್ನಡ ಉಡುಪಿಯಾದ್ಯಂತ ಕೋಟಿ ಚೆನ್ನಯರ ಹಾಗೂ ಪರಿವಾರ ಶಕ್ತಿ ಆರಾಧನೆಯ ಪುಣ್ಯಸ್ಥಳವೆನಿಸಿದ ಗರೋಡಿ ಅರ್ಚಕರಿಗೆ ,ಬೈದೇರುಗಳ ದರ್ಶನ ಪೂಜಾರಿಯವರಿಗೆ ಯಾವುದೇ ಸಹಕಾರವನ್ನು ಪ್ರಕಟಿಸದಿರುವುದನ್ನು ಉಡುಪಿ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿ ಖಂಡಿಸಿದ್ದಾರೆ.
ತುರ್ತು ಚಿಕಿತ್ಸೆಗೆ ಸಾಗಿಸಲು ಅಂಬುಲೆನ್ಸ್ ಸೌಲಭ್ಯ ಇಲ್ಲದ ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರ
Posted On: 21-05-2021 12:39PM
ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಸರಕಾರಿ ಗುಡ್ಡೆಯಲ್ಲಿ ಇರುವ ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಆರೋಗ್ಯ ಸೇವೆಗಾಗಿ ಸರಕಾರಿ ಅಂಬುಲೆನ್ಸ್ ಸೌಲಭ್ಯ ಇಲ್ಲ.
ಉಡುಪಿ ಜಿಲ್ಲಾ ಸೌಹಾರ್ದ ಸಹಕಾರಿ ಸಿಬ್ಬಂದಿಗಳಿಗೆ ಆದ್ಯತೆಯ ಮೇರೆಗೆ ಕೋವಿಡ್ ವ್ಯಾಕ್ಸಿನ್ ನೀಡಲು ಜಿಲ್ಲಾಧಿಕಾರಿಗೆ ಮನವಿ
Posted On: 21-05-2021 10:09AM
ಉಡುಪಿ : ಜಿಲ್ಲೆಯಲ್ಲಿ 130ಕ್ಕಿಂತ ಜಾಸ್ತಿ ಸೌಹಾರ್ದ ಸಹಕಾರಿಗಳು ಕಾರ್ಯನಿರ್ವಹಿಸುತ್ತಿದ್ದು ಸುಮಾರು 200ಕ್ಕಿಂತ ಜಾಸ್ತಿ ಸಿಬ್ಬಂದಿಗಳು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ 2 ಸಂಸ್ಥೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಕರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ . ಬಹುತೇಕ ಎಲ್ಲಾ ಸೌಹಾರ್ದ ಸಹಕಾರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು ಇವರಿಗೆ ಯಾವುದೇ ವ್ಯಾಕ್ಸಿನ್ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸೌಹಾರ್ದ ಒಕ್ಕೂಟ ತಿಳಿಸಿದೆ.
ಕಾಪು : 4 ಅಂಬುಲೆನ್ಸ್ ಲೋಕಾರ್ಪಣೆ.
Posted On: 20-05-2021 02:47PM
ಕಾಪು : ಕೋವಿಡ್ 19 ತುರ್ತು ಸಂದರ್ಭದಲ್ಲಿ ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಇವರು ತಮ್ಮ ಗುರ್ಮೆ ಫೌಂಡೆಶನ್ ಸಂಸ್ಥೆಯ ವತಿಯಿಂದ ಸಾರ್ವಜನಿಕ ಸೇವೆಗೆ 2 ಅಂಬುಲೆನ್ಸ್ ಹಾಗೂ ಅವರ ಕೋರಿಕೆಯ ಮೇರೆಗೆ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ 2 ಅಂಬುಲೆನ್ಸ್ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋಕಾರ್ಪಣೆ ಮಾಡಲಾಯಿತು.
ಹೋಂ ಡಾಕ್ಟರ್ ಫೌಂಡೇಶನ್ ಪಲ್ಸ್ ಆಕ್ಸಿಮೀಟರ್ ಅಭಿಯಾನ
Posted On: 20-05-2021 02:32PM
ಉಡುಪಿ : ಹೋಂ ಡಾಕ್ಟರ್ ಫೌಂಡೇಶನ್ ಉಡುಪಿ ಇದರ ವತಿಯಿಂದ ಬಡ ಕರೋನಾ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ಪಲ್ಸ್ ಆಕ್ಸಿಮೀಟರ್ ಅಭಿಯಾನ ಕಾಯ೯ಕ್ರಮದ ಅಂಗವಾಗಿ ಉಪ್ಪುರು ಗ್ರಾಮ ಪಂಚಾಯತ್ ಗೆ ಪಲ್ಸ್ ಆಕ್ಸಿಮೀಟರ್ ಯಂತ್ರಗಳನ್ನು ಹಸ್ತಾಂತರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲೆಯ ಸಚಿವರು-ಶಾಸಕರ ಮುಖ್ಯಮಂತ್ರಿಗಳ ಭೇಟಿ, ವಿವಿಧ ವಿಷಯಗಳ ಚರ್ಚೆ
Posted On: 20-05-2021 02:28PM
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸಚಿವರು ಶಾಸಕರ ಜೊತೆಗೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪರವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸುಧೀರ್ಘ ಚರ್ಚೆ ನಡೆಸಿದರು.
ಪಿ. ಜಿ. ನಾರಾಯಣ ರಾವ್ ನಿಧನ
Posted On: 20-05-2021 02:18PM
ಪಡುಬಿದ್ರಿ : ದ್ವೈವಾರ್ಷಿಕ ಢಕ್ಕೆಬಲಿ ಖ್ಯಾತಿಯ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದಲ್ಲಿ ಸುಮಾರು 50 ವರ್ಷಗಳ ಕಾಲ ಪಾತ್ರಿಯಾಗಿ ಸೇವೆ ಸಲ್ಲಿಸಿದ ಪಿ. ಜಿ. ನಾರಾಯಣ ರಾವ್ ಇವರು ಇಂದು ಇಹಲೋಕ ತ್ಯಜಿಸಿದ್ದಾರೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದಿಲ್ಲದೆ ಮಿಂಚುತ್ತಿರುವ ಕರಾವಳಿಯ ಬಾಲನಟ ವಿ ಜೆ ಅಮನ್ ಎಸ್ ಕರ್ಕೇರ
Posted On: 20-05-2021 11:12AM
ದಿ ನ್ಯೂಯಾರ್ಕ್ ನಲ್ಲಿ ನಡೆಯುವ ಫಿಲಂ ಫೆಸ್ಟಿವಲ್ ಗೆ ಇಂಡಿಯನ್ ವತಿಯಿಂದ ಆಯ್ಕೆಯಾದ ಎಲ್ಲಾ ಭಾಷೆಗಳ ಚಲನಚಿತ್ರಗಳ ನಡುವೆ ನೀಲಿಹಕ್ಕಿ ಶಿರಸಿ ಭಾಷೆ ಚಿತ್ರ ಕೂಡ ಆಯ್ಕೆಯಾಗಿರುತ್ತದೆ.ನೀಲಿಹಕ್ಕಿಚಿತ್ರದಲ್ಲಿ ಸಿದ್ದ ಎಂಬ ಹೆಸರಿನ ಪಾತ್ರದಾರಿಯಾಗಿ ಮಂಗಳೂರಿನ ಅಮನ್ ಎಸ್. ಕರ್ಕೇರ ಅವರು ಬಾಲನಟನಾಗಿ ಬಣ್ಣಹಚ್ಚಿ ಅದರಲ್ಲೂ ಬೆಸ್ಟ್ ಚೈಲ್ಡ್ ಆರ್ಟಿಸ್ಟ್ ಗೆ ನೊಮಿನೇಟ್ ಆಗಿರುವುದು ಭಾರತ ದೇಶಕ್ಕೆ ಹೆಮ್ಮೆಯ ವಿಷಯವಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದಿಲ್ಲದೆ ಮಿಂಚುತ್ತಿದ್ದರೂ ಇನ್ನೂ ತೆರಮರೆಯಲ್ಲಿರುವ ಕರಾವಳಿಯ ನವಿರಾದ ಕೇಶ ರಾಶಿಯ ಹಾಲುಗೆನ್ನೆ ಸವಿ ಅಕ್ಕರೆಯ ಮುದ್ದುಮುಖದ ಸೌಂದರ್ಯಗಣಿ,ತುಳುನಾಡಿನ ಬಹುಮುಖ ಬಾಲಪ್ರತಿಭೆ,ಬಾಲನಟ, V.J ಅಮನ್.ಎಸ್.ಕರ್ಕೇರ ಅವರ ಸಾಧನೆಯ ಯಶೋಗಾಥೆ.
