Updated News From Kaup

ಲಾಕ್ಡೌನ್ ಸಮಯ ನಮ್ಮನೆ ಕೈತೋಟ ವಾಟ್ಸಾಪ್ ಗ್ರೂಪ್ ಮೂಲಕ ತರಕಾರಿ, ಹೂ, ಹಣ್ಣು, ಆಯುರ್ವೇದೀಯ ಗಿಡಗಳ ಮಾಹಿತಿ ವಿನಿಮಯ

Posted On: 16-05-2021 12:39PM

ಕಾಪು : ಮೊದಲ ಲಾಕ್ಡೌನ್ ಅವಧಿಯಲ್ಲಿ ಸುಮಾರು 700 ಕ್ಕೂ ಅಧಿಕ ಮಕ್ಕಳಿಗೆ ವಾಟ್ಸಾಪ್ ಮೂಲಕ ಕರಕುಶಲ ಕಲೆ, ಮ್ಯಾಜಿಕ್, ಹಾಡು, ನೃತ್ಯ, ಸಾಹಿತ್ಯದ ಬಗ್ಗೆ ಅಭಿರುಚಿ ಬೆಳೆಸಿದ ಪ್ರಥಮ್ಸ್ ಮ್ಯಾಜಿಕ್ ವಲ್ಡ್೯ ಕಟಪಾಡಿ ತಂಡವು ಇದೀಗ ಹೊಸ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ.

ಎರ್ಮಾಳು ಕಡಲ ಕಿನಾರೆಯಲ್ಲಿ ಮೃತ ದೇಹ ಪತ್ತೆ

Posted On: 16-05-2021 12:30PM

ಕಾಪು : ಮಂಗಳೂರು ಎನ್ಎಂಪಿಟಿ ಕಡಲ ತೀರದಲ್ಲಿ ಲಂಗರು ಹಾಕುವ ಹಡಗುಗಳ ಸೇವೆಗಾಗಿ ಬಳಸುವ ಟಗ್ ಪಡುಬಿದ್ರಿ ಕಾಡಿಪಟ್ಣ ಸಮೀಪ ಪತ್ತೆಯಾಗಿತ್ತು. ಮಾಹಿತಿಗಳ ಪ್ರಕಾರ 9 ಜನರು ಇದರಲ್ಲಿದ್ದರು.

ಕಾಪು : ಕರಾವಳಿ ಮತ್ತು ಕೈಪುಂಜಾಲು ಆಶಾಕಾರ್ಯಕರ್ತರಿಗೆ ಕೋವಿಡ್ ಕಿಟ್ ವಿತರಣೆ

Posted On: 16-05-2021 12:18PM

ಕಾಪು : ಕಾಪು ಪುರಸಭಾ ವ್ಯಾಪ್ತಿಯ ಕರಾವಳಿ ಮತ್ತು ಕೈಪುಂಜಾಲು ವಾರ್ಡಿನ ಆಶಾ ಕಾರ್ಯಕರ್ತರಿಗೆ ದಾನಿಗಳ ನೆರವಿನಿಂದ ಕೊರೊನ ನಿಯಂತ್ರಣಕ್ಕಾಗಿ ನೀಡಲ್ಪಟ್ಟ ಆಕ್ಸಿಮೀಟರ್, ಥರ್ಮೊ ಮೀಟರ್, ಸ್ಯಾನಿಟೈಸರ್ ಮತ್ತು ಮಾಸ್ಕ್ ನ್ನು ಕರಾವಳಿ ವಾರ್ಡಿನ ಪುರಸಭಾ ಸದಸ್ಯರಾದ ಕಿರಣ್ ಆಳ್ವ ವಿತರಿಸಿದರು.

ಕಾಪು : ತೌಕ್ತೆ ಚಂಡಮಾರುತದಿಂದ ಕಡಲ ತಡಿಯ ಜನರಲ್ಲಿ ಹೆಚ್ಚಿದ ಆತಂಕ

Posted On: 15-05-2021 07:24PM

ಕಾಪು : ಅರಬ್ಬಿ ಸಮುದ್ರದಲ್ಲಿ ತೌಕ್ತೆ ಚಂಡ ಮಾರುತದ ಪರಿಣಾಮ ಸಮುದ್ರದ ಅಲೆಗಳು ರೌದ್ರಾವತಾರ ತಾಳಿದ್ದು. ಕಾಪು ಲೈಟ್ ಸಮೀಪದಲ್ಲಿ ಸಮುದ್ರ ತೀರ ವಿಸ್ತಾರಗೊಂಡು ಸಮುದ್ರ ತೀರದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಸಮುದ್ರ ವಿಸ್ತಾರಗೊಂಡು ಸಮುದ್ರ ಕೊರೆತದ ಭೀತಿ ಎದುರಾಗಿದ್ದು, ಲೈಟ್ ಹೌಸ್ ನ ಸುತ್ತಲೂ ಸಮುದ್ರದ ನೀರು ಆವರಿಸಿಕೊಂಡಿದೆ. ಕಾಪು ಬೀಚ್ ಸುತ್ತಮುತ್ತಲಿನ ಲೈಟ್ ಹೌಸ್ ವಾರ್ಡ್, ಕೋಟೆ ಕೊಪ್ಪಲ, ಸುಬ್ಬಯ್ಯ ತೋಟ, ಬೈರುಗುತ್ತು ತೋಟ, ಗರಡಿ ವಾರ್ಡ್, ಲಕ್ಷ್ಮೀ ನಗರ ವ್ಯಾಪ್ತಿಯ 30 ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ.

ಶಿರ್ವ ಗ್ರಾಮ ಪಂಚಾಯತ್ ವತಿಯಿಂದ ಕೋವಿಡ್ 19 ಜಾಗೃತಿ ಪ್ರಚಾರ ವಾಹನಕ್ಕೆ ಚಾಲನೆ

Posted On: 15-05-2021 06:03PM

ಕಾಪು : ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೋವಿಡ್ 19 ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವಂತೆ ಹಾಗೂ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರಚಾರ ವಾಹನಕ್ಕೆ ಶಿರ್ವ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಕೆ. ಆರ್. ಪಾಟ್ಕರ್ ರವರು ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.

ಕಟಪಾಡಿ : ಗ್ರಾಮ ಪಂಚಾಯತಿ ಮತ್ತು ಲಯನ್ಸ್ ಕ್ಲಬ್ ವತಿಯಿಂದ ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಗತ್ಯ ವಸ್ತುಗಳ ಹಸ್ತಾಂತರ

Posted On: 15-05-2021 04:30PM

ಕಾಪು : ಕಟಪಾಡಿ ಗ್ರಾಮ ಪಂಚಾಯತಿ ಮತ್ತು ಲಯನ್ಸ್ ಕ್ಲಬ್ ಕಟಪಾಡಿ ವತಿಯಿಂದ ಮೂಡಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 6 ಪಲ್ಸ್ ಆಕ್ಸಿಮೀಟರ್ ಮತ್ತು ಬ್ಲೀಚಿಂಗ್ ಪೌಡರ್, ಸ್ಯಾನಿಟೈಸರ್ ಇರುವ 25 ಕಿಟ್ ಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶೈನಿಯವರಿಗೆ ಹಸ್ತಾಂತರಿಸಲಾಯಿತು.

ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ : ದಿವ್ಯ ಗ್ರೂಪ್ ಬೆಂಗಳೂರು ವತಿಯಿಂದ ವಿಟಮಿನ್ ಸಿ ಮಾತ್ರೆ ವಿತರಣೆ

Posted On: 15-05-2021 02:32PM

ಕಾಪು : ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅವಶ್ಯಕತೆಯಿದ್ದ ವಿಟಮಿನ್ ಸಿ ಮಾತ್ರೆಯನ್ನು ದಿವ್ಯ ಗ್ರೂಪ್ ಬೆಂಗಳೂರಿನ ಸುಂದರ್ ಕೋಟ್ಯಾನ್ ಸಹಕಾರದೊಂದಿಗೆ, ಕಾಪು ಪುರಸಭೆ ಅಧ್ಯಕ್ಷರಾದ ಅನಿಲ್ ಕುಮಾರ್ ನೇತೃತ್ವದಲ್ಲಿ ವಿತರಿಸಲಾಯಿತು.

ಹಿರಿಯರಿಗೆ ಆಸರೆಯಾದ ಭಗವತಿ ಗ್ರೂಪ್ ಪಡುಬಿದ್ರಿ

Posted On: 12-05-2021 09:04PM

ಪಡುಬಿದ್ರಿ : ಕೋವಿಡ್ - 19 ಎರಡನೇ ಆವೃತ್ತಿ ದುಷ್ಪರಿಣಾಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಧಿಸಲ್ಪಟ್ಟ ಲಾಕ್ ಡೌನ್ ನಿಂದಾಗಿ ಜನಸಮಾನ್ಯರ ಪರಿಸ್ಥಿತಿ ಕಂಗಲಾಗಿದ್ದು, ಈ ನಿಟ್ಟಿನಲ್ಲಿ ಒಂದಷ್ಟು ಸೇವಾಯೋಜನೆಗಳನ್ನು ಕೈಗೆತ್ತುವ ಜವಾಬ್ದಾರಿ ಹೊತ್ತ ಪಡುಬಿದ್ರಿ ಭಗವತಿ ಗ್ರೂಪ್ ನೇತೃತ್ವದಲ್ಲಿ ಸಹೃದಯಿ ದಾನಿಗಳಾದ ನಮ್ಮ ಶ್ರೀ ಅನುರಾಧ ಉಚ್ಚಿಲ ಮತ್ತು ಶ್ರೀ ಮಂಜುನಾಥ ಶೆಣೈ ಇವರ ಸಹಕಾರದಿಂದ ಎಲ್ಲೂರು ನಿವಾಸಿ ಹಿರಿಯರಾದ ಶ್ರೀ ನಾರಾಯಣ ದೇವಾಡಿಗ ಮತ್ತು ಶ್ರೀಮತಿ ಬೇಬಿ ದೇವಾಡಿಗ ದಂಪತಿಗಳಿಗೆ ಮನೆಗೆ 4 ತಿಂಗಳ ಅವಧಿಗೆ ಅವಶ್ಯಕವಾದ ಆಹಾರ ಸಮಾಗ್ರಿಗಳನ್ನು ನೀಡಿ ಅವರಿಗೆ ಧೈರ್ಯ ತುಂಬಲಾಯಿತು.

ಮೂಳೂರಿನಲ್ಲಿ ಅಕ್ರಮ‌ ಕಸಾಯಿಖಾನೆಗೆ ದಾಳಿ, ಆರೋಪಿಗಳ ಸೆರೆ

Posted On: 12-05-2021 09:16AM

ಕಾಪು : ಮೂಳೂರು ಸುನ್ನಿ ಸೆಂಟರ್ ಸಮೀಪದ ಅಕ್ರಮ‌‌ ಕಸಾಯಿಖಾನೆಗೆ ದಾಳಿ ನಡೆಸಿದ ಪೊಲೀಸರು ದನ ಕರುಗಳನ್ನು ಕದ್ದು ತಂದು ಮಾಂಸ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿ, ನಾಲ್ಕು ಕರುಗಳನ್ನು ರಕ್ಷಿಸಿದ್ದಾರೆ.

ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಪು ಶಾಸಕರ ನೇತೃತ್ವದಲ್ಲಿ ಕ್ಷೇತ್ರದ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Posted On: 11-05-2021 08:17PM

ಕಾಪು : ಶಾಸಕ ಲಾಲಾಜಿ ಆರ್ ಮೆಂಡನ್ ಇಂದು ಕಾಪು ಶಾಸಕರ ಕಚೇರಿಯಲ್ಲಿ ಕಾಪು ಕ್ಷೇತ್ರದ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ರಾಜ್ಯದಲ್ಲಿ ಕೋವಿಡ್ 19 ನಿಮ್ಮಿತ್ತ ಲಾಕ್ ಡೌನ್ ಜಾರಿಯಲಿದ್ದು ಈ ಕುರಿತು ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಅಗತ್ಯ ವಸ್ತು ಖರೀದಿಸುವವರಿಗೆ, ಹಾಲು ಹಾಕುವವರಿಗೆ, ಕೃಷಿ ಉತ್ಪನ್ನಗಳ ಮಾರಾಟಗಾರರಿಗೆ, ಮೀನು ಮಾರಾಟಕ್ಕೆ, ಮಲ್ಲಿಗೆ ಮಾರಾಟಕ್ಕೆ, ಪಡಿತರ ಸಾಮಾನುಗಳನ್ನು ತೆಗೆದುಕೊಂಡು ಹೋಗುವವರಿಗೆ 10 ಒಳಗೆ ಕಾರ್ಯನಿರ್ವಹಿಸುವಂತೆ ಸೂಚಿಸಬೇಕಾಗಿ ಹಾಗೂ ಅವರುಗಳಿಗೆ ಯಾವುದೇ ರೀತಿಯ ತೊಂದರೆ ಮಾಡದಂತೆ ಜನ ಗುಂಪುಗೂಡದಂತೆ ನೋಡಿಕೊಳ್ಳುವಂತೆ ಮಾನ್ಯ ಶಾಸಕರು ಸೂಚಿಸಿದರು.