Updated News From Kaup

ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಬೆಳ್ಮಣ್ಣು : ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೋತ್ಸವ, ಸಭಾಕಾರ್ಯಕ್ರಮ, ಸನ್ಮಾನ

Posted On: 06-04-2021 11:30AM

ಕಾಪು : ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘ ಬೆಳ್ಮಣ್ಣು ಸಭಾಭವನದಲ್ಲಿ ಏಪ್ರಿಲ್ 11, ಆದಿತ್ಯವಾರ ಪೂರ್ವಾಹ್ನ ಘಂಟೆ 9.00ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೋತ್ಸವ, ಸಭಾಕಾರ್ಯಕ್ರಮ, ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ : ಪಕ್ಷಿ ರಕ್ಷಿಸಿ ಅಭಿಯಾನ

Posted On: 05-04-2021 09:50PM

ಉಡುಪಿ : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ವತಿಯಿಂದ ಹಕ್ಕಿಗಳಿಗೆ ಕಾಳು ನೀರು ಒದಗಿಸುವ ಪಕ್ಷಿ ರಕ್ಷಿಸಿ ಅಭಿಯಾನ ಇಂದು ಅಜ್ಜರಕಾಡು ಭುಜಂಗ ಪಾರ್ಕ್ ಪರಿಸರದಲ್ಲಿ ನಡೆಯಿತು. ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮನುಷ್ಯನ ರಕ್ಷಣೆಗೆ ಬೇರೆ ಬೇರೆ ಇಲಾಖೆಗಳಿವೆ. ಆದರೆ ನಿಸರ್ಗದಲ್ಲಿ ಅತ್ಯಂತ ಸುಂದರ ಜೀವಿಗಳಾದ ಪಕ್ಷಿ ಸಂಕುಲವನ್ನು ರಕ್ಷಿಸುವ ಮಹತ್ವದ ಜವಾಬ್ದಾರಿ ಬುದ್ಧಿವಂತ ಜೀವಿಗಳಾದ ನಮ್ಮೆಲ್ಲರ ಮೇಲಿದೆ. ಅವುಗಳ ರಕ್ಷಣೆ ಮತ್ತು ಸಂತತಿ ವೃದ್ಧಿಯಾಗುವಂತೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ನಿಸರ್ಗವನ್ನು ರಕ್ಷಿಸಿದರೆ ನಿಸರ್ಗವೇ ನಮ್ಮನ್ನು ರಕ್ಷಿಸುತ್ತದೆ ಎಂದರು.

ಕುಲಾಲ ಸಂಘ ಪೆರ್ಡೂರು ಹಾಗೂ ಕಾಪು ಕುಲಾಲ ಯುವ ವೇದಿಕೆಯಿಂದ ವೈದ್ಯಕೀಯ ಚಿಕಿತ್ಸೆಗೆ ನೆರವು

Posted On: 05-04-2021 10:44AM

ಕಾಪು : ಮಹೇಶ ಕುಲಾಲ್ ಗೋರೆಲು ಇವರ ಶಸ್ತ್ರಚಿಕಿತ್ಸೆ ಗೆ ನೆರವು ನೀಡುವಂತೆ ಕುಲಾಲ ಸಂಘ ಪೆರ್ಡೂರು(ರಿ) ಮತ್ತು ಕುಲಾಲ ಯುವವೇದಿಕೆ ಕಾಪು ಘಟಕ ಮಾಡಿಕೊಂಡ ವಾಟ್ಸಾಪ್ ಮನವಿಗೆ ಸ್ಪಂದಿಸಿ ಒಟ್ಟುಗೂಡಿದ ನಗದು ಮೊತ್ತವನ್ನು ಏಪ್ರಿಲ್ 4, ಆದಿತ್ಯವಾರ ಕುಲಾಲ ಸಂಘದ ಕಾರ್ಯಕಾರಿ ಮಂಡಳಿಯ ಮಾಸಿಕ ಸಭೆಯಲ್ಲಿ ಅವರ ಮನೆಯವರಿಗೆ ಅಧ್ಯಕ್ಷರಾದ ಐತು ಕುಲಾಲ್ ಕನ್ಯಾನ ಮತ್ತು ಇತರ ಪದಾಧಿಕಾರಿಗಳ ಸಮ್ಮುಖದಲ್ಲಿ ಹಸ್ತಾ0ತರಿಸಲಾಯಿತು.

ಕಾಪು : ಸೂರಜ್ ಮತ್ತು ವಿವೇಕ್ ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್ ತರಬೇತಿಗೆ ಆಯ್ಕೆ

Posted On: 04-04-2021 05:13PM

ಕಾಪು : ಭಾರತೀಯ ಸಿ ಆರ್ ಪಿ ಎಫ್ (ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್) ತರಬೇತಿಗೆ ಕಾಪುವಿನ ಯುವಕರಾದ ಸೂರಜ್ ಮತ್ತು ವಿವೇಕ್ ಆಯ್ಕೆಯಾಗಿ, ತರಬೇತಿಗೆ ತೆರಳಿರುತ್ತಾರೆ.

ಕಾಪುವಿನಲ್ಲಿ ಉದ್ಘಾಟನೆಗೊಂಡ ಬಲೆ ತುಲು ಲಿಪಿ ಕಲ್ಪುಗ ತರಬೇತಿ ಕಾರ್ಯಾಗಾರ

Posted On: 04-04-2021 05:04PM

ಕಾಪು : ತುಳು ಭಾಷೆಯನ್ನು ಉಳಿಸಿ ಬೆಳೆಸಬೇಕಾದ ಅನಿವಾರ್ಯತೆಯಿದೆ. ನಮ್ಮ ಭಾಷೆಯನ್ನು ನಮ್ಮೂರಿನ ಫಲಕಗಳಲ್ಲಿ ಅಳವಡಿಸಬೇಕಾಗಿದೆ. ತುಳು ಲಿಪಿ ಕಲಿಕೆಯು ನಿರಂತರತೆಯನ್ನು ಕಾಯ್ದುಕೊಳ್ಳಬೇಕಾಗಿದೆ. ಪ್ರತಿ ಶಾಲೆಯಲ್ಲಿ ವಾರದಲ್ಲಿ ಒಂದು ದಿನವಾದರೂ ತುಳು ಲಿಪಿ ಕಲಿಕೆಯನ್ನು ಅಳವಡಿಸುವ ನಿಟ್ಟಿನಲ್ಲಿ ಯೋಚಿಸಬೇಕಾಗಿದೆ ಎಂದು ಕಾಪು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ಕಾಪು ಇದರ ಅಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ ಹೇಳಿದರು. ಅವರು ಕಾಪು ಸಿ.ಎ ಬ್ಯಾಂಕ್ ಕಟ್ಟಡದ ಭಾಸ್ಕರ ಸೌಧ ಸಭಾಂಗಣದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಳುನಾಡ್ (ರಿ.), ಜೇಸಿಐ ಕಾಪು, ಯುವವಾಹಿನಿ (ರಿ.) ಕಾಪು ಘಟಕ, ನಮ್ಮ ಕಾಪು ನ್ಯೂಸ್ ಸಂಯುಕ್ತ ಆಶ್ರಯದಲ್ಲಿ ಜರಗಿದ ಬಲೆ ತುಲು ಲಿಪಿ ಕಲ್ಪುಗ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಬಹಳ ದಿನಗಳಿಂದ ‌ಹಲವರನ್ನು ಕಾಡಿದ ವೆರಿಕೋಸ್ ವೇಯ್ನ್ ಗುಣಮುಖವಾಗುವ ಕಾಲ ಬಂದಿದೆ ಇದೀಗ ಮಂಗಳೂರಿನಲ್ಲಿ....ವೆರಿಕೋಸ್ ವೇಯ್ನ್ ಗೆ ಆಪರೇಷನ್ ರಹಿತ ಚಿಕಿತ್ಸೆ

Posted On: 03-04-2021 02:17PM

ಬಹಳ ದಿನಗಳಿಂದ ಹಲವರನ್ನು ಕಾಡುತ್ತಿರುವ ವೆರಿಕೋಸ್ ವೇಯ್ನ್ ಗೆ ಆಪರೇಷನ್ ರಹಿತ ಚಿಕಿತ್ಸೆಯ ಮೂಲಕ ಗುಣಮುಖವಾಗುವ ಕಾಲ ಬಂದಿದೆ. ಹೆಚ್ಚಾಗಿ ನಿಂತುಕೊಂಡು ಅಥವಾ ಕುಳಿತುಕೊಂಡು ಕೆಲಸ ಮಾಡುವುದು, ಕಲಬೆರಕೆ ಆಹಾರ, ಅತಿಯಾದ ಮಾಂಸ ಸೇವನೆ ಮಾಡುವವರಿಗೆ ಅಥವಾ ಗರ್ಭಿಣಿಯರಲ್ಲಿ ಈ ಖಾಯಿಲೆ ಹೆಚ್ಚು ಕಂಡುಬರುತ್ತದೆ. ವಂಶ ಪಾರಂಪರ್ಯವಾಗಿಯೂ ಈ ಕಾಯಿಲೆ ಬರುತ್ತದೆ ಎನ್ನುವುದನ್ನು ವೈದ್ಯರ ಅಭಿಪ್ರಾಯವಾಗಿದೆ.

ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಮುಲ್ಕಾಡಿ : 29 ನೇ ವಾರ್ಷಿಕ ಭಜನಾ ಮಂಗಲೋತ್ಸವ

Posted On: 03-04-2021 01:13PM

ಕಾಪು : ಮುಲ್ಕಾಡಿ ಕೋಡಿ ಪಂಜಿಮಾರು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ 29 ನೇ ವಾರ್ಷಿಕ ಭಜನಾ ಮಂಗಲೋತ್ಸವವು ಏಪ್ರಿಲ್ 3, ಶನಿವಾರ ಸಂಜೆ 4ರಿಂದ ರಾತ್ರಿ 8:30 ರವರೆಗೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್‌ : ಫುಡ್ ಕೋರ್ಟ್, ಕಾಯಕಿಂಗ್, ಬೋಟಿಂಗ್ ವ್ಯವಸ್ಥೆಗಳ ಉದ್ಘಾಟನೆ

Posted On: 02-04-2021 07:52PM

ಕಾಪು : ಉಡುಪಿ ಜಿಲ್ಲೆಯ ಜನಾಕರ್ಷಣೆಯ ತಾಣ ಪಡುಬಿದ್ರಿಯ ಬ್ಲೂ ಫ್ಲ್ಯಾಗ್ ಬೀಚ್‌ಗೆ ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಭೇಟಿ ನೀಡಿ ಫುಡ್ ಕೋರ್ಟ್, ಪ್ರವಾಸೀ ಆಕರ್ಷಣೆಗಾಗಿ ಆರಂಭಿಸಲಾದ ಕಾಯಕಿಂಗ್, ಬೋಟಿಂಗ್ ವ್ಯವಸ್ಥೆಗಳನ್ನು ಉದ್ಘಾಟಿಸಿ, ಕಾಮಿನೀ ಹೊಳೆಯಲ್ಲಿ ಕಾಯಕಿಂಗ್ ಅನುಭವವನ್ನು ಆನಂದಿಸಿದರು.

ಏಪ್ರಿಲ್ 3 : ಇನ್ನಂಜೆಯ ವಿಠೋಭ ಭಜನಾ ಮಂಡಳಿ ವಾರ್ಷಿಕ ವರ್ಧಂತ್ಯೋತ್ಸವ, ಆಶ್ಲೇಷಾ ಬಲಿ, ಭಜನಾ ಮಂಗಳೋತ್ಸವ

Posted On: 02-04-2021 05:36PM

ಕಾಪು : ಇನ್ನಂಜೆ ಗೋಳಿಕಟ್ಟೆಯ ಶ್ರೀ ವಿಠೋಭ ಭಜನಾ ಮಂಡಳಿ (ರಿ.) ಇದರ ವಾರ್ಷಿಕ ವರ್ಧಂತ್ಯೋತ್ಸವ, ಆಶ್ಲೇಷಾ ಬಲಿ, ಭಜನಾ ಮಂಗಳೋತ್ಸವ ಮತ್ತು ಅನ್ನಸಂತರ್ಪಣೆಯು ಏಪ್ರಿಲ್ 3, ಶನಿವಾರ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತರಾದ ಸೆನ್ ಅಪರಾಧ ಪೋಲಿಸ್ ಠಾಣೆ ಉಡುಪಿಯ ರಾಮಚಂದ್ರ ನಾಯಕ್

Posted On: 02-04-2021 04:43PM

ಕಾಪು : ಪೊಲೀಸ್ ಇಲಾಖೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಸೆನ್ ಅಪರಾಧ ಪೊಲೀಸ್ ಠಾಣೆ ಉಡುಪಿಯ ಪೊಲೀಸ್ ನಿರೀಕ್ಷಕರಾಗಿರುವ ರಾಮಚಂದ್ರ ನಾಯಕ್ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತರಾಗಿದ್ದಾರೆ.