Updated News From Kaup
ಕಲ್ಯಾಣಪುರ ರೋಟರಿ ಕ್ಲಬ್ ಸದಸ್ಯರ ಕುಟುಂಬ ಸಮ್ಮಿಲನ ಆಟಿದ ಗಮ್ಜಾಲ್ ವಿಶೇಷ ಕಾರ್ಯಕ್ರಮ
Posted On: 02 Aug 2021, 02:23 PM
ಉಡುಪಿ : ಕಲ್ಯಾಣಪುರ ರೋಟರಿ ಕ್ಲಬ್ ಸದಸ್ಯರ ಕುಟುಂಬ ಸಮ್ಮಿಲನ ಆಟಿದ ಗಮ್ಜಾಲ್ ವಿಶೇಷ ಕಾರ್ಯಕ್ರಮ ಉಡುಪಿಯ ಮೂಡುಬೆಟ್ಟು ಗ್ರೀನ್ ಡೇಲ್ ನಿವೇಶನದಲ್ಲಿ ನಡೆಯಿತು. ಅಧ್ಯಕ್ಷ ಶಂಭು ಶಂಕರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲೆ 3182 ಇದರ ಮಾಜಿ ಗವರ್ನರ್ ರಾಜಾರಾಂ ಭಟ್, ವಲಯ 11ರ ನಿಕಟಪೂರ್ವ ಸಹಾಯಕ ಗವರ್ನರ್ ಡಾ. ನಂದಕಿಶೋರ್, ವಲಯ 3ರ ನಿಕಟಪೂರ್ವ ಸಹಾಯಕ ಗವರ್ನರ್ ದೇವದಾಸ್ ಶೆಟ್ಟಿಗಾರ್, ಕಾರ್ಯದರ್ಶಿ ಪ್ರಕಾಶ್, ಸ್ಥಳಾವಕಾಶ, ಆಯೋಜನೆಯಲ್ಲಿ ಸಹಕಾರ ನೀಡಿದ ಬ್ಯಾಪ್ಟಿಸ್ಟ್ ಡಯಾಸ್, ಅನಿತಾ ಬ್ಯಾಪ್ಟಿಸ್ಟ್ ಡಯಾಸ್ ಉಪಸ್ಥಿತರಿದ್ದರು. ಆನಂದ ಶೆಟ್ಟಿ ಹಾಗೂ ರೀನಾ ಆನಂದ ಶೆಟ್ಟಿ ಆಟಿಯ ಆಹಾರ, ಆಚರಣೆ, ಸಂಪ್ರದಾಯಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ವಿಜಯ ಪಾಣಾರ ತಂಡದಿಂದ ಆಟಿಕಳಂಜ, ಪಾರ್ದನಗಳ ಪ್ರಾತ್ಯಕ್ಷಿಕೆ ನಡೆಯಿತು. ರೋ. ಗಿರೀಶ್ ಹಾಗೂ ರೋ. ರಾಮಕೃಷ್ಣ ಆಚಾರ್ ಕಾರ್ಯಕ್ರಮ ನಿರೂಪಿಸಿದರು. ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ, ಸಹಾಯಕ ಗವರ್ನರ್ ಸೇವಾವಧಿಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ರೋ. ದೇವದಾಸ್ ಶೆಟ್ಟಿಗಾರ್, ಕರಾವಳಿಯ ಪ್ರಸಿದ್ಧ ದೈವಾರಾಧಕ, ನಾಡಿನಾದ್ಯಂತ ಪಾಡ್ದನಗಳ ಮಹತ್ವವನ್ನು ಪ್ರಸಾರ ಮಾಡುತ್ತಿರುವ ವಿಜಯ ಪಾಣಾರ ತೋನ್ಸೆ ಇವರನ್ನು ಸನ್ಮಾನಿಸಲಾಯಿತು. ಇಂದಿಗೂ ಹಸಿರು ಕಾಯಕದಲ್ಲಿ ತೊಡಗಿ, ಕೃಷಿ ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿರುವ ರಾಜಾರಾಂ ಭಟ್, ಅಲೆನ್ ಲೂಯಿಸ್, ಬ್ಯಾಪ್ಟಿಸ್ಟ್ ಡಯಾಸ್, ವಿಜಯ ಮಾಯಾಡಿ, ಸದಾನಂದ ನಾಯಕ್ ಇವರನ್ನು ಗೌರವಿಸಲಾಯಿತು. 40ಕ್ಕೂ ವಿವಿಧ ಬಗೆಯ ಆಟಿ ಖಾದ್ಯಗಳ ಪ್ರದರ್ಶನ ನಡೆಯಿತು. ಕೆಸರು ಗದ್ದೆಯ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.
ಗೋವಿಗಾಗಿ ಮೇವು 2021-22 ಅಭಿಯಾನಕ್ಕೆ ಚಾಲನೆ
Posted On: 01 Aug 2021, 05:47 PM
ಉಡುಪಿ : ಪೇಜಾವರ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಕಳೆದ ವರ್ಷ ಆರಂಭಗೊಂಡ ಗೋವಿಗಾಗಿ ಮೇವು ಅಭಿಯಾನಕ್ಕೆ ಮಾರ್ಚ್ ತನಕ 300 ಕ್ಕೂ ಹೆಚ್ಚು ಸಂಘಟನೆ ಗಳು ಭಾಗಿಯಾಗಿ ಅಭಿಯಾನ ಚಿಕ್ಕಮಂಗಳೂರು ಜಿಲ್ಲೆಗೂ ಹಬ್ಬಿ ಯಶಸ್ವಿಯಾಯಿತು. ಈ ವರ್ಷದ ಗೋವಿಗಾಗಿ ಮೇವು ಕಾರ್ಯಕ್ರಮಕ್ಕೆ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಗೋವಿಗೆ ಮೇವನ್ನು ನೀಡುವುದರ ಮೂಲಕ ಅಧಿಕೃತ ಚಾಲನೆ ನೀಡಿದರು. ಈ ಸಂದಭ೯ದಲ್ಲಿ ಮಾತನಾಡಿದ ಅವರು ಗೋವಿಗಾಗಿ ಮೇವು ಅಭಿಯಾನದ ತಂಡ ಜಿಲ್ಲೆಯಲ್ಲೇ ಪಾದರಸದಂತೆ ಕೆಲಸ ಮಾಡಿ ಅನೇಕ ಸಂಘಸಂಸ್ಥೆಗಳಿಗೆ ಪ್ರೇರೇಪಿಸುತ್ತಿರುವುದು ನೈಜ ಹಿಂದುತ್ವದ ಸಂಕೇತ ಅಭಿಯಾನ ರಾಜ್ಯ ವ್ಯಾಪಿ ಹರಡಲಿ ಎಂದರು. ಪ್ರಾಸ್ತಾವಿಕ ಮಾತನಾಡಿದ ಗೋವಿಗಾಗಿ ಮೇವು ಅಭಿಯಾನದ ಸ್ಥಾಪಕ ಸಂಚಾಲಕ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ಜಿಲ್ಲೆಯ ಎಲ್ಲಾ ಸಂಘಸಂಸ್ಥೆಗಳನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತೇವೆ. ಅಭಿಯಾನದಲ್ಲಿ ಕೈ ಜೋಡಿಸುವಂತೆ ಕರೆ ನೀಡಿದರು. ಬಂಟರ ಸಂಘ ಬೆಂಗಳೂರು ಕೋಶಾಧಿಕಾರಿ ದೀಪಕ್ ಶೆಟ್ಟಿ ಬಾರಕೂರು ಮಾತನಾಡಿ ಸಂಘಟಿತ ಯುವಕರ ಗೋಪ್ರೇಮ ,ಗೋಸೇವೆ ಇತರ ಸಂಘಟನೆ ಗೆ ಮಾದರಿಯಾಗಲಿ ಎಂದರು. ಆರೂರು ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ರಾಜೀವ ಕುಲಾಲ್, ಸಾಮಾಜಿಕ ಕಾಯ೯ಕತ೯ ರಾಘವೇಂದ್ರ ಪ್ರಭು, ಕರ್ವಾಲು, ಕೆಂಜೂರು ಲಯನ್ಸ್ ಕ್ಲಬ್ ಅಧ್ಯಕ್ಷೆ ಜಯಶ್ರೀ ಶೆಟ್ಟಿ, ವಿಕಾಸ್ ಶೆಟ್ಟಿ ಉಡುಪಿ, ಗೋವಿಗಾಗಿ ಮೇವು ಕೋಟ ವಲಯಾಧ್ಯಕ್ಷ ಪ್ರದೀಪ್ ಪೂಜಾರಿ, ಮಹಿಳಾ ಅಧ್ಯಕ್ಷೆ ವಿದ್ಯಾ ಸಾಲ್ಯಾನ್, ಜಿಲ್ಲಾ ಸಮಿತಿಯ ನಾಗೇಂದ್ರ ಪುತ್ರನ್, ಪ್ರದೀಪ್ ಪಡುಕೆರೆ, ಶಿವರಾಮ್ ಬಂಗೇರ, ಕೋಟ, ಸ್ಪಂದನ ಯುವಕ ಮಂಡಲ ಆರೂರು,ಮಹಾಲಿಂಗೇಶ್ವರ ಭಜನಾ ಮಂಡಳಿ ಕೂರಾಡಿ, ಪಾಂಚಜನ್ಯ ಯುವಕ ಮಂಡಲ ಕೋಟ, ನೀತಾ ಪ್ರಭು ಗೆಳೆಯರ ಬಳಗ ಹಿರಿಯಡ್ಕ, ಗೋವಿಗಾಗಿ ಮೇವು ಕೋಟ - ಸಾಲಿಗ್ರಾಮ ವಲಯ ತಂಡ, ಸಂಘಟನೆಗಳು ಭಾಗವಹಿಸಿದ್ದವು. ಶಿಕ್ಷಕ ಸಂತೋಷ್ ಶೆಟ್ಟಿ ಎಳ್ಳಂಪಳ್ಳಿ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಸಹಾಯದ ನಿರೀಕ್ಷೆಯಲ್ಲಿ ಸರಸ್ವತಿ
Posted On: 01 Aug 2021, 10:02 AM
ಕಾಪು : ಕುರ್ಕಾಲು ಗ್ರಾಮದ ಕುಂಜಾರುಗಿರಿ ನಿವಾಸಿ ಶಂಕರ್ ಅವರ ಧರ್ಮಪತ್ನಿ ಶ್ರೀಮತಿ ಸರಸ್ವತಿ ಅವರು ಮನೆ ಕೆಲಸ ಮಾಡುತ್ತಿದ್ದು ಅವರಿಗೆ ಸುಮಾರು 25 ವರ್ಷವಾಗಿರುತ್ತದೆ. ಒಂದು ಹೆಣ್ಣು ಮಗುವಿದ್ದು ಸರಸ್ವತಿ ಅವರಿಗೆ 2 ವರ್ಷದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರಿಗೆ ವಾರಕ್ಕೆ ಮೂರು ಬಾರಿ ಡಯಾಲಿಸಿಸ್ ಮಾಡಬೇಕಾಗಿದೆ. ಸದ್ಯ ಈಗಿರುವ ಪರಿಸ್ಥಿತಿಯಲ್ಲಿ ಡಯಾಲಿಸಿಸ್ ಮಾಡಲು ಕಷ್ಟವಾಗಿದೆ. ಪರಿಸ್ಥಿತಿ ಚಿಂತಾಜನಕವಾಗಿದ್ದು ಜೀವ ಉಳಿಸಿಕೊಳ್ಳಲು ಪತಿಯ ಕಿಡ್ನಿಯನ್ನು ಪತ್ನಿಗೆ ಬದಲಾಯಿಸಲು ನುರಿತ ವೈದ್ಯಾಧಿಕಾರಿಗಳು ಸುಮಾರು 7.50 ಲಕ್ಷ ಖರ್ಚು ವೆಚ್ಚದ ಬಿಲ್ ನೀಡಿದ್ದಾರೆ. ಶಂಕರ್ ಅವರು ನಿತ್ಯ ಕಲ್ಲು ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದಾರೆ. ಆದ್ದರಿಂದ ಅಷ್ಟು ಖರ್ಚು ನಿಭಾಯಿಸಲು ಸಾಧ್ಯವಿಲ್ಲದ ಕಾರಣ ತಾವೆಲ್ಲರೂ ಚಿಕಿತ್ಸೆಗಾಗಿ ಧನಸಹಾಯ ಮಾಡಬೇಕೆಂದು ಈ ಮೂಲಕ ವಿನಂತಿಸಿದ್ದಾರೆ. ಧನ ಸಹಾಯ ಮಾಡುವವರು : ಸ್ಥಳ:ಕುಂಜಾರುಗಿರಿ ಬ್ಯಾಂಕ್ ಖಾತೆ ವಿವರ: NAME:SARASWATHI BANK NAME: CANARA BANK A/C NO:-110002152050 IFSC CODE:-CNRB0010195
ಶಿರ್ವ : ನಿವೃತ್ತರಿಗೆ ಶುಭವಿದಾಯ
Posted On: 31 Jul 2021, 05:18 PM
ಕಾಪು : ಒಂದು ಸಂಸ್ಥೆಯ ಸವ೯ತೋಮುಖ ಬೆಳವಣಿಗೆಯಲ್ಲಿ ಪ್ರತಿಯೊಬ್ಬರ ಸೇವೆಯು ಅತ್ಯಂತ ಅಮೂಲ್ಯ ಹಾಗೂ ಉಪಯುಕ್ತವಾದುದು ವಗ೯ವಾರು ಕತ೯ವ್ಯ ಅನ್ನುವುದು ಜವಾಬ್ದಾರಿಯ ಹಿನ್ನೆಲೆಯಲ್ಲಿ ಇದ್ದರೂ ಕೂಡ ಪ್ರತಿಯೊಬ್ಬರ ಸೇವೆಯೂ ಪರಿಗಣಿತ ಹಾಗೂ ಶ್ರೇಷ್ಠ ವಾದುದು ಎಂದು ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತಿ ವಂದನೀಯ ಧರ್ಮಗುರುಗಳಾದ ಡೆನಿಸ್ ಡೇಸಾ ಸಂತ ಮೇರಿ ಮಹಾವಿದ್ಯಾಲಯದ ಆಡಳಿತ ಸಿಬ್ಬಂದಿಯಾದ ಅಲ್ವಿರಾ ಕ್ಲೇರೆನ್ಸ್ ಫೆನಾ೯ಂಡಿಸ್ ರವರ ಬೀಳ್ಕೊಡುಗೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಾಂಶುಪಾಲರಾದ ಡಾ.ಹೆರಾಲ್ಡ್ ಮೋನಿಸ್ ರವರು ಅತಿಥಿಗಳನ್ನು ಸ್ವಾಗತಿಸಿದರು. ಆಡಳಿತ ಮಂಡಳಿಯ ಪರವಾಗಿ ಡೊರಿನ್ ಹಾಗೂ ಅಧ್ಯಾಪಕ ವೃಂದದ ಪರವಾಗಿ ರೀಮಾ ಲೋಬೊ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಲೊರೆನ್ಸ್ ಸನ್ಮಾನ ಪತ್ರ ವಾಚಿಸಿದರು. ಕಾಲೇಜು ಮತ್ತು ಆಡಳಿತ ಮಂಡಳಿಯ ವತಿಯಿಂದ ನಿವೃತ್ತರಾದ ಅಲ್ವಿರಾ ರವರನ್ನು ಶಾಲು ಹೊದಿಸಿ ಹಾರ ಹಾಕಿ ಫಲಫುಷ್ಪ ನೀಡಿ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ನಿದೇ೯ಶಕಿ ಯಶೋದಾ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ದಾಕ್ಷಾಯಿಣಿ ಉಪಸ್ಥಿತರಿದ್ದರು. ಈ ಸಂದರ್ಭ ನಿವೃತ್ತ ಅಧ್ಯಾಪಕ ಮತ್ತು ಅಧ್ಯಾಪಕೇತರ ಬಂಧುಗಳು, ಆಡಳಿತ ಮಂಡಳಿಯವರು, ಬೋಧಕ, ಬೋಧಕೇತರ ಬಂಧುಗಳು ಉಪಸ್ಥಿತರಿದ್ದರು. ತನೂಜ, ದಿವ್ಯಾಶ್ರೀ, ಪದ್ಮಾಸಿನಿ ಪ್ರಾಥಿ೯ಸಿ, ಶಮಿ೯ಳ ಕಾರ್ಯಕ್ರಮ ನಿರೂಪಿಸಿ, ಪ್ಲೋರಿನ್ ವಂದಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಅಧ್ಯಾಪಕ ಮತ್ತು ಅಧ್ಯಾಪಕೇತರ ಬಂಧುಗಳು,ಆಡಳಿತ ಮಂಡಳಿಯವರು,ಬೋಧಕ ಬೋಧಕೇತರ ಬಂಧುಗಳು ಉಪಸ್ಥಿತರಿದ್ದರು.
ಪಡುಬಿದ್ರಿ : ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಜಂಟಿ ಸಹಯೋಗದಲ್ಲಿ ಆಟಿದ ಪಂಥ
Posted On: 31 Jul 2021, 04:59 PM
ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ ಜಂಟಿ ಸಹಯೋಗದಲ್ಲಿ ನಾಳೆ (1-8-21) ಬೆಳಿಗ್ಗೆ 10.30 ಕ್ಕೆ ಪಡುಬಿದ್ರಿ ಅಬ್ಬೇಡಿ ರಸ್ತೆಯ ಆರ್ ಆರ್ ಕಾಲೋನಿಯಲ್ಲಿ ಆಟಿದ ಪಂಥ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾದ ಡಾ| ವೈ. ಎನ್. ಶೆಟ್ಟಿ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಪಡುಬಿದ್ರಿ ಅಧ್ಯಕ್ಷರಾದ ಮಹಮ್ಮದ್ ನಿಯಾಜ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಯಶೋದ ,ಕೆಪಿಸಿಸಿ ಕೋ-ಆರ್ಡಿನೇಟರ್ ನವೀನ್ ಚಂದ್ರ ಜೆ. ಶೆಟ್ಟಿ, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಎನ್. ಶೆಟ್ಟಿ, ವಲಯ 5ರ ವಲಯ ಸಂಯೋಜಕರಾದ ರಮೀಝ್ ಹುಸೈನ್, ಪಡುಬಿದ್ರಿ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಅನಿತಾ ಬಿ.ವಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕುತ್ಯಾರು : ಗಿಂಡೆದ ನೀರ್ ಕಿರುಚಿತ್ರ ಬಿಡುಗಡೆ
Posted On: 31 Jul 2021, 04:35 PM
ಕಾಪು : ಲವ್ಲಿ ಫ್ರೆಂಡ್ಸ್ ಕುತ್ಯಾರು ಯುಟ್ಯೂಬ್ ಚಾನೆಲ್ ನ ಬ್ಯಾನರ್ ನಡಿಯಲ್ಲಿ ನಿರ್ಮಾಣಗೊಂಡ ಅತಿಥ್ ಸುವರ್ಣ ಪಾಲಮೆ ರಚನೆ, ನಿರ್ದೇಶನ, ನಟನೆ ಮಾಡಿರುವ ತುಳುನಾಡಿನ ದೈವಾರಾಧನೆಯ ಕಲೆ-ಕಾರ್ಣಿಕವನ್ನು ಬಿಂಬಿಸುವ ಕಿರುಚಿತ್ರ ಗಿಂಡೆದ ನೀರ್ ಬಿಡುಗಡೆ ಸಮಾರಂಭ ಜುಲೈ 30ರಂದು ಕುತ್ಯಾರು ಅರಮನೆಯಲ್ಲಿ ಜರಗಿತು. ಕುತ್ಯಾರು ಅರಮನೆಯ ಪ್ರತಿನಿಧಿ, ಶಿರ್ವ ರೋಟರಿ ಕ್ಲಬ್ ಕಾರ್ಯದರ್ಶಿ ದಿನೇಶ್ ಬಳ್ಳಾಲ್ ಕಿರು ಚಿತ್ರವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು ಸ್ಥಳೀಯ ಯುವಕ, ಯುವತಿಯರೇ ಸೇರಿ ತುಳುನಾಡಿನ ದೈವ ದೇವರ ಬಗೆಗಿನ ಇತಿಹಾಸ ಬಿಂಬಿಸುವ ಇಂತಹ ಕಿರುಚಿತ್ರ ನಿರ್ಮಿಸುವ ಮುಖೇನ ಯುವಜನತೆ ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸಬೇಕಾಗಿದೆ. ಮುಂದಿನ ಸಮಾಜಕ್ಕೆ ಅಭಿರುಚಿ ಬೆಳೆಸುವಂತಾಗಲಿ ಎಂದು ಶುಭ ಹಾರೈಸಿದರು. ಕುತ್ಯಾರು ಪರಶುರಾಮೇಶ್ವರ ಕ್ಷೇತ್ರದ ಧರ್ಮದರ್ಶಿ ಶ್ರೀ ಶಂಭುದಾಸ ಗುರೂಜಿ, ಕುತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಧೀರಜ್ ಶೆಟ್ಟಿ ಶುಭಾಶಯ ಕೋರಿದರು. ಈ ಸಂದರ್ಭ ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯ ಸಂಪತ್ ಕುಮಾರ್, ಬಿಲ್ಲವ ಸೇವಾ ಸಂಘ (ರಿ.) ಶಿರ್ವ ಇದರ ಕಾರ್ಯದರ್ಶಿ ಸುಜನ್ ಎಲ್. ಸುವರ್ಣ, ಯುವಕ ಮಂಡಲ ಕುತ್ಯಾರು ಅಧ್ಯಕ್ಷ ಪ್ರವೀಣ್ ಆಚಾರ್ಯ, ಕುತ್ಯಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಧೀರಜ್ ಕುಲಾಲ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಅತಿಥ್ ಸುವರ್ಣ ಕಿರು ಚಿತ್ರದ ಬಗ್ಗೆ ತಿಳಿಸಿದರು. ಶ್ರೇಯ ಸ್ವಾಗತಿಸಿ, ಶ್ರೇಯಸ್ ಕಾರ್ಯಕ್ರಮ ನಿರೂಪಿಸಿ, ಅಭಿಷೇಕ ಆಚಾರ್ಯ ವಂದಿಸಿದರು.
ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ಸುವಿಕ್ ಮೂಲ್ಯನಿಗೆ 93% ಅಂಕ
Posted On: 30 Jul 2021, 09:04 PM
ಕಾರ್ಕಳ: 2020-21ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞ ಕಾಲೇಜಿನ ವಿದ್ಯಾರ್ಥಿ ಸುವಿಕ್ ಮೂಲ್ಯ ಅವರು ವಿಜ್ಞಾನ ವಿಷಯದಲ್ಲಿ 93% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇನ್ನ ಸಾಂತೂರುಕೊಪ್ಪ ನಿವಾಸಿ ಸುಂದರ ಮತ್ತು ಕುಶಲ ದಂಪತಿಯ ಸುಪುತ್ರ.
ಇನ್ನಂಜೆ : ಮಡುಂಬು ಮರ್ಕೋಡಿಯಲ್ಲಿ ತ್ಯಾಜ್ಯ ಎಸೆದವರಿಗೆ ತಕ್ಕ ಬುದ್ಧಿ ಕಲಿಸಿದ ಗ್ರಾಮಸ್ಥರು
Posted On: 30 Jul 2021, 02:55 PM
ಕಾಪು : ಕಾಪುವಿನ ಶಂಕರಪುರ ಸಂಪರ್ಕ ರಸ್ತೆಯಲ್ಲಿ ಸಿಗುವ ಇನ್ನಂಜೆ ಗ್ರಾಮದ ಮಡುಂಬು, ಮರ್ಕೋಡಿ ಸುದೆಯಲ್ಲಿ ಮತ್ತು ಮರ್ಕೋಡಿ ಪರಿಸರದ ರಸ್ತೆಯಲ್ಲಿ ಪಾದಚಾರಿಗಳು ಮತ್ತು ವಾಹನ ಸವಾರರು ತ್ಯಾಜ್ಯವನ್ನು ಎಸೆಯುತ್ತಿದ್ದು, ತ್ಯಾಜ್ಯದ ರಾಶಿಯನ್ನು ಈ ಹಿಂದೆ ಇನ್ನಂಜೆ ಗ್ರಾಮ ಪಂಚಾಯತ್ ಮತ್ತು ಗ್ರಾಮಸ್ಥರು ಸೇರಿ ತೆರವುಗೊಳಿಸಿದ್ದರು. ಈ ಬಗ್ಗೆ ನಮ್ಮ ಕಾಪು ನ್ಯೂಸ್ ಮಾಧ್ಯಮದ ಮೂಲಕ ಖಡಕ್ ಎಚ್ಚರಿಕೆ ಕೂಡ ನೀಡಿದ್ದರು. ಎಚ್ಚರಿಕೆ ನೀಡಿದ ನಂತರವು ಒಂದೆರಡು ತ್ಯಾಜ್ಯದ ಗೋಣಿಗಳು ಇಲ್ಲಿ ಬೀಳುತಿದ್ದುದು ಕಂಡುಬಂದಿತ್ತು. ಇಂದು (30/07/2021) ಎರಡು ತ್ಯಾಜ್ಯದ ಗೋಣಿಗಳು ಮರ್ಕೋಡಿ ಪರಿಸರದಲ್ಲಿ ಕಂಡು ಬಂದಿದ್ದು. ತ್ಯಾಜ್ಯವನ್ನು ಬಿಡಿಸಿ ನೋಡಿದಾಗ ಅದರಲ್ಲಿ ಅಲೆವೂರು ಗ್ರಾಮಸ್ಥರೊಬ್ಬರ ನಂಬರ್ ಪತ್ತೆಯಾಯ್ತು. ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯ ದಿವೇಶ್ ಶೆಟ್ಟಿ ಕಲ್ಯಾಲು ಇವರು ನಂಬರ್ ಗೆ ಕರೆ ಮಾಡಿದಾಗ ಗುಜುರಿ ವ್ಯಾಪಾರಸ್ಥರು ಈ ತ್ಯಾಜ್ಯವನ್ನು ಕೊಂಡು ಹೋಗಿರುವುದಾಗಿ ತಿಳಿಸಿದರು. ಗುಜುರಿ ವ್ಯಾಪಾರಸ್ಥರ ಸಂಪರ್ಕ ಸಂಖ್ಯೆಯನ್ನು ಪಡೆದು ಅವರನ್ನು ಸ್ಥಳಕ್ಕೆ ಕರೆಸಿ ಕಾಪು ಪೊಲೀಸ್ ಠಾಣೆಗೆ ಈ ಬಗ್ಗೆ ಮಾಹಿತಿ ನೀಡಿ, ಅವರಿಂದಲೇ ಆ ತ್ಯಾಜ್ಯವನ್ನು ಮತ್ತು ಮರ್ಕೋಡಿ ಪರಿಸರದಲ್ಲಿ ಇದ್ದಂತಹ ಇತರ ತ್ಯಾಜ್ಯಗಳನ್ನು ತೆರವುಗೊಳಿಸಲಾಯಿತು. ಮತ್ತು ಇನ್ನಂಜೆ ಗ್ರಾಮ ಪಂಚಾಯತ್ನಲ್ಲಿ 2,000 ರೂಪಾಯಿ ಮೊತ್ತದ ದಂಡವನ್ನು ಕೂಡ ವಿಧಿಸಲಾಯಿತು. ತಪ್ಪಿತಸ್ಥರನ್ನು ಬೆಳಪು ನಿವಾಸಿ ಹಮೀದ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ. ಸ್ಥಳದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ PDO ಮಂಜುನಾಥ್ ಆಚಾರ್ಯ, ಉಪಾಧ್ಯಕ್ಷ ಸುರೇಶ್ ಶೆಟ್ಟಿ ಮಂಡೇಡಿ, ಗ್ರಾ. ಪಂ ಸದಸ್ಯ ದಿವೇಶ್ ಶೆಟ್ಟಿ ಕಲ್ಯಾಲು ಗ್ರಾಮಸ್ಥರಾದ ಬಾಲಕೃಷ್ಣ ಆರ್ ಕೋಟ್ಯಾನ್, ಉಮೇಶ್ ಅಂಚನ್, ಪೊಲೀಸ್ ಸಿಬ್ಬಂದಿ ಅಮೃತೇಶ್ ಹಾಗೂ ಪಂಚಾಯತ್ ಸಿಬ್ಬಂದಿಗಳಾದ ಹರೀಶ್ ಮತ್ತು ಸಂದೀಪ್ ಹಾಜರಿದ್ದರು.
ಕಲ್ಯಾಣಪುರ : ಗುರು ಪೂರ್ಣಿಮಾ ಪ್ರಯುಕ್ತ ರೋಟರಿ ಕ್ಲಬ್ ವತಿಯಿಂದ ರಾಜೀವ್ ತೋನ್ಸೆಗೆ ಸನ್ಮಾನ
Posted On: 30 Jul 2021, 12:14 PM
ಉಡುಪಿ : ಗುರು ಪೂರ್ಣಿಮಾ ಪ್ರಯುಕ್ತ ಕಲ್ಯಾಣಪುರದ ರೋಟರಿ ಕ್ಲಬ್ ವತಿಯಿಂದ ನಾಡಿನ ಪ್ರಸಿದ್ಧ ಯಕ್ಷಗಾನ ವೇಷಧಾರಿ , ಹಿಮ್ಮೇಳ ವಾದಕ, ಯಕ್ಷಗುರು ಆಗಿರುವ ರಾಜೀವ್ ತೋನ್ಸೆ ಅವರಿಗೆ ಅಭಿನಂದನಾ ಪತ್ರ ಹಾಗೂ ಸನ್ಮಾನಿಸಲಾಯಿತು. ಈ ಸಂದರ್ಭ ರೋಟರಿ ಅಧ್ಯಕ್ಷ ಶಂಭು ಶಂಕರ್, ಕಾರ್ಯದರ್ಶಿ ಪ್ರಕಾಶ್ ಹಾಗೂ ಸದಸ್ಯರು ಉಪಸ್ಥಿತರಿದ್ದರು. ರಾಮಕೃಷ್ಣ ಆಚಾರ ಅತಿಥಿಯನ್ನು ಪರಿಚಯಿಸಿದರು. ರೀನಾ ಆನಂದ ಶೆಟ್ಟಿ ಗುರು ಪೌರ್ಣಮಿಯ ಮಹತ್ವವನ್ನು ತಿಳಿಸಿದರು. ಗಿರೀಶ್ ಚಂದ್ರ ಕಾರ್ಯಕ್ರಮ ನಿರೂಪಿಸಿದರು.
ಉಚಿತ ನೇತ್ರ ತಪಾಸಣಾ ಶಿಬಿರಗಳೆಂದರೆ ಕತ್ತಲಿನಿಂದ ಬೆಳಕಿನಡೆಗೆ ಹೋಗುವ ಕಾರ್ಯಕ್ರಮ : ಗೀತಾಂಜಲಿ ಸುವರ್ಣ
Posted On: 29 Jul 2021, 11:02 PM
ಪಡುಬಿದ್ರಿ : ಉಚಿತ ನೇತ್ರ ತಪಾಸಣಾ ಶಿಬಿರಗಳೆಂದರೆ ಕತ್ತಲಿನಿಂದ ಬೆಳಕಿನಡೆಗೆ ಹೋಗುವ ಒಂದು ಕಾರ್ಯಕ್ರಮ ಇಂತಹ ಜನಪರ ಕಾರ್ಯಕ್ರಮಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು. ಆ ಮೂಲಕ ಬದುಕಿನಲ್ಲಿ ಆವರಿಸಿಕೊಂಡಿರುವ ಕತ್ತಲಿನಿಂದ ದೂರವಾಗಬೇಕು ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾಂಜಲಿ ಸುವರ್ಣ ಹೇಳಿದರು. ಅವರು ಪಡುಬಿದ್ರಿಯ ಸುಸ್ಲಾನ್ ಆರ್ ಎಂಡ್ ಆರ್ ಕಾಲೊನಿಯಲ್ಲಿ ಕರ್ನಾಟಕ ಸಾಮಾಜಿಕ ಸಾಂಸ್ಕತಿಕ ಅಭಿವೃದ್ಧಿ ಪ್ರತಿಷ್ಠಾನವು ಪ್ರಸಾದ್ ನೇತ್ರಾಲಯ ಜೊತೆಗೂಡಿ ಆಯೋಜಿಸಿದ ಉಚಿತ ನೇತ್ರ ತಪಾಸಣಾ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಂಘಟಕರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದಾಗ ಸಾರ್ವಜನಿಕರ ಸ್ಪಂದನೆ ಸರಿಯಾಗಿದ್ದಾಗ ಕಾರ್ಯಕ್ರಮಕ್ಕೆ ಹೆಚ್ಚು ಮೆರುಗು ಬರುತ್ತದೆ ಎಂದು ಹೇಳಿದ ಅವರು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿದ KSSAP ಕಾರ್ಯ ಸ್ತುತ್ಯರ್ಹ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಮಾತನಾಡಿ ಇಂದು ಮಾತಿಗಿಂತ ಕೃತಿಗೆ ಹೆಚ್ಚು ಒತ್ತು ಕೊಡಬೇಕಾಗಿದೆ, ಈ ಕಾರ್ಯಕ್ರಮದಿಂದ ಹೆಚ್ಚಿನ ಜನರು ಪ್ರಯೋಜನ ಪಡೆದು ತಮ್ಮ ಕಣ್ಣಿನಲ್ಲಿ ಬೆಳಕು ಮೂಡಿದರೆ ನಮ್ಮ ಶ್ರಮ ಸಾರ್ಥಕ ಎಂದರು. ಕಾರ್ಯಕ್ರಮದಲ್ಲಿ ಪ್ರಸಾದ್ ನೇತ್ರಾಲಯದ ಡಾ. ಗುಣಶ್ರೀ, ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಜಶ್ರೀ ಕಿಣಿ, ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿಶೆಟ್ಟಿ, ಸುಸ್ಲಾನ್ ಆರ್.& ಆರ್. ಕಾಲೊನಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮನಾಥ್ ಕೆ. ಆರ್. ಉಪಸ್ಥಿತರಿದ್ದರು. NSCDF ಅಧ್ಯಕ್ಷ ಗಂಗಾಧರ್ ಗಾಂದಿ ಸ್ವಾಗತಿಸಿ , ಪ್ರಸ್ತಾವನೆಗೈದರು. ಪ್ರದೀಪ್ ಡಿ.ಎಂ. ಹಾವಂಜೆ ನಿರೂಪಿಸಿದರು.
