Updated News From Kaup

ಸಕಾಲ ಯೋಜನೆಯಲ್ಲಿ ಉಡುಪಿ ಜಿಲ್ಲೆಗೆ ರಾಜ್ಯದಲ್ಲಿಯೇ ಮೊದಲ ಸ್ಥಾನ

Thumbnail
Posted On: 01 Jul 2021, 10:25 PM

ಉಡುಪಿ : ಕರ್ನಾಟಕ ರಾಜ್ಯ ಸರ್ಕಾರವು 2011-12ನೇ ಸಾಲಿನಲ್ಲಿ ಜಾರಿಗೆ ತಂದಿರುವ ಸಕಾಲ ಕಾಯ್ದೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾ ಗಿದ್ದು, ಸಕಾಲ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ಜಿಲ್ಲೆಯು ಒಟ್ಟಾರೆ ಉತ್ತಮ ಸಾಧನೆ ಮಾಡಿದೆ. ಜನರು ಸರ್ಕಾರಿ ಕಚೇರಿಗಳಿಗೆ ಅಲೆ ದಾಡುವುದನ್ನು ತಪ್ಪಿಸಲು, ಅಕ್ರಮಕ್ಕೆ ಆಸ್ಪದ ನೀಡದಂತೆ ಹಾಗೂ ಅರ್ಜಿ ವಿಲೇ ವಾರಿ ವಿಳಂಬ ಆಗದೆ ಕಾಲಕಾಲಕ್ಕೆ ಜನ ರಿಗೆ ತಲುಪಿಸುವ ನಿಟ್ಟಿನಲ್ಲಿ ‘ಕರ್ನಾಟಕ ನಾಗರಿಕ ಸೇವಾ ಕಾಯ್ದೆ’ (ಸಕಾಲ) ಜಾರಿ ಗೊಳಿಸಲಾಯಿತು. ಅದರಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಅದರಡಿ ಅರ್ಜಿ ವಿಲೇವಾರಿಗೆ ಇಲಾಖೆ ಹಾಗೂ ಸೌಲಭ್ಯ ಗಳಿಗೆ ತಕ್ಕಂತೆ ಆಯಾ ಅರ್ಜಿಗಳಿಗೆ ಪ್ರತ್ಯೇಕ ಅವಧಿ ನಿಗದಿ ಮಾಡಲಾಗಿತ್ತು. ನಿಗದಿತ ಅವಧಿಯೊಳಗೆ ಅರ್ಜಿ ವಿಲೇವಾರಿ ಮಾಡದಿದ್ದರೆ, ಅರ್ಜಿದಾರ ದೂರು ದಾಖಲಿಸುವ ಹಾಗೂ ಅರ್ಜಿ ವಿಳಂಬಕ್ಕೆ ಕಾರಣ ಪಡೆಯಲು ಅವಕಾಶ ಮಾಡಿ ಕೊಡಲಾಗಿದೆ. ಈ ಯೋಜನೆಯಡಿ ಸಕಾಲದಲ್ಲಿ ಸೇವೆ ಒದಗಿಸುವಲ್ಲಿ ಕರ್ತವ್ಯ ಲೋಪವೆಸಗಿದ ಸಾರ್ವಜನಿಕ ನೌಕರ ಸಕ್ಷಮ ಅಧಿಕಾರಿಯಿಂದ ದಿನಕ್ಕೆ 20ರೂ. ರಂತೆ ಗರಿಷ್ಠ 500 ರೂ.ವರೆಗೆ ದಂಡ ವಸೂಲಿ ಮಾಡಬಹುದು. ಅರ್ಜಿ ವಿಲೇವಾರಿಗೆ ಕನಿಷ್ಠ 3 ದಿನಗಳಿಂದ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಕಾರ್ಯವನ್ನು ಜಿಲ್ಲೆಯ ಕಂದಾಯ ಇಲಾಖೆ ಮತ್ತು ಇತರ ಇಲಾಖೆ ಉತ್ತಮವಾಗಿ ನಿರ್ವಹಿಸಿದೆ. ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿ ಯನ್ನು ನಿಗದಿತ ಅವಧಿಗೂ ಮುಂಚಿತ ವಾಗಿ ಅರ್ಜಿ ವಿಲೇವಾರಿ ಮಾಡುವುದು , ಅವಧಿ ಮೀರಿ ಅರ್ಜಿಗಳ ವಿಲೇವಾರಿ, ಅರ್ಜಿಗಳ ತಿರಸ್ಕರಿಸುವಿಕೆ ಮತ್ತು 1 ಲಕ್ಷ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಅರ್ಜಿ ಸ್ವೀಕೃತಿ ಮಾಡಿಕೊಂಡಿರುವುದು ಹೀಗೆ 4 ಅಂಶಗಳನ್ನು ಪರಿಗಣಿಸಿ ತಿಂಗಳ ಕೊನೆಯಲ್ಲಿ ರ್ಯಾಂಕ್ ನೀಡಲಾಗುತ್ತದೆ. ಅದರಂತೆ ಸಕಾಲ (ಆನ್ಲೈನ್)ದಲ್ಲಿ ಅರ್ಜಿಗಳನ್ನು ಜಿಲ್ಲೆಯ ಜನರು ಹೆಚ್ಚು ಸಲ್ಲಿಸಿದ್ದು, ಅರ್ಜಿಗಳನ್ನು ಹೆಚ್ಚು ತಿರಸ್ಕರಿಸದೆ ಅಧಿಕಾರಿಗಳು ಅವಧಿಗೂ ಮುಂಚಿತ ವಾಗಿ ಅರ್ಜಿ ವಿಲೇವಾರಿ ಮಾಡಿದ್ದಾರೆ ಇದೇ ಕಾರಣದಿಂದ ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ಲಭಿಸಿತು. ಜಿಲ್ಲಾಡಳಿತದಿಂದ ಅಭಿನಂದನೆ: ಜೂನ್ ತಿಂಗಳ ಸಕಾಲ ಸೇವೆಯಲ್ಲಿ ರಾಜ್ಯದಲ್ಲಿ ಉಡುಪಿ ಜಿಲ್ಲೆಯು ಪ್ರಥಮ ಸ್ಥಾನ ಪಡೆಯಲು ಕಾರಣರಾಗಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್‌ ರವರು ತಮ್ಮ ಅಧೀಕೃತ ಫೇಸ್ಬುಕ್‌ ಪೇಜ್‌ ನಲ್ಲಿ ಅಭಿನಂದನೆ ಸಲ್ಲಿಸಿರುತ್ತಾರೆ.

ಬಂಟಕಲ್ಲು ಅಂಚೆ ಕಛೇರಿ ಸ್ಥಳಾಂತರ

Thumbnail
Posted On: 01 Jul 2021, 10:19 PM

ಕಾಪು : ಸ್ಥಳಾವಕಾಶದ ಕೊರತೆಯಿಂದ ಅಂಚೆ ಕಛೇರಿ ಗ್ರಾಹಕರಿಗೆ ಸಮಸ್ಯೆ ಆಗುತ್ತಿದ್ದ ಹಿನ್ನಲೆಯಲ್ಲಿ ಬಂಟಕಲ್ಲು ಅಂಚೆ ಕಛೇರಿಯನ್ನು ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಸಹಕಾರದಿಂದ ವ್ಯವಸ್ಥಿತವಾದ, ಸ್ಥಳಾವಕಾಶವಿರುವ ಬಂಟಕಲ್ಲು ಮೈತ್ರಿ 2 ಕಟ್ಟಡಕ್ಕೆ ಇಂದು ಸ್ಥಳಾಂತರಗೊಂಡಿತು. ಬಂಟಕಲ್ಲು ನಾಗರಿಕ ಸಮಿತಿ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರೂ ಆಗಿರುವ ಕೆ ಆರ್ ಪಾಟ್ಕರ್ ರವರು ಸಾಂಕೇತಿಕವಾಗಿ ದ್ವೀಪ ಪ್ರಜ್ವಲನೆ ಮಾಡುವುದರ ಮೂಲಕ ಹೊಸ ಕಟ್ಟಡದಲ್ಲಿ ಅಂಚೆ ಕಛೇರಿಗೆ ಚಾಲನೆ ನೀಡಿದರು. ಸದ್ರಿ ಕಛೇರಿಗೆ ಬೇಕಾಗುವ ಪಿಠೋಪಕರಣಗಳನ್ನು ಅಂಚೆ ಇಲಾಖೆಯಿಂದ ಒದಗಿಸುವಂತೆ ಸಹಾಯಕ ಅಧೀಕ್ಷರಲ್ಲಿ ವಿನಂತಿಸಿ, ನಾಗರಿಕ ಸಮಿತಿಯು ನೀಡಿದ ಸಹಕಾರದ ವಿವರಿಸಿದರು. ಕಛೇರಿ ಮುಂದೆ ಗ್ರಾಹಕರ ಅನುಕೂಲಕ್ಕಾಗಿ ದಾನಿಗಳಿಂದ ಅಥವಾ ಸ್ಥಳೀಯ ಸಂಘ ಸಂಸ್ಥೆಗಳ ಪ್ರಯೋಜಕತ್ವದಲ್ಲಿ ತಗಡು ಚಪ್ಪರವನ್ನು ನಿರ್ಮಿಸಲಾಗುವುದು ಎಂದರು. ಅಂಚೆ ಇಲಾಖೆಯ ಉಪ ಅಧೀಕ್ಷಕರಾದ ನವೀನ್ ರವರು ಮಾತನಾಡಿ ನಾಗರಿಕ ಸಮಿತಿಯು ನೀಡಿದ ಸಹಕಾರಕ್ಕೆ ಕೃತಜ್ಞತೆಯನ್ನು ಸಲ್ಲಿಸಿ ,ಕಛೇರಿಗೆ ಬೇಕಾಗುವ ಪಿಠೋಪಕರಣಗಳನ್ನು ಇಲಾಖೆ ಮುಖಾಂತರ ಒದಗಿಸಲಾಗುವುದು ಎಂದು ತಿಳಿಸಿದರು. ಅಂಚೆ ಮೇಲ್ವಿಚರಕರಾದ ವಾಸುದೇವ ತೊಟ್ಟಂ ರವರು ಶುಭಹಾರೈಸಿ ಜನರ ಸಹಕಾರಕಾರವನ್ನು ಶ್ಲಾಘಿಸಿದರು. ನಿವೃತ್ತ ಶಿಕ್ಷಕ, ಪತ್ರಕರ್ತರಾದ ಪುಂಡಲೀಕ ಮರಾಠೆಯವರು ನಾಗರೀಕ ಸಮಿತಿ ವತಿಯಿಂದ ನೀಡಲಾಗುವ ಅಂಚೆ ಕಛೇರಿ ತಿಂಗಳ ಬಾಡಿಗೆ ಮೊತ್ತದಲ್ಲಿ ಒಂದು ವರುಷದ ಮೊತ್ತದ ಚೆಕನ್ನು ಕಟ್ಟಡ ಮಾಲಿಕರಿಗೆ ಹಸ್ತಾಂತರಿಸಿ, ಶುಭ ಹಾರೈಸಿದರು. ಬಂಟಕಲ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಲ. ವಿಜಯ ಧೀರಾಜ್, ತಾ.ಪಂ ಮಾಜಿ ಸದಸ್ಯೆ ಗೀತಾ ವಾಗ್ಲೆ, ನಾಗರೀಕ ಸಮಿತಿ ಉಪಾಧ್ಯಕ್ಷ ಮಾಧವ ಕಾಮತ್, ಕಾರ್ಯದರ್ಶಿ ದಿನೇಶ್ ದೇವಾಡಿಗ, ಅಂಚೆ ಪಾಲಕ ಯಮುನ ಚಿತ್ರಾಪುರ್, ಅಂಚೆ ವಿತರಕ ಚಿತ್ರಕಲಿ ಹಾಗೂ ಸಮಿತಿಯ ಉಮೇಶ್ ರಾವ್, ಡೇನಿಸ್ ಡಿಸೋಜ ಉಪಸ್ಥಿತರಿದ್ದರು.

ಮಕ್ಕಳಿಗಾಗಿ ಮಹಿಳಾ ಸಾಧಕಿ ಸುಮತ ನಾಯಕ್ ಅಮ್ಮುಂಜೆಯವರ ನೇತೃತ್ವದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ

Thumbnail
Posted On: 30 Jun 2021, 04:44 PM

ಕಾಪು : Itsoksupport .com ನ ಮೂಲಕ ಮಕ್ಕಳಿಗಾಗಿ ವೈಯಕ್ತಿಕ ಅಭಿವೃದ್ಧಿ (Personal Devlopment) ಶಿಬಿರ. ಈ ಶಿಬಿರವು ಮನಶಾಸ್ತ್ರಜ್ಞರು , ಮಾನಸಿಕ ಆರೋಗ್ಯ ತಜ್ಞರು , ಆಹಾರ ತಜ್ಞರು ಹಾಗೂ ವಿವಿಧ ಕ್ಷೇತ್ರಗಳ ತಜ್ಞರ ಉಪಸ್ಥಿತಿಯಲ್ಲಿ ನಡೆಯಲಿರುವುದು. ಮಕ್ಕಳ ಆತ್ಮವಿಶ್ವಾಸ ಹಾಗೂ ಸಂವಹನ ಪ್ರಕ್ರಿಯೆಯನ್ನು ಹೆಚ್ಚಿಸಲು ಹೆಚ್ಚಿನ ಗಮನ ನೀಡಲಾಗುವುದು. ಈ ಶಿಬಿರವು ವರ್ಚುವಲ್ ಪ್ರೋಗ್ರಾಮ್ ಆಗಿರುತ್ತದೆ ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ಸಂಖ್ಯೆಗೆ ಕರೆ ಮಾಡಿ ರಿಜಿಸ್ಟರ್ ಆಗಿ 9880705858 / 9497293458

ಕುಂದಾಪುರ : ಅಂಬೇಡ್ಕರ್ ಭವನದಲ್ಲಿ ಕೋವಿಡ್ ಲಸಿಕಾ ಕಾರ್ಯಕ್ರಮ

Thumbnail
Posted On: 30 Jun 2021, 03:30 PM

ಉಡುಪಿ : ಕುಂದಾಪುರದ ಅಂಬೇಡ್ಕರ್ ಕಾಲೋನಿ ನಿವಾಸಿಗಳಿಗೆ ಕೋವಿಡ್ ಲಸಿಕಾ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ಉಡುಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಮತ್ತು ಪುರಸಭಾ ಸದಸ್ಯ ಪ್ರಭಾಕರ ವಿ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಲಸಿಕಾ ಕಾರ್ಯಕ್ರಮದಲ್ಲಿ ಒಟ್ಟು 40ಜನರಿಗೆ ಲಸಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಪ್ರಭಾಕರ ವಿ. ರವರು ಜಿಲ್ಲಾಧಿಕಾರಿ ಜಿ. ಜಗದೀಶ್, ಕುಂದಾಪುರ ಸರಕಾರಿ ಆಸ್ಪತ್ರೆಯ ಆಡಳಿತ ಶಸ್ತ್ರಚಿಕಿತ್ಸಕ ಡಾ. ರಾಬರ್ಟ್ ರೆಬೆಲ್ಲೋ, ನೋಡಲ್ ಅಧಿಕಾರಿ ಡಾ. ದಿನಕರ ಶೆಟ್ಟಿ ಹಾಗೂ ವೈದ್ಯಾಧಿಕಾರಿಗಳಿಗೆ ಅಂಬೇಡ್ಕರ್ ಕಾಲೋನಿ ನಿವಾಸಿಗಳ ಪರವಾಗಿ ಧನ್ಯವಾದ ತಿಳಿಸಿದರು. ಕಾರ್ಯಕ್ರಮದಲ್ಲಿ ನೋಡಲ್ ಅಧಿಕಾರಿ ಡಾ. ದಿನಕರ ಶೆಟ್ಟಿ, ಡಾ. ರಶ್ಮಿ ಮತ್ತು ಆಸ್ಪತ್ರೆ ಸಿಬ್ಬಂದಿ ವರ್ಗದವರು, ಆಶಾಕಾರ್ಯಕರ್ತೆಯರಾದ ಶಶಿಕಲಾ, ವೀಣಾ ಮತ್ತು ಉಡುಪಿ ಪುರಸಭಾ ಸದಸ್ಯ ಪ್ರಭಾಕರ ವಿ ಉಪಸ್ಥಿತರಿದ್ದರು.

ಕುಂಜೂರು : ಸೌಹಾರ್ದತೆಗೆ ಸಾಕ್ಷಿಯಾದ ವನಮಹೋತ್ಸವ ಕಾರ್ಯಕ್ರಮ

Thumbnail
Posted On: 30 Jun 2021, 02:29 PM

ಕಾಪು : ಶ್ರೀ ದುರ್ಗಾ ಸೇವಾ ಸಮಿತಿ ಕುಂಜೂರು ಮತ್ತು ಶ್ರೀ ದುರ್ಗಾ ಮಿತ್ರವೃಂದ ಕುಂಜೂರು‌ ಇವರ ಜಂಟಿ ಆಶ್ರಯದಲ್ಲಿ ಈಸ್ಟ್ ವೆಸ್ಟ್ ನರ್ಸರಿ ಪಣಿಯೂರು ಮತ್ತು ವೆಸ್ಟ್ ಕೋಸ್ಟ್ ನರ್ಸರಿ ಮೂಳೂರು ಇವರ ಸಹಯೋಗದೊಂದಿಗೆ ಕುಂಜೂರಿನಲ್ಲಿ‌ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಪರಿಸರದಲ್ಲಿ ದೇಗುಲದ ಉಪಯೋಗಕ್ಕೆ ಬೇಕಾಗುವ ವಿವಿಧ ಹೂವಿನ ಗಿಡಗಳನ್ನು ಹಾಗೂ ಇತರ ಹಣ್ಣುಗಳ ಗಿಡವನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪಣಿಯೂರು ಈಸ್ಟ್ ವೆಸ್ಟ್ ನರ್ಸರಿಯ ಮಾಲಕ ಎಂ.ಎ. ಮೂಸಾ ಅವರು ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕುಂಜೂರು ದುರ್ಗಾ ಸೇವಾ ಸಮಿತಿ ಮತ್ತು ದುರ್ಗಾ ಮಿತ್ರವೃಂದದ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಶ್ರೀ ದುರ್ಗಾ ಸೇವಾ ಸಮಿತಿಯ ಅಧ್ಯಕ್ಷ ಕೆ. ಎಲ್. ಕುಂಡಂತಾಯ ಮಾತನಾಡಿ, ಕುಂಜೂರು ದೇಗುಲದ ಪರಿಸರದಲ್ಲಿ ದೇವಸ್ಥಾನದ ಉಪಯೋಗಕ್ಕಾಗಿ ಬಳಸುವ ಹೂವಿನ‌ ಗಿಡಗಳನ್ನು ಒದಗಿಸುವ ಮೂಲಕ ಈಸ್ಟ್ ವೆಸ್ಟ್ ನರ್ಸರಿ ಮತ್ತು ವೆಸ್ಟ್ ಕೋಸ್ಟ್ ನರ್ಸರಿಯ ಮಾಲಕರಾದ ಎಂ.ಎ. ಮೂಸಾ ಹಾಗೂ ಅನಿಲ್ ಸೋನ್ಸ್ ಅವರು ಸೌಹಾರ್ದತೆಯನ್ನು ಮೆರೆದಿದ್ದಾರೆ.‌ ಪ್ರಕೃತಿಯನ್ನೇ ದೇವರೆಂದು ಆರಾಧಿಸುವ ತುಳುನಾಡಿನ ಧಾರ್ಮಿಕ ಕೇಂದ್ರಗಳಲ್ಲಿ ಪರಸ್ಪರ ಸೌಹಾರ್ದ ಮನಸ್ಸುಗಳನ್ನು ಜೋಡಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರಲಿ ಎಂದು ಆಶಿಸಿದರು. ಶ್ರೀ ದುರ್ಗಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷ ದೇವರಾಜ ರಾವ್ ನಡಿಮನೆ, ದೇಗುಲದ ಅರ್ಚಕರಾದ ಚಕ್ರಪಾಣಿ ಉಡುಪ, ರಾಮಕೃಷ್ಣ ಉಡುಪ, ರಘುಪತಿ ಉಡುಪ, ಎಲ್ಲೂರು ಗ್ರಾ. ಪಂ. ಸದಸ್ಯ ಯಶವಂತ ಶೆಟ್ಟಿ, ಉದ್ಯಮಿ ಸತೀಶ್ ಕುಂಡಂತಾಯ, ಶ್ರೀ ದುರ್ಗಾ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುದರ್ಶನ್ ವೈ. ಎಸ್. ಕೋಶಾಧಿಕಾರಿ ಶ್ರೀವತ್ಸ ರಾವ್, ಜೊತೆ ಕಾರ್ಯದರ್ಶಿ ರಾಕೇಶ್ ಕುಂಜೂರು, ದೇಗುಲದ ಪ್ರಬಂಧಕ ರಾಘವೇಂದ್ರ ಶೆಟ್ಟಿ, ನಾಗರಾಜ ರಾವ್ ಪಣಿಯೂರು, ಶ್ರೀಧರ ಮಂಜಿತ್ತಾಯ, ವಿಶ್ವನಾಥ ಉಡುಪ, ಗೋವಿಂದ ಉಡುಪ, ಗೋವಿಂದ ದೇವಾಡಿಗ, ದಿನೇಶ್ ಕುಂಜೂರು, ಸಾಧು ಶೆಟ್ಟಿ ತೆಂಕರಲಾಕ್ಯಾರು, ಶ್ರೀ ದುರ್ಗಾ ಮಿತ್ರವೃಂದದ ಅಧ್ಯಕ್ಷ ಚಂದ್ರಹಾಸ ಆಚಾರ್ಯ, ಪದಾಧಿಕಾರಿಗಳಾದ ಪ್ರಕಾಶ್ ಆಚಾರ್ಯ, ಚರಣ್ ದೇವಾಡಿಗ, ಭಾರ್ಗವ ಕುಂಡಂತಾಯ, ರಾಜ ಶೆಟ್ಟಿ, ರತ್ನಾಕರ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ‌ ಶ್ರೀ ದುರ್ಗಾ ಸೇವಾ‌ ಸಮಿತಿಯ ಜೊತೆ ಕಾರ್ಯದರ್ಶಿ ರಾಕೇಶ್ ಕುಂಜೂರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಇನ್ನಂಜೆ : ಮಹಾತ್ಮ ಗಾಂಧಿ ನರೇಗಾ ಯೋಜನೆ ಮೂಲಕ ಸ್ಥಳೀಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ಕೆ ಚಾಲನೆ

Thumbnail
Posted On: 28 Jun 2021, 07:46 PM

ಕಾಪು : ಇನ್ನಂಜೆ ಗ್ರಾಮದ ಮಜಲು ದಡ್ಡು ಪ್ರದೇಶದ ಶೀಲಾಪುರ ಕೆರೆಯಿಂದ ನೀರು ಹರಿವ ತೋಡಿನ ಹೂಳು ಎತ್ತುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಗ್ರಾಮದ ಜನರು ಈ ಸಮಸ್ಯೆಯ ಬಗ್ಗೆ ಗ್ರಾ.ಪಂ. ನ ಮಾಜಿ ಸದಸ್ಯೆ ಸುಮಲತಾ ಇನ್ನಂಜೆ ಇವರಿಗೆ ತಿಳಿಸಿದಾಗ ಅದನ್ನು ಗ್ರಾಮ ವಾಸ್ತವ್ಯದಲ್ಲಿದ್ದ ತಹಶೀಲ್ದಾರರ ಗಮನಕ್ಕೆ ತಂದರು. ಕೂಡಲೇ ಸ್ಪಂದಿಸಿದ ಅವರು ಇನ್ನಂಜೆ ಪಂಚಾಯತ್ ಗೆ ಈ ಕಾರ್ಯವನ್ನು ಮಾಡಲು ಸೂಚಿಸಿದ್ದರು. ಈ ಕಾರ್ಯವನ್ನು ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಮೂಲಕ ಸುಮಾರು ಸ್ಥಳೀಯ 20 ಜನರನ್ನು ಒಳಗೊಂಡಂತೆ ನೀರು ಹರಿಯುವ ತೋಡಿನ ಹೂಳನ್ನು ತೆಗೆಯಲಾಯಿತು. ಪಂಚಾಯತ್ ನ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯರಾದ ರಾಜೇಶ್ ಶೆಟ್ಟಿ ಪಾಂಗಾಳ, ಇನ್ನಂಜೆ ಗ್ರಾ.ಪಂ. ಅಧ್ಯಕ್ಷೆ ಮಲ್ಲಿಕಾ ಆಚಾರ್ಯ, ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ, ಮಂಡೇಡಿ ವಾರ್ಡ್ ಸದಸ್ಯೆ ಜಯಶ್ರೀ ಸಹಕಾರ ನೀಡಿದರು. ಇನ್ನಂಜೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಆಚಾರ್ಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೋಲಿಸರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳ ನಾಶ

Thumbnail
Posted On: 26 Jun 2021, 04:39 PM

ಪಡುಬಿದ್ರಿ : ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ತಿ ಮಾಡಿದ ಒಂದು ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿ ಪಡೆದು ಉಡುಪಿ ಜಿಲ್ಲೆಯ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿರುವ ಆಯುಷ್ಯ್ ಎನ್ವೈಯರ್ಮೆಂಟ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ನಾಶಪಡಿಸಲಾಯಿತು. ಈ ಸಂದರ್ಭದಲ್ಲಿ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್ ಕುಮಾರ್, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್, ಉಡುಪಿ ಡಿವೈಎಸ್ಪಿ ಸುಧಾಕರ ನಾಯ್ಕ್ , ಕಾರ್ಕಳ ಡಿವೈಎಸ್ಪಿ ಎಸ್ ವಿಜಯ ಪ್ರಸಾದ್,ವೃತ್ತನಿರೀಕ್ಷಕರಾದ ಮಂಜುನಾಥ್,ಸಂಪತ್,ಮಂಜುನಾಥ ಗೌಡ, ಪ್ರಮೋದ್ ಹಾಗು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ : ಗಿಡಗಳನ್ನು ನೆಟ್ಟು ವನಮಹೋತ್ಸವ ಆಚರಣೆ

Thumbnail
Posted On: 25 Jun 2021, 04:51 PM

ಉಡುಪಿ : ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ನ ಆಶ್ರಯದಲ್ಲಿ ವನಮಹೋತ್ಸವದ ಅಂಗವಾಗಿ ಗಿಡಗಳನ್ನು ನೆಡುವ ಕಾಯ೯ಕ್ರಮವು ಇಂದು ಬೆಳಿಗ್ಗೆ ಕ್ಲಬ್ಬಿನ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅನಿವಾಸಿ ಭಾರತೀಯ ಹಾಗೂ ಉದ್ಯಮಿ ಕೆಂಜೂರು ಶಶಿಧರ ಶೆಟ್ಟಿ , ಬಹರೈನ್ ಅವರು ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೆ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲ ಜನರು ತಮ್ಮ ಮನೆಯ ಆವರಣಗಳಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಆಚರಿಸಿ ಪರಿಸರ ಬೆಳೆಸಲು ಕರೆ ಕೊಟ್ಟರು. 100ಕ್ಕೂ ಹೆಚ್ಚು ಗಿಡಗಳನ್ನು ಕ್ಲಬ್ಬಿನ ಆವರಣದಲ್ಲಿ ನೆಡಲಾಯಿತು. ಮುಂಬರುವ ದಿನಗಳಲ್ಲಿ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಇನ್ನಷ್ಟು ಪರಿಸರ ಕಾಳಜಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಎಂ ಚಂದ್ರಶೇಖರ ಹೆಗ್ಡೆ ತಿಳಿಸಿದರು. ಕಾರ್ಯಕ್ರಮದಲ್ಲಿ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ಗ್ರೆಗೊರಿ ಡಿಸಿಲ್ವ , ಹಾಗೂ ಸದಸ್ಯರಾದ ಜೇಮ್ಸ್ ಒಲಿವೆಯಿರ, ಜೋಸೆಫ್ ಸುವರೆಸ್, ಸುದೇಶ್ ಹೆಗ್ಡೆ, ಪ್ರಮೋದ್ ಶೆಟ್ಟಿ, ಪ್ರಸನ್ನ ಶೆಟ್ಟಿ , ವಿವೇಕ್ ಕರ್ನೇಲಿಯೋ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ ಜಿಲ್ಲೆಯ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದಿಂದ ದೈವ ಚಾಕ್ರಿ ವರ್ಗದವರ ಸಮಸ್ಯೆ ಕುರಿತು ಸಚಿವ ಶ್ರೀನಿವಾಸ ಪೂಜಾರಿಯವರಿಗೆ ಮನವಿ

Thumbnail
Posted On: 24 Jun 2021, 06:39 PM

ಉಡುಪಿ : ಲಾಕ್ಡೌನ್ ಸಂದರ್ಭ ದೈವ ಚಾಕ್ರಿ ವರ್ಗದವರ ಸಮಸ್ಯೆಗಳ ಕುರಿತಂತೆ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ.) ಉಡುಪಿ ಜಿಲ್ಲೆಯ ಸರ್ವ ಸದಸ್ಯರು ಧಾರ್ಮಿಕ ದತ್ತಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರನ್ನು ಭೇಟಿ ಮಾಡಿ ಮನವಿ ನೀಡಿದರು. ಈಗಾಗಲೇ ಸರ್ಕಾರದ ಮೂರು ಬಾರಿಯ ಕೋವಿಡ್ ಪ್ಯಾಕೇಜಿನಲ್ಲಿ ಸರ್ಕಾರ ನಮ್ಮ ಕರಾವಳಿಯ ದೈವಾರಾಧನೆ ಕ್ಷೇತ್ರದಲ್ಲಿ ದುಡಿಯುವವರಿಗೆ ಈ ಲಾಕ್ ಡೌನ್ ತುರ್ತು ಸಂದರ್ಭದಲ್ಲಿ ಯಾವುದೇ ಪರಿಹಾರ ಒದಗಿಸಿಲ್ಲ. ಎರಡು ವರ್ಷದಿಂದ ಸರಿಯಾಗಿ ಯಾವುದೇ ಪೂಜೆ ಪುರಸ್ಕಾರ, ವಾರ್ಷಿಕ ನೇಮೋತ್ಸವಗಳು ಯಾವುದೇ ಇತರ ಕಾರ್ಯಗಳು ನಡೆಯಲಿಲ್ಲ. ಈ ಸಂದರ್ಭದಲ್ಲಿ ಸರ್ಕಾರ ಸಂಪೂರ್ಣ ನಿಷೇಧಿಸಿದೆ. ಸುಮಾರು ಉಡುಪಿ ಮಂಗಳೂರಿನಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ದೈವ ಚಾಕ್ರಿ ವರ್ಗದವರಿದ್ದಾರೆ. ಕೊರೊನ ಲಾಕ್ ಡೌನ್ ಸಂದರ್ಭದಲ್ಲಿ ಇವರಿಗೆ ಜೀವನ ನಡೆಸಲು ತುಂಬಾ ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಇವರಿಗೆ ಯಾವುದೇ ಸಂಪಾದನೆ ಇಲ್ಲ ದೈವಾರಾಧನೆ ಮೂಲ ಕುಲಕಸುಬಾಗಿ ಅವಲಂಬಿಸಿದ್ದಾರೆ. ಇದರಿಂದ ಬರುವ ಸಂಭಾವನೆಯಲ್ಲಿ ಕುಟುಂಬವನ್ನು ನೀಗಿಸಬೇಕಾಗಿದೆ. ಮುಂದಿನ ದಿನಗಳಲ್ಲಿ 200 ಜನರ ಸೀಮಿತ ಅವಧಿಗೆ ಸರ್ಕಾರದ ಕಟ್ಟುನಿಟ್ಟಾದ ನಿಯಮ ಅನುಸಾರವಾಗಿ ದೈವಾರಾಧನೆಗೆ ಅನುಮತಿ ನೀಡಬೇಕಾಗಿದೆ ಎಂದು ಒಕ್ಕೂಟದ ಗೌರವ ಅಧ್ಯಕ್ಷರು ಹಾಗೂ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿ ಸಚಿವರಿಗೆ ಮನವಿ ಮಾಡಿದರು. ಈ ಸಂದರ್ಭ ಮಾತನಾಡಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಈ ದಿನವೇ ಮುಖ್ಯಮಂತ್ರಿಗಳಿಗೆ ನಿಮ್ಮ ಬೇಡಿಕೆಗಳ ಮನವಿಯನ್ನು ಕಳುಹಿಸಿಕೊಡುತ್ತೇನೆ. ಇದರ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷರಾದ ಸುಪ್ರಸಾದ್ ಶೆಟ್ಟಿ, ಅಧ್ಯಕ್ಷರಾದ ರವಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾದ ವಿನೋದ್ ಶೆಟ್ಟಿ, ಬ್ರಹ್ಮಾವರ ಘಟಕದ ಅಧ್ಯಕ್ಷರಾದ ಶ್ರೀಧರ್ ಪೂಜಾರಿ, ಉಪಾಧ್ಯಕ್ಷರಾದ ಸುಧಾಕರ್ ಮಡಿವಾಳ, ಅನಿಶ್ ಕೋಟ್ಯಾನ್, ನರಸಿಂಹ ಪರವ, ಕಾರ್ಯದರ್ಶಿಯಾದ ರವೀಶ್ ಕಾಮತ್, ದಯೆಶಾ ಕೋಟ್ಯಾನ್, ರಕ್ಷಿತ್ ಕೋಟ್ಯಾನ್, ಗೌರವ ಹಿತೈಷಿಗಳಾದ ನವೀನ್, ಹೆಬ್ರಿ ಘಟಕದ ಅಧ್ಯಕ್ಷರಾದ ಸುಕುಮಾರ್ ಪೂಜಾರಿ, ವಿಠ್ಠಲ್ ಪೂಜಾರಿ, ಸಂತೋಷ್ ಪೂಜಾರಿ, ನಂದಿ ಪೂಜಾರಿ, ರಂಗ ಪಾಣಾರ, ಸಂತೋಷ್ ಪಾಣಾರ, ಸರ್ವ ಸದಸ್ಯರು ಉಪಸ್ಥಿತಿಯಿದ್ದರು.

ಡಾ| ಹರ್ಷಿತಾಗೆ ಎಂಬಿಬಿಎಸ್ ನಲ್ಲಿ ಚಿನ್ನದ ಪದಕ

Thumbnail
Posted On: 22 Jun 2021, 02:51 PM

ಕಾಪು : ಶಿರ್ವ ಮೂಲದ ಡಾ| ಹರ್ಷಿತಾ ಎಚ್. ಶೆಟ್ಟಿ ಇವರು ಪುಣೆಯ ಬಿ.ಜೆ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ಎಂಬಿಬಿಎಸ್ ಪರೀಕ್ಷೆಯಲ್ಲಿ ಕಾಲೇಜಿಗೆ ಅತಿ ಹೆಚ್ಚು ಅಂಕ ಪಡೆದು ದಿ| ಡಾ| ಎ.ವಿ.ಉಮರ್ಕರ್ ಸ್ಮರಣಾರ್ಥ ನೀಡಲ್ಪಡುವ ಚಿನ್ನದ ಪದಕ ಪಡೆದಿದ್ದಾರೆ. ಮಹಾರಾಷ್ಟ್ರ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್ ನಾಸಿಕ್ ವಲಯದ ಮಹಿಳಾ ಪರೀಕ್ಷಾರ್ಥಿಗಳಲ್ಲಿ ಮೆಡಿಸಿನ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ವಿಜಯ ದೇವಿ ಫಡ್ತಾರೆ ಸ್ಮರಣಾರ್ಥ ಚಿನ್ನದ ಪದಕ ಗಳಿಸಿದ್ದಾರೆ. ಡಾ| ಹರ್ಷಿತಾ ಅವರು ಮೂರನೇ ವರ್ಷದ ಎಂಬಿಬಿಎಸ್ ಪರೀಕ್ಷೆಯಲ್ಲಿ OPTHALMOLOGY ವಿಭಾಗದಲ್ಲಿ ಚಿನ್ನದ ಪದಕ ಗಳಿಸಿದ್ದರು. 2015 -16 ರಲ್ಲಿ ಮಹಾರಾಷ್ಟ್ರದ ಸಿಇಟಿ ಪರೀಕ್ಷೆಯಲ್ಲಿ 200ಕ್ಕೆ 199 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದರು.