Updated News From Kaup

ವಿಶ್ವ ಭಾರತೀ ಫ್ರೆಂಡ್ಸ್ ಸರ್ಕಲ್ ಕೋಡಿಕಲ್ ಆಲಗುಡ್ಲ 33ನೇ ವಾರ್ಷಿಕೋತ್ಸವ

Posted On: 19-03-2021 11:07AM

ಮಂಗಳೂರು : ವಿಶ್ವ ಭಾರತೀ ಫ್ರೆಂಡ್ಸ್ ಸರ್ಕಲ್ (ರಿ) ಕೋಡಿಕಲ್ ಆಲಗುಡ್ಲ ಇದರ 33ನೇ ವಾರ್ಷಿಕೋತ್ಸವವು ಮಾ. 13 ರಂದು ಸಂಜೆ ಕೋಡಿಕಲ್ಲಿನ ನಾಗಬ್ರಹ್ಮ ಚಾವಡಿಯ ಎದುರುಗಡೆ ಎ.ಜೆ ಶೆಟ್ಟಿ ಗ್ರೌಂಡ್ ನಲ್ಲಿ ಫ್ರೆಂಡ್ಸ್ ಸರ್ಕಲ್ ಅಧ್ಯಕ್ಷರಾದ ರಾಜೇಶ್ ಸಾಲ್ಯಾನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.

ಬಳಕುಂಜೆಯಲ್ಲಿ ಜಲ ಸಮಸ್ಯೆಯ ಕುರಿತ ಕಿರುಚಿತ್ರ ಪ್ರದರ್ಶನ

Posted On: 17-03-2021 02:42PM

ಮಂಗಳೂರು : ತಾಲೂಕಿನ ಬಳಕುಂಜ ಗ್ರಾಮ ಪಂಚಾಯತಿಯಲ್ಲಿ ದೇಶದ ವಿವಿಧ ಪ್ರದೇಶದಲ್ಲಿ ಇರುವ ನೀರಿನ ಅಭಾವದ ಕುರಿತು ಒಂದು ಕಿರು ಚಿತ್ರ ಪ್ರದರ್ಶನದ ಜೊತೆಗೆ Book ಎಂಬ ಕೃತಿ ಆಧಾರಿತ ಜಲದ ಸಮಸ್ಯೆಗೆ ಸಂಬಂಧಿಸಿದ ಕಿರುಚಿತ್ರವನ್ನು ಪ್ರದರ್ಶನ ಮಾಡಲಾಯಿತು.

ಶಂಕರ್ ಶಾಂತಿ ಪ್ರಕರಣ : ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ, ಆರೋಪಿಗಳನ್ನು ಬಂಧಿಸುವ ಭರವಸೆ

Posted On: 15-03-2021 10:58PM

ಉಡುಪಿ : ಆರ್ ಟಿ ಐ ಕಾರ್ಯಕರ್ತ ಶಂಕರ್ ಶಾಂತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದು ನೈಜ ಆರೋಪಿಗಳನ್ನು ಬಂಧಿಸದ ಹಿನ್ನೆಲೆಯಲ್ಲಿ ಅವರ ಪತ್ನಿ ಪೂರ್ಣಿಮಾ ಶಂಕರ್, ಮಕ್ಕಳು ಹಾಗೂ ಕುಟುಂಬ ವರ್ಗದ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲವಾಗಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ, ದಲಿತ ಸಂಘರ್ಷ ಸಮಿತಿ, ಆರ್ ಟಿ ಐ ಕಾರ್ಯಕರ್ತರ ಸಮಿತಿ, ಜಿಲ್ಲೆಯ ವಿವಿಧ ಬಿಲ್ಲವ ಸಂಘಗಳು, ಸಮಾನ ಮನಸ್ಕರು ಮಣಿಪಾಲದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸಿಟಿ ರಿಜನ್ ಮುಂಬೈ : ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಧ್ಯಕ್ಷರಾಗಿ ನಿಲೇಶ್ ಶೆಟ್ಟಿ ಇನ್ನಾ ಆಯ್ಕೆ

Posted On: 15-03-2021 10:43PM

ಕಾಪು : ಮುಂಬಯಿ ಬಂಟರ ಸಂಘದ ಸಿಟಿ ರಿಜನ್ ಮುಂಬೈ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಧ್ಯಕ್ಷರಾಗಿ ನಿಲೇಶ್ ಶೆಟ್ಟಿ ಇನ್ನಾ ಆಯ್ಕೆಯಾಗಿರುತ್ತಾರೆ.

ಮಾಚ್೯ 21 : ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವರ್ಷಾವಧಿ ಮಹೋತ್ಸವ

Posted On: 15-03-2021 09:35PM

ಪಡುಬಿದ್ರಿ : ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪಡುಬಿದ್ರಿಯ ಧ್ವಜಾರೋಹಣ ಮಾಚ್೯ 14, ಆದಿತ್ಯವಾರ ಜರಗಿದೆ.

ಪಡುಬಿದ್ರಿ ಬ್ಲೂಫ್ಲಾಗ್ ಬೀಚ್ ನಲ್ಲಿ ನಮಾಜ್ ಮಾಡಿ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ: ವಿಶ್ವ ಹಿಂದೂ ಪರಿಷದ್, ಬಜರಂಗದಳ ಖಂಡನೆ

Posted On: 15-03-2021 08:51PM

ಕಾಪು ತಾಲೂಕಿನ ಪಡುಬಿದ್ರಿ ಬ್ಲೂಫ್ಲಾಗ್ ಬೀಚ್ ನಲ್ಲಿ ನಮಾಜ್ ಮಾಡಿ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನ‌ ಮಾಡಿರುವ ಪ್ರಕರಣ ನಡೆದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗಿರುತ್ತದೆ‌. ಈ ಪ್ರಕರಣವನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳ ಖಂಡಿಸುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ಉಡುಪಿ ಜಿಲ್ಲಾಧ್ಯಕ್ಷ ಪಿ.ವಿಷ್ಣುಮೂರ್ತಿ ಆಚಾರ್ಯ,ಕಾಪು ಪ್ರಖಂಡ ಕಾರ್ಯದರ್ಶಿ ಜಯಪ್ರಕಾಶ್ ಪ್ರಭು,ಬಜರಂಗದಳದ ಜಿಲ್ಲಾ ಸುರಕ್ಷಾ ಪ್ರಮುಖ್ ರಾಜೇಶ್ ಕೋಟ್ಯಾನ್,ಕಾಪು ಪ್ರಖಂಡ ಸಂಚಾಲಕ ಸುಧೀರ್ ಜಂಟಿಯಾಗಿ ತಿಳಿಸಿರುತ್ತಾರೆ.

ಕಾಪು : ಯಕ್ಷ ಪ್ರಿಯರು ಕಲಾ ಸಂಘಟನೆ ಉದ್ಘಾಟನೆ

Posted On: 15-03-2021 08:44PM

ಕಾಪು : ಕರಾವಳಿಯ ಗಂಡುಕಲೆ ಎಂದೇ ಬಿಂಬಿತವಾಗಿರುವ ಯಕ್ಷಗಾನ ಕಲೆ, ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಮತ್ತು ಕಲಾವಿದರನ್ನು ಪೋಷಿಸುವ ಉದ್ದೇಶದೊಂದಿಗೆ ಅಸ್ತಿತ್ವಕ್ಕೆ ಬಂದಿರುವ ಯಕ್ಷ ಪ್ರಿಯರು ಕಾಪು ಸಂಘಟನೆಯು ಮಾ.೧೩ರಂದು ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನ ಬಳಿಯಲ್ಲಿರುವ ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ ಆವರಣದಲ್ಲಿ ಉದ್ಘಾಟನೆಗೊಂಡಿತು.

ಕಾಪು ಶ್ರೀ ಮಾರಿಯಮ್ಮ ದೇವಸ್ಥಾನ ಆದಿಸ್ಥಳ ಶ್ರೀ ತ್ರಿಶಕ್ತಿ ಸನ್ನಿಧಿಯಲ್ಲಿ ವಾರ್ಷಿಕ ಮಹೋತ್ಸವ

Posted On: 13-03-2021 02:05PM

ಕಾಪು : ಕಾಪು ಶ್ರೀ ಮಾರಿಯಮ್ಮ ದೇವಸ್ಥಾನ ಆದಿಸ್ಥಳ ಶ್ರೀ ತ್ರಿಶಕ್ತಿ ಸನ್ನಿಧಿ ಕೋಟೆಮನೆ, ಮಲ್ಲಾರು, ಕಾಪು ಇಲ್ಲಿ ಮಾರ್ಚ್ 13, ಶನಿವಾರ ಮತ್ತು ಮಾರ್ಚ್ 14, ಆದಿತ್ಯವಾರ ವಾರ್ಷಿಕ ಮಹೋತ್ಸವ ಜರಗಲಿದೆ.

ಮಾಚ್೯ 14 : ಕಾಪುವಿನ ಹೋಟೆಲ್ ಮಂದಾರ ಯಾತ್ರಿ ನಿವಾಸ ವಠಾರದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Posted On: 12-03-2021 11:32AM

ಕಾಪು : ಕಾಪುವಿನ ಹೋಟೆಲ್ ಮಂದಾರ ಯಾತ್ರಿ ನಿವಾಸ ವಠಾರದಲ್ಲಿ ಮಾಚ್೯ 14, ಆದಿತ್ಯವಾರ ಶ್ರೀಮತಿ ಮತ್ತು ಶ್ರೀ ರಶ್ಮಿಕಾಂತ್ ಶೆಟ್ಟಿ, ಶ್ರೀಮತಿ ಮತ್ತು ಶ್ರೀ ವಿನಯ್ ಶೆಟ್ಟಿ ನಂದಿಕೂರು ಇವರ ಸೇವಾರ್ಥವಾಗಿ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕಲಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಮಂಗಳೂರು ಇವರಿಂದ ಸಂಜೆ 6ರಿಂದ ಶ್ರೀ ದೇವಿ ಮಹಾತ್ಮೆ ಎಂಬ ಪುಣ್ಯ ಕಥಾ ಭಾಗವನ್ನು ಬಯಲಾಟವಾಗಿ ಆಡಿತೋರಿಸಲಿರುವರು.

ಶಂಕರ್ ಶಾಂತಿ ಪ್ರಕರಣಕ್ಕೆ ನ್ಯಾಯ ಸಿಗದಿದ್ದಲ್ಲಿ ಮಕ್ಕಳೊಂದಿಗೆ ಉಪವಾಸ ಸತ್ಯಾಗ್ರಹ : ಪೂರ್ಣಿಮ ಶಂಕರ್ ಶಾಂತಿ

Posted On: 11-03-2021 07:15PM

ಉಡುಪಿ : ಶಂಕರ್ ಶಾಂತಿಯವರು ಜನಸಾಮಾನ್ಯರಿಗಾಗುತ್ತಿದ್ದ ಅನ್ಯಾಯದ ವಿರುದ್ಧ ಹೋರಾಟಗಳನ್ನು ರೂಪಿಸುತ್ತಾ ಕಾನೂನು, ನಿಯಮ ಪಾಲನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿರುವ ನನ್ನ ಗಂಡನ ಮೇಲೆ ದಿನಾಂಕ 20-02-2021, ಆದಿತ್ಯವಾರದಂದು ಮನೆಯ ಸಮೀಪದ ಕಾಳಿಕಾಂಬ ದೇವಾಲಯ ಅಡುಗೆ ಕೋಣೆಯಲ್ಲಿ ಕೂಡಿ ಹಾಕಿ, ಚಿತ್ರ ಹಿಂಸೆ ನೀಡಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಅದೇ ಸಮಯಕ್ಕೆ ಬೊಬ್ಬೆ ಕೇಳಿ ನಾನು ಸ್ಥಳಕ್ಕಾಗಮಿಸಿದಾಗ ನನ್ನ ಗಂಡ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು ಅವರನ್ನು ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿದ್ದೆ. RTI ಕಾರ್ಯಕರ್ತನಾಗಿ ಸಾಮಾಜಿಕ ನೆಲೆಯಲ್ಲಿ ತನ್ನ ಊರಿನಲ್ಲಿ ಹಾಗೂ ಸುತ್ತಮುತ್ತ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದವರು ನನ್ನ ಗಂಡ. ರಸ್ತೆ ಸಾರಿಗೆ ಸುರಕ್ಷತೆ ವಿಷಯ, ಕಾಂಕ್ರೀಟ್ ರಸ್ತೆ ಕಳಪೆ ವಿಷಯ, ಬಾರ್ಕೂರು ಜೈನ ಬಸದಿ ಅತಿಕ್ರಮಣ ತೆರವು, ಬಾರ್ಕೂರು ಗ್ರಾ. ಪಂ. ಅವ್ಯವಹಾರ, ಹೊಸಾಳ ಗರಡಿಯಲ್ಲಿ ವೈದಿಕನೋರ್ವನ ಅನಾಚಾರ ಪ್ರಶ್ನಿಸುವಿಕೆ, ಇಂತಹದ್ದೆ ಅನೇಕ ಜನಪರ ಸೇವೆಗಳಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿದವರು ನನ್ನ ಗಂಡ ಶಂಕರ ಶಾಂತಿ.