Updated News From Kaup
ಎಲ್ಲೂರು : ಮಹಾ ಶಿವರಾತ್ರಿಯ ಪ್ರಯುಕ್ತ ನಿರಂತರ ಭಜನೆ
Posted On: 11-03-2021 02:55PM
ಎಲ್ಲೂರು ,ಮಾ.11: ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದಲ್ಲಿ 'ಮಹಾ ಶಿವರಾತ್ರಿ'ಯ ಪ್ರಯುಕ್ತ ವಿವಿಧ ಆಹ್ವಾನಿತ ತಂಡಗಳಿಂದ ನಿರಂತರ ಭಜನಾ ಕಾರ್ಯಕ್ರಮವನ್ನು ಪ್ರತಿ ವರ್ಷದಂತೆ ಶ್ರೀ ವಿಶ್ವೇಶ್ವರ ದೇವಸ್ಥಾನ ಎಲ್ಲೂರು ಹಾಗೂ ಎಲ್ಲೂರು ಯುವಕ ಮಂಡಲ(ರಿ) ಜಂಟಿಯಾಗಿ ಹಮ್ಮಿಕೊಂಡಿದ್ದು ದೇವಳದ ಪವಿತ್ರಪಾಣಿ ಕೆ.ಎಲ್.ಕುಂಡಂತಾಯ ಮತ್ತು ಎಲ್ಲೂರುಗುತ್ತು ಪ್ರಪುಲ್ಲ ಶೆಟ್ಟಿ ಅವರು ಉದ್ಘಾಟಿಸಿದರು.
ರಾಷ್ಟ್ರಮಟ್ಟದ ದಾಖಲೆ ನಿರ್ಮಿಸಿದ ರೇಣುಕಾ ಗೋಪಾಲಕೃಷ್ಣ ಪೆರಂಪಳ್ಳಿಗೆ ಸನ್ಮಾನ
Posted On: 11-03-2021 10:22AM
ಉಡುಪಿ : ವಿಶ್ವ ಮಹಿಳಾ ದಿನಾಚರಣೆಯಂದು ಕಡಿಮೆ ಅವಧಿಯಲ್ಲಿ 108 ಸೂರ್ಯ ನಮಸ್ಕಾರಗಳನ್ನು ಪೂರ್ಣಗೊಳಿಸಿ ಕರ್ನಾಟಕ ಎಚೀವರ್ಸ್ ಬುಕ್ ಆಫ್ ರೆಕಾರ್ಡ್ ನಲ್ಲಿ ರಾಷ್ಟ್ರಮಟ್ಟದ ದಾಖಲೆ ನಿರ್ಮಿಸಿದ ಶ್ರೀಮತಿ ರೇಣುಕಾ ಗೋಪಾಲಕೃಷ್ಣರವರನ್ನು ಸಿ ಎಸ್ ಪಿ ಪೊಲೀಸ್ ಅಧೀಕ್ಷಕ ಚೇತನ್ ಆರ್. ಐಪಿಎಸ್ ಸನ್ಮಾನಿಸಿದರು.
ಶಿವರಾತ್ರಿ : ಶಿವಸ್ಮರಣೆ - ಜಗವು ಶಿವನೊಳಗುಂಟು ಜಗದೊಳು ಶಿವನಿಲ್ಲ ...!
Posted On: 11-03-2021 09:54AM
{ ಮಾಘ ಮಾಸದಲ್ಲಿ ಸನ್ನಿಹಿತವಾಗುವ ಬಹುಳ ಚತುರ್ದಶಿಯಂದು "ಶಿವರಾತ್ರಿ" . ಇದು ಹಬ್ಬವಲ್ಲ ವ್ರತ. ಅಭಿಷೇಕ - ಅರ್ಚನೆಗಳೇ ಪ್ರಧಾನವಾಗಿರುವ ಆರಾಧನೆ. ಉಪವಾಸದ ಶ್ರದ್ಧೆ , ದಿನಪೂರ್ತಿ ಮಹೇಶ್ವರನ ಸನ್ನಿಧಾನದಲ್ಲಿ ಕಾಲಕಳೆಯುವ ವ್ರತ ನಿಷ್ಠೆಗಳ ಸಂಕಲ್ಪ .ಇದೇ ಶಿವರಾತ್ರಿ.} ಸೃಷ್ಟಿ ಕರ್ತನಾದ ಬ್ರಹ್ಮನ ಸತ್ಯಲೋಕ ಎಲ್ಲಿದೆ ,ಪಾಲನಾ ಕರ್ತನಾದ ನಾರಾಯಣನ ವೈಕುಂಠ ಎಲ್ಲಿದೆ,ಇಂದ್ರನ ಸ್ವರ್ಗ ಎಲ್ಲಿದೆ, ಯಮನ ಶೈಮಿನಿ ಎಲ್ಲಿದೆ . ಇವೆಲ್ಲ ಪುರಾಣದ ವರ್ಣನೆಗಳಿಂದ ಋಷಿ ವಾಕ್ಯಗಳಿಂದ ಕಲ್ಪನೆಯಲ್ಲಿ ಸಂಭವಿಸುವ ಅಥವಾ ಅರ್ಥೈಸಿಕೊಳ್ಳಬಹುದಾದ ಲೋಕಗಳು.ಆದರೆ ಲಯಾಧಿಕಾರಿಯಾದ ಮಹಾದೇವನ ವಾಸಸ್ಥಾನ ಎಲ್ಲಿದೆ ಎಂಬ ಪ್ರಶ್ನೆಗೆ ಉತ್ತರ ಸರಳ .ಅದು ಭರತವರ್ಷದ ಉತ್ತರದಲ್ಲಿರುವ ಬೆಳ್ಳಿಬೆಟ್ಟ ,ಗೌರಿಶಂಕರ ಅಥವಾ ಕೈಲಾಸ.ಈ ನೆಲೆಯನ್ನು ಕಲ್ಪಿಸಬೇಕಾಗಿಲ್ಲ , ಭೂಮಿಯಲ್ಲಿ ಬದುಕುವ ಪ್ರತಿಯೊಬ್ಬನೂ ಆಲೋಚಿಸಿ ನಿರ್ಧರಿಸಬಹುದಾದ ನೆಲೆಯಾಗಿದೆ ಮಹಾದೇವನ ವಾಸಸ್ಥಾನ.ಆದುದರಿಂದಲೇ ಮಹಾರುದ್ರದೇವರು ಸುಲಭ ಗ್ರಾಹ್ಯರು, ಜನಮಾನಸಕ್ಕೆ ಸಮೀಪದ ದೇವರು. ಜನಪದರ ಆರಾಧ್ಯ ಮೂರ್ತಿ, ಶಿಷ್ಟ ಚಿಂತನೆಯಲ್ಲಿ 'ಅಧ್ಯಾತ್ಮದ ಒಂದು ಬೆರಗು'. ಜಗತ್ತಿಗೆ ಮಾತೃ - ಪಿತೃ ಸ್ಥಾನದಲ್ಲಿರುವ ಪಾರ್ವತಿ ಸಮೇತನಾದ ಮಹೇಶ್ವರ ; ಇವರ ದಾಂಪತ್ಯ ಆದರ್ಶ ಎಂದೇ ಮನುಕುಲ ಸ್ವೀಕರಿಸಿದೆ.
ಶಂಕರಪುರ ಸೆಂಟ್ ಜೋನ್ಸ್ ಶಾಲೆಗಳ ಹಳೆವಿದ್ಯಾರ್ಥಿ ಸಂಘದಿಂದ ಮಕ್ಕಳಿಗಾಗಿ ಹದಿಹರೆಯದ ಸಮಸ್ಯೆಗಳು ಮತ್ತು ಪರಿಹಾರ ಕಾರ್ಯಕ್ರಮ
Posted On: 09-03-2021 10:47PM
ಕಾಪು : ಸೆಂಟ್ ಜೋನ್ಸ್ ಶಾಲೆಗಳ ಹಳೆವಿದ್ಯಾರ್ಥಿ ಸಂಘವು ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಸೈಂಟ್ ಜೋನ್ಸ್ ವಿದ್ಯಾಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿಯರಿಗಾಗಿ ಹದಿಹರೆಯದ ಸಮಸ್ಯೆಗಳು ಮತ್ತು ಪರಿಹಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾಪು ಲಯನ್ಸ್ ಕ್ಲಬ್ ವತಿಯಿಂದ ಸ್ವಾಗತ, ಸಂದೇಶ ಸಾರುವ ಫಲಕ
Posted On: 09-03-2021 10:35PM
ಕಾಪು : ಕಾಪು ಲಯನ್ಸ್ ಕ್ಲಬ್ ವತಿಯಿಂದ ಕಾಪು ಪುರಸಭಾ ವ್ಯಾಪ್ತಿಯಲ್ಲಿ ಪಾಂಗಳ ಸೇತುವೆ ಹತ್ತಿರ ಬೀಚ್ ಸಿಟಿ ಕಾಪುವಿಗೆ ಪುರಸಭಾ ವ್ಯಾಪ್ತಿಗೆ ಸ್ವಾಗತ ಹಾಗೂ ರಸ್ತೆ ಮೇಲೆ ಕಸ ಹಾಕಬೇಡಿ ಎಂಬ ಸಂದೇಶ ಸಾರುವ ಫಲಕ ಲಯನ್ಸ್ ನ ಜಿಲ್ಲಾ ಗವರ್ನರ್ ಯನ್.ಎಮ್. ಹೆಗ್ಡೆ ಹಾಗೂ ಕಾಪು ಪುರಸಭಾ ಅಧಕ್ಷ ರಾದ ಅನಿಲ್ ಕುಮಾರ್ ರವರು ಜಂಟಿಯಾಗಿ ಉದ್ಘಾಟಿಸಿದರು.
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಶ್ರೀಮತಿ ಬೇಬಿ ರಮೇಶ್ ಪೂಜಾರಿಯವರಿಗೆ ಸಮ್ಮಾನ
Posted On: 09-03-2021 10:29AM
ಉಡುಪಿ : ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.) ಉಡುಪಿ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಅಂಗ ವಾಗಿ ತೆರೆಮರೆಯಲ್ಲಿ ಸಮಾಜ ಸೇವೆ ಮಾಡುತ್ತಿರುವ ಶ್ರೀಮತಿ ಬೇಬಿ ರಮೇಶ್ ಪೂಜಾರಿಯವರನ್ನು ಬ್ರಹ್ಮಾವರ ಗ್ರಂಥಾಲಯದಲ್ಲಿ ಫಲ ಪುಷ್ಪ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಗೆ ಬಜೆಟ್ ನಲ್ಲಿ ಯಾವುದೇ ಘೋಷಣೆ ಇಲ್ಲ : ಉಡುಪಿ ಜಿಲ್ಲಾ NSUI ಉಪಾಧ್ಯಕ್ಷ ಮೊಹಮ್ಮದ್ ಝಮೀರ್
Posted On: 09-03-2021 10:23AM
ಕೊರೊನ ಸಂಕಷ್ಟ ನಂತರ ಶಾಲಾ ಕಾಲೇಜು ಒಪನ್ ಆಗಿದೆ ಆದರೆ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಶಾಲಾ ಫೀಸ್ ಕಟ್ಟುವ ಪರಿಸ್ಥಿತಿಯಲ್ಲಿ ಇಲ್ಲ. ಬಸ್ ನಲ್ಲಿ ಬರುವ ಸಾಮರ್ಥ್ಯವು ಇಲ್ಲ ಹಾಗೂ ಕೊರೊನ ಸಂಕಷ್ಟದಿಂದ ಅನೇಕ ವಿಧ್ಯಾರ್ಥಿಗಳು ಶಾಲಾ ಕಾಲೇಜ್ ಗೆ ಹೋಗುವುದಕ್ಕೂ ಕಷ್ಟವಾಗಿದೆ.
ಹೋಂ ಡಾಕ್ಟರ್ ಫೌಂಡೇಶನ್ : ವೈಶಿಷ್ಟ್ಯ ಪೂರ್ಣ ವಿಶ್ವ ಮಹಿಳಾ ದಿನಾಚರಣೆ
Posted On: 08-03-2021 10:48PM
ಉಡುಪಿ : 64 ರ ಇಳಿ ವಯಸ್ಸಲ್ಲೂ ಚರ್ಮುರಿ ಮಾರಿ ಒಳ್ಳೆಯ ರೀತಿಯಲ್ಲಿ ಇನ್ನೊಬ್ಬರ ಕೈ ನೋಡದೆ ಜೀವನ ನಡೆಸುತ್ತಿರುವ ಅಜ್ಜರಕಾಡು ಪಾರ್ಕ್ ಬಳಿ ಕಳೆದ 27 ವಷ೯ದಿಂದ ಚರ್ಮುರಿ ಮಾರಿ ಉಡುಪಿಯಲ್ಲಿ ಬಾಡಿಗೆ ಮನೆ ಯಲ್ಲಿ ಒಬ್ಬಂಟಿ ವಾಸ ವಿರುವ ಧೀರ ಮಹಿಳೆ ಶಿಕಾರಿಪುರ ಮೂಲದ ಶಾಕುಂತಲ ರವರನ್ನು ಹೋಂ ಡಾಕ್ಟರ್ ಫೌಂಡೇಶನ್ ವತಿಯಿಂದ ಮಾ.8ರಂದು ಸ್ಪಂದನ ವಿಶೇಷ ಚೇತನ ಮಕ್ಕಳ ಶಾಲೆ ಉಪ್ಪುರುನಲ್ಲಿ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾಯ೯ಕ್ರಮದಲ್ಲಿ ಸನ್ಮಾನಿಸಲಾಯಿತು.
ಮಕ್ಕಳ ಕೃಷಿ ಆಸಕ್ತಿಗೆ ನೆರವಾದ ಉಡುಪಿಯ ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ ತಂಡ
Posted On: 07-03-2021 10:58PM
ಉಡುಪಿ, ಮಾ.7 : ಆಸರೆ ಹೆಲ್ಪಿಂಗ್ ಹ್ಯಾಂಡ್ಸ್ (ರಿ.) ಉಡುಪಿ ತಂಡವು ಬ್ರಹ್ಮಾವರದ ಮಠಪಾಡಿಯಲ್ಲಿ ಇರುವ ಕೂಲಿ ಕಾರ್ಮಿಕರ ವಸತಿ ಗೃಹಕ್ಕೆ ಭೇಟಿ ನೀಡಿದರು.
ಸುಳ್ಳು ಆರೋಪ ಹೊರಿಸಿದವರನ್ನು ಸತ್ಯ ಪ್ರಮಾಣಕ್ಕಾಗಿ ಆಹ್ವಾನಿಸಿದ ಶಂಕರ್ ಶಾಂತಿ
Posted On: 06-03-2021 08:19PM
ಬ್ರಹ್ಮಾವರ : ಕಾಳಿಕಾಂಬಾ ದೇವಸ್ಥಾನದೊಳಗೆ ನನ್ನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿಲ್ಲ ಎನ್ನುವ ಮೊಕ್ತೇಸರ ಶ್ರೀಧರ ಆಚಾರ್ಯ ಅವರು ಹೇಳಿರುವ ಹೇಳಿಕೆಯನ್ನು ಸಾಮಾಜಿಕ ಕಾರ್ಯಕರ್ತ ಶಂಕರ ಶಾಂತಿ ಅವರು ಸಂಪೂರ್ಣ ಸುಳ್ಳಿನ ಆರೋಪವೆಂದು ಬಲವಾಗಿ ಖಂಡಿಸಿದ್ದು, ಇವಾಗ ಅವರು ಉಡುಪಿ, ದಕ್ಷಿಣ ಕನ್ನಡದ ಕಾರಣಿಕ ಕ್ಷೇತ್ರಗಳ ದೈವ ದೇವರುಗಳಲ್ಲಿ ಪ್ರಮಾಣ ಮಾಡಲು ಆಹ್ವಾನಿಸಿದ್ದಾರೆ.
