Updated News From Kaup
92ನೇ ಹೇರೂರು : ಕಂಡಡೊಂಜಿ ದಿನ ಕಾರ್ಯಕ್ರಮ
Posted On: 04 Jul 2021, 03:36 PM
ಕಾಪು : ವಿಕಾಸ ಸೇವಾ ಸಮಿತಿ ಮತ್ತು ಮಹಿಳಾ ಬಳಗ 92ನೇ ಹೇರೂರು ಹಾಗೂ ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ (ರಿ.) ಮತ್ತು ಮಹಿಳಾ ಬಳಗ, ಶಿರ್ವ ಇದರ ಸಂಯುಕ್ತ ಆಶ್ರಯದಲ್ಲಿ ಕಂಡಡೊಂಜಿ ದಿನ ಕಾರ್ಯಕ್ರಮ 92ನೇ ಹೇರೂರು ಶ್ರೀ ಬಡ್ದು ಶೆಟ್ರ ಕೃಷಿ ಭೂಮಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹೇರೂರುನ ಹಿರಿಯ ಕೃಷಿಕರಾದ ಶ್ರೀ ಬಡ್ದು ಶೆಟ್ಟಿ, ಹಿರಿಯ ನಾಟಿ ವೃತ್ತಿಯನ್ನು ಮಾಡುತಿದ್ದ ಶ್ರೀಮತಿ ಜಯಂತಿ ದಾಮೋದರ ಆಚಾರ್ಯ, ಕಲ್ಲುಗುಡ್ಡೆ ಇವರನ್ನು ಅಭಿನಂದಿಸಲಾಯಿತು. ಕೃಷಿಕರಾದ ಶ್ರೀ ವಿಜಯ ಶೆಟ್ಟಿ, ಶ್ರೀಮತಿ ರೇಣುಕಾ ಶೆಟ್ಟಿ ಮಾರ್ಗದರ್ಶನ ನೀಡಿದರು. ಯುವ ಸಂಗಮದ ಅಧ್ಯಕ್ಷ ಉಮೇಶ್ ಆಚಾರ್ಯ ಸಂಧರ್ಬೋಚಿತವಾಗಿ ಮಾತನಾಡಿದರು. ಮಹಿಳಾ ಬಳಗದ ಅಧ್ಯಕ್ಷೆ ಸುಮತಿ ಆಚಾರ್ಯ. ವಿಕಾಸ ಸೇವಾ ಸಮಿತಿ ಮಹಿಳಾ ಬಳಗದ ಅಧ್ಯಕ್ಷೆ ಶ್ರೀಮತಿ ವಿಜಯ ವಿಘ್ನೇಶ್ ಆಚಾರ್ಯ, ಹೇರೂರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಮಂಜುಳಾ ಗಣೇಶ್ ಆಚಾರ್ಯ ಉಪಸ್ಥಿತರಿದ್ದರು. ವಿಕಾಸ ಸೇವಾ ಸಮಿತಿ ಅಧ್ಯಕ್ಷ ಮಾಧವ ಆಚಾರ್ಯ ಕಾರ್ಯಕ್ರಮ ಸಂಘಟಿಸಿದ್ದರು.
ಕಾಪು : ಕಲ್ಕುಡ ದೈವಸ್ಥಾನದ ವಠಾರದಲ್ಲಿ ವನಮಹೋತ್ಸವ
Posted On: 04 Jul 2021, 03:27 PM
ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಪು ಒಕ್ಕೂಟ ಮತ್ತು ಶ್ರೀ ದೂಮಾವತಿ ಸ್ವಸಹಾಯ ಸಂಘ ಕಾಪು ಇದರ ಜಂಟಿ ಸಹಯೋಗದಲ್ಲಿ ಶ್ರೀ ಕಲ್ಕುಡ ದೈವಸ್ಥಾನದ ವಠಾರದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ ಮೇಲ್ವಿಚಾರಕರಾದ ಶ್ರೀಮತಿ ಮಮತಾ, ಕಾಪು ಪುರಸಭಾ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಒಕ್ಕೂಟದ ಸೇವಾ ಪ್ರತಿನಿಧಿ ಪ್ರೇಮ ಆರ್. ಕೋಟಿಯನ್, ಸುಮನಾ, ಲಕ್ಷ್ಮಿಕಾಂತ್ ದೇವಾಡಿಗ ಒಕ್ಕೂಟದ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕುಂದಾಪುರ : ಶ್ರೀ ದೇವಿ ಕಂಗನ್ ಸ್ಟೋರ್ ಉದ್ಘಾಟನೆ
Posted On: 03 Jul 2021, 11:35 AM
ಉಡುಪಿ : ಒಂದೇ ಸೂರಿನಡಿಯಲ್ಲಿ ಎಲ್ಲಾ ಮಹಿಳೆಯರ ಶೃಂಗಾರದ ಅಲಂಕಾರಿಕ ವಸ್ತುಗಳು ಲಭ್ಯ. ಹೊಸತನದಿಂದ ಕೂಡಿದ ಬಳೆ! ಮೇಕಪ್ ಸಾಧನಗಳು! ಮುದ್ದು ಮಕ್ಕಳಿಗೆ ಬೇಕಾಗುವ ಅಲಂಕಾರಿಕ ವಸ್ತುಗಳು! ನೈಲ್ ಪಾಲೀಶ್! ವಿವಿಧ ಬಗೆಯ ಸರಗಳು! ಶ್ರೀ ದೇವಿ ಕಂಗನ್ ಸ್ಟೋರ್ ನಲ್ಲಿ ಲಭ್ಯ. ಶ್ರೀ ದೇವಿ ಕಂಗನ್ ಸ್ಟೋರ್ ಇದರ ಉದ್ಘಾಟನೆಯನ್ನು ಶರಶ್ಚಂದ್ರ ಶೆಟ್ಟಿ ನೆರವೇರಿಸಿದರು. ಕುಂದಾಪುರ ಪುರಸಭೆ ಸದಸ್ಯರಾದ ಪ್ರಭಾಕರ ವಿ, ಲಕ್ಷೀ ಬಳೆಗಾರ ದೀಪ ಬೆಳಗಿಸಿದರು. ಉದ್ಯಮಿಗಳಾದ ರತ್ನಾಕರ ಶೆಟ್ಟಿ, ಸಂತೋಷ್ ಪಟೇಲ್ , ಮಾಲಕರಾದ ಗಣೇಶ್ ಜೋಗಿ, ಸತೀಶ್ ಜೋಗಿ ಮತ್ತು ಮಹಾಬಲ ಜೋಗಿ, ಪ್ರಸಾದ್ ಜೋಗಿ, ಸಂಜೀವ ಹಲ್ನಾಡು, ಬಾಬು ಶೆಟ್ಟಿ ಉಪಸ್ಥಿತರಿದ್ದರು.
ಕೊಪ್ಪರಿಗೆ : ತುಳು ಪದಗಳ ಅರ್ಥ, ಪದಗಳನ್ನು ಸೇರಿಸಬಹುದಾದ ಆನ್ ಲೈನ್ ತುಲು ಡಿಕ್ಷನರಿ
Posted On: 03 Jul 2021, 09:30 AM
ಕಾಪು : ಒಂದು ಭಾಷೆಯ ಉಳಿಯುವಿಕೆಗೆ ಅದರ ಜ್ಞಾನ ಅತೀ ಅಗತ್ಯ. ಬೇರೆ ಭಾಷೆಗಳಿಂದ ಪದಗಳನ್ನು ಎರವಲು ಪಡೆಯುವುದರ ಜೊತೆಗೆ ಸ್ವಭಾಷೆಯ ಮೂಲ ಪದಗಳನ್ನು ಉಳಿಕೊಳ್ಳುವುದು ಕೂಡ ಅವಶ್ಯಕ. ಹಿಂದೆ ಅಂತರ್ಜಾಲ, ಸಾರಿಗೆ ಸಂಪರ್ಕವಿಲ್ಲದ ಕಾಲದಲ್ಲಿ ಮ್ಯಾನರ್ ಅವರು ತುಳು ನಿಘಂಟುವಿನ ರಚನೆಗೆ ಕಷ್ಟಪಟ್ಟು ಪ್ರತೀ ಮನೆ ಮನೆಗೆ ತೆರಳಿ ನಿಘಂಟನ್ನು ರಚಿಸಿರುತ್ತಾರೆ. ಆದರೆ ಅಂದಿನಿಂದ ಇಂದಿನವರೆಗೆ 140 ವರ್ಷಗಳಲ್ಲಿ ಹೊಸ ತಂತ್ರಜ್ಞಾನದ ಉಗಮವಾದರೂ ತುಳು ಪದಕೋಶದ ಬೆಳವಣಿಗೆ ಕುಂಟಿತವಾಗಿದೆ. ಇದನ್ನು ಸರಿಪಡಿಸಲು "ಕೊಪ್ಪರಿಗೆ -ಆನ್ ಲೈನ್ ತುಲು ಡಿಕ್ಷನರಿ"ಯನ್ನು ಜೈತುಲುನಾಡ್ ಸಂಘಟನೆಯ ಮುಖೇನ ಸಿದ್ಧಪಡಿಸಿದ್ದೇವೆ. ಇದರ ವಿಶೇಷವೇನೆಂದರೆ ಜನರೇ ತಮಗೆ ತಿಳಿದಿರುವ ಪದಗಳನ್ನು ಸೇರಿಸಬಹುದಾಗಿದೆ. ಪದಗಳ ಅರ್ಥಗಳನ್ನು ಪಂಚದ್ರಾವಿಡ ಭಾಷೆಗಳಲ್ಲಿ ತಿಳಿಯುವುದರ ಜೊತೆಗೆ ಅವುಗಳ ಭಾವಚಿತ್ರ, ಉಚ್ಚಾರ, ವೈದ್ಯಕೀಯ ಮಹತ್ವ ಹಾಗೂ ಉಪಯೋಗಗಳ ಕುರಿತು ಮಾಹಿತಿ ಲಭ್ಯವಿರುತ್ತದೆ. ಡಿಕ್ಷನರಿ ಕಾರ್ಯಕ್ಕೆ ಧನಸಹಾಯಗೈದು, ಸಲಹೆ ಸೂಚನೆ ನೀಡಿ ಸಹಕರಿಸಿದ ಎಲ್ಲಾ ಸಂಘಟನೆಯ ಸದಸ್ಯರು,ಪ್ರಮುಖರು,ಭಾಷಾಭಿಮಾನಿಗಳು, ಡಿಕ್ಷನರಿ ಅಡ್ಮಿನ್ ತಂಡ ಹಾಗೂ ಡಿಕ್ಷನರಿ ಡೇಟಾ ತಂಡಕ್ಕೆ ಧನ್ಯವಾದಗಳು ಎಂದು ಜೈ ತುಲುನಾಡ್ (ರಿ.) ಬೆಂಗಳೂರು ಘಟಕದ ಉಪಾಧ್ಯಕ್ಷರು ಮತ್ತು ಡಿಕ್ಷನರಿ ಡೆವೆಲಪರ್ ಸುಮಂತ್ ಪೂಜಾರಿ ಹೆಬ್ರಿ ತಿಳಿಸಿದ್ದಾರೆ.
ಕುಂದಾಪುರ : ಯುವ ಬಂಟರ ಸಂಘದ ವತಿಯಿಂದ ನಟ ರಕ್ಷಿತ್ ಶೆಟ್ಟಿ ಬಗ್ಗೆ ಅವಹೇಳನಗೈದ ಖಾಸಗಿ ಚಾನೆಲ್ ವಿರುದ್ಧ ದೂರು
Posted On: 02 Jul 2021, 07:19 PM
ಉಡುಪಿ : ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಇಂದು ಕುಂದಾಪುರದಲ್ಲಿ ನಟ ರಕ್ಷಿತ್ ಶೆಟ್ಟಿ ಅವರ ಬಗ್ಗೆ ಕನ್ನಡದ ರಾಜ್ಯ ಮಟ್ಟದ ಖಾಸಗಿ ಟಿವಿಯಲ್ಲಿ ಸಿನಿಮಾ ಸಂಬಂಧಿತ ಕಾರ್ಯ ಕ್ರಮದಲ್ಲಿ ನಟ ರಕ್ಷಿತ್ ಶೆಟ್ಟಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಲ್ಲದೆ ನಿಂದಿಸಿದ್ದಾರೆ. ಇದರಿಂದ ರಕ್ಷಿತ್ ಶೆಟ್ಟಿ ಅವರ ಅಭಿಮಾನಿಗಳಲ್ಲಿ ಬಹಳ ಬೇಸರ ಉಂಟಾಗಿದೆ ಎಂದು ಕುಂದಾಪುರದಲ್ಲಿ ಯುವ ಬಂಟರ ಸಂಘದ ವತಿಯಿಂದ ಅಧ್ಯಕ್ಷರಾದ ಸುನಿಲ್ ಶೆಟ್ಟಿ ಹೇರಿಕುದ್ರು ಇವರ ನೇತತ್ವದಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿದವರ ವಿರುದ್ಧ ಕುಂದಾಪುರ ಪೋಲಿಸ್ ಉಪಾಧೀಕ್ಷಕರ ಕಚೇರಿಯಲ್ಲಿ ದೂರನ್ನು ನೀಡಲಾಗಿದೆ. ಈ ಸಿನಿಮಾ ಸಂಬಂಧಿತ ಕಾರ್ಯಕ್ರಮವನ್ನು ಆಯೋಜಿಸಿದವರು ಯಾರೇ ಆಗಲಿ ಅವರು ಕೂಡಲೇ ಕ್ಷಮೆ ಯಾಚಿಸಬೇಕೆಂದು ಹಾಗೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮನವಿಯನ್ನು ಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಉದಯ್ ಕುಮಾರ್ ಶೆಟ್ಟಿ ಮಚ್ಚಟ್ಟು, ಸಂತೋಷ್ ಶೆಟ್ಟಿ, ಸದಸ್ಯರಾದ ಭರತ್ ಶೆಟ್ಟಿ, ಸಚಿನ್ ಶೆಟ್ಟಿ ವಕ್ವಾಡಿ, ರೋಶನ್ ಶೆಟ್ಟಿ, ಮಹೇಂದರ್ ಶೆಟ್ಟಿ ಉಪಸ್ಥಿತರಿದ್ದರು.
ಶಿರ್ವ : ಹತ್ತು ಸಾವಿರ ಮಾಸ್ಕ್ ವಿತರಣೆ ಅಭಿಯಾನ
Posted On: 02 Jul 2021, 07:02 PM
ಶಿರ್ವ : ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಸ್ನಾತಕೋತ್ತರ ಅಧ್ಯಯನ ಕೇಂದ್ರ ಎಂ ಎಸ್ ಡಬ್ಲ್ಯೂ ,ಎಂಕಾಂ,ಎನ್ ಸಿಸಿ,ಎನ್ ಎಸ್ ಎಸ್ ,ರೋವರ್ಸ-ರೇಂಜರ್ಸ್ ಹಾಗೂ ರಿಲಯನ್ಸ್ ಫೌಂಡೇಶನ್ ಜಂಟಿಯಾಗಿ 10000 ಮಾಸ್ಕಗಳ ವಿತರಣೆ ಅಭಿಯಾನವನ್ನು ಆರೋಗ್ಯ ಸಮುದಾಯ ಕೇಂದ್ರ ,ಶಿರ್ವ, ಪೋಸ್ಟ್ ಆಫೀಸ್, ಆರಕ್ಷಕರ ಠಾಣೆ, ಆಶಾ ಓಲ್ಡ್ ಏಜ್ ಹೋಂ, ಮಸೀದಿ, ದೇವಾಲಯ, ಚರ್ಚ್, ಶಿರ್ವ ಗ್ರಾಮ ಪೇಟೆ , ಕಾಲೇಜಿನ ಸಂತ ಮೇರಿ ಸಮೂಹ ಸಂಸ್ಥೆಗಳ ಪ್ರದೇಶಗಳಲ್ಲಿ ಆಯೋಜಿಸಲಾಯಿತು. ಈ ಅಭಿಯಾನಕ್ಕೆ ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ ಆರ್ ಪಾಟ್ಕರ್ ಮಾತನಾಡಿ ಕೋವಿಡ್ ಅಂತಹ ಸಾಂಕ್ರಮಿಕ ಕಾಯಿಲೆಗಳನ್ನು ಎದುರಿಸಬೇಕಾಗಿದ್ದರೆ ಸಾರ್ವಜನಿಕರು ತಪ್ಪದೇ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮನೆಯಿಂದ ಹೊರಗೆ ಬರುವಾಗ ಮುಖಕ್ಕೆ ಮಾಸ್ಕನ್ನು ಧರಿಸಬೇಕು. ಪ್ರಸ್ತುತ ಲಾಕ್ಡೌನ್ ನಂತರ ಈ ನಿಯಮ ಉಲ್ಲಂಘನೆಯನ್ನು ಮಾಡುವ ನಾಗರಿಕರ ಮೇಲೆ ಸೂಕ್ತ ಕ್ರಮವನ್ನು ತಗೆದುಕೊಳ್ಳುವುದು ಎಂದು ಮಾಸ್ಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಅಭಿಯಾನವನ್ನು ಶಿರ್ವ ಆರೋಗ್ಯ ಮಾತ ಇಗರ್ಜಿಯ ಸಹಾಯಕ ಧರ್ಮಗುರುಗಳಾದ ಫಾದರ್ ರೋಲ್ವಿನ್ ಅರಾನ್ಹಾ ಅವರ ಹಾರೈಕೆಗಳೊಂದಿಗೆ ಆರಂಭಿಸಲಾಯಿತು. ಪ್ರಸ್ತುತ ಕೋವಿಡ್ ನಂತಹ ಸಾಂಕ್ರಮಿಕ ಕಾಯಿಲೆಗಳನ್ನು ಎದುರಿಸಬೇಕಾದರೆ ಕೋವಿಡ್ -19 ಲಸಿಕೆ ಪಡೆಯುವುದು ಮಾತ್ರವೇ ಮುಖ್ಯವಲ್ಲ ಮಾಸ್ಕ ಕಡ್ಡಾಯವಾಗಿ ಧರಿಸಬೇಕು ಜೀವವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ, ಎಂದು ಹೇಳಿ ಇಂತಹ ಒಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಕಾಲೇಜಿನ ಪ್ರಾಂಶುಪಾಲರು, ಪದಾಧಿಕಾರಿಗಳು ಹಾಗೂ ಇಂತಹ ಕಾರ್ಯಕ್ರಮಕ್ಕೆ ಸಹಕರಿಸಿದ ಶಿರ್ವ ಗ್ರಾಮ ಪಂಚಾಯತಿನ ಅಧ್ಯಕ್ಷರು ಮತ್ತು ಪಿಡಿಓ ರವರನ್ನು ಶ್ಲಾಘಿಸಿ ಆಶೀರ್ವದಿಸಿದ್ದರು. ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ ನಾಯಕ್, ಗ್ರಾ.ಪಂ.ಸದಸ್ಯ ಹಸನಬ್ಬ ಶೇಖ್,ವಿದ್ಯಾರ್ಥಿ ಕ್ಷೇಮಾಮಾಭಿವೃದ್ಧಿ ನಿರ್ದೇಶಕಿ ಕು.ಯಶೋದಾ,ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್,ಎನ್ಎಸ್ಎಸ್ ಅಧಿಕಾರಿ ಶ್ರೀ ಪ್ರೇಮನಾಥ್,ಕು. ರಕ್ಷಾ, ರೇಂಜರ್ಸ್ ಲೀಡರ್ ಗಳಾದ ಶ್ರೀ ಪ್ರಕಾಶ್,ಶ್ರೀಮತಿ ಸಂಗೀತ ಪೂಜಾರಿ, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ಜಗದೀಶ್ ಆಚಾರ್ಯ, ಶ್ರೀಮತಿ ಶರ್ಮಿಳಾ, ಗ್ರಂಥಪಾಲಕ ಶ್ರೀ ಪ್ರಮೋದ್ , ಶ್ರೀ ಕಿರಣ್ ಕುಮಾರ್,ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಾವ೯ಜನಿಕರಿಗೆ ಮಾಸ್ಕ್ ವಿತರಿಸುವಲ್ಲಿ ವಿದ್ಯಾರ್ಥಿಗಳ ಜೊತೆ ಕೈಜೋಡಿಸಿದರು. ಈ ಅಭಿಯಾನಕ್ಕೆ ಸಹಕಾರವನ್ನು ನೀಡಿದ ಶಿರ್ವ ಕಾಲೇಜಿನ ವಿವಿಧ ಘಟಕಗಳ ವಿದ್ಯಾರ್ಥಿ ನಾಯಕರಾದ ಸೀನಿಯರ್ ಅಂಡರ್ ಆಫೀಸರ್ ಭಟ್ ರಾಮದಾಸ ಸತೀಶ್, ಜೂನಿಯರ್ ಅಂಡರ್ ಆಫೀಸರ್ ಪ್ರವಿತ ಆಚಾರ್ಯ, ರಿಯಾನ್ ರಿಷಿ ಅಲ್ಫೋನ್ಸೋ,ಕಂಪೆನಿ ಸಾರ್ಜಂಟ್ ಮೇಜರ್ ಪ್ರತಿಮಾ ಆಚಾರ್ಯ , ಕಂಪನಿ ಕ್ವಾಟರ್ಮಸ್ಟರ್ ರೈನ ಅಂದ್ರಾದೆ,ಸೇರ ಮಾತೆ ಮ್ಯಾಕ್ ವಾನ್ , ಲೀಡರ್ ಗಳಾದ ಅಕ್ಷಯ್, ಸುರೇಖಾ, ಡೆರಿಲ್ ಡೇಸಾ, ಅಪೇಕ್ಷ , ವೈಷ್ಣವಿ, ಫ್ರಾಂಕ್ಲಿನ್ ಮತಾಯಸ್ ಮತ್ತು ಪ್ರತಿಕ್ಷ ಸಾರ್ವಜನಿಕರಿಗೆ ಮಾಸ್ಕನ್ನು ವಿತರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಈ ಅಭಿಯಾನದಲ್ಲಿ ಭಾಗವಹಿಸಿ, ವಂದಿಸಿದರು. ಸಮಾಜಕಾರ್ಯದ ವಿಭಾಗದ ಮುಖ್ಯಸ್ಥೆ ಲಕ್ಷ್ಮಿ ಆಚಾರ್ಯರವರು ಸ್ವಾಗತಿಸಿದರು.
ಶಿರ್ವ : 10000 ಮಾಸ್ಕ ವಿತರಣೆ ಅಭಿಯಾನ
Posted On: 02 Jul 2021, 06:59 PM
ಶಿರ್ವ : ಸಂತ ಮೇರಿ ಮಹಾವಿದ್ಯಾಲಯದ ವಿವಿಧ ಘಟಕಗಳಾದ ಸ್ನಾತಕೋತ್ತರ ಅಧ್ಯಯನ ಕೇಂದ್ರ ಎಂ ಎಸ್ ಡಬ್ಲ್ಯೂ ,ಎಂಕಾಂ,ಎನ್ ಸಿಸಿ,ಎನ್ ಎಸ್ ಎಸ್ ,ರೋವರ್ಸ-ರೇಂಜರ್ಸ್ ಹಾಗೂ ರಿಲಯನ್ಸ್ ಫೌಂಡೇಶನ್ ಜಂಟಿಯಾಗಿ 10000 ಮಾಸ್ಕಗಳ ವಿತರಣೆ ಅಭಿಯಾನವನ್ನು ಆರೋಗ್ಯ ಸಮುದಾಯ ಕೇಂದ್ರ ,ಶಿರ್ವ, ಪೋಸ್ಟ್ ಆಫೀಸ್, ಆರಕ್ಷಕರ ಠಾಣೆ, ಆಶಾ ಓಲ್ಡ್ ಏಜ್ ಹೋಂ, ಮಸೀದಿ, ದೇವಾಲಯ, ಚರ್ಚ್, ಶಿರ್ವ ಗ್ರಾಮ ಪೇಟೆ , ಕಾಲೇಜಿನ ಸಂತ ಮೇರಿ ಸಮೂಹ ಸಂಸ್ಥೆಗಳ ಪ್ರದೇಶಗಳಲ್ಲಿ ಆಯೋಜಿಸಲಾಯಿತು. ಈ ಅಭಿಯಾನಕ್ಕೆ ಶಿರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ಕೆ ಆರ್ ಪಾಟ್ಕರ್ ಮಾತನಾಡಿ ಕೋವಿಡ್ ಅಂತಹ ಸಾಂಕ್ರಮಿಕ ಕಾಯಿಲೆಗಳನ್ನು ಎದುರಿಸಬೇಕಾಗಿದ್ದರೆ ಸಾರ್ವಜನಿಕರು ತಪ್ಪದೇ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮನೆಯಿಂದ ಹೊರಗೆ ಬರುವಾಗ ಮುಖಕ್ಕೆ ಮಾಸ್ಕನ್ನು ಧರಿಸಬೇಕು. ಪ್ರಸ್ತುತ ಲಾಕ್ಡೌನ್ ನಂತರ ಈ ನಿಯಮ ಉಲ್ಲಂಘನೆಯನ್ನು ಮಾಡುವ ನಾಗರಿಕರ ಮೇಲೆ ಸೂಕ್ತ ಕ್ರಮವನ್ನು ತಗೆದುಕೊಳ್ಳುವುದು ಎಂದು ಮಾಸ್ಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಅಭಿಯಾನವನ್ನು ಶಿರ್ವ ಆರೋಗ್ಯ ಮಾತ ಇಗರ್ಜಿಯ ಸಹಾಯಕ ಧರ್ಮಗುರುಗಳಾದ ಫಾದರ್ ರೋಲ್ವಿನ್ ಅರಾನ್ಹಾ ಅವರ ಹಾರೈಕೆಗಳೊಂದಿಗೆ ಆರಂಭಿಸಲಾಯಿತು. ಪ್ರಸ್ತುತ ಕೋವಿಡ್ ನಂತಹ ಸಾಂಕ್ರಮಿಕ ಕಾಯಿಲೆಗಳನ್ನು ಎದುರಿಸಬೇಕಾದರೆ ಕೋವಿಡ್ -19 ಲಸಿಕೆ ಪಡೆಯುವುದು ಮಾತ್ರವೇ ಮುಖ್ಯವಲ್ಲ ಮಾಸ್ಕ ಕಡ್ಡಾಯವಾಗಿ ಧರಿಸಬೇಕು ಜೀವವನ್ನು ಕಾಪಾಡಿಕೊಳ್ಳುವುದು ಇಂದಿನ ಅಗತ್ಯವಾಗಿದೆ, ಎಂದು ಹೇಳಿ ಇಂತಹ ಒಳ್ಳೆಯ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಕಾಲೇಜಿನ ಪ್ರಾಂಶುಪಾಲರು, ಪದಾಧಿಕಾರಿಗಳು ಹಾಗೂ ಇಂತಹ ಕಾರ್ಯಕ್ರಮಕ್ಕೆ ಸಹಕರಿಸಿದ ಶಿರ್ವ ಗ್ರಾಮ ಪಂಚಾಯತಿನ ಅಧ್ಯಕ್ಷರು ಮತ್ತು ಪಿಡಿಓ ರವರನ್ನು ಶ್ಲಾಘಿಸಿ ಆಶೀರ್ವದಿಸಿದ್ದರು. ಈ ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ ನಾಯಕ್, ಗ್ರಾ.ಪಂ.ಸದಸ್ಯ ಹಸನಬ್ಬ ಶೇಖ್,ವಿದ್ಯಾರ್ಥಿ ಕ್ಷೇಮಾಮಾಭಿವೃದ್ಧಿ ನಿರ್ದೇಶಕಿ ಕು.ಯಶೋದಾ,ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್,ಎನ್ಎಸ್ಎಸ್ ಅಧಿಕಾರಿ ಶ್ರೀ ಪ್ರೇಮನಾಥ್,ಕು. ರಕ್ಷಾ, ರೇಂಜರ್ಸ್ ಲೀಡರ್ ಗಳಾದ ಶ್ರೀ ಪ್ರಕಾಶ್,ಶ್ರೀಮತಿ ಸಂಗೀತ ಪೂಜಾರಿ, ಸ್ನಾತಕೋತ್ತರ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀ ಜಗದೀಶ್ ಆಚಾರ್ಯ, ಶ್ರೀಮತಿ ಶರ್ಮಿಳಾ, ಗ್ರಂಥಪಾಲಕ ಶ್ರೀ ಪ್ರಮೋದ್ , ಶ್ರೀ ಕಿರಣ್ ಕುಮಾರ್,ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಾವ೯ಜನಿಕರಿಗೆ ಮಾಸ್ಕ್ ವಿತರಿಸುವಲ್ಲಿ ವಿದ್ಯಾರ್ಥಿಗಳ ಜೊತೆ ಕೈಜೋಡಿಸಿದರು. ಈ ಅಭಿಯಾನಕ್ಕೆ ಸಹಕಾರವನ್ನು ನೀಡಿದ ಶಿರ್ವ ಕಾಲೇಜಿನ ವಿವಿಧ ಘಟಕಗಳ ವಿದ್ಯಾರ್ಥಿ ನಾಯಕರಾದ ಸೀನಿಯರ್ ಅಂಡರ್ ಆಫೀಸರ್ ಭಟ್ ರಾಮದಾಸ ಸತೀಶ್, ಜೂನಿಯರ್ ಅಂಡರ್ ಆಫೀಸರ್ ಪ್ರವಿತ ಆಚಾರ್ಯ, ರಿಯಾನ್ ರಿಷಿ ಅಲ್ಫೋನ್ಸೋ,ಕಂಪೆನಿ ಸಾರ್ಜಂಟ್ ಮೇಜರ್ ಪ್ರತಿಮಾ ಆಚಾರ್ಯ , ಕಂಪನಿ ಕ್ವಾಟರ್ಮಸ್ಟರ್ ರೈನ ಅಂದ್ರಾದೆ,ಸೇರ ಮಾತೆ ಮ್ಯಾಕ್ ವಾನ್ , ಲೀಡರ್ ಗಳಾದ ಅಕ್ಷಯ್, ಸುರೇಖಾ, ಡೆರಿಲ್ ಡೇಸಾ, ಅಪೇಕ್ಷ , ವೈಷ್ಣವಿ, ಫ್ರಾಂಕ್ಲಿನ್ ಮತಾಯಸ್ ಮತ್ತು ಪ್ರತಿಕ್ಷ ಸಾರ್ವಜನಿಕರಿಗೆ ಮಾಸ್ಕನ್ನು ವಿತರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಈ ಅಭಿಯಾನದಲ್ಲಿ ಭಾಗವಹಿಸಿ, ವಂದಿಸಿದರು. ಸಮಾಜಕಾರ್ಯದ ವಿಭಾಗದ ಮುಖ್ಯಸ್ಥೆ ಲಕ್ಷ್ಮಿ ಆಚಾರ್ಯರವರು ಸ್ವಾಗತಿಸಿದರು.
ಕುತ್ಯಾರು : ಜಲಜೀವನ್ ಮಿಷನ್ ವತಿಯಿಂದ ವಿಶೇಷ ಗ್ರಾಮಸಭೆ, ಕಿರುಚಿತ್ರ ಪ್ರದರ್ಶನ, ಜಲಮೂಲ ಸಂರಕ್ಷಣಾ ಕಾರ್ಯಕ್ರಮ
Posted On: 02 Jul 2021, 11:19 AM
ಕಾಪು : ನೀರು ಜನರ ಜೀವನದ ಮೂಲ. ನೀರಿದ್ದರೇ ಜೀವನ. ನೀರಿಲ್ಲದ ಭವಣೆ ತೀರಿಸಲೆಂದೇ ಬಂದಿದೆ ಜಲಜೀವನ ಮಿಷನ್ ಎಂದು ಜೆಜೆಎಮ್ ನ ಐಇಸಿ ಎಕ್ಸ್ ಪರ್ಟ್ ನೇತ್ರಾವತಿ ಅವರು ತಿಳಿಸಿದರು. ಕುತ್ಯಾರು ಗ್ರಾಮಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ವತಿಯಿಂದ ವಿಶೇಷ ಗ್ರಾಮಸಭೆ, ಕಿರುಚಿತ್ರ ಪ್ರದರ್ಶನ ಹಾಗೂ ಜಲಮೂಲ ಸಂರಕ್ಷಣಾ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ನೇತ್ರಾವತಿ ಇವರು, ಮನೆ ಮನೆಗೆ ಗಂಗೆ ಕಾರ್ಯಕ್ರಮದ ಮಹತ್ವ , ಅದರ ಉಪಯೋಗಗಳು, ಸಮುದಾಯದ ವಂತಿಗೆ ಕುರಿತಂತೆ ಸವಿವರವಾಗಿ ವಿವರಿಸಿದರು. ಬಿರುಬೇಸಿಗೆ, ಮಾನವ ನಿರ್ಮಿತ ಪರಿಸ್ಥಿತಿಗಳಿಂದಾಗಿ ಅಂತರ್ಜಲ ಕುಗ್ಗುತ್ತಿದ್ದು, ಹನಿ ಹನಿ ನೀರಿಗೂ ತತ್ವಾರ ಶುರುವಾಗುವಂತಿದೆ. ಜನ, ಜಾನುವಾರು ನೀರಿಗಾಗಿ ಹಾಹಾಕಾರ ಏಳುವ ಮುನ್ನವೇ, ಈ ಸಮಸ್ಯೆಗೆ ಪರಿಹಾರವಾಗಿ ಮನೆಮನೆಗೆ ಗಂಗೆಯನ್ನೇ ಹರಿಸಲು ಜಲಜೀವನ್ ಮಿಷನ್ ಬಂದಿದೆ. ಇದರ ಸದುಪಯೋಗವನ್ನು ಎಲ್ಲಾ ಗ್ರಾಮಸ್ಥರು ಪಡೆದುಕೊಳ್ಳಬೇಕು. ಸಮುದಾಯದ ವಂತಿಗೆಯನ್ನು ಹೊರೆ ಎಂದು ಭಾವಿಸದೇ, ಇದರ ಉಪಯೋಗಗಳ ಬಗ್ಗೆ ಗಮನ ಹರಿಸಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕುತ್ಯಾರು ಪಂಚಾಯತ್ ನ ಸರ್ವ ಸದಸ್ಯರು , ಪಿಡಿಓ ಹಾಗೂ ಜೆಜೆಎಮ್ ನ ಅಭಿಯಂತರರಾದ ರಂಜಿತ್ ಪೂಜಾರಿ ಉಪಸ್ಥಿತರಿದ್ದರು.
ಸಕಾಲ ಯೋಜನೆಯಲ್ಲಿ ಉಡುಪಿ ಜಿಲ್ಲೆಗೆ ರಾಜ್ಯದಲ್ಲಿಯೇ ಮೊದಲ ಸ್ಥಾನ
Posted On: 01 Jul 2021, 10:25 PM
ಉಡುಪಿ : ಕರ್ನಾಟಕ ರಾಜ್ಯ ಸರ್ಕಾರವು 2011-12ನೇ ಸಾಲಿನಲ್ಲಿ ಜಾರಿಗೆ ತಂದಿರುವ ಸಕಾಲ ಕಾಯ್ದೆಯನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾ ಗಿದ್ದು, ಸಕಾಲ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ಜಿಲ್ಲೆಯು ಒಟ್ಟಾರೆ ಉತ್ತಮ ಸಾಧನೆ ಮಾಡಿದೆ. ಜನರು ಸರ್ಕಾರಿ ಕಚೇರಿಗಳಿಗೆ ಅಲೆ ದಾಡುವುದನ್ನು ತಪ್ಪಿಸಲು, ಅಕ್ರಮಕ್ಕೆ ಆಸ್ಪದ ನೀಡದಂತೆ ಹಾಗೂ ಅರ್ಜಿ ವಿಲೇ ವಾರಿ ವಿಳಂಬ ಆಗದೆ ಕಾಲಕಾಲಕ್ಕೆ ಜನ ರಿಗೆ ತಲುಪಿಸುವ ನಿಟ್ಟಿನಲ್ಲಿ ‘ಕರ್ನಾಟಕ ನಾಗರಿಕ ಸೇವಾ ಕಾಯ್ದೆ’ (ಸಕಾಲ) ಜಾರಿ ಗೊಳಿಸಲಾಯಿತು. ಅದರಂತೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿತ್ತು. ಅದರಡಿ ಅರ್ಜಿ ವಿಲೇವಾರಿಗೆ ಇಲಾಖೆ ಹಾಗೂ ಸೌಲಭ್ಯ ಗಳಿಗೆ ತಕ್ಕಂತೆ ಆಯಾ ಅರ್ಜಿಗಳಿಗೆ ಪ್ರತ್ಯೇಕ ಅವಧಿ ನಿಗದಿ ಮಾಡಲಾಗಿತ್ತು. ನಿಗದಿತ ಅವಧಿಯೊಳಗೆ ಅರ್ಜಿ ವಿಲೇವಾರಿ ಮಾಡದಿದ್ದರೆ, ಅರ್ಜಿದಾರ ದೂರು ದಾಖಲಿಸುವ ಹಾಗೂ ಅರ್ಜಿ ವಿಳಂಬಕ್ಕೆ ಕಾರಣ ಪಡೆಯಲು ಅವಕಾಶ ಮಾಡಿ ಕೊಡಲಾಗಿದೆ. ಈ ಯೋಜನೆಯಡಿ ಸಕಾಲದಲ್ಲಿ ಸೇವೆ ಒದಗಿಸುವಲ್ಲಿ ಕರ್ತವ್ಯ ಲೋಪವೆಸಗಿದ ಸಾರ್ವಜನಿಕ ನೌಕರ ಸಕ್ಷಮ ಅಧಿಕಾರಿಯಿಂದ ದಿನಕ್ಕೆ 20ರೂ. ರಂತೆ ಗರಿಷ್ಠ 500 ರೂ.ವರೆಗೆ ದಂಡ ವಸೂಲಿ ಮಾಡಬಹುದು. ಅರ್ಜಿ ವಿಲೇವಾರಿಗೆ ಕನಿಷ್ಠ 3 ದಿನಗಳಿಂದ ಒಂದು ತಿಂಗಳ ಕಾಲಾವಕಾಶ ನೀಡಲಾಗಿದೆ. ಈ ಕಾರ್ಯವನ್ನು ಜಿಲ್ಲೆಯ ಕಂದಾಯ ಇಲಾಖೆ ಮತ್ತು ಇತರ ಇಲಾಖೆ ಉತ್ತಮವಾಗಿ ನಿರ್ವಹಿಸಿದೆ. ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿ ಯನ್ನು ನಿಗದಿತ ಅವಧಿಗೂ ಮುಂಚಿತ ವಾಗಿ ಅರ್ಜಿ ವಿಲೇವಾರಿ ಮಾಡುವುದು , ಅವಧಿ ಮೀರಿ ಅರ್ಜಿಗಳ ವಿಲೇವಾರಿ, ಅರ್ಜಿಗಳ ತಿರಸ್ಕರಿಸುವಿಕೆ ಮತ್ತು 1 ಲಕ್ಷ ಜನಸಂಖ್ಯೆಯಲ್ಲಿ ಅತಿ ಹೆಚ್ಚು ಅರ್ಜಿ ಸ್ವೀಕೃತಿ ಮಾಡಿಕೊಂಡಿರುವುದು ಹೀಗೆ 4 ಅಂಶಗಳನ್ನು ಪರಿಗಣಿಸಿ ತಿಂಗಳ ಕೊನೆಯಲ್ಲಿ ರ್ಯಾಂಕ್ ನೀಡಲಾಗುತ್ತದೆ. ಅದರಂತೆ ಸಕಾಲ (ಆನ್ಲೈನ್)ದಲ್ಲಿ ಅರ್ಜಿಗಳನ್ನು ಜಿಲ್ಲೆಯ ಜನರು ಹೆಚ್ಚು ಸಲ್ಲಿಸಿದ್ದು, ಅರ್ಜಿಗಳನ್ನು ಹೆಚ್ಚು ತಿರಸ್ಕರಿಸದೆ ಅಧಿಕಾರಿಗಳು ಅವಧಿಗೂ ಮುಂಚಿತ ವಾಗಿ ಅರ್ಜಿ ವಿಲೇವಾರಿ ಮಾಡಿದ್ದಾರೆ ಇದೇ ಕಾರಣದಿಂದ ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ ಲಭಿಸಿತು. ಜಿಲ್ಲಾಡಳಿತದಿಂದ ಅಭಿನಂದನೆ: ಜೂನ್ ತಿಂಗಳ ಸಕಾಲ ಸೇವೆಯಲ್ಲಿ ರಾಜ್ಯದಲ್ಲಿ ಉಡುಪಿ ಜಿಲ್ಲೆಯು ಪ್ರಥಮ ಸ್ಥಾನ ಪಡೆಯಲು ಕಾರಣರಾಗಿರುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ರವರು ತಮ್ಮ ಅಧೀಕೃತ ಫೇಸ್ಬುಕ್ ಪೇಜ್ ನಲ್ಲಿ ಅಭಿನಂದನೆ ಸಲ್ಲಿಸಿರುತ್ತಾರೆ.
ಬಂಟಕಲ್ಲು ಅಂಚೆ ಕಛೇರಿ ಸ್ಥಳಾಂತರ
Posted On: 01 Jul 2021, 10:19 PM
ಕಾಪು : ಸ್ಥಳಾವಕಾಶದ ಕೊರತೆಯಿಂದ ಅಂಚೆ ಕಛೇರಿ ಗ್ರಾಹಕರಿಗೆ ಸಮಸ್ಯೆ ಆಗುತ್ತಿದ್ದ ಹಿನ್ನಲೆಯಲ್ಲಿ ಬಂಟಕಲ್ಲು ಅಂಚೆ ಕಛೇರಿಯನ್ನು ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಸಹಕಾರದಿಂದ ವ್ಯವಸ್ಥಿತವಾದ, ಸ್ಥಳಾವಕಾಶವಿರುವ ಬಂಟಕಲ್ಲು ಮೈತ್ರಿ 2 ಕಟ್ಟಡಕ್ಕೆ ಇಂದು ಸ್ಥಳಾಂತರಗೊಂಡಿತು. ಬಂಟಕಲ್ಲು ನಾಗರಿಕ ಸಮಿತಿ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರೂ ಆಗಿರುವ ಕೆ ಆರ್ ಪಾಟ್ಕರ್ ರವರು ಸಾಂಕೇತಿಕವಾಗಿ ದ್ವೀಪ ಪ್ರಜ್ವಲನೆ ಮಾಡುವುದರ ಮೂಲಕ ಹೊಸ ಕಟ್ಟಡದಲ್ಲಿ ಅಂಚೆ ಕಛೇರಿಗೆ ಚಾಲನೆ ನೀಡಿದರು. ಸದ್ರಿ ಕಛೇರಿಗೆ ಬೇಕಾಗುವ ಪಿಠೋಪಕರಣಗಳನ್ನು ಅಂಚೆ ಇಲಾಖೆಯಿಂದ ಒದಗಿಸುವಂತೆ ಸಹಾಯಕ ಅಧೀಕ್ಷರಲ್ಲಿ ವಿನಂತಿಸಿ, ನಾಗರಿಕ ಸಮಿತಿಯು ನೀಡಿದ ಸಹಕಾರದ ವಿವರಿಸಿದರು. ಕಛೇರಿ ಮುಂದೆ ಗ್ರಾಹಕರ ಅನುಕೂಲಕ್ಕಾಗಿ ದಾನಿಗಳಿಂದ ಅಥವಾ ಸ್ಥಳೀಯ ಸಂಘ ಸಂಸ್ಥೆಗಳ ಪ್ರಯೋಜಕತ್ವದಲ್ಲಿ ತಗಡು ಚಪ್ಪರವನ್ನು ನಿರ್ಮಿಸಲಾಗುವುದು ಎಂದರು. ಅಂಚೆ ಇಲಾಖೆಯ ಉಪ ಅಧೀಕ್ಷಕರಾದ ನವೀನ್ ರವರು ಮಾತನಾಡಿ ನಾಗರಿಕ ಸಮಿತಿಯು ನೀಡಿದ ಸಹಕಾರಕ್ಕೆ ಕೃತಜ್ಞತೆಯನ್ನು ಸಲ್ಲಿಸಿ ,ಕಛೇರಿಗೆ ಬೇಕಾಗುವ ಪಿಠೋಪಕರಣಗಳನ್ನು ಇಲಾಖೆ ಮುಖಾಂತರ ಒದಗಿಸಲಾಗುವುದು ಎಂದು ತಿಳಿಸಿದರು. ಅಂಚೆ ಮೇಲ್ವಿಚರಕರಾದ ವಾಸುದೇವ ತೊಟ್ಟಂ ರವರು ಶುಭಹಾರೈಸಿ ಜನರ ಸಹಕಾರಕಾರವನ್ನು ಶ್ಲಾಘಿಸಿದರು. ನಿವೃತ್ತ ಶಿಕ್ಷಕ, ಪತ್ರಕರ್ತರಾದ ಪುಂಡಲೀಕ ಮರಾಠೆಯವರು ನಾಗರೀಕ ಸಮಿತಿ ವತಿಯಿಂದ ನೀಡಲಾಗುವ ಅಂಚೆ ಕಛೇರಿ ತಿಂಗಳ ಬಾಡಿಗೆ ಮೊತ್ತದಲ್ಲಿ ಒಂದು ವರುಷದ ಮೊತ್ತದ ಚೆಕನ್ನು ಕಟ್ಟಡ ಮಾಲಿಕರಿಗೆ ಹಸ್ತಾಂತರಿಸಿ, ಶುಭ ಹಾರೈಸಿದರು. ಬಂಟಕಲ್ಲು ಲಯನ್ಸ್ ಕ್ಲಬ್ ಅಧ್ಯಕ್ಷ ಲ. ವಿಜಯ ಧೀರಾಜ್, ತಾ.ಪಂ ಮಾಜಿ ಸದಸ್ಯೆ ಗೀತಾ ವಾಗ್ಲೆ, ನಾಗರೀಕ ಸಮಿತಿ ಉಪಾಧ್ಯಕ್ಷ ಮಾಧವ ಕಾಮತ್, ಕಾರ್ಯದರ್ಶಿ ದಿನೇಶ್ ದೇವಾಡಿಗ, ಅಂಚೆ ಪಾಲಕ ಯಮುನ ಚಿತ್ರಾಪುರ್, ಅಂಚೆ ವಿತರಕ ಚಿತ್ರಕಲಿ ಹಾಗೂ ಸಮಿತಿಯ ಉಮೇಶ್ ರಾವ್, ಡೇನಿಸ್ ಡಿಸೋಜ ಉಪಸ್ಥಿತರಿದ್ದರು.
