Updated News From Kaup

ಇನ್ನಂಜೆ : ಪುರಾತನˌ ಕಂಚಿನಕೆರೆˌ ನಾಗಬನದ ಪ್ರಶ್ನಾಚಿಂತನೆ

Posted On: 05-03-2021 10:08PM

ಇನ್ನಂಜೆ ಗ್ರಾಮದ ಉಂಡಾರು ದೇವಸ್ಡಾನ ದ ಈಶಾನ್ಯ ದಿಕ್ಕಿನಲ್ಲಿರುವ ಅತೀ ಪುರಾತನˌ ಕಂಚಿನಕೆರೆˌ ನಾಗಬನ ದ ಪ್ರಶ್ನಾಚಿಂತನೆಯು ಮಾಚ್೯ 14 ಆದಿತ್ಯವಾರ ಕಂಚಿನಕೆರೆ ಬನದ ಮುಂಭಾಗದಲ್ಲಿ ಜರಗಲಿರುವುದು.

ಶ್ರೀ ವರ್ತೆಕಾಳಿ ಕಲ್ಕುಡ ದೈವಸ್ಥಾನ ಬನ್ನಂಜೆ, ಉಡುಪಿ ಕಾಲಾವಧಿ ಕೋಲ

Posted On: 05-03-2021 06:29PM

ಶ್ರೀ ವರ್ತೆಕಾಳಿ ಕಲ್ಕುಡ ದೈವಸ್ಥಾನ ಬನ್ನಂಜೆ, ಉಡುಪಿ ಕಾಲಾವಧಿ ಕೋಲವು ಮಾಚ್೯ 7, ಆದಿತ್ಯವಾರ ನಡೆಯಲಿದೆ.

ಕುತ್ಯಾರು : ಸಾಮೂಹಿಕ ಸತ್ಯನಾರಾಯಣ ಪೂಜೆ

Posted On: 05-03-2021 06:06PM

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಕುತ್ಯಾರು ಮಹಿಳಾ ಬಳಗದ ವತಿಯಿಂದ ಗ್ರಾಮ ಪಂಚಾಯತ್ ಕುತ್ಯಾರು, ಯುವಕ ಮಂಡಲ, ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳು, ಗ್ರಾಮ ನೈರ್ಮಲ್ಯ ಸಮಿತಿಯ ಸಹಯೋಗದಲ್ಲಿ ವೇದ ಮೂರ್ತಿ ಕುತ್ಯಾರು ಕೇಂಜ ಶ್ರೀಧರ ತಂತ್ರಿ, ಕೇಂಜ ಭಾರ್ಗವ ತಂತ್ರಿ ನೇತೃತ್ವದಲ್ಲಿ ಮಾರ್ಚ್ 6, ಶನಿವಾರ ಕುತ್ಯಾರು ಯುವಕ ಮಂಡಲದ ವೇದಿಕೆಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ, ರಾತ್ರಿ ಅನ್ನಸಂತರ್ಪಣೆ, ನೃತ್ಯ ವೈವಿಧ್ಯ, ನಿಮಿಷ ಕಲಾವಿದರು ಕಟಪಾಡಿ ಇವರಿಂದ ಏರೆಗ್ ಏರಾ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂತ ಮೇರಿ ಕಾಲೇಜು, ಶಿರ್ವ ಜಲಸಂರಕ್ಷಣೆ ಮಾಹಿತಿ ಕಾರ್ಯಕ್ರಮ

Posted On: 03-03-2021 10:09PM

ಶಿರ್ವ: ಜಗತ್ತಿನಲ್ಲಿ ಮೂರನೇ ಯುದ್ಧ ಅಂತ ಹೆಸರಿಸುವುದಾದರೆ ಅದು ನೀರಿನ ಸಮಸ್ಯೆ.ಇಂದು ಪ್ರತಿವೊಂದು ರಾಷ್ಟ್ರವೂ ನೀರಿನ ಅಭಾವವನ್ನು ಅನುಭವಿಸುತ್ತಿದೆ. ನೀರಿನ ಸಮೃದ್ಧಿಯಲ್ಲಿ ಭಾರತವು ವಿಶ್ವದಲ್ಲಿ ಎರಡನೇ ದೇಶವಾಗಿದೆ. ಆದರೆ ಅದರ ಸರಿಯಾದ ಬಳಕೆ ಮತ್ತು ಸಂರಕ್ಷಣೆ ಇಲ್ಲದೆ ನೀರಿನ ಕ್ಷಾಮವನ್ನು ನಾವಿಂದು ಎದುರಿಸಬೇಕಾಗಿದೆ. ಇದರ ನಿವಾರಣೆಯಾಗಬೇಕಾದರೆ ನಾವಿಂದು ಮಳೆ ನೀರನ್ನು ಸರಿಯಾದ ರೀತಿಯಲ್ಲಿ ಸಂರಕ್ಷಿಸಿ ಮರು ಬಳಕೆ ಮಾಡುವುದು ಅನಿವಾರ್ಯವಾಗಿದೆ ಎಂದು ರತ್ನ ಶ್ರೀ ಜೋಸೆಫ್ ಜಿ. ರೆಬೆಲ್ಲೊ ಅವರು ನೀರಿನ ಸಂರಕ್ಷಣೆ ಮತ್ತು ಮರುಪೂರಣದ ಬಗ್ಗೆ ಸಂತ ಮೇರಿ ಕಾಲೇಜಿನಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಪ್ರಾಯೋಗಿಕ ವಿವರಣೆಯ ಮೂಲಕ ನೀರಿನ ಸಂರಕ್ಷಣೆಯ ಬಗ್ಗೆ ಸವಿವರವಾದ ಮಾಹಿತಿ ನೀಡಿದರು.

ಕಾಪು ಶ್ರೀ ಹೊಸಮಾರಿಗುಡಿ ಶಿಲಾ ಪುಷ್ಪ ಸಮರ್ಪಣಾ ಸಮಿತಿಯಿಂದ ಹೆಜಮಾಡಿ ಮಹಾಲಿಂಗೇಶ್ವರ ದೇವಳದಲ್ಲಿ ಗ್ರಾಮ ಸಮಿತಿ ರಚನಾ ಸಭೆ

Posted On: 03-03-2021 01:20PM

ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಸುಗ್ಗಿ ಮಾರಿಪೂಜೆಯಂದು ನಡೆಯಲಿರುವ ಶಿಲಾ ಪುಷ್ಪ ಸಮರ್ಪಣೆಯ ಪ್ರಯುಕ್ತ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಪೂಜೆ ಸಲ್ಲಿಸಲಾಯಿತು.

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಕೊರೊನ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಅನ್ನದಾನ ಸೇವೆ ಇಂದಿನಿಂದ ಆರಂಭ

Posted On: 02-03-2021 02:42PM

ಕೊರೊನ ಮಹಾಮಾರಿಯ ಹಿನ್ನೆಲೆಯಲ್ಲಿ ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಅನ್ನದಾನ ಸೇವೆ ಸ್ಥಗಿತಗೊಂಡಿದ್ದು.. ಒಂದು ವರ್ಷದ ಬಳಿಕ ಇಂದು ಅನ್ನದಾನ ಸೇವೆಗೆ ಚಾಲನೆ ನೀಡಲಾಯಿತು..

ಕಾಪು : ಹೊಸ ಮಾರಿಗುಡಿಯಲ್ಲಿ ಶಿಲಾ ಪುಷ್ಪ ಸಮರ್ಪಣೆಯ ಅಂಗವಾಗಿ ಶ್ರೀ ಲಕ್ಷ್ಮಿ ಜನಾರ್ಧನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆ

Posted On: 02-03-2021 10:28AM

ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಸುಗ್ಗಿ ಮಾರಿಪೂಜೆಯಂದು ನಡೆಯಲಿರುವ ಶಿಲಾ ಪುಷ್ಪ ಸಮರ್ಪಣೆಯ ಪ್ರಯುಕ್ತ ಕಾಪು ಸಾವಿರ ಸೀಮೆಯ ಒಡೆಯ ಮಹತೋಭಾರ ಶ್ರೀ ಲಕ್ಷ್ಮಿ ಜನಾರ್ಧನ ದೇವರ ಸನ್ನಿಧಿಯಲ್ಲಿ ಹೊಸ ಮಾರಿಗುಡಿಯ ಆಡಳಿತ ಮಂಡಳಿ ಮತ್ತು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಸೇರಿ ಪ್ರಾರ್ಥನೆ ನಡೆಸಲಾಯಿತು.

ಇಂದಿಗೂ ಭಕ್ತರ ಸೆಳೆಯುವ 45 ವರ್ಷಗಳ ಹಿಂದಿನ ವರ್ತೆ, ಕಲ್ಕುಡ ದೈವದ ವರ್ಣಚಿತ್ರ

Posted On: 01-03-2021 09:02PM

ಉಡುಪಿ : ಬನ್ನಂಜೆ ಕಲ್ಕುಡ ಮನೆ ದೈವಸ್ಥಾನದಲ್ಲಿ 1975ರಲ್ಲಿ ಕೆ. ಬಿ. ಗೋಪಾಲಕೃಷ್ಣರಾವ್ ರವರ ಕೈಚಳಕದಿ ಮೂಡಿದ ವರ್ತೆ-ಕಲ್ಕುಡ ದೈವದ ವರ್ಣಚಿತ್ರವು ಇಂದಿಗೂ ಕಾಣಸಿಗುತ್ತದೆ.

ಸಂತ ಮೇರಿ ಮಹಾವಿದ್ಯಾಲಯದಲ್ಲಿ ಮಿನಿ ಪ್ರಾಜೆಕ್ಟ್ ಅಭಿವೃದ್ದಿ ಕಾರ್ಯಗಾರ

Posted On: 01-03-2021 08:44PM

ಶಿರ್ವ: ಇಂದು ಆಧುನಿಕ ಜಗತ್ತು ಸಂಪೂರ್ಣವಾಗಿ ಡಿಜಿಟಲೀಕರಣವಾಗುತ್ತಿದೆ. ತಂತ್ರಜ್ಞಾನದ ಅಭಿವೃದ್ದಿಯು ಹೊಸ ಆಲೋಚನೆಗಳ ಆವಿಷ್ಕಾರಗಳು, ಉತ್ತಮ ಸೌಲಭ್ಯಗಳು ಮತ್ತು ಉತ್ತಮ ಐಷಾರಾಮಿ ಜೀವನ ಶೈಲಿಗಳಿಗೆ ಕಾರಣವಾಗಿದೆ. ಇಂಟರ್ನೆಟ್‍ಗೆ ಸಂಪರ್ಕ ಹೊಂದಿದ ಅನೇಕ ಸಾಧನೆಗಳು ಜೀವನದ ವಿಧಾನವನ್ನು ಬದಲಾಯಿಸಿದೆ ಹಾಗು ಇಂತಹ ತಂತ್ರಜ್ಞಾನದ ಕಲಿಕೆಯು ವಿದ್ಯಾರ್ಥಿ ದೆಸೆಯಲ್ಲಿ ರೂಢಿಸಿಕೊಳುವ ಮೂಲಕ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಮನೋಭಾವನೆ ಹೆಚ್ಚಲು ಪೂರಕ ಎಂದು ಶಿರ್ವ ಸಂತಮೇರಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ ‘ಮಿನಿ ಪ್ರಾಜೆಕ್ಟ್ ಅಭಿವೃದ್ದಿ ಕಾರ್ಯಗಾರದಲ್ಲಿ ಮುಖ್ಯಅಥಿತಿಯಾಗಿ ಆಗಮಿಸಿದ ಬಂಟಕಲ್ ಕಾಲೇಜಿನ ಡಾ| ರಾಘವೇಂದ್ರ ಎಸ್ ರವರು ಮಾತನಾಡಿದರು. ಪದವಿ ವ್ಯಾಸಂಗ ಮಾಡುವ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜತೆಗೆ ಉಚಿತ ತರಬೇತಿಗಳನ್ನು ನೀಡಿ, ಸೂಕ್ತ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಶ್ರೀ ಮಧ್ವವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್, ಬಂಟಕಲ್ ಹಾಗೂ ಶಿರ್ವ ಸಂತ ಮೇರಿ ಕಾಲೇಜು ಪರಸ್ಪರ ಒಡಂಬಡಿಕೆಯ ಅನುಸಾರ ಮಾರ್ಚ್ 1 ರಿಂದ 2 ರವರಗೆ ಕಾಲೇಜಿನ ಫಾ.ಹೆನ್ರಿ ಕ್ಯಾಸ್ತಲೀನೊ ಸಭಾಂಗಣದಲ್ಲಿ ಕಾರ್ಯಾಗಾರವನ್ನು ಏರ್ಪಡಿಸಲಾಯಿತು.

ಕಾಪು : ಶಿಲಾ ಪುಷ್ಪ ಸಮರ್ಪಣಾ ಬಗ್ಗೆ ಪೂರ್ವಭಾವಿ ಸಭೆ

Posted On: 28-02-2021 09:10PM

ಕಾಪುವಿನ ಮಾರಿಯಮ್ಮ ದೇವಳದಲ್ಲಿ ಮಾರ್ಚ್ 23/24 ಸುಗ್ಗಿ ಮಾರಿಪೂಜೆಯಂದು ಜರಗಲಿರುವ ಶಿಲಾ ಪುಷ್ಪ ಸಮರ್ಪಣಾ ಬಗ್ಗೆ ಪೂರ್ವಭಾವಿ ಸಮಾಲೋಚನಾ ಸಭೆಯು ಹೊಸ ಮಾರಿಗುಡಿಯಲ್ಲಿ ಇಂದು ನಡೆಯಿತು.